Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 9 ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಸರ್ಕಾರದ ಬಜೆಟ್ ಮಂಡನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಒಪ್ಪಿಗೆ ಪಡೆದುಕೊಂಡಿದ್ದಾರೆ. ಇದೀಗ ಕೇಂದ್ರ ಸಚಿವ ಸಂಪುಟ ಸಭೆಯಲ್ಲೂ ಬಜೆಟ್ ಮಂಡನೆಗೆ ಅನುಮೋದನೆ ಸಿಕ್ಕಿದೆ. ಸಂಸತ್ತಿನಲ್ಲಿ ಬೆಳಿಗ್ಗೆ 11 ಗಂಟೆಗೆ ಬಜೆಟ್ ಮಂಡನೆಗೆ ಮುಂಚಿತವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ. ಬಳಿಕ ದ್ರೌಪದಿ ಮುರ್ಮುರಿಂದ ಬಜೆಟ್ ಮಂಡನೆಗೆ ಒಪ್ಪಿಗೆ ಪಡೆದುಕೊಂಡು ಸಿಹಿ ತಿನ್ನಿಸಿದ್ದಾರೆ. https://twitter.com/ani_digital/status/2017816022884225363?s=20
ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 9 ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಸರ್ಕಾರದ ಬಜೆಟ್ ಮಂಡನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಒಪ್ಪಿಗೆ ಪಡೆದುಕೊಂಡಿದ್ದಾರೆ. ಇದೀಗ ಕೇಂದ್ರ ಸಚಿವ ಸಂಪುಟ ಸಭೆಯಲ್ಲೂ ಬಜೆಟ್ ಮಂಡನೆಗೆ ಅನುಮೋದನೆ ಸಿಕ್ಕಿದೆ. ಸಂಸತ್ತಿನಲ್ಲಿ ಬೆಳಿಗ್ಗೆ 11 ಗಂಟೆಗೆ ಬಜೆಟ್ ಮಂಡನೆಗೆ ಮುಂಚಿತವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ. ಬಳಿಕ ದ್ರೌಪದಿ ಮುರ್ಮುರಿಂದ ಬಜೆಟ್ ಮಂಡನೆಗೆ ಒಪ್ಪಿಗೆ ಪಡೆದುಕೊಂಡು ಸಿಹಿ ತಿನ್ನಿಸಿದ್ದಾರೆ. https://twitter.com/ani_digital/status/2017816022884225363?s=20
ಅನೇಕ ಜನರು ಫರ್ಫ್ಯೂಮ್ ಬಳಸುತ್ತಾರೆ. ಇದರ ಸುವಾಸನೆ ಮನಸ್ಸಿಗೆ ಮುದ ನೀಡುತ್ತದೆ. ವಾಸ್ತವವಾಗಿ, ಸುಗಂಧ ಮದ್ಯವನ್ನ ವಿವಿಧ ರಾಸಾಯನಿಕಗಳ ಮಿಶ್ರಣದಿಂದ ತಯಾರಿಸಲಾಗುತ್ತದೆ. ಆದ್ರೆ, ಅನೇಕ ಜನರು ಸುಗಂಧ ದ್ರವ್ಯವನ್ನ ನೇರವಾಗಿ ಚರ್ಮದ ಮೇಲೆ ಅನ್ವಯಿಸುತ್ತಾರೆ. ಇದು ಚರ್ಮದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎನ್ನುತ್ತಾರೆ ತಜ್ಞರು. ತಜ್ಞರ ಪ್ರಕಾರ.. ಈ ವಿಧಾನವು ಒಳ್ಳೆಯದಲ್ಲ. ಚರ್ಮದ ಮೇಲೆ ನೇರವಾಗಿ ಸುಗಂಧ ದ್ರವ್ಯವನ್ನ ಅನ್ವಯಿಸುವುದರಿಂದ ವಿವಿಧ ರೀತಿಯ ಸೋಂಕುಗಳು ಉಂಟಾಗಬಹುದು. ಸುಗಂಧ ದ್ರವ್ಯದಲ್ಲಿರುವ ಆಲ್ಕೋಹಾಲ್ ಚರ್ಮದ ತೇವಾಂಶವನ್ನ ಹೀರಿಕೊಳ್ಳುತ್ತದೆ. ಇದರಿಂದ ಚರ್ಮ ಒಣಗುತ್ತದೆ. ಇದರಲ್ಲಿರುವ ನ್ಯೂರೋಟಾಕ್ಸಿನ್’ಗಳು ನರಮಂಡಲದ ಮೇಲೂ ಪರಿಣಾಮ ಬೀರುತ್ತವೆ. ಚರ್ಮದ ಮೇಲೆ ಸುಗಂಧ ದ್ರವ್ಯವನ್ನ ನಿಯಮಿತವಾಗಿ ಬಳಸುವುದರಿಂದ ಚರ್ಮದ ಕಿರಿಕಿರಿಯನ್ನ ಉಂಟು ಮಾಡಬಹುದು. ಸೂಕ್ಷ್ಮ ಚರ್ಮ ಹೊಂದಿರುವ ಜನರಿಗೆ ಇದು ವಿಶೇಷವಾಗಿ ಹಾನಿಕಾರಕವಾಗಿದೆ. ಸುಗಂಧ ದ್ರವ್ಯವನ್ನ ನಿಯಮಿತವಾಗಿ ಬಳಸುವುದರಿಂದ ಚರ್ಮದ ಮೇಲೆ ಬ್ಯಾಕ್ಟೀರಿಯಾಗಳು ಬೆಳೆಯಲು ಕಾರಣವಾಗಬಹುದು. ಸುಗಂಧ ದ್ರವ್ಯಗಳಲ್ಲಿರುವ ರಾಸಾಯನಿಕಗಳು ಹಾರ್ಮೋನ್ ಸಮತೋಲನವನ್ನು ಅಡ್ಡಿಪಡಿಸಬಹುದು. ಇದು ಚರ್ಮದ ಕ್ಯಾನ್ಸರ್ ಅಪಾಯವನ್ನು ಬಹಳವಾಗಿ…
ನವದೆಹಲಿ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರ ಇಂದು ಕೇಂದ್ರ ಸರ್ಕಾರದ ಬಜೆಟ್ ಮಂಡಿಸಲಿದ್ದಾರೆ. ಈ ಮೂಲಕ ಅವರು ಸತತವಾಗಿ 9 ನೇ ಬಾರಿ ಬಜೆಟ್ ಮಂಡಿಸಿದ ದಾಖಲೆ ನಿರ್ಮಿಸಲಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಸರ್ಕಾರದ ಬಜೆಟ್ ಮಂಡನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ೊಪ್ಪಿಗೆ ಪಡೆದಿದ್ದಾರೆ. ಅವರು ಇಂದು ಬೆಳಿಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ಕೇಂದ್ರ ಸರ್ಕಾರದ ಬಜೆಟ್ ಅನ್ನು ಮಂಡಿಸಲಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬೆಳಗ್ಗೆ 11 ಗಂಟೆಗೆ ಕೇಂದ್ರ ಬಜೆಟ್ ಮಂಡನೆಗೆ ಸಜ್ಜಾಗಿದ್ದಾರೆ. ಭಾನುವಾರ ಮಂಡಿಸಲಾಗುತ್ತಿರುವ ಈವರೆಗಿನ 2ನೇ ಬಜೆಟ್ ಇದಾಗಿದೆ. ಈ ಹಿಂದೆ 1999ರಲ್ಲಿ ಭಾನುವಾರ ಬಜೆಟ್ ಮಂಡನೆ ಆಗಿತ್ತು. ಆಗ ದಿನಾಂಕ ಫೆ.28 ಆಗಿತ್ತು ಹಾಗೂ ಯಶವಂತ ಸಿನ್ಹಾ ಹಣಕಾಸು ಸಚಿವರಾಗಿ ದ್ದರು. ಆದರೆ ನಂತರ ಫೆ.1ಕ್ಕೆ ಬಜೆಟ್ ದಿನಾಂಕ ಬದಲಾಗಿತ್ತು. ಫೆ.1ಕ್ಕೆ ಬಜೆಟ್ ದಿನಾಂಕ ಬದ ಲಾದ ನಂತರ ಭಾನುವಾರ ಬಜೆಟ್…
ಭರತ ಹುಣ್ಣುಮೆ ಪ್ರಯುಕ್ತ ಜಗನ್ಮಾತೆ ಶ್ರೀ ರೇಣುಕ ಎಲ್ಲಮ್ಮ ದೇವಿಯು ಎಲ್ಲ ಭಕ್ತರ ಮಾತೆಯಾಗಿ ಎಲ್ಲರಿಗೆ ಅಮ್ಮನಾಗಿರುವದರಿಂದ “ಎಲ್ಲರ ಅಮ್ಮ ಯಲ್ಲಮ್ಮ” ಅಂತಾ ರೂಢನಾಮದೊಂದಿಗೆ ಪ್ರಖ್ಯಾತಳಾಗಿ ದಕ್ಷಿಣ ಭಾರತದ ಪ್ರಮುಖ ಶಕ್ತಿ ಕೇಂದ್ರವಾಗಿ ಭಕ್ತರ ಆರಾಧ್ಯ ದೇವತೆಯಾಗಿ ಭಕ್ತರ ಕಾಮಧೇನುವಾಗಿ ಇಷ್ಟಾರ್ಥ ಸಿದ್ಧಿಗಳನ್ನು ನೀಡುವ ಕರುಣಾಮಯಿ ತಾಯಿಯಾಗಿರುತ್ತಾಳೆ. ಇತಿಹಾಸ ಕಾಮಧೇನುವಿನ ವೈಶಿಷ್ಟ್ಯ ನೋಡಿ ಅದನ್ನು ಪಡೆಯುವ ದುರಾಸೆಯಿಂದ ಮಹಿಸ್ಪತಿ ನಗರದ ಅರಸು ಕಾರ್ತವೀರ್ಯಾರ್ಜುನ ರಾಜನು ಶ್ರೀ ಜಮದಗ್ನಿ ಋಷಿಗಳ ಮೇಲೆ ೨೧ ಸಲ ಘೋರವಾದ ಹೊಡೆತದ ಕೊಟ್ಟು ಹತ್ಯೆ ಮಾಡಿ ಕಾಮಧೇನು ಪಡೆಯಲು ಹೋದಾಗ ಅದು ಮಾಯವಾಗಿ ಬಿಡುತ್ತವೆ. ಕಾರ್ತವೀರ್ಯಾರ್ಜುನನು ಬರಿಗೈಯಿಂದ ಹಿಂತಿರುಗುತ್ತಾನೆ. ಶ್ರೀ ಜಮದಗ್ನಿ ಋಷಿಗಳ ಮಗನಾದ ರಾಮಭದ್ರನು ಮಾತೃಹತ್ಯೆ ವಿಮೋಚನೆಯಿಂದ ಮುಕ್ತನಾಗಿ ಶಿವನಿಂದ ಪರಶು ಅಸ್ತ್ರವನ್ನು ಪಡೆದು ಪರಶುರಾಮನೆಂದು ಖ್ಯಾತಿಹೊಂದಿ, ಶ್ರೀ ಪಾರ್ವತಿಯನ್ನು ಒಲಿಸಿಕೊಂಡು ಅಂಬಿಕಾಸ್ತ್ರವನ್ನು ಪಡೆದು ಪರಮ ಪರಾಕ್ರಮಿ ಎಂದೆನಿಸಿಕೊಳ್ಳುತ್ತಾನೆ. ಶ್ರೀ ಜಮದಗ್ನಿ ಋಷಿಯ ಆಶ್ರಮದಲ್ಲೆಲ್ಲಾ ಸ್ಮಶಾನ ಮೌನ ಆವರಿಸಿ ರೇಣುಕಾ ದೇವಿಯು ಜಮದಗ್ನಿ ಋಷಿಯ ಮೇಲೆ…
ಬೆಂಗಳೂರು : ಸ್ವಂತ ಟ್ರ್ಯಾಕ್ಟರ್ ಕೊಳ್ಳುವ ಕನಸು ಕಂಡ ರೈತರಿಗೆ ಸಿಹಿಸುದ್ದಿ, ಕೇಂದ್ರ ಸರ್ಕಾರವು ಟ್ರ್ಯಾಕ್ಟರ್ ಖರೀದಿಗೆ ಸಹಾಯ ಮಾಡುತ್ತದೆ. ಟ್ರ್ಯಾಕ್ಟರ್ ಖರೀದಿಸುವುದಕ್ಕೆ ಶೇಕಡ 50ರಷ್ಟು ಸಬ್ಸಿಡಿ ನೀಡುತ್ತಿದೆ. ಅಂದರೆ 10 ಲಕ್ಷ ರೂ. ಟ್ರ್ಯಾಕ್ಟರ್ ನಿಮಗೆ ಕೇವಲ 5 ಲಕ್ಷ ರೂ.ಗೆ ಸಿಗುತ್ತದೆ. ಹೌದು, ಕೃಷಿಯು ಭಾರತದಲ್ಲಿ ಯಾವಾಗಲೂ ಪ್ರಮುಖ ಆರ್ಥಿಕ ವಲಯವಾಗಿದ್ದು, ಗ್ರಾಮೀಣ ಮತ್ತು ಅರೆ ನಗರ ಪ್ರದೇಶಗಳಲ್ಲಿ ಭೂಮಿಯನ್ನು ಅವಲಂಬಿಸಿರುವ ಶ್ರೀಮಂತರು ಮತ್ತು ಬಡವರು ಇಬ್ಬರನ್ನೂ ಬೆಂಬಲಿಸುತ್ತದೆ. ಆದಾಗ್ಯೂ, ಹೆಚ್ಚಿನ ಸಂದರ್ಭಗಳಲ್ಲಿ, ಸಾಂಪ್ರದಾಯಿಕ ಕೃಷಿ ಪದ್ಧತಿಗಳು ರೈತರು ಗರಿಷ್ಠ ಇಳುವರಿಯನ್ನು ಸಾಧಿಸುವುದನ್ನು ತಡೆಯುತ್ತವೆ ಮತ್ತು ಅವರ ಕೈಯಿಂದ ಮಾಡುವ ಶ್ರಮವನ್ನು ಹೆಚ್ಚಿಸುತ್ತವೆ. ಈ ಸಮಸ್ಯೆಯನ್ನು ಪರಿಹರಿಸಲು, ಭಾರತ ಸರ್ಕಾರವು ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ, ಕೈಗೆಟುಕುವ ಬೆಲೆಯಲ್ಲಿ ಮತ್ತು ಸುಲಭ ಲಭ್ಯತೆಯಲ್ಲಿ ಆಧುನಿಕ ಕೃಷಿ ಉಪಕರಣಗಳನ್ನು ಒದಗಿಸುವ ಕ್ರಾಂತಿಕಾರಿ ಕಾರ್ಯಕ್ರಮವಾದ ಕಿಸಾನ್ ಟ್ರ್ಯಾಕ್ಟರ್ ಯೋಜನೆಯನ್ನು ಪ್ರಾರಂಭಿಸಿತು. ಟ್ರ್ಯಾಕ್ಟರ್ ಖರೀದಿಗಳ ಮೇಲೆ ಗಣನೀಯ ಸಬ್ಸಿಡಿಗಳನ್ನು ಒದಗಿಸುವ ಈ ಯೋಜನೆಯು ರೈತರನ್ನು…
ನವದೆಹಲಿ : ಇಂದು ಕೇಂದ್ರ ಸರ್ಕಾರದ ಬಜೆಟ್ ಮಂಡನೆಗೂ ಮುನ್ನ ಸರ್ಕಾರವು ಗ್ರಾಹಕರಿಗೆ ಶಾಕ್ ನೀಡಿದ್ದು, ಸರ್ಕಾರವು LPG ಸಿಲಿಂಡರ್ಗಳ ಬೆಲೆಯನ್ನು ₹50 ರಷ್ಟು ಹೆಚ್ಚಿಸಿದೆ. ಸರ್ಕಾರವು 19 ಕೆಜಿ LPG ಸಿಲಿಂಡರ್ಗಳ ಬೆಲೆಯನ್ನು ಹೆಚ್ಚಿಸಿದೆ. LPG ವಾಣಿಜ್ಯ ಸಿಲಿಂಡರ್ ಬೆಲೆ ಹೆಚ್ಚಳದ ನಂತರ, ದೆಹಲಿಯಲ್ಲಿ 19 ಕೆಜಿ LPG ಸಿಲಿಂಡರ್ನ ಬೆಲೆ ಈಗ ₹1740.50 ಆಗಿದೆ. ಅದೇ ರೀತಿ, ಕೋಲ್ಕತ್ತಾದಲ್ಲಿ ಇದರ ಬೆಲೆ ₹1844.50 ಆಗಿದೆ. ಮುಂಬೈನಲ್ಲಿ, ಇದು ಈಗ ₹1692.00 ಗೆ ಲಭ್ಯವಿರುತ್ತದೆ, ಆದರೆ ಹಿಂದೆ ಇದು ₹1642.50 ಗೆ ಲಭ್ಯವಿತ್ತು. ಚೆನ್ನೈನಲ್ಲಿ, ಬೆಲೆ ₹1899.50 ಆಗಿದೆ. ಸರ್ಕಾರವು ವಾಣಿಜ್ಯ ಸಿಲಿಂಡರ್ಗಳ ಬೆಲೆಯನ್ನು ₹50 ರಷ್ಟು ಹೆಚ್ಚಿಸಿದೆ. ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಮನೆಗಳಲ್ಲಿ ಬಳಸುವ 14.2 ಕೆಜಿ ಎಲ್ಪಿಜಿ ಸಿಲಿಂಡರ್ನ ಬೆಲೆ ಬದಲಾಗದೆ ಉಳಿದಿದೆ. ಇದನ್ನು ಕೊನೆಯದಾಗಿ ಏಪ್ರಿಲ್ 8, 2025 ರಂದು ಪರಿಷ್ಕರಿಸಲಾಯಿತು. ದೆಹಲಿಯಲ್ಲಿ ಇದರ ಪ್ರಸ್ತುತ ಬೆಲೆ ₹853. 14…
ವಿಜಯನಗರ : ವಿಜಯನಗರದಲ್ಲಿ ತ್ರಿಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೊಲೆಯ ಸ್ಫೋಟಕ ಮಾಹಿತಿ ಬಹಿರಂಗವಾಗಿದ್ದು, ಆರೋಪಿ ಅಕ್ಷಯ್ ತನ್ನ ತಂಗಿ ಮದುವೆಯಾಗದಿದ್ದರೂ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದು ಇಡೀ ಕುಟುಂಬವನ್ನೇ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಹೌದು, ತನ್ನ ತಂಗಿ ಅನ್ಯಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳು, ಇದಕ್ಕೆ ತಂದೆ-ತಾಯಿಯೂ ಬೆಂಬಲ ನೀಡಿದ್ದರು. ಅಮೃತ ಮದುವೆಯಾಗದೇ ಗರ್ಭಿಣಿಯಾಗಿದ್ದಳು, ಹೀಗಾಗಿ ತಂಗಿಯ ಗರ್ಭಪಾತಕ್ಕೆ ಅಕ್ಷಯ್ ಮುಂದಾಗಿದ್ದ, ಆದರೆ ತಂದೆ-ತಾಯಿ ಇದಕ್ಕೆ ಒಪ್ಪಿರಲ್ಲ. ಜೊತೆಗೆ ತಂಗಿ ಪ್ರೀತಿಸುತ್ತಿದ್ದ ಯುವಕನನ್ನು ಕರೆಸಿ ಎಚ್ಚರಿಕೆ ನೀಡಿದ್ದ. ಮರ್ಯಾದೆ ಹೊಯ್ತು ಎಂದು ತಂದೆ, ತಾಯಿ, ತಂಗಿಯನ್ನು ಕೊಲೆ ಮಾಡಿ ಮನೆಯಲ್ಲೇ ಶವಗಳನ್ನು ಹೂತು ಹಾಕಿದ್ದಾನೆ. ಮೊದಲು ತಾಯಿಯನ್ನು ಪಾಪಿ ಪುತ್ರ ಅಕ್ಷಯ್ ಕೊಲೆ ಮಾಡಿದ್ದಾನೆ. ಚಾಕುವಿನಿಂದ ಇರಿದು ತಾಯಿ ಜಯಲಕ್ಷ್ಮಿಯನ್ನು ಪುತ್ರ ಅಕ್ಷಯ್ ಕೊಲೆ ಮಾಡಿದ್ದಾನೆ. ಬಳಿಕ ಮನೆಯ ಕೊಠಡಿಯಲ್ಲಿ ತಾಯಿಯ ಶವವನ್ನು ಹಾಕಿದ್ದಾನೆ . ನಂತರ ತಂಗಿಗೆ ಕರೆ ಮಾಡಿ ಮನೆಗೆ ಕರೆದು ಚಾಕು ಇರಿದು ಕೊಲೆ ಮಾಡಿದ್ದಾನೆ. ನಿನಗೆ ಗಿಫ್ಟ್…
ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, 65 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಬಳಿಕ ವ್ಯಕ್ತಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಮೈಕೋ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯನ್ನು ಅತ್ಯಾಚಾರವೆಸಗಿ, ಬಳಿಕ ನೇಣು ಬಿಗಿದುಕೊಂಡು ಆರೋಪಿ ದೇವರಾಜು (50) ಆತ್ಮಹತ್ಯೆಗೆ ಶರಣಾಗಿದ್ದಾನೆ. ದೇವರಾಜು ಮನೆಗೆಲಸ ಮಾಡುತ್ತಿದ್ದ 65 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 2,846 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಮಾಹಿತಿ ನೀಡಿದ್ದಾರೆ. ವಿಧಾನಪರಿಷತ್ ನಲ್ಲಿ ಬಿಜೆಪಿಯ ನಿರಾಣಿ ಹಣಮಂತ್ ರುದ್ರಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೆಳೆ ನಷ್ಟ, ಪ್ರಕೃತಿ ವಿಕೋಪ, ಸಾಲಬಾಧೆ, ಆರ್ಥಿಕ ಸಂಕಷ್ಟ, ಸಾಮಾಜಿಕ, ಕೌಟುಂಬಿಕ ಕಾರಣಗಳಿಂದಾಗಿ 2023ರ ಮೇ ನಿಂದ 2025ರ ಡಿಸೆಂಬರ್ ವರೆಗೆ ಒಟ್ಟು 2,846 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. 2024-25 ರಲ್ಲಿ ಹಾವೇರಿ 133,ಬೆಳಗಾವಿ 88, ಬೀದರ್ 70, ಧಾರವಾಡ 57, ಮೈಸೂರು 68, ಕಲಬುರಗಿ 85, ಮಂಡ್ಯ ಮತ್ತು ಶಿವಮೊಗ್ಗ ತಲಾ 51, ವಿಜಯಪುರ 49 ಸೇರಿ 1,178 ರೈತರು ಆತ್ಮಹತ್ಯೆಗೆ ಶರಣಾಗಿದ್ದು, ಈ ಪೈಕಿ 1,022 ಪ್ರಕರಣ ಅರ್ಹ ಎಂದು ಪರಿಗಣಿಸಿದೆ.2025-26ನೇ ಸಾಲಲ್ಲಿ ಡಿಸೆಂಬರ್31ರ ವೇಳೆಗೆ 414 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು 331 ಪ್ರಕರಣಗಳನ್ನು ಪರಿಹಾರಕ್ಕೆ ಅರ್ಹ ಪ್ರಕರಣವೆಂದು ಪರಿಗಣಿಸಲಾಗಿದೆ ಎಂದು ಹೇಳಿದ್ದಾರೆ. ಉಪ ವಿಭಾಗಾಧಿಕಾರಿಗಳ ಸಮಿತಿಯಲ್ಲಿ ತೀರ್ಮಾನಿಸಿ…














