Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ (ISI) ಮತ್ತು ತಲೆಮರೆಸಿಕೊಂಡಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ನಡುವಿನ ರಹಸ್ಯ ಜಾಲವನ್ನು ದೆಹಲಿ ಪೊಲೀಸರ ವಿಶೇಷ ದಳ (Special Cell) ಪತ್ತೆಹಚ್ಚಿದೆ. ದೇಶದಾದ್ಯಂತ ವಿಧ್ವಂಸಕ ಕೃತ್ಯಗಳನ್ನು ಎಸಗಲು ಸಂಚು ರೂಪಿಸಿದ್ದ ನೇಪಾಳ ಮೂಲದ ಪ್ರಜೆಗಳು ಸೇರಿದಂತೆ ಒಂಬತ್ತು ಜನರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಐಎಎನ್ಎಸ್ (IANS) ವರದಿ ಮಾಡಿದೆ. ಬಂಧಿತರಿಂದ ಬೃಹತ್ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪಾಕಿಸ್ತಾನದ ಗುಪ್ತಚರ ಸಂಸ್ಥೆಯು ಈ ಜಾಲವನ್ನು ಭಾರತದೊಳಗೆ ಕಾನೂನುಬಾಹಿರ ಮತ್ತು ದೇಶದ್ರೋಹಿ ಚಟುವಟಿಕೆಗಳನ್ನು ನಡೆಸುವ ಉದ್ದೇಶದಿಂದಲೇ ದೀರ್ಘಕಾಲದವರೆಗೆ ಸಿದ್ಧಪಡಿಸಿತ್ತು ಎಂದು ಮೂಲಗಳು ತಿಳಿಸಿವೆ. ಸದ್ಯ ತನಿಖಾಧಿಕಾರಿಗಳು ಈ ಜಾಲದ ಕಾರ್ಯವಿಧಾನಗಳು, ಮುಂದಿನ ಕಾರ್ಯಾಚರಣೆಯ ಯೋಜನೆಗಳು ಮತ್ತು ವಶಪಡಿಸಿಕೊಳ್ಳಲಾದ ಶಸ್ತ್ರಾಸ್ತ್ರಗಳ ಮೂಲದ ಬಗ್ಗೆ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಗಡಿಯಾಚೆಗಿನ ಭಯೋತ್ಪಾದನೆ ಮತ್ತು ಸಂಘಟಿತ ಅಪರಾಧ ಜಾಲಗಳನ್ನು ಮಟ್ಟಹಾಕುವಲ್ಲಿ ಈ ಬಂಧನವು ಭಾರತೀಯ ಭದ್ರತಾ ಪಡೆಗಳಿಗೆ ಸಿಕ್ಕ ದೊಡ್ಡ ಯಶಸ್ಸು ಎಂದು ಪರಿಗಣಿಸಲಾಗಿದೆ. https://twitter.com/ANI/status/2060628397727088907?s=20
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಜೂನ್ 1ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗುತ್ತಿದ್ದು, ವಿದ್ಯಾರ್ಥಿಗಳ ಬಿಸಿಯೂಟ (ಮಧ್ಯಾಹ್ನದ ಉಪಹಾರ) ಯೋಜನೆಗೆ ಯಾವುದೇ ರೀತಿಯ ಅಡಚಣೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಕರ್ನಾಟಕ ಸರ್ಕಾರ ಸೂಚಿಸಿದೆ. ಮಧ್ಯಪ್ರಾಚ್ಯ ದೇಶಗಳಲ್ಲಿ (Middle East) ಉಂಟಾಗಿರುವ ಯುದ್ಧದ ಪರಿಸ್ಥಿತಿಯಿಂದಾಗಿ ಮುಂಬರುವ ದಿನಗಳಲ್ಲಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ, ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ (ಬಿಸಿಯೂಟ) ಯೋಜನೆಯಡಿ ಶಾಲೆಗಳಿಗೆ ಅಗತ್ಯವಿರುವ ಗ್ಯಾಸ್ ಸಿಲಿಂಡರ್ಗಳ ಸರಬರಾಜು ನಿರಂತರವಾಗಿ ಸಿಗುವಂತೆ ನೋಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮಹತ್ವದ ಪತ್ರ ಬರೆದಿದ್ದಾರೆ. ಆದ್ಯತೆಯ ಮೇರೆಗೆ ಪೂರೈಕೆ: ಬಿಸಿಯೂಟ ಯೋಜನೆಯನ್ನು ಸರ್ಕಾರದ ಪ್ರತಿಷ್ಠಿತ ಹಾಗೂ ಮಹತ್ವಾಕಾಂಕ್ಷಿ ಯೋಜನೆಯೆಂದು ಪರಿಗಣಿಸಲಾಗಿದೆ. ಹಾಗಾಗಿ, ಎಲ್ಪಿಜಿ ಇಂಧನವನ್ನು ‘ಅಗತ್ಯ ವಸ್ತು ಕಾಯ್ದೆ’ ಅಡಿಯಲ್ಲಿ ಪರಿಗಣಿಸಿ, ಶಾಲೆಗಳಿಗೆ ಆದ್ಯತೆಯ ಮೇರೆಗೆ ಸಿಲಿಂಡರ್ ವಿತರಿಸಲು ಕ್ರಮ ಕೈಗೊಳ್ಳಬೇಕು. ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ: ತಮ್ಮ ವ್ಯಾಪ್ತಿಯಲ್ಲಿರುವ ಎಲ್ಲಾ ಗ್ಯಾಸ್ ವಿತರಕರಿಗೆ…
ರಾಮನಗರ: ರಾಜಕೀಯದಲ್ಲಿ ನಾಯಕರಿಗಾಗಿ ಅಭಿಮಾನಿಗಳು ಪ್ರಾಣ ಕೊಡುವುದನ್ನು ಕೇಳಿದ್ದೇವೆ, ಇಲ್ಲವೇ ದೇವಸ್ಥಾನಗಳಿಗೆ ನಡೆದುಕೊಂಡು ಹೋಗಿ ಹರಕೆ ಹೊರುವುದನ್ನು ನೋಡಿದ್ದೇವೆ. ಆದರೆ, ಕನಕಪುರ ಬಂಡೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಬೇಕು ಎಂದು ಅವರ ಅಭಿಮಾನಿಯೊಬ್ಬರು ಕಳೆದ ಮೂರು ವರ್ಷಗಳಿಂದ ಕ್ಷೌರವೇ ಮಾಡಿಸಿಕೊಳ್ಳದೆ ವಿಶಿಷ್ಟ ಶಪಥ ಮಾಡಿದ್ದ ರೋಚಕ ಕಥೆಯೊಂದು ಈಗ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ಇತ್ತೀಚೆಗಷ್ಟೇ ಡಿಕೆಶಿ ಸಿಎಂ ಆಗುವವರೆಗೂ ಕಾಲಿಗೆ ಚಪ್ಪಲಿ ಹಾಕಲ್ಲ ಎಂದು ಹರಕೆ ಹೊತ್ತಿದ್ದ ಅಭಿಮಾನಿಯೊಬ್ಬರ ಸುದ್ದಿ ಸದ್ದು ಮಾಡಿತ್ತು. ಅದರ ಬೆನ್ನಲ್ಲೇ ಈಗ ಮತ್ತೊಬ್ಬ ಅಪ್ಪಟ ಅಭಿಮಾನಿಯ ಅಪರೂಪದ ಭಕ್ತಿ ಮುನ್ನೆಲೆಗೆ ಬಂದಿದೆ. ಯಾರು ಈ ಅಪ್ಪಟ ಅಭಿಮಾನಿ? ಏನಿದು ಶಪಥ? ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಚಿಕ್ಕಸಾದೇನಹಳ್ಳಿ ಗ್ರಾಮದ ಈಶ್ವರಪ್ಪ ಎಂಬುವವರೇ ಈ ವಿಶಿಷ್ಟ ಅಭಿಮಾನಿ. ತನಗಾಗಿ ಆಸ್ತಿ-ಅಂತಸ್ತು ಮಾಡಿಕೊಳ್ಳುವುದಕ್ಕಿಂತ, ತನ್ನ ನೆಚ್ಚಿನ ನಾಯಕ ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿ ಗಾದಿ ಏರಬೇಕು ಎಂಬುದೇ ಈಶ್ವರಪ್ಪ ಅವರ ಬದುಕಿನ ಏಕೈಕ…
ಬೆಂಗಳೂರು: ನೀವು ಬಾಡಿಗೆ ಮನೆಯಲ್ಲಿದ್ದೀರಾ ಅಥವಾ ಆಫೀಸ್ಗೆಂದು ಬಿಲ್ಡಿಂಗ್ ಬಾಡಿಗೆಗೆ ಪಡೆದಿದ್ದೀರಾ? ಹಾಗಿದ್ದಲ್ಲಿ ನಿಮಗೊಂದು ಅತ್ಯಂತ ನಿರಾಳ ತರುವಂತಹ ಸುದ್ದಿ ಇಲ್ಲಿದೆ. ಬಿಲ್ಡಿಂಗ್ ಅಥವಾ ಆಸ್ತಿಯ ಒಡೆಯ ಬ್ಯಾಂಕ್ನಲ್ಲಿ ಲೋನ್ ಮಾಡಿ ಸುಸ್ತಿದಾರನಾದರೆ, ಅದಕ್ಕೆ ಅಲ್ಲಿರುವ ಬಾಡಿಗೆದಾರರನ್ನು ಹೊಣೆಗಾರರನ್ನಾಗಿ ಮಾಡಲು ಬರುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅಷ್ಟೇ ಅಲ್ಲ, ಬ್ಯಾಂಕ್ ಕ್ರಮದ ವಿರುದ್ಧ ಮೇಲ್ಮನವಿ ಸಲ್ಲಿಸಲು ಬಾಡಿಗೆದಾರರು ಸಾಲದ ಮೊತ್ತದ ಶೇ. 50 ರಷ್ಟು ಹಣವನ್ನು ಮುಂಗಡವಾಗಿ ಠೇವಣಿ ಇಡಬೇಕು ಎನ್ನುವ ನಿಯಮ ಕಡ್ಡಾಯವಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಸಾಮಾನ್ಯವಾಗಿ ಆಸ್ತಿ ಮಾಲೀಕರು ಬ್ಯಾಂಕ್ ಲೋನ್ ಕಟ್ದೇ ಹೋದಾಗ, ಬ್ಯಾಂಕುಗಳು ಸಾಲ ವಸೂಲಾತಿ ನ್ಯಾಯಾಧಿಕರಣದ (DRT) ಮೂಲಕ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಮುಂದಾಗುತ್ತವೆ. ಇಂತಹ ಸಂದರ್ಭದಲ್ಲಿ ಅಲ್ಲಿರುವ ಬಾಡಿಗೆದಾರರು ಸಂಕಷ್ಟಕ್ಕೆ ಸಿಲುಕುತ್ತಿದ್ದರು. ಡಿಆರ್ಟಿ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಬೇಕಾದರೆ, ಒಟ್ಟು ಸಾಲದ ಅರ್ಧದಷ್ಟು (50%) ಹಣವನ್ನು ಠೇವಣಿ ಇಡಬೇಕು ಎಂಬ ನಿಯಮ ಬಾಡಿಗೆದಾರರಿಗೆ ದೊಡ್ಡ ತಲೆನೋವಾಗಿತ್ತು. ಈ…
SHOCKING : ದೃಶ್ಯಂ’ ಸಿನಿಮಾ ಮಾದರಿಯಲ್ಲಿ ಮಹಿಳೆಯ ಕೊಲೆ: ಶವ ಹೂತುಹಾಕಿ ಪತಿಯೊಂದಿಗೆ ವಾಟ್ಸಾಪ್ ಚಾಟ್ ಮಾಡಿದ ಕಿರಾತಕ!
ಏಲೂರು: ದೃಶ್ಯಂ ಸಿನಿಮಾ ಸ್ಟೈಲ್ನಲ್ಲಿ ಮಹಿಳೆಯೊಬ್ಬಳನ್ನು ಭೀಕರವಾಗಿ ಕೊಲೆ ಮಾಡಿ, ಆಕೆ ಬದುಕಿದ್ದಾಳೆ ಎಂದು ನಂಬಿಸಲು ಆಕೆಯ ಫೋನ್ ನಿಂದಲೇ ಪತಿಗೆ ವಾಟ್ಸಾಪ್ ಮೆಸೇಜ್ ಕಳುಹಿಸುತ್ತಿದ್ದ ಆರೋಪಿಯ ನಾಟಕವನ್ನು ಆಂಧ್ರಪ್ರದೇಶದ ಪೊಲೀಸರು ಬಯಲಿಗೆಳೆದಿದ್ದಾರೆ. ಅಕ್ರಮ ಸಂಬಂಧದಲ್ಲಿ ಉಂಟಾದ ಅನುಮಾನ ಹಾಗೂ ಹಣಕಾಸಿನ ವಿವಾದವೇ ಈ ಭೀಕರ ಕೊಲೆಗೆ ಕಾರಣವಾಗಿದೆ. ನಂಬಿಸಿ ಪ್ರಾಣ ತೆಗೆದು, ಶವವನ್ನು ಹೂತುಹಾಕಿ ಡ್ರಾಮಾ ಮಾಡುತ್ತಿದ್ದ ಆರೋಪಿಯನ್ನು ಏಲೂರು ತ್ರೀ ಟೌನ್ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಏಲೂರು ತ್ರೀ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಸೌರಿಪುರಂ ಗ್ರಾಮದ ಮಲ್ಲವಲ್ಲಿ ವಿಶಾಲಿ (36) ಎಂಬ ವಿವಾಹಿತೆ, ಏಪ್ರಿಲ್ 18 ರಂದು ಗುಡಿವಾಡದಲ್ಲಿರುವ ತನ್ನ ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದರು. ಆದರೆ ಆಕೆ ಎಷ್ಟು ದಿನ ಕಳೆದರೂ ಮನೆಗೆ ಮರಳದಿದ್ದಾಗ ಮತ್ತು ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದರಿಂದ ಆತಂಕಗೊಂಡ ಪತಿ ಪೊಲೀಸರಿಗೆ ದೂರು ನೀಡಿದ್ದರು. ಪತಿಯ ದೂರಿನ ಮೇರೆಗೆ ಪೊಲೀಸರು ಮಿಸ್ಸಿಂಗ್ ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದರು.…
ಬೆಂಗಳೂರು ಪೊಲೀಸರ ಮಾನವೀಯ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಎಲ್ಲಾ ರಕ್ಷಕರೂ ಸೂಪರ್ ಮ್ಯಾನ್ ತರಹ ಹಾರಿಕೊಂಡು ಬರುವುದಿಲ್ಲ, ಕೆಲವರು ಖಾಕಿ ಯೂನಿಫಾರ್ಮ್ ಧರಿಸಿ ಸದ್ದಿಲ್ಲದೆ ದೇವದೂತರಂತೆ ಬರುತ್ತಾರೆ ಎಂಬ ಮಾತು ಸಿಲಿಕಾನ್ ಸಿಟಿಯಲ್ಲಿ ಅಕ್ಷರಶಃ ನಿಜವಾಗಿದೆ. ತಡರಾತ್ರಿ ಸುರಿದ ಭೀಕರ ಮಳೆಗೆ ಇಡೀ ರಸ್ತೆಯೇ ನದಿಯಂತಾಗಿದ್ದಾಗ, ಟ್ರಾಫಿಕ್ ಪೊಲೀಸ್ ಪೇದೆಯೊಬ್ಬರು ತೋರಿದ ಅಪ್ರತಿಮ ಸಾಹಸ ಮತ್ತು ಮಾನವೀಯ ಕಾರ್ಯದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಕೋಟ್ಯಂತರ ಜನರ ಹೃದಯ ಗೆದ್ದಿದೆ. ರಾಜಧಾನಿ ಬೆಂಗಳೂರಿನಲ್ಲಿ ತಡರಾತ್ರಿ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ರಸ್ತೆಗಳೆಲ್ಲ ಜಲಾವೃತಗೊಂಡಿದ್ದವು. ರಸ್ತೆಯಲ್ಲಿ ಮಂಡಿ ಆಳಕ್ಕೆ ನೀರು ಪ್ರವಾಹದಂತೆ ನುಗ್ಗುತ್ತಿದ್ದುದರಿಂದ ವಾಹನ ಸವಾರರೇ ಸಂಚರಿಸಲು ಹರಸಾಹಸ ಪಡುತ್ತಿದ್ದರು. ಇಂತಹ ಅಪಾಯಕಾರಿ ಪರಿಸ್ಥಿತಿಯಲ್ಲಿ ದಿವ್ಯಾಂಗ ಯುವಕನೊಬ್ಬ ರಸ್ತೆ ದಾಟಲಾಗದೆ, ನೀರಿನ ರಭಸಕ್ಕೆ ಕೊಚ್ಚಿಹೋಗುವ ಭೀತಿಯಲ್ಲಿ ತೀವ್ರವಾಗಿ ಪರದಾಡುತ್ತಿದ್ದನು. ಯಾರು ಕೂಡ ಆತನ ನೆರವಿಗೆ ಬಾರದ ಆ ಕಷ್ಟದ ಸಮಯದಲ್ಲಿ, ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸ್ ಕಾನ್ಸ್ಟೆಬಲ್ ಅನಿಲ್ ಅವರು…
ನವದೆಹಲಿ: ಶಾಲಾ ಶಿಕ್ಷಕರ ಅರ್ಹತೆಗೆ ಸಂಬಂಧಿಸಿದಂತೆ ದೇಶದ ಅತ್ಯುನ್ನತ ನ್ಯಾಯಾಲಯ ಮಹತ್ವದ ತೀರ್ಪೊಂದನ್ನು ನೀಡಿದೆ. ಪ್ರಸ್ತುತ ಸೇವೆಯಲ್ಲಿರುವ ಎಲ್ಲಾ ಶಿಕ್ಷಕರಿಗೂ ಶಿಕ್ಷಕರ ಅರ್ಹತಾ ಪರೀಕ್ಷೆ (TET) ಕಡ್ಡಾಯ ಎಂದು ಸುಪ್ರೀಂಕೋರ್ಟ್ ಮತ್ತೊಮ್ಮೆ ಖಡಕ್ ಆಗಿ ಹೇಳಿದೆ. ಆದರೆ, ಶಿಕ್ಷಕರಿಗೆ ಕೊಂಚ ನಿರಾಳತೆ ತರುವ ಸುದ್ದಿಯೆಂದರೆ, ಪರೀಕ್ಷೆ ಪಾಸ್ ಮಾಡಲು ನೀಡಲಾಗಿದ್ದ ಸಮಯವನ್ನು 2028ರ ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ. ‘ಅಂಜುಮಾನ್ ಇಶಾತ್ ಇ-ತಲೀಮ್ ಟ್ರಸ್ಟ್’ ಪ್ರಕರಣದ ಹಳೆಯ ತೀರ್ಪನ್ನು ಪ್ರಶ್ನಿಸಿ ವಿವಿಧ ರಾಜ್ಯ ಸರ್ಕಾರಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಶಿಕ್ಷಕರ ಸಂಘಟನೆಗಳು ಒಟ್ಟು 65 ಪುನರ್ ಪರಿಶೀಲನಾ ಅರ್ಜಿಗಳನ್ನು ಸಲ್ಲಿಸಿದ್ದವು. ಈ ಎಲ್ಲಾ ಅರ್ಜಿಗಳನ್ನು ನ್ಯಾಯಮೂರ್ತಿಗಳಾದ ದೀಪಾಂಕರ್ ದತ್ತಾ ಮತ್ತು ಮನಮೋಹನ್ ಸಿಂಗ್ ಅವರಿದ್ದ ದ್ವಿಸದಸ್ಯ ಪೀಠವು ಸಾರಾಸಗಟಾಗಿ ವಜಾಗೊಳಿಸಿದೆ. ಅಲ್ಲದೆ, ಗುಣಮಟ್ಟದ ಶಿಕ್ಷಣದ ದೃಷ್ಟಿಯಿಂದ ಟಿಇಟಿ ಕಡ್ಡಾಯ ಎಂಬ ತನ್ನ ಹಳೆಯ ಆದೇಶವನ್ನು ಎತ್ತಿ ಹಿಡಿದಿದೆ. 2009ರ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ (RTE) ಜಾರಿಗೆ ಬರುವ ಮುನ್ನವೇ…
ಭೋಪಾಲ್: ಬೆನ್ನುನೋವು ನಿವಾರಣೆಗೆಂದು ಬಳಸುತ್ತಿದ್ದ ಎಲೆಕ್ಟ್ರಿಕ್ ಥೆರಪಿ ಮ್ಯಾಟ್ (ಚಿಕಿತ್ಸಾ ಹಾಸಿಗೆ) ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡ ಪರಿಣಾಮ, 90 ವರ್ಷದ ವೃದ್ಧರೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದೆ. ಮೇ 27 ರಂದು ಈ ದುರ್ಘಟನೆ ಸಂಭವಿಸಿದ್ದು, ಗ್ಲ್ಯಾಡ್ವಿನ್ ಎಂಬ ವೃದ್ಧರೇ ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಸ್ಥಳೀಯ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಮೃತ ಗ್ಲ್ಯಾಡ್ವಿನ್ ಅವರು ದೀರ್ಘಕಾಲದ ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು. ವೈದ್ಯರ ಸಲಹೆಯ ಮೇರೆಗೆ ಅವರು ನೋವು ಉಪಶಮನಕ್ಕಾಗಿ ಎಲೆಕ್ಟ್ರಿಕ್ ಥೆರಪಿ ಯಂತ್ರವೊಂದನ್ನು ಖರೀದಿಸಿದ್ದರು. ಪ್ರತಿದಿನದಂತೆ ಅಂದೂ ಕೂಡ ಅವರು ತಮಗಾಗುತ್ತಿದ್ದ ತೀವ್ರ ಬೆನ್ನುನೋವನ್ನು ಕಡಿಮೆ ಮಾಡಿಕೊಳ್ಳಲು ಈ ಮ್ಯಾಟ್ ಮೇಲೆ ಮಲಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಚಿಕಿತ್ಸಾ ಅವಧಿಯಲ್ಲಿ, ಎಲೆಕ್ಟ್ರಿಕ್ ಮ್ಯಾಟ್ನಲ್ಲಿ ಇದ್ದಕ್ಕಿದ್ದಂತೆ ತಾಂತ್ರಿಕ ದೋಷ ಕಾಣಿಸಿಕೊಂಡು ಕಿಡಿ ಹೊತ್ತಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ಆದ ಕೆಲವೇ ಸೆಕೆಂಡುಗಳಲ್ಲಿ ಇಡೀ ಮ್ಯಾಟ್ಗೆ ಬೆಂಕಿ ಆವರಿಸಿದ್ದು, ವೃದ್ಧರ ದೇಹ ಸಂಪೂರ್ಣವಾಗಿ ಬೆಂಕಿಯ ಜ್ವಾಲೆಗೆ ಸಿಲುಕಿದೆ. ವೃದ್ಧರ ಕಿರುಚಾಟವನ್ನು ಕೇಳಿ…
ಬೆಂಗಳೂರು: ರಾಜಧಾನಿ ಬೆಂಗಳೂರಿನ ಜನತೆಗೆ ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆಯೊಂದನ್ನು ನೀಡಿದೆ. ಮುಂದಿನ 24 ಗಂಟೆಗಳಲ್ಲಿ ನಗರದಾದ್ಯಂತ ಬಿರುಗಾಳಿ ಹಾಗೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುಚ್ಚರಿಕೆ ನೀಡಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ನಗರದಲ್ಲಿ ಸಂಜೆ ವೇಳೆಗೆ ಭಾಗಶಃ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದ್ದು, ತದನಂತರ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ಮಳೆಯ ಜೊತೆಗೆ ಬಲವಾದ ಬಿರುಗಾಳಿ ಬೀಸುವ ಹಾಗೂ ಗುಡುಗು ಸಿಡಿಲಿನ ಅಬ್ಬರವೂ ಇರಲಿದೆ ಎಂದು ತಿಳಿಸಲಾಗಿದೆ. ಹಠಾತ್ ಹವಾಮಾನ ಬದಲಾವಣೆ ಮತ್ತು ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಅನಗತ್ಯ ಪ್ರಯಾಣವನ್ನು ತಪ್ಪಿಸಬೇಕು ಎಂದು ಹವಾಮಾನ ಇಲಾಖೆ ವಿನಂತಿಸಿದೆ.
ಬೆಂಗಳೂರು: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗುತ್ತಿದ್ದು, ರಾಜ್ಯದ ಸರ್ಕಾರಿ ಹಾಗೂ ಇತರೆ ಶಾಲೆಗಳಲ್ಲಿ 1ನೇ ತರಗತಿಯ ದಾಖಲಾತಿ ಪ್ರಕ್ರಿಯೆ ಚುರುಕುಗೊಂಡಿದೆ. ನಿಮ್ಮ ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು ಬಯಸುವ ಪೋಷಕರು ಪ್ರಮುಖ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಶಿಕ್ಷಣ ಇಲಾಖೆಯ ನಿಯಮಾವಳಿಗಳ ಪ್ರಕಾರ ದಾಖಲಾತಿಗೆ ಮುಖ್ಯವಾಗಿ ಬೇಕಾಗುವ ಅಗತ್ಯ ದಾಖಲೆಗಳು ಮತ್ತು ವಯೋಮಿತಿಯ ವಿವರಗಳು ಈ ಕೆಳಗಿನಂತಿವೆ: ವಯಸ್ಸಿನ ಮಿತಿ: ಜೂನ್ 1, 2026ಕ್ಕೆ ಅನ್ವಯವಾಗುವಂತೆ ಮಗುವಿಗೆ ಕಡ್ಡಾಯವಾಗಿ 5 ವರ್ಷ 10 ತಿಂಗಳು ಪೂರ್ಣಗೊಂಡಿರಬೇಕು. ಅಗತ್ಯವಿರುವ ಕಡ್ಡಾಯ ದಾಖಲೆಗಳು: ಜನನ ಪ್ರಮಾಣ ಪತ್ರ: ಮಗುವಿನ ಜನ್ಮ ದಿನಾಂಕವನ್ನು ದೃಢೀಕರಿಸುವ ಪ್ರಮಾಣ ಪತ್ರದ ನಕಲು (Copy). ಮಗುವಿನ ಆಧಾರ್ ಕಾರ್ಡ್: ಮಗುವಿನ ಆಧಾರ್ ಕಾರ್ಡ್ ನಕಲು ಪ್ರತಿ. ಪೋಷಕರ ಆಧಾರ್ ಕಾರ್ಡ್: ತಂದೆ ಅಥವಾ ತಾಯಿಯ ಆಧಾರ್ ಕಾರ್ಡ್ ನಕಲು. ಪಡಿತರ ಚೀಟಿ (Ration Card): ಕುಟುಂಬದ ರೇಷನ್ ಕಾರ್ಡ್ ನಕಲು ಪ್ರತಿ. ಜಾತಿ ಮತ್ತು ಆದಾಯ ಪ್ರಮಾಣ ಪತ್ರ: ಚಾಲ್ತಿಯಲ್ಲಿರುವ…














