Author: kannadanewsnow57

ಬೆಂಗಳೂರು : ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾ ವಲಸಿಗರನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ.  ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಜಹಿದುಲ್ ಇಸ್ಲಾಂ (35) ಹಾಗೂ ಫಿರ್ದೋಸ್ ಎನ್ನುವ ಇಬ್ಬರು ಬಾಂಗ್ಲಾ ವಲಸಿಗರನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ. ಈ ಇಬ್ಬರು 2 ವರ್ಷಗಳ ಹಿಂದೆ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ್ದರು. ನಕಲಿ ಪಾಸ್ ಪೋರ್ಟ್, ಆಧಾರ್ ಕಾರ್ಡ್ ಸೇರಿದಂತೆ ಹಲವು ನಕಲಿ ದಾಖಲೆ ಪ್ರಮಾಣ ಪತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

Read More

ಬೆಂಗಳೂರು : ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ಬಾಲಕಿಯ ರೇಪ್ & ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಬಾಲಕಿ ರೇಪ್ & ಮರ್ಡರ್ ಕೇಸ್ ಗೆ ಸಂಬಂಧಿಸಿದಂತೆ ಪೊಲೀಸರ ತನಿಖೆಯಲ್ಲಿ ಬೆಚ್ಚಿ ಬೀಳಿಸೋ ಕ್ರೌರ್ಯ ಬಯಲಾಗಿದೆ. 6 ವರ್ಷದ ಕಂದಮ್ಮನ ಮೇಲೆ ದುಷ್ಕರ್ಮಿ ಮೃಗದ ರೀತಿ ಕ್ರೌ‍ರ್ಯ ನಡೆಸಿದ್ದಾನೆ. ಕಂದಮ್ಮನ ಮೇಲೆ ಯೂಸುಫ್ ಅತ್ಯಾಚಾರ ಎಸಗಿದ್ದಾನೆ.  ತನಿಖೆ ವೇಳೆ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದು ಪತ್ತೆಯಾಗಿದೆ. ಘಟನೆ ಹಿನ್ನೆಲೆ ಕೊಲ್ಕತ್ತಾ ಮೂಲದ ಬಾಲಕಿಯನ್ನು ಕತ್ತುಹಿಸಿ ಕೊಲೆ ಮಾಡಲಾಗಿದೆ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಿ ಬ್ಯಾಗಿನಲ್ಲಿ ಶವ ಹಾಕಿ ದುಷ್ಕರ್ಮಿ ಯೂಸುಫ್ ಪರಾರಿಯಾಗಿದ್ದ. ಅಲ್ಲದೆ ಶವವನ್ನು ಚರಂಡಿಗೆ ಎಸೆದು ದುಷ್ಕರ್ಮಿಗಳು ವಿಕೃತಿ ಮೆರೆದಿದ್ದಾನೆ.  ವೈಟ್ ಫೀಲ್ಡ್ ಪೊಲೀಸರು ಆರೋಪಿಯನ್ನು  ಬಂಧಿಸಿದ್ದಾರೆ. ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೀದರ್ : ಸಚಿವ ಕೆ.ಹೆಚ್.ಮುನಿಯಪ್ಪ ಹಾಗೂ ಎಂಎಲ್ ಸಿ ಚಂದ್ರಪ್ಪ ಲಿಫ್ಟ್ ನಲ್ಲಿ ಸಿಲುಕಿಕೊಂಡು ಪರದಾಡಿದ ಘಟನೆ ಬೀದರ್ ನಲ್ಲಿ ನಡೆದಿದೆ. ಶತಾಯುಷಿ ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ಆರೋಗ್ಯ ವಿಚಾರಿಸಲು ಬೀದರ್ ಆಸ್ಪತ್ರೆಗೆ ಹೋಗಿದ್ದ ವೇಳೆ ಸಚಿವ ಕೆ.ಹೆಚ್.ಮುನಿಯಪ್ಪ ಹಾಗೂ ಎಂಎಲ್ ಸಿ ಚಂದ್ರಪ್ಪ ಆಸ್ಪತ್ರೆ ಲಿಫ್ಟ್ ಏಕಾಏಕಿ ಕೈಕೊಟ್ಟಿದ್ದರಿಂದ ಲಿಫ್ಟ್ ನಲ್ಲಿ ಸಿಲುಕಿದ್ದಾರೆ.ಸುಮಾರು 15 ನಿಮಿಷಗಳ ಕಾಲ ಲಿಫ್ಟ್ ಒಳಗೆ ಸಿಲುಕಿಕೊಂಡಿದ್ದಾರೆ. ಬಳಿಕ ಲಿಫ್ಟ್ ರಿಪೇರಿ ಮಾಡಿ ಬಾಗಿಲು ತೆರೆದಾಗ ಸಚಿವರು, ಎಂಎಲ್ ಸಿ ಲಿಫ್ಟ್ ನಿಂದ ಹೊರ ಬಂದಿದ್ದಾರೆ. 102 ವರ್ಷದ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೆಲ ದಿನಗಳಿಂದ ಬೀದರ್ ನ ಗುದಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಭೀಮಣ್ಣ ಖಂಡ್ರೆ ಭೇತಿಯಾಗಿ ಅವರ ಆರೋಗ್ಯ ವಿಚಾರಿಸಿದ್ದಾರೆ.

Read More

ಹಾಸನ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಕೃತ್ಯ ನಡೆದಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪುತ್ರನೇ ತಂದೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದಲ್ಲಿ ಪುತ್ರನೇ ತಂದೆಯನ್ನು ರಾಡ್ ನಿಂದ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ರಾಡ್ ನಿಂದ ಹೊಡೆದು ಸತೀಶ್ (60) ಕೊಲೆಗೈದ ಪುತ್ರ ರಂಜಿತ್. ಕೌಟುಂಬಿಕ ಕಲಹದಿಂದ ಕೆ.ಆರ್.ನಗರದಲ್ಲಿ ಪ್ರತ್ಯೇಕವಾಗಿ ವಾಸವಿದ್ದ ತಾಯಿ,ಮಗ, ಇದೇ ವಿಚಾರಕ್ಕೆ ತಂದೆಯ ಜೊತೆಗೆ ಆಗಾಗ ಜಗಳ ನಡೆಯುತ್ತಿತ್ತು. ನಿನ್ನೆ ಸಂಜೆ ಕೂಡ ಜಗಳವಾಗಿದ್ದು, ಈ ವೇಳೆ ಸ್ಟೀಲ್ ರಾಡ್ ನಿಂದ ತಂದೆ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ಹಿರಿಸಾವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Read More

ಹುಬ್ಬಳ್ಳಿ: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, ಹುಬ್ಬಳ್ಳಿಯಲ್ಲಿ ಮಹಿಳೆಯ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದೆ. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮಹಿಳೆಯ ಮೇಲೆ ಇಬ್ಬರು ಕಾಮುಕರು ಅತ್ಯಾಚಾರವೆಸಗಿದ್ದಾರೆ. ಕೃತ್ಯದ ವಿಡಿಯೋಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟು ವಿಕೃತಿ ಮೆರೆದಿದ್ದಾರೆ. ಸದ್ಯ ಸಂತ್ರಸ್ತ ಮಹಿಳೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

Read More

ಈ ‘ಮ್ಯಾಜಿಕ್ ಗಂಜಿ’ಯನ್ನು ವಾರಕ್ಕೆ ಮೂರು ಬಾರಿ ಕುಡಿಯಿರಿ. ಇಂದಿನ ವೇಗದ ಜೀವನಶೈಲಿಯಲ್ಲಿ, ತೂಕ ಹೆಚ್ಚಾಗುವುದು ಮತ್ತು ಅಧಿಕ ರಕ್ತದ ಸಕ್ಕರೆ ಮಟ್ಟಗಳು ಸಾಮಾನ್ಯ ಸಮಸ್ಯೆಗಳಾಗಿ ಮಾರ್ಪಟ್ಟಿವೆ. ತೂಕ ಇಳಿಸಿಕೊಳ್ಳಲು ಅನೇಕ ಜನರು ಕಠಿಣ ವ್ಯಾಯಾಮ ಮತ್ತು ಆಹಾರಕ್ರಮವನ್ನು ಅನುಸರಿಸುತ್ತಿದ್ದರೂ, ದೀರ್ಘಕಾಲದವರೆಗೆ ಅವುಗಳನ್ನು ಕಾಪಾಡಿಕೊಳ್ಳುವುದು ಸವಾಲಾಗಿ ಪರಿಣಮಿಸುತ್ತಿದೆ. ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಬಾರ್ಲಿ ಮತ್ತು ಹುರುಳಿ (ಕೊಳ್ಳು) ಬಳಸಿ ತಯಾರಿಸುವ ಗಂಜಿ ಅತ್ಯುತ್ತಮ ಆಯ್ಕೆಯಾಗಿದೆ. ಈ ಪೌಷ್ಟಿಕಾಂಶ ಭರಿತ ಕಾಂಜಿ ದೇಹದ ತೂಕವನ್ನು ಇಳಿಸಲು ಸಹಾಯ ಮಾಡುವುದಲ್ಲದೆ, ಸಂಪೂರ್ಣ ಆರೋಗ್ಯವನ್ನು ಸುಧಾರಿಸುತ್ತದೆ. ಇದನ್ನು ಪ್ರತಿದಿನ ಬೆಳಿಗ್ಗೆ ಸೇವಿಸುವುದರಿಂದ ಉತ್ತಮ ಫಲಿತಾಂಶ ನಿರೀಕ್ಷಿಸಬಹುದು. ಮಕ್ಕಳು ಕೂಡ ಇದನ್ನು ಸೇವಿಸಬಹುದಾಗಿದೆ. ಆದಾಗ್ಯೂ, ನಮ್ಮ ಆಹಾರ ಪದ್ಧತಿಯಲ್ಲಿ ಸಣ್ಣ ಬದಲಾವಣೆಗಳನ್ನು ಮಾಡುವ ಮೂಲಕ ಈ ಆರೋಗ್ಯ ಸವಾಲುಗಳನ್ನು ಸುಲಭವಾಗಿ ಎದುರಿಸಬಹುದು. ಪ್ರಾಚೀನ ರೀತಿಯಲ್ಲಿ ತಯಾರಿಸಿದ ‘ಮೆಂತ್ಯ-ಬೆಳ್ಳುಳ್ಳಿ ಗಂಜಿ’ ಇದಕ್ಕೆ ಅತ್ಯುತ್ತಮ ಪರಿಹಾರವಾಗಿದೆ. ವಾರಕ್ಕೆ ಮೂರು ಬಾರಿ ಈ ವಿಶೇಷ ಗಂಜಿ ಸೇವಿಸುವುದರಿಂದ ದೇಹದಲ್ಲಿ ಸಂಗ್ರಹವಾಗಿರುವ ಅನಗತ್ಯ…

Read More

ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಗಳ ವಿರುದ್ಧ ನಡೆಯುತ್ತಿರುವ ಯುದ್ಧದಲ್ಲಿ, ಬಾಹ್ಯಾಕಾಶ ವಿಜ್ಞಾನವು ವೈದ್ಯಕೀಯ ಜಗತ್ತನ್ನು ಪರಿವರ್ತಿಸುವ ಮೂಲಕ ಒಂದು ಹೆಜ್ಜೆ ಮುಂದಿಟ್ಟಿದೆ. ನಾಸಾ ಮತ್ತು ಔಷಧೀಯ ಕಂಪನಿ ಮೆರ್ಕ್ ನಡುವಿನ ಐತಿಹಾಸಿಕ ಸಹಯೋಗವು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS) ಅನ್ನು “ಸೂಪರ್ ಲ್ಯಾಬ್” ಆಗಿ ಪರಿವರ್ತಿಸಿದೆ. ಸೂಕ್ಷ್ಮ ಗುರುತ್ವಾಕರ್ಷಣೆಯನ್ನು ಬಳಸಿಕೊಂಡು, ಇಲ್ಲಿ ಕ್ಯಾನ್ಸರ್ ಔಷಧವನ್ನು ಅಭಿವೃದ್ಧಿಪಡಿಸಲಾಗಿದೆ, ಇದು ನೋವಿನ ಮತ್ತು ದೀರ್ಘಾವಧಿಯ ಚಿಕಿತ್ಸೆಯನ್ನು ಕೆಲವೇ ನಿಮಿಷಗಳಿಗೆ ಕಡಿಮೆ ಮಾಡುತ್ತದೆ. ಬಾಹ್ಯಾಕಾಶದಿಂದ ಈ ವೈದ್ಯಕೀಯ ಕ್ರಾಂತಿಯ ಸಂಪೂರ್ಣ ವರದಿ ಇಲ್ಲಿದೆ: 2 ನಿಮಿಷಗಳ ಇಂಜೆಕ್ಷನ್ ಈಗ 2 ಗಂಟೆಗಳ ಡ್ರಿಪ್ ಅನ್ನು ಬದಲಾಯಿಸುತ್ತದೆ. ಕ್ಯಾನ್ಸರ್ ರೋಗಿಗಳಿಗೆ ದೊಡ್ಡ ಪರಿಹಾರವೆಂದರೆ ಅವರು ಇನ್ನು ಮುಂದೆ ಆಸ್ಪತ್ರೆಯ ಹಾಸಿಗೆಗಳಲ್ಲಿ IV ಡ್ರಿಪ್‌ಗಳ ಮೇಲೆ ಗಂಟೆಗಟ್ಟಲೆ ಕಳೆಯಬೇಕಾಗಿಲ್ಲ. ಹಿಂದೆ, ರೋಗಿಗಳು ಇಂಟ್ರಾವೆನಸ್ ಔಷಧಿಗಳನ್ನು ಪಡೆಯಲು ಕ್ಲಿನಿಕ್‌ನಲ್ಲಿ 1 ರಿಂದ 2 ಗಂಟೆಗಳ ಕಾಲ ಕಳೆಯಬೇಕಾಗಿತ್ತು. ಹೊಸ ಆವಿಷ್ಕಾರ: ಬಾಹ್ಯಾಕಾಶದಲ್ಲಿ ರಚಿಸಲಾದ ಔಷಧದ ವಿಶೇಷ “ಸ್ಫಟಿಕಗಳಿಗೆ” ಧನ್ಯವಾದಗಳು, ಇದನ್ನು ಈಗ…

Read More

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಹಾರಾಷ್ಟ್ರದ ಕೊಲ್ಲಾಪುರ DYSP ಅವರ ತಾಯಿ ಹಾಗೂ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ನಗರದ ಹೊರವಲಯದ ತಮಟಕಲ್ಲು ಬ್ರಿಡ್ಜ್ ಬಳಿ ಲಾರಿಗೆ ಕಾರು ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಕಾರಲ್ಲಿದ್ದ ಮೂವರು ಗಾಯಾಳು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಹಾರಾಷ್ಟ್ರದಿಂದ ಬೆಂಗಳೂರು ಕಡೆಗೆ ಹೊರಟಿದ್ದ ಇನ್ನೋವಾ ಕಾರಿನ ಪ್ರಯಾಣಿಕರು, ಮಹಾರಾಷ್ಟ್ರದ ಕೊಲ್ಲಾಪುರ DYSP ವೈಷ್ಣವಿ ಅವರ ಕಾರು ಇದಾಗಿದ್ದು, ಅಪಘಾತದಲ್ಲಿ Dysp ವೈಷ್ಣವಿ ತಾಯಿ ಕಮಲ ಹರಿಬಾಬು(69) ಹಾಗೂ ಕಾರುಚಾಲಕ ರಾಕೇಶ್(40) ಸಾವನ್ನಪ್ಪಿದ್ದಾರೆ. ಗಾಯಾಳು Dysp ವೈಷ್ಣವಿ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆ ಸಿಪಿಐ ಬಾಲಚಂದ್ರ ನಾಯ್ಕ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಸರ್ಕಾರಿ ನೌಕರರ ಹಾಗೂ ಸರ್ಕಾರಿ ಆಸ್ತಿಯ ಸಂರಕ್ಷಣೆಗೆ ಸಂಭಂದಿಸಿದ ಭಾರತೀಯ ನ್ಯಾಯ ಸಂಹಿತೆ 2023 (ಜಿಎನ್ ಎಸ್ – 2023) ರ ಅಡಿಯಲ್ಲಿ ಇರುವ ಕಾಲಂ ಮತ್ತು ನಿಯಮಗಳು ಹಾಗೂ ಸರ್ಕಾರಿ ನೌಕರರು ಕರ್ತವ್ಯ ನಿರ್ವಹಿಸುತ್ತಿರುವಾಗ, ಆದ ಅಪರಾಧಗಳಿಗೆ ಪೋಲಿಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸುವ ಸಲುವಾಗಿ, ದೂರು ಕೊಡಲು ಇರುವ ಕಾಯ್ದೆ – ಕಾಲಂಗಳ ವಿವರ. ರಾಜ್ಯ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಹಲ್ಲೆ ನಡೆಸಿದರೆ ಯಾವ ಶಿಕ್ಷೆ ಇದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಸರ್ಕಾರಿ ನೌಕರರು ಕರ್ತವ್ಯ ನಿರ್ವಹಿಸುತ್ತಿರುವಾಗ ಸರ್ಕಾರಿ ಕೆಲಸಕ್ಕೆ ಅಡಚಣೆ ಮತ್ತು ನೌಕರರ ಮೇಲೆ ಹಲ್ಲೆ ಮಾಡುವುದು- ಕಾಲಂ ಮತ್ತು ಕಾಯ್ದೆ ೧೩೨ ಬಿ.ಎನ್.ಎಸ್. 2 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ. ಸರ್ಕಾರಿ ನೌಕರರಿಗೆ ಭಯಪಡಿಸಿ ಹಣ ವಸೂಲಿ ಮಾಡುವುದು -308 (2) ಬಿ.ಎನ್.ಎಸ್. 3 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ. ಸರ್ಕಾರಿ ನೌಕರರಿಂದ ಇತರೆ ಕಾರಣಗಳಿಂದ ಹಣ…

Read More

ಹಬ್ಬ ಅಥವಾ ಭಾನುವಾರವಾದರೆ ಸಾಕು.. ಮಾಂಸಾಹಾರಿಗಳ ಮನೆಗಳಲ್ಲಿ ಮಟನ್ ಕಡ್ಡಾಯ. ಮಟನ್ ತುಂಡುಗಳ ಜೊತೆಗೆ, ಅನೇಕ ಜನರು ತಲೆಯ ಮಾಂಸ, ಕಾಲುಗಳು, ಬೋಟಿಯನ್ನು ತಿನ್ನಲು ಇಷ್ಟಪಡುತ್ತಾರೆ. ಆದಾಗ್ಯೂ, ಬೋಟಿ ರುಚಿಗೆ ಮಾತ್ರವಲ್ಲದೆ ಆರೋಗ್ಯಕ್ಕೂ ಒಳ್ಳೆಯದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಮೇಕೆಗಳು ಹಸಿರು ಎಲೆಗಳನ್ನು ಮಾತ್ರ ತಿನ್ನುವುದರಿಂದ, ಅವುಗಳ ಕರುಳಿನಲ್ಲಿ ನಮ್ಮ ದೇಹಕ್ಕೆ ಅಗತ್ಯವಿರುವ ಅನೇಕ ಪೋಷಕಾಂಶಗಳು ಸಮೃದ್ಧವಾಗಿವೆ. ಬೋಟಿಯ ಅದ್ಭುತ ಆರೋಗ್ಯ ಪ್ರಯೋಜನಗಳು ರಕ್ತಹೀನತೆಯನ್ನು ಪರಿಶೀಲಿಸಿ: ಮೇಕೆ ಕರುಳುಗಳು ಕಬ್ಬಿಣದಿಂದ ಸಮೃದ್ಧವಾಗಿವೆ. ಇದು ರಕ್ತದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ರಕ್ತ ಪರಿಚಲನೆ ಸುಧಾರಿಸುತ್ತದೆ. ರಕ್ತಹೀನತೆಯಿಂದ ಬಳಲುತ್ತಿರುವವರಿಗೆ ಇದು ಉತ್ತಮ ಆಹಾರವಾಗಿದೆ. ಚರ್ಮ – ಕೂದಲಿನ ಆರೋಗ್ಯ: ಬೋಟಿಯಲ್ಲಿ ಸತುವು ಸಮೃದ್ಧವಾಗಿದೆ. ಇದು ಚರ್ಮವನ್ನು ಪ್ರಕಾಶಮಾನವಾಗಿಡಲು ಮತ್ತು ಕೂದಲು ಬಲವಾಗಿ ಬೆಳೆಯಲು ಸಹಾಯ ಮಾಡುತ್ತದೆ. ಅಲ್ಲದೆ, ಇದರಲ್ಲಿರುವ ವಿಟಮಿನ್ ಎ ಮತ್ತು ಇ ಚರ್ಮದ ಕೋಶಗಳನ್ನು ರಕ್ಷಿಸುತ್ತದೆ. ರೋಗನಿರೋಧಕ ಶಕ್ತಿ: ಇದನ್ನು ಸೇವಿಸುವುದರಿಂದ ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ವೈರಸ್‌ಗಳು…

Read More