Author: kannadanewsnow57

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ(94) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಇಂದು ಲಿಂಗಾಯತ ಸಂಪ್ರದಾಯದಂತೆ ದಾವಣಗೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ನಿರ್ಧರಿಸಲಾಗಿದೆ. ಶಾಮನೂರು ಶಿವಶಂಕರಪ್ಪ ಪಾರ್ಥೀವ ಶರೀರವನ್ನು ಇಂದು ಬೆಳಗ್ಗೆ 9 ಗಂಟೆಗೆ ಆಸ್ಪತ್ರೆಯಿಂದ ವೀರಶೈವ ಮಹಾಸಭಾ ಕಚೇರಿಗೆ ತರಲಾಗುತ್ತಿದೆ. ಬೆಳಗ್ಗೆ 10 ಗಂಟೆಯಿಂದ 10.30ರವರೆಗೆ ಅಲ್ಲಿಯೇ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುತ್ತಿದೆ, ಬಳಿಕ ಸಂಜೆ 4 ಗಂಟೆಗೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ. ಇಂದು ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ ನೆರವೇರಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರು ಆಗಮಿಸಲಿದ್ದಾರೆ. ಶಾಮನೂರು ಶಿವಶಂಕರಪ್ಪ ನಿಧನ ಹಿನ್ನಲೆ: ಇಂದು ಎಲ್ಲಾ ಶಾಲೆ – ಕಾಲೇಜುಗಳಿಗೆ ರಜೆ ಘೋಷಣೆ.! ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ ಹಿನ್ನಲೆಯಲ್ಲಿ ದಾವಣಗೆರೆ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ಸೋಮವಾರ…

Read More

ಸಿಡ್ನಿ : ಸಿಡ್ನಿಯ ಬೋಂಡಿ ಬೀಚ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇದುವರೆಗೆ 16 ಜನರು ಸಾವನ್ನಪ್ಪಿದ್ದು, ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿದಂತೆ 29 ಜನರು ಗಾಯಗೊಂಡಿದ್ದಾರೆ. ಶಂಕಿತ ಶೂಟರ್‌ ಗಳಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ, ಆದರೆ ಇನ್ನೊಬ್ಬರ ಸ್ಥಿತಿ ಗಂಭೀರವಾಗಿದೆ. ಸಿಡ್ನಿಯಲ್ಲಿ ನಡೆದ ಹನುಕ್ಕಾ ಆಚರಣೆಯ ಮೊದಲ ದಿನದಂದು ಯಹೂದಿ ಸಮುದಾಯವನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳುತ್ತಾರೆ. ಅದೇ ಸಮಯದಲ್ಲಿ, ಸಿಡ್ನಿ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನದೊಂದಿಗಿನ ಸಂಪರ್ಕಗಳು ಹೊರಹೊಮ್ಮಿವೆ ಎಂದು ತೋರುತ್ತದೆ. ಈ ಸಂದರ್ಭದಲ್ಲಿ, ಬೋಂಡಿ ಬೀಚ್ ಗುಂಡಿನ ದಾಳಿಯ ಶಂಕಿತರಲ್ಲಿ ಒಬ್ಬನನ್ನು ಸಿಡ್ನಿಯ ಬೋನಿರಿಗ್ ನಿವಾಸಿ ನವೀದ್ ಅಕ್ರಮ್ ಎಂದು ಗುರುತಿಸಲಾಗಿದೆ ಎಂದು ಹಿರಿಯ ಕಾನೂನು ಜಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರು ಪಾಕಿಸ್ತಾನದ ಲಾಹೋರ್ ಮೂಲದವರು ಎಂದು ತಿಳಿದುಬಂದಿದೆ. ತನಿಖೆಯ ಭಾಗವಾಗಿ, ಪೊಲೀಸರು ಭಾನುವಾರ ಸಂಜೆ 24 ವರ್ಷದ ನವೀದ್ ಅಕ್ರಮ್ ಅವರ ಮನೆಯ ಮೇಲೆ ದಾಳಿ ನಡೆಸಿದರು. ಹಲವಾರು ವರದಿಗಳ ಪ್ರಕಾರ, 24 ವರ್ಷದ ನವೀದ್…

Read More

ಇಂದಿನ ಮಕ್ಕಳು ಬೆಳೆಯುತ್ತಿರುವ ಜಗತ್ತಿನಲ್ಲಿ, ಸ್ಮಾರ್ಟ್ಫೋನ್ಗಳು, ಟ್ಯಾಬ್ಲೆಟ್ಗಳು ಮತ್ತು ಇಂಟರ್ನೆಟ್ ಅವರ ದೈನಂದಿನ ಜೀವನದ ಒಂದು ಭಾಗವಾಗಿದೆ. ಹಿಂದೆ, ಮಕ್ಕಳು ತಮ್ಮ ಬಿಡುವಿನ ವೇಳೆಯನ್ನು ಹೊರಗೆ ಆಟವಾಡುವುದು, ಪುಸ್ತಕಗಳನ್ನು ಓದುವುದು ಅಥವಾ ಕುಟುಂಬದೊಂದಿಗೆ ಚಾಟ್ ಮಾಡುವುದರಲ್ಲಿ ಕಳೆಯುತ್ತಿದ್ದರು. ಆದರೆ ಈಗ, ಮನರಂಜನೆ ಕ್ರಮೇಣ ಮೊಬೈಲ್ ಪರದೆಗೆ ಸೀಮಿತವಾಗಿದೆ. ವಿಶೇಷವಾಗಿ ಇನ್ಸ್ಟಾಗ್ರಾಮ್ ರೀಲ್ ಗಳು ಮತ್ತು ಯೂಟ್ಯೂಬ್ ಶಾರ್ಟ್ಸ್ನಂತಹ ಕಿರು ವೀಡಿಯೊಗಳು ಮಕ್ಕಳ ಜೀವನದಲ್ಲಿ ಎಷ್ಟು ಆಳವಾಗಿ ಬೇರೂರಿವೆಯೆಂದರೆ ಅವು ಇನ್ನು ಮುಂದೆ ಸಮಯ ಕಳೆಯುವ ಸಾಧನವಾಗಿಲ್ಲ, ಆದರೆ ಅವರ ಆಲೋಚನೆ, ಅಭ್ಯಾಸಗಳು ಮತ್ತು ನಡವಳಿಕೆಯನ್ನು ಸಹ ಬದಲಾಯಿಸುತ್ತಿವೆ. ಈ ವೀಡಿಯೊಗಳು ಮೋಜಿನ ಮತ್ತು ಹಗುರವಾಗಿ ಕಾಣಿಸಬಹುದು, ಆದರೆ ಅವುಗಳ ಹಿಂದೆ ಅಡಗಿರುವ ಅಪಾಯಗಳು ಕ್ರಮೇಣ ಮಕ್ಕಳ ಆರೋಗ್ಯ ಮತ್ತು ಮಾನಸಿಕ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತಿವೆ. ಪೋಷಕರು ತಮ್ಮ ಮಕ್ಕಳು ತಮ್ಮ ಮೊಬೈಲ್ ಫೋನ್ಗಳಲ್ಲಿ ವೀಡಿಯೊಗಳನ್ನು ನೋಡುತ್ತಿದ್ದಾರೆ ಮತ್ತು ಅವು ನಿರುಪದ್ರವಿಗಳು ಎಂದು ಭಾವಿಸುತ್ತಾರೆ. ಆದರೆ ನಿಜವಾದ ಸಮಸ್ಯೆ ವೀಡಿಯೊಗಳ ನಿಜವಾದ…

Read More

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ(94) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಇಂದು ಲಿಂಗಾಯತ ಸಂಪ್ರದಾಯದಂತೆ ದಾವಣಗೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ನಿರ್ಧರಿಸಲಾಗಿದೆ. ಶಾಮನೂರು ಶಿವಶಂಕರಪ್ಪ ಪಾರ್ಥೀವ ಶರೀರವನ್ನು ಇಂದು ಬೆಳಗ್ಗೆ 9 ಗಂಟೆಗೆ ಆಸ್ಪತ್ರೆಯಿಂದ ವೀರಶೈವ ಮಹಾಸಭಾ ಕಚೇರಿಗೆ ತರಲಾಗುತ್ತಿದೆ. ಬೆಳಗ್ಗೆ 10 ಗಂಟೆಯಿಂದ 10.30ರವರೆಗೆ ಅಲ್ಲಿಯೇ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುತ್ತಿದೆ, ಬಳಿಕ ಸಂಜೆ 4 ಗಂಟೆಗೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ. ಶಾಮನೂರು ಶಿವಶಂಕರಪ್ಪ ನಿಧನ ಹಿನ್ನಲೆ: ಇಂದು ಎಲ್ಲಾ ಶಾಲೆ – ಕಾಲೇಜುಗಳಿಗೆ ರಜೆ ಘೋಷಣೆ.! ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ ಹಿನ್ನಲೆಯಲ್ಲಿ ದಾವಣಗೆರೆ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದೆ.ದಾವಣಗೆರೆ ವಿವಿಯ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ದಾವಣಗೆರೆ ವಿಶ್ವ ವಿದ್ಯಾಲಯಕ್ಕೆ ರಜೆಯನ್ನು ಘೋಷಣೆ ಮಾಡಲಾಗಿದೆ. ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ…

Read More

ಬೆಂಗಳೂರು : ನಗರದಲ್ಲಿ ಮೈ ಕೊರೆಯುವ ಚಳಿ ಮುಂದುವರಿದಿದ್ದು, ಜನ ಜೀವನದ ಮೇಲೆ ಪರಿಣಾಮ ಬೀರಿದೆ. ಕನಿಷ್ಠ ತಾಪಮಾನವು 14 ರಿಂದ 15 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದೆ. ವಿಶೇಷವಾಗಿ ಹೆಚ್‌ಎಎಲ್ ವ್ಯಾಪ್ತಿಯಲ್ಲಿ ನಿನ್ನೆ 13 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಚಳಿ ಹಾಗೂ ಶೀತಗಾಳಿಯಿಂದಾಗಿ ಬೆಳಗ್ಗೆ ವಾಕಿಂಗ್‌ಗೆ ಹೋಗಲು ಸಹ ಜನರು ಹಿಂದೇಟು ಹಾಕುತ್ತಿದ್ದಾರೆ. ಡಿಸೆಂಬರ್ 15,16 ಮತ್ತು 17 ರಂದು ರಾಜ್ಯಾದ್ಯಂತ ಇದೇ ರೀತಿಯ ಚಳಿ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 9 ರಿಂದ 11 ಡಿಗ್ರಿ ಸೆಂಟಿಗ್ರೇಡ್ ತಲುಪುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಸುಮಾರು 12 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ಇರಲಿದೆ. ಮುಂದಿನ ಎರಡು ದಿನಗಳಲ್ಲಿ ಇನ್ನೂ ಹೆಚ್ಚಿನ ಚಳಿ ಹಾಗೂ ಶೀತಗಾಳಿ ಇರಲಿದೆ.…

Read More

ಬೆಂಗಳೂರು: ಕ್ರಿಸ್ ಮಸ್ ಹಾಗೂ ಹೊಸ ವರ್ಷಕ್ಕೆ ಊರಿಗೆ ಹೊರಟ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಸಿಹಿಸುದ್ದಿ ನೀಡಿದ್ದು ಸೌತ್ ವೆಸ್ಟರ್ನ್ ರೈಲ್ವೆ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ರೈಲು ವ್ಯವಸ್ಥೆ ಮಾಡಿದೆ. ಹೌದು, ಕ್ರಿಸ್ಮಸ್​​ ಹಾಗೂ ಹೊಸ ವರ್ಷದ ಸಂದರ್ಭದಲ್ಲಿ ಜನದಟ್ಟಣೆ ಹೆಚ್ಚಾಗುವುದರಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಈ ವ್ಯವಸ್ಥೆ ಕಲ್ಪಿಸಿದೆ. ಹುಬ್ಬಳ್ಳಿ, ಬೆಂಗಳೂರು ಮತ್ತು ವಿಜಯಪುರವನ್ನು ಸಂಪರ್ಕಿಸುವ ವಿಶೇಷ ರೈಲು ಸಂಚಾರ ನಡೆಸಲಿದೆ. ರೈಲು ಸಂಖ್ಯೆ 07379 ಮಧ್ಯಾಹ್ನ 12ಕ್ಕೆ ಹುಬ್ಬಳ್ಳಿಯಿಂದ ಹೊರಟು ಹಾವೇರಿ, ಹರಿಹರ, ದಾವಣಗೆರೆ, ಅರಸೀಕೆರೆ ಮತ್ತು ತುಮಕೂರು ಮೂಲಕ ರಾತ್ರಿ 8.30ಕ್ಕೆ ಯಶವಂತಪುರ ತಲುಪಲಿದೆ. ರೈಲು ಸಂಖ್ಯೆ 06277 ರಾತ್ರಿ 9.50ಕ್ಕೆ ಯಶವಂತಪುರದಿಂದ ಹೊರಟು ತುಮಕೂರು, ಅರಸೀಕೆರೆ, ದಾವಣಗೆರೆ, ಹರಿಹರ, ಬಾದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ಮೂಲಕ ಬೆಳಿಗ್ಗೆ 9ಕ್ಕೆ ವಿಜಯಪುರ ತಲುಪಲಿದೆ. https://twitter.com/SWRRLY/status/1999695575672058141?s=20

Read More

ಬೆಂಗಳೂರು : ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕೆಪಿಎಸ್ ಸಿ ಯು ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಸ್ಥಗಿತಗೊಂಡಿದ್ದ 400 (342+58 Back Log) ಪಶುವೈದ್ಯಾಧಿಕಾರಿ ( VETERINARY DOCTORS ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಕನ್ನಡ ಭಾಷಾ ಪರೀಕ್ಷೆ & ಸ್ಪರ್ಧಾತ್ಮಕ ಪರೀಕ್ಷೆಯನ್ನು ಕ್ರಮವಾಗಿ 2026 ಜನವರಿ 08 & 09 ರಂದು ನಡೆಸಲು ಉದ್ದೇಶಿಸಿ KPSC ಇದೀಗ ವೇಳಾಪಟ್ಟಿಯನ್ನು ಕೂಡಾ ಪ್ರಕಟಿಸಿದೆ. 29-07-2024 ರಂದು ಅಧಿಸೂಚಿಸಲಾದ ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿನ ಪಶು ವೈದ್ಯಾಧಿಕಾರಿಗಳು ಹುದ್ದೆಗಳ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷಾ ವೇಳಾಪಟ್ಟಿ.

Read More

ಬೆಂಗಳೂರು: ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗಾಗಿ ಭೂ ಪರಿವರ್ತಿಸುವುದಕ್ಕೆ ಸರ್ಕಾರ ಅವಕಾಶ ನೀಡಿದೆ. ಆದರೇ ಈ ಉದ್ದೇಶಗಳಿಗಾಗಿ ಕೆಲವು ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ.  ಈ ಸಂಬಂಧ ಕಂದಾಯ ಇಲಾಖೆಯ ಭೂಮಂಜೂರಾತಿ ವಿಭಾಗದ ಸರ್ಕಾರದ ಅಧೀನ ಕಾರ್ಯದರ್ಶಿಯವರು ದಿನಾಂಕ 20-02-2019ರಲ್ಲೇ ಹೊರಡಿಸಿರುವಂತ ನಡವಳಿಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95(2) ರಡಿಯಲ್ಲಿ ಕೃಷಿ ಉದ್ದೇಶಕ್ಕಾಗಿ ಹೊಂದಿರುವ ಭೂಮಿಯ ಅಧಿಭೋಗದಾರನು ಅಂತಹ ಜಮೀನನ್ನು ಅಥವಾ ಅದರ ಯಾವುದೇ ಭಾಗವನ್ನು ಕೃಷಿಯೇತರ ಉದ್ದೇಶಕ್ಕಾಗಿ ಪರಿವರ್ತಿಸಲು ಇಚ್ಚಿಸಿದರೆ ಜಿಲ್ಲಾಧಿಕಾರಿಯವರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮೇಲೆ ಓದಲಾದ ಕ್ರಮ ಸಂಖ್ಯೆ(1)ರ ಸರ್ಕಾರದ ಸುತ್ತೋಲೆ ದಿನಾಂಕ: 17-10-2008 ರನ್ವಯ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961 (ಕೆಟಿಪಿಪಿ) ಅನ್ವಯ ಕೃಷಿ ಜಮೀನನ್ನು ಭೂ ಪರಿವರ್ತಿಸಲಾದ ಯಾವುದೇ ಕಾನೂನಿನ ಉಪಬಂಧಗಳನ್ನು ಉಲ್ಲಂಘಿಸುತ್ತಿಲ್ಲವೆಂಬುದನ್ನು ಹಾಗೂ ಭೂ ಉಪಯೋಗ ಬದಲಾವಣೆಗೆ ಸಂಬಂಧಿಸಿದ ಓಡಿಪಿ ಮತ್ತು ಸಿಡಿಪಿ ಅನ್ವಯ ಇದೆಯೇ ಎನ್ನುವ ಕುರಿತು ದೃಢೀಕರಿಸಿಕೊಳ್ಳುವ…

Read More

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಒಂದೇ ಗ್ರಾಮದ 6 ಜನರಲ್ಲಿ ಮಂಗನ ಕಾಯಿಲೆ ದೃಢಪಟ್ಟಿದ್ದು, ಜನರಲ್ಲಿ ಆತಂಕ ಸೃಷ್ಠಿಯಾಗಿದೆ. ಹೌದು, ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿಕ್ಕೋಡಿ ಗ್ರಾಮದ 5 ಜನರಲ್ಲಿ ಮಂಗನ ಕಾಯಿಲೆ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಗ್ರಾಮದಲ್ಲಿ ಒಂದೇ ವಾರದಲ್ಲಿ 6 ಜನರಲ್ಲಿ ಸೋಂಕು ಕಾಣಿಸಿಕೊಂಡು ಭಾರಿ ಆತಂಕ ಸೃಷ್ಟಿಯಾಗಿದೆ. ಹೊಸನಗರ ತಾಲೂಕಿನ ಬಿಳ್ಕೊಡಿ ಗ್ರಾಮದಲ್ಲಿ 55 ವರ್ಷದ ಮಹಿಳೆ ಯಲ್ಲಿ ಕೆಎಫ್‌ಡಿ ಸೋಂಕು ಕಾಣಿಸಿಕೊಂಡಿತ್ತು. ಈಗ ಅದೇ ಊರಿನಲ್ಲಿ ಮತ್ತೆ ಐವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜ್ವರದಿಂದ ಬಳಲುತ್ತಿರುವವರು ಯಾವುದೇ ನಿರ್ಲಕ್ಷ್ಯ ಮಾಡದೆ ಆಸ್ಪತ್ರೆಗೆ ತೆರಳಿ ರಕ್ತ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಬೇಕು. ಜೊತೆಗೆ ಮಂಗಗಳು ಮೃತಪಟ್ಟಲ್ಲಿ ಕಡ್ಡಾಯವಾಗಿ ಮಾಹಿತಿ ನೀಡಲು ತಿಳಿಸಲಾಗಿದೆ.

Read More

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ರೈಲ್ವೆ ಇಲಾಖೆಯು ಭರ್ಜರಿ ಸಿಹಿಸುದ್ದಿ ನೀಡಿದ್ದು, ರೈಲ್ವೆ ಮಂಡಳಿಯು 2026 ರ ಭಾರತೀಯ ರೈಲ್ವೆ ಮಟ್ಟದಲ್ಲಿ ನೇಮಕಾತಿಗಳಿಗಾಗಿ ವಾರ್ಷಿಕ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಿದೆ. 22,000 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಒಂಬತ್ತು ರೈಲ್ವೆ ನೇಮಕಾತಿ ಮಂಡಳಿಗಳನ್ನು (RRBs) ನೋಡಲ್ ಏಜೆನ್ಸಿಗಳಾಗಿ ನೇಮಿಸಲಾಗಿದೆ. ಮಂಡಳಿಯ ಕಾರ್ಯನಿರ್ವಾಹಕ ನಿರ್ದೇಶಕರು (RRB) ಎಲ್ಲಾ ವಲಯಗಳ ಮುಖ್ಯ ಸಿಬ್ಬಂದಿ ಅಧಿಕಾರಿಗಳಿಗೆ ಈ ನಿಟ್ಟಿನಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ. ಹೊಸ ವರ್ಷದಲ್ಲಿ ರೈಲ್ವೆ ನೇಮಕಾತಿ ಮಂಡಳಿಗಳು ನಡೆಸುವ ನೇಮಕಾತಿಗಳಿಗೆ ವಾರ್ಷಿಕ ಕ್ಯಾಲೆಂಡರ್ ಅನ್ನು ಅನುಸರಿಸಬೇಕು ಎಂದು ಮಂಡಳಿಯು ಹೇಳಿದೆ. ಎಲ್ಲಾ ವಲಯ ರೈಲ್ವೆಗಳು ಮತ್ತು ಉತ್ಪಾದನಾ ಘಟಕಗಳು ನಿಗದಿತ ಸಮಯದೊಳಗೆ ತಮ್ಮ ಖಾಲಿ ಹುದ್ದೆಗಳನ್ನು ನಿರ್ಣಯಿಸಬೇಕು. ಇದಲ್ಲದೆ, 2025 ರ ವರ್ಷಕ್ಕೆ ಭಾರತೀಯ ರೈಲ್ವೆ ಮಟ್ಟದಲ್ಲಿ 22,000 ಲೆವೆಲ್-1 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಮಂಡಳಿಯು ಅನುಮೋದನೆ ನೀಡಿದೆ. ರೈಲ್ವೆ ಮಂಡಳಿಯ ಕಾರ್ಯನಿರ್ವಾಹಕ ನಿರ್ದೇಶಕ ರಾಜೀವ್ ಗಾಂಧಿ ಅವರು, ಸಕ್ಷಮ ಪ್ರಾಧಿಕಾರದ ಅನುಮೋದನೆಯ…

Read More