Author: kannadanewsnow57

ಸಾಮಾನ್ಯವಾಗಿ, ನಾವು ಹೊಸ ಸ್ಮಾರ್ಟ್‌ಫೋನ್ ಖರೀದಿಸುವಾಗ, ಅದು ಹಲವು ವರ್ಷಗಳ ಕಾಲ ಬಾಳಿಕೆ ಬರುತ್ತದೆ ಎಂದು ನಾವು ಭಾವಿಸುತ್ತೇವೆ. ಆದರೆ ಪ್ರತಿಯೊಂದು ಫೋನ್‌ಗೂ ಅವಧಿ ಮುಗಿಯುವ ದಿನಾಂಕವಿದೆ ಎಂದು ನಿಮಗೆ ತಿಳಿದಿದೆಯೇ? ಹೌದು, ಯಾವುದೇ ಎಲೆಕ್ಟ್ರಾನಿಕ್ ಸಾಧನಕ್ಕೂ ನಿಗದಿತ ಜೀವಿತಾವಧಿ ಇರುವಂತೆ, ನಿಮ್ಮ ಫೋನ್‌ಗೂ ಸಹ ಜೀವಿತಾವಧಿ ಇರುತ್ತದೆ. ಒಂದೇ ವ್ಯತ್ಯಾಸವೆಂದರೆ ದಿನಾಂಕವನ್ನು ಪೆಟ್ಟಿಗೆಯ ಮೇಲೆ ಬರೆಯಲಾಗಿಲ್ಲ; ಅದನ್ನು ಅರ್ಥಮಾಡಿಕೊಳ್ಳಲು ಮತ್ತು ಲೆಕ್ಕಾಚಾರ ಮಾಡಲು ಕೆಲವು ಮಾರ್ಗಗಳಿವೆ. ಫೋನ್‌ನ ಮುಕ್ತಾಯ ದಿನಾಂಕದ ಅರ್ಥವೇನು? ಫೋನ್‌ನ ಮುಕ್ತಾಯ ದಿನಾಂಕ ಎಂದರೆ ಅದು ಇದ್ದಕ್ಕಿದ್ದಂತೆ ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ ಎಂದಲ್ಲ. ವಾಸ್ತವವಾಗಿ, ಇದು ನಿಮ್ಮ ಫೋನ್ ಅತ್ಯುತ್ತಮ ಕಾರ್ಯಕ್ಷಮತೆ, ಭದ್ರತಾ ನವೀಕರಣಗಳು ಮತ್ತು ಸಾಫ್ಟ್‌ವೇರ್ ಬೆಂಬಲವನ್ನು ಒದಗಿಸುವ ಅವಧಿಯನ್ನು ಸೂಚಿಸುತ್ತದೆ. ಇದರ ನಂತರ, ಫೋನ್ ಕ್ರಮೇಣ ನಿಧಾನಗೊಳ್ಳುತ್ತದೆ, ಬ್ಯಾಟರಿ ಬಾಳಿಕೆ ಕಡಿಮೆಯಾಗುತ್ತದೆ ಮತ್ತು ಸಿಸ್ಟಮ್ ಭದ್ರತೆ ದುರ್ಬಲವಾಗುತ್ತದೆ. ಫೋನ್‌ನ ಸರಾಸರಿ ಜೀವಿತಾವಧಿ ಎಷ್ಟು? ಸ್ಮಾರ್ಟ್‌ಫೋನ್‌ಗಳನ್ನು ಸಾಮಾನ್ಯವಾಗಿ 3 ರಿಂದ 5 ವರ್ಷಗಳ ನಡುವೆ ಪರಿಗಣಿಸಲಾಗುತ್ತದೆ.…

Read More

ಭಾರತದಲ್ಲಿ ಮೂತ್ರಕೋಶ ಕ್ಯಾನ್ಸರ್ ಗಂಭೀರ ಕಾಯಿಲೆಯಾಗಿ ಮಾರ್ಪಟ್ಟಿದೆ. ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, 2020 ರಲ್ಲಿ ಭಾರತದಲ್ಲಿ 22,548 ಮೂತ್ರಕೋಶ ಕ್ಯಾನ್ಸರ್ ಪ್ರಕರಣಗಳು ವರದಿಯಾಗಿವೆ, ಅದರಲ್ಲಿ 12,353 ಜನರು ಸಾವನ್ನಪ್ಪಿದ್ದಾರೆ. ಏತನ್ಮಧ್ಯೆ, ಇದಕ್ಕೆ ಲಸಿಕೆ ಬಹುಕಾಲದಿಂದ ಕಾಯಲಾಗುತ್ತಿತ್ತು, ಮತ್ತು ಈಗ ರಷ್ಯಾದ ಕಂಪನಿಯೊಂದು ಇದನ್ನು ಅಭಿವೃದ್ಧಿಪಡಿಸಿದೆ, ಇದು ಪರಿಹಾರವನ್ನು ತರುತ್ತಿದೆ. ರಷ್ಯಾದ ‘ಇಮುರಾನ್ ವ್ಯಾಕ್’ ಲಸಿಕೆ ರಷ್ಯಾ ಮೂತ್ರಕೋಶ ಕ್ಯಾನ್ಸರ್ ಲಸಿಕೆ ‘ಇಮುರಾನ್ ವ್ಯಾಕ್’ ಅನ್ನು ಅಭಿವೃದ್ಧಿಪಡಿಸಿದೆ. ಇದನ್ನು ಗಮಲೇಯ ಸಾಂಕ್ರಾಮಿಕ ರೋಗಶಾಸ್ತ್ರ ಮತ್ತು ಸೂಕ್ಷ್ಮ ಜೀವವಿಜ್ಞಾನ ಕೇಂದ್ರವು ಅಭಿವೃದ್ಧಿಪಡಿಸಿದೆ ಮತ್ತು ಜೂನ್‌ನಲ್ಲಿ ನೋಂದಾಯಿಸಲಾಗಿದೆ. ಈ ಲಸಿಕೆಯನ್ನು ಈಗಾಗಲೇ ಕ್ಯಾನ್ಸರ್ ರೋಗಿಗಳಿಗೆ ಶಸ್ತ್ರಚಿಕಿತ್ಸೆಯ ನಂತರದ ಚಿಕಿತ್ಸೆಯಲ್ಲಿ ಬಳಸಲಾಗುತ್ತಿದೆ. ಸಿಐಎಸ್ ದೇಶಗಳಲ್ಲಿ (ಅರ್ಮೇನಿಯಾದಂತಹವು) ಇದಕ್ಕೆ ಹೆಚ್ಚಿನ ಬೇಡಿಕೆಯಿದೆ. ಸ್ಟೇಟ್ ರಿಜಿಸ್ಟರ್ ಆಫ್ ಡ್ರಗ್ಸ್ ಪ್ರಕಾರ, ಎರಡು ಡೋಸ್ ಇಮುರಾನ್ ವ್ಯಾಕ್ ಪ್ಯಾಕ್ ಬೆಲೆ 2,200 ರೂಬಲ್ಸ್‌ಗಳಿಗಿಂತ ಸ್ವಲ್ಪ ಕಡಿಮೆ (ಸುಮಾರು ₹2,570-₹2,580). ಮೂತ್ರಕೋಶದ ಕ್ಯಾನ್ಸರ್ ಎಂದರೇನು? ಮೂತ್ರಕೋಶದ ಕ್ಯಾನ್ಸರ್ ಮೂತ್ರಕೋಶದ ಕ್ಯಾನ್ಸರ್…

Read More

ಬೆಂಗಳೂರು : ರಾಜ್ಯದ ಖಾಸಗಿ ಜಮೀನುಗಳಲ್ಲಿ ನೆಲೆಸಿರುವ ದಾಖಲೆರಹಿತ ಜನವಸತಿಗಳನ್ನು ಕಂದಾಯ ಗ್ರಾಮ/ಗ್ರಾಮದ ಭಾಗವಾಗಿ ಪರಿವರ್ತಿಸಿ ಅಲ್ಲಿಯ ನಿವಾಸಿಗಳಿಗೆ ಹಕ್ಕು ಪತ್ರವನ್ನು ನೀಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ನೆಲೆಗೊಂಡಿರುವ ಜನವಸತಿಗಳ ಪೈಕಿ ಹಲವಾರು ಜನವಸತಿಗಳು ವಿಶೇಷವಾಗಿ ಲಂಬಾಣಿ ತಾಂಡ, ಗೊಲ್ಲರಹಟ್ಟಿ, ವಡ್ಡರಹಟ್ಟಿ, ನಾಯಕರ ಹಟ್ಟಿ, ಕುರುಬರಹಟ್ಟಿ, ಹಾಡಿ, ಮಜರೆ, ದೊಡ್ಡಿ, ಪಾಳ್ಯ, ಕ್ಯಾಂಪ್, ಕಾಲೋನಿ ಇತ್ಯಾದಿ, ಹೆಸರುಗಳಿಂದ ಗುರುತಿಸಲ್ಪಟ್ಟಿರುವ ಜನವಸತಿಗಳು ದಾಖಲೆರಹಿತವಾಗಿಯೇ ಸಮಾಜದ ಮುಖ್ಯ ವಾಹಿನಿಗೆ ಬರದೇ ಉಳಿದುಕೊಂಡಿರುತ್ತವೆ. ಇಂತಹ ಜನವಸತಿಗಳನ್ನು ಕಂದಾಯ ಗ್ರಾಮಗಳಾಗಿ ಅಥವಾ ಅಸ್ತಿತ್ವದಲ್ಲಿರುವ ಕಂದಾಯ ಗ್ರಾಮದ ಭಾಗವಾಗಿ ಪರಿವರ್ತಿಸಿ ಅಲ್ಲಿಯ ನಿವಾಸಿಗಳಿಗೆ ವಾಸ್ತವ್ಯದ ಹಕ್ಕು ದಾಖಲೆಗಳನ್ನು ಒದಗಿಸಿ, ಅಂತಹ ಕುಟುಂಬಗಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿರುತ್ತದೆ. ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಕಾಲಕಾಲಕ್ಕೆ ಉಲ್ಲೇಖಗಳನ್ವಯ ಸರ್ಕಾರವು ಮಾರ್ಗಸೂಚಿಗಳನ್ನು ಹೊರಡಿಸಿರುತ್ತದೆ. ಸರ್ಕಾರವು ಕರ್ನಾಟಕ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ಕಲಂ 38-ಎ ಮತ್ತು ನಿಯಮ 9-ಸಿ ಸೇರ್ಪಡೆಗೊಳಿಸುವ ಮೂಲಕ…

Read More

ಆಂಧ್ರಪ್ರದೇಶ : ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ನರಸರಾವ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ವೈದ್ಯರ ನಿರ್ಲಕ್ಷ್ಯದ ಪರಾಕಾಷ್ಠೆಯಾಗಿರುವ ಅತ್ಯಂತ ಭಯಾನಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕುಟುಂಬ ಯೋಜನಾ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರ ದೇಹದಲ್ಲಿ ಶಸ್ತ್ರಚಿಕಿತ್ಸಾ ಬ್ಲೇಡ್ ಉಳಿದಿರುವ ಘಟನೆ ಸಂಚಲನ ಮೂಡಿಸಿದೆ. ನರಸರಾವ್‌ ಪೇಟೆಯ ಬಾಲಯ್ಯ ನಗರದ ರಮಾದೇವಿ (22) ಅವರನ್ನು ಕುಟುಂಬ ಯೋಜನಾ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಮಾದೇವಿಗೆ ಡಾ. ನಾರಾಯಣ ಸ್ವಾಮಿ ಮತ್ತು ಅವರ ಸಿಬ್ಬಂದಿ ಶಸ್ತ್ರಚಿಕಿತ್ಸೆ ನಡೆಸಿದರು. ಆದರೆ, ಶಸ್ತ್ರಚಿಕಿತ್ಸೆಯ ನಂತರ ಅವರಿಗೆ ತೀವ್ರ ನೋವು ಕಾಣಿಸಿಕೊಂಡಿತು. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ನೋವು ಸಾಮಾನ್ಯವಾಗಿದೆ ಎಂದು ಸಂತ್ರಸ್ತೆಗೆ ತಿಳಿಸಿ ಮನೆಗೆ ಕಳುಹಿಸಿದರು. ಈ ಅನುಕ್ರಮದಲ್ಲಿ, ನೋವು ಸಹಿಸಲಾಗದ ಸಂತ್ರಸ್ತೆಯನ್ನು ಸ್ಕ್ಯಾನ್ ಮಾಡಿದಾಗ, ಸ್ಕ್ಯಾನಿಂಗ್ ವರದಿಯಲ್ಲಿ ಆಕೆಯ ಯೋನಿಯ ಬಳಿ ಶಸ್ತ್ರಚಿಕಿತ್ಸಾ ಬ್ಲೇಡ್ ಕಂಡುಬಂದಿದೆ. ಇದನ್ನು ನೋಡಿ ಆಘಾತಕ್ಕೊಳಗಾದ ಸಂತ್ರಸ್ತೆಯ ಕುಟುಂಬ ಸದಸ್ಯರು ಮತ್ತು ಸಂಬಂಧಿಕರು ತಮ್ಮ…

Read More

30 ವರ್ಷ ಮೇಲ್ಪಟ್ಟವರು ಪ್ರತಿ 6 ತಿಂಗಳಿಗೊಮ್ಮೆ ರಕ್ತದೊತ್ತಡ, ಸಕ್ಕರೆ ಕಾಯಿಲೆ ಪರೀಕ್ಷೆ ಮಾಡಿಸುವ ಮೂಲಕ ಸದೃಢ ಆರೋಗ್ಯ ಹೊಂದಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು. ಶುಕ್ರವಾರ ಸಂಡೂರು ತಾಲ್ಲೂಕಿನ ವಿಠಲಾಪುರÀ ಮತ್ತು ಮೆಟ್ರಿಕಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು. ಯಾರಿಗಾದರೂ ಬಾಯಿ ಒಣಗಿದಂತೆ ಆಗುವುದು ಅಥವಾ ವಿಪರೀತ ಬಾಯಾರಿಕೆ, ಪದೇ ಪದೇ ಮೂತ್ರ ವಿಸರ್ಜನೆ, ಹಸಿವು ಹೆಚ್ಚಾಗುವುದು, ಮಂದದೃಷ್ಟಿ ಕಾರಣವಿಲ್ಲದೇ ಆಯಾಸ ಕಂಡುಬAದಲ್ಲಿ ತಕ್ಷಣ ವೈದ್ಯರ ಬಳಿ ತೆರಳಿ ಪರಿಕ್ಷೀಸಿಕೊಳ್ಳಬೇಕು. 30 ವರ್ಷ ಮೇಲ್ಪಟ್ಟವರು ಪ್ರತಿ 6 ತಿಂಗಳಿಗೊಮ್ಮೆ ರಕ್ತದೊತ್ತಡ, ಸಕ್ಕರೆ ಕಾಯಿಲೆ ಪರೀಕ್ಷೆ ಮಾಡಿಸುವ ಮೂಲಕ ಸದೃಢ ಆರೋಗ್ಯ ಹೊಂದಬಹುದಾಗಿದೆ ಎಂದು ತಿಳಿಸಿದರು. 30 ರಿಂದ 59 ವರ್ಷ ಹೆಚ್ಚಿನ ಸಾವುಗಳಿಗೆ ಅಸಾಂಕ್ರಾಮಿಕ ರೋಗಗಳೇ ಕಾರಣವಾಗಿವೆ. 2026 ರ ಹೊತ್ತಿಗೆ ದೇಶದಲ್ಲಿ 75 ಮಿಲಿಯನ್ ಮಧುಮೇಹಿಗಳು ಕಂಡುಬರುವ ಸಾಧ್ಯತೆಯಿದ್ದು, ಇದರಿಂದ…

Read More

ಬೆಂಗಳೂರು : ನಿವೃತ್ತ ಪೊಲೀಸ್ ಅಧಿಕಾರಿ/ಸಿಬ್ಬಂದಿ ರವರುಗಳಿಗೆ ನಿವೃತ್ತ ಆರೋಗ್ಯ ಯೋಜನೆಯಡಿಯಲ್ಲಿ ಆಸ್ಪತ್ರೆಯನ್ನು ಸೇರ್ಪಡೆಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ನಿವೃತ್ತ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳಿಗೆ ಆರೋಗ್ಯ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ, ನಿವೃತ್ತ ಪೊಲೀಸ್ ಅಧಿಕಾರಿ/ಸಿಬ್ಬಂದಿ ಮತ್ತು ಅವರ ಪತಿ/ಪತ್ನಿ ರವರಿಗೆ ಚಿಕಿತ್ಸೆ ಒದಗಿಸುವ ಸಂಬಂಧ ಈ ಕೆಳಕಂಡ ಆಸ್ಪತ್ರೆಯನ್ನು ನಿವೃತ್ತ ಪೊಲೀಸ್ ಆರೋಗ್ಯ ಯೋಜನೆಯಡಿಯಲ್ಲಿ ಸೇರ್ಪಡೆಗೊಳಿಸಲಾಗಿದೆ. ನಯನ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ದಾವಣಗೆರೆ. ಆರೋಗ್ಯ ಭಾಗ್ಯ ಯೋಜನೆಯಡಿಯಲ್ಲಿ ಸೇವಾನಿರತ ಪೊಲೀಸ್ ಅಧಿಕಾರಿ/ಸಿಬ್ಬಂದಿ ಮತ್ತು ಅವರ ಅವಲಂಬಿತ ಕುಟುಂಬದವರಿಗೆ ಸಿ.ಜಿ.ಹೆಚ್.ಎಸ್ ದರದಲ್ಲಿ ಚಿಕಿತ್ಸೆ ಒದಗಿಸಲು ಒಪ್ಪಿದ್ದು, ಅದೇ ರೀತಿ ನಿವೃತ್ತ ಪೊಲೀಸ್ ಅಧಿಕಾರಿ/ಸಿಬ್ಬಂದಿ ಮತ್ತು ಅವರ ಪತಿ/ಪತ್ನಿ ರವರಿಗೆ ಚಿಕಿತ್ಸೆ ಒದಗಿಸುವ ಬಗ್ಗೆ ಸಾಮಾನ್ಯ ವೈದ್ಯಕೀಯ ಚಿಕಿತ್ಸೆ ಪ್ರಕ್ರಿಯೆಗೆ ಗರಿಷ್ಠ ಮಿತಿ ಒಂದು ವರ್ಷಕ್ಕೆ ರೂ.1.50 ಲಕ್ಷ, ವಿಶೇಷ ಹಾಗೂ ಸಂಕೀರ್ಣ ಶಸ್ತ್ರ ಚಿಕಿತ್ಸೆಗಳಲ್ಲಿ (ಇಂಪ್ಲಾಂಟ್, ಸ್ಟಂಟ್ ಸೇರಿ) ಹೆಚ್ಚಿನ ರೂ.1.50 ಲಕ್ಷ (ಒಟ್ಟಾಗಿ…

Read More

ಶಿವಮೊಗ್ಗ : ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ ಬೆಳೆಗಾರರಿಗೆ ಉಂಟಾಗುವ ಬೆಳೆ ನಷ್ಟಕ್ಕೆ ಆರ್ಥಿಕ ಭದ್ರತೆ ನೀಡುವ ಹವಾಮಾನಾಧಾರಿತ ಬೆಳೆ ವಿಮಾ ಯೋಜನೆಯಡಿ ವಿವಿಧ ಕಾರಣಗಳಿಂದಾಗಿ ಸಂತ್ರಸ್ಥರಿಗೆ ಪರಿಹಾರ ಧನ ನೀಡುವಲ್ಲಿ ನ್ಯೂನತೆಗಳುಂಟಾಗಿರುವುದು ಗಮನಕ್ಕೆ ಬಂದಿದ್ದು, ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಂದ ವರದಿ ಪಡೆದು ತ್ವರಿತ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತೋಟಗಾರಿಕೆ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿ, ಮಳೆಮಾಪಕ ಕೇಂದ್ರಗಳ ಮೂಲಕ ಸಂಗ್ರಹಿಸಿದ ಹವಾಮಾನ ದತ್ತಾಂಶಗಳನ್ನು ಆಧರಿಸಿ ವಿಮಾ ಪರಿಹಾರವನ್ನು ಲೆಕ್ಕಾಚಾರ ಮಾಡಲಾಗುತ್ತದೆ. ಆದರೆ, ಜಿಲ್ಲೆಯಲ್ಲಿರುವ 280ಮಳೆ ಮಾಪನ ಕೇಂದ್ರಗಳಲ್ಲಿ ಕೆಲವು ದುರಸ್ತಿಯಲ್ಲಿದ್ದು, ಸರಿಯಾದ ಮಳೆಮಾಪನ ವರದಿ ಹಾಗೂ ದತ್ತಾಂಶ ದೊರೆಯದಿರುವ ಪ್ರದೇಶಗಳಲ್ಲಿನ ರೈತರ ಬೆಳೆಹಾನಿಯ…

Read More

ನವದೆಹಲಿ : ರಷ್ಯಾ ನಾಗರಿಕರಿಗೆ 30 ದಿನ ಉಚಿತ ಟೂರಿಸಂ ವೀಸಾ ನೀಡಲು ನಿರ್ಧಾರಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತ-ರಷ್ಯಾ ಪಾಲುದಾರಿಕೆಯ ಬಲವಾದ ಮತ್ತು ಪ್ರಮುಖ ಆಧಾರಸ್ತಂಭವೆಂದರೆ ಇಂಧನ ಭದ್ರತೆ. ನಾಗರಿಕ ಪರಮಾಣು ಇಂಧನದಲ್ಲಿ ನಮ್ಮ ದಶಕಗಳಷ್ಟು ಹಳೆಯದಾದ ಸಹಕಾರವು ನಮ್ಮ ಹಂಚಿಕೆಯ ಶುದ್ಧ ಇಂಧನ ಆದ್ಯತೆಗಳನ್ನು ಅರಿತುಕೊಳ್ಳುವಲ್ಲಿ ನಿರ್ಣಾಯಕವಾಗಿದೆ. ನಾವು ಈ ಗೆಲುವು-ಗೆಲುವಿನ ಸಹಕಾರವನ್ನು ಮುಂದುವರಿಸುತ್ತೇವೆ. ಪ್ರಪಂಚದಾದ್ಯಂತ ಸುರಕ್ಷಿತ ಮತ್ತು ವೈವಿಧ್ಯಮಯ ಪೂರೈಕೆ ಸರಪಳಿಗಳನ್ನು ಖಚಿತಪಡಿಸಿಕೊಳ್ಳಲು ನಿರ್ಣಾಯಕ ಖನಿಜಗಳಲ್ಲಿನ ನಮ್ಮ ಸಹಕಾರವು ನಿರ್ಣಾಯಕವಾಗಿದೆ. ಇದು ಶುದ್ಧ ಇಂಧನ, ಹೈಟೆಕ್ ಉತ್ಪಾದನೆ ಮತ್ತು ನವಯುಗದ ಕೈಗಾರಿಕೆಗಳಲ್ಲಿ ನಮ್ಮ ಪಾಲುದಾರಿಕೆಗೆ ಬಲವಾದ ಬೆಂಬಲವನ್ನು ನೀಡುತ್ತದೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹಡಗು ನಿರ್ಮಾಣದಲ್ಲಿ ನಮ್ಮ ಆಳವಾದ ಸಹಕಾರವು ಮೇಕ್ ಇನ್ ಇಂಡಿಯಾವನ್ನು ಬಲಪಡಿಸುವ ಸಾಮರ್ಥ್ಯವನ್ನು ಹೊಂದಿದೆ. ಇದು ನಮ್ಮ ಗೆಲುವು-ಗೆಲುವಿನ ಸಹಕಾರದ ಮತ್ತೊಂದು ಅತ್ಯುತ್ತಮ ಉದಾಹರಣೆಯಾಗಿದೆ, ಇದು ಉದ್ಯೋಗಗಳು, ಕೌಶಲ್ಯಗಳು ಮತ್ತು ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸುತ್ತದೆ.” ಕಳೆದ 8…

Read More

ಬೆಂಗಳೂರು : ಇಡೀ ದಿನ ರಸ್ತೆಯ ಮೇಲೆ ಕರ್ತವ್ಯ ನಿರ್ವಹಿಸುವ ಸಂಚಾರಿ ಪೊಲೀಸರು ಶೌಚಾಲಯಕ್ಕೆ ಹೋಗಲು ತೀವ್ರ ಪರದಾಟ ಅನುಭವಿಸುವುದು ಎಲ್ಲರಿಗೂ ತಿಳಿಸಿದೆ. ಎಲ್ಲೆಡೆ ಸಾರ್ವಜನಿಕ ಶೌಚಾಲಯಗಳು ಲಭ್ಯವಿಲ್ಲದೆ ಇರುವುದರಿಂದ ಮಹಿಳಾ ಟ್ರಾಫಿಕ್ ಪೊಲೀಸರಂತೂ ಬಹಳ ಕಷ್ಟ ಅನುಭವಿಸುತ್ತಾರೆ. ಇದಕ್ಕೆ ಪರಿಹಾರವೆಂಬಂತೆ ಬೆಂಗಳೂರಿನಲ್ಲಿ ಸಂಚಾರಿ ಪೊಲೀಸರಿಗೆ ಇನ್ನುಮುಂದೆ ‘ಹೈಜೀನ್ ಆನ್ ಗೋ’ ಹೆಸರಿನ ಮೊಬೈಲ್ ಟಾಯ್ಲೆಟ್‌ಗಳು ನೈಸರ್ಗಿಕ ಬಾಧೆ ಪೂರೈಸಿಕೊಳ್ಳಲು ಲಭ್ಯವಾಗಲಿವೆ. ರೆನಾಲ್ಟ್ ನಿಸಾನ್ ಟೆಕ್ನಾಲಜಿ ಅಂಡ್ ಬಿಸಿನೆಸ್ ಸೆಂಟರ್ ಇಂಡಿಯಾ ಪ್ರೈ.ಲಿ. (ಆರ್‌ಎನ್‌ಟಿಬಿಸಿಐ) ಕಂಪನಿಯ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ಹಣಕಾಸಿನ ನೆರವಿನಡಿ ಹ್ಯಾಂಡ್ ಇನ್ ಹ್ಯಾಂಡ್ ಇಂಡಿಯಾ ಸಂಸ್ಥೆಯು ಸಂಚಾರಿ ಶೌಚಾಲಯಗಳನ್ನು ರೂಪಿಸಿದ್ದು, ಅವುಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಶುಕ್ರವಾರ ಚಾಲನೆ ನೀಡಿದರು. ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಆರಂಭಿಕವಾಗಿ ಮೂರು ‘ಹೈಜೀನ್ ಆನ್ ಗೋ’ ವಾಹನಗಳನ್ನು ಡಾ.ಪರಮೇಶ್ವರ್ ಅವರು ಉದ್ಘಾಟಿಸಿದರು. ಕರ್ನಾಟಕದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ.ಎಂ.ಎ.ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಶ್ರೀ…

Read More

ದಾವಣಗೆರೆ: ರಾಜ್ಯದಲ್ಲಿ ನಾಯಿ ದಾಳಿಗೆ ಮತ್ತೊಂದು ಬಲಿಯಾಗಿದ್ದು, ದಾವಣಗೆರೆಯಲ್ಲಿ ರಾಟ್ ವೀಲರ್ ನಾಯಿ ಕಚ್ಚಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಹೊನ್ನೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ರಾಟ್ ವೀಲರ್ ನಾಯಿಗಳ ದಾಳಿಯಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಅನಿತಾ (38) ಮೃತ ಮಹಿಳೆ. ತಡರಾತ್ರಿ ಜಮೀನಿನಲ್ಲಿ ಮಾಲೀಕ ರಾಟ್ ವೀಲರ್ ನಾಯಿಗಳನ್ನು ಬಿಟ್ಟಿದ್ದರು. ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆ ಮೇಲೆ ರಾಟ್ ವೀಲರ್ ನಾಯಿಗಳು ದಾಳಿ ನಡೆಸಿವೆ. ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಅನಿತಾ ಸಾವನ್ನಪ್ಪಿದ್ದಾರೆ.

Read More