Subscribe to Updates
Get the latest creative news from FooBar about art, design and business.
Author: kannadanewsnow57
BREAKING : ಮಕ್ಕಳ ಮೇಲೆ ದೌರ್ಜನ್ಯ ಆರೋಪ ಕೇಸ್ : ವಚನಾನಂದ ಸ್ವಾಮೀಜಿಗೆ ಕೋರ್ಟ್ ನಿಂದ ಷರತ್ತುಬದ್ಧ ಜಾಮೀನು ಮಂಜೂರು.!
ದಾವಣಗೆರೆ : ವಚನಾನಂದ ಸ್ವಾಮೀಜಿ ವಿರುದ್ಧ ಮಕ್ಕಳ ಮೇಲೆ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಚನಾನಂದ ಶ್ರೀಗಳ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ಹೊರಡಿಸಿದೆ. ದಾವಣಗೆರೆ ಜಿಲ್ಲೆಯ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ದಾವಣಗೆರೆ ವಿಶೇಷ ಜಿಲ್ಲಾ ಕೋರ್ಟ್ ಆದೇಶ ಹೊರಡಿಸಿದೆ. ವಚನಾನಂದ ಸ್ವಾಮೀಜಿಗೆ ಹಲವು ಷರತ್ತುಗಳನ್ನು ವಿಧಿಸಿ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದು, ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು, ಕೋರ್ಟ್ ಅನುಮತಿ ಇಲ್ಲದೆ ವ್ಯಾಪ್ತಿ ಬಿಟ್ಟು ಹೋಗಬಾರದು ಎಂದು ಷರತ್ತು ವಿಧಿಸಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ವಾರ್ಸಾ: ಸುಮಾರು ಒಂದು ವರ್ಷದ ಹಿಂದೆ ನಡೆದ ‘ಆಪರೇಷನ್ ಸಿಂದೂರ್’ ಕುರಿತು ಈಗ ಮಹತ್ವದ ವಿದೇಶಿ ವರದಿಯೊಂದು ಹೊರಬಿದ್ದಿದ್ದು, ಪಾಕಿಸ್ತಾನ ಹರಡಿದ್ದ ಎಲ್ಲಾ ಸುಳ್ಳು ಪ್ರೊಪಗಾಂಡಾಗಳನ್ನು ಬಯಲು ಮಾಡಿದೆ. ಯುದ್ಧದ ಸಮಯದಲ್ಲಿ ಭಾರತೀಯ ವಿಮಾನಗಳನ್ನು ಹೊಡೆದುರುಳಿಸಿದ್ದಾಗಿ ಚೀನಾ ಮತ್ತು ಅಮೆರಿಕದ ನೆರವಿನೊಂದಿಗೆ ಪಾಕಿಸ್ತಾನ ಜಗತ್ತಿಗೆ ಸುಳ್ಳು ಹೇಳಿತ್ತು. ಆದರೆ, ವಾಸ್ತವದಲ್ಲಿ ಭಾರತವು ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ವೈರಿ ಪಡೆಯನ್ನು ಧೂಳೀಪಟ ಮಾಡಿತ್ತು ಎಂಬ ಅಂಶ ಈಗ ಸಾಬೀತಾಗಿದೆ. ಮ್ಯಾಡಿಸನ್ ಪಾಲಿಸಿ ಫೋರಂನ ಯುದ್ಧ ಅಧ್ಯಯನ ವಿಭಾಗದ ಅಧ್ಯಕ್ಷ ಜಾನ್ ಸ್ಪೆನ್ಸರ್, ವಿವಿಧ ಯುದ್ಧ ವಿಶ್ಲೇಷಣಾ ಸಂಸ್ಥೆಗಳ ವರದಿಗಳನ್ನು ಆಧರಿಸಿ ಭಾರತದ ಈ ಐತಿಹಾಸಿಕ ಯಶಸ್ಸನ್ನು ವಿವರಿಸಿದ್ದಾರೆ. ಪಾಕಿಸ್ತಾನದ ಸುಳ್ಳಿನ ಕೋಟೆ ಕುಸಿದಿದ್ದು ಹೀಗೆ… ಜಾನ್ ಸ್ಪೆನ್ಸರ್ ಅವರ ಪ್ರಕಾರ, ಮೇ 7, 2025 ರಂದು ಆಪರೇಷನ್ ಸಿಂದೂರ್ ಪ್ರಾರಂಭವಾದಾಗ, ಪಾಕಿಸ್ತಾನವು ಮಾಹಿತಿ ಯುದ್ಧದಲ್ಲಿ (Information Warfare) ತೊಡಗಿತ್ತು. ಅಂತರಾಷ್ಟ್ರೀಯ ಮಾಧ್ಯಮಗಳಲ್ಲಿ ಭಾರತೀಯ ವಾಯುಸೇನೆಗೆ ಭಾರಿ ನಷ್ಟವಾಗಿದೆ ಎಂದು ಬಿಂಬಿಸಿತ್ತು. ಆದರೆ ಸ್ವಿಟ್ಜರ್ಲೆಂಡ್ನ…
ಬೆಂಗಳೂರು: ಕರ್ನಾಟಕ ಸರ್ಕಾರದ ಅಡಿಯಲ್ಲಿ ಬರುವ ‘ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ’ಯು ರಾಜ್ಯದ ನೋಂದಾಯಿತ ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಹಲವು ಪ್ರಮುಖ ಯೋಜನೆಗಳನ್ನು ಜಾರಿಗೆ ತಂದಿದೆ. ಕಾರ್ಮಿಕರ ಮತ್ತು ಅವರ ಕುಟುಂಬದ ಭದ್ರತೆಗಾಗಿ ಸರ್ಕಾರವು ವಿವಿಧ ಆರ್ಥಿಕ ಹಾಗೂ ವೈದ್ಯಕೀಯ ನೆರವುಗಳನ್ನು ನೀಡುತ್ತಿದೆ. ಕಾರ್ಮಿಕರ ಕಲ್ಯಾಣಕ್ಕಾಗಿ ಲಭ್ಯವಿರುವ ಪ್ರಮುಖ ಯೋಜನೆಗಳ ವಿವರ ಹೀಗಿದೆ: ಆರ್ಥಿಕ ಮತ್ತು ಜೀವನ ಭದ್ರತೆ ಪಿಂಚಣಿ ಸೌಲಭ್ಯ: ನಿವೃತ್ತ ಕಾರ್ಮಿಕರಿಗೆ ಮಾಸಿಕ ಪಿಂಚಣಿ ಸೌಲಭ್ಯ ನೀಡಲಾಗುತ್ತದೆ. ಕುಟುಂಬ ಮತ್ತು ದುರ್ಬಲತೆ ಪಿಂಚಣಿ: ಕಾರ್ಮಿಕರ ಮರಣಾನಂತರ ಕುಟುಂಬಕ್ಕೆ ಅಥವಾ ದೈಹಿಕ ಅಶಕ್ತತೆಯ ಸಂದರ್ಭದಲ್ಲಿ ಆರ್ಥಿಕ ನೆರವು ಒದಗಿಸಲಾಗುತ್ತದೆ. ಅಪಘಾತ ಪರಿಹಾರ: ಕೆಲಸದ ಅವಧಿಯಲ್ಲಿ ಅಥವಾ ಇತರೆಡೆ ಸಂಭವಿಸುವ ಅಪಘಾತಗಳಿಗೆ ಸೂಕ್ತ ಪರಿಹಾರ ಧನ ನೀಡಲಾಗುವುದು. ಕುಟುಂಬ ಮತ್ತು ಶೈಕ್ಷಣಿಕ ನೆರವು ಶೈಕ್ಷಣಿಕ ಸಹಾಯಧನ: ಕಾರ್ಮಿಕರ ಮಕ್ಕಳ ಶಿಕ್ಷಣಕ್ಕಾಗಿ ಧನಸಹಾಯ ನೀಡಲಾಗುತ್ತದೆ. ಮದುವೆ ಸಹಾಯಧನ: ಕಾರ್ಮಿಕರ ಅಥವಾ ಅವರ ಮಕ್ಕಳ ವಿವಾಹಕ್ಕೆ ಆರ್ಥಿಕ ನೆರವು…
ವಾಷಿಂಗ್ಟನ್: ಕಳೆದ ಎರಡು ತಿಂಗಳಿನಿಂದ ಇಡೀ ವಿಶ್ವದ ಗಮನ ಸೆಳೆದಿದ್ದ ಇರಾನ್ ಮತ್ತು ಅಮೆರಿಕ ನಡುವಿನ ಭೀಕರ ಮಿಲಿಟರಿ ಸಂಘರ್ಷಕ್ಕೆ ಇದೀಗ ತಾತ್ಕಾಲಿಕ ತೆರೆ ಬಿದ್ದಿದೆ. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ ಅವರು ಮಂಗಳವಾರ ಮಹತ್ವದ ಘೋಷಣೆ ಮಾಡಿದ್ದು, ಇರಾನ್ ವಿರುದ್ಧ ಹಮ್ಮಿಕೊಳ್ಳಲಾಗಿದ್ದ ‘ಆಪರೇಷನ್ ಎಪಿಕ್ ಫ್ಯೂರಿ’ (Operation Epic Fury) ಅಧಿಕೃತವಾಗಿ ಮುಕ್ತಾಯಗೊಂಡಿದೆ ಎಂದು ತಿಳಿಸಿದ್ದಾರೆ. ಆಪರೇಷನ್ ಎಪಿಕ್ ಫ್ಯೂರಿ ಅಂತ್ಯ: ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ನಡೆಸುತ್ತಿದ್ದ ಎರಡು ತಿಂಗಳ ಸುದೀರ್ಘ ಮಿಲಿಟರಿ ಕಾರ್ಯಾಚರಣೆಯನ್ನು ಅಮೆರಿಕ ಹಿಂಪಡೆದಿದೆ. ರಕ್ಷಣಾತ್ಮಕ ಧೋರಣೆ: ಆಕ್ರಮಣಕಾರಿ ದಾಳಿಗಳನ್ನು ನಿಲ್ಲಿಸಿರುವ ಅಮೆರಿಕ, ಇನ್ನು ಮುಂದೆ ಕೇವಲ ‘ರಕ್ಷಣಾತ್ಮಕ’ (Defensive) ನಿಲುವನ್ನು ಅನುಸರಿಸಲಿದೆ ಎಂದು ರೂಬಿಯೋ ಸ್ಪಷ್ಟಪಡಿಸಿದ್ದಾರೆ. ಪ್ರಾಜೆಕ್ಟ್ ಫ್ರೀಡಂ ಸ್ಥಗಿತ: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ‘ಪ್ರಾಜೆಕ್ಟ್ ಫ್ರೀಡಂ’ ಯೋಜನೆಯನ್ನು ಸದ್ಯಕ್ಕೆ ತಡೆಹಿಡಿಯುವುದಾಗಿ ಘೋಷಿಸಿದ್ದಾರೆ. ಇರಾನ್ ಜೊತೆಗಿನ ಮಾತುಕತೆ ಮತ್ತು ಒಪ್ಪಂದದ ಸಾಧ್ಯತೆಗಳನ್ನು ಪರಿಶೀಲಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಏನಿದು…
ನಾವು ಕಷ್ಟದಲ್ಲಿದ್ದವರಿಗೆ ಸಹಾಯ ಮಾಡಲು ಮುಂದಾಗುವುದು ಮಾನವೀಯತೆ. ಆದರೆ ಆರ್ಥಿಕ ವ್ಯವಹಾರಗಳ ವಿಷಯಕ್ಕೆ ಬಂದಾಗ ಅತಿಯಾದ ನಂಬಿಕೆ ಅಥವಾ ಅಸಡ್ಡೆ ನಮಗೆ ದೊಡ್ಡ ಪೆಟ್ಟು ನೀಡಬಹುದು. “ನಮ್ಮವರೇ ಅಲ್ವಾ, ನಾಳೆ ಕೊಟ್ಟರೆ ಆಯಿತು” ಎಂದು ದಾಖಲೆ ಇಲ್ಲದೆ ಹಣ ನೀಡುವುದು ಅಥವಾ ಸರಿಯಾದ ಕ್ರಮದಲ್ಲಿ ಪ್ರಾಮಿಸರಿ ನೋಟ್ ಬರೆಸಿಕೊಳ್ಳದಿದ್ದರೆ ಅಂತಿಮವಾಗಿ ನ್ಯಾಯಾಲಯದ ಮೆಟ್ಟಿಲೇರಬೇಕಾಗುತ್ತದೆ. ಪ್ರಾಮಿಸರಿ ನೋಟ್ ಬರೆಯುವಾಗ ನೀವು ಪಾಲಿಸಬೇಕಾದ ಅತೀ ಮುಖ್ಯವಾದ ನಿಯಮಗಳು ಇಲ್ಲಿವೆ: 1. ಖಾಲಿ ನೋಟಿಗೆ ಸಹಿ ಹಾಕಿಸಿಕೊಳ್ಳಬೇಡಿ ಅನೇಕರು ಮಾಡುವ ಮೊದಲ ತಪ್ಪು ಎಂದರೆ, ಸಾಲ ಪಡೆಯುವವರಿಂದ ಬರಿ ಖಾಲಿ ಪ್ರಾಮಿಸರಿ ನೋಟಿನ ಮೇಲೆ ಸಹಿ ಮಾಡಿಸಿಕೊಳ್ಳುವುದು. “ನಂತರ ಉಳಿದ ವಿವರಗಳನ್ನು ತುಂಬಿಕೊಳ್ಳೋಣ” ಎಂಬ ನಿರ್ಧಾರ ಅಪಾಯಕಾರಿ. ನ್ಯಾಯಾಲಯದಲ್ಲಿ ಸಾಲಗಾರನು “ನಾನು ಕೇವಲ ಸಹಿ ಮಾಡಿದ್ದೆ, ಮೇಲಿರುವ ಬರಹ ನನಗೂ ಸಂಬಂಧವಿಲ್ಲ” ಎಂದು ವಾದಿಸಬಹುದು. ಫೋರೆನ್ಸಿಕ್ ಪರೀಕ್ಷೆಯಲ್ಲಿ ಸಹಿ ಹಳೆಯದು ಮತ್ತು ಬರಹ ಹೊಸದು ಎಂದು ಸಾಬೀತಾದರೆ ಆ ನೋಟಿಗೆ ಬೆಲೆ ಇರುವುದಿಲ್ಲ. ಆದ್ದರಿಂದ, ಸಾಲ…
ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ‘ಭಾಗ್ಯಲಕ್ಷ್ಮಿ’ ಯೋಜನೆಯಡಿ ನೋಂದಾಯಿಸಿಕೊಂಡಿರುವ ಹೆಣ್ಣುಮಕ್ಕಳು, ಬಾಂಡ್ ಮೆಚ್ಯೂರಿಟಿ (ಪಕ್ವತೆ) ಅವಧಿಯ ನಂತರ ಸುಮಾರು 1 ಲಕ್ಷ ರೂಪಾಯಿವರೆಗಿನ ಹಣವನ್ನು ಪಡೆಯಲು ಅನುಸರಿಸಬೇಕಾದ ಕ್ರಮಗಳು ಮತ್ತು ಅಗತ್ಯ ದಾಖಲೆಗಳ ಬಗ್ಗೆ ಈ ಕೆಳಗಿನ ವಿವರವಾದ ಮಾಹಿತಿಯನ್ನು ನೀಡಲಾಗಿದೆ. ಅರ್ಜಿ ಸಲ್ಲಿಸಲು ಇರಬೇಕಾದ ಪ್ರಮುಖ ಷರತ್ತುಗಳು: ವಯೋಮಿತಿ: ಬಾಂಡ್ ಹಣ ಪಡೆಯಲು ಹೆಣ್ಣು ಮಗುವಿಗೆ ಕಡ್ಡಾಯವಾಗಿ 18 ವರ್ಷ ಪೂರ್ಣಗೊಂಡಿರಬೇಕು. ಶಿಕ್ಷಣ: ಮಗು ಕನಿಷ್ಠ 8ನೇ ತರಗತಿಯವರೆಗೆ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು. ಬಾಲ್ಯ ವಿವಾಹ ನಿಷೇಧ: 18 ವರ್ಷಕ್ಕೆ ಮುನ್ನ ಮಗುವಿಗೆ ಮದುವೆಯಾಗಿರಬಾರದು. ಬಾಲಕಾರ್ಮಿಕ ಪದ್ಧತಿ: ಮಗು ಯಾವುದೇ ಬಾಲಕಾರ್ಮಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರಬಾರದು. ಅಗತ್ಯವಿರುವ ದಾಖಲೆಗಳು: ಒರಿಜಿನಲ್ ಭಾಗ್ಯಲಕ್ಷ್ಮಿ ಬಾಂಡ್: ಒಂದು ವೇಳೆ ಬಾಂಡ್ ಕಳೆದುಹೋಗಿದ್ದರೆ ಅದರ ಜೆರಾಕ್ಸ್ ಪ್ರತಿ ಮತ್ತು ಸ್ವಯಂ ಘೋಷಣಾ ಪತ್ರ ನೀಡಬೇಕು. ಆಧಾರ್ ಕಾರ್ಡ್: ಮಗುವಿನ ಆಧಾರ್ ಕಾರ್ಡ್ ಕಡ್ಡಾಯ. ಬಾಂಡ್ನಲ್ಲಿರುವ ಹೆಸರು ಮತ್ತು ಆಧಾರ್ ಹೆಸರು ಒಂದೇ ಆಗಿರಬೇಕು. ತಂದೆ-ತಾಯಿಯ ಆಧಾರ್: ಪೋಷಕರ…
ನವದೆಹಲಿ: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (CBSE) ತನ್ನ ವ್ಯಾಪ್ತಿಯ ಶಾಲೆಗಳಲ್ಲಿ ಭಾಷಾ ಬೋಧನೆಗೆ ಸಂಬಂಧಿಸಿದಂತೆ ಮಹತ್ವದ ಆದೇಶ ಹೊರಡಿಸಿದೆ. ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು (NCFSE 2023) ಅಡಿಯಲ್ಲಿ, 6ನೇ ತರಗತಿಯಿಂದ ಕನಿಷ್ಠ ಎರಡು ಭಾರತೀಯ ಭಾಷೆಗಳನ್ನು ಕಲಿಸುವುದನ್ನು ಜುಲೈ 1, 2026 ರಿಂದ ಕಡ್ಡಾಯಗೊಳಿಸಲಾಗಿದೆ. 6ನೇ ತರಗತಿಯಲ್ಲಿ ಮೂರನೇ ಭಾಷೆಯ (R3) ಅನುಷ್ಠಾನ ಪ್ರಕ್ರಿಯೆಯನ್ನು ಮೇ 31, 2026 ರೊಳಗೆ ಪೂರ್ಣಗೊಳಿಸಲು ಶಾಲೆಗಳಿಗೆ ಸೂಚಿಸಲಾಗಿದೆ. ಶಾಲೆಗಳು ತಾವು ಆಯ್ಕೆ ಮಾಡಿಕೊಂಡಿರುವ ಭಾಷೆಗಳ ವಿವರವನ್ನು ಮಂಡಳಿಯ OASIS ಪೋರ್ಟಲ್ನಲ್ಲಿ ಮೇ 31ರೊಳಗೆ ಅಪ್ಲೋಡ್ ಮಾಡಬೇಕು. ಒಂದು ವೇಳೆ ತಪ್ಪು ಮಾಹಿತಿ ನೀಡಿದ್ದರೆ ಸರಿಪಡಿಸಿಕೊಳ್ಳಲು ಇದೇ ಕೊನೆಯ ಅವಕಾಶ. ಯಾವುದೇ ವಿಳಂಬಕ್ಕೆ ಅವಕಾಶ ನೀಡದೆ, ಜುಲೈ 1, 2026 ರಿಂದಲೇ ತರಗತಿಗಳನ್ನು ಆರಂಭಿಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ. ಏನಿದು ಹೊಸ ಭಾಷಾ ನೀತಿ (R1, R2, R3)? ವಿದ್ಯಾರ್ಥಿಗಳ ಭಾಷಾ ಪ್ರಾವೀಣ್ಯತೆಯನ್ನು ಹೆಚ್ಚಿಸಲು ಮೂರು ಹಂತದ ಮಾದರಿಯನ್ನು ಪರಿಚಯಿಸಲಾಗಿದೆ: R1 (Advanced Level): ಸುಧಾರಿತ…
ಬೆಂಗಳೂರು: ಕರ್ನಾಟಕದಲ್ಲಿ ವಿವಾಹದ ಆಯ್ಕೆಯ ಸ್ವಾತಂತ್ರ್ಯವನ್ನು ಎತ್ತಿಹಿಡಿಯಲು ಮತ್ತು ಮರ್ಯಾದೆ ಹಾಗೂ ಸಂಪ್ರದಾಯದ ಹೆಸರಿನಲ್ಲಿ ನಡೆಯುವ ಅಪರಾಧಗಳನ್ನು ತಡೆಯಲು ರಾಜ್ಯ ಸರ್ಕಾರವು ‘ಇವ ನಮ್ಮವ’ (ಕರ್ನಾಟಕ ವಿವಾಹದಲ್ಲಿ ಆಯ್ಕೆಯ ಸ್ವಾತಂತ್ರ್ಯ ಹಾಗೂ ಮರ್ಯಾದೆ ಮತ್ತು ಸಂಪ್ರದಾಯದ ಹೆಸರಿನಲ್ಲಿ ಅಪರಾಧಗಳ ಪ್ರತಿಬಂಧಕ, ನಿಷೇಧ ಕಾಯ್ದೆ-2026) ಅನ್ನು ಅಧಿಕೃತವಾಗಿ ಜಾರಿಗೆ ತಂದಿದೆ. ಮಂಗಳವಾರ ಈ ಕುರಿತು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕಾಯ್ದೆಯ ಪ್ರಮುಖ ಉದ್ದೇಶಗಳು: ಜಾತಿ ಆಧಾರಿತ ಅಪರಾಧಗಳ ಮೂಲಕ ನಡೆಯುವ ಮಾನವ ಹಕ್ಕು ಉಲ್ಲಂಘನೆ ತಡೆಯುವುದು. ಅಂತರ್ಜಾತಿ ವಿವಾಹಗಳಿಗೆ ಗೌರವ ನೀಡುವುದು ಮತ್ತು ವೈಯಕ್ತಿಕ ಆಯ್ಕೆಗಳ ಮೇಲೆ ಜಾತಿ ಆಧಾರಿತ ಬಲವಂತದ ಭೇದಭಾವವನ್ನು ತಡೆಯುವುದು. ಪ್ರಾಪ್ತ ವಯಸ್ಕ ಗಂಡು-ಹೆಣ್ಣು ಪರಸ್ಪರ ಒಪ್ಪಿ ಮದುವೆಯಾಗಲು ಯಾರ ಅನುಮತಿಯೂ ಬೇಕಿಲ್ಲ ಹಾಗೂ ಕುಟುಂಬದವರಿಂದ ಯಾವುದೇ ಅಡೆತಡೆ ಇಲ್ಲದಂತೆ ವಿವಾಹವಾಗುವ ಹಕ್ಕನ್ನು ಖಚಿತಪಡಿಸುವುದು. ಯಾವೆಲ್ಲಾ ಕೃತ್ಯಗಳು ಅಪರಾಧ? ಈ ಹೊಸ ಕಾನೂನಿನ ಅಡಿಯಲ್ಲಿ ಈ ಕೆಳಗಿನವುಗಳನ್ನು ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸಲಾಗುತ್ತದೆ: ವಿವಾಹಿತ ಅಥವಾ ಪ್ರೇಮಿಗಳ ಮೇಲೆ ಸಂಬಂಧಿಕರು…
ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ನಿಗಮ-ಮಂಡಳಿಗಳ ಹುದ್ದೆಗಳಿಗೆ ನಡೆಯಬೇಕಿದ್ದ ಪರೀಕ್ಷೆಗಳ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಮಾಹಿತಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಒಳ ಮೀಸಲಾತಿಯನ್ನು ಅಳವಡಿಸಿಕೊಳ್ಳುವ ಸರ್ಕಾರದ ತೀರ್ಮಾನದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷೆ ರದ್ದತಿಗೆ ಕಾರಣವೇನು? ಆರ್ ಜಿ ಯು ಹೆಚ್ ಎಸ್, ಬೆಂಗಳೂರು ಜಲಮಂಡಲಿ, ಕೃಷಿ ಮಾರಾಟ ಇಲಾಖೆ ಹಾಗೂ ಕೆಎಸ್ಎಸ್ಐಡಿಸಿ ಯ ವಿವಿಧ ಹುದ್ದೆಗಳ ನೇಮಕಾತಿಗೆ ಇದೇ ಮೇ 9 ಮತ್ತು 10 ರಂದು ನಡೆಸಬೇಕಿದ್ದ ಲಿಖಿತ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಏಪ್ರಿಲ್ 4 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಯ ಒಳ ಮೀಸಲಾತಿಯನ್ನು ಅಳವಡಿಸಿಕೊಂಡು ಹೊಸದಾಗಿ ಅಧಿಸೂಚನೆ ಹೊರಡಿಸಲು ನಿರ್ಧರಿಸಲಾಗಿದೆ. ಈ ಕಾರಣದಿಂದಾಗಿ ಈ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕೆಲವು ಹುದ್ದೆಗಳ ಪರೀಕ್ಷೆಗಳು ಯಥಾವತ್ತು ರದ್ದತಿಯ ಹೊರತಾಗಿಯೂ ಕೆಲವು ನಿರ್ದಿಷ್ಟ ಹುದ್ದೆಗಳಿಗೆ ಪರೀಕ್ಷೆಗಳು ನಿಗದಿತ ಸಮಯಕ್ಕೆ…
ಬೆಂಗಳೂರು: ಪತಿಯು ಅಕ್ರಮ ಸಂಬಂಧ ಹೊಂದಿರುವ ಕಾರಣಕ್ಕೆ ಪತ್ನಿ ಆತನಿಂದ ದೂರ ವಾಸಿಸುತ್ತಿದ್ದರೆ, ಅದನ್ನು ಪತ್ನಿ ಮಾಡಿದ ‘ಪರಿತ್ಯಾಗ’ (Desertion) ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬೀದರ್ನ ಕೌಟುಂಬಿಕ ನ್ಯಾಯಾಲಯವು ನೀಡಿದ್ದ ವಿಚ್ಛೇದನ ಆದೇಶವನ್ನು ಪ್ರಶ್ನಿಸಿ ಪತ್ನಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಮತ್ತು ನ್ಯಾಯಮೂರ್ತಿ ಚಿಲ್ಲಾಕೂರು ಸುಮಲತಾ ಅವರಿದ್ದ ವಿಭಾಗೀಯ ಪೀಠವು ಈ ಆದೇಶ ಪ್ರಕಟಿಸಿದೆ. ಪ್ರಕರಣದ ಹಿನ್ನೆಲೆ ಬೀದರ್ ನ ಕೌಟುಂಬಿಕ ನ್ಯಾಯಾಲಯವು ಈ ಹಿಂದೆ ಪತಿಯ ಪರವಾಗಿ ವಿಚ್ಛೇದನ ನೀಡಿ ಆದೇಶಿಸಿತ್ತು. ಪತ್ನಿಯು ತನ್ನನ್ನು ಪರಿತ್ಯಾಗ ಮಾಡಿದ್ದಾರೆ ಮತ್ತು ಕ್ರೌರ್ಯ ಎಸಗಿದ್ದಾರೆ ಎಂಬ ಪತಿಯ ವಾದವನ್ನು ಕೆಳಹಂತದ ನ್ಯಾಯಾಲಯ ಪುರಸ್ಕರಿಸಿತ್ತು. ಆದರೆ ಇದನ್ನು ತಳ್ಳಿಹಾಕಿದ ಹೈಕೋರ್ಟ್, ಕೆಳಹಂತದ ನ್ಯಾಯಾಲಯವು ಕೇವಲ ಪತಿಯ ಮೌಖಿಕ ಹೇಳಿಕೆಗಳನ್ನು ಆಧರಿಸಿ ತೀರ್ಪು ನೀಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ. ಪತಿಯು ಬೇರೆ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿರುವಾಗ, ಪತ್ನಿಯು ಆತನಿಂದ ದೂರವಿರಲು…














