Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯದ ಅರಣ್ಯ ಇಲಾಖೆ ರಾಯಭಾರಿಯಾಗಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ನೇಮಕ ಮಾಡಲಾಗುವುದು ಎಂದು ಸಚಿವ ಈಶ್ವರ ಬಿ ಖಂಡ್ರೆ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗುವುದು ಎಂದು ತಿಳಿಸಿದ್ದಾರೆ.. ಅನಿಲ್ ಕುಂಬ್ಳೆ ಅವರಿಗೆ ವನ್ಯಜೀವಿಗಳ ಬಗ್ಗೆ ಅಪಾರ ಕಾಳಜಿಯಿದ್ದು, ಕಾಡಿನ ಬಗ್ಗೆ ಅಪಾರ ಪ್ರೀತಿಯಿದೆ. ಹೀಗಾಗಿ ಅವರು ಯಾವುದೇ ಸಂಭಾವನೆ ಪಡೆಯದೆ ರಾಯಭಾರಿ ಆಗಲು ಸಮ್ಮತಿಸಿದ್ದಾರೆ ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ.
ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಗ್ರೂಪ್- ಎ, ಬಿ, ಸಿ ಮತ್ತು ಡಿ ವೃಂದದ ವೈದ್ಯಾಧಿಕಾರಿ ಮತ್ತು ಇತರೆ ಸಿಬ್ಬಂದಿಗಳ ವರ್ಗಾವಣೆಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕ ನಾಗರೀಕ ಸೇವಾ (ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿ ವರ್ಗಾವಣೆ ನಿಯಂತ್ರಣ) ಕಾಯ್ದೆ, 2011 ಹಾಗೂ ಅದರಡಿ ರಚಿಸಲಾದ ನಿಯಮಾವಳಿ, 2011 ಹಾಗೂ ಕಾಲಕಾಲಕ್ಕೆ ಮಾಡಲಾದ ತಿದ್ದುಪಡಿ ನಿಯಮಾವಳಿಯಂತೆ ಗ್ರೂಪ್-ಎ ವೃಂದದ ಹಿರಿಯ ತಜ್ಞರು, ತಜ್ಞರು, ಉಪ ಮುಖ್ಯ ವೈದ್ಯಾಧಿಕಾರಿ/ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ/ಮುಖ್ಯ ದಂತ ಆರೋಗ್ಯಾಧಿಕಾರಿ/ಹಿರಿಯ ದಂತ ಆರೋಗ್ಯಾಧಿಕಾರಿ/ದಂತ ಆರೋಗ್ಯಾಧಿಕಾರಿ ಮತ್ತು ಗ್ರೂಪ್-ಬಿ, ಸಿ ಮತ್ತು ಡಿ ವೃಂದದ ಸಿಬ್ಬಂದಿಗಳ ವರ್ಗಾವಣೆಯನ್ನು ಸಮಾಲೋಚನೆಯ ಮೂಲಕ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಆದುದರಿಂದ ಇಲಾಖೆಯ ವೈದ್ಯಾಧಿಕಾರಿ ಮತ್ತು ಇತರೆ ಸಿಬ್ಬಂದಿಗಳ ವರ್ಗಾವಣೆಯನ್ನು ಸಮಾಲೋಚನೆ ಮೂಲಕ ಕೈಗೊಂಡು, ಪ್ರಕ್ರಿಯೆಯನ್ನು ದಿನಾಂಕ: 15/06/2025ರೊಳಗಾಗಿ ಪೂರ್ಣಗೊಳಿಸಲು ಸಕ್ಷಮ ಪ್ರಾಧಿಕಾರಗಳಿಗೆ ಅನುಮತಿ ನೀಡುವಂತ ಕೋರಿರುತ್ತಾರೆ. ಮೇಲ್ಕಂಡ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಲಾಗಿದ್ದು, ಈ ಕೆಳಕಂಡಂತ ಅದೇಶಿಸಿದೆ. ಪ್ರಸ್ತಾವನೆಯಲ್ಲಿ…
ಬೆಂಗಳೂರು : ಬಿಜೆಪಿ ಪಕ್ಷದಿಂದ ಶಾಸಕ ಎಸ್ ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಅವರನ್ನು ಉಚ್ಚಾಟನೆ ಮಾಡಿ ಆದೇಶಿಸಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಇಬ್ಬರು ಶಾಸಕರನ್ನು ಬಿಜೆಪಿ ಹೈಕಮಾಂಡ್ 6 ವರ್ಷ ಉಚ್ಚಾಟನೆ ಮಾಡಿ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ.
ಬೆಂಗಳೂರು : ಬಿಜೆಪಿ ಪಕ್ಷದಿಂದ ಶಾಸಕ ಎಸ್ ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಅವರನ್ನು ಉಚ್ಚಾಟನೆ ಮಾಡಿ ಆದೇಶಿಸಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಇಬ್ಬರು ಶಾಸಕರನ್ನು ಬಿಜೆಪಿ ಹೈಕಮಾಂಡ್ 6 ವರ್ಷ ಉಚ್ಚಾಟನೆ ಮಾಡಿ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ.
ಕೋಲಾರ : ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ನಲ್ಲಿ ಅವ್ಯವಹಾರ ಆರೋಪದ ಹಿನ್ನೆಲೆಯಲ್ಲಿ ಕೋಲಾರ ಡಿಸಿಸಿ ಬ್ಯಾಂಕ್ ಸೇರಿ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಮನೆ, ಕೋಲಾರ ಡಿಸಿಸಿ ಬ್ಯಾಂಕ್ ಕಚೇರಿ ಸೇರಿ ಹಲವಡೆ ಎಸ್.ಪಿ ಧನಂಜಯ್ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಕೋಲಾರದ ತಾಲೂಕಿನ ಬ್ಯಾಲಹಳ್ಳಿಯಲ್ಲಿರುವ ಚಿಂತಾಮಣಿ ತಾಲೂಕು ವ್ಯವಸಾಯೋತ್ಪನ್ನ ಬ್ಯಾಂಕ್ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ವಿದ್ಯಾರ್ಥಿನಿಯೊಬ್ಬಳು ಮುಟ್ಟಿನ ರಜೆಗಾಗಿ ತನ್ನ ಪ್ಯಾಂಟ್ ಬಿಚ್ಚುವಂತೆ ವಿಶ್ವವಿದ್ಯಾಲಯದ ಸಿಬ್ಬಂದಿಗಳು ಕೇಳಿರುವ ಆಘಾತಕಾರಿ ಘಟನೆ ನಡೆದಿದೆ. ಬೀಜಿಂಗ್ ತಂತ್ರಜ್ಞಾನ ವಿಶ್ವವಿದ್ಯಾಲಯದ ಗೆಂಗ್ಡಾನ್ ಇನ್ಸ್ಟಿಟ್ಯೂಟ್ನಲ್ಲಿ ನಡೆದ ಈ ಘಟನೆಯು ಆನ್ಲೈನ್ನಲ್ಲಿ ತೀವ್ರ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದೆ ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ ಗೌಪ್ಯತೆ, ಘನತೆ ಮತ್ತು ಲಿಂಗ ತಾರತಮ್ಯದ ಕುರಿತು ಚರ್ಚೆಗಳನ್ನು ಹುಟ್ಟುಹಾಕಿದೆ. ಗೆಂಗ್ಡಾನ್ ಇನ್ಸ್ಟಿಟ್ಯೂಟ್ನ ಮಹಿಳಾ ವಿದ್ಯಾರ್ಥಿನಿಯೊಬ್ಬಳು ಮೇ 15 ರಂದು ಈಗ ವೈರಲ್ ಆಗಿರುವ ವೀಡಿಯೊವನ್ನು ಪೋಸ್ಟ್ ಮಾಡಿದ್ದಾಳೆ, ಮುಟ್ಟಿನ ನೋವಿನಿಂದಾಗಿ ಅನಾರೋಗ್ಯ ರಜೆಗೆ ಅರ್ಜಿ ಸಲ್ಲಿಸಿದ ನಂತರ ವಿಶ್ವವಿದ್ಯಾಲಯದ ಚಿಕಿತ್ಸಾಲಯದಲ್ಲಿ ಬಟ್ಟೆ ಬಿಚ್ಚುವಂತೆ ಕೇಳಲಾಗಿದೆ. “ಹಾಗಾದರೆ ನೀವು ಹೇಳುತ್ತಿರುವುದು, ಮುಟ್ಟಿನ ಸಮಯದಲ್ಲಿ ಪ್ರತಿಯೊಬ್ಬ ಮಹಿಳೆಯೂ ತನ್ನ ಪ್ಯಾಂಟ್ ತೆಗೆದು ರಜೆ ಟಿಪ್ಪಣಿಯನ್ನು ಪಡೆಯಲು ನಿಮಗೆ ತೋರಿಸಬೇಕು?” ಎಂದು ಹೆಸರಿಸದ ವಿದ್ಯಾರ್ಥಿನಿ ವೀಡಿಯೊದಲ್ಲಿ ಕೇಳುತ್ತಿರುವುದು ಕೇಳಿಬರುತ್ತಿದೆ. ಮಹಿಳಾ ಸಿಬ್ಬಂದಿಯೊಬ್ಬರು “ಮೂಲತಃ, ಹೌದು. ಇದು ನನ್ನ ನಿಯಮವಲ್ಲ, ಇದು ಒಂದು ನಿಯಮ” ಎಂದು ಉತ್ತರಿಸಿದ್ದಾರೆ ಎಂದು ಆರೋಪಿಸಲಾಗಿದೆ. ನಂತರ ವಿದ್ಯಾರ್ಥಿನಿ ನಿಯಮದ ಲಿಖಿತ ಪುರಾವೆಯನ್ನು…
ನವದೆಹಲಿ : ಫೋನ್ ಪೇ ಬಳಕೆದಾರರೇ ಎಚ್ಚರ ಮಾರುಕಟ್ಟೆಗೆ ಹೊಸದಾಗಿ ನಕಲಿ ಅಪ್ಲೇಷನ್ ಎಂಟ್ರಿಕೊಟ್ಟಿದ್ದು, ವಂಚಕರು ಪೆಟ್ರೋಲ್ ಪಂಪ್ಗಳು, ವೈನ್ ಅಂಗಡಿಗಳು ಮತ್ತು ಇತರ ಸ್ಥಳಗಳಿಗೆ ಪಾವತಿಗಳನ್ನು ಕಳುಹಿಸುವ ಮೂಲಕ ವ್ಯಾಪಾರಿಗಳನ್ನು ವಂಚಿಸುತ್ತಿದ್ದಾರೆ. ಇದರ ಸಂಪೂರ್ಣ ಪ್ರಕ್ರಿಯೆಯು ಮೂಲ ಅಪ್ಲಿಕೇಶನ್ನಂತೆಯೇ ಇರುತ್ತದೆ, ಆದರೆ ಪಾವತಿ ಯಶಸ್ವಿಯಾಗಿದೆ ಎಂದು ಘೋಷಿಸಿದ ನಂತರ, ಕಳುಹಿಸಿದ ಹಣ ಖಾತೆಗೆ ಜಮೆ ಆಗುವುದಿಲ್ಲ. ಭಾರತಕ್ಕೆ ಯುಪಿಐ ಬಂದ ನಂತರ, ಪಾವತಿ ವಿಧಾನಗಳು ಸಂಪೂರ್ಣವಾಗಿ ಬದಲಾಗಿವೆ. ಈಗ ಜನರು ತಮ್ಮ ಜೇಬಿನಲ್ಲಿ ಹಣವನ್ನು ಹೊತ್ತುಕೊಂಡು ಹೋಗುವ ಬದಲು ಆನ್ಲೈನ್ ಪಾವತಿಗಳಲ್ಲಿ ಹೆಚ್ಚಿನ ನಂಬಿಕೆಯನ್ನು ತೋರಿಸುತ್ತಿದ್ದಾರೆ. ಇದರಿಂದ ಜನರ ಹಣ ಕದಿಯಲ್ಪಡುವ ಭಯ ಇರುವುದಿಲ್ಲ ಮತ್ತು ಚಿಲ್ಲರೆ ನಾಣ್ಯಗಳನ್ನು ಇಟ್ಟುಕೊಳ್ಳುವ ಅಗತ್ಯವಿಲ್ಲ. ಭಾರತದಲ್ಲಿ ಬಹುತೇಕ ಎಲ್ಲಾ ಅಂಗಡಿಯವರು ಈಗ ಈ ಅಪ್ಲಿಕೇಶನ್ಗಳ ಮೂಲಕ ಪಾವತಿ ವಹಿವಾಟುಗಳನ್ನು ಮಾಡುತ್ತಾರೆ, ಆದರೆ ಈಗ ಜನರು ಮಾರುಕಟ್ಟೆಯಲ್ಲಿ ನಕಲಿ ಪಾವತಿ ಅಪ್ಲಿಕೇಶನ್ಗಳನ್ನು ಸಹ ತಂದಿದ್ದಾರೆ. ಇದನ್ನು ಟೆಲಿಗ್ರಾಮ್ನಿಂದ ಡೌನ್ಲೋಡ್ ಮಾಡಲಾಗಿದೆ. ಈ ಅಪ್ಲಿಕೇಶನ್ ಸಂಪೂರ್ಣವಾಗಿ…
ಹಾವೇರಿ : ರಾಜ್ಯದಲ್ಲಿ ಮಹಾಮಳೆಗೆ ಮತ್ತೊಂದು ಬಲಿಯಾಗಿದ್ದು, ನಿರಂತರ ಮಳೆಗೆ ಮನೆ ಗೋಡೆ ಕುಸಿದು ಮಹಿಳೆ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕಿರವಾಡ ಗ್ರಾಮದಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕಿರವಾಡ ಗ್ರಾಮದ ನಿವಾಸಿ ಶಾಂತಮ್ಮ ತಳವಾರ (52) ಮಳೆಗೆ ಮನೆಗೋಡೆ ಕುಸಿದು ಬಿದ್ದ ಪರಿಣಾಮ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಕಂದಾಯ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಠನೆ ನಡೆದಿದೆ.
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಹೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಹೇಳಿಲ್ಲ ಕೆಮ್ಮು, ಶೀತ, ಇನ್ನಿತರ ಖಾಯಿಲೆಯಿಂದ ಬಳಲುತ್ತಿರುವವರು ಹಾಗೂ ಗರ್ಭಿಣಿಯರು ಮಾಸ್ಕ್ ಧರಿಸಿ ಎಂದು ಹೇಳಿದ್ದೇವೆ ಎಂದರು. ಕೇಂದ್ರ ಸರ್ಕಾರ ಯಾವುದೇ ಮಾರ್ಗಸೂಚಿ ಹೊರಡಿಸಿಲ್ಲ. ರಾಜ್ಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಹೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರು : ಜನರಿಗೆ ಸುಗಮ ಆಡಳಿತ ನೀಡುವ ಭಾಗವಾಗಿ ನೋಂದಣಿ ಕಚೇರಿಗಳು ಶನಿವಾರ-ಭಾನುವಾರದ ರಜೆ ದಿನಗಳಲ್ಲೂ ಕಾರ್ಯನಿರ್ವಹಿಸಲಿದ್ದು, ಈ ಸಂಬಂಧ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಸರ್ಕಾರದ ಅಧಿಸೂಚನೆ ಪತ್ರದಲ್ಲಿ ಸೂಚಿಸಿರುವಂತೆ ರಾಜ್ಯದ ಪ್ರತಿಯೊಂದು ಜಿಲ್ಲಾನೋಂದಣಿ ಕಛೇರಿ ವ್ಯಾಪ್ತಿಯಲ್ಲಿನ ಉಪನೋಂದಣಿ ಕಛೇರಿಗಳು ಸದರಿಯ ಆಧಾರದ ಮೇಲೆ 2ನೇ ಶನಿವಾರ, 4ನೇ ಶನಿವಾರ ಮತ್ತು ಭಾನುವಾರಗಳ ರಜಾದಿನಗಳಂದು ಕರ್ತವ್ಯ ನಿರ್ವಹಿಸುವ ಒಂದು ಉಪನೋಂದಣಿ ಕಛೇರಿಗೆ ಮಂಗಳವಾರದ ದಿನವನ್ನು ರಜಾ ದಿನವೆಂದು ಘೋಷಿಸಿ ಆದೇಶಿಸಿರುತ್ತಾರೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಸರ್ಕಾರದ ಅಧಿಸೂಚನೆ ಪತ್ರದಲ್ಲಿ ಸೂಚಿಸಿರುವಂತೆ ರಾಜ್ಯದ ಪ್ರತಿಯೊಂದು ಜಿಲ್ಲಾನೋಂದಣಿ ಕಛೇರಿ ವ್ಯಾಪ್ತಿಯಲ್ಲಿನ ಉಪನೋಂದಣಿ ಕಛೇರಿಗಳು ಸದರಿಯ ಆಧಾರದ ಮೇಲೆ 2ನೇ ಶನಿವಾರ, 4ನೇ ಶನಿವಾರ ಮತ್ತು ಭಾನುವಾರಗಳ ರಜಾದಿನಗಳಂದು ಕರ್ತವ್ಯ ನಿರ್ವಹಿಸುವ ಒಂದು ಉಪನೋಂದಣಿ ಕಛೇರಿಗೆ ಮಂಗಳವಾರದ ದಿನವನ್ನು ರಜಾ ದಿನವೆಂದು ಘೋಷಿಸಿ ಆದೇಶಿಸಿರುತ್ತಾರೆ.