Author: kannadanewsnow57

ಬೆಂಗಳೂರು: ಪ್ರೀಫಂಡ್ ಫಂಡ್ (PF) ಖಾತೆದಾರರಿಗೆ ಒಂದು ಮಹತ್ವದ ಸುದ್ದಿ. ನಿಮ್ಮ ಪಿಎಫ್ ಖಾತೆಗೆ ಶೀಘ್ರದಲ್ಲೇ ಬಡ್ಡಿ ಹಣ ಜಮೆಯಾಗಲಿದೆ. ಈ ನಿಟ್ಟಿನಲ್ಲಿ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ಈಗಾಗಲೇ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಕೇಂದ್ರ ಹಣಕಾಸು ಸಚಿವಾಲಯವು ಪ್ರಸಕ್ತ ಸಾಲಿಗೆ ಶೇಕಡಾ 8.25 ರಷ್ಟು ಬಡ್ಡಿ ದರವನ್ನು ನೀಡಲು ಈಗಾಗಲೇ ಅನುಮೋದನೆ ನೀಡಿದೆ. ಸತತ ಮೂರನೇ ವರ್ಷವೂ ಬಡ್ಡಿ ದರವನ್ನು ಶೇ. 8.25 ರಷ್ಟು ಕಾಯ್ದುಕೊಳ್ಳಲಾಗಿದ್ದು, ಈ ತಿಂಗಳಾಂತ್ಯದೊಳಗೆ (ಜೂನ್ ಆಖೈರು) ಖಾತೆದಾರರ ಅಕೌಂಟ್ಗೆ ಹಣ ಬಿಡುಗಡೆ ಮಾಡಲು ಇಪಿಎಫ್ಒ ಯೋಜಿಸಿದೆ. ಮಾರ್ಚ್ ತಿಂಗಳಿನಲ್ಲೇ ಬಡ್ಡಿ ದರವನ್ನು ನಿರ್ಧರಿಸಲಾಗಿದ್ದರೂ, ಇನ್ನು ಖಾತೆಗೆ ಹಣ ಜಮೆಯಾಗದ ಕಾರಣ ಚಂದಾದಾರರು ಕಾಯುತ್ತಿದ್ದಾರೆ. ಈ ತಿಂಗಳಾಂತ್ಯದಿಂದ ಹಣ ಜಮೆ ಈ ತಿಂಗಳ ಕೊನೆಯಿಂದಲೇ ಖಾತೆದಾರರ ಖಾತೆಗಳಿಗೆ ಬಡ್ಡಿ ಹಣವನ್ನು ಜಮೆ ಮಾಡಲು ಪ್ರಾರಂಭಿಸುವುದಾಗಿ ಇಪಿಎಫ್ಒ ಘೋಷಿಸಿದೆ. ಜುಲೈ ಒಳಗಾಗಿ ಎಲ್ಲಾ ಅರ್ಹ ಫಲಾನುಭವಿಗಳ ಖಾತೆಗಳಿಗೆ ಹಣ ತಲುಪಿಸುವ ಗುರಿ ಹೊಂದಲಾಗಿದೆ. ನಿಮ್ಮ ಖಾತೆಗೆ…

Read More

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಜೂನ್ 21, 2026 ರಂದು ದೇಶಾದ್ಯಂತ ನಡೆಸಲಿರುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ ಪದವಿ (NEET UG 2026) ಮರುಪರೀಕ್ಷೆಗೆ ಸಂಪೂರ್ಣವಾಗಿ ಸಜ್ಜಾಗಿದೆ. ಈ ಪರೀಕ್ಷೆಯು ಪೆನ್ ಮತ್ತು ಪೇಪರ್ ಮಾದರಿಯಲ್ಲಿ ಮಧ್ಯಾಹ್ನ 2:00 ಗಂಟೆಯಿಂದ ಸಂಜೆ 5:15 ರವರೆಗೆ ನಡೆಯಲಿದೆ. ವಿಶೇಷ ಚೇತನ ಅಭ್ಯರ್ಥಿಗಳಿಗೆ ನಿಯಮಾನುಸಾರ ಹೆಚ್ಚುವರಿ ಸಮಯ ನೀಡಲಾಗಿದ್ದು, ಅವರು ಸಂಜೆ 6:20 ರವರೆಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಭಾರತದ 551 ನಗರಗಳು ಹಾಗೂ ವಿದೇಶದ 14 ನಗರಗಳು ಸೇರಿದಂತೆ ಒಟ್ಟು 565 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಸುಮಾರು 22.79 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಸುಗಮ ನಿರ್ವಹಣೆಗೆ ಬೃಹತ್ ವ್ಯವಸ್ಥೆ ಪರೀಕ್ಷೆಯನ್ನು ಯಾವುದೇ ಅಡೆತಡೆಯಿಲ್ಲದೆ ಶಾಂತಿಯುತವಾಗಿ ನಡೆಸಲು ಎನ್ಟಿಎ ದೇಶಾದ್ಯಂತ 2 ಲಕ್ಷಕ್ಕೂ ಅಧಿಕ ಸಿಬ್ಬಂದಿಯನ್ನು ನಿಯೋಜಿಸಿದೆ. ನಗರ ಮಟ್ಟದ ಉಸ್ತುವಾರಿಗಾಗಿ 674 ಸಿಟಿ ಕೋ-ಆರ್ಡಿನೇಟರ್ಗಳನ್ನು ನೇಮಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಕಣ್ಗಾವಲಿಗಾಗಿ 6,669 ವೀಕ್ಷಕರನ್ನು (Observers) ನಿಯೋಜಿಸಲಾಗಿದೆ.…

Read More

ವಿಜಯಪುರ: ಜಿಲ್ಲೆಯ ತಿಕೋಟ ತಾಲೂಕಿನ ಘೋನಸಗಿ ಗ್ರಾಮದಲ್ಲಿ ವಿಶಿಷ್ಟ ಹಾಗೂ ಅಪರೂಪದ ಖಗೋಳ ವಿಸ್ಮಯವೊಂದು ಸಂಭವಿಸಿದೆ. ಇಲ್ಲಿನ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸೂರ್ಯನ ಸುತ್ತ ವರ್ಣರಂಜಿತ ಉಂಗುರಾಕಾರದ ಬೆಳಕು ಮೂಡಿದ್ದು, ಇದನ್ನು ಕಂಡು ಶಾಲಾ ಮಕ್ಕಳು ಮತ್ತು ಶಿಕ್ಷಕರು ಅತ್ಯಂತ ಆಶ್ಚರ್ಯ ಹಾಗೂ ಸಂತಸ ವ್ಯಕ್ತಪಡಿಸಿದ್ದಾರೆ. ಬೆಳಗಿನ ಅವಧಿಯಲ್ಲಿ ಆಕಾಶದಲ್ಲಿ ಸೂರ್ಯನ ಸುತ್ತಲೂ ಸ್ವರ್ಣ ವರ್ಣದ ವೃತ್ತಾಕಾರದ ಪ್ರಭಾವಳಿ ಗೋಚರಿಸಿತು. ಈ ಮನಮೋಹಕ ದೃಶ್ಯವನ್ನು ವೀಕ್ಷಿಸಲು ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಮೈದಾನಕ್ಕೆ ಬಂದು, ಕೈಗಳಿಂದ ಕಣ್ಣುಗಳಿಗೆ ನೆರಳು ಮಾಡಿಕೊಂಡು ಆಕಾಶದತ್ತ ಮುಖಮಾಡಿ ನಿಂತಿದ್ದರು. ಪ್ರಕೃತಿಯ ಈ ಅದ್ಭುತ ಚಮತ್ಕಾರವನ್ನು ಕಣ್ಣಾರೆ ಕಂಡು ಬೆರಗಾದ ಮಕ್ಕಳು ಚಪ್ಪಾಳೆ ತಟ್ಟಿ, ಕೂಗಾಡುತ್ತಾ ತಮ್ಮ ಸಡಗರವನ್ನು ಹಂಚಿಕೊಂಡರು. ಗ್ರಾಮೀಣ ಭಾಗದ ಈ ಶಾಲೆಯ ಮಕ್ಕಳಿಗೆ ಇದೊಂದು ಮರೆಯಲಾಗದ ಹಾಗೂ ಕೌತುಕದ ಕ್ಷಣವಾಗಿ ಮೂಡಿಬಂತು.

Read More

ಮುಂಬೈ: ಟೀಮ್ ಇಂಡಿಯಾದ ತಾರಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಮುಂಬರುವ ಇಂಗ್ಲೆಂಡ್ ವಿರುದ್ಧದ ಏಕದಿನ (ODI) ಸರಣಿಯಿಂದ ಹೊರಬಿದ್ದಿದ್ದಾರೆ. 50 ಓವರ್ಗಳ ಕ್ರಿಕೆಟ್ಗೆ ಅಗತ್ಯವಿರುವ ಫಿಟ್ನೆಸ್ ಮಟ್ಟವನ್ನು ತಲುಪಲು ಅವರು ವಿಫಲರಾಗಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಪಾಂಡ್ಯ ಅವರು ಇನ್ನೂ ಪೂರ್ಣ ಪ್ರಮಾಣದ ಬೌಲಿಂಗ್ ವರ್ಕ್ಲೋಡ್ (ಕಾರ್ಯಭಾರ) ಪೂರ್ಣಗೊಳಿಸದ ಕಾರಣ ಇಂಗ್ಲೆಂಡ್ ವಿರುದ್ಧದ ಸರಣಿಯ ಆಯ್ಕೆಗೆ ಲಭ್ಯವಿರುವುದಿಲ್ಲ. ದೀರ್ಘಕಾಲದ ಅನುಪಸ್ಥಿತಿಯ ನಂತರ 32 ವರ್ಷದ ಈ ಆಟಗಾರ ಏಕದಿನ ಮಾದರಿಗೆ ಮರಳಲು ಸಜ್ಜಾಗುತ್ತಿದ್ದ ಸಂದರ್ಭದಲ್ಲೇ ಈ ಹಿನ್ನಡೆ ಉಂಟಾಗಿದೆ. ಪುನಶ್ಚೇತನ ಪ್ರಕ್ರಿಯೆಯಲ್ಲಿ ಮತ್ತೊಂದು ಗಾಯ ಇತ್ತೀಚೆಗಷ್ಟೇ ಪುನಶ್ಚೇತನ (Rehabilitation) ಪ್ರಕ್ರಿಯೆಯಲ್ಲಿದ್ದ ಹಾರ್ದಿಕ್ ಪಾಂಡ್ಯ ಅವರಿಗೆ ತೊಡೆಯ ಸ್ನಾಯು ಸೆಳೆತದ (Quadriceps strain) ಹೊಸ ಗಾಯ ಕಾಣಿಸಿಕೊಂಡಿತ್ತು. ಇದೇ ಕಾರಣಕ್ಕೆ ಅವರು ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಿಂದಲೂ ಹೊರಗುಳಿಯಬೇಕಾಯಿತು. ಫಿಟ್ನೆಸ್ ಪರೀಕ್ಷೆಯ ಸಮಯದಲ್ಲಿ ಬೌಲಿಂಗ್ ವರ್ಕ್ಲೋಡ್ ಹೆಚ್ಚಿಸಿದ್ದರಿಂದಲೇ ಈ ಗಾಯ ಉಂಟಾಗಿರಬಹುದು…

Read More

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪ್ರಚಾರ ನಡೆಸಿದ ಆರೋಪದ ಮೇಲೆ ‘ಕುಮಾರಸ್ವಾಮಿ ಫಾರ್ ಸಿಎಂ’ (Kumaraswamy For CM) ಸೋಶಿಯಲ್ ಮೀಡಿಯಾ ಪೇಜ್ ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ. ವಕೀಲರಾದ ದೀಪು ಸಿ.ಆರ್. ಅವರು ನೀಡಿದ ಅಧಿಕೃತ ದೂರಿನ ಮೇರೆಗೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಜೆಡಿಎಸ್ (JDS) ಪಕ್ಷದ ಅಧಿಕೃತ ಜಾಲತಾಣದ ಪುಟಗಳಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ತಪ್ಪಾಗಿ ಚಿತ್ರಿಸುವ ನಿಟ್ಟಿನಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ಸಿದ್ಧಪಡಿಸಲಾದ ವಿಡಿಯೋವೊಂದನ್ನು ಪ್ರಸಾರ ಮಾಡಲಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ಸಿಎಂ ಡಿ.ಕೆ. ಶಿವಕುಮಾರ್ ಅವರ ತೇಜೋವಧೆ ಮಾಡಲು ಮತ್ತು ಅವರ ಘನತೆಗೆ ಧಕ್ಕೆ ತರಲು ಈ ವಿಡಿಯೋ ಬಳಸಲಾಗಿದೆ.ಸಮಾಜದಲ್ಲಿ ತಪ್ಪು ಸಂದೇಶ ರವಾನಿಸುವ ಮೂಲಕ ಸಾರ್ವಜನಿಕ ಶಾಂತಿ ಭಂಗಕ್ಕೆ ಯತ್ನಿಸಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಸದ್ಯ ಸದಾಶಿವನಗರ ಪೊಲೀಸರು ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.

Read More

ಮದ್ದೂರು: ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕುದುರಗುಂಡಿ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಮನ್ಮುಲ್ (ಮಂಡ್ಯ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ) ಸಂಸ್ಥೆಯಿಂದ ಹರಿದುಬಂದ ರಾಸಾಯನಿಕ ಮಿಶ್ರಿತ ವಿಷಕಾರಿ ಕಲುಷಿತ ನೀರಿನಿಂದಾಗಿ ಗ್ರಾಮದ ಪ್ರಸಿದ್ಧ ಕೆರೆಯಲ್ಲಿದ್ದ ಸಾವಿರಾರು ಮೀನುಗಳು ಜಲಸಮಾಧಿಯಾಗಿವೆ. ಕುದುರಗುಂಡಿ ಗ್ರಾಮದ ಈ ಕೆರೆಯು ಸುಮಾರು 77 ಎಕರೆ ವಿಸ್ತೀರ್ಣವನ್ನು ಹೊಂದಿದ್ದು, ಕಳೆದ ಹಲವು ವರ್ಷಗಳಿಂದ ಇಲ್ಲಿ ಹರಾಜು ಪ್ರಕ್ರಿಯೆಯ ಮೂಲಕ ಮೀನು ಸಾಕಾಣಿಕೆಗೆ ಗುತ್ತಿಗೆ ನೀಡಲಾಗುತ್ತಿತ್ತು. ಈ ಬಾರಿಯೂ ಗ್ರಾಮದ ಕೆ.ಬಿ. ಶಿವಣ್ಣ ಎಂಬುವವರು ಸುಮಾರು 9.27 ಲಕ್ಷ ರೂಪಾಯಿ ನೀಡಿ ಕೆರೆಯನ್ನು ಗುತ್ತಿಗೆಗೆ ಪಡೆದು ಮೀನು ಸಾಕಾಣಿಕೆ ಮಾಡುತ್ತಿದ್ದರು. ಆದರೆ, ಕಳೆದ ಒಂದು ವಾರದಿಂದ ಕೆರೆಯಲ್ಲಿ ಮೀನುಗಳು ದಿಢೀರನೆ ಸತ್ತು ತೇಲಲಾರಂಭಿಸಿವೆ. ಮನ್ಮುಲ್ ಸಂಸ್ಥೆಯಲ್ಲಿ ಹಾಲಿನ ಟ್ಯಾಂಕರ್ಗಳನ್ನು ಸ್ವಚ್ಛಗೊಳಿಸಲು ಬಳಸಲಾಗುವ ಆಸಿಡ್ (ಆಮ್ಲ) ಮಿಶ್ರಿತ ನೀರನ್ನು ಕೆರೆಗೆ ಹರಿಬಿಟ್ಟಿರುವುದೇ ಈ ದುರಂತಕ್ಕೆ ಕಾರಣ ಎನ್ನಲಾಗಿದೆ. ಮೀನುಗಳು ಸಾಯುತ್ತಿದ್ದಂತೆ ಎಚ್ಚೆತ್ತ ಗುತ್ತಿಗೆದಾರರು ಕೆರೆಯ ನೀರನ್ನು ಪ್ರಯೋಗಾಲಯದಲ್ಲಿ…

Read More

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ (MD) ಹಿರಿಯ ಐಎಎಸ್ ಅಧಿಕಾರಿ ಶಿವಕುಮಾರ್ ಕೆ. ಬಿ. ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಇಲ್ಲಿಯವರೆಗೆ ಬಿಎಂಟಿಸಿ (BMTC) ವ್ಯವಸ್ಥಾಪಕ ನಿರ್ದೇಶಕರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶಿವಕುಮಾರ್ ಅವರನ್ನು ಸರ್ಕಾರ ಕೆಎಸ್ಆರ್ಟಿಸಿಗೆ ವರ್ಗಾವಣೆ ಮಾಡಿದೆ. ಇಲ್ಲಿಯವರೆಗೆ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರ ಸಮವರ್ತಿತ ಪ್ರಭಾರವನ್ನು (ಪ್ರಭಾರಿ ಎಂಡಿ) ಹೊತ್ತಿದ್ದ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರಾದ ಡಾ. ಸೆಲ್ವಮಣಿ ಆರ್. (IAS) ಅವರು ನೂತನ ಎಂಡಿ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನಿಗಮದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ಬೆಂಗಳೂರು : ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ದುರುಪಯೋಗವಾಗುವುದನ್ನು ತಡೆಯಲು ಮತ್ತು ನಕಲಿ ಫಲಾನುಭವಿಗಳನ್ನು ಹೊರಗಿಡಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ವಿಧಾನಸೌಧದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪರಿಶೀಲನಾ ಸಭೆಯಲ್ಲಿ ಸಿಎಂ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಪ್ರಮುಖ ಅಂಶಗಳು ಈ ಕೆಳಗಿನಂತಿವೆ: ಮನೆ ಮನೆಗೆ ತೆರಳಿ ದಾಖಲೆಗಳ ಪರಿಶೀಲನೆ: ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ಫಲಾನುಭವಿಗಳು ಮರು ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಲಾಗಿದ್ದು, ಅದರ ಬದಲಿಗೆ ಅಧಿಕಾರಿಗಳೇ ನೇರವಾಗಿ ಮನೆ ಮನೆಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಲಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಅಗತ್ಯವಿರುವ ದಾಖಲೆಗಳು: ಮನೆ ಯಜಮಾನಿ ಮತ್ತು ಆಕೆಯ ಪತಿಯ ಹೆಸರಿನ ದಾಖಲೆಗಳು, ವಾಸಸ್ಥಳ ಪ್ರಮಾಣಪತ್ರ, ಪಡಿತರ ಚೀಟಿ ಸಂಖ್ಯೆ, ವೋಟರ್ ಐಡಿ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಇ-ಕೆವೈಸಿ (e-KYC) ಆಗಿರುವ ಬ್ಯಾಂಕ್ ಪಾಸ್ಬುಕ್ ಮತ್ತು ಬ್ಯಾಂಕ್…

Read More

ಬೆಂಗಳೂರು: ಮುಖ್ಯಮಂತ್ರಿಗಳ ‘ಜನಸ್ಪಂದನ’ ಕಾರ್ಯಕ್ರಮ ಮತ್ತು ಒಟ್ಟಾರೆ ಆಡಳಿತ ವ್ಯವಸ್ಥೆಯನ್ನು ಜನರ ಮನೆಬಾಗಿಲಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಸರ್ಕಾರ ಹೊಸ ತಂತ್ರಜ್ಞಾನಗಳನ್ನು ಸಕ್ರಿಯವಾಗಿ ಬಳಸಿಕೊಳ್ಳುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ‘ಜನಸ್ಪಂದನ’ ಮತ್ತು ಆಡಳಿತ ವ್ಯವಸ್ಥೆಯನ್ನು ಜನರ ಮನೆಬಾಗಿಲಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಸರ್ಕಾರ ಹೊಸ ತಂತ್ರಜ್ಞಾನಗಳನ್ನು ಬಳಸಿಕೊಳ್ಳುತ್ತಿದೆ. ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಅಥವಾ ಮುಖ್ಯಮಂತ್ರಿಗಳನ್ನು ಭೇಟಿಯಾಗಲು ರಾಜಧಾನಿ ಬೆಂಗಳೂರಿಗೆ ಬರುವ ಅಗತ್ಯವಿಲ್ಲ. ಸ್ಥಳೀಯ ಮಟ್ಟದಲ್ಲೇ ಮುಖಂಡರು ಮತ್ತು ಅಧಿಕಾರಿಗಳ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಾಮಾಣಿಕ ಪ್ರಯತ್ನವನ್ನು ಮುಖ್ಯಮಂತ್ರಿಗಳ ಕಚೇರಿ ಮತ್ತು ಈ ಆಡಳಿತ ಇಲಾಖೆ ಮಾಡುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು. ಇನ್ನು ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಸ್ಪಷ್ಟನೆ ನೀಡಿದ ಅವರು, ಯೋಜನೆಗಳಲ್ಲಿ ಕಂಡುಬರುತ್ತಿರುವ ಲೋಪದೋಷಗಳನ್ನು ಸರಿಪಡಿಸುವ ಕೆಲಸ ನಡೆಯುತ್ತಿದೆ ಎಂದರು. ಕೆಲವು ಸರ್ಕಾರಿ ಸೌಲಭ್ಯಗಳು ಅನರ್ಹರಿಗೆ ಹಾಗೂ ಹೊರ ರಾಜ್ಯದವರಿಗೆ ಹೋಗುತ್ತಿರುವುದು ಮತ್ತು ಒಂದೇ ಫಲಾನುಭವಿಯ ಮೂರು-ನಾಲ್ಕು ಬ್ಯಾಂಕ್ ಖಾತೆಗಳಿಗೆ ಹಣ…

Read More

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆಗಾಗಿ ಬರೋಬ್ಬರಿ 3,627 ಮರಗಳ ಮಾರಣಹೋಮಕ್ಕೆ ಶೀಘ್ರದಲ್ಲೇ ಮುಹೂರ್ತ ಫಿಕ್ಸ್ ಆಗಲಿದೆ. ಹೊಸಹಳ್ಳಿಯಿಂದ ಕಡಬಗೆರೆವರೆಗಿನ ಫೇಸ್ 3 ಕಾಮಗಾರಿಗಾಗಿ ಇಷ್ಟೊಂದು ಮರಗಳನ್ನು ಕಡಿಯಲು ಬಿಎಂಆರ್ಸಿಎಲ್ (BMRCL) ಪ್ರಸ್ತಾವನೆ ಸಲ್ಲಿಸಿದೆ. ಮೆಟ್ರೋ ಮಾರ್ಗದಲ್ಲಿ ಬರುವ ಮರಗಳನ್ನು ಕತ್ತರಿಸಲು ಬಿಎಂಆರ್ ಸಿಎಲ್ ಅಧಿಕಾರಿಗಳು ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಅರಣ್ಯ ವಿಭಾಗಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಮರಗಳಿಗೆ ನಂಬರ್ ಹಾಕಿ ಗುರುತು ಮಾಡಲಾಗಿದೆ. ಜಿಬಿಎ ಅರಣ್ಯ ವಿಭಾಗವು ಈ ಕುರಿತು ಸಾರ್ವಜನಿಕ ಪ್ರಕಟಣೆಯನ್ನು ಹೊರಡಿಸಿದ್ದು, ಸಾರ್ವಜನಿಕರಿಂದ ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ನೀಡಿದೆ. ಸಾರ್ವಜನಿಕರ ಅಭಿಪ್ರಾಯ ಮತ್ತು ಆಕ್ಷೇಪಣೆಗಳನ್ನು ಗಮನಿಸಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಹೊಸಹಳ್ಳಿ ಮೆಟ್ರೋ ಸ್ಟೇಷನ್ನಿಂದ ಆರಂಭವಾಗಿ ಕಡಬಗೆರೆವರೆಗಿನ ಸುಮಾರು 12.5 ಕಿಲೋಮೀಟರ್ ಉದ್ದದ ಈ ಕಾರಿಡಾರ್ನಲ್ಲಿ ಮೆಟ್ರೋ ನಿಲ್ದಾಣ, ಮೆಟ್ರೋ ವೈಡಕ್ಟ್ ಹಾಗೂ ಡಬಲ್ ಡೆಕ್ಕರ್ ಫ್ಲೈ ಓವರ್ ನಿರ್ಮಾಣಕ್ಕೆ ಪ್ಲಾನ್…

Read More