Author: kannadanewsnow57

ಇಂದಿನ ಬದಲಾದ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ವಯಸ್ಸಾದವರು ಮಾತ್ರವಲ್ಲದೆ ಯುವಕರೂ ಕೂಡ ಮೊಣಕಾಲು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕೂತರೆ ಏಳಲಾಗದ, ನಡೆದರೆ ಕಟ-ಕಟ ಎಂಬ ಶಬ್ದ ಬರುವ ಮತ್ತು ವಿಪರೀತ ನೋವಿನಿಂದಾಗಿ ರಾತ್ರಿ ನಿದ್ದೆ ಕೂಡ ಬಾರದ ಪರಿಸ್ಥಿತಿ ಇಂದು ಅನೇಕರದ್ದಾಗಿದೆ. ಹಳೆಯ ಕಾಲದ ಶುದ್ಧ ಆಹಾರಗಳು ಇಂದು ಸಿಗುತ್ತಿಲ್ಲದಿರುವುದು ಈ ಮೂಳೆ ಸಂಬಂಧಿ ಕಾಯಿಲೆಗಳಿಗೆ ಮುಖ್ಯ ಕಾರಣ. ಆದರೆ ಗಾಬರಿಯಾಗುವ ಅಗತ್ಯವಿಲ್ಲ; ನಿಮ್ಮ ಅಡುಗೆಮನೆಯಲ್ಲಿರುವ ಕೆಲವು ಪದಾರ್ಥಗಳ ಮೂಲಕವೇ ಮೊಣಕಾಲು ನೋವನ್ನು ಹೋಗಲಾಡಿಸಿ ಮೂಳೆಗಳನ್ನು ಬಲಿಷ್ಠಗೊಳಿಸಬಹುದು. ಆ ಅದ್ಭುತ ಮನೆಮದ್ದುಗಳು ಇಲ್ಲಿವೆ: 1. ಪಾರಿಜಾತದ ಎಲೆಗಳ ಕಷಾಯ (Night Jasmine) ಪಾರಿಜಾತದ ಎಲೆಗಳು ಕೀಲು ನೋವಿಗೆ ರಾಮಬಾಣ. 6 ರಿಂದ 7 ಪಾರಿಜಾತದ ಎಲೆಗಳನ್ನು ಅರೆದು ಚಟ್ನಿ ಮಾಡಿ, ಅದನ್ನು ಒಂದು ಲೋಟ ನೀರಿನಲ್ಲಿ ಹಾಕಿ ಚೆನ್ನಾಗಿ ಕುದಿಸಿ. ನೀರು ಅರ್ಧದಷ್ಟು ಆದ ಮೇಲೆ ಸೋಸಿಕೊಂಡು, ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿರುವಾಗ ಕುಡಿಯಿರಿ. ಇದು ಯಾವುದೇ ಹಳೆಯ…

Read More

ಟೆಹ್ರಾನ್: ಇರಾನ್‌ನಲ್ಲಿ ಸಂಭವಿಸಿದ ಭೀಕರ ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ನಾಲ್ವರು ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಹೆಲಿಕಾಪ್ಟರ್‌ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಇರಾನ್ ರಕ್ಷಣಾ ಪಡೆಗಳು ಮತ್ತು ತುರ್ತು ನಿರ್ವಹಣಾ ತಂಡಗಳು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ.

Read More

ಕರಾಚಿ: ಇರಾನ್‌ನ ಪ್ರಮುಖ ನಾಯಕ ಖಮೇನಿ ಅವರ ಹತ್ಯೆಯನ್ನು ಖಂಡಿಸಿ ಪಾಕಿಸ್ತಾನದಲ್ಲಿ ಆಕ್ರೋಶದ ಕಟ್ಟೆ ಒಡೆದಿದೆ. ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕರಾಚಿಯಲ್ಲಿರುವ ಅಮೆರಿಕ ರಾಯಭಾರಿ ಕಚೇರಿಯ ಮೇಲೆ ಉದ್ರಿಕ್ತರ ಗುಂಪು ಭೀಕರ ದಾಳಿ ನಡೆಸಿದೆ. ಅಮೆರಿಕ ಸೇನೆ ಗೋಲಿಬಾರಿಗೆ 8 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಕರಾಚಿಯಲ್ಲಿರುವ ಅಮೆರಿಕ ರಾಯಭಾರಿ ಕಚೇರಿಯತ್ತ ನುಗ್ಗಿದ ಸಾವಿರಾರು ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೆ, ಕಚೇರಿಯ ಆವರಣಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರ ಅಟ್ಟಹಾಸಕ್ಕೆ ರಾಯಭಾರಿ ಕಚೇರಿಯ ಕಿಟಕಿ ಗಾಜುಗಳು ಪುಡಿಪುಡಿಯಾಗಿದ್ದು, ಒಳಗಿದ್ದ ಪೀಠೋಪಕರಣಗಳನ್ನು ಸಂಪೂರ್ಣವಾಗಿ ಧ್ವಂಸಗೊಳಿಸಲಾಗಿದೆ. ಸದ್ಯ ಇಡೀ ಕರಾಚಿ ನಗರದಲ್ಲಿ ಪರಿಸ್ಥಿತಿ ಕೈಮೀರಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಭದ್ರತಾ ಪಡೆಗಳು ಹರಸಾಹಸ ಪಡುತ್ತಿವೆ.ಅಮೆರಿಕದ ಹಸ್ತಕ್ಷೇಪದಿಂದಲೇ ಈ ಹತ್ಯೆ ನಡೆದಿದೆ ಎಂದು ಆರೋಪಿಸಿರುವ ಪ್ರತಿಭಟನಾಕಾರರು, ಪಾಕಿಸ್ತಾನದಾದ್ಯಂತ ಅಮೆರಿಕ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ. ಘಟನೆಯಿಂದಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ತಲ್ಲಣ ಸೃಷ್ಟಿಯಾಗಿದೆ. https://twitter.com/ALERTX360/status/2027994573600133311?ref_src=twsrc%5Etfw%7Ctwcamp%5Etweetembed%7Ctwterm%5E2027994573600133311%7Ctwgr%5Eeb1e3c86874902b9d150641687948be43ca13395%7Ctwcon%5Es1_c10&ref_url=https%3A%2F%2Fkannadadunia.com%2Fkhaminie-death-fire-on-karachi-us-consulate%2F

Read More

ಇರಾನ್ ಮೇಲಿನ ದಾಳಿಯು ಕೇವಲ ಪ್ರಾದೇಶಿಕ ಯುದ್ಧವಾಗಿ ಉಳಿಯದೆ, ಇಡೀ ವಿಶ್ವದ ಆರ್ಥಿಕತೆಯ ಮೇಲೆ “ಸುನಾಮಿ” ಎಬ್ಬಿಸುವ ಮುನ್ಸೂಚನೆ ನೀಡಿದೆ. ಇರಾನ್ ಮೇಲಿನ ಅಂತರಾಷ್ಟ್ರೀಯ ನಿರ್ಬಂಧಗಳ ನಡುವೆಯೂ ಅದು ಪ್ರತಿದಿನ 3 ಮಿಲಿಯನ್ ಬ್ಯಾರೆಲ್ ತೈಲ ಉತ್ಪಾದಿಸುತ್ತಿದ್ದು, ಅದರ 80% ಚೀನಾಕ್ಕೆ ಸರಬರಾಜಾಗುತ್ತದೆ. ಹೀಗಾಗಿ ಈ ಸಂಘರ್ಷ ಜಾಗತಿಕ ತೈಲ ಮಾರುಕಟ್ಟೆಯನ್ನು ಬೆಚ್ಚಿಬೀಳಿಸಿದೆ. 1. ಕಚ್ಚಾ ತೈಲ ಬೆಲೆಯಲ್ಲಿ ಭಾರೀ ಏರಿಕೆ ಸಾಧ್ಯತೆ ವಿಶ್ವದ 20% ತೈಲ ಸಾಗಣೆಯಾಗುವ ‘ಹೊರ್ಮುಜ್ ಜಲಸಂಧಿ’ (Strait of Hormuz) ಇರಾನ್ ಸಮೀಪದಲ್ಲಿದೆ. ಒಂದು ವೇಳೆ ಈ ಮಾರ್ಗ ಬಂದ್ ಆದಲ್ಲಿ ಜಾಗತಿಕ ತೈಲ ಬಿಕ್ಕಟ್ಟು ತೀವ್ರಗೊಳ್ಳಲಿದೆ. ಪ್ರಸ್ತುತ 72 ಡಾಲರ್ ಆಸುಪಾಸಿನಲ್ಲಿರುವ ಕಚ್ಚಾ ತೈಲ ಬೆಲೆ 80 ಡಾಲರ್ ದಾಟುವ ಅಂದಾಜಿದೆ. ತಜ್ಞರ ಪ್ರಕಾರ, ತೈಲ ಬೆಲೆಯಲ್ಲಿ 5% ರಿಂದ 10% ರಷ್ಟು ಏರಿಕೆಯಾಗಬಹುದು. 2. ಚಿನ್ನ ಮತ್ತು ಬೆಳ್ಳಿ ಬೆಲೆ ಗಗನಕ್ಕೆ? ಯುದ್ಧದ ಸಮಯದಲ್ಲಿ ಹೂಡಿಕೆದಾರರು ಸುರಕ್ಷಿತ ಹೂಡಿಕೆಯಾಗಿ ಚಿನ್ನದತ್ತ ಮುಖ ಮಾಡುತ್ತಾರೆ.…

Read More

ಮನಾಮ/ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಕವಿದಿದ್ದು, ಪರಿಸ್ಥಿತಿ ಕ್ಷಣಕ್ಷಣಕ್ಕೂ ಬಿಗಡಾಯಿಸುತ್ತಿದೆ. ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ನಂತರ ಇರಾನ್ ನಡೆಸುತ್ತಿರುವ ಪ್ರತೀಕಾರದ ದಾಳಿಗಳ ಭಾಗವಾಗಿ, ಇಂದು ಬಹ್ರೇನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ ನಡೆಸಲಾಗಿದೆ. ಘಟನೆಯ ವಿವರ: ಬಹ್ರೇನ್ ಆಂತರಿಕ ಸಚಿವಾಲಯದ ಪ್ರಕಾರ, ಡ್ರೋನ್ ದಾಳಿಯಿಂದಾಗಿ ವಿಮಾನ ನಿಲ್ದಾಣದ ಕಟ್ಟಡಕ್ಕೆ ಪೀಠೋಪಕರಣ ಹಾಗೂ ಗಾಜು ಸೇರಿದಂತೆ ಭೌತಿಕ ಹಾನಿಯಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ವಿಮಾನ ನಿಲ್ದಾಣವನ್ನು ಮೊದಲೇ ತೆರವುಗೊಳಿಸಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ದುಬೈ ಮತ್ತು ಕುವೈತ್ ಮೇಲೂ ದಾಳಿ: ಇದೇ ವೇಳೆ ದುಬೈ ವಿಮಾನ ನಿಲ್ದಾಣದ ಮೇಲೂ ದಾಳಿ ನಡೆದಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಕುವೈತ್ ಮತ್ತು ಕತಾರ್‌ನಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಇರಾನ್ ಎಚ್ಚರಿಕೆ: ಅಮೆರಿಕ ಮತ್ತು ಇಸ್ರೇಲ್‌ನ ಮಿಲಿಟರಿ ನೆಲೆಗಳು ಇರುವ ಎಲ್ಲಾ ಕೊಲ್ಲಿ ರಾಷ್ಟ್ರಗಳು ನಮ್ಮ ಗುರಿಯಾಗಲಿವೆ ಎಂದು ಇರಾನ್‌ನ…

Read More

ಕರಾಚಿ: ಇರಾನ್‌ನ ಪ್ರಮುಖ ನಾಯಕ ಖಮೇನಿ ಅವರ ಹತ್ಯೆಯನ್ನು ಖಂಡಿಸಿ ಪಾಕಿಸ್ತಾನದಲ್ಲಿ ಆಕ್ರೋಶದ ಕಟ್ಟೆ ಒಡೆದಿದೆ. ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕರಾಚಿಯಲ್ಲಿರುವ ಅಮೆರಿಕ ರಾಯಭಾರಿ ಕಚೇರಿಯ ಮೇಲೆ ಉದ್ರಿಕ್ತರ ಗುಂಪು ಭೀಕರ ದಾಳಿ ನಡೆಸಿದೆ. ಕರಾಚಿಯಲ್ಲಿರುವ ಅಮೆರಿಕ ರಾಯಭಾರಿ ಕಚೇರಿಯತ್ತ ನುಗ್ಗಿದ ಸಾವಿರಾರು ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೆ, ಕಚೇರಿಯ ಆವರಣಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರ ಅಟ್ಟಹಾಸಕ್ಕೆ ರಾಯಭಾರಿ ಕಚೇರಿಯ ಕಿಟಕಿ ಗಾಜುಗಳು ಪುಡಿಪುಡಿಯಾಗಿದ್ದು, ಒಳಗಿದ್ದ ಪೀಠೋಪಕರಣಗಳನ್ನು ಸಂಪೂರ್ಣವಾಗಿ ಧ್ವಂಸಗೊಳಿಸಲಾಗಿದೆ. ಸದ್ಯ ಇಡೀ ಕರಾಚಿ ನಗರದಲ್ಲಿ ಪರಿಸ್ಥಿತಿ ಕೈಮೀರಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಭದ್ರತಾ ಪಡೆಗಳು ಹರಸಾಹಸ ಪಡುತ್ತಿವೆ.ಅಮೆರಿಕದ ಹಸ್ತಕ್ಷೇಪದಿಂದಲೇ ಈ ಹತ್ಯೆ ನಡೆದಿದೆ ಎಂದು ಆರೋಪಿಸಿರುವ ಪ್ರತಿಭಟನಾಕಾರರು, ಪಾಕಿಸ್ತಾನದಾದ್ಯಂತ ಅಮೆರಿಕ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ. ಘಟನೆಯಿಂದಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ತಲ್ಲಣ ಸೃಷ್ಟಿಯಾಗಿದೆ. https://twitter.com/ALERTX360/status/2027994573600133311?ref_src=twsrc%5Etfw%7Ctwcamp%5Etweetembed%7Ctwterm%5E2027994573600133311%7Ctwgr%5Eeb1e3c86874902b9d150641687948be43ca13395%7Ctwcon%5Es1_c10&ref_url=https%3A%2F%2Fkannadadunia.com%2Fkhaminie-death-fire-on-karachi-us-consulate%2F

Read More

ಟೆಹ್ರಾನ್: ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ ರಹೀಮ್ ಮೂಸವಿ ಅವರು ಹತ್ಯೆಯಾಗಿದ್ದಾರೆ ಎಂದು ಇರಾನ್ ಸರ್ಕಾರಿ ದೂರದರ್ಶನ ಆರಂಭಿಕ ವರದಿಗಳಲ್ಲಿ ತಿಳಿಸಿದೆ. ಇರಾನ್ ಸೇನೆಯು ಅಮೆರಿಕ ಮತ್ತು ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೇ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಇರಾನ್ ಮಾಧ್ಯಮಗಳ ಪ್ರಕಾರ, ರಾಜಧಾನಿ ಟೆಹ್ರಾನ್‌ನಲ್ಲಿ ಹಲವಾರು ಭೀಕರ ಸ್ಫೋಟದ ಸಬ್ದಗಳು ಕೇಳಿಬಂದಿವೆ. ಇಸ್ರೇಲ್ ಮತ್ತು ಅಮೆರಿಕದ ನೆಲೆಗಳ ಮೇಲೆ ಇರಾನ್ ದಾಳಿ ನಡೆಸಿದ ನಂತರ, ಪ್ರತಿಯಾಗಿ ನಡೆದ ದಾಳಿಯಲ್ಲಿ ಮೂಸವಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದೆ.

Read More

ನವದೆಹಲಿ: ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಭಾಗದಲ್ಲಿ ಭದ್ರತಾ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿರುವ ಹಿನ್ನೆಲೆಯಲ್ಲಿ, ಆಯಾ ದೇಶಗಳಲ್ಲಿ ನೆಲೆಸಿರುವ ಭಾರತೀಯ ನಾಗರಿಕರ ಸುರಕ್ಷತೆಗಾಗಿ ಭಾರತ ಸರ್ಕಾರ ಎಚ್ಚೆತ್ತುಕೊಂಡಿದೆ. ಯಾವುದೇ ತುರ್ತು ಪರಿಸ್ಥಿತಿ ಎದುರಾದರೂ ತಕ್ಷಣವೇ ಸ್ಪಂದಿಸಲು ಅನುವಾಗುವಂತೆ ವಿವಿಧ ದೇಶಗಳಲ್ಲಿರುವ ‘ಭಾರತೀಯ ರಾಯಭಾರ ಕಚೇರಿಗಳು’ (Indian Embassies) ತುರ್ತು ಸಹಾಯವಾಣಿ ಸಂಖ್ಯೆಗಳನ್ನು (Helpline Numbers) ಬಿಡುಗಡೆ ಮಾಡಿವೆ. ಮಧ್ಯಪ್ರಾಚ್ಯ ರಾಷ್ಟ್ರಗಳಾದ ಇಸ್ರೇಲ್, ಇರಾನ್, ಸೌದಿ ಅರೇಬಿಯಾ, ಯುಎಇ, ಕತಾರ್, ಬಹ್ರೇನ್ ಸೇರಿದಂತೆ ಹಲವು ದೇಶಗಳಲ್ಲಿ ಲಕ್ಷಾಂತರ ಭಾರತೀಯರು ಉದ್ಯೋಗ ಮತ್ತು ವ್ಯಾಸಂಗಕ್ಕಾಗಿ ನೆಲೆಸಿದ್ದಾರೆ. ಪ್ರಸ್ತುತ ಈ ಪ್ರದೇಶದಲ್ಲಿ ನಡೆಯುತ್ತಿರುವ ಭೌಗೋಳಿಕ-ರಾಜಕೀಯ ಬೆಳವಣಿಗೆಗಳು ಮತ್ತು ಯುದ್ಧದ ಭೀತಿಯಿಂದಾಗಿ ಅನಿವಾಸಿ ಭಾರತೀಯರು ಆತಂಕಕ್ಕೆ ಒಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಆಕಾಶವಾಣಿ ಸುದ್ದಿ (Akashvani News) ಹಾಗೂ ರಾಯಭಾರ ಕಚೇರಿಗಳು ಅಧಿಕೃತವಾಗಿ ದೇಶವಾರು ಸಹಾಯವಾಣಿ ಸಂಖ್ಯೆಗಳನ್ನು ಹಂಚಿಕೊಂಡಿವೆ. ಭಾರತೀಯ ನಾಗರಿಕರು ಯಾವುದೇ ಭಯ ಅಥವಾ ಆತಂಕಕ್ಕೆ ಒಳಗಾಗದೆ, ತುರ್ತು ಸಂದರ್ಭಗಳಲ್ಲಿ ಈ ಕೆಳಕಂಡ ಸಂಖ್ಯೆಗಳನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.…

Read More

ಇಂದಿನ ದಿನಗಳಲ್ಲಿ ಪ್ರತಿಯೊಂದು ಮನೆಯಲ್ಲೂ ಅಡುಗೆ ಅನಿಲ ಅಥವಾ ಎಲ್‌ಪಿಜಿ (LPG) ಸಿಲಿಂಡರ್ ಬಳಕೆ ಅನಿವಾರ್ಯವಾಗಿದೆ. ಉರುವಲು, ಸೀಮೆಎಣ್ಣೆ ಒಲೆಗಳ ಕಾಲ ಮುಗಿದು ಎಲ್ಲರ ಅಡುಗೆ ಮನೆಗಳಲ್ಲೂ ಗ್ಯಾಸ್ ಸಿಲಿಂಡರ್‌ಗಳು ಸ್ಥಾನ ಪಡೆದಿವೆ. ಆದರೆ, ಇದು ಎಷ್ಟು ಉಪಯುಕ್ತವೋ, ಅಷ್ಟೇ ಅಪಾಯಕಾರಿ ಕೂಡ ಹೌದು. ಸ್ವಲ್ಪ ಯಾಮಾರಿದರೂ ಇದು ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು. ಕೆಲವೊಮ್ಮೆ ಅಡುಗೆ ಮನೆಯಲ್ಲಿ ಗ್ಯಾಸ್ ಸೋರಿಕೆಯಾಗುವ (Gas Leakage) ವಾಸನೆ ಬರುತ್ತದೆ. ಇಂತಹ ಸಂದರ್ಭದಲ್ಲಿ ಬಹುತೇಕರು ಗಾಬರಿಗೊಳಗಾಗುತ್ತಾರೆ. ಆದರೆ, ಅಡುಗೆ ಅನಿಲ ಸೋರಿಕೆಯಾದಾಗ ಭಯಪಡುವ ಬದಲು ಸಮಯಪ್ರಜ್ಞೆಯಿಂದ ವರ್ತಿಸುವುದು ಅತ್ಯಂತ ಮುಖ್ಯ. ನೀವು ತೆಗೆದುಕೊಳ್ಳುವ ಸಣ್ಣ ಎಚ್ಚರಿಕಾ ಕ್ರಮಗಳು ಸಂಭವನೀಯ ದೊಡ್ಡ ಪ್ರಾಣಾಪಾಯವನ್ನು ತಪ್ಪಿಸಬಹುದು. ಗ್ಯಾಸ್ ಸೋರಿಕೆಯಾದಾಗ ನೀವು ತಕ್ಷಣ ಮಾಡಬೇಕಾದ ಪ್ರಮುಖ ಕೆಲಸಗಳು ಇಲ್ಲಿವೆ. 1. ವಿದ್ಯುತ್ ಸ್ವಿಚ್‌ಗಳನ್ನು ಮತ್ತು ಬೆಂಕಿಯನ್ನು ಬಳಸಬೇಡಿ ಗ್ಯಾಸ್ ವಾಸನೆ ಬಂದ ತಕ್ಷಣ ನಾವು ಮಾಡುವ ಮೊದಲ ತಪ್ಪು ಎಂದರೆ, ಏನಾಗಿದೆ ಎಂದು ನೋಡಲು ಲೈಟ್ ಸ್ವಿಚ್ ಆನ್ ಮಾಡುವುದು.…

Read More

ನವದೆಹಲಿ : ಇಂದು ಮಾರ್ಚ್ 1, 2026. ಇಂದಿನಿಂದ ಸಾಮಾನ್ಯ ಜನರ ಜೇಬಿಗೆ ಕತ್ತರಿ ಬೀಳುವಂತಹ ಹಲವು ಬದಲಾವಣೆಗಳು ದೇಶಾದ್ಯಂತ ಜಾರಿಗೆ ಬಂದಿವೆ. ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಹಿಡಿದು ರೈಲ್ವೆ ಟಿಕೆಟ್ ಬುಕಿಂಗ್ ಮತ್ತು ಬ್ಯಾಂಕಿಂಗ್ ನಿಯಮಗಳವರೆಗೆ ಹಲವು ಬದಲಾವಣೆಗಳಾಗಿವೆ. ಅವುಗಳ ಸಂಪೂರ್ಣ ಮಾಹಿತಿ ಇಲ್ಲಿದೆ. 1. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ ಮಾರ್ಚ್ ತಿಂಗಳ ಮೊದಲ ದಿನವೇ ವಾಣಿಜ್ಯ ಬಳಕೆಯ ಎಲ್‌ಪಿಜಿ (19 ಕೆಜಿ) ಸಿಲಿಂಡರ್ ಬೆಲೆಯಲ್ಲಿ ಸುಮಾರು 28 ರಿಂದ 31 ರೂಪಾಯಿಗಳವರೆಗೆ ಏರಿಕೆ ಮಾಡಲಾಗಿದೆ. ಇದರಿಂದ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳ ಖರ್ಚು ಹೆಚ್ಚಾಗಲಿದೆ. ದೆಹಲಿ: 1,740.50 ರೂ. ನಿಂದ 1,768.50 ರೂ. ಗೆ ಏರಿಕೆ (28 ರೂ. ಹೆಚ್ಚಳ). ಮುಂಬೈ: 1,720.50 ರೂ. ಗೆ ಏರಿಕೆ. ಕೋಲ್ಕತ್ತಾ: 1,875.50 ರೂ. ಗೆ ಏರಿಕೆ (31 ರೂ. ಹೆಚ್ಚಳ). ಚೆನ್ನೈ: 1,929 ರೂ. ಗೆ ಏರಿಕೆ. 2. ರೈಲ್ವೆ ಟಿಕೆಟ್ ಬುಕಿಂಗ್‌ನಲ್ಲಿ ‘ರೈಲ್‌ಒನ್’ ಕ್ರಾಂತಿ ಇಂದಿನಿಂದ…

Read More