Author: kannadanewsnow57

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸತತ ಎರಡನೇ ಬಾರಿಗೆ ಐಪಿಎಲ್ ಮುಕುಟ ಮುಡಿಗೇರಿಸಿಕೊಂಡು ಹೊಸ ಇತಿಹಾಸ ಸೃಷ್ಟಿಸಿದೆ. ಆದರೆ, ಈ ಐತಿಹಾಸಿಕ ವಿಜಯದ ಮಹೋತ್ಸವದ ನಡುವೆಯೂ ಸಿಲಿಕಾನ್ ಸಿಟಿಯಲ್ಲಿ ಒಂದು ರೀತಿಯ ಮೌನ ಆವರಿಸಿದೆ. ಹೌದು, ಕಪ್ ಗೆದ್ದ ಸಂಭ್ರಮದ ನಡುವೆಯೇ ಇಡೀ ಆರ್ಸಿಬಿ ಬಳಗ ಕರಾಳ ದಿನವೊಂದನ್ನು ನೆನೆದು ಭಾವುಕವಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ದುರಂತಕ್ಕೆ ವರ್ಷ ತುಂಬು: ಕಳೆದ ವರ್ಷ ಆರ್ಸಿಬಿ ತಂಡ ಚೊಚ್ಚಲ ಬಾರಿಗೆ ಟ್ರೋಫಿ ಗೆದ್ದಾಗ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಇತಿಹಾಸವೇ ಕಾಣದಂತಹ ವಿಜಯೋತ್ಸವ ನಡೆದಿತ್ತು. ಈ ವೇಳೆ ಉಂಟಾದ ಭೀಕರ ಜನದಟ್ಟಣೆ ಮತ್ತು ಕಾಲ್ತುಳಿತದ ದುರಂತದಲ್ಲಿ 11 ಜನ ಅಭಿಮಾನಿಗಳು ಉಸಿರು ಚೆಲ್ಲಿದ್ದರು. ಆ ಭೀಕರ ಘಟನೆ ನಡೆದು ಇಂದಿಗೆ ಸರಿಯಾಗಿ ಒಂದು ವರ್ಷ ಸಂದಿದೆ. ರೋಡ್ ಶೋ, ಸಾರ್ವಜನಿಕ ಸಂಭ್ರಮಾಚರಣೆ ರದ್ದು! ಆ ಕರಾಳ ದಿನದ ನೋವಿನ ನೆನಪಿನಲ್ಲಿ ಆರ್ ಸಿಬಿ ಮ್ಯಾನೇಜ್ ಮೆಂಟ್ ಈ ಬಾರಿ ಅತ್ಯಂತ…

Read More

ಭೋಪಾಲ್: ದೇಶಾದ್ಯಂತ ಭಾರಿ ವಿವಾದ ಸೃಷ್ಟಿಸಿರುವ ‘ನೀಟ್-ಯುಜಿ’ (NEET-UG) ಪರೀಕ್ಷೆ ಅಕ್ರಮ ಹಾಗೂ ಮರುಪರೀಕ್ಷೆಯ ಆತಂಕಕ್ಕೆ ಮತ್ತೊಂದು ಬಲಿಯಾಗಿದೆ. ಪರೀಕ್ಷಾ ಪತ್ರಿಕೆ ಸೋರಿಕೆ ಹಗರಣದಿಂದಾಗಿ ಪರೀಕ್ಷೆ ರದ್ದಾದ ಬೆನ್ನಲ್ಲೇ ತೀವ್ರ ಖಿನ್ನತೆಗೆ ಒಳಗಾಗಿದ್ದ ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯ ವಿದ್ಯಾರ್ಥಿನಿ ಆಕಾಂಕ್ಷಾ ಚತುರ್ವೇದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್ನೋಟ್ ಬರೆದಿಟ್ಟು ಆಕಾಂಕ್ಷಾ ಆತ್ಮಹತ್ಯೆ ಮಾಡಿಕೊಂಡಿದ್ದು, “ನನಗೆ ಮತ್ತೊಮ್ಮೆ ಪರೀಕ್ಷೆ ಬರೆಯುವ ಧೈರ್ಯವಿಲ್ಲ” ಎಂದು ತನ್ನ ಅಳಲನ್ನು ತೋಡಿಕೊಂಡಿದ್ದಾರೆ. ಮೇ 3 ರಂದು ನಡೆದಿದ್ದ ನೀಟ್ ಪರೀಕ್ಷೆಯಲ್ಲಿ ಆಕಾಂಕ್ಷಾ ಭಾಗವಹಿಸಿದ್ದರು. ಪರೀಕ್ಷೆ ಚೆನ್ನಾಗಿ ಆಗಿದ್ದರಿಂದ ಸುಮಾರು 650 ಅಂಕಗಳು ಬರಬಹುದು ಎಂಬ ನಿರೀಕ್ಷೆಯಲ್ಲಿದ್ದರು. ಆಕೆಯ ತಂದೆ ಕೃಷ್ಣ ಕುಮಾರ್ ಚತುರ್ವೇದಿ ವೃತ್ತಿಯಲ್ಲಿ ರೈತರಾಗಿದ್ದು, ಮಗಳನ್ನು ವೈದ್ಯೆಯನ್ನಾಗಿ ಮಾಡಲು ತೀವ್ರ ಆರ್ಥಿಕ ಸಂಕಷ್ಟದ ನಡುವೆಯೂ ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ 3 ಲಕ್ಷ ರೂಪಾಯಿ ಸಾಲ ಮಾಡಿದ್ದರು. ನಾಗ್ಪುರದಲ್ಲಿ ಮಗಳಿಗೆ ಕೋಚಿಂಗ್ ಕೊಡಿಸಲು ತಂದೆ ಅಲ್ಲಿಯೇ ಅಡುಗೆಯವನಾಗಿಯೂ ಕೆಲಸ ಮಾಡುತ್ತಿದ್ದರು. ಆದರೆ, ಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ…

Read More

ಬೆಂಗಳೂರು: ವೈದ್ಯಕೀಯ ಗರ್ಭಪಾತದ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ಅತ್ಯಂತ ಐತಿಹಾಸಿಕ ಮತ್ತು ಮಹತ್ವದ ತೀರ್ಪೊಂದನ್ನು ನೀಡಿದೆ. ಗರ್ಭಪಾತ ಮಾಡಿಸಿಕೊಳ್ಳುವುದು ಮಹಿಳೆಯ ದೈಹಿಕ ಸ್ವಾಯತ್ತತೆಗೆ ಸಂಬಂಧಿಸಿದ ಹಕ್ಕು ಎಂದು ಉಚ್ಚ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಅಷ್ಟೇ ಅಲ್ಲದೆ, ಗಂಭೀರ ನರಮಂಡಲದ ಸಮಸ್ಯೆಯಿಂದ ಬಳಲುತ್ತಿರುವ 32 ವಾರಗಳ ಭ್ರೂಣವನ್ನು ಕಾನೂನಾತ್ಮಕವಾಗಿ ತೆಗೆದುಹಾಕಲು ಹಸಿರು ನಿಶಾನೆ ತೋರಿಸಿದೆ. ಸಾಮಾನ್ಯವಾಗಿ ಭಾರತೀಯ ಕಾನೂನಿನ ಪ್ರಕಾರ 24 ವಾರಗಳವರೆಗೆ ಮಾತ್ರ ವೈದ್ಯಕೀಯ ಗರ್ಭಪಾತಕ್ಕೆ ಅವಕಾಶವಿರುತ್ತದೆ. ಆದರೆ, ಈ ವಿಶೇಷ ಪ್ರಕರಣದಲ್ಲಿ ಭ್ರೂಣಕ್ಕೆ ಈಗಾಗಲೇ 32 ವಾರಗಳಾಗಿದ್ದರೂ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ ಪೀಠವು ಗರ್ಭಪಾತಕ್ಕೆ ವಿಶೇಷ ಅನುಮತಿ ನೀಡಿದೆ. ಹೆತ್ತವರ ನೋವು ಮತ್ತು ಆರ್ಥಿಕ ಸಂಕಷ್ಟ: ಒಂದು ವೇಳೆ ಇಂತಹ ಗಂಭೀರ ದೋಷವಿರುವ ಮಗು ಜನಿಸಿದರೆ, ಆ ಮಗು ಜೀವನಪೂರ್ತಿ ನರಳಬೇಕಾಗುತ್ತದೆ. ಅದನ್ನು ನೋಡುವ ಹೆತ್ತವರ ಮಾನಸಿಕ ಸ್ಥಿತಿ, ಮಗುವಿನ ಜೀವಮಾನದ ಕಷ್ಟ ಹಾಗೂ ಅದಕ್ಕಾಗುವ ಆರ್ಥಿಕ ಹೊರೆಯನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ತಾಯಿ ಮತ್ತು ಭ್ರೂಣದ…

Read More

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳ ಒಳಗೆ ಮತ್ತು ಶಾಲಾ ಆವರಣದಲ್ಲಿ ಇನ್ಮುಂದೆ ಸಿನಿಮಾ, ಕಿರುಚಿತ್ರ ಹಾಗೂ ಧಾರಾವಾಹಿಗಳ ಚಿತ್ರೀಕರಣ ನಡೆಸುವುದಕ್ಕೆ ಶಾಲಾ ಶಿಕ್ಷಣ ಇಲಾಖೆಯು ಸಂಪೂರ್ಣ ನಿಷೇಧ ಹೇರಿದೆ. ಈ ಕುರಿತು ಇಲಾಖೆಯ ಆಯುಕ್ತರಾದ ವಿಕಾಸ್ ಕಿಶೋರ್ ಸುರಳ್ಕರ್ ಅವರು ಮಹತ್ವದ ಸುತ್ತೋಲೆಯೊಂದನ್ನು ಹೊರಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳ ಒಳಗೆ ಮತ್ತು ಶಾಲಾ ಆವರಣದಲ್ಲಿ ಚಲನಚಿತ್ರ, ಕಿರುಚಿತ್ರ, ಸಾಕ್ಷ್ಯಚಿತ್ರ ಹಾಗೂ ದೂರದರ್ಶನ ಧಾರಾವಾಹಿಗಳ ಚಿತ್ರೀಕರಣಕ್ಕಾಗಿ ನಿರ್ಮಾಪಕರು ಮತ್ತು ನಿರ್ದೇಶಕರಿಂದ ಅನುಮತಿ ಕೋರಿ ಇಲಾಖೆಗೆ ಹಲವಾರು ಪ್ರಸ್ತಾವನೆಗಳು ಸಲ್ಲಿಕೆಯಾಗುತ್ತಿದ್ದವು. ಆದರೆ, ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಶೈಕ್ಷಣಿಕ ವಾತಾವರಣದ ಹಿತದೃಷ್ಟಿಯಿಂದ ಚಿತ್ರೀಕರಣಕ್ಕೆ ಅನುಮತಿ ನೀಡಲು ಇಲಾಖೆ ನಿರಾಕರಿಸಿದೆ. ಚಿತ್ರೀಕರಣ ನಿಷೇಧಿಸಲು ಮುಖ್ಯ ಕಾರಣಗಳು: ಶಾಲಾ ಶಿಕ್ಷಣ ಇಲಾಖೆಯು ಈ ಕಠಿಣ ನಿರ್ಧಾರ ಕೈಗೊಳ್ಳಲು ಪ್ರಮುಖ ಆರು ಕಾರಣಗಳನ್ನು ಪಟ್ಟಿ ಮಾಡಿದೆ: ವಿದ್ಯಾರ್ಥಿಗಳ ಗೌಪ್ಯತೆ ಮತ್ತು ಸುರಕ್ಷತೆ: ಶಾಲೆಯಲ್ಲಿನ ವಿದ್ಯಾರ್ಥಿಗಳ ಗೌಪ್ಯತೆ ಮತ್ತು ಸುರಕ್ಷತೆಯನ್ನು ಕಾಪಾಡುವುದು ಆಯಾ ಶಾಲಾ ಮುಖ್ಯಸ್ಥರ ಹೊಣೆಯಾಗಿದ್ದು, ಚಿತ್ರೀಕರಣದಿಂದ ಇದಕ್ಕೆ…

Read More

ಬೆಂಗಳೂರು: ಬಹುನಿರೀಕ್ಷಿತ ನೈಋತ್ಯ ಮುಂಗಾರು (ಮಾನ್ಸೂನ್) ಮಾರುತಗಳು ಕೊನೆಗೂ ಕೇರಳಕ್ಕೆ ಅಧಿಕೃತವಾಗಿ ಪ್ರವೇಶ ಪಡೆದಿವೆ. ಇಂದೇ (ಜೂನ್ 4, ಗುರುವಾರ) ಕರ್ನಾಟಕದ ಕರಾವಳಿ ತೀರಕ್ಕೂ ಮುಂಗಾರು ಅಪ್ಪಳಿಸುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಮುಂದಿನ ಐದು ದಿನಗಳ ಕಾಲ ಇಡೀ ರಾಜ್ಯಾದ್ಯಂತ ಆರ್ಭಟದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಇಂದೇ ಕರಾವಳಿ ಭಾಗಕ್ಕೆ ಮುಂಗಾರು ಮಾರುತಗಳು ಕಾಲಿಡಲಿವೆ. ಒಂದು ವೇಳೆ ಗಾಳಿಯ ವೇಗದಲ್ಲಿ ಕೊಂಚ ಏರುಪೇರಾದರೂ ಜೂನ್ 5ರ ಒಳಗೆ ರಾಜ್ಯಾದ್ಯಂತ ಮಳೆ ಮಾರುತಗಳು ಸಂಪೂರ್ಣ ಆವರಿಸಿಕೊಳ್ಳಲಿವೆ. ಸದ್ಯ ಅರಬ್ಬಿ ಸಮುದ್ರ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಸಮೂಹಗಳಲ್ಲಿ ಮುಂಗಾರು ಮುನ್ನಡೆಗೆ ಪೂರಕ ಹಾಗೂ ಅತ್ಯಂತ ಅನುಕೂಲಕರ ವಾತಾವರಣ ಸೃಷ್ಟಿಯಾಗಿದೆ. ಮುಂದಿನ ಒಂದು ವಾರದ ಅವಧಿಯಲ್ಲಿ ನೆರೆರಾಜ್ಯ ಕೇರಳದ ಹಲವು ಭಾಗಗಳಲ್ಲಿ ಬರೋಬ್ಬರಿ 7 ರಿಂದ 20 ಸೆಂಟಿಮೀಟರ್ ನಷ್ಟು ದಾಖಲೆಯ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಇದರ ನೇರ ಪ್ರಭಾವ ಕರ್ನಾಟಕ ಮತ್ತು ತಮಿಳುನಾಡಿನ ಮೇಲೂ ಬೀರಲಿದ್ದು, ರಾಜ್ಯದಾದ್ಯಂತ ಗುಡುಗು,…

Read More

ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಬೆಳ್ಳಿ ಆಮದಿಗೆ ಬ್ರೇಕ್ ಹಾಕಲು ಕೇಂದ್ರ ಸರ್ಕಾರ ಮುಂದಾಗಿದ್ದು, ನಿಗದಿಪಡಿಸಿದ ಕೆಲವು ವಿಭಾಗಗಳ ಬೆಳ್ಳಿ ಆಮದು ನಿಯಮಗಳನ್ನು ಮಂಗಳವಾರದಿಂದ ಜಾರಿಗೆ ಬರುವಂತೆ ಮತ್ತಷ್ಟು ಕಠಿಣಗೊಳಿಸಿದೆ. ಇನ್ಮುಂದೆ ಯಾವುದೇ ಅಧಿಕೃತ ಏಜೆನ್ಸಿಗಳು ಅಥವಾ ಚಾನೆಲ್‌ಗಳ ಮೂಲಕ ಬೆಳ್ಳಿಯನ್ನು ಆಮದು ಮಾಡಿಕೊಳ್ಳಬೇಕಾದರೂ ವಿದೇಶಿ ವ್ಯಾಪಾರ ಮಹಾನಿರ್ದೇಶನಾಲಯದ (DGFT) ಮಾನ್ಯತೆ ಪಡೆದ ಆಮದು ಅಧಿಕಾರ ಪತ್ರ ಹೊಂದಿರುವುದು ಕಡ್ಡಾಯವಾಗಿದೆ. ವಾಣಿಜ್ಯ ಇಲಾಖೆಯ ಅಧೀನದಲ್ಲಿರುವ DGFT ಹೊರಡಿಸಿರುವ ಐಟಿಸಿ (ಎಚ್‌ಎಸ್) 2022ರ ಶೆಡ್ಯೂಲ್-1ರ ಚಾಪ್ಟರ್ 71 ರ ಅಡಿಯಲ್ಲಿ ಈ ಹೊಸ ತಿದ್ದುಪಡಿ ತರಲಾಗಿದೆ.ಶೇ. 99.9 ಅಥವಾ ಅದಕ್ಕಿಂತ ಹೆಚ್ಚು ಶುದ್ಧತೆ ಹೊಂದಿರುವ ಬೆಳ್ಳಿ ಕಣಗಳು (Silver grains) ಇನ್ನುಳಿದ ಕೆಲವು ಕಚ್ಚಾ ಬೆಳ್ಳಿ ಉತ್ಪನ್ನಗಳು (Unwrought silver products)ಈ ಎಲ್ಲಾ ಉತ್ಪನ್ನಗಳು ಸದ್ಯ ‘ನಿರ್ಬಂಧಿತ’ (Restricted) ಆಮದು ವರ್ಗದಡಿಯಲ್ಲೇ ಮುಂದುವರಿಯಲಿವೆ. ಇದಕ್ಕೂ ಮುನ್ನ ಇದ್ದ ನಿಯಮಗಳ ಪ್ರಕಾರ, ಆರ್‌ಬಿಐ (RBI) ಸೂಚಿಸಿದ ಬ್ಯಾಂಕ್‌ಗಳು, ಡಿಜಿಎಫ್‌ಟಿ (DGFT) ಅಧೀನದ ಇತರೆ ಏಜೆನ್ಸಿಗಳು ಮತ್ತು…

Read More

ಬೆಂಗಳೂರು: ವಿಧಾನಸೌಧದಲ್ಲಿ ಬುಧವಾರ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿ, ಮೊದಲ ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಂಟಿ ಮಾಧ್ಯಮಗೋಷ್ಠಿ ನಡೆಸಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಹಾಗೂ ಯುವ ಸಬಲೀಕರಣಕ್ಕಾಗಿ ಮಹತ್ವದ 6 ಬಂಪರ್ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಕಳೆದ ಮೂರು ವರ್ಷಗಳ ಪ್ರಗತಿಯ ವೇಗವನ್ನು ಮುಂದುವರಿಸಿಕೊಂಡು, ಜನರಿಗೆ ತ್ವರಿತ ಸೇವೆ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸುತ್ತಾ ಈ ಕೆಳಗಿನ ಐತಿಹಾಸಿಕ ತೀರ್ಮಾನಗಳನ್ನು ಅಧಿಕೃತವಾಗಿ ಘೋಷಿಸಿದರು. ಅಧಿಕೃತವಾಗಿ ಘೋಷಿಸಲಾದ 6 ಬಂಪರ್ ಯೋಜನೆಗಳ ವಿವರಗಳು: 1. ಉಚಿತ ಬಸ್ ಪಾಸ್ ಸೌಲಭ್ಯ ಎಲ್ಲಾ ವಿದ್ಯಾರ್ಥಿಗಳಿಗೆ ವಿಸ್ತರಣೆ: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕಲಿಯುತ್ತಿರುವ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ವಿಸ್ತರಿಸಲಾಗುವುದು. ಈ ಮೂಲಕ ಕಡಿಮೆ ಆದಾಯ ಮೂಲದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಸಾರಿಗೆ ವೆಚ್ಚವನ್ನು ಗಣನೀಯವಾಗಿ ತಗ್ಗಿಸಲು ಸರ್ಕಾರ ನೇರ ನೆರವು ನೀಡಲಿದೆ. 2. ಯುವ ಉದ್ಯೋಗ ಸೇತು (ಖಾಸಗಿ…

Read More

ಬೆಂಗಳೂರು: ದೇಶದ ಬೆನ್ನೆಲುಬಾಗಿರುವ ರೈತರ ಆರ್ಥಿಕ ಸಬಲೀಕರಣ, ಕೃಷಿ ಆಧುನೀಕರಣ ಮತ್ತು ಸಂಕಷ್ಟದ ಸಮಯದಲ್ಲಿ ನೆರವಾಗಲು ಸರ್ಕಾರವು ಕೃಷಿ ಇಲಾಖೆಯ ಮೂಲಕ ಹತ್ತಾರು ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುತ್ತಿದೆ. ಕೃಷಿ ಉತ್ಪಾದನೆ ಹೆಚ್ಚಿಸುವುದರಿಂದ ಹಿಡಿದು ಸಂಕಷ್ಟದಲ್ಲಿರುವ ರೈತ ಕುಟುಂಬಗಳಿಗೆ ಆಸರೆಯಾಗುವವರೆಗೆ ಸರ್ಕಾರ ನೀಡುತ್ತಿರುವ ಪ್ರಮುಖ ಸೌಲಭ್ಯಗಳು ಮತ್ತು ಸಬ್ಸಿಡಿಗಳ (ಸಹಾಯಧನ) ಸಮಗ್ರ ಮಾಹಿತಿ ಇಲ್ಲಿದೆ. 1. ಬಿತ್ತನೆ ಬೀಜ ಹಾಗೂ ಸಸ್ಯ ಸಂರಕ್ಷಣೆಗೆ ಭಾರಿ ರಿಯಾಯಿತಿ ಗುಣಮಟ್ಟದ ಬೀಜಗಳ ಪೂರೈಕೆ: ರಾಜ್ಯದ ಎಲ್ಲಾ ವರ್ಗದ ರೈತರಿಗೆ ವಿವಿಧ ಕೃಷಿ ಬೆಳೆಗಳ ಪ್ರಮಾಣಿತ ಬಿತ್ತನೆ ಬೀಜಗಳನ್ನು ಸಾಮಾನ್ಯ ವರ್ಗದ ರೈತರಿಗೆ ಶೇ. 50 ರಷ್ಟು ಹಾಗೂ ಪರಿಶಿಷ್ಟ ಜಾತಿ (ಪ.ಜಾ)/ ಪರಿಶಿಷ್ಟ ಪಂಗಡದ (ಪ.ಪಂ) ರೈತರಿಗೆ ಶೇ. 75 ರಷ್ಟು ರಿಯಾಯಿತಿ ದರದಲ್ಲಿ ವಿತರಿಸಲಾಗುತ್ತಿದೆ. ಸಸ್ಯ ಸಂರಕ್ಷಣೆ: ಕೀಟ ಹಾಗೂ ರೋಗ ಬಾಧೆ ತಡೆಯಲು ಪೀಡನಾಶಕ, ಜೈವಿಕ ಪೀಡನಾಶಕ ಮತ್ತು ಜೈವಿಕ ನಿಯಂತ್ರಣ ಕಾರಕಗಳನ್ನು ಶೇ. 50 ರಷ್ಟು ರಿಯಾಯಿತಿ ದರದಲ್ಲಿ ರೈತರಿಗೆ…

Read More

ಬೆಂಗಳೂರು : ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಸರ್ಕಾರಿ ಹುದ್ದೆ ಭರ್ತಿ ಜೊತೆಗೆ ಖಾಸಗಿ ಉದ್ಯೋಗ ವಿನಿಮಯ ವ್ಯವಸ್ಥೆ, ಪಂಚಾಯಿತಿಗೆ ಒಂದರಂತೆ ರಾಜ್ಯದಲ್ಲಿ 10 ಸಾವಿರ ಯುವಕರ ಸಂಘ ಸ್ಥಾಪನೆ ಹಾಗೂ 10 ಲಕ್ಷ ಅನುದಾನ, ಒಸಿ ಸಿಸಿ ಸಮಸ್ಯೆಗೆ ಪರಿಹಾರ, ರಾಜ್ಯದೆಲ್ಲೆಡೆ ಬಿ ಖಾತಾಯಿಂದ ಎ ಖಾತಾ ಪರಿವರ್ತನೆ, ಬೆಂಗಳೂರು ನಗರದ ರಸ್ತೆಗಳ ಡಾಂಬರೀಕರಣಕ್ಕೆ 2 ಸಾವಿರ ಕೋಟಿ ಅನುದಾನ ಇವಿಷ್ಟು ಕರ್ನಾಟಕ ರಾಜ್ಯದಲ್ಲಿ ಯುವ ಯುಗ ಆರಂಭಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ನೂತನ ಸರ್ಕಾರ ಕೈಗೊಂಡಿರುವ ಷಟ್ಪದಿಗಳು. ವಿಧಾನಸೌಧದಲ್ಲಿ ಬುಧವಾರ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿ ಮೊದಲ ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದರು. ಮನೆ ಕಟ್ಟುವವರಿಗೆ ಬಂಪರ್ ಕೊಡುಗೆ: ಒಸಿ – ಸಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಸ್ವಂತ ಮನೆ ಕಟ್ಟುವವರನ್ನು ದಶಕಗಳಿಂದ ಕಾಡುತ್ತಿದ್ದ ಅತಿ ದೊಡ್ಡ ಸಮಸ್ಯೆಯಾದ ಒಸಿ (Occupancy Certificate) ಮತ್ತು ಸಿಸಿ…

Read More

ಮುಜಾಫರ್ಪುರ: ಬಿಹಾರದ ಮುಜಾಫರ್ಪುರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಕನಿಷ್ಠ 10 ರೋಗಿಗಳು ಜೀವಂತವಾಗಿ ದಹನಗೊಂಡಿರುವ ಘಟನೆ ನಡೆದಿದೆ. ದುರಂತದ ವೇಳೆ ಆಸ್ಪತ್ರೆಯಲ್ಲಿದ್ದ 20ಕ್ಕೂ ಹೆಚ್ಚು ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ಆಸ್ಪತ್ರೆಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ನೋಡನೋಡುತ್ತಿದ್ದಂತೆ ಬೆಂಕಿ ಇಡೀ ಕಟ್ಟಡಕ್ಕೆ ಆವರಿಸಿಕೊಂಡಿದ್ದು, ಆಸ್ಪತ್ರೆಯ ತುಂಬೆಲ್ಲಾ ದಟ್ಟವಾದ ಹೊಗೆ ತುಂಬಿಕೊಂಡಿತು. ಇದರಿಂದಾಗಿ ತೀವ್ರ ನಿಗಾ ಘಟಕ (ICU) ಮತ್ತು ವಾರ್ಡ್ಗಳಲ್ಲಿದ್ದ ರೋಗಿಗಳು ಹೊರಬರಲಾರದೆ ಉಸಿರುಗಟ್ಟಿ ಹಾಗೂ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಬೆಂಕಿ ಹೊತ್ತಿಕೊಂಡ ತಕ್ಷಣ ಸ್ಥಳೀಯರು ಮತ್ತು ಅಗ್ನಿಶಾಮಕ ಸಿಬ್ಬಂದಿ ಜಂಟಿಯಾಗಿ ರಕ್ಷಣಾ ಕಾರ್ಯಚರಣೆ ನಡೆಸಿದರು. ಆಸ್ಪತ್ರೆಯ ಕಿಟಕಿಗಳನ್ನು ಒಡೆದು ಒಳಗಿದ್ದ 20ಕ್ಕೂ ಹೆಚ್ಚು ರೋಗಿಗಳು ಮತ್ತು ಅವರ ಸಂಬಂಧಿಕರನ್ನು ಸುರಕ್ಷಿತವಾಗಿ ಹೊರಗೆ ತರಲಾಗಿದೆ.” – ಸ್ಥಳೀಯ ಅಧಿಕಾರಿಗಳು ರಕ್ಷಿಸಲ್ಪಟ್ಟವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತಕ್ಷಣವೇ ಹತ್ತಿರದ ಮತ್ತೊಂದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Read More