Author: kannadanewsnow57

ಕೇಂದ್ರ ಸರ್ಕಾರದ ಸೂಚನೆಯಂತೆ ಮೇ ಹಾಗೂ ಜೂನ್ ಮಾಹೆಗಳ ಎನ್.ಎಫ್.ಎಸ್.ಎ ಅಕ್ಕಿ ದಾಸ್ತಾನನ್ನು ಒಟ್ಟಿಗೆ ಮೇ ಮಾಹೆಯಲ್ಲಿ ಹಂಚಿಕೆ ಮಾಡಲು ನಿರ್ಧರಿಸಲಾಗಿದ್ದು, ಅದರಂತೆ ಪಡಿತರ ಚೀಟಿದಾರರಿಗೆ ಎರಡು ಮಾಹೆಗಳ ಅಕ್ಕಿಯನ್ನು ಒಂದೇ ಬಾರಿಗೆ ಹಂಚಿಕೆ ಮಾಡಲಾಗುವುದು. ಅಂತ್ಯೋದಯ ಕಾರ್ಡು ಹೊಂದಿದ ಪ್ರತಿ ಪಡಿತರ ಚೀಟಿಗೆ ಒಂದು ತಿಂಗಳಿಗೆ 35 ಕೆ.ಜಿ ಯಂತೆ ಒಟ್ಟು 70 ಕೆ.ಜಿ ಅಕ್ಕಿ ಹಾಗೂ ಬಿ.ಪಿ.ಎಲ್ ಕಾರ್ಡು ಹೊಂದಿದ ಪ್ರತಿ ಸದಸ್ಯರಿಗೆ 5 ಕೆ.ಜಿ ಯಂತೆ ಪಡಿತರ ಚೀಟಿಯಲ್ಲಿನ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಪ್ರತಿ ಸದಸ್ಯರಿಗೆ 10 ಕೆ.ಜಿ ಯಂತೆ ಅಕ್ಕಿ ವಿತರಣೆ ಮಾಡಲಾಗುವುದು. ಮೇ ಹಾಗೂ ಜೂನ್ ತಿಂಗಳ ಪಡಿತರವನ್ನು ಒಟ್ಟಿಗೆ ಪಡೆಯುವ ಸಂದರ್ಭದಲ್ಲಿ, ಕಾರ್ಡುದಾರರು ತಾಂತ್ರಿಕ ದಾಖಲೀಕರಣಕ್ಕಾಗಿ ಎರಡು ಬಾರಿ ಬಯೋಮೆಟ್ರಿಕ್ (ಹೆಬ್ಬೆಟ್ಟಿನ ಗುರುತು) ನೀಡುವುದು ಕಡ್ಡಾಯವಾಗಿದೆ. ಎರಡು ಬಾರಿ ಬೆರಳು ಮುದ್ರೆ ನೀಡಿದ ನಂತರವಷ್ಟೇ ಪೂರ್ಣ ಪ್ರಮಾಣದ ಧಾನ್ಯ ಲಭ್ಯವಾಗಲಿದೆ. ಪಡಿತರ ಚೀಟಿದಾರರು ಮೇ ಮಾಹೆಯಲ್ಲಿಯೇ ಎರಡು ತಿಂಗಳ ಅಕ್ಕಿಯನ್ನು ಪಡೆದುಕೊಳ್ಳಬಹುದು ಎಂದು…

Read More

ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಶಾಲೆ-ಕಾಲೇಜುಗಳ ವಸತಿ ನಿಲಯಗಳು ಕಡ್ಡಾಯವಾಗಿ ಹೊಸ ನಿಯಮಾವಳಿಗಳಡಿ ನೋಂದಾಯಿಸಿಕೊಳ್ಳಬೇಕು ಮತ್ತು ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯತ್ನ ನಜೀರ್ಸಾಬ್ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 2 ತಿಂಗಳ ಅವಧಿಯೊಳಗೆ ಎಲ್ಲಾ ವಸತಿ ನಿಲಯಗಳು ‘ಕರ್ನಾಟಕ ಮಕ್ಕಳ ವಸತಿ ನಿಲಯಗಳ ನಿಯಂತ್ರಣ ನಿಯಮಗಳು-2025’ ರ ಅಡಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬೇಕು. ತಪ್ಪಿದಲ್ಲಿ ಅಂತಹ ಸಂಸ್ಥೆಗಳ ಮಾನ್ಯತೆಯನ್ನು ರದ್ದುಪಡಿಸಲಾಗುವುದು ಎಂದು ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ ಪನ್ನೇಕರ್ ಅವರು ಮಾತನಾಡಿ, ಪ್ರತಿ ಶಾಲಾ-ಕಾಲೇಜುಗಳಲ್ಲಿ ಮಕ್ಕಳ ಸುರಕ್ಷತಾ ಸಮಿತಿ, ಮೇಲ್ವಿಚಾರಣಾ ಸಮಿತಿ ಮತ್ತು ರ್ಯಾಗಿಂಗ್ ತಡೆ ಸಮಿತಿಗಳನ್ನು ರಚಿಸಿ ಪ್ರತಿ ತಿಂಗಳು ಸಭೆ ನಡೆಸಬೇಕು ಎಂದು ಹೇಳಿದರು. ಆಡಳಿತ ಮಂಡಳಿಗಳಲ್ಲಿ ಕನಿಷ್ಠ ಒಬ್ಬ ಮಹಿಳಾ ಸದಸ್ಯರಿರಬೇಕು.…

Read More

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ ಎಂಬುದು ಕೇವಲ ಎಚ್ಚರಿಕೆಯಲ್ಲ, ಅದು ಜೀವನದ ದಿಕ್ಕನ್ನೇ ಬದಲಿಸುವ ಸತ್ಯ ಎಂಬುದು ಅಮೆರಿಕದ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಜೆರೆಮಿ ಲಂಡನ್ ಅವರ ಅನುಭವದ ನುಡಿಗಳಿಂದ ಸಾಬೀತಾಗಿದೆ. ಹೌದು, ಸುಮಾರು 25 ವರ್ಷಗಳ ವೈದ್ಯಕೀಯ ಅನುಭವ ಹೊಂದಿರುವ ಅವರು, ಸತತ 1,500 ದಿನಗಳ ಕಾಲ (ಸುಮಾರು 4 ವರ್ಷ) ಮದ್ಯದಿಂದ ಸಂಪೂರ್ಣ ದೂರವಿದ್ದು, ತಮ್ಮ ಜೀವನದಲ್ಲಿ ಕಂಡುಕೊಂಡ ನಾಲ್ಕು ಪ್ರಮುಖ ಬದಲಾವಣೆಗಳನ್ನು ಜಗತ್ತಿನ ಮುಂದೆ ತೆರೆದಿಟ್ಟಿದ್ದಾರೆ. ಡಾ. ಜೆರೆಮಿ ಲಂಡನ್ ಅವರು ವಿವರಿಸಿದ ಆ 4 ಜೀವನಪಾಠಗಳು ಇಲ್ಲಿವೆ: ಮೆದುಳಿನ ಚುರುಕುತನ ಮತ್ತು ಸ್ಪಷ್ಟತೆ ಮದ್ಯಪಾನ ಬಿಟ್ಟ ನಂತರ ಮೆದುಳಿಗೆ ಕವಿದಿದ್ದ ಮಂಜು (Brain Fog) ಸರಿದಂತಾಗಿ, ಮಾನಸಿಕ ಸ್ಪಷ್ಟತೆ ಲಭಿಸಿದೆ. ಬೆಳಿಗ್ಗೆ ಎದ್ದ ತಕ್ಷಣ ಆಲಸ್ಯವಿಲ್ಲದೆ ಚುರುಕಾಗಿ ಕೆಲಸದಲ್ಲಿ ತೊಡಗಿಸಿಕೊಳ್ಳಲು ಮತ್ತು ಏಕಾಗ್ರತೆ ಹೆಚ್ಚಿಸಿಕೊಳ್ಳಲು ಸಾಧ್ಯವಾಯಿತು ಎಂದು ಅವರು ತಿಳಿಸಿದ್ದಾರೆ. ಆತ್ಮವಿಶ್ವಾಸ ಮತ್ತು ಶಿಸ್ತು ಪ್ರತಿದಿನವೂ ಮದ್ಯದಿಂದ ದೂರವಿರುವ ನಿರ್ಧಾರವು ಅವರಲ್ಲಿ ಅಚಲವಾದ ಆತ್ಮವಿಶ್ವಾಸವನ್ನು ಬೆಳೆಸಿದೆ.…

Read More

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅತಿವೇಗ ಮತ್ತು ಅಜಾಗರೂಕ ಚಾಲನೆಯಿಂದಾಗಿ ಹಿಟ್ ಆ್ಯಂಡ್ ರನ್ ಪ್ರಕರಣಗಳು ಆತಂಕಕಾರಿ ರೀತಿಯಲ್ಲಿ ಹೆಚ್ಚುತ್ತಿವೆ. ಇಂದು (ಶುಕ್ರವಾರ) ಮುಂಜಾನೆ ಕಬ್ಬನ್ ಪಾರ್ಕ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಇಂತಹದ್ದೇ ಒಂದು ಘೋರ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ ಶ್ರೀನಿವಾಸ್ ಅವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ವೇಗವಾಗಿ ಬಂದ ಅಪರಿಚಿತ ವಾಹನವೊಂದು ಅವರಿಗೆ ಬಲವಾಗಿ ಗುದ್ದಿದೆ. ಡಿಕ್ಕಿಯ ರಭಸಕ್ಕೆ ತೀವ್ರವಾಗಿ ಗಾಯಗೊಂಡ ಶ್ರೀನಿವಾಸ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತ ಸಂಭವಿಸಿದ ತಕ್ಷಣವೇ ಮಾನವೀಯತೆ ಮರೆತ ವಾಹನ ಸವಾರ, ಗಾಯಾಳುವಿಗೆ ನೆರವಾಗುವ ಬದಲು ವಾಹನದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಕಬ್ಬನ್ ಪಾರ್ಕ್ ಸಂಚಾರ ಠಾಣೆಯ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Read More

ಕೊಪ್ಪಳ: ಹನುಮನ ಜನ್ಮಸ್ಥಳ ಎಂದೇ ಪ್ರಸಿದ್ಧಿಯಾಗಿರುವ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟ ಅಪರೂಪದ ಭಕ್ತಿ ಸಮರ್ಪಣೆಗೆ ಸಾಕ್ಷಿಯಾಯಿತು. ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಗಗನಕ್ಕೇರುತ್ತಿದ್ದರೂ ಲೆಕ್ಕಿಸದ ಭಕ್ತರೊಬ್ಬರು, ಬರೋಬ್ಬರಿ 2.5 ಕೋಟಿ ರೂಪಾಯಿ ಮೌಲ್ಯದ ಚಿನ್ನದ ಕಿರೀಟವನ್ನು ಆಂಜನೇಯನಿಗೆ ಅರ್ಪಿಸುವ ಮೂಲಕ ಸುದ್ದಿಯಾಗಿದ್ದಾರೆ. ಉದ್ಯಮಿ ಮಹೇಶ್ ರೆಡ್ಡಿ ಅವರಿಂದ ಚಿನ್ನದ ಕಿರೀಟ, ಗದೆ ಸಮರ್ಪಣೆ ಹೈದರಾಬಾದ್ ಮೂಲದ ಖ್ಯಾತ ಉದ್ಯಮಿ ಹಾಗೂ ಎಎಂಆರ್ (AMR) ಗ್ರೂಪ್ ಅಧ್ಯಕ್ಷರಾದ ಎ. ಮಹೇಶ್ ರೆಡ್ಡಿ ಅವರು ಈ ಭವ್ಯ ಕಾಣಿಕೆಯನ್ನು ನೀಡಿದವರು. ಹನುಮಂತನಿಗೆ ಅತ್ಯಂತ ಕಲಾತ್ಮಕವಾಗಿ ಸಿದ್ಧಪಡಿಸಲಾದ ಚಿನ್ನದ ಕಿರೀಟ, ಪ್ರಭಾವಳಿ ಹಾಗೂ ಗದೆಯನ್ನು ಅವರು ಭಕ್ತಿಯಿಂದ ಸಮರ್ಪಿಸಿದ್ದಾರೆ. ಈ ಹಿಂದೆ ಶಿರಡಿ ಸಾಯಿ ಬಾಬಾ ದೇವಸ್ಥಾನಕ್ಕೆ ಸುಮಾರು 140 ಕೆಜಿ ಬಂಗಾರವನ್ನು ನೀಡಿ ದೇಶದ ಗಮನ ಸೆಳೆದಿದ್ದ ಮಹೇಶ್ ರೆಡ್ಡಿ, ಇದೀಗ ಅಂಜನಾದ್ರಿ ಹನುಮನ ಮೇಲಿನ ತಮ್ಮ ಭಕ್ತಿಯನ್ನು ಈ ಮೂಲಕ ವ್ಯಕ್ತಪಡಿಸಿದ್ದಾರೆ. ವೈಭವದ ಧಾರ್ಮಿಕ ವಿಧಿವಿಧಾನಗಳು ಮೇ 08 ರಂದು…

Read More

ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ (WhatsApp) ಮೂಲಕ ಜನರನ್ನು ಬ್ಲ್ಯಾಕ್ಮೇಲ್ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿವೆ. ಒಂದು ವೇಳೆ ಯಾರಾದರೂ ನಿಮ್ಮನ್ನು ಡಿಜಿಟಲ್ ರೂಪದಲ್ಲಿ ಪೀಡಿಸುತ್ತಿದ್ದರೆ ಅಥವಾ ಬ್ಲ್ಯಾಕ್ಮೇಲ್ ಮಾಡುತ್ತಿದ್ದರೆ, ಗಾಬರಿಯಾಗುವ ಅಗತ್ಯವಿಲ್ಲ. ಈ ಕೆಳಗಿನ ಕ್ರಮಗಳನ್ನು ಅನುಸರಿಸಿ ನೀವು ರಕ್ಷಣೆ ಪಡೆಯಬಹುದು ಎಂದು ಅಮರ್ ಉಜಾಲಾ ವರದಿ ಮಾಡಿದೆ. 1. ಪ್ರತಿಕ್ರಿಯಿಸಬೇಡಿ ಮತ್ತು ತಕ್ಷಣ ಬ್ಲಾಕ್ ಮಾಡಿ ಯಾರಾದರೂ ನಿಮ್ಮನ್ನು ಬ್ಲ್ಯಾಕ್ಮೇಲ್ ಮಾಡಲು ಪ್ರಯತ್ನಿಸಿದರೆ, ಮೊದಲನೆಯದಾಗಿ ಅವರಿಗೆ ಯಾವುದೇ ಪ್ರತಿಕ್ರಿಯೆ ನೀಡಬೇಡಿ. ಅವರು ಕೇಳುವ ಹಣ ಅಥವಾ ಬೇಡಿಕೆಗಳಿಗೆ ಮಣಿಯಬೇಡಿ. ತಕ್ಷಣವೇ ಆ ವ್ಯಕ್ತಿಯ ನಂಬರ್ ಅನ್ನು ಬ್ಲಾಕ್ ಮಾಡಿ. 2. ಸಾಕ್ಷ್ಯಗಳನ್ನು ಸಂಗ್ರಹಿಸಿ (ಸ್ಕ್ರೀನ್ಶಾಟ್) ನಂಬರ್ ಬ್ಲಾಕ್ ಮಾಡುವ ಮೊದಲು, ಅವರು ಕಳುಹಿಸಿದ ಬೆದರಿಕೆ ಸಂದೇಶಗಳು, ಫೋಟೋಗಳು ಅಥವಾ ವಿಡಿಯೋ ಕರೆಗಳ ಸ್ಕ್ರೀನ್ಶಾಟ್ ತೆಗೆದುಕೊಳ್ಳಿ. ದೂರು ದಾಖಲಿಸುವಾಗ ಇದು ಅತ್ಯಂತ ಪ್ರಮುಖ ಸಾಕ್ಷ್ಯವಾಗಲಿದೆ. 3. ಸಹಾಯವಾಣಿ ಸಂಖ್ಯೆ 1930 ನೀವು ಸೈಬರ್ ಅಪರಾಧಕ್ಕೆ ಒಳಗಾಗಿದ್ದರೆ ತಕ್ಷಣವೇ 1930 ಸಂಖ್ಯೆಗೆ ಕರೆ ಮಾಡಿ…

Read More

ಪ್ರೀತಿಸಿ ಮದುವೆಯಾದ ಪತ್ನಿಯ ಮೇಲೆ ಅನುಮಾನದ ಎಂಬ ವಿಷಬೀಜ ಮೊಳೆದಾಗ, ಆ ಸಂಸಾರ ಸ್ಮಶಾನವಾಗುತ್ತದೆ ಎಂಬುದಕ್ಕೆ ಆಂಧ್ರಪ್ರದೇಶದ ಸೂರ್ಯಾಪೇಟೆ ಜಿಲ್ಲೆಯ ಕೋದಾಡದಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಎರಡು ವರ್ಷದ ಮಗನಿದ್ದಾನೆ ಎಂಬ ಕರುಣೆಯೂ ಇಲ್ಲದೆ, ಪತಿಯೊಬ್ಬ ತನ್ನ ಪತ್ನಿಯನ್ನೇ ಸಾರ್ವಜನಿಕವಾಗಿ ಹತ್ಯೆ ಮಾಡಿದ್ದಾನೆ. ಕೋದಾಡ ನಿವಾಸಿ ಮಣಿದೀಪ್ ವೃತ್ತಿಯಲ್ಲಿ ಲಾರಿ ಚಾಲಕನಾಗಿದ್ದಾನೆ. ಆರು ವರ್ಷಗಳ ಹಿಂದೆ ಆಂಧ್ರಪ್ರದೇಶದ ಜಗ್ಗಯ್ಯಪೇಟೆಯ ಶಿರೀಷಾ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದನು. ಇವರಿಗೆ ಎರಡು ವರ್ಷದ ಮಗನೂ ಇದ್ದಾನೆ. ಕೆಲವು ಸಮಯದಿಂದ ಮಣಿದೀಪ್ ತನ್ನ ಪತ್ನಿಯ ನಡತೆಯ ಮೇಲೆ ಅನುಮಾನ ಪಡಲು ಶುರುಮಾಡಿದ್ದನು. ಇದರಿಂದಾಗಿ ದಂಪತಿಗಳ ನಡುವೆ ಪ್ರತಿದಿನ ಜಗಳ ನಡೆಯುತ್ತಿತ್ತು. ಪತಿಯ ಕಿರುಕುಳ ತಾಳಲಾರದೆ ಶಿರೀಷಾ ಈ ಹಿಂದೆ ಪೊಲೀಸರಿಗೂ ದೂರು ನೀಡಿದ್ದರು. ಹಿರಿಯರು ಸಂಧಾನ ಮಾಡಿದರೂ ಮಣಿದೀಪ್ ನಡವಳಿಕೆಯಲ್ಲಿ ಬದಲಾವಣೆ ಇರಲಿಲ್ಲ. ಎರಡು ದಿನಗಳ ಹಿಂದೆ ಮತ್ತೆ ಗಲಾಟೆ ನಡೆದಿದ್ದರಿಂದ, ಶಿರೀಷಾ ತನ್ನ ಮಗನೊಂದಿಗೆ ಹೈದರಾಬಾದ್‌ನಲ್ಲಿರುವ ಅಕ್ಕನ ಮನೆಗೆ ಹೋಗಿದ್ದರು. ಆದರೆ, ತನ್ನ ಪತ್ನಿ…

Read More

ಮುಂಬೈ: ದೇಶದ ಅತ್ಯಂತ ಸುರಕ್ಷಿತ ನಗರಗಳಲ್ಲಿ ಒಂದು ಎಂದು ಕರೆಸಿಕೊಳ್ಳುವ ಮುಂಬೈನಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಈಗ ಆತಂಕ ಮೂಡಿದೆ. ಮುಂಜಾನೆ ಸುಮಾರು 3 ಗಂಟೆಯ ಸಮಯದಲ್ಲಿ ಮೆರೈನ್ ಡ್ರೈವ್ ಬಳಿ ತನಗೆ ವ್ಯಕ್ತಿಯೊಬ್ಬ ಕಿರುಕುಳ ನೀಡಿದ್ದಾನೆ ಎಂದು ಮಹಿಳಾ ಬೈಕರ್ ಒಬ್ಬರು ಆರೋಪಿಸಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ನಡೆದಿದ್ದೇನು? ‘alka.fit’ ಎಂಬ ಇನ್‌ಸ್ಟಾಗ್ರಾಮ್ ಖಾತೆಯ ಮೂಲಕ ಮಹಿಳೆ ಈ ಘಟನೆಯನ್ನು ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿರುವ ಮಾಹಿತಿಯಂತೆ, ಹಿಂಬಾಲಿಸಿದ ವ್ಯಕ್ತಿ: ಮಹಿಳೆ ಬೈಕ್ ಚಲಾಯಿಸುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ತನ್ನ ಸ್ಕೂಟರ್‌ನಲ್ಲಿ ಪದೇ ಪದೇ ಹಿಂಬಾಲಿಸಿದ್ದಾನೆ. ಸಂಚಾರ ದಟ್ಟಣೆ ಇದ್ದರೂ ಲೆಕ್ಕಿಸದೆ ಆತ ಮಹಿಳೆಯನ್ನೇ ದಿಟ್ಟಿಸಿ ನೋಡುತ್ತಿದ್ದನು. ಮಹಿಳೆ ಬೈಕ್ ನಿಲ್ಲಿಸಿದಾಗ ಆತ ತನ್ನ ಸ್ಕೂಟರ್ ಅನ್ನು ಆಕೆಯ ಬೈಕ್ ಎದುರೇ ತಂದು ನಿಲ್ಲಿಸಿ ಕಿರುಕುಳ ನೀಡಿದ್ದಾನೆ. ಟ್ರಾಫಿಕ್ ಸಿಗ್ನಲ್ ಬಿಟ್ಟ ನಂತರವೂ ಆ ವ್ಯಕ್ತಿ ಅಲ್ಲಿಂದ ಕದಲದೆ ಮಹಿಳೆಯನ್ನೇ ಗಮನಿಸುತ್ತಾ ಅಸುರಕ್ಷಿತ ಭಾವನೆ ಮೂಡುವಂತೆ ಮಾಡಿದ್ದಾನೆ.…

Read More

ಬೆಂಗಳೂರು: ರಾಜ್ಯದ ಪ್ರವಾಸಿ ತಾಣಗಳಲ್ಲಿ ಶಾಲಾ ಮಕ್ಕಳು ಹಾಗೂ ಪ್ರವಾಸಿ ಮಕ್ಕಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆಯು ಮಹತ್ವದ ಸುತ್ತೋಲೆಯನ್ನು ಹೊರಡಿಸಿದೆ. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಶಿಫಾರಸಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಪ್ರವಾಸಿ ತಾಣಗಳಲ್ಲಿ ಮಕ್ಕಳ ರಕ್ಷಣೆಗಾಗಿ ಸಂಸ್ಥೆಯು ಪ್ರಮುಖ 12 ಅಂಶಗಳ ಮಾರ್ಗಸೂಚಿಯನ್ನು ಪಾಲಿಸಲು ಸೂಚಿಸಿದೆ. ಅವುಗಳ ವಿವರ ಇಲ್ಲಿದೆ: ಪ್ರಮುಖ ಮಾರ್ಗಸೂಚಿಗಳು: ಹೆಲ್ಪ್‌ ಲೈನ್ ಸಂಖ್ಯೆ: ಎಲ್ಲಾ ಪ್ರವಾಸಿ ತಾಣಗಳಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಎಚ್ಚರಿಕೆ ಫಲಕಗಳು: ಅಪಾಯಕಾರಿ ಪ್ರದೇಶಗಳಲ್ಲಿ ಸ್ಪಷ್ಟವಾದ ಎಚ್ಚರಿಕೆ ಮತ್ತು ಸೂಚನಾ ಫಲಕಗಳನ್ನು ಅಳವಡಿಸಬೇಕು. ಸಿಬ್ಬಂದಿಗೆ ತರಬೇತಿ: ಪ್ರವಾಸೋದ್ಯಮ ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗೆ ಮಕ್ಕಳ ಹಕ್ಕುಗಳ ಬಗ್ಗೆ ವಿಶೇಷ ತರಬೇತಿ ನೀಡಲಾಗುವುದು. ಸುರಕ್ಷತಾ ವಲಯ: ಬೀಚ್ ಮತ್ತು ಜಲಪಾತಗಳ ಬಳಿ ಮಕ್ಕಳಿಗಾಗಿ ಪ್ರತ್ಯೇಕ ಸುರಕ್ಷತಾ ವಲಯಗಳನ್ನು ಗುರುತಿಸಬೇಕು. ನಿರ್ಬಂಧಗಳು: ಪ್ರವಾಸಿ ತಾಣಗಳಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.…

Read More

ಬೆಂಗಳೂರು: ನೀವು ಬ್ಯಾಂಕ್ನಿಂದ ಸಾಲ ಪಡೆದಿದ್ದೀರಾ? ಹಾಗಿದ್ದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿಮಗೊಂದು ಮಹತ್ವದ ಸಿಹಿಸುದ್ದಿ ನೀಡಿದೆ. ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಸಾಲದ ಕಂತು (EMI) ಪಾವತಿಸಲು ಕಷ್ಟಪಡುವ ಗ್ರಾಹಕರಿಗೆ ನೆರವಾಗಲು ಆರ್ಬಿಐ ಹೊಸ ಮಾರ್ಗಸೂಚಿಯನ್ನು ಸಿದ್ಧಪಡಿಸಿದೆ. ಈ ನಿಯಮವು ಜುಲೈ 1, 2026 ರಿಂದ ಜಾರಿಗೆ ಬರಲಿದೆ. ನೋಂದಣಿ ಇಲ್ಲದೆಯೇ ಸಿಗಲಿದೆ ಇಎಂಐ ರಿಯಾಯಿತಿ! ಈ ಮೊದಲು ಪ್ರವಾಹ, ಭೂಕಂಪ ಅಥವಾ ಚಂಡಮಾರುತದಂತಹ ವಿಪತ್ತುಗಳು ಸಂಭವಿಸಿದಾಗ, ಸಾಲಗಾರರು ತಮಗೆ ಇಎಂಐ ಪಾವತಿಸಲು ವಿನಾಯಿತಿ ಬೇಕೆಂದು ಬ್ಯಾಂಕ್ಗಳಿಗೆ ಅಲೆದು ಅರ್ಜಿ ಸಲ್ಲಿಸಬೇಕಾಗಿತ್ತು. ಆದರೆ ಹೊಸ ನಿಯಮದಂತೆ, ನಿಮ್ಮ ಪ್ರದೇಶದಲ್ಲಿ ಸರ್ಕಾರವು ಅಧಿಕೃತವಾಗಿ ‘ಪ್ರಾಕೃತಿಕ ವಿಕೋಪ’ ಎಂದು ಘೋಷಿಸಿದರೆ, ಬ್ಯಾಂಕ್ಗಳೇ ಸ್ವಯಂಪ್ರೇರಿತವಾಗಿ ನಿಮಗೆ ಸಾಲ ಮರುಪಾವತಿಯಲ್ಲಿ ರಿಯಾಯಿತಿ ನೀಡಲಿವೆ. ಹೊಸ ನಿಯಮದ ಪ್ರಮುಖ ಅಂಶಗಳು: ಯಾವ ವಿಪತ್ತುಗಳಿಗೆ ಅನ್ವಯ?: ರಾಜ್ಯ ವಿಪತ್ತು ಪರಿಹಾರ ನಿಧಿ (SDRF) ಅಥವಾ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (NDRF) ಅಡಿಯಲ್ಲಿ ಘೋಷಿತವಾದ ನೈಸರ್ಗಿಕ ವಿಕೋಪಗಳಿಗೆ ಮಾತ್ರ…

Read More