Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ: ಜೂನ್ 1, 2026 ರಿಂದ ದೇಶಾದ್ಯಂತ ಸಾರ್ವಜನಿಕರ ದೈನಂದಿನ ಜೀವನ ಹಾಗೂ ಆರ್ಥಿಕತೆಯ ಮೇಲೆ ನೇರ ಪರಿಣಾಮ ಬೀರುವ ಹಲವು ಪ್ರಮುಖ ನಿಯಮಗಳು ಬದಲಾಗಲಿವೆ. ಬ್ಯಾಂಕಿಂಗ್, ಇಂಧನ, ಡಿಜಿಟಲ್ ಪಾವತಿ ಮತ್ತು ಪ್ರಯಾಣ ಸೇರಿದಂತೆ ಪ್ರಮುಖ ವಲಯಗಳಲ್ಲಿ ಸರ್ಕಾರ ಹಾಗೂ ಸಂಬಂಧಿತ ಸಂಸ್ಥೆಗಳು ಹೊಸ ನಿಯಮಗಳನ್ನು ಜಾರಿಗೆ ತರುತ್ತಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಈ ಕೆಳಗಿನ ಬದಲಾವಣೆಗಳ ಬಗ್ಗೆ ಮುಂಚಿತವಾಗಿಯೇ ತಿಳಿದುಕೊಳ್ಳುವುದು ಅವಶ್ಯಕವಾಗಿದೆ. 1. LPG ಮತ್ತು PNG ನಿಯಮಗಳಲ್ಲಿ ಬದಲಾವಣೆ ಇಂಧನ ವಲಯದಲ್ಲಿ ಈ ಬಾರಿ ದೊಡ್ಡ ಬದಲಾವಣೆಯಾಗುತ್ತಿದೆ. ಇನ್ಮುಂದೆ ಗ್ರಾಹಕರು ಹೊಸ ಪಿಎನ್ಜಿ (PNG) ಗ್ಯಾಸ್ ಸಂಪರ್ಕವನ್ನು ಪಡೆದಾಗ, ತಮ್ಮಲ್ಲಿರುವ ಎಲ್ಪಿಜಿ (LPG) ಕನೆಕ್ಷನ್ ಅನ್ನು ಸರೆಂಡರ್ (ಹಿಂತಿರುಗಿಸುವುದು) ಮಾಡುವ ಅಗತ್ಯವಿರುವುದಿಲ್ಲ. ಇದರೊಂದಿಗೆ, ಜೂನ್ ಆರಂಭದಲ್ಲಿ ಗ್ಯಾಸ್ ಸಿಲಿಂಡರ್ ಬೆಲೆಗಳಲ್ಲೂ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. 2. ಪೆಟ್ರೋಲ್ ಮತ್ತು ಡೀಸೆಲ್ ದರ ವ್ಯತ್ಯಾಸ ಪೆಟ್ರೋಲ್, ಡೀಸೆಲ್ ಮತ್ತು ಸಿಎನ್ಜಿ ಬೆಲೆಗಳಲ್ಲಿ ಪ್ರಮುಖ ಪರಿಷ್ಕರಣೆಯಾಗುವ ಸಾಧ್ಯತೆಯಿದ್ದು, ಇಂಧನ…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ಮುನ್ನೆಲೆಗೆ ಬಂದಿದ್ದ ಮುಖ್ಯಮಂತ್ರಿ ಕುರ್ಚಿ ಬದಲಾವಣೆಯ ಹೈಡ್ರಾಮಾಗೆ ಕೊನೆಗೂ ಕ್ಲೈಮ್ಯಾಕ್ಸ್ ಸಿಗುವ ಲಕ್ಷಣಗಳು ಕಾಣಿಸುತ್ತಿವೆ. ಹೌದು, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಿಸೈನ್ ಮಾಡಲು ಸಜ್ಜಾಗಿದ್ದಾರೆ ಎಂಬ ಬಿಸಿಬಿಸಿ ಚರ್ಚೆಗಳು ಸದ್ಯ ಕೈ ಪಾಳಯದಲ್ಲಿ ತೀವ್ರಗೊಂಡಿವೆ. ದೆಹಲಿಯಲ್ಲಿ ನಿನ್ನೆ ಎಐಸಿಸಿ ವರಿಷ್ಠರು ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಬರೋಬ್ಬರಿ 7 ಗಂಟೆಗಳ ಕಾಲ ಸುದೀರ್ಘ ಸಂಧಾನ ಸಭೆ ನಡೆದಿದೆ. ಈ ಹೈವೋಲ್ಟೇಜ್ ಮೀಟಿಂಗ್ ಬೆನ್ನಲ್ಲೇ, ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಗದ್ದುಗೆಯನ್ನು ಬಿಟ್ಟುಕೊಡಲು ಹಸಿರು ನಿಶಾನೆ ತೋರಿಸಿದ್ದಾರೆ ಎಂಬ ದಟ್ಟ ವದಂತಿಗಳು ಹರಿದಾಡುತ್ತಿವೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು, ದೆಹಲಿಯ ಮುಚ್ಚಿದ ಕೋಣೆಯೊಳಗೆ ನಿನ್ನೆ ನಡೆದ ಸಭೆಯಲ್ಲಿ ಏನೆಲ್ಲಾ ಮಾತುಕತೆಗಳಾಗಿವೆ ಎಂಬ ಪೂರ್ಣ ಮಾಹಿತಿ ಸದ್ಯಕ್ಕೆ ನಮಗಿಲ್ಲ. ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿಗಳು ಬೆಂಗಳೂರಿಗೆ ಆಗಮಿಸಲಿದ್ದು, ನಮ್ಮೊಂದಿಗೆ…
ದೂರದ ಊರುಗಳಿಗೆ ಬಸ್ಸಿನಲ್ಲಿ ಪ್ರಯಾಣ ಮಾಡುವುದು ಒಂದು ಸುಂದರ ಅನುಭವ. ಆದರೆ, ಸರಿಯಾದ ಪ್ಲಾನಿಂಗ್ ಇಲ್ಲದಿದ್ದರೆ ಈ ಸುಖಕರ ಜರ್ನಿ ಕ್ಷಣಾರ್ಧದಲ್ಲಿ ತಲೆನೋವಾಗಿ ಬದಲಾಗಬಹುದು. ಕೇವಲ ಟಿಕೆಟ್ ಬುಕ್ ಮಾಡಿದರೆ ಜವಾಬ್ದಾರಿ ಮುಗಿಯಿತು ಅಂದುಕೊಂಡರೆ ತಪ್ಪು. ಬಸ್ ಹತ್ತುವ ಮುನ್ನ ನಾವು ವಹಿಸುವ ಸಣ್ಣ ಜಾಗರೂಕತೆಗಳು ನಮ್ಮ ಇಡೀ ಪ್ರಯಾಣವನ್ನು ನಿರಾಳವಾಗಿಸುತ್ತವೆ. ಹಾಗಾದರೆ ಆರಾಮದಾಯಕ ಮತ್ತು ಸುರಕ್ಷಿತ ಪ್ರಯಾಣಕ್ಕಾಗಿ ನೀವು ನೆನಪಿನಲ್ಲಿಡಬೇಕಾದ ಆ ಪ್ರಮುಖ ಅಂಶಗಳು ಯಾವುವು? ಇಲ್ಲಿದೆ ಕಂಪ್ಲೀಟ್ ಗೈಡ್. 1. ಟೈಮಿಂಗ್ಸ್ ಮತ್ತು ಪಿಕಪ್ ಪಾಯಿಂಟ್ ಚೆಕ್ ಮಾಡಿಕೊಳ್ಳಿ ಬಸ್ ಜರ್ನಿಯಲ್ಲಿ ಹಿರಿಯರು ಮಾಡುವ ದೊಡ್ಡ ಎಡವಟ್ಟೆಂದರೆ ಸಮಯದ ಕಡೆಗೆ ಗಮನ ಕೊಡದಿರುವುದು. ಟ್ರಾಫಿಕ್ ಜಾಮ್ ಅಥವಾ ಹವಾಮಾನ ವೈಪರೀತ್ಯದಿಂದ ಬಸ್ ಬರುವ ಸಮಯ ಬದಲಾಗುತ್ತಿರುತ್ತದೆ. ಆದ್ದರಿಂದ ಮನೆಯಿಂದ ಹೊರಡುವ ಮುನ್ನ ನಿಮ್ಮ ಮೊಬೈಲ್ಗೆ ಬಂದಿರುವ ಮೆಸೇಜ್ ಹಾಗೂ ಲೈವ್ ಅಪ್ಡೇಟ್ಗಳನ್ನು ಒಮ್ಮೆ ಕ್ರಾಸ್ ಚೆಕ್ ಮಾಡಿಕೊಳ್ಳಿ. 2. ಬಸ್ಸಿನಲ್ಲಿ ಏನೆಲ್ಲಾ ಸೌಲಭ್ಯಗಳಿವೆ? ದೀರ್ಘಾವಧಿಯ ಪ್ರಯಾಣದಲ್ಲಿ ಕಂಫರ್ಟ್ ಮುಖ್ಯ.…
ಬೆಂಗಳೂರು : ಬೆಂಗಳೂರಿನ ಯಲಹಂಕದ ಎಂ.ಎಸ್. ಪಾಳ್ಯದಲ್ಲಿ ಭೀಕರ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಇಲ್ಲಿನ ಪ್ರಸಿದ್ಧ ಅವೇಕ್ಷಾ ಆಸ್ಪತ್ರೆಯಲ್ಲಿ (Aveksha Hospital) ಆಕಸ್ಮಿಕವಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಆಸ್ಪತ್ರೆಯಲ್ಲಿದ್ದ ರೋಗಿಗಳು ಹಾಗೂ ಸಿಬ್ಬಂದಿ ಆತಂಕದಿಂದ ಓಡಿದ ಘಟನೆ ನಡೆದಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಶಾರ್ಟ್ ಸರ್ಕ್ಯೂಟ್ (Short Circuit) ಈ ಅಗ್ನಿ ಅವಘಡಕ್ಕೆ ಮುಖ್ಯ ಕಾರಣ ಎಂದು ತಿಳಿದುಬಂದಿದೆ. ಆಸ್ಪತ್ರೆಯ ಮೂರು ಅಂತಸ್ತಿನ ಇಡೀ ಕಟ್ಟಡಕ್ಕೆ ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದೆ. ಘಟನೆ ಸಂಭವಿಸಿದಾಗ ಆಸ್ಪತ್ರೆಯ ಒಳಗೆ 20ಕ್ಕೂ ಹೆಚ್ಚು ಒಳರೋಗಿಗಳು (In-patients) ಚಿಕಿತ್ಸೆ ಪಡೆಯುತ್ತಿದ್ದರು. ಕಟ್ಟಡದಿಂದ ದಟ್ಟ ಹೊಗೆ ಹಾಗೂ ಬೆಂಕಿಯ ಜ್ವಾಲೆಗಳು ಏಳುತ್ತಿರುವುದನ್ನು ಕಂಡು ರೋಗಿಗಳು ಮತ್ತು ಅವರ ಸಂಬಂಧಿಕರು ತೀವ್ರ ಆತಂಕಕ್ಕೆ ಒಳಗಾದರು. ಪ್ರಾಣಭಯದಿಂದ ತಕ್ಷಣವೇ ಕೆಲವು ರೋಗಿಗಳು ಆಸ್ಪತ್ರೆಯಿಂದ ಹೊರಗೆ ಓಡಿ ಬಂದು ಜೀವ ಉಳಿಸಿಕೊಂಡಿದ್ದಾರೆ. ಇನ್ನುಳಿದ ಗಂಭೀರ ಸ್ಥಿತಿಯಲ್ಲಿದ್ದ ರೋಗಿಗಳನ್ನು ಆಸ್ಪತ್ರೆಯ ಸಿಬ್ಬಂದಿ ಮತ್ತು ಸ್ಥಳೀಯರು ಸಮಯಪ್ರಜ್ಞೆ ಮೆರೆದು ತಕ್ಷಣವೇ ಸಮೀಪದ ಇತರ ಆಸ್ಪತ್ರೆಗಳಿಗೆ…
ಬೆಂಗಳೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರ ಕುಂದು-ಕೊರತೆಗಳಿಗೆ ತಕ್ಷಣ ಸ್ಪಂದಿಸಲು ಹಾಗೂ ಕಚೇರಿಗಳಲ್ಲಿ ಅಧಿಕಾರಿಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಕರ್ನಾಟಕ ಸರ್ಕಾರದ ಪಂಚಾಯತ್ ರಾಜ್ ಆಯುಕ್ತಾಲಯವು ಹೊಸದೊಂದು ಮಹತ್ವದ ಸುತ್ತೋಲೆಯನ್ನು ಹೊರಡಿಸಿದೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (PDO) ಮತ್ತು ಕಾರ್ಯದರ್ಶಿಗಳು ಸಾರ್ವಜನಿಕರ ಭೇಟಿಗೆ ಸಿಗುತ್ತಿಲ್ಲ, ಕ್ಷೇತ್ರ ಕಾರ್ಯದ ನೆಪದಲ್ಲಿ ಕಚೇರಿಯಿಂದ ಹೊರಗುಳಿಯುತ್ತಿದ್ದಾರೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ.ಕರ್ನಾಟಕ ವಿಧಾನ ಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ಶಿಫಾರಸಿನ ಮೇರೆಗೆ ಹೊರಡಿಸಲಾದ ಈ ಆದೇಶದ ಪ್ರಮುಖ ಮುಖ್ಯಾಂಶಗಳು ಈ ಕೆಳಗಿನಂತಿವೆ: ಸಾರ್ವಜನಿಕರ ಭೇಟಿಗೆ ನಿಗದಿತ ಸಮಯ: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (PDO) ಸಾರ್ವಜನಿಕರ ಭೇಟಿಗಾಗಿ ಪ್ರತಿದಿನ ಕಡ್ಡಾಯವಾಗಿ ಸಮಯವನ್ನು ನಿಗದಿಪಡಿಸಬೇಕು. ಆ ನಿಗದಿತ ಅವಧಿಯಲ್ಲಿ ಕಚೇರಿಯಲ್ಲೇ ಇದ್ದು ಸಾರ್ವಜನಿಕರ ಮನವಿಗಳನ್ನು ಸ್ವೀಕರಿಸಿ, ಸಮಸ್ಯೆಗಳಿಗೆ ಸ್ಪಂದಿಸಬೇಕು. ಪ್ರವಾಸದ ವಿವರ ಪ್ರಕಟಣೆ ಕಡ್ಡಾಯ: ಪ್ರತಿ ವಾರ ಸೋಮವಾರದಿಂದ ಶನಿವಾರದವರೆಗೆ ಅಧಿಕಾರಿಗಳು ಕೈಗೊಳ್ಳುವ ಕ್ಷೇತ್ರ ಭೇಟಿ, ತರಬೇತಿ ಹಾಗೂ…
ಬೆಂಗಳೂರು : ವೃತ್ತಿಪರ ಕೋರ್ಸ್ಗಳ (Professional Courses) ಪ್ರವೇಶಾತಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಸಿಹಿ ಸುದ್ದಿ ಹೊರಬಿದ್ದಿದೆ. ಸರ್ಕಾರಿ ಕೋಟಾದ ಸೀಟುಗಳನ್ನು ಪಡೆದ ನಂತರವೂ ಕೆಲವು ಖಾಸಗಿ ಕಾಲೇಜುಗಳು ಕಾನೂನು ಬಾಹಿರವಾಗಿ ಹೆಚ್ಚಿನ ಶುಲ್ಕಕ್ಕೆ ಬೇಡಿಕೆ ಇಡುತ್ತಿರುವ ದೂರುಗಳು ಕೇಳಿಬರುತ್ತಿವೆ. ಇದಕ್ಕೆ ಬ್ರೇಕ್ ಹಾಕಲು ಶುಲ್ಕ ನಿಯಂತ್ರಣ ಸಮಿತಿ (Fee Regulatory Committee) ಈಗ ಕಠಿಣ ಕ್ರಮಕ್ಕೆ ಮುಂದಾಗಿದೆ. ಸರ್ಕಾರ ನಿಗದಿಪಡಿಸಿದ ಮೊತ್ತಕ್ಕಿಂತ ಒಂದು ರೂಪಾಯಿ ಜಾಸ್ತಿ ಕೇಳಿದರೂ ಅಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ವಿದ್ಯಾರ್ಥಿಗಳು ನೇರವಾಗಿ ದೂರು ದಾಖಲಿಸಬಹುದು ಎಂದು ಸಮಿತಿಯ ಅಧ್ಯಕ್ಷರಾದ ನ್ಯಾಯಮೂರ್ತಿ ಬಿ. ಶ್ರೀನಿವಾಸಗೌಡ ಅವರು ಖಡಕ್ ವಾರ್ನಿಂಗ್ ನೀಡಿದ್ದಾರೆ. ಯಾರೆಲ್ಲಾ ದೂರು ನೀಡಬಹುದು? ಇದು ಕೇವಲ ಹೊಸದಾಗಿ ಅಡ್ಮಿಷನ್ ಪಡೆಯುತ್ತಿರುವವರಿಗೆ ಮಾತ್ರವಲ್ಲ! ಮುಂಬರುವ ದಿನಗಳಲ್ಲಿ ವೃತ್ತಿಪರ ಕೋರ್ಸ್ಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳು. ಈಗಾಗಲೇ ಕಾಲೇಜು ಸೇರಿ, ಹೆಚ್ಚಿನ ಶುಲ್ಕದ ಕಿರುಕುಳ ಅನುಭವಿಸುತ್ತಿರುವ ಹಳೇ ವಿದ್ಯಾರ್ಥಿಗಳು. ಯಾವೆಲ್ಲಾ ಕಾಲೇಜುಗಳಿಗೆ ಇದು ಅನ್ವಯ? ಕರ್ನಾಟಕ ಪರೀಕ್ಷಾ ಪ್ರಾಧಿಕಾರದ…
ಬೆಂಗಳೂರು :ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಕುರ್ಚಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಈಗ ಎಲ್ಲರ ಕಣ್ಣು ಬೆಂಗಳೂರಿನ ‘ಕಾವೇರಿ’ ನಿವಾಸದತ್ತ ನೆಟ್ಟಿದೆ. ಸಿಎಂ ಬದಲಾವಣೆ ವದಂತಿಗಳ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಡುವೆ ನಾಳೆ ಒಂದು ಮಹತ್ವದ ಆತಿಥ್ಯ ಕೂಟ ನಿಗದಿಯಾಗಿದೆ. ನಾಳೆ (ಮೇ 28) ಮುಂಜಾನೆ 9 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ವಿಶೇಷ ಉಪಹಾರ ಕೂಟವನ್ನು ಆಯೋಜಿಸಲಾಗಿದೆ. ಈ ಹೈಪ್ರೊಫೈಲ್ ಬ್ರೇಕ್ಫಾಸ್ಟ್ ಮೀಟಿಂಗ್ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗಿಯಾಗಲಿದ್ದಾರೆ. ರಾಜ್ಯ ರಾಜಕೀಯದ ವರ್ತಮಾನದ ವಿದ್ಯಮಾನಗಳ ಹಿನ್ನೆಲೆಯಲ್ಲಿ ಈ ಇಬ್ಬರು ನಾಯಕರ ಮುಖಾಮುಖಿ ತೀವ್ರ ಕುತೂಹಲ ಕೆರಳಿಸಿದೆ. ಕಳೆದ ಕೆಲವು ದಿನಗಳಿಂದ ಕರ್ನಾಟಕ ಕಾಂಗ್ರೆಸ್ ವಲಯದಲ್ಲಿ ನಾಯಕತ್ವ ಬದಲಾವಣೆಯ ಊಹಾಪೋಹಗಳು ದಟ್ಟವಾಗಿವೆ. ಇಂತಹ ಬಿಗುವಿನ ವಾತಾವರಣದ ನಡುವೆ ಇಬ್ಬರೂ ನಾಯಕರು ಒಟ್ಟಿಗೆ ಕುಳಿತು ಉಪಹಾರ ಸೇವಿಸುತ್ತಾ ಯಾವ ವಿಷಯದ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂಬುದು ಸದ್ಯದ…
ಬೆಂಗಳೂರು: 2026ನೇ ಸಾಲಿನ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಯ ಮೊದಲನೇ ಸುತ್ತಿನ ಸೀಟು ಹಂಚಿಕೆಯ ನೈಜ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಪ್ರಕಟಿಸಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ವಿವಿಧ ವಸತಿ ಶಾಲೆಗಳ ಪ್ರವೇಶಕ್ಕಾಗಿ ಈ ಪ್ರಕ್ರಿಯೆ ನಡೆದಿದೆ. ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ವೆಬ್ಸೈಟ್ನಲ್ಲಿ ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದಾಗಿದೆ. ಯಾವ ಶಾಲೆಗಳು? ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾ ಗಾಂಧಿ, ಡಾ|| ಬಿ.ಆರ್. ಅಂಬೇಡ್ಕರ್, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಸಂಗೊಳ್ಳಿ ರಾಯಣ್ಣ, ಕವಿರತ್ನ, ಗಾಂಧಿತತ್ವ ಹಾಗೂ ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳು. ಅಭ್ಯರ್ಥಿಗಳು ನಮೂದಿಸಿದ ಇಚ್ಛೆ/ಆಯ್ಕೆಗಳನ್ನು (Options) ಪರಿಗಣಿಸಿ, ಸಂಪೂರ್ಣವಾಗಿ ಮೆರಿಟ್ ಆಧಾರದ ಮೇಲೆ ನಿಯಮಾನುಸಾರ ಈ ಸೀಟು ಹಂಚಿಕೆ ಮಾಡಲಾಗಿದೆ. ಮೊದಲನೇ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ದಿನಾಂಕ 30-05-2026 ರೊಳಗಾಗಿ ಸಂಬಂಧಪಟ್ಟ…
ತಿರುವನಂತಪುರಂ: ಕೇರಳಂ ಮಾಜಿ ಮುಖ್ಯಮಂತ್ರಿ ಹಾಗೂ ಪ್ರಸ್ತುತ ವಿರೋಧ ಪಕ್ಷದ ನಾಯಕರಾಗಿರುವ (LoP) ಪಿಣರಾಯಿ ವಿಜಯನ್ ಅವರ ನಿವಾಸ ಸೇರಿದಂತೆ ಕೇರಳದ ಒಟ್ಟು 10 ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ED) ಇಂದು ಏಕಕಾಲದಲ್ಲಿ ದಾಳಿ ನಡೆಸಿದೆ. ಕೊಚ್ಚಿನ್ ಮಿನರಲ್ಸ್ ಆಂಡ್ ರುಟೈಲ್ ಲಿಮಿಟೆಡ್ (CMRL) ಸಂಸ್ಥೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈ ಶೋಧ ಕಾರ್ಯ ನಡೆಯುತ್ತಿದ್ದು, ಪಿಣರಾಯಿ ವಿಜಯನ್ ಅವರ ಪುತ್ರಿಯ ವಿರುದ್ಧ ಕೇಳಿಬಂದಿರುವ ಆರೋಪಗಳ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಿಎಂಆರ್ಎಲ್ (CMRL) ಕಂಪನಿಯಿಂದ ಪಿಣರಾಯಿ ವಿಜಯನ್ ಅವರ ಪುತ್ರಿಗೆ ನಿಯಮಬಾಹಿರವಾಗಿ ಹಣ ಸಂದಾಯವಾಗಿದೆ ಎಂಬ ಆರೋಪದ ಮೇಲೆ ತನಿಖೆ ತೀವ್ರಗೊಂಡಿದೆ. ಈ ದಾಳಿಯ ಕುರಿತು ಜಾರಿ ನಿರ್ದೇಶನಾಲಯದ ಹಿರಿಯ ಅಧಿಕಾರಿಗಳಿಂದ ಅಧಿಕೃತ ಪ್ರಕಟಣೆ ಹಾಗೂ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ. ಕೇರಳ ರಾಜಕೀಯ ವಲಯದಲ್ಲಿ ಈ ಬೆಳವಣಿಗೆ ಭಾರೀ ಸಂಚಲನ ಮೂಡಿಸಿದೆ. https://twitter.com/ANI/status/2059464032843952550?s=20
ರೈತರು ಕೃಷಿ ಪರಿಕರಗಳನ್ನು ಖರೀದಿಸುವ ಸಮಯದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಕೃಷಿ ಇಲಾಖೆಯಿಂದ ರೈತರಿಗೆ ಸಲಹೆಗಳನ್ನು ನೀಡಲಾಗಿದೆ. ಈ ವರ್ಷದ ಮುಂಗಾರು ಹಂಗಾಮು ಉತ್ತಮವಾಗಿ ಪ್ರಾರಂಭಗೊಂಡಿದೆ. ಇಲ್ಲಿಯವರೆಗೆ ವಾಡಿಕೆ ಮಳೆಯ ಪ್ರಮಾಣ 64.30 ಮಿ.ಮೀ. ಇದ್ದು, ವಾಸ್ತವಿಕ ಮಳೆಯ ಪ್ರಮಾಣ 92.00 ಮಿ.ಮೀ. ದಾಖಲಾಗಿದೆ. 43% ಹೆಚ್ಚಿನ ಮಳೆಯಾಗಿದ್ದು, ಮಳೆಯು ಪ್ರಾರಂಭವಾಗಿರುವುದರಿಂದ ಈ ಹಂಗಾಮು ಆಶಾದಾಯಕವಾಗಿರುವ ನಿರೀಕ್ಷೆಯಿದೆ. ಈ ಸಂದರ್ಭದಲ್ಲಿ ರೈತರು ಕೆಲವು ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ. ಅಧೀಕೃತ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಮಾರಾಟ ಮಳಿಗೆಗಳಿಂದ ಮಾತ್ರ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಇತರೆ ಕೃಷಿ ಪರಿಕರಗಳನ್ನು ಖರೀದಿಸಬೇಕು. ಬಿಡಿ (ಲೂಸ್) ಬಿತ್ತನೆ ಬೀಜಗಳನ್ನು ಖರೀದಿಸಬಾರದು. ಖರೀದಿಸುವ ಸಂದರ್ಭದಲ್ಲಿ ಕಡ್ಡಾಯವಾಗಿ ಬಿಲ್ ಪಡೆದುಕೊಳ್ಳಬೇಕು ಹಾಗೂ ಬಿಲ್ಲಿನಲ್ಲಿ ಉಲ್ಲೇಖಿತ ವಿವರಗಳನ್ನು ಪರಿಶೀಲಿಸಬೇಕು. ಬಿಲ್ನಲ್ಲಿ ಲಾಟ್ ಸಂಖ್ಯೆ ಅಥವಾ ಬ್ಯಾಚ್ ಸಂಖ್ಯೆ ಇರುವುದನ್ನು ಖಾತ್ರಿಪಡಿಸಿಕೊಳ್ಳಬೇಕು. ತಮ್ಮ ಜಮೀನಿನ ಸ್ವರೂಪಕ್ಕೆ (ಖುಷ್ಕಿ ಅಥವಾ ನೀರಾವರಿ) ಅನುಗುಣವಾಗಿ ಶಿಫಾರಸ್ಸು ಮಾಡಿದ ತಳಿಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ರೈತರು…














