Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಬೋಧನಾ ಗುಣಮಟ್ಟವನ್ನು ಹೆಚ್ಚಿಸಲು ಮತ್ತು ಮಕ್ಕಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸಲು ರಾಜ್ಯ ಸರ್ಕಾರವು ‘8 ಗ್ಯಾರಂಟಿ’ಗಳನ್ನೊಳಗೊಂಡ ವಿಶೇಷ ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಈ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಶಾಲಾ ಶಿಕ್ಷಣದಲ್ಲಿ ದೀರ್ಘಕಾಲದಿಂದ ಇರುವ ಶಿಕ್ಷಕರ ಕೊರತೆ, ಮೂಲಸೌಕರ್ಯಗಳ ಅಭಾವ ಮತ್ತು ಹಳೆಯ ಬೋಧನಾ ವಿಧಾನಗಳಂತಹ ಸಮಸ್ಯೆಗಳನ್ನು ನೀಗಿಸಿ, ಖಾಸಗಿ ಶಾಲೆಗಳೊಂದಿಗೆ ಪೈಪೋಟಿ ನಡೆಸುವಂತೆ ಸರ್ಕಾರಿ ಶಾಲೆಗಳನ್ನು ಸಜ್ಜುಗೊಳಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಶಿಕ್ಷಣಕ್ಕೆ ‘ಅಷ್ಟ ಗ್ಯಾರಂಟಿ’ಗಳು: ಗ್ಯಾರಂಟಿ 1- ಶಿಕ್ಷಕರ ಕೊರತೆ ಇನ್ನಿಲ್ಲ :5ನೇ ತರಗತಿವರೆಗೆ ತರಗತಿಗೊಬ್ಬರು ಹಾಗೂ 6ನೇ ತರಗತಿಯಿಂದ ವಿಷಯಕ್ಕೊಬ್ಬರಂತೆ ಶಿಕ್ಷಕರ ನೇಮಕ ಗ್ಯಾರಂಟಿ 2-ಪೋಷಕರು ಬಯಸುವ ಮಾಧ್ಯಮ : ಎಲ್ಲಾ ಶಾಲೆಗಳಲ್ಲೂ ಕನ್ನಡದ ಜೊತೆಗೆ ಇಂಗ್ಲಿಷ್ ಮಾಧ್ಯಮ ಲಭ್ಯ. ಇಂಗ್ಲಿಷ್ ಬೋಧನೆಗಾಗಿ ಶಿಕ್ಷಕರಿಗೆ ವಿಶೇಷ ತರಬೇತಿ ಗ್ಯಾರಂಟಿ 3-ಉಚಿತ ಸಾರಿಗೆ ಸೌಲಭ್ಯ :ಕೆಪಿಎಸ್ ವಿದ್ಯಾರ್ಥಿಗಳಿಗೆ ಉಚಿತ…
ಬೆಂಗಳೂರು: ರಾಜ್ಯ ಸರ್ಕಾರಿ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ನಿರುದ್ಯೋಗಿಗಳಿಗೆ ದೊಡ್ಡ ಮಟ್ಟದ ಶುಭಸುದ್ದಿ ಸಿಕ್ಕಿದೆ. ರಾಜ್ಯಾದ್ಯಂತ ಖಾಲಿ ಇರುವ ಒಟ್ಟು 56,432 ಹುದ್ದೆಗಳ ನೇಮಕಾತಿಗೆ ಸರ್ಕಾರ ಮುಂದಾಗಿದ್ದು, ಇದರಲ್ಲಿ ಸಿಂಹಪಾಲು ಅಂದರೆ 32,132 ಹುದ್ದೆಗಳು ಕಲ್ಯಾಣ ಕರ್ನಾಟಕ ಭಾಗಕ್ಕೇ ಮೀಸಲಾಗಿವೆ. ರಾಜ್ಯ ಸರ್ಕಾರವು ಒಟ್ಟು 56,432 ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಿದೆ. ಪ್ರಾದೇಶಿಕ ಅಸಮಾನತೆ ನಿವಾರಿಸಲು ಹಾಗೂ ವಿಶೇಷ ಸ್ಥಾನಮಾನದ ಹಿನ್ನೆಲೆಯಲ್ಲಿ, ಒಟ್ಟು ಹುದ್ದೆಗಳಲ್ಲಿ 32,132 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಲಾಗಿದೆ.ಕಿತ್ತೂರು ಕರ್ನಾಟಕ, ಕರಾವಳಿ ಮತ್ತು ಹಳೆ ಮೈಸೂರು ಭಾಗಗಳಿಗೆ ಒಟ್ಟು 24,300 ಹುದ್ದೆಗಳನ್ನು ನಿಗದಿಪಡಿಸಲಾಗಿದೆ. ಖಾಲಿ ಇರುವ ಹುದ್ದೆಗಳ ಪೈಕಿ ಶೇ. 80 ರಷ್ಟು ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಲು ಸಚಿವ ಸಂಪುಟ ಉಪಸಮಿತಿಯು ಸೂಚನೆ ನೀಡಿದೆ. ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆಗಳು? (ಕಲ್ಯಾಣ ಕರ್ನಾಟಕ ಭಾಗಕ್ಕೆ): ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿವಿಧ ಇಲಾಖೆಗಳ ಅಡಿಯಲ್ಲಿ ಹುದ್ದೆಗಳ ಹಂಚಿಕೆ ಈ ಕೆಳಗಿನಂತಿದೆ: ಶಿಕ್ಷಣ ಇಲಾಖೆ: 10,807 ನಗರಾಭಿವೃದ್ಧಿ:…
ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದಲ್ಲಿ ಆರ್ಭಟಿಸುತ್ತಿರುವ ಪೂರ್ವ ಮುಂಗಾರು ಮಳೆ ಚೇತರಿಸಿಕೊಂಡಿದ್ದು, ಇನ್ನೂ ಒಂದು ವಾರ ಕಾಲ ಮುಂದುವರಿಯುವ ಮುನ್ಸೂಚನೆ ಇದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ರಾಜ್ಯದ ಒಣಹವೆ ಮುಂದುವರಿಯಲಿದ್ದು, ಹಗಲಿನ ವೇಳೆ ಬಿಸಿಲನ ತೀವ್ರತೆ ಹೆಚ್ಚಾಗಲಿದೆ. ಆದರೆ, ಸಂಜೆ ಅಥವಾ ರಾತ್ರಿ ವೇಳೆಗೆ ಹಲವೆಡೆ ಮಳೆಯಾಗುವ ಸಾಧ್ಯತೆಗಳಿವೆ. ಮೇ 8ರವರೆಗೂ ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಗುಡುಗು, ಸಿಡಿಲು ಮತ್ತು ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನ ಮಳೆ ಪ್ರಮಾಣ ತುಸು ಕಡಿಮೆಯಾಗಲಿದೆ. ನಂತರ ಮತ್ತೆ ಮಳೆ ಚುರುಕಾಗುವ ನಿರೀಕ್ಷೆಯಿದೆ.ಮಳೆ ಬಿದ್ದ ಕಡೆಗಳಲ್ಲಿ ಕೃಷಿ ಚಟುವಟಿಕೆಗಳು ಬಿರುಸುಗೊಂಡಿದ್ದು, ವಾತಾವರಣವು ಸ್ವಲ್ಪ ಮಟ್ಟಿಗೆ ತಂಪಾಗಿದೆ. ಕಲಬುರಗಿಯಲ್ಲಿ ದಾಖಲೆಯ ತಾಪಮಾನ: 45.4 ಡಿಗ್ರಿ ಸೆಲ್ಸಿಯಸ್ ದಾಖಲು ರಾಜ್ಯದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲ ತಾಪ ತೀವ್ರವಾಗಿದ್ದು, ಜನರ ಜೀವನ…
ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹಿರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಯಮನ) (ಕರ್ನಾಟಕ ತಿದ್ದುಪಡಿ) ಅಧಿನಿಯಮ, 2024 ರಲ್ಲಿ 21 ರ ಅಡಿ ಕಲಂ 4 ರಲ್ಲಿ ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಉತ್ಪನ್ನಗಳ ಬಳಕೆಯ ನಿಷೇಧಿಸಲಾಗಿದೆ. ಯಾರೇ ವ್ಯಕ್ತಿಯು ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಉತ್ಪನ್ನವನ್ನು ಬಳಸತಕ್ಕದ್ದಲ್ಲ. ಬಳಿಸಿದ್ದಲ್ಲಿ ಎರಡು ನೂರು ರೂಪಾಯಿಗಳವರೆಗೆ ಇದ್ದ ದಂಡ (ಜುಲ್ಮಾನೆಯ)ದ ಬದಲಾಗಿ ಒಂದು ಸಾವಿರ ರೂಪಾಯಿಗಳವರೆಗೆ ದಂಡ (ಜುಲ್ಮಾನೆ) ವನ್ನು ವಿಧಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, 21 ಎ ರ ಆಡಿ ಕಲಂ 4ಎ (ಹುಕ್ಕಾ ಬಾರ್ ನಡೆಸುವುದಕ್ಕಾಗಿ ದಂಡನೆ) ಪ್ರರಕಣದ ಉಪಬಂಧಗಳನ್ನು ಉಲ್ಲಂಘಿಸುವ ಯಾರೇ ವ್ಯಪ್ತಿಯು, ಒಂದು ವರ್ಷಕ್ಕೆ ಕಡಿಮೆಯಿಲ್ಲದ ಆದರೆ ಮೂರು ವರ್ಷಗಳಿಗೆ ವಿಸ್ತರಿಸಬಹುದಾದ ಅವಧಿಗೆ ಕಾರಗೃಹ ವಾಸ ಮತ್ತು 50 ಸಾವಿರ ರೂಪಾಯಿಗಳಿಗಿಂತ ಕಡಿಮೆಯಿಲ್ಲದ ಆದರೆ 01…
ಬೆಂಗಳೂರು : ಸರ್ವೊಚ್ಚ ನ್ಯಾಯಾಲಯದ (ಸುಪ್ರಿಂ ಕೋರ್ಟ) ಅಂಗಳ ತಲುಪಿದ ಯಾವುದೇ ಬಗೆಯ ವ್ಯಾಜ್ಯಗಳ ಪರಿಹಾರಕ್ಕಾಗಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಸರ್ವೋಚ್ಛ ನ್ಯಾಯಾಲಯವು ವಿಶೇಷ ಅಭಿಯಾನ ಹಮ್ಮಿಕೊಂಡಿದೆ ಎಂದು ಹೈಕೋರ್ಟನ ನ್ಯಾಯಮೂರ್ತಿ ಗೌರವಾನ್ವಿತ ಅನು ಶಿವರಾಮ್ ಅವರು ಹೇಳಿದರು. ಬೆಂಗಳೂರಿನ ಹೈಕೋರ್ಟ ಸಭಾಂಗಣದಲ್ಲಿ ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಆಗಸ್ಟ್ 21, 22 ಮತ್ತು 23ರಂದು ಅಭಿಯಾನ ನಡೆಯಲಿದ್ದು, ರಾಜ್ಯದ ಯಾವುದೇ ಭಾಗದಲ್ಲಿನ ಪಕ್ಷಗಾರರು ತಾವು ಇರುವ ಸ್ಥಳದಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸಿ ವ್ಯಾಜ್ಯ ಪರಿಹಾರ ಮಾಡಿಕೊಳ್ಳಬಹುದು. ಪಕ್ಷಗಾರರಿಬ್ಬರು ಒಂದೆಡೆ ಸೇರಿ ವ್ಯಾಜ್ಯ ಪರಿಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ಅಭಿಯಾನ ಹಿನ್ನೆಲೆಯಲ್ಲಿ ಎಲ್ಲ ಕಡೆಗಳಲ್ಲಿ ಈಗಾಗಲೇ 4328 ಕೇಸಗಳನ್ನು ಗುರುತಿಸಿದ್ದೇವೆ. ಜನತೆಯ ಸಮಯ ಮತ್ತು ಖರ್ಚು ವೆಚ್ಚ ಉಳಿಸಬೇಕು ಎಂದು ಯೋಜಿಸಿ ಅಭಿಯಾನ ರೂಪಿಸಲಾಗಿದೆ ಎಂದು ಅವರು ತಿಳಿಸಿದರು. ಸುಪ್ರೀಂ ಕೋರ್ಟನ ನ್ಯಾಯಮೂರ್ತಿಗಳಾದ ಆರ್ ದೇವದಾಸ್ ಅವರು ಮಾತನಾಡಿ, ಈ ಅಭಿಯಾನ ಸರ್ವೊಚ್ಚ ನ್ಯಾಯಾಲಯದ ಐತಿಹಾಸಿಕ ಪ್ರಥಮ…
ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಅಂತಿಮ ಚಿತ್ರಣ ಈಗ ಕುತೂಹಲದ ಘಟ್ಟಕ್ಕೆ ಬಂದು ನಿಂತಿದೆ. ಹೈಕೋರ್ಟ್ ನಿರ್ದೇಶನದಂತೆ ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ ಶಾಸಕ ರಾಜೇಗೌಡ ಅವರ ಮತಗಳ ಸಂಖ್ಯೆಯಲ್ಲಿ ಭಾರಿ ಇಳಿಕೆಯಾಗಿದೆ. ಶನಿವಾರ ಸಂಜೆ ಆರಂಭವಾದ ಮತ ಎಣಿಕೆ ಪ್ರಕ್ರಿಯೆಯು ಮಧ್ಯರಾತ್ರಿಯವರೆಗೂ ಮುಂದುವರಿಯಿತು. ಈ ವೇಳೆ 2023ರ ಚುನಾವಣೆಯ ಸಮಯದಲ್ಲಿ ‘ಸಿಂಧು’ ಎಂದು ಪರಿಗಣಿಸಲಾಗಿದ್ದ ಹಲವು ಮತಗಳು ಈಗ ‘ಅಸಿಂಧು’ ಎಂದು ಘೋಷಿಸಲ್ಪಟ್ಟಿವೆ. ಈ ಹಿಂದೆ 569 ಅಂಚೆ ಮತಗಳನ್ನು ಪಡೆದಿದ್ದ ರಾಜೇಗೌಡರ ಪಟ್ಟಿಯಿಂದ ಬರೋಬ್ಬರಿ 255 ಮತಗಳು ಕಡಿತಗೊಂಡಿವೆ. ಮತಪತ್ರಗಳಲ್ಲಿ ಇಬ್ಬರು ಅಭ್ಯರ್ಥಿಗಳ ಹೆಸರಿನ ಮುಂದೆ ‘ಡಬಲ್ ಟಿಕ್’ ಮಾಡಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಡಿ.ಎನ್. ಜೀವರಾಜ್ ಅವರಿಗೆ ಬಂದಿದ್ದ 692 ಅಂಚೆ ಮತಗಳಲ್ಲಿ ಕೇವಲ 2 ಮತಗಳು ಮಾತ್ರ ತಿರಸ್ಕೃತಗೊಂಡಿವೆ. ಕಾಂಗ್ರೆಸ್ ಆಕ್ರೋಶ ಮತ್ತು ಟ್ಯಾಂಪರಿಂಗ್ ಆರೋಪ ಮರು ಎಣಿಕೆಯ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಕಾಂಗ್ರೆಸ್…
ಬೆಂಗಳೂರು: ರಾಜ್ಯದ ಸಾರಿಗೆ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೇ 20 ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇದರಿಂದಾಗಿ ಮೇ ಮೂರನೇ ವಾರದಿಂದ ರಾಜ್ಯದ ರಸ್ತೆಗಳಲ್ಲಿ ಸರ್ಕಾರಿ ಬಸ್ಗಳ ಸಂಚಾರ ಅನುಮಾನವಾಗಿದ್ದು, ಸಾರ್ವಜನಿಕರು ಹಾಗೂ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ವೇತನ ಹೆಚ್ಚಳ ಮತ್ತು ಬಾಕಿ ಇರುವ ವೇತನದ ಹಿಂಬಾಕಿ ಪಾವತಿ ಕುರಿತು ಸರ್ಕಾರ ಹಾಗೂ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯ ನಡುವೆ ನಡೆದ ಸುಮಾರು 12 ಸುತ್ತಿನ ಮಾತುಕತೆಗಳು ಫಲಪ್ರದವಾಗಿಲ್ಲ. ನೌಕರರ ಬೇಡಿಕೆಗಳಿಗೆ ಸರ್ಕಾರ ನೀಡಿದ ಪ್ರಸ್ತಾವನೆಯನ್ನು ಸಮಿತಿಯು ತಿರಸ್ಕರಿಸಿದ್ದು, ಹೋರಾಟದ ಹಾದಿ ಹಿಡಿಯಲು ನಿರ್ಧರಿಸಿದೆ. ನೌಕರರ ಪ್ರಮುಖ ಬೇಡಿಕೆಗಳು ಇಲ್ಲಿವೆ: ಸಾರಿಗೆ ನೌಕರರ ಸಂಘಟನೆಗಳು ಸರ್ಕಾರದ ಮುಂದೆ ಪ್ರಮುಖವಾಗಿ ಐದು ಬೇಡಿಕೆಗಳನ್ನು ಇಟ್ಟಿವೆ: 38 ತಿಂಗಳ ಹಿಂಬಾಕಿ: ಬಾಕಿ ಇರುವ ಸಂಪೂರ್ಣ 38 ತಿಂಗಳ ವೇತನದ ಹಿಂಬಾಕಿಯನ್ನು ಕೂಡಲೇ ಪಾವತಿಸಬೇಕು. ವೇತನ ಹೆಚ್ಚಳ: 2024ರ ಜನವರಿ 1 ರಿಂದ ಜಾರಿಗೆ ಬರುವಂತೆ…
ಈಗಾಗಲೇ ಗಗನಕ್ಕೇರಿರುವ ಅಡುಗೆ ಅನಿಲ ಮತ್ತು ತರಕಾರಿ ಬೆಲೆಗಳಿಂದ ಕಂಗೆಟ್ಟಿರುವ ಸಾಮಾನ್ಯ ಜನರಿಗೆ ಈಗ ಅಡುಗೆ ಎಣ್ಣೆಯ ಬೆಲೆ ಏರಿಕೆ ‘ಗಾಯದ ಮೇಲೆ ಬರೆ ಎಳೆದಂತೆ’ ಪರಿಣಮಿಸಿದೆ. ಕಳೆದ ಒಂದು ತಿಂಗಳ ಅವಧಿಯಲ್ಲೇ ಅಡುಗೆ ಎಣ್ಣೆಯ ದರ ಸುಮಾರು ಶೇಕಡಾ 22 ರಷ್ಟು ಹೆಚ್ಚಳವಾಗಿದ್ದು, ಮಧ್ಯಮ ಮತ್ತು ಬಡ ವರ್ಗದ ಕುಟುಂಬಗಳ ಬಜೆಟ್ ಪೂರ್ಣವಾಗಿ ಏರುಪೇರಾಗಿದೆ. ಜಾಗತಿಕ ವಿದ್ಯಮಾನಗಳು ಅಡುಗೆ ಮನೆಯ ಮೇಲೆ ನೇರ ಪರಿಣಾಮ ಬೀರುತ್ತಿವೆ. ಸನ್ಫ್ಲವರ್ ಎಣ್ಣೆಯ ಆಮದಿಗಾಗಿ ಭಾರತವು ಪ್ರಮುಖವಾಗಿ ಉಕ್ರೇನ್ ಮತ್ತು ರಷ್ಯಾವನ್ನು ಅವಲಂಬಿಸಿದೆ. ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆ ಮತ್ತು ಯುದ್ಧದ ಪರಿಸ್ಥಿತಿಯಿಂದಾಗಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಅಂತರಾಷ್ಟ್ರೀಯ ಬಿಕ್ಕಟ್ಟು ತಿಳಿಯಾಗುವವರೆಗೂ ಬೆಲೆ ಇಳಿಕೆಯಾಗುವ ಸಾಧ್ಯತೆ ಕಡಿಮೆ ಎಂದು ವ್ಯಾಪಾರಿಗಳು ಅಭಿಪ್ರಾಯಪಟ್ಟಿದ್ದಾರೆ. ಒಂದೆಡೆ ಪೂರೈಕೆಯ ಕೊರತೆಯಿದ್ದರೆ, ಮತ್ತೊಂದೆಡೆ ಕೆಲವು ವ್ಯಾಪಾರಿಗಳು ಇದನ್ನೇ ಬಂಡವಾಳ ಮಾಡಿಕೊಳ್ಳುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬರುತ್ತಿದೆ. ಲಾಭದ ಆಸೆಗೆ ಎಣ್ಣೆಯನ್ನು ದಾಸ್ತಾನು ಮಾಡಿ ಕೃತಕ ಅಭಾವ ಸೃಷ್ಟಿಸಲಾಗುತ್ತಿದೆ. ಕಂಪನಿಗಳ ಅಸಲಿ ಮಾರಾಟದ ಬೆಲೆ…
ಪುಣೆ: ವಿನಾಯಕ ದಾಮೋದರ ಸಾವರ್ಕರ್ ಅವರು ಬ್ರಿಟಿಷ್ ಸರ್ಕಾರಕ್ಕೆ ಒಟ್ಟು ಐದು ಬಾರಿ ಕ್ಷಮಾದಾನದ ಅರ್ಜಿಗಳನ್ನು ಸಲ್ಲಿಸಿದ್ದರು ಎಂಬ ಮಹತ್ವದ ಮಾಹಿತಿಯನ್ನು ಅವರ ಮರಿಮೊಮ್ಮಗ ಸಾತ್ಯಕಿ ಸಾವರ್ಕರ್ ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಪುಣೆಯ ವಿಶೇಷ ನ್ಯಾಯಾಲಯದಲ್ಲಿ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆ ವೇಳೆ ಸಾತ್ಯಕಿ ಈ ಹೇಳಿಕೆ ನೀಡಿದ್ದಾರೆ. ಸಾವರ್ಕರ್ ಅವರು ಗೋವನ್ನು ‘ದೇವರೆಂದು’ ಪೂಜಿಸುವ ಬದಲು, ಅದನ್ನೊಂದು ‘ಉಪಯುಕ್ತ ಪ್ರಾಣಿ’ ಎಂದು ಪರಿಗಣಿಸಿದ್ದರು ಎಂದು ಸಾತ್ಯಕಿ ಕೋರ್ಟ್ಗೆ ತಿಳಿಸಿದರು. ಅಂಡಮಾನ್ ಜೈಲಿನಲ್ಲಿದ್ದಾಗ ಸಾವರ್ಕರ್ ಅವರು ಬ್ರಿಟಿಷರಿಗೆ ಐದು ಬಾರಿ ಕ್ಷಮಾದಾನದ ಅರ್ಜಿಗಳನ್ನು ಸಲ್ಲಿಸಿದ್ದರು. ಆ ಕಾಲಘಟ್ಟದಲ್ಲಿ ರಾಜಕೀಯ ಕೈದಿಗಳು ಇಂತಹ ಅರ್ಜಿಗಳನ್ನು ಸಲ್ಲಿಸುವುದು ಸಾಮಾನ್ಯ ಪ್ರಕ್ರಿಯೆಯಾಗಿತ್ತು ಎಂದು ಅವರು ಸಮರ್ಥಿಸಿಕೊಂಡಿದ್ದಾರೆ. ಎರಡನೇ ಮಹಾಯುದ್ಧದ ಸಮಯದಲ್ಲಿ ಭಾರತೀಯ ಯುವಕರು ಬ್ರಿಟಿಷ್ ಸೇನೆಗೆ ಸೇರ್ಪಡೆಯಾಗಬೇಕೆಂದು ಸಾವರ್ಕರ್ ಕರೆ ನೀಡಿದ್ದರು. ಭಾರತೀಯರು ಮಿಲಿಟರಿ ಮತ್ತು ಶಸ್ತ್ರಾಸ್ತ್ರ ಬಳಕೆಯ ತರಬೇತಿ ಪಡೆಯಬೇಕು, ಇದು ಮುಂದೆ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಾಗ…
ನವದೆಹಲಿ: ದೇಶಾದ್ಯಂತ ಬಿಸಿಲಿನ ಬೇಗೆಯಿಂದ ಕಂಗೆಟ್ಟಿರುವ ಜನತೆಗೆ ಹವಾಮಾನ ಇಲಾಖೆಯು ಸಿಹಿಸುದ್ದಿ ನೀಡಿದೆ. ಈ ವರ್ಷ ಮುಂಗಾರು ಮಾರುತಗಳು ನಿಗದಿತ ಸಮಯಕ್ಕಿಂತ ಮೊದಲೇ ಭಾರತವನ್ನು ಪ್ರವೇಶಿಸುವ ಸಾಧ್ಯತೆಯಿದೆ ಎಂದು ಇಲಾಖೆ ಭವಿಷ್ಯ ನುಡಿದಿದೆ. ಮೇ 14ರಿಂದ ಮೇ 16ರ ಅವಧಿಯಲ್ಲಿ ಮುಂಗಾರು ಮಾರುತಗಳು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ತಲುಪುವ ನಿರೀಕ್ಷೆಯಿದೆ.ಮೇ ತಿಂಗಳಲ್ಲಿ ದೇಶದ ಒಟ್ಟಾರೆ ಮಳೆಯ ಪ್ರಮಾಣವು ವಾಡಿಕೆಗಿಂತ ಹೆಚ್ಚಿರಲಿದೆ. ದೀರ್ಘಾವಧಿಯ ಸರಾಸರಿಗೆ ಹೋಲಿಸಿದರೆ ಈ ಬಾರಿ ಶೇ. 110 ರಷ್ಟು ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ತಾಪಮಾನ ಇಳಿಕೆ: ಅಧಿಕ ಮಳೆಯ ಮುನ್ಸೂಚನೆಯಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಹಗಲಿನ ತಾಪಮಾನವು ಸರಾಸರಿಗಿಂತ ಇಳಿಕೆಯಾಗುವ ಮೂಲಕ ಬಿಸಿಲಿನ ತಾಪ ತಗ್ಗಲಿದೆ. ಪೂರ್ವ ಮತ್ತು ಈಶಾನ್ಯ ಭಾರತದ ಕೆಲವು ಪ್ರದೇಶಗಳಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ. ಇದು ಬಿತ್ತನೆ ಚಟುವಟಿಕೆಗಳ ಮೇಲೆ ಪರಿಣಾಮ ಬೀರಲಿದ್ದು, ಮೇ 5ರವರೆಗೆ ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಈಶಾನ್ಯ ರಾಜ್ಯಗಳಲ್ಲಿ ಗುಡುಗು ಸಹಿತ…














