Author: kannadanewsnow57

ಬೆಂಗಳೂರು: ರಾಜ್ಯದ ಜನತೆಗೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದ್ದು, ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಮುಂದಿನ ಎರಡು ದಿನಗಳ ಕಾಲ (ಮೇ 9 ಮತ್ತು 10) ಮಳೆ ಅಬ್ಬರಿಸಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಗೂ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಧಾರವಾಡ, ಹಾವೇರಿ, ಗದಗ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ಆದರೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ಶುಷ್ಕ ವಾತಾವರಣ ಮುಂದುವರಿಯಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಮೋಡಕವಿದ…

Read More

ಬೆಂಗಳೂರು: ರಾಜ್ಯದ ಕ್ರೀಡಾ ಸಾಧಕರಿಗೆ ಕರ್ನಾಟಕ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. ರಾಜ್ಯದ ನಾಗರಿಕ ಸೇವೆಗಳ (ಸಿವಿಲ್ ಸೇವೆ) ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ. 2 ರಷ್ಟು ಮೀಸಲಾತಿ ನೀಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಕ್ರೀಡಾ ಸಾಧಕರಿಗೆ ಶೇ. 2 ರಷ್ಟು ಮೀಸಲಾತಿ ಒದಗಿಸುವ ನಿಟ್ಟಿನಲ್ಲಿ ‘ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ತಿದ್ದುಪಡಿ ನಿಯಮಗಳು-2026’ ಕ್ಕೆ ಸಚಿವ ಸಂಪುಟವು ಅಧಿಕೃತವಾಗಿ ಅನುಮೋದನೆ ನೀಡಿದೆ ಎಂದು ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ. ಈ ಹಿಂದೆ ಸರ್ಕಾರವು ಕ್ರೀಡಾಪಟುಗಳಿಗೆ ಶೇ. 2 ರಷ್ಟು ಮೀಸಲಾತಿ ಘೋಷಿಸಿ ಆದೇಶ ಹೊರಡಿಸಿತ್ತು. ಆದರೆ, ತಾಂತ್ರಿಕ ಕಾರಣಗಳಿಂದಾಗಿ ಡಿಸೆಂಬರ್ 2024 ರಲ್ಲಿ ಈ ಆದೇಶಕ್ಕೆ ತಡೆ ನೀಡಲಾಗಿತ್ತು. 1970 ರ ಕರ್ನಾಟಕ ನಾಗರಿಕ ಸೇವಾ ನಿಯಮ 9 ಕ್ಕೆ ತಿದ್ದುಪಡಿ ತರುವ ಮೂಲಕ ಈ ಮೀಸಲಾತಿಯನ್ನು ಜಾರಿಗೆ ತರಲು ಸರ್ಕಾರ ಈಗ ಮರು ಪರಿಶೀಲಿಸಿ ಅಂತಿಮ ನಿರ್ಧಾರ ಮಾಡಿದೆ. ಪ್ರಯೋಜನ: ಇನ್ನು ಮುಂದೆ…

Read More

ಬೆಂಗಳೂರು : ವಿಶೇಷ ಚೇತನರಿಗಾಗಿ ಉದ್ಯೋಗ ಅವಕಾಶ ಮತ್ತು ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡುವ ಸಲುವಾಗಿ ಆಗಸ್ಟ್‌ನಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. 3,000 ಕ್ಕೂ ಹೆಚ್ಚು ವಿಶೇಷ ಚೇತನ ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ. ವಿಶೇಷ ಚೇತನರಿಗೆ ಉದ್ಯೋಗಾವಕಾಶಗಳು ಹಾಗೂ ಕೌಶಲ್ಯಾಭಿವೃದ್ಧಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ‘ಆದಿದ್ವಾರ’ (Adidwara) ಎಂಬ ಹೊಸ ಅಪ್ಲಿಕೇಶನ್ ಅನ್ನು ಗುರುವಾರ ಬಿಡುಗಡೆ ಮಾಡಿದೆ. ಅಸಿಸ್ಟೆಕ್ ಫೌಂಡೇಶನ್ (ATF) ಸಹಯೋಗದೊಂದಿಗೆ ವಿಕಾಸಸೌಧದಲ್ಲಿ ನಡೆದ ಸಮಾರಂಭದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ಈ ಆಪ್ ಅನ್ನು ಲೋಕಾರ್ಪಣೆ ಮಾಡಿದರು. ವಿಶೇಷ ಚೇತನರಿಗೆ (PwDs) ಸೂಕ್ತ ಉದ್ಯೋಗ ಮಾಹಿತಿ ನೀಡುವುದು ಮತ್ತು ಅವರ ಕೌಶಲ್ಯವನ್ನು ಅಭಿವೃದ್ಧಿಪಡಿಸಲು ನೆರವಾಗುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.ಇದೇ ವೇಳೆ, ಬರುವ ಆಗಸ್ಟ್ ತಿಂಗಳಿನಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ವಿಶೇಷ ಚೇತನರಿಗಾಗಿ ವಿಶೇಷ ‘ಉದ್ಯೋಗ ಮೇಳ’ ಆಯೋಜಿಸುವುದಾಗಿ…

Read More

ಬೆಂಗಳೂರು: ರಾಜ್ಯದ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಹಾಗೂ ದೇಶದ ವಿವಿಧ ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳ ಎಂಜಿನಿಯರಿಂಗ್ ಸೀಟುಗಳ ಪ್ರವೇಶಕ್ಕಾಗಿ ನಡೆಸಲಾಗುವ ಕಾಮೆಡ್-ಕೆ (COMED-K) ಯುಜಿಇಟಿ ಮತ್ತು ಯೂನಿಗೇಜ್ (Uni-GAUGE) ಸಂಯೋಜಿತ ಪರೀಕ್ಷೆಗಳು ಇಂದು, ಮೇ 9ರಂದು ದೇಶಾದ್ಯಂತ ನಡೆಯಲಿವೆ. ಒಟ್ಟು ಅಭ್ಯರ್ಥಿಗಳು: ದೇಶಾದ್ಯಂತ 1.30 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ರಾಜ್ಯದ ಪಾಲು: ಕರ್ನಾಟಕವೊಂದರಲ್ಲೇ 40,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳು: ದೇಶದ 28 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 171 ನಗರಗಳಲ್ಲಿನ ಒಟ್ಟು 303 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ವಿಧಾನ: ಇದು ಕಂಪ್ಯೂಟರ್ ಆಧಾರಿತ ಆನ್‌ಲೈನ್ ಪರೀಕ್ಷೆಯಾಗಿದೆ. ಪರೀಕ್ಷಾ ವೇಳಾಪಟ್ಟಿ: ಪರೀಕ್ಷೆಯು ಎರಡು ಅವಧಿಗಳಲ್ಲಿ ನಡೆಯಲಿದೆ: ಬೆಳಿಗ್ಗೆ: 9:00 ರಿಂದ 12:00 ಗಂಟೆಯವರೆಗೆ. ಮಧ್ಯಾಹ್ನ: 2:00 ರಿಂದ 5:00 ಗಂಟೆಯವರೆಗೆ. ವಿದ್ಯಾರ್ಥಿಗಳಿಗೆ ಸೂಚನೆಗಳು: ಅಭ್ಯರ್ಥಿಗಳು ನಿಗದಿತ ಸಮಯಕ್ಕಿಂತ ಮೊದಲೇ ಪರೀಕ್ಷಾ ಕೇಂದ್ರಕ್ಕೆ ತಲುಪಬೇಕು. ಕಡ್ಡಾಯ ದಾಖಲೆಗಳು: ಪರೀಕ್ಷಾ ಪ್ರವೇಶ ಪತ್ರ (Admit…

Read More

ಬೆಂಗಳೂರು: ಗ್ರಾಮೀಣ ಭಾಗದ ಆಸ್ತಿ ವಹಿವಾಟುಗಳಲ್ಲಿ ಪಾರದರ್ಶಕತೆ ತರಲು ಮತ್ತು ಅಧಿಕೃತ ಮಾಲೀಕತ್ವದ ದಾಖಲೆಗಳನ್ನು ಸುಲಭವಾಗಿ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಇನ್ಮುಂದೆ ಸಾರ್ವಜನಿಕರು ತಮ್ಮ ಹತ್ತಿರದ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಇ-ಸ್ವತ್ತು ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ನಮೂನೆ 11A ಮತ್ತು 11B ದಾಖಲೆಗಳನ್ನು ಸಂಪೂರ್ಣ ಉಚಿತವಾಗಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಈ ಅಭಿಯಾನಕ್ಕೆ ಈಗಾಗಲೇ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ತಾಂತ್ರಿಕ ಸಮಸ್ಯೆಗಳಿಗೆ ಮುಕ್ತಿ ಈ ಹಿಂದೆ ಇ-ಸ್ವತ್ತು ತಂತ್ರಾಂಶ 2.0 ದಲ್ಲಿದ್ದ ತಾಂತ್ರಿಕ ಅಡಚಣೆಗಳನ್ನು ಈಗ ಸಂಪೂರ್ಣವಾಗಿ ಸರಿಪಡಿಸಲಾಗಿದೆ. ಇದರಿಂದಾಗಿ ಸಾರ್ವಜನಿಕರು ಯಾವುದೇ ಗೊಂದಲವಿಲ್ಲದೆ ಸೇವೆ ಪಡೆಯಬಹುದು. ಜನರು ತಮ್ಮ ಮನೆಯಲ್ಲಿಯೇ ಕುಳಿತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ಡಿಜಿಟಲ್ ಪ್ರಮಾಣಪತ್ರಗಳನ್ನು ನೇರವಾಗಿ ಪಡೆಯುವ ವ್ಯವಸ್ಥೆಯೂ ಚಾಲ್ತಿಯಲ್ಲಿದೆ. ಎಲ್ಲೆಲ್ಲಿ ಅರ್ಜಿ ಸಲ್ಲಿಸಬಹುದು? ಬಾಪೂಜಿ ಸೇವಾ ಕೇಂದ್ರಗಳಲ್ಲದೆ, ಇತರೆ ನಾಗರಿಕ ಸೇವಾ ಕೇಂದ್ರಗಳಲ್ಲೂ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ: ಬಾಪೂಜಿ…

Read More

ಬೆಂಗಳೂರು: ನಗರದ ನಾಗರಬಾವಿಯ ಹೋಟೆಲ್‌ವೊಂದರಲ್ಲಿ ಆಕಸ್ಮಿಕವಾಗಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಹೋಟೆಲ್‌ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಇಡೀ ಕಟ್ಟಡದಲ್ಲಿ ದಟ್ಟವಾದ ಹೊಗೆ ಆವರಿಸಿಕೊಂಡಿತ್ತು. ಈ ಸಂದರ್ಭದಲ್ಲಿ ಹೋಟೆಲ್‌ನ ಒಳಗಿದ್ದ ಐವರು ಸಿಬ್ಬಂದಿಗಳು ಹೊರಬರಲಾರದೆ ಸಿಲುಕಿಕೊಂಡಿದ್ದರು. ಹೊಗೆಯ ತೀವ್ರತೆಗೆ ಉಸಿರಾಡಲು ಸಾಧ್ಯವಾಗದೆ ಐವರೂ ತೀವ್ರವಾಗಿ ಅಸ್ವಸ್ಥಗೊಂಡಿದ್ದರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡವು ಹೋಟೆಲ್‌ನಲ್ಲಿ ಸಿಲುಕಿದ್ದ ಭೀಮ, ಶಿವಾನಂದ, ಸತೀಶ್ ಮತ್ತು ರಾಜಕುಮಾರ್ ಸೇರಿದಂತೆ ಐವರನ್ನು ರಕ್ಷಿಸಿ ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿತ್ತು. ದುರಾದೃಷ್ಟವಶಾತ್, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ 45 ವರ್ಷದ ರಾಜಕುಮಾರ್ ಸಾವನ್ನಪ್ಪಿದ್ದಾರೆ. ಉಳಿದ ನಾಲ್ವರಿಗೆ ಪ್ರಸ್ತುತ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.

Read More

ಬೆಂಗಳೂರು: ನೀವು ಬ್ಯಾಂಕ್ನಿಂದ ಸಾಲ ಪಡೆದಿದ್ದೀರಾ? ಹಾಗಿದ್ದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿಮಗೊಂದು ಮಹತ್ವದ ಸಿಹಿಸುದ್ದಿ ನೀಡಿದೆ. ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಸಾಲದ ಕಂತು (EMI) ಪಾವತಿಸಲು ಕಷ್ಟಪಡುವ ಗ್ರಾಹಕರಿಗೆ ನೆರವಾಗಲು ಆರ್ಬಿಐ ಹೊಸ ಮಾರ್ಗಸೂಚಿಯನ್ನು ಸಿದ್ಧಪಡಿಸಿದೆ. ಈ ನಿಯಮವು ಜುಲೈ 1, 2026 ರಿಂದ ಜಾರಿಗೆ ಬರಲಿದೆ. ನೋಂದಣಿ ಇಲ್ಲದೆಯೇ ಸಿಗಲಿದೆ ಇಎಂಐ ರಿಯಾಯಿತಿ! ಈ ಮೊದಲು ಪ್ರವಾಹ, ಭೂಕಂಪ ಅಥವಾ ಚಂಡಮಾರುತದಂತಹ ವಿಪತ್ತುಗಳು ಸಂಭವಿಸಿದಾಗ, ಸಾಲಗಾರರು ತಮಗೆ ಇಎಂಐ ಪಾವತಿಸಲು ವಿನಾಯಿತಿ ಬೇಕೆಂದು ಬ್ಯಾಂಕ್ಗಳಿಗೆ ಅಲೆದು ಅರ್ಜಿ ಸಲ್ಲಿಸಬೇಕಾಗಿತ್ತು. ಆದರೆ ಹೊಸ ನಿಯಮದಂತೆ, ನಿಮ್ಮ ಪ್ರದೇಶದಲ್ಲಿ ಸರ್ಕಾರವು ಅಧಿಕೃತವಾಗಿ ‘ಪ್ರಾಕೃತಿಕ ವಿಕೋಪ’ ಎಂದು ಘೋಷಿಸಿದರೆ, ಬ್ಯಾಂಕ್ಗಳೇ ಸ್ವಯಂಪ್ರೇರಿತವಾಗಿ ನಿಮಗೆ ಸಾಲ ಮರುಪಾವತಿಯಲ್ಲಿ ರಿಯಾಯಿತಿ ನೀಡಲಿವೆ. ಹೊಸ ನಿಯಮದ ಪ್ರಮುಖ ಅಂಶಗಳು: ಯಾವ ವಿಪತ್ತುಗಳಿಗೆ ಅನ್ವಯ?: ರಾಜ್ಯ ವಿಪತ್ತು ಪರಿಹಾರ ನಿಧಿ (SDRF) ಅಥವಾ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (NDRF) ಅಡಿಯಲ್ಲಿ ಘೋಷಿತವಾದ ನೈಸರ್ಗಿಕ ವಿಕೋಪಗಳಿಗೆ ಮಾತ್ರ…

Read More

ಬೆಂಗಳೂರು: ಕರ್ನಾಟಕ ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಸುದ್ದಿಯೊಂದನ್ನು ನೀಡಿದೆ. ಬಾಕಿ ಉಳಿದಿದ್ದ ಪಡಿತರ ಚೀಟಿಗಳ ತಿದ್ದುಪಡಿ ಹಾಗೂ ಹೊಸ ಅರ್ಜಿ ಸಲ್ಲಿಕೆಗೆ ಮೇ 8, 2026ರಿಂದ ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ಇಲಾಖೆಯು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಪ್ರಮುಖವಾಗಿ ಇ-ಶ್ರಮ (E-Shram), ಪಿವಿಟಿಜಿ (PVTG) ಹಾಗೂ ವೈದ್ಯಕೀಯ ತುರ್ತು ಪರಿಸ್ಥಿತಿಗೆ ಸಂಬಂಧಿಸಿದ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆ ಮತ್ತು ತಿದ್ದುಪಡಿ ಮಾಡ್ಯೂಲ್‌ಗಳನ್ನು ಸಕ್ರಿಯಗೊಳಿಸಲಾಗಿದೆ. ಪ್ರಮುಖ ಸೇವೆಗಳು ಮತ್ತು ಸಮಯ: ಸಾರ್ವಜನಿಕರು ಈ ಕೆಳಗಿನ ಸೇವೆಗಳನ್ನು ನಿಗದಿತ ಸಮಯದಲ್ಲಿ ಪಡೆದುಕೊಳ್ಳಬಹುದು: ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆ: ಮೇ 8, 2026 ರಿಂದ ಮಾರ್ಚ್ 31, 2027 ರವರೆಗೆ ಬೆಳಿಗ್ಗೆ 10:00 ರಿಂದ ಸಂಜೆ 5:00 ರವರೆಗೆ ಅವಕಾಶವಿರುತ್ತದೆ. ಹೊಸ ಪಡಿತರ ಚೀಟಿ FI ಅನುಮೋದನೆ: ಬೆಳಿಗ್ಗೆ 10:00 ರಿಂದ ರಾತ್ರಿ 9:00 ರವರೆಗೆ. GSC / ತಿದ್ದುಪಡಿ ಅರ್ಜಿ ಸಲ್ಲಿಕೆ: ಮೇ…

Read More

ಬೆಂಗಳೂರು : ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಬುಧವಾರ ಬಿಡುಗಡೆ ಮಾಡಿರುವ 2024ನೇ ಸಾಲಿನ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ಕೃಷಿ ವಲಯಕ್ಕೆ ಸಂಬಂಧಿಸಿದ ವ್ಯಕ್ತಿಗಳ ಆತ್ಮಹತ್ಯೆ ಪ್ರಕರಣಗಳಲ್ಲಿ ಶೇ. 2.22 ರಷ್ಟು ಇಳಿಕೆಯಾಗಿದೆ. ಆದರೆ, ಕರ್ನಾಟಕ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಈ ಪ್ರಮಾಣ ಏರಿಕೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. 2024ರಲ್ಲಿ ದೇಶಾದ್ಯಂತ ಒಟ್ಟು 10,546 ಕೃಷಿ ವಲಯದ ವ್ಯಕ್ತಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ವರ್ಷ (2023) ಈ ಸಂಖ್ಯೆ 10,786 ಇತ್ತು. ರೈತರು: 4,633 ಪ್ರಕರಣಗಳು. ಕೃಷಿ ಕಾರ್ಮಿಕರು: 5,913 ಪ್ರಕರಣಗಳು. ದೇಶದ ಒಟ್ಟು ಆತ್ಮಹತ್ಯೆ ಪ್ರಕರಣಗಳಲ್ಲಿ ಕೃಷಿ ವಲಯದ ಪಾಲು ಶೇ. 6.2 ರಷ್ಟಿದೆ. ಕರ್ನಾಟಕದ ಸ್ಥಿತಿ ಕೃಷಿ ಸಂಬಂಧಿತ ಆತ್ಮಹತ್ಯೆಗಳಲ್ಲಿ ಮಹಾರಾಷ್ಟ್ರದ ನಂತರ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಆತ್ಮಹತ್ಯೆ ಪ್ರಕರಣಗಳು ಗಣನೀಯವಾಗಿ ಹೆಚ್ಚಿವೆ. ರೈತರು: 1,770 (ಹಿಂದಿನ ವರ್ಷ 1,425 ಇತ್ತು). ಕೃಷಿ ಕಾರ್ಮಿಕರು: 1,201 (ಹಿಂದಿನ ವರ್ಷ 998 ಇತ್ತು). ಕರ್ನಾಟಕದಲ್ಲಿ…

Read More

ಬೆಂಗಳೂರು : ಕೇಂದ್ರ ಸರ್ಕಾರವು ರಾಜ್ಯದ ಆಹಾರ ಭದ್ರತೆ ಕಾಯ್ದೆಯಡಿ 2026ನೇ ಮೇ ತಿಂಗಳಿಗೂ ಜೂನ್ ಈ ಎರಡೂ ತಿಂಗಳುಗಳಲ್ಲಿ ಸಂಬಂದಿಸಿದ ಪಡಿತರ ಅಕ್ಕಿಯನ್ನು ಇದೇ ತಿಂಗಳ ಅಂದರೆ 2026ನೇ ಮೇ ತಿಂಗಳಲ್ಲಿಯೇ ವಿತರಣೆ ಮಾಡುವಂತೆ ನಿರ್ದೇಶನಗಳನ್ನು ಇರುವುದರಿಂದ ಪ್ರಸ್ತುತ 2026ನೇ ಮೇ ತಿಂಗಳಲ್ಲಿ ಮೇ ಹಾಗೂ ಜೂನ್ ಈ ಎರಡೂ ತಿಂಗಳ ಸಂಬಂದಿಸಿದಂತೆ ಅಕ್ಕಿಯನ್ನು ವಿತರಣೆ ಮಾಡುವ ಜಿಲ್ಲೆ ಎಲ್ಲ ನ್ಯಾಯಬೆಲೆ ಅಂಗಡಿಗಳಿಗೆ ಹಂಚಿಕೆಯನ್ನು ನೀಡಲಾಗಿರುತ್ತದೆ. ಅಂತ್ಯೋದಯ ಅನ್ನಯೋಜನೆ ಪಡಿತರ ಚೀಟಿಗೆ ಎರಡೂ ತಿಂಗಳ ಪಡಿತರ ಅಕ್ಕಿ ಒಟ್ಟು 70 ಕೆಜಿ, ಹಾಗೂ ಆಧ್ಯತಾ (ಬಿಪಿಎಲ್) ಪಡಿತರ ಚೀಟಿಗೆ ಪ್ರತಿತಿಂಗಳು ಪ್ರತಿಸಿದಸ್ಯರಿಗೆ 5 ಕೆಜಿಯಂತೆ ಒಟ್ಟು 10 ಕೆಜಿ ಅಕ್ಕಿಯನ್ನು ಕೇಂದ್ರಿಯವಾಗಿ ಎರಡು ಪ್ರತ್ಯೇಕ ಬಯೋಮೆಟ್ರಿಕ್ ನೀಡುವ ಮೂಲಕ ಪಡಿತರ ಚೀಟಿದಾರರಿಗೆ ವಿತರಿಸಲಾಗುವುದು. ಹಾಗೂ ಕಾರ್ಡುಕೋರ ಸಾರ್ವಜನಿಕರು ನೀಡುತ್ತಿರುವ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡುಬಂದರೆ ಅಂತಹ ಬಿ ಪಿ ಎಲ್ ಕಾರ್ಡುಗಳನ್ನು ರದ್ದು ಪಡಿಸಲಾಗುವುದು. ರಾಜ್ಯ ಸರ್ಕಾರದ ಅನ್ನಭಾಗ್ಯ…

Read More