Subscribe to Updates
Get the latest creative news from FooBar about art, design and business.
Author: kannadanewsnow57
ಕೊಚ್ಚಿ: ಖಾಸಗಿ ಆಸ್ಪತ್ರೆಯೊಂದರ ತೀವ್ರ ನಿಗಾ ಘಟಕ(ಐಸಿಯು)ದಲ್ಲಿ ಮದುವೆ ನೆರವೇರಿದ ಪ್ರಕರಣ ಕೇರಳದಲ್ಲಿ ನಡೆದಿದೆ. ಕೇರಳದ ಆಲಪ್ಪುಳದ ಅವ್ನಿ ಎಂಬ ಹುಡುಗಿ ಮತ್ತು ತುಂಬೋಲಿಯ ವಿ.ಎಂ. ಶರೋನ್ ಎಂಬ ಹುಡುಗ ವಿಸಿಎಸ್ ಲೇಕ್ಶೋರ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಕೋಣೆಯಲ್ಲಿ ಮದುವೆಯಾಗಿದ್ದಾರೆ. ದಂಪತಿಗಳ ವಿವಾಹವು ಮೂಲತಃ ಶುಕ್ರವಾರ ಮಧ್ಯಾಹ್ನ ತುಂಬೋಲಿಯಲ್ಲಿ ನಿಗದಿಯಾಗಿತ್ತು. ಆದಾಗ್ಯೂ, ವಧು ಅವ್ನಿ ವಧುವಿನ ಮೇಕಪ್ ಗಾಗಿ ಬೇರೆ ಹಳ್ಳಿಗೆ ಪ್ರಯಾಣಿಸುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಸಿಲುಕಿದ್ದಳು. ಆಕೆಯ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ, ಹುಡುಗಿಯನ್ನು ಕೊಟ್ಟಾಯಂ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಯಿತು. ವಧು ಅವ್ನಿಗೆ ಬೆನ್ನುಮೂಳೆಯ ಗಾಯವಾಗಿದ್ದು, ಅವರನ್ನು ಎರ್ನಾಕುಲಂನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮದುವೆಯನ್ನು ಮಧ್ಯಾಹ್ನ 12:15 ರಿಂದ 12:30 ರವರೆಗೆ ನಿಗದಿಪಡಿಸಲಾಗಿತ್ತು. ಆದಾಗ್ಯೂ, ಅವನಿಯ ಗಾಯದಿಂದಾಗಿ, ಶುಭ ಸಮಯ ತಪ್ಪುವ ಸಾಧ್ಯತೆ ಇತ್ತು. ಆದಾಗ್ಯೂ, ಎರಡೂ ಕುಟುಂಬಗಳು ಆ ಶುಭ ಸಮಯದಲ್ಲಿ ಮದುವೆಯನ್ನು ನಡೆಸಲು ನಿರ್ಧರಿಸಿದರು. ಇದರೊಂದಿಗೆ, ವೈದ್ಯರ ಅನುಮತಿಯನ್ನು ಪಡೆಯಲಾಯಿತು ಮತ್ತು ಮದುವೆಯನ್ನು…
ನವದೆಹಲಿ : ದೇಶಾದ್ಯಂತ ಪ್ರತಿ ವರ್ಷ ಶಾಲಾ ವಲಯಗಳ ಸಮೀಪ ಸುಮಾರು 12,000 ಮಕ್ಕಳು ರಸ್ತೆ ಅಪಘಾತದಲ್ಲಿ ಸಾವಿಗೀಡಾಗುತ್ತಿದ್ದು, ಇದನ್ನು ನಿಯಂತ್ರಿಸುವ ಉದ್ದೇಶದಿಂದ ಶುಕ್ರವಾರ ‘ಶಾಲೆಗಳಿಗಾಗಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಿಷನ್’ (ಎನ್ಆರ್ಸ ಎಸ್ಎಂ) ಪ್ರಾರಂಭಿಸಲಾಗಿದೆ. ಅಂತರರಾಷ್ಟ್ರೀಯ ರಸ್ತೆ ಒಕ್ಕೂಟದ (ಐಆರ್ಎಫ್) ಭಾರತೀಯ ಅಧ್ಯಾಯವು ಶುಕ್ರವಾರ ಕೇಂದ್ರ ಶಿಕ್ಷಣ ಸಚಿವಾಲಯದ ಸಹಭಾಗಿತ್ವದಲ್ಲಿ ಶಾಲೆಗಳಿಗಾಗಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಿಷನ್ (ಎನ್ಆರ್ಎಸ್ಎಂ) ಅನ್ನು ಪ್ರಾರಂಭಿಸಿದೆ ಎಂದು ಹೇಳಿದೆ. ಎನ್ಆರ್ಎಸ್ಎಂ ಅನ್ನು ಪ್ರಾರಂಭಿಸಿದ ಶಿಕ್ಷಣ ಸಚಿವಾಲಯದ ನಿರ್ದೇಶಕಿ ಅನು ಜೈನ್, ರಸ್ತೆ ಸುರಕ್ಷತೆಯು ಭಾರತದಲ್ಲಿ ಅತ್ಯಂತ ನಿರ್ಣಾಯಕ ಸಾರ್ವಜನಿಕ ಕಾಳಜಿಗಳಲ್ಲಿ ಒಂದಾಗಿದೆ, ವಿಶೇಷವಾಗಿ ಶಾಲೆಗಳು ಮತ್ತು ಶೈಕ್ಷಣಿಕ ವಲಯಗಳ ಬಳಿ ಮಕ್ಕಳ ಅಪಘಾತಗಳು ಹೆಚ್ಚುತ್ತಿರುವ ಕಾರಣ ಎಂದು ಹೇಳಿದರು. ದೇಶದಲ್ಲಿ ವಾರ್ಷಿಕವಾಗಿ ಶಾಲಾ ವಲಯಗಳ ಬಳಿ ಸುಮಾರು 12,000 ಮಕ್ಕಳು ಸಾಯುತ್ತಾರೆ. ವಿದ್ಯಾರ್ಥಿಗಳಿಗೆ ಸುರಕ್ಷಿತ ಚಲನಶೀಲತೆಯನ್ನು ಖಚಿತಪಡಿಸುವುದು ಮತ್ತು ಯುವ ನಾಗರಿಕರಲ್ಲಿ ಜವಾಬ್ದಾರಿಯುತ ರಸ್ತೆ ಬಳಕೆಯ ಸಂಸ್ಕೃತಿಯನ್ನು ಬೆಳೆಸುವುದು ತುರ್ತು ರಾಷ್ಟ್ರೀಯ ಆದ್ಯತೆಯಾಗಿದೆ. ಈ…
ನವಜಾತ ಶಿಶುಗಳಿಗೆ ಬರುವ 12 ಮಾರಕ ರೋಗಗಳ ವಿರುದ್ಧ ಪ್ರತಿ ತಿಂಗಳು ಲಸಿಕೆಯನ್ನು ಹಾಕಿಸಬೇಕು ಎಂದು ತಾಯಿ-ಮಕ್ಕಳ ಆಸ್ಪತ್ರೆ, ಮಕ್ಕಳ ವಿಭಾಗದ ಮುಖ್ಯಸ್ಥರಾದ ಡಾ. ಶಶಿಕಾಂತ ಹೇಳಿದರು. ಅವರು ಶುಕ್ರವಾರ ಕೊಪ್ಪಳ ತಾಯಿ-ಮಕ್ಕಳ ಆಸ್ಪತ್ರೆಯ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೊಪ್ಪಳ ವೈದ್ಯಕೀಯ, ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಯಿ-ಮಕ್ಕಳ ಆಸ್ಪತ್ರೆ, ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ “ರಾಷ್ಟ್ರೀಯ ನವಜಾತ ಶಿಶು ಸಪ್ತಾಹ” ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು. ಪ್ರತಿ ವರ್ಷ ನವೆಂಬರ್ 15 ರಿಂದ 21ರ ವರೆಗೆ “ರಾಷ್ಟ್ರೀಯ ನವಜಾತ ಶಿಶು ಸಪ್ತಾಹ” ಕಾರ್ಯಕ್ರಮವನ್ನು “ನವಜಾತ ಶಿಶು ಸುರಕ್ಷತೆ-ಪ್ರತೀ ಸ್ಪರ್ಶದಲ್ಲೂ, ಪ್ರತೀ ಸಮಯದಲ್ಲೂ ಪ್ರತಿ ಶಿಶುವಿಗೂ” ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತದೆ. ಇದರ ಉದ್ದೇಶ ನವಜಾತ ಶಿಶುಗಳಿಗೆ ಉಂಟಾಗುವ ಖಾಯಿಲೆಗಳಿಂದ ರಕ್ಷಿಸಿ, ಶಿಶು ಮರಣವನ್ನು ತಡೆಗಟ್ಟಲು ತಾಯೆಂದಿರರಿಗೆ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸುವುದಾಗಿದೆ ಎಂದರು. ಹುಟ್ಟಿದ 28 ದಿನ ಮಗುವನ್ನು ನವಜಾತು ಶಿಶು ಎಂದು ಕರೆಯುತ್ತಾರೆ.…
ಬೆಂಗಳೂರು : ಸರ್ವಜ್ಞನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೊಳಗೇರಿ ನಿವಾಸಿಗಳಿಗೆ ಸರ್ಕಾರದ ವತಿಯಿಂದ ಕಡಿಮ ವೆಚ್ಚದಲ್ಲಿ ವಸತಿ ಸೌಕರ್ಯ ಕಲ್ಪಿಸಲಾಗುವುದು ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಅವರು ತಿಳಿಸಿದರು. ಇಂದು ಸರ್ವಜ್ಞ ನಗರದ ವಸತಿ ಸಂಕೀರ್ಣ ಹಾಗೂ ಕೊಳಗೇರಿ ಪ್ರದೇಶಗಳಿಗೆ ವಸತಿ ಸಚಿವ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರೊಂದಿಗೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿ, ನಂತರ ಮಾತನಾಡಿದ ಅವರು ಕೊಳಗೇರಿ ಪ್ರದೇಶಗಳ ವಸ್ತುಸ್ಥಿತಿ ಪರಿಶೀಲಿಸದರಲ್ಲದೆ, ಕೊಳೇರಿ ನಿವಾಸಿಗಳಿಗೆ ತುರ್ತಾಗಿ ಆಗಬೇಕಿರುವ ವಸತಿ ಸೌಕರ್ಯಗಳು ಹಾಗೂ ಅದಕ್ಕೆ ಅಗತ್ಯವಿರುವ ಹಣಕಾಸಿನ ಕುರಿತು ಚರ್ಚಿಸಿದರು. ವಸತಿ ಇಲಾಖೆಯು ಕರ್ನಾಟಕ ಗೃಹಮಂಡಳಿ ಮೂಲಕ ನಿರ್ಮಿಸಿದ ವಸತಿ ಸಂಕೀರ್ಣದಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಿ ಆದಷ್ಟು ಬೇಗ ವಸತಿ ಸೌಕರ್ಯವನ್ನು ಅಭಿವೃದ್ದಿಪಡಿಸಬೇಕಿದೆ. ಈ ನಿಟ್ಟಿನಲ್ಲಿ 684 ಮನೆಗಳನ್ನು ಗುರುತಿಸಿದ್ದು, ತಕ್ಷಣವೇ ಅಗತ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕಿದೆ ಎಂದು ವಸತಿ ಸಚಿವರಿಗೆ ವಿವರಿಸಿದರು. ಕಾಚರಕನಹಳ್ಳಿಗೆ ಹೊಂದಿಕೊಂಡಿರುವ ಕೊಳಗೇರಿ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ನಿವಾಸಿಗಳ ವಸತಿ ಸೌಕರ್ಯದ ಬಗ್ಗೆಯೂ ಚರ್ಚೆ…
ಅನೇಕ ಮಾಂಸಾಹಾರಿಗಳು ಮೀನುಗಳನ್ನ ಇಷ್ಟಪಡುತ್ತಾರೆ. ಅವ್ರು ಪ್ರತಿದಿನ ಅದನ್ನು ತಮ್ಮ ಆಹಾರದಲ್ಲಿ ಸೇರಿಸಿಕೊಳ್ಳುತ್ತಾರೆ. ಭಾರತೀಯ ಮಾರುಕಟ್ಟೆಯಲ್ಲಿ ಅನೇಕ ಪೌಷ್ಟಿಕ ಮೀನುಗಳು ಲಭ್ಯವಿದ್ದರೂ, ಕೆಲವು ರೀತಿಯ ಮೀನುಗಳು ತಿನ್ನಲು ಸುರಕ್ಷಿತವಲ್ಲ ಮತ್ತು ಮಾರಕ ಅಪಘಾತಗಳಿಗೆ ಕಾರಣವಾಗಬಹುದು ಎಂದು ಅನೇಕ ಜನರಿಗೆ ತಿಳಿದಿಲ್ಲ. ಕ್ಯಾನ್ಸರ್’ಗೆ ಕಾರಣವಾಗುವ ಥಾಯ್ ಮಾಗುರ್.! ಅಂತಹ ಒಂದು ಮೀನು ಥಾಯ್ ಮಾಗುರ್.. ಈ ಮೀನು ಮಾನವನ ಆರೋಗ್ಯಕ್ಕೆ ಮಾತ್ರವಲ್ಲದೆ ಜಲಚರಗಳಿಗೂ ಅಪಾಯಕಾರಿ. ಕೇಂದ್ರ ಸರ್ಕಾರವು ಇದರ ಸಂತಾನೋತ್ಪತ್ತಿ, ಮಾರಾಟ ಮತ್ತು ಸೇವನೆಯನ್ನ ಸಂಪೂರ್ಣವಾಗಿ ನಿಷೇಧಿಸಿದೆ. ಈ ಥಾಯ್ ಮಾಗುರ್ ಮೀನಿನಲ್ಲಿ ಕ್ಯಾನ್ಸರ್ ಉಂಟು ಮಾಡುವ ಪದಾರ್ಥಗಳಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಇದನ್ನು ತಿನ್ನುವುದರಿಂದ ದೇಹದಲ್ಲಿ ಹಾನಿಕಾರಕ ವಿಷ ಉತ್ಪತ್ತಿಯಾಗುತ್ತದೆ. ಇದು ದೀರ್ಘಾವಧಿಯಲ್ಲಿ ಕ್ಯಾನ್ಸರ್’ನಂತಹ ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು. ಅದಕ್ಕಾಗಿಯೇ ಇದನ್ನು ಕ್ಯಾನ್ಸರ್ ಜನಕ ಮೀನು ಎಂದೂ ಕರೆಯುತ್ತಾರೆ. ಅದನ್ನು ಏಕೆ ನಿಷೇಧಿಸಲಾಯಿತು? ಥಾಯ್ ಮಾಗುರ್ ಮೀನುಗಳನ್ನು ನಿಷೇಧಿಸುವುದಕ್ಕೆ ಕೇವಲ ಆರೋಗ್ಯದ ಕಾರಣಗಳಲ್ಲ, ಪರಿಸರದ ಪರಿಗಣನೆಯೂ ಇದೆ. ಪರಿಸರ ನಾಶ :…
ಬೆಂಗಳೂರು: ರಾಜ್ಯ ಸರ್ಕಾರದಿಂದ ಶೇ.50ರಷ್ಟು ರಿಯಾಯಿತಿಯಲ್ಲಿ ವಾಹನಗಳ ಸಂಚಾರ ನಿಯಮ ಉಲ್ಲಂಘನೆಯ ದಂಡವನ್ನು ಪಾವತಿಸೋದಕ್ಕೆ ಮತ್ತೆ ಅವಕಾಶ ನೀಡಿದೆ. ಈ ಬೆನ್ನಲ್ಲೇ ಆನ್ ಲೈನ್ ವಂಚಕರ ಜಾಲವೂ ಸಕ್ರೀಯವಾಗಿದೆ. ಆರ್ ಟಿ ಓ ಚಲನ್ ಎಂಬುದಾಗಿ ಆಪ್ ಫೈಲ್ ಬಂದಿದ್ದರೇ ಕ್ಲಿಕ್ ಮಾಡಬೇಡಿ ಎಂಬುದಾಗಿ ಇಲಾಖೆ ಎಚ್ಚರಿಸಿದೆ. ಈ ಕುರಿತಂತೆ ಸಾರಿಗೆ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಆರ್.ಟಿ.ಓ ಚಲನ್ ಎಂದು ನಂಬಿಸಿ ವಂಚಿಸುತ್ತಾರೆ. ಎಚ್ಚರ..! ಯಾವುದೇ ಕಾರಣಕ್ಕೂ ಇಂಥ Apk ಫೈಲ್ಗಳ ಮೇಲೆ ಕ್ಲಿಕ್ ಮಾಡದಿರಿ ಎಂಬುದಾಗಿ ಮನವಿ ಮಾಡಿದೆ. ಇನ್ನೂ ಒಂದು ವೇಳೆ ನೀವು ವಾಹನಗಳ ಸಂಚಾರ ನಿಯಮ ಉಲ್ಲಂಘನೆಯ ದಂಡದಲ್ಲಿ ಶೇ.50ರಷ್ಟು ರಿಯಾಯಿತಿ ಪಡೆದು, ಪಾವತಿಸೋದಕ್ಕೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವಂತೆ ತಿಳಿಸಿದೆ. ವಾಹನ ಮಾಲೀಕರು ಆರ್ ಟಿ ಓ ಚಲನ್ ಎಂಬುದಾಗಿ ಬಂದಂತ Apk ಫೈಲ್ ಡೌನ್ ಲೋಡ್ ಮಾಡಿಕೊಂಡರೇ, ಮೊಬೈಲ್ ನಲ್ಲಿನ ಗೌಪ್ಯ ದತ್ತಾಂಶಗಳನ್ನು ಆನ್ ಲೈನ್ ಕಳ್ಳರು ಕದಿಯೋ ಸಾಧ್ಯತೆ ಇದೆ. ಆ…
ಧಾರವಾಡ : ರಾಜ್ಯದಲ್ಲಿ ಮತ್ತೊಂದು ಘೋರ ಘಟನೆಯೊಂದು ನಡೆದಿದ್ದು, ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಧಾರವಾಡ ತಾಲೂಕಿನ ಚಿಕ್ಕ ಮಲ್ಲಿಗವಾಡ ಗ್ರಾಮದಲ್ಲಿ ನಾರಾಯಣ ಶಿಂಧೆ ಎಂಬುವವರು ತನ್ನ ತಂದೆ ವಿಠ್ಠಲ ಶಿಂಧೆ, ಮಕ್ಕಳಾದ ಶಿವಕುಮಾರ್ ಶಿಂಧೆ ಹಾಗೂ ಶ್ರೀನಿಧಿ ಶಿಂಧೆ ಜೊತೆ ಗ್ರಾಮದ ಹೊರವಲಯದಲ್ಲಿರುವ ಯಲ್ಲಮನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗ ಶಶಿಕುಮಾರ್ 6 ನೇ ತರಗತಿಯಲ್ಲಿ ಓದುತ್ತಿದ್ದರು. ಮಗಳು ಶ್ರೀನಿಧಿ 5 ನೇ ತರಗತಿ ಓದುತ್ತಿದ್ದಳು. ಶಾಲಾ ಸಮವಸ್ತ್ರದಲ್ಲೇ ಮಕ್ಕಳ ಜೊತೆಗೆ ತಂದೆಯನ್ನು ಕರೆದುಕೊಂಡು ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಭಾದೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿನ ಬಡತನ ರೇಖೆಗಿಂತ ಕೆಳಗಿರುವಂತ ಜನರಿಗೆ ತುರ್ತು ಸಂದರ್ಭ ಸೇರಿದಂತೆ ಅನಾರೋಗ್ಯ ಸಮಸ್ಯೆಗೆ, ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಪಡೆಯಬಹುದಾಗಿದೆ. ಈ ಮೊದಲು ಅಫ್ ಲೈನ್ ಮೂಲಕ ಅರ್ಜಿಯೊಂದಿಗೆ ಅಲೆಯ ಬೇಕಿದ್ದಂತ ಪ್ರಕ್ರಿಯೆಯು, ಈಗ ಮತ್ತಷ್ಟು ಸರಳಗೊಳಿಸಲಾಗಿದೆ. ಜಸ್ಟ್ ಕುಳಿತಲ್ಲಿಯೇ ಆನ್ ಲೈನ್ ಮೂಲಕ ಸಲ್ಲಿಕೆ ಮಾಡಬಹುದಾಗಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿ ಬಗ್ಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯು ಸರ್ಕಾರದ ಆದೇಶ ಸಂಖ್ಯೆ ಎಫ್.ಡಿ. 103 ಎ.ಸಿ.ಪಿ 58ರಂತೆ ದಿನಾಂಕ: 3ನೇ ಡಿಸೆಂಬರ್ 1958ರಂತೆ ಸ್ಥಾಪಿತಗೊಂಡಿದ್ದು, ನಿಯಮಗಳು ಸರ್ಕಾರದ ಆದೇಶ ಸಂಖ್ಯೆ: ಎಫ್.ಡಿ. 35 ಬಿ.ಎಂ.ಎಸ್. 78 ದಿನಾಂಕ: 12ನೇ ಸೆಪ್ಟಂಬರ್ 1978 ರಂದು ರಚನೆಗೊಂಡಿರುತ್ತದೆ. ಮುಖ್ಯಮಂತ್ರಿಗಳಿಗೆ ಪ್ರದತ್ತವಾಗಿರುವ ವಿವೇಚನ ಅಧಿಕಾರದಂತೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ಮಂಜೂರು ಮಾಡಲಾಗುತ್ತಿದೆ. ಸಾರ್ವಜನಿಕರು, ಸಂಘ-ಸಂಸ್ಥೆಗಳು, ನಿಗಮ-ಮಂಡಳಿಗಳು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಲ್ಲಿಸುವ ದೇಣಿಗೆಯ ಮೊತ್ತವೇ ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಆದಾಯ ಮೂಲವಾಗಿದ್ದು, ಸರ್ಕಾರದ ವಾರ್ಷಿಕ ಆಯ-ವ್ಯಯದಲ್ಲಿ ಯಾವುದೇ ಅನುದಾನವು ನಿಗಧಿಯಾಗಿರುವುದಿಲ್ಲ…
ಬೆಂಗಳೂರು : ವಸತಿ ಮತ್ತು ವಸತಿಯೇತರ ಭೂ ಪರಿವರ್ತಿತ ಜಮೀನುಗಳ ಏಕನಿವೇಶನ ವಿನ್ಯಾಸಗಳಿಗೆ ಅನುಮೋದನೆ ನೀಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕರಾವಳಿ ಭಾಗದಲ್ಲಿ ವಸತಿ ಮತ್ತು ವಾಣಿಜ್ಯ ಭೂ ಪರಿವರ್ತಿತ ಜಮೀನುಗಳ ಏಕನಿವೇಶನ ವಿನ್ಯಾಸಗಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗಿ Farm House/ಭೂ ಪರಿವರ್ತಿತ ಜಮೀನಿನಲ್ಲಿ ಏಕನಿವೇಶನ ವಿನ್ಯಾಸಗಳಲ್ಲಿ ಕಟ್ಟಡ ನಿರ್ಮಿಸಲು ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಿಂದ ಸಾರ್ವಜನಿಕ ರಸ್ತೆಯ ಸಂಪರ್ಕವನ್ನು ಕಡ್ಡಾಯಗೊಳಿಸಲಾಗುತ್ತಿರುವುದರಿಂದ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಪರಿಶೀಲಿಸಲಾಗಿರುತ್ತದೆ. ಇಂತಹ ಪ್ರಕರಣಗಳಿಗೆ ಸಂಬಂಧಿಸಿದಂತೆ, ಸಕ್ಷಮಪ್ರಾಧಿಕಾರಗಳು ನಿಯಮಾನುಸಾರ ಕ್ರಮ ಜರುಗಿಸಿ ತಾಂತ್ರಿಕ ಅನುಮೋದನೆಗಳನ್ನು ನೀಡಲು ಸರ್ಕಾರದಿಂದ ಸ್ಪಷ್ಟ ನಿರ್ದೇಶನವನ್ನು ನೀಡುವ ಅಗತ್ಯವಿರುವುದನ್ನು ಗಮನಿಸಲಾಗಿರುತ್ತದೆ. ಹಾಗಾಗಿ, ರಾಜ್ಯಾದ್ಯಂತ ಏಕರೂಪದ ಕ್ರಮ ಜರುಗಿಸುವ ಅಗತ್ಯವಿದ್ದು, ವಸತಿ ಮತ್ತು ವಸತಿಯೇತರ ಭೂ ಪರಿವರ್ತಿತ ಜಮೀನುಗಳಲ್ಲಿ ಏಕನಿವೇಶನ ವಿನ್ಯಾಸಗಳಿಗೆ ಅನುಮೋದನೆ ನೀಡುವ ಸಂದರ್ಭದಲ್ಲಿ ಹಾಗೂ farm house ಗಳಿಗೆ ಅನುಮತಿ ನೀಡುವ ಪ್ರಸ್ತಾವನೆಗಳಲ್ಲಿ ಸಾರ್ವಜನಿಕ ರಸ್ತೆಯ ಸಂಪರ್ಕದ ಕುರಿತು ಕೆಳಕಂಡಂತೆ ಪರಿಶೀಲಿಸಿ ತಾಂತ್ರಿಕ…
ಬೆಂಗಳೂರು : ರಾಜ್ಯದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂಕಂದಾಯ ಅಧಿನಿಯಮ, 1964 ರ ಪ್ರಕರಣ 94-ಸಿ, 94-ಸಿಸಿ ಹಾಗೂ 94-ಡಿ ರಡಿಯಲ್ಲಿ ನಿವೇಶನ ಮತ್ತು ಮನೆ ನೀಡುವ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9 ಮತ್ತು 11-ಎ ನೀಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂಕಂದಾಯ ಅಧಿನಿಯಮ, 1964 ರ ಪ್ರಕರಣ 94-ಸಿ, 94-ಸಿಸಿ ಹಾಗೂ 94-ಡಿ ರಡಿಯಲ್ಲಿ ನಿವೇಶನ ಮತ್ತು ಮನೆ ನೀಡುವ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9 ಮತ್ತು 11-ಎ ನೀಡಲು ಕೈಗೊಳ್ಳಬೇಕಾದ ಪ್ರಕ್ರಿಯೆಗಳ ಬಗ್ಗೆ ಉಲ್ಲೇಖ (1) ರಲ್ಲಿ ಸರ್ಕಾರದಿಂದ ಆದೇಶ ಹೊರಡಿಸಲಾಗಿರುತ್ತದೆ. ಕರ್ನಾಟಕ ಭೂಕಂದಾಯ ಅಧಿನಿಯಮ, 1964 ರ ಪ್ರಕರಣ 94-ಡಿ ರಡಿಯಲ್ಲಿ ಕಂದಾಯ ಇಲಾಖೆಯಿಂದ ವಿತರಣೆ ಮಾಡಲಾದ ಹಕ್ಕು ಪತ್ರಗಳಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ಉಂಟಾದ ಗೊಂದಲಗಳಿಗೆ ಉಲ್ಲೇಖ (2) ರಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸದರಿ ಸಭೆಯ…














