Author: kannadanewsnow57

ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ (WhatsApp) ಮೂಲಕ ಜನರನ್ನು ಬ್ಲ್ಯಾಕ್ಮೇಲ್ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿವೆ. ಒಂದು ವೇಳೆ ಯಾರಾದರೂ ನಿಮ್ಮನ್ನು ಡಿಜಿಟಲ್ ರೂಪದಲ್ಲಿ ಪೀಡಿಸುತ್ತಿದ್ದರೆ ಅಥವಾ ಬ್ಲ್ಯಾಕ್ಮೇಲ್ ಮಾಡುತ್ತಿದ್ದರೆ, ಗಾಬರಿಯಾಗುವ ಅಗತ್ಯವಿಲ್ಲ. ಈ ಕೆಳಗಿನ ಕ್ರಮಗಳನ್ನು ಅನುಸರಿಸಿ ನೀವು ರಕ್ಷಣೆ ಪಡೆಯಬಹುದು. 1. ಪ್ರತಿಕ್ರಿಯಿಸಬೇಡಿ ಮತ್ತು ತಕ್ಷಣ ಬ್ಲಾಕ್ ಮಾಡಿ ಯಾರಾದರೂ ನಿಮ್ಮನ್ನು ಬ್ಲ್ಯಾಕ್ಮೇಲ್ ಮಾಡಲು ಪ್ರಯತ್ನಿಸಿದರೆ, ಮೊದಲನೆಯದಾಗಿ ಅವರಿಗೆ ಯಾವುದೇ ಪ್ರತಿಕ್ರಿಯೆ ನೀಡಬೇಡಿ. ಅವರು ಕೇಳುವ ಹಣ ಅಥವಾ ಬೇಡಿಕೆಗಳಿಗೆ ಮಣಿಯಬೇಡಿ. ತಕ್ಷಣವೇ ಆ ವ್ಯಕ್ತಿಯ ನಂಬರ್ ಅನ್ನು ಬ್ಲಾಕ್ ಮಾಡಿ. 2. ಸಾಕ್ಷ್ಯಗಳನ್ನು ಸಂಗ್ರಹಿಸಿ (ಸ್ಕ್ರೀನ್ಶಾಟ್) ನಂಬರ್ ಬ್ಲಾಕ್ ಮಾಡುವ ಮೊದಲು, ಅವರು ಕಳುಹಿಸಿದ ಬೆದರಿಕೆ ಸಂದೇಶಗಳು, ಫೋಟೋಗಳು ಅಥವಾ ವಿಡಿಯೋ ಕರೆಗಳ ಸ್ಕ್ರೀನ್ಶಾಟ್ ತೆಗೆದುಕೊಳ್ಳಿ. ದೂರು ದಾಖಲಿಸುವಾಗ ಇದು ಅತ್ಯಂತ ಪ್ರಮುಖ ಸಾಕ್ಷ್ಯವಾಗಲಿದೆ. 3. ಸಹಾಯವಾಣಿ ಸಂಖ್ಯೆ 1930 ನೀವು ಸೈಬರ್ ಅಪರಾಧಕ್ಕೆ ಒಳಗಾಗಿದ್ದರೆ ತಕ್ಷಣವೇ 1930 ಸಂಖ್ಯೆಗೆ ಕರೆ ಮಾಡಿ ದೂರು ನೀಡಬಹುದು. ಇದು ಕೇಂದ್ರ ಸರ್ಕಾರದ…

Read More

ಹೈದರಾಬಾದ್: ಪುಷ್ಪ-2: ದಿ ರೂಲ್ ಚಿತ್ರದ ಪ್ರೀಮಿಯರ್ ಶೋ ವೇಳೆ ನಡೆದ ಕಾಲ್ತುಳಿತ ಮತ್ತು ಮಹಿಳಾ ಅಭಿಮಾನಿಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್ ಸ್ಟಾರ್ ನಟ ಅಲ್ಲು ಅರ್ಜುನ್ಗೆ ಸಂಕಷ್ಟ ಎದುರಾಗಿದೆ. ಹೈದರಾಬಾದ್ನ ನಾಂಪಲ್ಲಿ ನ್ಯಾಯಾಲಯವು ನಟನಿಗೆ ಸಮನ್ಸ್ ಜಾರಿ ಮಾಡಿದ್ದು, ಜೂನ್ ೨೨ರ ಸೋಮವಾರದಂದು ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಕಡಕ್ ಸೂಚನೆ ನೀಡಿದೆ. ಚಿಕ್ಕಡಪಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪಣೆ ಪಟ್ಟಿಯಲ್ಲಿ (ಚಾರ್ಜ್ಶೀಟ್) ಅಲ್ಲು ಅರ್ಜುನ್ ಅವರನ್ನು ಆರೋಪಿ ನಂಬರ್ 11 (A11) ಎಂದು ಉಲ್ಲೇಖಿಸಿದ್ದಾರೆ. ಇನ್ನು ಘಟನೆ ನಡೆದ ಸಂಧ್ಯಾ ಥಿಯೇಟರ್ನ ಆಡಳಿತ ಮಂಡಳಿಯನ್ನು ಪ್ರಮುಖವಾಗಿ 1 ರಿಂದ 10 ರವರೆಗಿನ (A1-A10) ಆರೋಪಿಗಳನ್ನಾಗಿ ಮಾಡಲಾಗಿದೆ. ನಟ ಅಲ್ಲು ಅರ್ಜುನ್ ಮಾತ್ರವಲ್ಲದೆ, ಈ ದುರಂತಕ್ಕೆ ಸಂಬಂಧಿಸಿದಂತೆ ಒಟ್ಟು 19 ಜನರಿಗೆ ನಾಂಪಲ್ಲಿ ಕೋರ್ಟ್ ಸಮನ್ಸ್ ನೀಡಿದೆ. ಏನಿದು ಘಟನೆ? 2024ರ ಡಿಸೆಂಬರ್ 4 ರಂದು ಹೈದರಾಬಾದ್ನ ಆರ್ಟಿಸಿ ಕ್ರಾಸ್ ರೋಡ್ಸ್ನಲ್ಲಿರುವ ಸಂಧ್ಯಾ ಥಿಯೇಟರ್ನಲ್ಲಿ ‘ಪುಷ್ಪ 2’ ಚಿತ್ರದ ವಿಶೇಷ…

Read More

ಬೆಂಗಳೂರು: ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿನ ಮೆಟ್ರಿಕ್-ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ ವಿವಿಧ ಸೌಲಭ್ಯಗಳಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಇಲಾಖೆಯ ಪ್ರಕಟಣೆಯ ಪ್ರಕಾರ, ಅರ್ಹ ವಿದ್ಯಾರ್ಥಿಗಳು ಈ ಕೆಳಗಿನ ಯೋಜನೆಗಳ ಪ್ರಯೋಜನ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ: ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ ಅಲೆಮಾರಿ/ಅರೆಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ ಶುಲ್ಕ ಮರುಪಾವತಿ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಪ್ರಮುಖ ಮಾಹಿತಿ ಹಾಗೂ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31.08.2026 ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ: [suspicious link removed] ಕಾರ್ಯಕ್ರಮಗಳ ವಿವರ, ಅರ್ಹತೆ ಮತ್ತು ಇಲಾಖೆಯ ಮಾಹಿತಿ ವೆಬ್‌ಸೈಟ್: https://bcwd.karnataka.gov.in ಸಹಾಯವಾಣಿ ಸಂಪರ್ಕ ವಿವರಗಳು: ಯಾವುದೇ ಹೆಚ್ಚಿನ ಮಾಹಿತಿ ಅಥವಾ ತಾಂತ್ರಿಕ ತೊಂದರೆಗಳಿದ್ದಲ್ಲಿ ವಿದ್ಯಾರ್ಥಿಗಳು ಕೆಳಗಿನ ಸಹಾಯವಾಣಿ ಸಂಖ್ಯೆಗಳು ಮತ್ತು ಇಮೇಲ್ ಮೂಲಕ ಸಂಪರ್ಕಿಸಬಹುದು: ಇಲಾಖಾ ಸಹಾಯವಾಣಿ ದೂರವಾಣಿ…

Read More

ರೈತರಿಗೆ ಕೇಂದ್ರ ಸರ್ಕಾರವು ಸೂಪರ್ ನ್ಯೂಸ್ ನೀಡಿದೆ. ರೈತರಿಗೆ ನೀಡಲಾಗುವ ಬಹುನಿರೀಕ್ಷಿತ ಪಿಎಂ ಕಿಸಾನ್ (PM-Kisan) ಯೋಜನೆಯ ಹಣವನ್ನು ಜೂನ್ 20 ರಂದು ಬಿಡುಗಡೆ ಮಾಡಲಾಗುತ್ತಿದೆ. 2026-27ರ ಹಣಕಾಸು ವರ್ಷದ ಮೊದಲ ಕಂತಿನ ಹಣವನ್ನು ಶನಿವಾರದಂದು ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತದೆ. ಈ ಹಿಂದೆ 22ನೇ ಕಂತಿನ ಹಣವನ್ನು ಅಸ್ಸಾಂನಿಂದ ಪ್ರಧಾನಿ ನರೇಂದ್ರ ಮೋದಿ ಅವರು ಬಿಡುಗಡೆ ಮಾಡಿದ್ದರು. ಈಗ 23ನೇ ಕಂತಿನ ಹಣವನ್ನು ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಾರಕೇಶ್ವರ್ನಿಂದ ರಿಲೀಸ್ ಮಾಡಲಿದ್ದಾರೆ. ಈ ಯೋಜನೆಯಡಿ ದೇಶದ ಸುಮಾರು 9.44 ಕೋಟಿ ರೈತರ ಖಾತೆಗಳಿಗೆ ಒಟ್ಟು 18,880 ಕೋಟಿ ರೂಪಾಯಿ ಜಮೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಒಂದು ಪ್ರಮುಖ ಪ್ರಕಟಣೆ ಹೊರಡಿಸಿದ್ದು, ಪಿಎಂ ಕಿಸಾನ್ ಹಣವನ್ನು ಪಡೆಯಲು ಫಲಾನುಭವಿಗಳು ಇ-ಕೆವೈಸಿ (e-KYC) ಮಾಡಿಸುವುದು ಕಡ್ಡಾಯ ಎಂದು ತಿಳಿಸಿದೆ. ಒಟಿಪಿ (OTP) ಕಡ್ಡಾಯ ಪಿಎಂ ಕಿಸಾನ್ ಪೋರ್ಟಲ್ ಮೂಲಕ ಒಟಿಪಿ ಆಧಾರಿತ ಇ-ಕೆವೈಸಿ ಮಾಡಿಕೊಳ್ಳಬಹುದು ಎಂದು ಕೇಂದ್ರ ತಿಳಿಸಿದೆ.…

Read More

ಅಡುಗೆ ಮನೆಯಲ್ಲಿ ಪ್ರೆಶರ್ ಕುಕ್ಕರ್ ಬಳಕೆ ಅತ್ಯಂತ ಸಾಮಾನ್ಯ. ಆದರೆ, ನಮ್ಮ ಸಣ್ಣ ನಿರ್ಲಕ್ಷ್ಯ ಅಥವಾ ಅಜಾಗರೂಕತೆ ದೊಡ್ಡ ಅಪಘಾತಕ್ಕೆ ಕಾರಣವಾಗಬಹುದು ಎಂಬುದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಆಘಾತಕಾರಿ ವಿಡಿಯೋವೊಂದು ಸಾಬೀತುಪಡಿಸಿದೆ. ವೈರಲ್ ಆಗಿರುವ ವಿಡಿಯೋದಲ್ಲಿ, ಮಹಿಳೆಯೊಬ್ಬರು ಅಡುಗೆ ಮನೆಯಲ್ಲಿ ಕುಕ್ಕರ್ ಇಟ್ಟು ಕೆಲಸ ಮಾಡುತ್ತಿರುತ್ತಾರೆ. ಆದರೆ ಇದ್ದಕ್ಕಿದ್ದಂತೆ ಗ್ಯಾಸ್ ಮೇಲಿದ್ದ ಪ್ರೆಶರ್ ಕುಕ್ಕರ್ ಬಾಂಬ್‌ನಂತೆ ಭೀಕರವಾಗಿ ಸ್ಫೋಟಗೊಳ್ಳುತ್ತದೆ. ಈ ದುರ್ಘಟನೆಯಲ್ಲಿ ಮಹಿಳೆ ಗಾಯಗೊಂಡಿದ್ದಾರೆ. ಈ ಘಟನೆಯ ಬೆನ್ನಲ್ಲೇ ಅಡುಗೆ ಮನೆಯ ಸುರಕ್ಷತೆಯ ಬಗ್ಗೆ ತಜ್ಞರು ಕೆಲವು ಪ್ರಮುಖ ಎಚ್ಚರಿಕೆಗಳನ್ನು ನೀಡಿದ್ದಾರೆ. ಪ್ರೆಶರ್ ಕುಕ್ಕರ್ ಸ್ಫೋಟಗೊಳ್ಳಲು ಮುಖ್ಯ ಕಾರಣಗಳೇನು ಮತ್ತು ನಾವು ಮಾಡಬಾರದ ತಪ್ಪುಗಳು ಯಾವುವು ಎಂಬ ಮಾಹಿತಿ ಇಲ್ಲಿದೆ: ಕುಕ್ಕರ್ ಸ್ಫೋಟಗೊಳ್ಳಲು ಪ್ರಮುಖ ಕಾರಣಗಳು: ರಬ್ಬರ್ (ಗ್ಯಾಸ್ಕೆಟ್) ಮತ್ತು ವೆಂಟ್ ಪೈಪ್ ನಿರ್ಲಕ್ಷ್ಯ: ಕುಕ್ಕರ್ ಮುಚ್ಚಳದಲ್ಲಿರುವ ವೆಂಟ್ ಪೈಪ್ (ಸೀಟಿ ಕೂರುವ ನಲಿ) ಒಳಗೆ ಅನ್ನ, ಬೇಳೆ ಅಥವಾ ಯಾವುದೇ ಆಹಾರದ ಕಣಗಳು ಸಿಲುಕಿಕೊಂಡರೆ, ಒಳಗಿನ ಹಬೆ (ಪ್ರೆಶರ್)…

Read More

ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿನಾಯಿಗಳ ವ್ಯವಸ್ಥಿತ ನಿರ್ವಹಣೆ, ಸುರಕ್ಷಿತ ಆಹಾರ ಕೇಂದ್ರಗಳ ಗುರುತಿಸುವಿಕೆ, ಸಾರ್ವಜನಿಕರ ಸಹಭಾಗಿತ್ವ ಹಾಗೂ ಪ್ರಾಣಿ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿಯ ಕುರಿತು ಮುಖ್ಯ ಪಶುವೈದ್ಯಾಧಿಕಾರಿ ಡಾ. ಶ್ರೀನಾಥ್ ಅವರ ನೇತೃತ್ವದಲ್ಲಿ ಮಹತ್ವದ ಪರಿಶೀಲನಾ ಸಭೆಯನ್ನು ಪಾಲಿಕೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಯೋಜನೆಗಳ ಅನುಷ್ಠಾನ ಹಾಗೂ ಸಮುದಾಯದ ಪಾಲ್ಗೊಳ್ಳುವಿಕೆ ಕುರಿತು ಚರ್ಚಿಸಲು ಪಾಲಿಕೆಯ 50ಕ್ಕೂ ಹೆಚ್ಚು ಸ್ವಯಂಸೇವಕರು, ಬೀದಿ ನಾಯಿ ಆಹಾರ ಪೂರೈಕೆದಾರರು (ಫೀಡರ್ಸ್) ಹಾಗೂ ಪ್ರಾಣಿ ಹಿತೈಷಿಗಳು ಭಾಗವಹಿಸಿ ಸಲಹೆಗಳನ್ನು ಹಂಚಿಕೊಂಡರು. ಬೀದಿ ನಾಯಿಗಳಿಗೆ ಆಹಾರ ನೀಡುವ ವ್ಯಕ್ತಿಗಳಿಗೆ ತೊಂದರೆ ಕೊಡಬೇಡಿ ಇತ್ತೀಚೆಗಷ್ಟೇ ಜಿಬಿಎ ಮುಖ್ಯ ಆಯುಕ್ತರಾದ ಶ್ರೀ ಮಹೇಶ್ವರಾವ್ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿ, ಬೀದಿನಾಯಿಗಳಿಗೆ ಆಹಾರ ನೀಡುವುದು ಅಪರಾಧವಲ್ಲ ಮತ್ತು ಅದು ಕಾನೂನುಬಾಹಿರವಲ್ಲ ಎಂದು ಸ್ಪಷ್ಟಪಡಿಸಿದ್ದರು. ನಾಯಿಗಳಿಗೆ ನಿರಂತರವಾಗಿ ಆಹಾರ ನೀಡುವ ಪ್ರಾಣಿ ಪಾಲಕರಿಗೆ ಸಾರ್ವಜನಿಕರು ಯಾವುದೇ ರೀತಿಯ ಕಿರುಕುಳ ಅಥವಾ ಅನಗತ್ಯ ತೊಂದರೆ ನೀಡಬಾರದು ಎಂದು ಅವರು ಮನವಿ…

Read More

ಬೆಂಗಳೂರು: ಪೊಲೀಸ್ ಅಧಿಕಾರಿಯೊಬ್ಬರು ದರೋಡೆಕೋರರ ಗ್ಯಾಂಗ್ ಕಟ್ಟಿಕೊಂಡು ಉದ್ಯಮಿಗಳನ್ನು ಹೆದರಿಸಿ ಲಕ್ಷಾಂತರ ರೂಪಾಯಿ ಲೂಟಿ ಮಾಡಿರುವ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ದರೋಡೆ ಪ್ರಕರಣದಲ್ಲಿ ಸಿಐಡಿ ವಿಭಾಗದ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ ಮುಖ್ಯ ಸೂತ್ರಧಾರಿಯಾಗಿದ್ದು, ಸದ್ಯ ಪೊಲೀಸರು ದರೋಡೆಗೆ ಬಳಸಿದ್ದ ಅಧಿಕೃತ ಸಿಐಡಿ ಜೀಪನ್ನು ಜಪ್ತಿ ಮಾಡಿದ್ದಾರೆ. ಕೇರಳ ಮೂಲದ ಉದ್ಯಮಿಗಳು ವ್ಯಾಪಾರ ಮತ್ತು ಟ್ರೇಡಿಂಗ್ ಉದ್ದೇಶಗಳಿಗಾಗಿ ಭಾರಿ ನಗದಿನೊಂದಿಗೆ ಬೆಂಗಳೂರಿಗೆ ಬಂದು ಮಡಿವಾಳದ ಖಾಸಗಿ ಹೋಟೆಲ್‌ ಒಂದರಲ್ಲಿ ತಂಗಿದ್ದರು. ಉದ್ಯಮಿಗಳ ಬಳಿ ದೊಡ್ಡ ಮೊತ್ತದ ಹಣವಿರುವ ಬಗ್ಗೆ ನಿಖರ ಮಾಹಿತಿ ಪಡೆದಿದ್ದ ಸಿಐಡಿ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ, ಹಣ ಸುಲಿಗೆ ಮಾಡಲು ಸ್ಕೆಚ್ ಹಾಕಿದ್ದರು. ಇದಕ್ಕಾಗಿ ಹ್ಯಾರಿಸ್, ಕುಪೇಂದ್ರ, ಶಪಿ ಮತ್ತು ಶಾನಿ ಎಂಬ ನಾಲ್ವರೊಂದಿಗೆ ಸೇರಿ ದರೋಡೆಗೆ ಸಂಚು ರೂಪಿಸಿದ್ದರು. ದಾಳಿಯ ದಿನದಂದು ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ ನೇತೃತ್ವದ ತಂಡವು ಹೋಟೆಲ್ ಮುಂಭಾಗದಲ್ಲಿ ಇಲಾಖೆಯ ಅಧಿಕೃತ…

Read More

ನವದೆಹಲಿ: ಜೂನ್ 21 ರಂದು ನಡೆಯಲಿರುವ NEET UG 2026 ಮರುಪರೀಕ್ಷೆಯ ಹಿನ್ನೆಲೆಯಲ್ಲಿ, ರಾಷ್ಟ್ರೀಯ ವೈದ್ಯಕೀಯ ಆಯೋಗವು (NMC) ದೇಶದ ಎಲ್ಲಾ ವೈದ್ಯಕೀಯ ಕಾಲೇಜುಗಳಿಗೆ ಮಹತ್ವದ ಸಲಹಾ ಪ್ರಕಟಣೆಯನ್ನು ಹೊರಡಿಸಿದೆ. ಪರೀಕ್ಷೆಯ ಪವಿತ್ರತೆ ಮತ್ತು ಪಾರದರ್ಶಕತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕಾಲೇಜುಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಈ ಅಧಿಕೃತ ಪ್ರಕಟಣೆಯಲ್ಲಿ ಸೂಚಿಸಲಾಗಿದೆ. ಪ್ರಮುಖ ಸೂಚನೆಗಳು: ರಜೆ ನೀಡುವಂತಿಲ್ಲ: ಜೂನ್ 20 ಮತ್ತು 21 ರಂದು ಅತ್ಯಂತ ಅನಿವಾರ್ಯ ಅಥವಾ ಅಸಾಧಾರಣ ಸಂದರ್ಭಗಳನ್ನು ಹೊರತುಪಡಿಸಿ, ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ರಜೆ ನೀಡದಂತೆ ವೈದ್ಯಕೀಯ ಕಾಲೇಜುಗಳಿಗೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ಇದು ಪರೀಕ್ಷಾ ಅಕ್ರಮಗಳನ್ನು ತಡೆಯುವ ಮುನ್ನೆಚ್ಚರಿಕೆ ಕ್ರಮವಾಗಿದೆ. ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್: ಈ ಹಿಂದೆ ಕೆಲವು ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳು ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾಗಿರುವ ನಿದರ್ಶನಗಳು ಬೆಳಕಿಗೆ ಬಂದಿರುವುದರಿಂದ, ಪ್ರಸ್ತುತ ವಿದ್ಯಾರ್ಥಿಗಳಿಗೆ ಇಂತಹ ಕಾನೂನುಬಾಹಿರ ಚಟುವಟಿಕೆಗಳಿಂದ ದೂರವಿರುವಂತೆ ತಿಳಿಹೇಳಲು ಕಾಲೇಜುಗಳಿಗೆ ನಿರ್ದೇಶಿಸಲಾಗಿದೆ. ಹೆಚ್ಚಿನ ನಿಗಾ: ಪರೀಕ್ಷಾ ಪ್ರಕ್ರಿಯೆಗೆ ಧಕ್ಕೆ ತರುವ ಯಾವುದೇ ಚಟುವಟಿಕೆಗಳು ನಡೆಯದಂತೆ ಕಾಲೇಜು…

Read More

ಚೆನ್ನೈ: ಕರ್ನಾಟಕದ ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ನೆರೆರಾಜ್ಯ ತಮಿಳುನಾಡು ಸರ್ಕಾರವು ಮತ್ತೊಮ್ಮೆ ತನ್ನ ತೀವ್ರ ವಿರೋಧವನ್ನು ವ್ಯಕ್ತಪಡಿಸಿದೆ. ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೇತೃತ್ವದ ಸರ್ಕಾರವು ವಿಧಾನಸಭೆಯಲ್ಲಿ ಮೇಕೆದಾಟು ಯೋಜನೆ ವಿರುದ್ಧ ಅಧಿಕೃತ ನಿರ್ಣಯವನ್ನು ಮಂಡಿಸಿದ್ದು, ಇದಕ್ಕೆ ಅಲ್ಲಿನ ಎಲ್ಲಾ ರಾಜಕೀಯ ಪಕ್ಷಗಳು ಸರ್ವಾನುಮತದಿಂದ ಬೆಂಬಲ ಸೂಚಿಸಿವೆ. ಯಾವುದೇ ಕಾರಣಕ್ಕೂ ಕರ್ನಾಟಕ ಸರ್ಕಾರವು ಮೇಕೆದಾಟು ಬಳಿ ಕಾವೇರಿ ನದಿಗೆ ಅಡ್ಡಲಾಗಿ ಜಲಾಶಯವನ್ನು ನಿರ್ಮಿಸಬಾರದು ಎಂದು ಈ ನಿರ್ಣಯದಲ್ಲಿ ಬಲವಾಗಿ ಒತ್ತಾಯಿಸಲಾಗಿದೆ. ತಮಿಳುನಾಡು ಸರ್ಕಾರದ ಈ ನಿರ್ಧಾರಕ್ಕೆ ಅಲ್ಲಿನ ವಿರೋಧ ಪಕ್ಷಗಳು ಸಹ ಧ್ವನಿಗೂಡಿಸಿದ್ದು, ಮೇಕೆದಾಟು ಯೋಜನೆ ತಡೆಯಲು ಸರ್ಕಾರದೊಂದಿಗೆ ಕೈಜೋಡಿಸುವುದಾಗಿ ಪ್ರಕಟಿಸಿವೆ. ಮೇಕೆದಾಟು ಯೋಜನೆಯಿಂದ ತಮಿಳುನಾಡಿನ ರೈತರಿಗೆ ಮತ್ತು ಜನಸಾಮಾನ್ಯರಿಗೆ ಮುಂದಿನ ದಿನಗಳಲ್ಲಿ ಆಗಲಿರುವ ನೀರಿನ ಸಮಸ್ಯೆಯ ಕುರಿತು ಅಲ್ಲಿನ ನಾಯಕರು ಸದನದಲ್ಲಿ ಸುದೀರ್ಘವಾಗಿ ಪ್ರಸ್ತಾಪಿಸಿದ್ದಾರೆ. ತಮಿಳುನಾಡು ನಡೆಗೆ ಡಿಕೆಶಿ ತೀವ್ರ ಆಕ್ಷೇಪ ಮತ್ತು ತಿರುಗೇಟು ಇತ್ತ ತಮಿಳುನಾಡು ಸರ್ಕಾರದ ಈ ಏಕಪಕ್ಷೀಯ ನಡೆಗೆ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು…

Read More

ದೇಶದಲ್ಲಿ ದಿನದಿಂದ ದಿನಕ್ಕೆ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಒಟಿಪಿ (OTP) ವಂಚನೆ, ನಕಲಿ ಹೂಡಿಕೆ ಯೋಜನೆಗಳು, ಡಿಜಿಟಲ್ ಅರೆಸ್ಟ್ನಂತಹ ಹೊಸ ತಂತ್ರಗಳ ಮೂಲಕ ಸೈಬರ್ ಅಪರಾಧಿಗಳು ಜನರನ್ನು ವಂಚಿಸುತ್ತಿದ್ದಾರೆ. ಇವರ ಜಾಲಕ್ಕೆ ಬಿದ್ದು ಅನೇಕರು ತಮ್ಮ ಬ್ಯಾಂಕ್ ಖಾತೆಯಲ್ಲಿರುವ ಕಷ್ಟಪಟ್ಟು ಸಂಪಾದಿಸಿದ ಹಣವನ್ನೆಲ್ಲಾ ಕಳೆದುಕೊಳ್ಳುತ್ತಿದ್ದಾರೆ. ಆದರೆ, ಹೀಗೆ ಹಣ ಕಳೆದುಕೊಂಡಾಗ ಯಾರಿಗೆ ದೂರು ನೀಡಬೇಕು, ಹಣವನ್ನು ಹೇಗೆ ವಾಪಸ್ ಪಡೆಯಬೇಕು ಎಂಬುದು ಹಲವರಿಗೆ ತಿಳಿಯುವುದಿಲ್ಲ. ಇದಕ್ಕಾಗಿ ಬ್ಯಾಂಕ್ಗಳು ಮತ್ತು ಪೊಲೀಸ್ ಠಾಣೆಗಳ ಸುತ್ತ ಅಲೆಯುತ್ತಿರುತ್ತಾರೆ. ಆದರೆ ಇನ್ನು ಮುಂದೆ ನೀವು ಎಲ್ಲಿಗೂ ಅಲೆಯುವ ಅಗತ್ಯವಿಲ್ಲ! ಮನೆಯಲ್ಲೇ ಕುಳಿತು ಸೈಬರ್ ವಂಚನೆ ಕುರಿತು ದೂರು ನೀಡುವುದರ ಜೊತೆಗೆ ನಿಮ್ಮ ಹಣವನ್ನು ಮರುಪಾವತಿ ಪಡೆಯಬಹುದು. ಇದಕ್ಕಾಗಿ ಕೇಂದ್ರ ಗೃಹ ಸಚಿವಾಲಯವು ಮೊಬೈಲ್ ರಿಸ್ಟೋರೇಶನ್ ಮಾಡ್ಯೂಲ್ (MRM) ಪೋರ್ಟಲ್ ಅನ್ನು ಪ್ರಾರಂಭಿಸಿದೆ. ಏನಿದು MRM ಪೋರ್ಟಲ್? ಭಾರತೀಯ ಸೈಬರ್ ಕ್ರೈಮ್ ಕೋಆರ್ಡಿನೇಷನ್ ಸೆಂಟರ್ (I4C), ನ್ಯಾಷನಲ್ ಸೈಬರ್ ಕ್ರೈಮ್ ರಿಪೋರ್ಟಿಂಗ್ ಪೋರ್ಟಲ್ನ ಭಾಗವಾಗಿ ಈ…

Read More