Author: kannadanewsnow57

ಚಿತ್ರದುರ್ಗ/ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಕ್ರಿಸ್ ಮಸ್ ಹಬ್ಬದ ದಿನವೇ ಸರಣಿ ದುರಂತ ಸಂಭವಿಸಿದ್ದು, ಪ್ರತ್ಯೇಕ ಅಪಘಾತಗಳಲ್ಲಿ 10 ಮಂದಿ ಬಲಿಯಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದು 6 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೊರ್ಲತ್ತು ಗ್ರಾಮದ ಬಳಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಹೊತ್ತಿ ಉರಿದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಲಾರಿ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಬಸ್ ನಲ್ಲಿದ್ದ 6 ಜನರು ಸಜೀವ ದಹನವಾಗಿದ್ದಾರೆ. ಹಲವರು ಗಾಯಗೊಂಡಿದ್ದು, ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬಸ್ ಅತಿವೇಗದಿಂದ ಕಂಟೈನರ್ ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡದ ರಭಸಕ್ಕೆ ನೋಡ ನೋಡುತ್ತಿದ್ದಂತೆ ಬೆಂಕಿ ಹತ್ತಿಕೊಂಡಿದೆ. ಬೆಂಕಿಯ ಕನ್ನಾಲಿಗೆಗೆ ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ. ಚಿಕ್ಕಬಳ್ಳಾಂಪುರದಲ್ಲಿ ನಾಲ್ವರು ಯುವಕರು ಸಾವು…

Read More

ರೈಲ್ವೆ ನೇಮಕಾತಿ ಮಂಡಳಿ (RRB) ನಿರುದ್ಯೋಗಿ ಅಭ್ಯರ್ಥಿಗಳಿಗೆ ಒಳ್ಳೆಯ ಸುದ್ದಿ ಪ್ರಕಟಿಸಿದೆ. ವಿವಿಧ ಇಲಾಖೆಗಳಲ್ಲಿನ ಉದ್ಯೋಗಗಳ ನೇಮಕಾತಿಗಾಗಿ 2026 ರ ಸಮಗ್ರ ವಾರ್ಷಿಕ ನೇಮಕಾತಿ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಿದೆ. ದೇಶಾದ್ಯಂತ ರೈಲ್ವೆ ಇಲಾಖೆಯಲ್ಲಿನ ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವ ಉದ್ದೇಶದಿಂದ ಈ ಕ್ಯಾಲೆಂಡರ್ ಅನ್ನು ಮುಂಚಿತವಾಗಿ ಘೋಷಿಸಲಾಗಿದೆ. ವರ್ಷಗಳಿಂದ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಲಕ್ಷಾಂತರ ಯುವಕರಿಗೆ ಇದು ಉತ್ತಮ ಅವಕಾಶ ಎಂದು ಹೇಳಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಫೆಬ್ರವರಿ – ಸಹಾಯಕ ಲೋಕೋ ಪೈಲಟ್.. ಈ ವಾರ್ಷಿಕ ಕ್ಯಾಲೆಂಡರ್ ಪ್ರಕಾರ, 2026 ರ ಆರಂಭದಿಂದ ಅಧಿಸೂಚನೆಗಳ ಸರಣಿ ಪ್ರಾರಂಭವಾಗುತ್ತದೆ. ಫೆಬ್ರವರಿ ತಿಂಗಳಲ್ಲಿ ಸಹಾಯಕ ಲೋಕೋ ಪೈಲಟ್ (ಎಎಲ್ಪಿ) ಹುದ್ದೆಗಳ ನೇಮಕಾತಿಗೆ ಮೊದಲ ಅಧಿಸೂಚನೆ ಬಿಡುಗಡೆಯಾಗಲಿದೆ. ತಾಂತ್ರಿಕ ಹಿನ್ನೆಲೆ ಹೊಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ. ಅದರ ನಂತರ, ತಂತ್ರಜ್ಞ ವಿಭಾಗಗಳಲ್ಲಿ ಸಾವಿರಾರು ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಯು ಮಾರ್ಚ್ ತಿಂಗಳಲ್ಲಿ…

Read More

ದಾವಣಗೆರೆ : ಮಾಜಿ ಸಚಿವರು ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ; ಶಾಮನೂರು ಶಿವಶಂಕರಪ್ಪನವರು ನಿಧನರಾಗಿದ್ದು ಅವರ ಶಿವಗಣಾರಾಧನೆ ಹಾಗೂ ನುಡಿನಮನ ಕಾರ್ಯಕ್ರಮವನ್ನು ಶಾಮನೂರು ಕುಟುಂಬದಿಂದ ಡಿಸೆಂಬರ್ 26 ರಂದು ಬೆಳಗ್ಗೆ 10.15 ರಿಂದ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ಆಯೋಜಿಸಲಾಗಿದ್ದು ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು, ಹಿರಿಯ ಸಚಿವರು ಮತ್ತು ವಿವಿಧ ಮಠಾಧೀಶರು ಸೇರಿದಂತೆ ಗಣ್ಯ ವ್ಯಕ್ತಿಗಳು ಭಾಗವಹಿಸುವುದರಿಂದ ಅಗತ್ಯ ಸಿದ್ದತೆ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರಾದ ಡಾ; ಬಿ.ಆರ್.ರವಿಕಾಂತೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಶಿವಗಣರಾಧನೆ ಹಾಗೂ ನುಡಿನಮನ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಜಿಲ್ಲಾಧಿಕಾರಿ ಅವರು ಮಾತನಾಡಿದರು. ಡಾ; ಶಾಮನೂರು ಶಿವಶಂಕರಪ್ಪನವರ ಶಿವಗಣಾರಾಧನೆ ಹಾಗೂ ನುಡಿನಮನ ಸಮಾರಂಭದಲ್ಲಿ ರಾಜ್ಯಸಭಾ ಸದಸ್ಯರು ಹಾಗೂ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಸೇರಿದಂತೆ ಮಾಜಿ ಮುಖ್ಯಮಂತ್ರಿಗಳು, ಗಣ್ಯಾತಿ ಗಣ್ಯರು ಸೇರಿದಂತೆ ಸಚಿವ ಸಂಪುಟದ ಸಚಿವರು, ಸಂಸದರು, ಶಾಸಕರು ಸೇರಿದಂತೆ ಶಾಮನೂರು ಕುಟುಂಬದ ಸಂಬಂಧಿಕರು ಸೇರಿದಂತೆ…

Read More

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಅಜ್ಜವಾರ ಗ್ರಾಮದ ನರಸಿಂಹಮೂರ್ತಿ. ನಂದೀಶ್, ಅರುಣ್, ಮನೋಜ್ ಮೃತಪಟ್ಟಿದ್ದಾರೆ. ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಈ ನಾಲ್ವರು ಚಿಕ್ಕಬಳ್ಳಾಪುರ ನಗರದ ಚರ್ಚ್ಗಳಿಗೆ ಭೇಟಿ ನೀಡಿ ಮರಳಿ ಸ್ವಗ್ರಾಮದತ್ತ ಹೊರಟಿದ್ದರು. ಮೃತ ನಾಲ್ವರು ಯುವಕರು ಒಂದೇ ಬೈಕಿನಲ್ಲಿ ಹೊರಟಿದ್ದರು. ಈ ವೇಳೆ ಟಿಪ್ಪರ್ ಲಾರಿ ಅಡ್ಡ ಬಂದಿದ್ದು ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ.

Read More

ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯಲ್ಲಿ ಮಾನವೀಯತೆಯನ್ನು ಪ್ರಶ್ನಿಸುವ ಅತ್ಯಂತ ಭಯಾನಕ ಘಟನೆ ಬೆಳಕಿಗೆ ಬಂದಿದೆ. ಕೈಗಳ ಮೇಲಿನ ಮೆಹಂದಿ ಬಣ್ಣ ಸಂಪೂರ್ಣವಾಗಿ ಮಸುಕಾಗುವ ಮೊದಲೇ, 24 ವರ್ಷದ ನವವಿವಾಹಿತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಧ್ಯಪ್ರದೇಶದ ಹನುಮಾನ ಪೊಲೀಸ್ ಠಾಣೆ ವ್ಯಾಪ್ತಿಯ ಪಂಥಿ ವಿಶ್ರಾಮ್ ಗ್ರಾಮದಲ್ಲಿರುವ ತನ್ನ ತವರು ಮನೆಯಲ್ಲಿ ಕರುಣಾ ದ್ವಿವೇದಿ ಎಂಬ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದಾಗ್ಯೂ, ಇದು ಕೇವಲ ಆತ್ಮಹತ್ಯೆಯಲ್ಲ, ಅವರು ಬರೆದಿರುವ 10 ಪುಟಗಳ ಆತ್ಮಹತ್ಯೆ ಪತ್ರವು ಅವರ ಪತಿಯ ಕ್ರೌರ್ಯದಿಂದ ತುಂಬಿದೆ. ಕರುಣಾ ಅವರ ಮದುವೆ ಕಳೆದ ವರ್ಷ ಮೇ 8 ರಂದು ನಡೆಯಿತು. ಆದರೆ ಅವರು ಬರೆದ ಪತ್ರದಿಂದ ಅವರ ಮದುವೆಯ ನಂತರ ಅವರ ಅತ್ತೆ-ಮಾವನ ಮನೆ ಅವರಿಗೆ ಜೀವಂತ ನರಕವಾಗಿದೆ ಎಂದು ಸ್ಪಷ್ಟವಾಗುತ್ತದೆ. ಅವರ ಪತಿ ಮತ್ತು ಅತ್ತೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು ಎಂದು ಅವರು ಆರೋಪಿಸಿದ್ದಾರೆ. ಕರುಣಾ ತಮ್ಮ ಪತ್ರದಲ್ಲಿ ಭಯಾನಕ ಸತ್ಯವನ್ನು ಬರೆದಿದ್ದಾರೆ. ತನ್ನ ಗಂಡ ತನ್ನ ಋತುಚಕ್ರದ ಸಮಯದಲ್ಲಿ…

Read More

ಇಂದಿನ ವೇಗದ ಜಗತ್ತಿನಲ್ಲಿ ಮಕ್ಕಳನ್ನು ಬೆಳೆಸುವುದು ಪೋಷಕರಿಗೆ ವಿಶೇಷವಾಗಿ ತಂದೆಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಜೀವನವು ಕೇವಲ ಅಧ್ಯಯನ ಮತ್ತು ಅಂಕಗಳ ಬಗ್ಗೆ ಅಲ್ಲ; ಸಮಾಜದಲ್ಲಿ ಗೌರವಾನ್ವಿತ ವ್ಯಕ್ತಿಯಾಗಿ ಬೆಳೆಯಲು ಬಲವಾದ ವ್ಯಕ್ತಿತ್ವ ಬಹಳ ಮುಖ್ಯ. ಪ್ರತಿಯೊಬ್ಬ ತಂದೆಯೂ ತನ್ನ ಮಗನನ್ನು ಶ್ರೇಷ್ಠ ವ್ಯಕ್ತಿಯನ್ನಾಗಿ ಮಾಡಲು ಮೂರು ಮೂಲಭೂತ ತತ್ವಗಳನ್ನು (ಯಶಸ್ವಿ ಮತ್ತು ದಯೆ) ಕಲಿಸಬೇಕು. ಈ ಪಾಠಗಳು ಭವಿಷ್ಯದ ಏರಿಳಿತಗಳನ್ನು ಎದುರಿಸಲು ಅವನನ್ನು ಸಿದ್ಧಪಡಿಸುತ್ತವೆ. ವೈಫಲ್ಯ ಮತ್ತು ಪರಿಶ್ರಮವನ್ನು ಅಳವಡಿಸಿಕೊಳ್ಳುವುದು ಅನೇಕ ತಂದೆ ಯಾವಾಗಲೂ ತಮ್ಮ ಮಕ್ಕಳಿಗೆ ‘ಗೆಲುವು’ ಎಂದು ಕಲಿಸುತ್ತಾರೆ. ಆದರೆ, ಈ ಲೇಖನವು ಸೋಲಿನಿಂದ ಕಲಿಯುವುದು ಗೆಲುವಿಗಿಂತ ಮುಖ್ಯ ಎಂದು ಹೇಳುತ್ತದೆ. ಸೋಲಿನ ಪಾಠ: ಜೀವನದಲ್ಲಿ ಎಲ್ಲವೂ ಯೋಜಿಸಿದಂತೆ ನಡೆಯುವುದಿಲ್ಲ. ಯಾವುದೇ ಕೆಲಸದಲ್ಲಿ ವಿಫಲವಾದಾಗ ನಿರುತ್ಸಾಹಗೊಳ್ಳದೆ ಆ ತಪ್ಪುಗಳಿಂದ ಹೇಗೆ ಕಲಿಯಬೇಕೆಂದು ತಂದೆ ತನ್ನ ಮಗನಿಗೆ ವಿವರಿಸಬೇಕು. ಪರಿಶ್ರಮ: ಯಶಸ್ಸು ರಾತ್ರೋರಾತ್ರಿ ಬರುವುದಿಲ್ಲ ಎಂದು ಹೇಳಬೇಕು, ಅದರ ಹಿಂದೆ ಸಾಕಷ್ಟು ಕಠಿಣ ಪರಿಶ್ರಮ ಮತ್ತು ಪರಿಶ್ರಮ ಬೇಕಾಗುತ್ತದೆ.…

Read More

ಬೆಂಗಳೂರು : ಪಿ.ಎಂ. ಕುಸುಮ್-ಬಿ ಯೋಜನೆಯಡಿ ಸೋಲಾರ್ ಪಂಪ್-ಸೆಟ್ಗಾಗಿ ಅರ್ಜಿ ಸಲ್ಲಿಸಿರುವ ರೈತರ ಗಮನಕ್ಕೆತಾಂತ್ರಿಕ ಕಾರ್ಯಸಾಧ್ಯತೆ ಹೊಂದಿರುವ ಅರ್ಜಿಗಳ ರೈತರುಗಳಿಗೆ ಈಗಾಗಲೇ ಮೊಬೈಲ್ ಸಂದೇಶಗಳನ್ನು ರವಾನಿಸಲಾಗಿದೆ/ರವಾನಿಸಲಾಗುತ್ತಿದೆ. ಈ ಸಂಬಂಧ ರೈತರು ತಮ್ಮ ಪಾಲಿನ ವಂತಿಗೆಯನ್ನು ದಿನಾಂಕ: 30.12.2025 ರೊಳಗೆ ಪಾವತಿಸಲು ಅಂತಿಮ ಗಡುವು ನಿಗಧಿಪಡಿಸಲಾಗಿದೆ. ಸದರಿ ಗಡುವಿನ ಒಳಗಾಗಿ ಪಾವತಿಸಲು ವಿಫಲವಾದಲ್ಲಿ, ಅಂತಹ ಅರ್ಜಿಗಳನ್ನು ರದ್ದುಪಡಿಸಲಾಗುವುದು. ಆನ್ಲೈನ್ ಮುಖಾಂತರ ವಂತಿಗೆಯನ್ನು ಪಾವತಿಸಲು www.souramitra.com ดู “PAY FARMER SHARE”ನ್ನು ಕ್ಲಿಕ್ ಮಾಡಿ ತಮ್ಮ ಅರ್ಜಿ ಸಂಖ್ಯೆ / ಮೊಬೈಲ್ ಸಂಖ್ಯೆ ನಮೂದಿಸಿ ಪಾವತಿಸಬಹುದಾಗಿರುತ್ತದೆ. ಹಣಪಾವತಿಗೆ ಸಂಬಂಧಿಸಿದಂತೆ ಮಾಹಿತಿಯನ್ನು KREDL ನ ಸಹಾಯವಾಣಿ : 080-22202100 & 8095132100 ಮುಖಾಂತರ ಪಡೆದುಕೊಳ್ಳಲು ಸೂಚಿಸಲಾಗಿದೆ.

Read More

ಆಯುಷ್ಮಾನ್ ಭಾರತ್ ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ಕೇಂದ್ರ ಸರ್ಕಾರವು ಆಯುಷ್ಮಾನ್ ಕಾರ್ಡ್ ಪಡೆಯುವ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಡಿಜಿಟಲ್ ಮತ್ತು ಅತ್ಯಂತ ಸುಲಭಗೊಳಿಸಿದೆ. ಈಗ, ಉಚಿತ ಚಿಕಿತ್ಸೆಯನ್ನು ಪಡೆಯಲು, ನೀವು ಇನ್ನು ಮುಂದೆ ಸರ್ಕಾರಿ ಕಚೇರಿಗಳ ಹೊರಗೆ ದೀರ್ಘ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ ಅಥವಾ ಏಜೆಂಟ್ ಸಹಾಯವನ್ನು ಪಡೆಯುವ ಅಗತ್ಯವಿಲ್ಲ. ನಾಗರಿಕರು ಈಗ ತಮ್ಮ ಸ್ಮಾರ್ಟ್‌ಫೋನ್‌ಗಳನ್ನು ಬಳಸಿಕೊಂಡು ತಮ್ಮದೇ ಆದ ಕಾರ್ಡ್‌ಗಳನ್ನು ರಚಿಸಬಹುದು ಎಂದು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ (NHA) ಸ್ಪಷ್ಟಪಡಿಸಿದೆ. NHA ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿಯನ್ನು ಹಂಚಿಕೊಂಡಿದೆ ‘ಆಯುಷ್ಮಾನ್ ಅಪ್ಲಿಕೇಶನ್’ ಈಗ ಒಂದು-ನಿಲುಗಡೆ ಪರಿಹಾರವಾಗಿದೆ ಎಂದು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ (NHA) ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳ ಮೂಲಕ ನಾಗರಿಕರಿಗೆ ತಿಳಿಸಿದೆ. ಈ ಅಪ್ಲಿಕೇಶನ್ ಮೂಲಕ, ನಿಮ್ಮ ಹೆಸರು ಯೋಜನೆಗೆ ಅರ್ಹವಾಗಿದೆಯೇ ಎಂದು ನೀವು ಪರಿಶೀಲಿಸುವುದಲ್ಲದೆ, ನಿಮ್ಮ ಇ-ಕೆವೈಸಿಯನ್ನು ಪೂರ್ಣಗೊಳಿಸಬಹುದು ಮತ್ತು ಕೆಲವೇ ನಿಮಿಷಗಳಲ್ಲಿ ಡಿಜಿಟಲ್ ಕಾರ್ಡ್ ಅನ್ನು ಡೌನ್‌ಲೋಡ್ ಮಾಡಬಹುದು. ನಿಮ್ಮ ಅರ್ಹತೆಯನ್ನು ಹೇಗೆ ಪರಿಶೀಲಿಸುವುದು?…

Read More

ಬೆಂಗಳೂರು: ನಗರದಲ್ಲಿ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿ ಹಿನ್ನಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ವಿದ್ಯುತ್ ವ್ಯತ್ಯಯವು ವಿವಿಧ ಪ್ರದೇಶಗಳಲ್ಲಿ ಉಂಟಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ. ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆ.ವಿ. ಚಂದ್ರಾಲೇಔಟ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 26.12.2025 (ಶುಕ್ರವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಆರ್.ಪಿ.ಸಿ.ಲೇಔಟ್, ರೆಮ್ಕೋ ಲೇಔಟ್, ಕಲ್ಯಾಣ್ ಲೇಔಟ್, ಸುಬ್ಬಣ್ಣ ಗಾರ್ಡನ್, ವಿಡಿಯಾ ಲೇಔಟ್, ಎಂ.ಆರ್.ಸಿ.ಆರ್. ಲೇಔಟ್, ಚಂದ್ರಾ ಲೇಔಟ್, ಬಾಪೂಜಿ ಲೇಔಟ್, ವಿನಾಯಕ ಲೇಔಟ್, ಮೂಡಲಪಾಳ್ಯ, ಸ್ಕೈ ಲೈನ್ ಅಪಾರ್ಟ್ಮೆಂಟ್, ಕೆನರಾ ಬ್ಯಾಂಕ್ ಕಾಲೋನಿ, ವಿದ್ಯಾಗಿರಿ ಲೇಔಟ್, ಗಂಗೊಂಡನಹಳ್ಳಿ, ಸುವರ್ಣ ಲೇಔಟ್, ಬಿಡಿಎ 13ನೇ ಮತ್ತು 14ನೇ ಬ್ಲಾಕ್, ಕೆಂಗುಂಟೆ, ಭೈರವೇಶ್ವರನಗರ, ನಾಗರಬಾವಿ ಕೊಕನಟ್ ಗಾರ್ಡನ್, ಕಾವೇರಿ ಲೇಔಟ್, ಎಸ್.ವಿ.ಜಿ.ಗಾರ್ಡನ್, ಸಂಜೀವಿನಿನಗರ, ಎನ್.ಜಿ.ಇ.ಎಫ್ ಲೇಔಟ್, ಕಲ್ಯಾಣನಗರ  ಮತ್ತು ಸುತ್ತಮುತ್ತಲಿನ ಪ್ರದೇಶಗಳು. 66/11 ಕೆ.ವಿ ಕಟ್ಟಿಗೇನಹಳ್ಳಿ ವಿದ್ಯುತ್ ಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ:…

Read More

ಬೆಂಗಳೂರು : ಪಿ.ಎಂ.ಪೋಷಣ್ ಯೋಜನೆಯಡಿ ತೊಗರಿಬೇಳೆ ಸ್ವೀಕೃತಿ ಮತ್ತು ನಿರ್ವಹಣೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮಾರ್ಗಸೂಚಿ ಪ್ರಕಟಿಸಿದೆ. ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಅಭಿಯಾನ ಯೋಜನೆಯಡಿಯಲ್ಲಿ ಶಾಲೆಗಳಲ್ಲಿರುವ ತೊಗರಿಬೇಳೆ ನಿರ್ವಹಣೆ ಕುರಿತು ಹಾಗೂ ಉದ್ಭವಿಸಿರುವ ಗುಣಮಟ್ಟದ ಬಗ್ಗೆ ದೂರುಗಳು ವಿವಿಧ ಸಂಘ ಸಂಸ್ಥೆ/ ವಯಕ್ತಿಕವಾಗಿ ನೀಡಿದ ಪ್ರಯುಕ್ತ ಈ ಸಂಬಂಧ ಸೂಕ್ತ ನಿರ್ವಹಣೆಗಾಗಿ ಮಾರ್ಗಸೂಚಿಯನ್ನು ಹೊರಡಿಸುವುದು ಅಗತ್ತವಾಗಿರುತ್ತದೆ. ಈ ಹಿನ್ನಲೆಯಲ್ಲಿ ಅನುಷ್ಠಾನಾಧಿಕಾರಿಗಳು, ತಾಲೂಕು ಹಂತದ ವಿವಿಧ ಅಧಿಕಾರಿಗಳು ಹಾಗೂ ಶಾಲಾ ಹಂತದಲ್ಲಿರುವವರು ಜವಾಬ್ದಾರಿಯಿಂದ ಕೆಲಸ ನಿರ್ವಹಿಸುವ ಅಗತ್ತತೆ ಇರುತ್ತದೆ. ನಿರ್ವಹಣೆ ಕೊರತೆಯಿಂದಾಗಿ ತೊಗರಿಬೇಳೆ ಗುಣಮಟ್ಟದ ಬಗ್ಗೆ ದೂರುಗಳು ಬರುತ್ತಿದ್ದು ಇದಕ್ಕಾಗಿ ಕೊನೆಯ ಹಂತದವರೆಗೂ ಮೇಲ್ವಿಚಾರಣೆ ಮಾಡುವುದು ಅಗತ್ಯವಾಗಿರುತ್ತದೆ. ಈ ಸಂಬಂಧ ಈ ಮುಂದಿನಂತೆ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ. ತಾಲೂಕಾ ಹಂತದಲ್ಲಿ ಸ್ವೀಕೃತವಾಗುವ ತೊಗರಿಬೇಳೆಯ ಪರಿಶೀಲನೆ: ಈಗಾಗಲೇ ಸರ್ಕಾರವು ಸೂಚಿಸಲಾದ ಸಮಿತಿಯಂತೆ (Committee)ತೊಗರಿಬೇಳೆ ಪೂರೈಕೆದಾರರಿಂದ ಸ್ವೀಕರಿಸುವ ಪೂರ್ವದಲ್ಲಿ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದು ಪೂರೈಕೆದಾರರು ಟೆಂಡರ ಅವಧಿಯಲ್ಲಿ ನೀಡಲಾದ ಷರತ್ತುಗಳಿಗೆ ಅನುಗುಣವಾಗಿ ಮಾನಂದಡಗಳ ಪ್ರಕಾರ ಇರುವ ಬಗ್ಗೆ ಗುಣಮಟ್ಟ, ಪರಿಮಾಣ, ಪರಿಶೀಲನೆ…

Read More