Subscribe to Updates
Get the latest creative news from FooBar about art, design and business.
Author: kannadanewsnow57
ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು ಸುವರ್ಣಾಕ್ಷರಗಳಲ್ಲಿ ಬರೆದಿಡುವ ದಿನ. ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಅವರು ಇಂದು ಅದ್ಧೂರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಕೋಲ್ಕತ್ತಾದ ಐತಿಹಾಸಿಕ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಈ ಭವ್ಯ ಸಮಾರಂಭದಲ್ಲಿ, ರಾಜ್ಯಪಾಲ ಆರ್.ಎನ್. ರವಿ ಅವರು ಸುವೇಂದು ಅಧಿಕಾರಿಯವರಿಗೆ ಪದವಿ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು. ಈ ಮೂಲಕ ಅವರು ಬಂಗಾಳದ 9ನೇ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಿದ್ದಾರೆ. https://twitter.com/ANI/status/2052992962498592938?s=20 ಗಣ್ಯರ ಸಮ್ಮುಖದಲ್ಲಿ ಅದ್ಧೂರಿ ಸಮಾರಂಭ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಕೇಂದ್ರದ ಪ್ರಮುಖ ಸಚಿವರು ಆಗಮಿಸಿದ್ದರು. ಅಲ್ಲದೆ, ವಿವಿಧ ರಾಜ್ಯಗಳ ಎನ್ಡಿಎ ಮುಖ್ಯಮಂತ್ರಿಗಳು ಮತ್ತು ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಅಧಿಕಾರಿ ಅಧಿಕಾರ ವಹಿಸಿಕೊಂಡರು. ಅವಿರೋಧ ಆಯ್ಕೆ: ಶುಕ್ರವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುವೇಂದು ಅವರನ್ನು ಶಾಸಕರು ಸರ್ವಾನುಮತದಿಂದ ನಾಯಕರನ್ನಾಗಿ ಆಯ್ಕೆ ಮಾಡಿದ್ದರು. ಹೋರಾಟದ ಪ್ರತಿಫಲ: 2020ರಲ್ಲಿ ತೃಣಮೂಲ…
ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು ಸುವರ್ಣಾಕ್ಷರಗಳಲ್ಲಿ ಬರೆದಿಡುವ ದಿನ. ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಅವರು ಇಂದು ಅದ್ಧೂರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಕೋಲ್ಕತ್ತಾದ ಐತಿಹಾಸಿಕ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಈ ಭವ್ಯ ಸಮಾರಂಭದಲ್ಲಿ, ರಾಜ್ಯಪಾಲ ಆರ್.ಎನ್. ರವಿ ಅವರು ಸುವೇಂದು ಅಧಿಕಾರಿಯವರಿಗೆ ಪದವಿ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು. ಈ ಮೂಲಕ ಅವರು ಬಂಗಾಳದ 9ನೇ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಿದ್ದಾರೆ. ಗಣ್ಯರ ಸಮ್ಮುಖದಲ್ಲಿ ಅದ್ಧೂರಿ ಸಮಾರಂಭ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಕೇಂದ್ರದ ಪ್ರಮುಖ ಸಚಿವರು ಆಗಮಿಸಿದ್ದರು. ಅಲ್ಲದೆ, ವಿವಿಧ ರಾಜ್ಯಗಳ ಎನ್ಡಿಎ ಮುಖ್ಯಮಂತ್ರಿಗಳು ಮತ್ತು ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಅಧಿಕಾರಿ ಅಧಿಕಾರ ವಹಿಸಿಕೊಂಡರು. ಅವಿರೋಧ ಆಯ್ಕೆ: ಶುಕ್ರವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುವೇಂದು ಅವರನ್ನು ಶಾಸಕರು ಸರ್ವಾನುಮತದಿಂದ ನಾಯಕರನ್ನಾಗಿ ಆಯ್ಕೆ ಮಾಡಿದ್ದರು. ಹೋರಾಟದ ಪ್ರತಿಫಲ: 2020ರಲ್ಲಿ ತೃಣಮೂಲ ಕಾಂಗ್ರೆಸ್…
ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು ಮಹತ್ವದ ದಿನ. ಕೋಲ್ಕತ್ತಾದ ಐತಿಹಾಸಿಕ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಆಯೋಜಿಸಲಾದ ಭವ್ಯ ಸಮಾರಂಭದಲ್ಲಿ ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈಗಾಗಲೇ ಕೋಲ್ಕತ್ತಾಗೆ ಆಗಮಿಸಿದ್ದಾರೆ. ಬ್ರಿಗೇಡ್ ಪರೇಡ್ ಮೈದಾನಕ್ಕೆ ಆಗಮಿಸಿದ ಪ್ರಧಾನಿಯವರನ್ನು ಕೇಸರಿ ಕಾರ್ಯಕರ್ತರು ಮತ್ತು ಬೆಂಬಲಿಗರು ಹರ್ಷೋದ್ಗಾರಗಳೊಂದಿಗೆ ಅದ್ಧೂರಿಯಾಗಿ ಸ್ವಾಗತಿಸಿದರು. ಮೈದಾನದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಲಕ್ಷಾಂತರ ಜನರು ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಜಮಾಯಿಸಿದ್ದಾರೆ. ಸುವೇಂದು ಅಧಿಕಾರಿ ಅವರೊಂದಿಗೆ ಹಲವು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. https://twitter.com/ANI/status/2052983275787042852?s=20 https://twitter.com/ANI/status/2052982910505123991?s=20
ಏಲೂರು: ಆಧ್ಯಾತ್ಮಿಕ ಮಾರ್ಗದಲ್ಲಿ ನಡೆಸಬೇಕಾದ ವ್ಯಕ್ತಿಯೊಬ್ಬ ದೇವ ಭಕ್ತಿಯ ಹೆಸರಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಕಾಮವರಪುಕೋಟ ಮಂಡಲದಲ್ಲಿ ಬೆಳಕಿಗೆ ಬಂದಿದೆ. ಕಳ್ಳಚೆರುವು ಪ್ರದೇಶದ ಚೌಟಪಲ್ಲಿ ರಾಂಬಾಬು ಎಂಬ ಪಾದ್ರಿ, ತನ್ನ ಬಳಿಗೆ ಪ್ರಾರ್ಥನೆಗಾಗಿ ಬರುತ್ತಿದ್ದ ಬಡ ಕುಟುಂಬದ 14 ವರ್ಷದ ಬಾಲಕಿಯ ಮೇಲೆ ಕಣ್ಣು ಹಾಕಿದ್ದನು. ದೇವರಿಗೆ ಪ್ರಾರ್ಥನೆ ಸಲ್ಲಿಸುವ ನೆಪದಲ್ಲಿ ಬಾಲಕಿಯನ್ನು ಪುಸಲಾಯಿಸಿ ಸತತವಾಗಿ ಅತ್ಯಾಚಾರ ಎಸಗಿದ್ದಾನೆ. ಈ ವಿಷಯವನ್ನು ಯಾರಿಗಾದರೂ ಹೇಳಿದರೆ ದೇವರು ಶಪಿಸುತ್ತಾನೆ ಎಂದು ಬಾಲಕಿಯನ್ನು ಹೆದರಿಸಿದ್ದರಿಂದ, ಭಯಗೊಂಡ ಬಾಲಕಿ ಇಷ್ಟು ದಿನ ಮೌನವಾಗಿದ್ದಳು ಎಂದು ತಿಳಿದುಬಂದಿದೆ. ಬಾಲಕಿ ಗರ್ಭಿಣಿಯಾಗಿರುವುದನ್ನು ಗಮನಿಸಿದ ಪಾಸ್ಟರ್, ತನ್ನ ಪಾಪಕೃತ್ಯ ಹೊರಬೀಳುವ ಭಯದಿಂದ ಬಾಲಕಿಗೆ ಅತಿಯಾದ ಪ್ರಮಾಣದಲ್ಲಿ ಗರ್ಭನಿರೋಧಕ ಮಾತ್ರೆಗಳನ್ನು ನೀಡಿದ್ದಾನೆ. ಮಾತ್ರೆಗಳ ಅಡ್ಡಪರಿಣಾಮದಿಂದ ಬಾಲಕಿಗೆ ತೀವ್ರ ರಕ್ತಸ್ರಾವವಾಗಿ ಆರೋಗ್ಯ ಕ್ಷೀಣಿಸಿದೆ. ತಕ್ಷಣ ಪೋಷಕರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದಾಗ ವೈದ್ಯಕೀಯ ತಪಾಸಣೆಯಲ್ಲಿ ಅಸಲಿ ವಿಷಯ ಬಯಲಾಗಿದೆ. ಸದ್ಯ ಬಾಲಕಿ ಏಲೂರು…
ಬೆಳಗಾವಿ: ಪ್ರಿಯಕರನೊಂದಿಗೆ ಜೀವನ ನಡೆಸಲು ಸ್ವಂತ ಪತಿಯ ಮನೆಯಲ್ಲೇ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೂಡಲಗಿ ತಾಲೂಕಿನ ಮೂಲದ ಹಸೀನಾ ನದಾಫ್ ಎಂಬಾಕೆಗೆ ಎರಡು ತಿಂಗಳ ಹಿಂದೆಯಷ್ಟೇ ಹೊಸಕೋಟಿ ಗ್ರಾಮದ ಶರೀಫ್ ಎಂಬುವವರ ಜೊತೆ ವಿವಾಹವಾಗಿತ್ತು. ಆದರೆ ಮದುವೆಯ ನಂತರವೂ ಈಕೆ ತನ್ನ ಪ್ರಿಯಕರ ಹಣಮಂತ ಮಾರಾಪೂರ ಜೊತೆ ಸಂಪರ್ಕದಲ್ಲಿದ್ದಳು. ಪ್ರಿಯಕರನ ಜೊತೆ ಓಡಿಹೋಗಲು ಸಂಚು ರೂಪಿಸಿದ ಈಕೆ, ತನ್ನ ಪತಿಯ ಮನೆಯಲ್ಲಿದ್ದ ಸುಮಾರು 21 ಲಕ್ಷ ರೂ. ಮೌಲ್ಯದ 154.6 ಗ್ರಾಂ ಚಿನ್ನಾಭರಣಳನ್ನು ದೋಚಿದ್ದಾಳೆ.ಬಂಧಿತರಿಂದ 11 ಸಾವಿರ ರೂ. ಮೌಲ್ಯದ 45 ಗ್ರಾಂ ಬೆಳ್ಳಿಯ ಆಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮನೆಯಲ್ಲಿ ಕಳ್ಳತನವಾದ ಬಗ್ಗೆ ದಿಲ್ಶಾನ್ ನದಾಫ್ ಎಂಬುವವರು ಕಟಕೋಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ಗಂಭೀರತೆ ಅರಿತ ಪೊಲೀಸರು ತನಿಖೆ ಕೈಗೊಂಡು, ಕೇವಲ 48…
ಶೃಂಗಾರ ಮತ್ತು ಭಾವನಾತ್ಮಕ ಪ್ರೀತಿ ಎನ್ನುವುದು ಕೇವಲ ಯೌವನಕ್ಕೆ ಮಾತ್ರ ಸೀಮಿತ ಎಂಬ ತಪ್ಪು ಕಲ್ಪನೆ ನಮ್ಮ ಸಮಾಜದಲ್ಲಿ ಆಳವಾಗಿ ಬೇರೂರಿದೆ. ವಯಸ್ಸಾದ ಮೇಲೆ ಮೊಮ್ಮಕ್ಕಳೊಂದಿಗೆ ಆಟವಾಡುತ್ತಾ ಕಾಲ ಕಳೆಯುವುದಷ್ಟೇ ಜೀವನ ಎಂದು ಅನೇಕರು ಭಾವಿಸುತ್ತಾರೆ. ವಯಸ್ಸಾದ ದಂಪತಿಗಳು ಕೈ ಹಿಡಿದು ನಡೆದರೆ ನೋಡುವುದಕ್ಕೆ ಚೆಂದ ಎಂದು ಮುರಿಬೀಳುವ ಜನ, ಅವರ ನಡುವೆ ದೈಹಿಕ ಸಾನ್ನಿತ್ಯವಿದೆ ಎಂದರೆ ಮಾತ್ರ ಅದನ್ನೊಂದು ಮುಜುಗರದ ವಿಷಯವಾಗಿ ನೋಡುತ್ತಾರೆ. ಆದರೆ, ಸುಕ್ಕುಗಟ್ಟಿದ ಚರ್ಮ ಅಥವಾ ಬೆಳ್ಳಗಾದ ಕೂದಲು ಪ್ರೀತಿಗೆ ಎಂದಿಗೂ ಅಡ್ಡಿಯಾಗುವುದಿಲ್ಲ. ಮನಸ್ಸಿನಲ್ಲಿ ಪ್ರೀತಿ ಮತ್ತು ಆತ್ಮೀಯತೆ ಇದ್ದರೆ ಜೀವನದ ಎರಡನೇ ಇನ್ನಿಂಗ್ಸ್ನಲ್ಲೂ ಶೃಂಗಾರವು ಒಂದು ಅದ್ಭುತ ಕಾವ್ಯವಾಗಬಲ್ಲದು. 60 ಅಥವಾ 70ರ ಹರೆಯದಲ್ಲೂ ದೈಹಿಕ ಸಾನ್ನಿತ್ಯವು ದಂಪತಿಗಳಿಗೆ ನೆಮ್ಮದಿ ಮತ್ತು ಆನಂದವನ್ನು ನೀಡುತ್ತದೆ. ಈ ಸುಖವನ್ನು ಅನುಭವಿಸಲು ತಜ್ಞರು ಈ ಕೆಳಗಿನ 5 ಪ್ರಮುಖ ಸಲಹೆಗಳನ್ನು ನೀಡಿದ್ದಾರೆ. 1. ನಿಧಾನ ಮತ್ತು ಮೃದುತ್ವಕ್ಕೆ ಆದ್ಯತೆ ವಯಸ್ಸಾಗುತ್ತಿದ್ದಂತೆ ದೈಹಿಕವಾಗಿ ಸ್ಪಂದಿಸುವ ವೇಗ ಕಡಿಮೆಯಾಗುವುದು ಸಹಜ. ವಿಶೇಷವಾಗಿ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಕೊಲ್ಯದಕಟ್ಟ ಎಂಬಲ್ಲಿ ಈ ಘಟನೆ ನಡೆದಿದೆ. ಗುಂಡ್ಯ ಹೊಳೆಯಲ್ಲಿ ಸ್ನಾನ ಮಾಡಲು ನಾಲ್ವರು ತೆರಳಿದ್ದರು. ಈ ವೇಳೆ ಇಬ್ಬರು ವಿದ್ಯಾರ್ಥಿನಿಯರು ಆಳವಾದ ಗುಂಡಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಕುಟ್ರುಪ್ಪಾಡಿ ನಿವಾಸಿ ಸುನೀತಾ (21), ಅರ್ಪಿತಾ (15)ಮೃತಪಟ್ಟ ದುರ್ದೈವಿಗಳು ಯುವತಿಯರು ನೀರಿನಲ್ಲಿ ಮುಳುಗುತ್ತಿದ್ದಂತೆಯೇ ಜೊತೆಯಲ್ಲಿದ್ದವರು ಕಿರುಚಾಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಇಬ್ಬರನ್ನೂ ಉಳಿಸಲು ಪ್ರಯತ್ನಿಸಿದರಾದರೂ, ಅಷ್ಟರಲ್ಲೇ ಅವರು ಮೃತಪಟ್ಟಿದ್ದರು. ಸತತ ಪ್ರಯತ್ನದ ನಂತರ ಇಬ್ಬರ ಮೃತದೇಹಗಳನ್ನು ನದಿಯಿಂದ ಹೊರತೆಗೆಯಲಾಗಿದೆ. ಒಂದೇ ಕುಟುಂಬದ ಇಬ್ಬರು ಹೆಣ್ಣುಮಕ್ಕಳು ಸಾವನ್ನಪ್ಪಿರುವುದು ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಿಸಿದೆ. ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ನವದೆಹಲಿ: ರೈಲು ಪ್ರಯಾಣಿಕರ ದಶಕಗಳ ಕಾಲದ ದೊಡ್ಡ ತಲೆನೋವಿಗೆ ಈಗ ತಂತ್ರಜ್ಞಾನದ ಮದ್ದು ಸಿಕ್ಕಿದೆ. ವೇಯ್ಟಿಂಗ್ ಲಿಸ್ಟ್ನಲ್ಲಿರುವ ಟಿಕೆಟ್ ಕನ್ಫರ್ಮ್ ಆಗುತ್ತದೆಯೇ ಅಥವಾ ಇಲ್ಲವೇ ಎಂಬ ಗೊಂದಲಕ್ಕೆ ಭಾರತೀಯ ರೈಲ್ವೆಯ ಹೊಸ ಕೃತಕ ಬುದ್ಧಿಮತ್ತೆ (AI) ಆಧಾರಿತ ವ್ಯವಸ್ಥೆ ತೆರೆ ಎಳೆಯಲಿದೆ. ಸುಮಾರು 40 ವರ್ಷಗಳ ಹಳೆಯದಾದ ಪ್ಯಾಸೆಂಜರ್ ರಿಸರ್ವೇಶನ್ ಸಿಸ್ಟಮ್ (PRS) ಅನ್ನು ಆಧುನೀಕರಿಸುತ್ತಿರುವ ರೈಲ್ವೆ ಇಲಾಖೆ, ಪ್ರಯಾಣಿಕರ ಅನುಕೂಲಕ್ಕಾಗಿ ಹೈಟೆಕ್ ಸ್ಪರ್ಶ ನೀಡುತ್ತಿದೆ. AI ತಂತ್ರಜ್ಞಾನದಿಂದ ಆಗುವ ಬದಲಾವಣೆಗಳೇನು? 94% ನಿಖರ ಭವಿಷ್ಯ: ಈ ಹಿಂದೆ ಟಿಕೆಟ್ ಕನ್ಫರ್ಮ್ ಆಗುವ ಸಾಧ್ಯತೆಯನ್ನು ಊಹಿಸುವ ನಿಖರತೆ ಕೇವಲ 53% ರಷ್ಟಿತ್ತು. ಆದರೆ ಹೊಸ ಎಐ ಮಾದರಿಯು 94% ನಿಖರತೆಯೊಂದಿಗೆ ನಿಮ್ಮ ಟಿಕೆಟ್ನ ಸ್ಥಿತಿಗತಿಯನ್ನು ಮುನ್ಸೂಚಿಸಲಿದೆ. ಸ್ಮಾರ್ಟ್ ಪ್ರಿಡಿಕ್ಷನ್: ಈ ವ್ಯವಸ್ಥೆಯು ಹಳೆಯ ಬುಕ್ಕಿಂಗ್ ದಾಖಲೆಗಳು, ರದ್ದತಿ ಪ್ಯಾಟರ್ನ್ ಹಾಗೂ ನಿರ್ದಿಷ್ಟ ಮಾರ್ಗದ ಬೇಡಿಕೆಯನ್ನು ಕ್ಷಣಮಾತ್ರದಲ್ಲಿ ವಿಶ್ಲೇಷಿಸುತ್ತದೆ. ನೀವು ಟಿಕೆಟ್ ಕಾಯ್ದಿರಿಸುವಾಗಲೇ ಅದು ಕನ್ಫರ್ಮ್ ಆಗುವ ಸಾಧ್ಯತೆ ಎಷ್ಟಿದೆ ಎಂಬ ಸ್ಪಷ್ಟ…
ರಾಯಚೂರು: ಜಿಲ್ಲೆಯ ಸಿಂಧನೂರು ನಗರದಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಅತಿ ವೇಗವಾಗಿ ಬಂದ ಮಹೀಂದ್ರಾ ಥಾರ್ ವಾಹನವೊಂದು ಕಾಲೇಜು ಮುಗಿಸಿ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಹರಿದ ಪರಿಣಾಮ, ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಂಧನೂರಿನ ಅರಗಿನಮರ ಕ್ಯಾಂಪ್ ನಿವಾಸಿ ಭೂಮಿಕಾ (17) ಮೃತಪಟ್ಟ ದುರ್ದೈವಿ. ಗಾಯಗೊಂಡ ವಿದ್ಯಾರ್ಥಿನಿಯರನ್ನು ಮೇಘನಾ, ಮಹೇಶ್ವರಿ ಮತ್ತು ಜಹೀದಾ ಎಂದು ಗುರುತಿಸಲಾಗಿದ್ದು, ಸದ್ಯ ಇವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.ಕಾಲೇಜು ಮುಗಿಸಿಕೊಂಡು ವಿದ್ಯಾರ್ಥಿನಿಯರು ರಸ್ತೆಯಲ್ಲಿ ನಡೆದು ಹೋಗುತ್ತಿದ್ದರು. ಈ ವೇಳೆ ಚಾಲಕ ವಾಹನವನ್ನು ಅಜಾಗರೂಕತೆಯಿಂದ ರಿವರ್ಸ್ ತೆಗೆಯಲು ಪ್ರಯತ್ನಿಸಿದ್ದಾನೆ.ನಿಯಂತ್ರಣ ತಪ್ಪಿದ ವಾಹನವು ಹಿಂಬದಿಯಲ್ಲಿದ್ದ ವಿದ್ಯಾರ್ಥಿನಿಯರ ಮೇಲೆ ವೇಗವಾಗಿ ಹರಿದಿದೆ. ಡಿಕ್ಕಿಯ ರಭಸಕ್ಕೆ ಭೂಮಿಕಾ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಅಪಘಾತದ ಭೀಕರ ದೃಶ್ಯವು ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಜನರಲ್ಲಿ ನಡುಕ ಹುಟ್ಟಿಸುವಂತಿದೆ. ಚಾಲಕನ ನಿರ್ಲಕ್ಷ್ಯವೇ ಈ ಸಾವಿಗೆ ನೇರ ಕಾರಣ ಎಂಬುದು ಮೇಲ್ನೋಟಕ್ಕೆ ತಿಳಿದುಬರುತ್ತಿದೆ. ಘಟನಾ ಸ್ಥಳಕ್ಕೆ ಸಿಂಧನೂರು ಸಂಚಾರ ಠಾಣೆ…
ಬೆಂಗಳೂರು: ಸುಮಾರು ನಾಲ್ಕು ವರ್ಷಗಳ ಸುದೀರ್ಘ ವಿರಾಮದ ನಂತರ ಸಿಲಿಕಾನ್ ಸಿಟಿಯಲ್ಲಿ ಮತ್ತೆ ಟೋಯಿಂಗ್ ಕಾರ್ಯಾಚರಣೆ ಚುರುಕುಗೊಂಡಿದೆ. ಪುನರಾರಂಭಗೊಂಡ ಕೇವಲ ಒಂದು ತಿಂಗಳ ಅವಧಿಯಲ್ಲಿ ಸಂಚಾರಿ ಪೊಲೀಸರು ಬರೋಬ್ಬರಿ 600ಕ್ಕೂ ಹೆಚ್ಚು ವಾಹನಗಳನ್ನು ಟೋಯಿಂಗ್ ಮಾಡುವ ಮೂಲಕ ನಿಯಮ ಉಲ್ಲಂಘಿಸಿದವರಿಗೆ ಬಿಸಿ ಮುಟ್ಟಿಸಿದ್ದಾರೆ. ಸದ್ಯಕ್ಕೆ ನಗರದ ಮೂರು ಪ್ರಮುಖ ವಲಯಗಳ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದೆ. ಶೀಘ್ರದಲ್ಲೇ ಉಳಿದ ಎರಡು ವಲಯಗಳಿಗೂ ಇದು ವಿಸ್ತರಣೆಯಾಗಲಿದೆ. ಪ್ರತಿದಿನ ಸರಾಸರಿ 60 ರಿಂದ 70 ವಾಹನಗಳನ್ನು ಟೋಯಿಂಗ್ ಮಾಡಲಾಗುತ್ತಿದೆ.ಬೆಂಗಳೂರು ಸಂಚಾರಿ ಪೊಲೀಸರು ಮತ್ತು ಜಿಬಿಎ (GBA) ಸಿಬ್ಬಂದಿ ಜಂಟಿಯಾಗಿ ಈ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಯಾವ ವಾಹನಗಳಿಗೆ ಟೋಯಿಂಗ್ ಭೀತಿ? ಮುಖ್ಯ ರಸ್ತೆಗಳಲ್ಲಿ ಸಂಚಾರಕ್ಕೆ ಅಡ್ಡಿಯುಂಟುಮಾಡುವ ವಾಹನಗಳ ಮೇಲೆ ವಿಶೇಷ ನಿಗಾ ಇಡಲಾಗಿದ್ದು, ಈ ಕೆಳಗಿನ ತಪ್ಪುಗಳಿಗೆ ದಂಡ ವಿಧಿಸಲಾಗುತ್ತಿದೆ. ನೋ ಪಾರ್ಕಿಂಗ್ (No Parking): ನಿಷೇಧಿತ ಸ್ಥಳಗಳಲ್ಲಿ ನಿಲ್ಲಿಸಿರುವ ವಾಹನಗಳು. ಅಡ್ಡಾದಿಡ್ಡಿ ಪಾರ್ಕಿಂಗ್: ಫುಟ್ಪಾತ್ ಅಥವಾ ರಸ್ತೆಯ ಮಧ್ಯೆ ಅಸ್ತವ್ಯಸ್ತವಾಗಿ ನಿಲ್ಲಿಸಿರುವ ವಾಹನಗಳು. ಗಮನಿಸಿ:…













