Subscribe to Updates
Get the latest creative news from FooBar about art, design and business.
Author: kannadanewsnow57
ಢಾಕಾ: ಬಾಂಗ್ಲಾದೇಶದಲ್ಲಿರುವ ಎರಡು ಅಪರೂಪದ ಎಮ್ಮೆಗಳು ಈಗ ಜಗತ್ತಿನಾದ್ಯಂತ ಭಾರಿ ಕುತೂಹಲ ಮೂಡಿಸಿದ್ದು, ಅವುಗಳ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಇದಕ್ಕೆ ಮುಖ್ಯ ಕಾರಣ, ಈ ಎಮ್ಮೆಗಳನ್ನು ನೋಡಿದರೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ನೆನಪಾಗುತ್ತಾರಂತೆ! ಹೌದು, ಈ ಕಾರಣಕ್ಕಾಗಿಯೇ ಮಾಲೀಕರು ಈ ಎಮ್ಮೆಗಳಿಗೆ ಆ ಇಬ್ಬರು ಜಾಗತಿಕ ನಾಯಕರ ಹೆಸರನ್ನೇ ಇಟ್ಟಿದ್ದಾರೆ. ಡೊನಾಲ್ಡ್ ಟ್ರಂಪ್ ಎಮ್ಮೆ ಕೇಳಲು ಅಚ್ಚರಿ ಎನಿಸಿದರೂ ಇದು ನಿಜ. ‘ಟ್ರಂಪ್’ ಎಂದು ಹೆಸರಿಡಲಾದ ಈ ಎಮ್ಮೆಯ ಮೈಬಣ್ಣ ಹಾಗೂ ತಲೆಗೂದಲಿನ ಬಣ್ಣ ಸ್ವಲ್ಪ ಬಿಳಿ ಮತ್ತು ಹೊಂಬಣ್ಣದ ಮಿಶ್ರಣದಂತಿದೆ. ಅಷ್ಟೇ ಅಲ್ಲದೆ, ಇದರ ಹೇರ್ ಸ್ಟೈಲ್ ಕೂಡ ಥೇಟ್ ಡೊನಾಲ್ಡ್ ಟ್ರಂಪ್ ಅವರ ಶೈಲಿಯಲ್ಲೇ ಇರುವುದು ವಿಶೇಷ. ಸುಮಾರು 700 ಕೆ.ಜಿ. ತೂಕವಿರುವ ಈ ಎಮ್ಮೆ ನೋಡಲು ಅತ್ಯಂತ ವಿಭಿನ್ನವಾಗಿ ಕಾಣುತ್ತದೆ. ನೆತನ್ಯಾಹು ಎಮ್ಮೆ ಇನ್ನೊಂದೆಡೆ, ‘ನೆತನ್ಯಾಹು’ ಎಂದು ಹೆಸರಿಸಲಾದ ಮತ್ತೊಂದು ಎಮ್ಮೆ…
ತುಮಕೂರು: ಸಂಬಂಧಿಕರ ಹುಡುಗನನ್ನು ಪ್ರೀತಿಸುತ್ತಿದ್ದ ಅಪ್ರಾಪ್ತ ಮಗಳನ್ನು ತಂದೆಯೇ ಬಾವಿಗೆ ತಳ್ಳಿ ಕೊಲೆ ಮಾಡಿ, ಶವವನ್ನು ನಿರ್ಜನ ಪ್ರದೇಶದಲ್ಲಿ ಹೂತಿಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ನಿಂಬೆಮರದಹಳ್ಳಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯಾದ ಯುವತಿಯನ್ನು ಮೇಘನಾ (17) ಎಂದು ಗುರುತಿಸಲಾಗಿದ್ದು, ಆಕೆಯ ತಂದೆ ತಿಮ್ಮರಾಯಪ್ಪ ಕೊಲೆ ಆರೋಪಿಯಾಗಿದ್ದಾನೆ. ಮಗಳು ನಾಪತ್ತೆಯಾಗಿದ್ದಾಳೆ ಎಂದು ನಾಟಕವಾಡಿದ್ದ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.ಮೃತ ಮೇಘನಾ ತನ್ನ ತಾಯಿಯ ಕಡೆಯ ಸಂಬಂಧಿಕರ ಹುಡುಗನೊಬ್ಬನನ್ನು ಪ್ರೀತಿಸುತ್ತಿದ್ದಳು. ಇದಕ್ಕೆ ತಂದೆ ತಿಮ್ಮರಾಯಪ್ಪ ತೀವ್ರ ವಿರೋಧ ವ್ಯಕ್ತಪಡಿಸಿದ್ದನು. ಆದರೂ ಮಗಳು ಆತನ ಮಾತನ್ನು ಕೇಳಿರಲಿಲ್ಲ. ಹುಡುಗನ ಮನೆಯವರು ಯುವತಿಗೆ 18 ವರ್ಷ ತುಂಬಿದ ತಕ್ಷಣ ಮದುವೆ ಮಾಡಿಕೊಳ್ಳಲು ಈಗಾಗಲೇ ಸೀರೆ ಮತ್ತು ತಾಳಿಯನ್ನು ಖರೀದಿಸಿದ್ದರು ಎಂದು ಹೇಳಲಾಗಿದೆ. ಇದರಿಂದ ಆಕ್ರೋಶಗೊಂಡ ತಂದೆ, ಏಪ್ರಿಲ್ 16 ರಂದು ಮಗಳನ್ನು ಬಾವಿಗೆ ತಳ್ಳಿ ಕೊಲೆ ಮಾಡಿದ್ದಾನೆ. ಯಾರಿಗೂ ಅನುಮಾನ ಬಾರದಿರಲಿ ಎಂದು ಮೃತದೇಹವನ್ನು ನಿರ್ಜನ ಪ್ರದೇಶದಲ್ಲಿ ಮಣ್ಣು ಮಾಡಿದ್ದನು. ನಂತರ ಮಗಳು ನಾಪತ್ತೆಯಾಗಿದ್ದಾಳೆ…
BIG NEWS : ರಾಜ್ಯದ ಜನತೆಯ ಗಮನಕ್ಕೆ : ಇಲ್ಲಿದೆ `CM,DCM,ಸಚಿವರ ಕೊಠಡಿ ಮತ್ತು ದೂರವಾಣಿ ಸಂಖ್ಯೆಗಳ’ ಅಧಿಕೃತ ಪಟ್ಟಿ.!
ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಎಲ್ಲಾ ಸಚಿವರ ವಿಧಾನಸೌಧ ಮತ್ತು ವಿಕಾಸಸೌಧದ ಕೊಠಡಿ ಸಂಖ್ಯೆಗಳು, ನೇರ ದೂರವಾಣಿ ಹಾಗೂ ಆಂತರಿಕ ಸಂಪರ್ಕ ಸಂಖ್ಯೆಗಳ (Intercom) ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಸಾರ್ವಜನಿಕರು ಹಾಗೂ ಆಡಳಿತಾತ್ಮಕ ಕಾರ್ಯಕಲಾಪಗಳ ಅನುಕೂಲಕ್ಕಾಗಿ ಈ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದ್ದು, ಪ್ರಮುಖ ನಾಯಕರ ಸಂಪರ್ಕ ವಿವರಗಳು ಈ ಕೆಳಗಿನಂತಿವೆ: ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ವಿವರ: ಸಿದ್ದರಾಮಯ್ಯ (ಮಾನ್ಯ ಮುಖ್ಯಮಂತ್ರಿಗಳು): ವಿಧಾನಸೌಧದ ಕೊಠಡಿ ಸಂಖ್ಯೆ 323 ರಲ್ಲಿದ್ದು, ಸಾರ್ವಜನಿಕರು ಇವರನ್ನು 22253414, 22253424, 22200204 ಸೇರಿದಂತೆ ವಿವಿಧ ನೇರ ದೂರವಾಣಿ ಸಂಖ್ಯೆಗಳ ಮೂಲಕ ಹಾಗೂ ಆಂತರಿಕ ಸಂಖ್ಯೆ 3261 ರ ಮೂಲಕ ಸಂಪರ್ಕಿಸಬಹುದಾಗಿದೆ. ಕಾವೇರಿ ನಿವಾಸದ ದೂರವಾಣಿ ಸಂಖ್ಯೆಗಳೂ ಇದರಲ್ಲಿ ಲಭ್ಯವಿವೆ. ಡಿ.ಕೆ. ಶಿವಕುಮಾರ್ (ಮಾನ್ಯ ಉಪ ಮುಖ್ಯಮಂತ್ರಿಗಳು): ವಿಧಾನಸೌಧದ ಕೊಠಡಿ ಸಂಖ್ಯೆ 335, 336, 337-337 ಎ ರಲ್ಲಿದ್ದು, ನೇರ ದೂರವಾಣಿ ಸಂಖ್ಯೆ 22258004 ಹಾಗೂ ಆಂತರಿಕ ಸಂಖ್ಯೆ 3496, 3228 ರ…
ಬೆಂಗಳೂರು: ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ದೀರ್ಘಕಾಲದಿಂದ ಖಾಲಿ ಇರುವ ಶಿಕ್ಷಕರು ಮತ್ತು ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ ಮಹತ್ವದ ಸುತ್ತೋಲೆಯೊಂದನ್ನು ಹೊರಡಿಸಿದೆ. ಏನಿದೆ ಆದೇಶದಲ್ಲಿ? ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಖಾಸಗಿ ಅನುದಾನಿತ ಪ್ರೌಢ ಶಾಲೆಗಳಲ್ಲಿ ದಿನಾಂಕ:31-12-2015 ರೊಳಗೆ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ತೆರವಾದ ಹುದ್ದೆಗಳನ್ನು ಭರ್ತಿ ಮಾಡಲು ಉಲ್ಲೇಖಿತ ಸರ್ಕಾರದ ಆದೇಶಗಳಲ್ಲಿ ಅನುಮತಿ ನೀಡಲಾಗಿರುತ್ತದೆ. ಸದರಿ ಆದೇಶಗಳಂತೆ ಖಾಸಗಿ ಅನುದಾನಿತ ಪ್ರೌಢ ಶಾಲೆಗಳಲ್ಲಿ ದಿನಾಂಕ 31-12-2015ರ ಪೂರ್ವದಲ್ಲಿನ ನಿಯಮಾನುಸಾರ ಅರ್ಹ ಖಾಲಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಪ್ರಸ್ತಾವನೆಯನ್ನು ಸಲ್ಲಿಸಲು ತಿಳಿಸಲಾಗಿರುತ್ತದೆ. ಆದಾಗ್ಯೂ ಹಲವು ಅನುದಾನಿತ ಪ್ರೌಢ ಶಾಲೆಗಳಲ್ಲಿ ದಿನಾಂಕ 31-12-2015ರ ಪೂರ್ವದಲ್ಲಿ ಖಾಲಿಯಾಗಿರುವ ಹುದ್ದೆಗಳು ಭರ್ತಿಯಾಗದೆ ಇದ್ದರೂ ಶಾಲಾ ಆಡಳಿತ ಮಂಡಳಿಯವರು ನಿಯಮಾನುಸಾರ ಅರ್ಹ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಯಾವುದೇ ಪ್ರಸ್ತಾವನೆಗಳು ಸಲ್ಲಿಸಿರುವುದಿಲ್ಲ. ಇದರಿಂದ ಮಕ್ಕಳ ಶೈಕ್ಷಣಿಕ ಪ್ರಗತಿ ಕುಂಠಿತವಾಗಲು ಆಡಳಿತ ಮಂಡಳಿಗಳು ಕಾರಣವಾಗಿರುತ್ತಾರೆ. ಆದ್ದರಿಂದ,…
ಬೆಂಗಳೂರು: ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ (EV) ಬಳಕೆ ದಿನದಿಂದ ದಿನಕ್ಕೆ ರಾಕೆಟ್ ವೇಗದಲ್ಲಿ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಇವಿ ಚಾರ್ಜಿಂಗ್ ಸ್ಟೇಷನ್ ಉದ್ಯಮವು ಅತ್ಯಂತ ಉಜ್ವಲ ಭವಿಷ್ಯವಿರುವ ಮತ್ತು ಭಾರಿ ಲಾಭ ತಂದುಕೊಡುವ ಬಿಸಿನೆಸ್ ಆಗಿ ಹೊರಹೊಮ್ಮುತ್ತಿದೆ. ವಿಶೇಷವಾಗಿ ಮೆಟ್ರೋ ನಗರಗಳು, ರಾಷ್ಟ್ರೀಯ ಹೆದ್ದಾರಿಗಳು, ಪ್ರಮುಖ ಅಪಾರ್ಟ್ಮೆಂಟ್ಗಳು ಮತ್ತು ವಾಣಿಜ್ಯ ಪ್ರದೇಶಗಳಲ್ಲಿ ಇವಿ ಚಾರ್ಜಿಂಗ್ ಸ್ಟೇಷನ್ಗಳಿಗೆ ಭಾರಿ ಬೇಡಿಕೆ ಸೃಷ್ಟಿಯಾಗುತ್ತಿದೆ. ದೀರ್ಘಾವಧಿಯಲ್ಲಿ ಸ್ಥಿರವಾದ ಆದಾಯವನ್ನು ಗಳಿಸಲು ಬಯಸುವವರಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ಈ ಉದ್ಯಮವನ್ನು ಪ್ರಾರಂಭಿಸಲು ಬೇಕಾಗುವ ಪ್ರಮುಖ ಅಗತ್ಯತೆಗಳು, ಹೂಡಿಕೆ ಮತ್ತು ಅರ್ಹತೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಸೂಕ್ತ ಸ್ಥಳದ ಆಯ್ಕೆ ಹೇಗೆ? ಇವಿ ಚಾರ್ಜಿಂಗ್ ಉದ್ಯಮದಲ್ಲಿ ಯಶಸ್ಸು ಗಳಿಸಲು ಪ್ರಮುಖವಾಗಿ ಬೇಕಾಗಿರುವುದು ಸರಿಯಾದ ಸ್ಥಳದ ಆಯ್ಕೆ. ರಾಷ್ಟ್ರೀಯ ಹೆದ್ದಾರಿಗಳು (Highways), ಪೆಟ್ರೋಲ್ ಬಂಕ್ಗಳ ಹತ್ತಿರ, ಶಾಪಿಂಗ್ ಮಾಲ್ಗಳು, ಐಟಿ ಪಾರ್ಕ್ಗಳು, ದೊಡ್ಡ ಅಪಾರ್ಟ್ಮೆಂಟ್ ಸಮುಚ್ಚಯಗಳು ಮತ್ತು ಟ್ಯಾಕ್ಸಿ ಹಬ್ಗಳಿರುವ ಪ್ರದೇಶಗಳಲ್ಲಿ ಗ್ರಾಹಕರ ಸಂಖ್ಯೆ ಹೆಚ್ಚಿರುತ್ತದೆ. ಈ ಉದ್ಯಮಕ್ಕೆ ಕನಿಷ್ಠ…
ಬೆಂಗಳೂರು: ನಗರದಲ್ಲಿ ಮಾನವೀಯತೆ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದ್ದು, ರಸ್ತೆ ಬದಿಯಲ್ಲಿದ್ದ ಹಸುವೊಂದರ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ವಿಕೃತ ಕೃತ್ಯವು ಕಾಟನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆಯ ಸಂಪೂರ್ಣ ದೃಶ್ಯಗಳು ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿವೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ಭಾರಿ ಆಕ್ರೋಶ ವ್ಯಕ್ತವಾಗಿದೆ. ಕಾಟನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಅಕ್ಕಿಪೇಟೆಯಲ್ಲಿ ಮೇ 5ರ ತಡರಾತ್ರಿ ಈ ಘಟನೆ ಸಂಭವಿಸಿದೆ. ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ, ರಸ್ತೆಯ ಬದಿಯಲ್ಲಿ ಕಟ್ಟಿದ್ದ ಹಸುವಿನ ಬಳಿ ಹೋಗಿದ್ದಾನೆ. ಆ ಸಮಯದಲ್ಲಿ ರಸ್ತೆಯಲ್ಲಿ ಜನಸಂದಣಿ ಇಲ್ಲದಿದ್ದನ್ನು ಗಮನಿಸಿದ ಆತ, ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇಡೀ ಕೃತ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ದಾಖಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಕಾಟನ್ಪೇಟೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸ್ವಯಂಪ್ರೇರಿತ (Sua motu) ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಹಾಗೂ ಆರೋಪಿ…
ಜಗಳೂರು: ಮದುವೆಯ ಆಮಿಷವೊಡ್ಡಿ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಆಕೆ ಗರ್ಭಿಣಿಯಾಗಿ ಹೆರಿಗೆಯಾಗುವವರೆಗೂ ಇಡೀ ಕೃತ್ಯವನ್ನು ಮುಚ್ಚಿಟ್ಟಿದ್ದ ಟ್ರ್ಯಾಕ್ಟರ್ ಚಾಲಕನೊಬ್ಬನ ಅಮಾನವೀಯ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಜಗಳೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿ ಆರೋಪಿಯನ್ನು ಬಂಧಿಸಲಾಗಿದೆ.ಚೋಗಳೇರಿ ಹಟ್ಟಿ ಗ್ರಾಮದ ಟ್ರ್ಯಾಕ್ಟರ್ ಚಾಲಕ ಮಂಜಣ್ಣ (30) ಬಂಧಿತ ಆರೋಪಿ. ಕೆಲವು ತಿಂಗಳ ಹಿಂದೆ ಅಪ್ರಾಪ್ತ ಬಾಲಕಿಯು ತೀವ್ರ ಕೈ-ಕಾಲು ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಆದರೆ, ತೀವ್ರ ಮೂಢನಂಬಿಕೆಗೆ ಒಳಗಾಗಿದ್ದ ಆಕೆಯ ಪೋಷಕರು, ಮಗಳಿಗೆ ದೆವ್ವ ಅಥವಾ ಭೂತದ ಗಾಳಿ ಸೋಕಿದೆ ಎಂದು ಭಾವಿಸಿದ್ದರು.ಬಳಿಕ ದೇವಸ್ಥಾನದವರ ಸೂಚನೆಯಂತೆ ಪೋಷಕರು ಬಾಲಕಿಯನ್ನು ನಾಯಕನಹಟ್ಟಿಯ ಅಜ್ಜಯ್ಯನ ಗುಡಿಗೆ ಕರೆದುಕೊಂಡು ಬಂದಿದ್ದಾರೆ. ಈ ಸಂದರ್ಭದಲ್ಲಿ ಬಾಲಕಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.…
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಜಾಗತಿಕ ಪರಿಣಾಮಗಳು ಇದೀಗ ನೇರವಾಗಿ ಭಾರತದ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿವೆ. ಇಂಧನ ಮತ್ತು ಆಹಾರ ಪದಾರ್ಥಗಳ ಬೆಲೆ ಏರಿಕೆಯ ಬೆನ್ನಲ್ಲೇ, ಇದೀಗ ಜೀವ ರಕ್ಷಕ ಔಷಧಗಳ ಬೆಲೆಯೂ ಗಗನಕ್ಕೇರುತ್ತಿರುವುದು ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಕರ್ನಾಟಕ ಫಾರ್ಮಾ ಮೆಡಿಕಲ್ ಅಸೋಸಿಯೇಷನ್ ನೀಡಿರುವ ಮಾಹಿತಿಯ ಪ್ರಕಾರ, ಮಾರುಕಟ್ಟೆಗೆ ಬರುತ್ತಿರುವ ಹೊಸ ಬ್ಯಾಚ್ನ ಔಷಧಗಳ ಬೆಲೆಯಲ್ಲಿ ಸರಾಸರಿ ಶೇಕಡಾ 15 ರಿಂದ 20 ರಷ್ಟು ಹೆಚ್ಚಳವಾಗಿದೆ. ಯುದ್ಧದ ಹಿನ್ನೆಲೆಯಲ್ಲಿ ಜಾಗತಿಕ ಪೂರೈಕೆ ಸರಪಳಿ (Supply Chain) ಸಂಪೂರ್ಣವಾಗಿ ಏರುಪೇರಾಗಿರುವುದು ಈ ಬೆಲೆ ಏರಿಕೆಗೆ ಮುಖ್ಯ ಕಾರಣವಾಗಿದೆ. ಮಾತ್ರೆಗಳು ಮತ್ತು ಸಿರಪ್ಗಳ ತಯಾರಿಕೆಗೆ ಪೆಟ್ರೋ ಕೆಮಿಕಲ್ಸ್ ಅತ್ಯಗತ್ಯ ಕಚ್ಚಾವಸ್ತುವಾಗಿದೆ. ಆದರೆ ಮಧ್ಯಪ್ರಾಚ್ಯದ ಬಿಕ್ಕಟ್ಟಿನಿಂದಾಗಿ ಕಚ್ಚಾ ತೈಲ ಮತ್ತು ಪೆಟ್ರೋ ಕೆಮಿಕಲ್ಸ್ ಆಮದು ವೆಚ್ಚ ದುಬಾರಿಯಾಗಿದೆ. ಸಾಗಣೆ ಸಮಯ ಹಾಗೂ ವೆಚ್ಚ ಎರಡೂ ಹೆಚ್ಚಾಗಿರುವುದರಿಂದ, ಫಾರ್ಮಾ ಕಂಪನಿಗಳು ಅನಿವಾರ್ಯವಾಗಿ ಹೊಸ ಬ್ಯಾಚ್ನ ಮೆಡಿಸಿನ್ಗಳ ದರವನ್ನು ಹಂತ ಹಂತವಾಗಿ ಏರಿಕೆ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಗಿದ್ದು, ಭಾನುವಾರ ಸುರಿದ ಭಾರಿ ಮಳೆ ಮತ್ತು ಸಿಡಿಲಿನ ಆರ್ಭಟಕ್ಕೆ ಮೂವರು ಬಲಿಯಾಗಿದ್ದಾರೆ. ಧಾರವಾಡ, ರಾಯಚೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಇನ್ನು ಕೊಪ್ಪಳ, ವಿಜಯನಗರ, ದಾವಣಗೆರೆ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಧಾರವಾಡ ತಾಲೂಕಿನ ಕವಲಗೇರಿಯಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ದಂಪತಿಗೆ ಸಿಡಿಲು ಬಡಿದಿದ್ದು, ಜಯಶ್ರೀ ಹನುಮಂತಪ್ಪ ಶಿರಹಟ್ಟಿ (36) ಎಂಬ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತಿ ಹನುಮಂತಪ್ಪ ತೀವ್ರ ಗಾಯಗೊಂಡಿದ್ದಾರೆ. ಹೊನ್ನಾವರ (ಉತ್ತರ ಕನ್ನಡ) ಅಪರಕೊಂಡದ ಕಡಲತೀರದಲ್ಲಿ ಶನಿವಾರ ರಾತ್ರಿ ಮೀನುಗಾರಿಕೆಗೆ ತೆರಳಿದ್ದ ವಿನಾಯಕ ಹಾವಿಕ (35) ಎಂಬುವವರು ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ವೇಳೆ ತೀರದಲ್ಲಿದ್ದ ಕೆಲವು ಪ್ರವಾಸಿಗರಿಗೂ ಸಿಡಿಲಿನ ಆಘಾತವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಕೋಮಲಾಪುರ ಗ್ರಾಮದಲ್ಲಿ ಟ್ರ್ಯಾಕ್ಟರ್ಗೆ ಗೊಬ್ಬರ ತುಂಬಿಸುತ್ತಿದ್ದ ವೇಳೆ ಸಿಡಿಲು ಬಡಿದು ಕರಿಯಪ್ಪ ಗೆಣ್ಣಿಹಾಳ (45) ಎಂಬುವವರು ಮೃತಪಟ್ಟಿದ್ದಾರೆ. ಶಿವಮೊಗ್ಗ,…
ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತ ಮತ್ತು ಸಾರ್ವಜನಿಕರ ಕುಂದುಕೊರತೆಗಳ ನಿವಾರಣೆಗೆ ಶ್ರಮಿಸುತ್ತಿರುವ ಕರ್ನಾಟಕ ಲೋಕಾಯುಕ್ತ ಸಂಸ್ಥೆಯು, ಸಾರ್ವಜನಿಕರ ಅನುಕೂಲಕ್ಕಾಗಿ ಪ್ರಮುಖ ಅಧಿಕಾರಿಗಳ ನವೀಕೃತ ದೂರವಾಣಿ ಸಂಪರ್ಕ ಸಂಖ್ಯೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೇ 2, 2026ರ ಅಧಿಕೃತ ಮಾಹಿತಿಯಂತೆ ಈ ನೂತನ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಸಾರ್ವಜನಿಕರು ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಅಥವಾ ಕಚೇರಿಯನ್ನು ನೇರವಾಗಿ ಸಂಪರ್ಕಿಸಲು ಈ ಕೆಳಗಿನ ಸಂಖ್ಯೆಗಳನ್ನು ಬಳಸಬಹುದಾಗಿದೆ. ಪ್ರಮುಖ ಸಹಾಯವಾಣಿ ಸಂಖ್ಯೆಗಳು ಸಾರ್ವಜನಿಕರು ತಮಗೆ ಎದುರಾಗುವ ಸಮಸ್ಯೆಗಳು ಅಥವಾ ಲಂಚದ ಬೇಡಿಕೆಯ ವಿರುದ್ಧ ದೂರು ನೀಡಲು ಈ ಕೆಳಗಿನ ಸಹಾಯವಾಣಿಗಳನ್ನು ಸಂಪರ್ಕಿಸಬಹುದು: ಉಚಿತ ಸಹಾಯವಾಣಿ (ಟೋಲ್-ಫ್ರೀ ಸಂಖ್ಯೆ): 1800-425-5320 (ಮೊಬೈಲ್ ಬಳಕೆದಾರರಿಗಾಗಿ) ಸಾಮಾನ್ಯ ಸಹಾಯವಾಣಿ ಸಂಖ್ಯೆ: 080-22375014 ಕೇಂದ್ರ ಕಚೇರಿ ಸಾಮಾನ್ಯ ಸಂಖ್ಯೆಗಳು: 080-22011289, 080-22011052 ಅಧಿಕಾರಿಗಳ ನೇರ ಸಂಪರ್ಕ ಮಾಹಿತಿ ಲೋಕಾಯುಕ್ತರು, ಉಪಲೋಕಾಯುಕ್ತರು ಹಾಗೂ ನಿಬಂಧಕರನ್ನು ಸಂಪರ್ಕಿಸಲು ಕಚೇರಿ ಸಂಖ್ಯೆ ಮತ್ತು ವಿಸ್ತರಣಾ (Extension) ಸಂಖ್ಯೆಗಳ ವಿವರಗಳನ್ನು ಈ ಕೆಳಗೆ ನೀಡಲಾಗಿದೆ: ಶಾಖೆ…














