Subscribe to Updates
Get the latest creative news from FooBar about art, design and business.
Author: kannadanewsnow57
BIG NEWS: ದೇಶದಲ್ಲೇ ಮೊದಲ ಬಾರಿಗೆ ಮೊಬೈಲ್ ಆ್ಯಪ್ ಬಳಸಿ ಜನರಿಂದಲೇ ಜನಗಣತಿ : ದತ್ತಾಂಶ ದಾಖಲಿಸಲು ಪೋರ್ಟಲ್ | Census
ನವದೆಹಲಿ: ಮುಂಬರುವ ಜನಗಣತಿಯ ಸಮಯದಲ್ಲಿ ಸ್ವಯಂ-ಗಣತಿಗಾಗಿ ವಿಶೇಷ ಮೀಸಲಾದ ವೆಬ್ ಪೋರ್ಟಲ್ ಅನ್ನು ಪ್ರಾರಂಭಿಸಲಾಗುವುದು, ಇದು ರಾಷ್ಟ್ರೀಯ ಎಣಿಕೆ ಕಾರ್ಯದ ಎರಡೂ ಹಂತಗಳಿಗೆ ಲಭ್ಯವಿರುತ್ತದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ದೇಶದ ಮೊದಲ ಡಿಜಿಟಲ್ ಜನಗಣತಿಯಲ್ಲಿ, ಗಣತಿದಾರರು ತಮ್ಮ ಆಂಡ್ರಾಯ್ಡ್ ಮತ್ತು ಆಪಲ್ ಫೋನ್ಗಳಲ್ಲಿ ಮೊಬೈಲ್ ಅಪ್ಲಿಕೇಶನ್ಗಳನ್ನು ಬಳಸಿಕೊಂಡು ನಾಗರಿಕರ ಡೇಟಾವನ್ನು ಸಂಗ್ರಹಿಸುತ್ತಾರೆ ಎಂದು ಅವರು ಹೇಳಿದರು. ಮನೆಪಟ್ಟಿ ಮತ್ತು ವಸತಿ ಗಣತಿ (HLO) ಮತ್ತು ಜನಸಂಖ್ಯಾ ಗಣತಿಯ ಎರಡೂ ಹಂತಗಳಿಗೆ ಲಭ್ಯವಿರುವ ಮೀಸಲಾದ ವೆಬ್ ಪೋರ್ಟಲ್ ಮೂಲಕ ನಾಗರಿಕರು ಸ್ವಯಂ-ಗಣತಿ ಮಾಡಲು ಅವಕಾಶವನ್ನು ಪಡೆಯುವುದು ದೇಶದಲ್ಲಿ ಇದೇ ಮೊದಲು. “ಡಿಜಿಟಲ್ ಜನಗಣತಿ ಉಪಕ್ರಮವು ಜನಗಣತಿ ಪ್ರಕ್ರಿಯೆಯನ್ನು ಆಧುನೀಕರಿಸುವ ಕಡೆಗೆ ಒಂದು ಪರಿವರ್ತನೆಯ ಹೆಜ್ಜೆಯಾಗಿದೆ. ಮೊದಲ ಬಾರಿಗೆ, ಡೇಟಾವನ್ನು ಸಂಗ್ರಹಿಸಲು ಮತ್ತು ಅದನ್ನು ವಿದ್ಯುನ್ಮಾನವಾಗಿ ಕೇಂದ್ರ ಸರ್ವರ್ಗೆ ಕಳುಹಿಸಲು ತಂತ್ರಜ್ಞಾನವನ್ನು ಬಳಸಲಾಗುವುದು. ಇದು ಜನಗಣತಿ ದತ್ತಾಂಶದ ಆರಂಭಿಕ ಲಭ್ಯತೆಗೆ ಕಾರಣವಾಗುತ್ತದೆ” ಎಂದು ಅಧಿಕಾರಿಯೊಬ್ಬರು ಹೇಳಿದರು. ಸಂಗ್ರಹಣೆ, ಪ್ರಸರಣ ಮತ್ತು ಸಂಗ್ರಹಣೆಯ ಸಮಯದಲ್ಲಿ…
ಆತ್ಮ ನಿರ್ಭರ ಭಾರತ ಅಭಿಯಾನ, ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ (PMFME) ಯೋಜನೆ, ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಅಭಿವೃದ್ಧಿಗೆ ಸುವರ್ಣಾವಕಾಶ ಕಲ್ಪಿಸಲಾಗಿದೆ. ಈ ಯೋಜನೆಯಡಿಯಲ್ಲಿ ಶೇ. 50 ರಷ್ಟು ಅಥವಾ ಗರಿಷ್ಟ ರೂ. 15 ಲಕ್ಷ ಸಹಾಯಧನ (ಕೇಂದ್ರ ಸರ್ಕಾರದ ರೂ. 6 ಲಕ್ಷ ಹಾಗೂ ರಾಜ್ಯ ಸರ್ಕಾರದ ರೂ. 9 ಲಕ್ಷ ಸಹಾಯಧನ) ನೀಡಲಾಗುತ್ತದೆ. ಯೋಜನೆಯ ಘಟಕಗಳ ಕಿರು ಪರಿಚಯ: ವೈಯಕ್ತಿಕ ಉದ್ದಿಮೆಗಳು ಮತ್ತು ಗುಂಪುಗಳು: ಹೊಸ ಆಹಾರ ಸಂಸ್ಕರಣಾ ಉದ್ದಿಮೆ ಪ್ರಾರಂಭಿಸಲು ಮತ್ತು ಚಾಲ್ತಿಯಲ್ಲಿರುವ ಉದ್ದಿಮೆಗಳನ್ನು ವಿಸ್ತರಿಸಲು ಅವಕಾಶ ನೀಡಲಾಗಿದೆ. 18 ವರ್ಷ ಮೇಲ್ಪಟ್ಟವರು ಹಾಗೂ ಯಾವುದೇ ಕನಿಷ್ಠ ವಿದ್ಯಾರ್ಹತೆ ಇರುವುದಿಲ್ಲ. ಇತರೆ ಸರ್ಕಾರಿ ಯೋಜನೆಗಳಲ್ಲಿ ಸಹಾಯಧನ ಸಂಪರ್ಕಿತ ಬ್ಯಾಂಕ್ ಸಾಲ ಪಡೆದಿದ್ದರೂ ಸಹ ಅರ್ಹರಾಗಿರುತ್ತಾರೆ. ವೈಯಕ್ತಿಕ ಉದ್ದಿಮೆಗಳಿಗೆ ಮಾಲೀಕತ್ವದ ಸಂಸ್ಥೆಗಳಿಗೆ, ಪಾಲುದಾರಿಕೆ ಸಂಸ್ಥೆಗಳಿಗೆ, ಖಾಸಗಿ ಸಂಸ್ಥೆಗಳಿಗೆ, ರೈತ ಉತ್ಪಾದಕರ ಸಂಸ್ಥೆಗಳಿಗೆ, ಸರ್ಕಾರೇತರ ಸಂಸ್ಥೆಗಳಿಗೆ ಮತ್ತು ಸ್ವ-ಸಹಾಯ ಸಂಘಗಳಿಗೆ ಸಾಲ ಸಂಪರ್ಕಿತ ಶೇ.…
ದಾವಣಗೆರೆ : ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರು ಸಂಚಾರ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಸೇರಿದಂತೆ ಅಪಘಾತ ಪ್ರಮಾಣವನ್ನು ಗಣನೀಯವಾಗಿ ತಗ್ಗಿಸಲು ಸತತ ಪ್ರಯತ್ನ ಮಾಡುತ್ತಿದ್ದು ಜುಲೈ 8 ರಂದು ಮಂಗಳವಾರ ಬೆಳ್ಳಂಬೆಳಗ್ಗೆ ರಸ್ತೆಗಿಳಿದು 30ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದು ಸಂಚಾರಿ ದಕ್ಷಿಣ ವಲಯ ಠಾಣೆಗೆ ಹಸ್ತಾಂತರಿಸಿದರು. ಕೆಲವು ಕಾಲೇಜಿನ ವಿದ್ಯಾರ್ಥಿಗಳು ದ್ವಿಚಕ್ರವಾಹನಕ್ಕೆ ನಂಬರ್ ಪ್ಲೇಟ್ ಇಲ್ಲದೇ ವಾಹನ ಚಲಾಯಿಸುತ್ತಿರುವುದು ಮತ್ತು ವಯಸ್ಕರು ಕೂಡ ವಾಹನದ ನಂಬರ್ ಪ್ಲೇಟ್ ಇಲ್ಲದೇ ವಾಹನ ಚಲಾಯಿಸುತ್ತಿರುವುದನ್ನು ಪತ್ತೆಹಚ್ಚಿ, ಅಂತಹ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ವಾಹನದ ನಂಬರ್ ಪ್ಲೇಟ್ ಇಲ್ಲದೇ ಚಲಾಯಿಸುವುದು ಮೋಟಾರ್ ವಾಹನ ಕಾಯಿದೆಯ ಸೆಕ್ಷನ್ 177 ರ ಉಲ್ಲಂಘನೆಯಾಗಿದ್ದು ದಂಡನೆಗೆ ಅವಕಾಶ ನೀಡಲಾಗಿದೆ. ವಾಹನಗಳಿಗೆ ಕಾನೂನು ಬದ್ದತೆ, ಗುರುತು ಮತ್ತು ಭದ್ರತೆಗೆ ಸಂಬಂಧಿಸಿದಾಗಿದ್ದು ಪ್ರತಿಯೊಂದು ವಾಹನದ ಗುರುತಿಗಾಗಿ ಮತ್ತು ಅಪರಾಧಗಳಲ್ಲಿ ಬಳಸುವ ವಾಹನ ಗುರುತಿಗಾಗಿ ಮತ್ತು ಸಂಚಾರಿ ನಿಯಮಗಳ ಉಲ್ಲಂಘನೆ ಪತ್ತೆ, ಕಳ್ಳತನ ಪತ್ತೆಹಚ್ಚಲು ಪ್ರತಿ ವಾಹನದ ನಂಬರ್ ಪ್ಲೇಟ್ ಸಹಾಯಕವಾಗಿದ್ದು…
ಬೆಂಗಳೂರು : ರಾಜ್ಯದಲ್ಲಿ ಎನ್ ಐಎ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಜೈಲಿನಲ್ಲಿರುವ ಶಂಕಿತ ಉಗ್ರರೊಂದಿಗೆ ನಿರಂತರ ಸಂಪರ್ಕ ಮತ್ತು ನೆರವು ನೀಡಿದ ಆರೋಪದಡಿ ಮೂವರನ್ನು ಬಂಧಿಸಿದೆ. ರಾಜ್ಯದ ಕೋಲಾರ ಮತ್ತು ಬೆಂಗಳೂರು ನಗರ ಜಿಲ್ಲೆಯ ಐದು ಸ್ಥಳಗಳ ಮೇಲೆ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮನೋವೈದ್ಯ ಡಾ. ನಾಗರಾಜ್, ಉತ್ತರ ವಿಭಾಗದ ನಗರ ಶಶಸ್ತ್ರ ಮೀಸಲು ಪಡೆ ಎಎಸ್ಐ ಚಾಂದ್ ಪಾಷಾ ಮತ್ತು ತಲೆ ಮರೆಸಿಕೊಂಡಿರುವ ಶಂಕಿತ ಉಗ್ರ ಜುನೈದ್ ಅಹಮದ್ ತಾಯಿ ಅನೀಸ್ ಫಾತಿಮಾ ಅವರನ್ನು ಬಂಧಿಸಲಾಗಿದೆ. https://twitter.com/NIA_India/status/1942612683729100817?ref_src=twsrc%5Egoogle%7Ctwcamp%5Eserp%7Ctwgr%5Etweet ಕೋಲಾರ ತಾಲೂಕಿಕಿನ ಭಟ್ರಹಳ್ಳಿಯ ಸತೀಶ್ ಗೌಡ ಅವರಿಗೆ ಎನ್ಐಎ ನೋಟಿಸ್ ನೀಡಿದೆ. ಬೆಳಿಗ್ಗೆ 10ಗಂಟೆಗೆ ಗಂಟೆಗೆ ಬೆಂಗಳೂರಿನ ಎನ್ಐಎ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ. ವೈಟ್ ಫೀಲ್ಡ್ ಬಳಿ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಸತೀಶ್ ಗೌಡ ಶಂಕಿತ ಉಗ್ರರಿಗೆ ಮೊಬೈಲ್ ಸಿಮ್ ಕಾರ್ಡ್ ಗಳನ್ನು ನೀಡಿದ ಆರೋಪವಿದೆ. ಸತೀಶ್ ಗೌಡ…
ದಾವಣಗೆರೆ : ದಾವಣಗೆರೆಯಲ್ಲಿ ಇಬ್ಬರು ಅಂತಾರಾಜ್ಯ ಮಹಿಳಾ ಕಳ್ಳಿಯರನ್ನು ಪೊಲೀಸರು ಬಂಧಿಸಿದ್ದಾರೆ. ಚನ್ನಗಿರಿ ತಾಲೂಕಿನ ದೊಡ್ಡಘಟ್ಟ ಗ್ರಾಮದ ನಿವಾಸಿ ಆರ್. ಮಂಜುಳಾ (32), ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಪೂರ್ಣಿಮಾ (20) ಬಂಧಿಸಲಾಗಿದೆ. ಬಂಧಿತರಿಂದ 15 ಲಕ್ಷ ರೂ. ಮೌಲ್ಯದ 155 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ. ದಾವಣಗೆರೆ ನಗರದ ಕೆಟಿಜೆ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಕಳ್ಳಿಯರನ್ನು ಬಂಧಿಸಿದ್ದಾರೆ. ದಾವಣಗೆರೆ ಕೇಂದ್ರ ಬಸ್ ನಿಲ್ದಾಣದಲ್ಲಿ ಟಿ.ಸುಧಾ ಎಂಬುವರ ಚಿನ್ನ ಕಳವು ಮಾಡಿದ್ದರು. ದಾವಣಗೆರೆ ರೈಲ್ವೆ ಪೊಲೀಸ್ ಠಾಣೆ, ಬಡಾವಣೆ ಪೊಲೀಸ್ ಠಾಣೆ, ಚಿತ್ರದುರ್ಗ, ಹೊಳಲ್ಕೆರೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದವು.
ಕೊಪ್ಪಳ : ರೈತಾಪಿ ವರ್ಗದವರ ಸಮಸ್ಯೆಗಳನ್ನು ಪರಿಹರಿಸಿ ಪೌತಿ/ವಾರಸಾ ಸ್ವರೂಪದ ಮುಟೇಶನ್ ಪ್ರಕ್ರಿಯೆಯನ್ನು ಸರಳೀಕೃತಗೊಳಿಸಲು ಕಂದಾಯ ಇಲಾಖೆಯಿಂದ ಇ-ಪೌತಿ/ವಾರಸಾ ಖಾತೆ ಆಂದೋಲನವನ್ನು ನಡೆಸಲಾಗುತ್ತಿದ್ದು, ಜಿಲ್ಲೆಯ ರೈತರಿಗೆ ಬಹಳಷ್ಟು ಅನುಕೂಲವಾಗಲಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್.ತಂಗಡಗಿ ಅವರು ತಿಳಿಸಿದರು. ಸೋಮವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಇ-ಪೌತಿ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಕೃಷಿ ಜಮೀನಿನ ಮಾಲೀಕರು ಮರಣ ಹೊಂದಿದ ನಂತರ ಪೌತಿ/ವಾರಸಾ ರೀತ್ಯಾ ಮಾಲೀಕತ್ವವು ಮೃತರ ಉತ್ತರಾಧಿಕಾರಿಗಳ ಹೆಸರಿಗೆ ಬದಲಾವಣೆಯಾಗದಿದ್ದಲ್ಲಿ ಅಂತಹ ಜಮೀನುಗಳ ಸ್ವಾಧೀನವನ್ನು ಹೊಂದಿದ್ದರೂ ಸಹ ಕುಟುಂಬಸ್ಥರಿಗೆ ಜಮೀನು ಅಭಿವೃದ್ಧಿಪಡಿಸಲು ಸಾಲ ಸೌಕರ್ಯಗಳು ದೊರೆಯುವುದಿಲ್ಲ. ಪ್ರಕೃತಿ ವಿಕೋಪದಂತಹ ಅಚಾತುರ್ಯಗಳಿಂದಾಗಿ ಫಸಲು ನಾಶವಾದಾಗ ಸರಕಾರದಿಂದ ನೀಡಲಾಗುವ ವಿಮೆ/ಪರಿಹಾರದ ಮೊಬಲಗನ್ನು ಪಡೆಯುವುದು ದುಸ್ತರವಾಗುತ್ತದೆ. ಅಲ್ಲದೇ ಇಂತಹ ಜಮೀನುಗಳನ್ನು ಸಾರ್ವಜನಿಕ ಉದ್ದೇಶಕ್ಕೆ ಭೂಸ್ವಾಧೀನ ಕಾಯ್ದೆಯಂತೆ ಸ್ವಾಧೀನ ಪಡಿಸಿಕೊಂಡಾಗಲೂ ಸಹ ಪರಿಹಾರದ ಹಣವನ್ನು ಪಡೆಯಲು ವಿವಿಧ…
ಗದಗ: ರಾಜ್ಯದ ಶಾಲಾ ಮಕ್ಕಳ ಫೇಸ್ ರೀಡಿಂಗ್ ಹಾಜರಿ ಪ್ರಕ್ರಿಯೆಗೆ ಇನ್ನೊಂದು ತಿಂಗಳೊಳಗೆ ಚಾಲನೆ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದ್ದಾರೆ. ಶಿಕ್ಷಕರ ಫೇಸ್ ರೇಡಿಂಗ್ ಆನ್ಲೈನ್ ಹಾಜರಿ ಪ್ರತ್ಯಕ್ಷ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವರು ಮಾತನಾಡಿದ ಸಚಿವ ಮಧು ಬಂಗಾರಪ್ಪ, ಸರ್ಕಾರಿ ಶಾಲೆ ಶಿಕ್ಷಕರ ಆನ್ ಲೈನ್ ಹಾಜರಿ ಅಗತ್ಯವಿದ್ದು, ಇದೇ ಪ್ರಕ್ರಿಯೆಯನ್ನು ರಾಜ್ಯಾದ್ಯಂತ ಕೈಗೊಳ್ಳಲು ಹಿರಿಯ ಸಚಿವರದ ಹೆಚ್.ಕೆ. ಪಾಟೀಲ್ ಅವರ ಸಹಕಾರ ಅಗತ್ಯವಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಗದಗ ಜಿಲ್ಲೆಯಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಆನ್ಲೈನ್ ಹಾಜರಾತಿ ವ್ಯವಸ್ಥೆ ಪ್ರತ್ಯಕ್ಷ ಎಂಬ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಶಿಕ್ಷಕರ ಫೇಸ್ ರೇಡಿಂಗ್ ಹಾಜರಿ ಪ್ರಕ್ರಿಯೆ ರೀತಿಯಲ್ಲಿ ರಾಜ್ಯದಲ್ಲಿರುವ ಶಾಲಾ ಮಕ್ಕಳ ಫೇಸ್ ರೀಡಿಂಗ್ ಹಾಜರಿಗೆ ಇನ್ನೊಂದು ತಿಂಗಳೊಳಗೆ ಅಧಿಕೃತ ಚಾಲನೆ ನೀಡಲು ಸರ್ಕಾರ ಸಿದ್ಧತೆ ಕೈಗೊಂಡಿದೆ. ತಂತ್ರಜ್ಞಾನ ಬಳಕೆ ಮಾಡಿಕೊಂಡು ರಾಜ್ಯದ…
ಬೆಂಗಳೂರು : ಹೃದಯಾಘಾತ ತಡೆಯಲು ಆರೋಗ್ಯ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗಿದೆ. ಪುನೀತ್ ರಾಜ್ಕುಮಾರ್ ʼಹೃದಯಜ್ಯೋತಿʼ ಯೋಜನೆ ಎಲ್ಲ ತಾಲೂಕು ಆಸ್ಪತ್ರೆಗಳಿಗೆ ವಿಸ್ತರಿಸಲಾಗಿದೆ. ವರ್ಷಕ್ಕೊಮ್ಮೆ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೂ ಕನಿಷ್ಠ ಆರೋಗ್ಯ ತಪಾಸಣೆ ಹಾಗೂ ಖಾಸಗಿ ಕಂಪನಿ, ಕಾರ್ಖಾನೆ, ಉದ್ದಿಮೆಗಳ ನೌಕರರಿಗೆ ವರ್ಷಕ್ಕೊಮ್ಮೆಯಾದರೂ ಆರೋಗ್ಯ ತಪಾಸಣೆಗೆ ನಿರ್ದೇಶನ ನೀಡಲಾಗಿದೆ. ಶಾಲಾ ಮಕ್ಕಳಿಗೆ ವರ್ಷಕ್ಕೊಮ್ಮೆ ಇಲಾಖೆಯಿಂದಲೇ ಆರೋಗ್ಯ ತಪಾಸಣೆ ನಡೆಸಲು ತೀರ್ಮಾನಿಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ ಪಠ್ಯದಲ್ಲಿ ಹೃದಯ ಸಂಬಂಧಿ ಪಾಠ ಅಳವಡಿಕೆಗೆ ಚಿಂತನೆ ನಡೆಸಲಾಗಿದೆ. ಯುವ ವರ್ಗದಲ್ಲಿ ಹೃದಯಾಘಾತ, ಹಠಾತ್ ಸಾವು ಸಂಭವಿಸುತ್ತಿರುವ ಕಾರಣ ಮುಂದಿನ ಶೈಕ್ಷಣಿಕ ವರ್ಷದಿಂದ ಹೃದಯಾಘಾತ ಹಾಗೂ ಹೃದಯದ ಆರೋಗ್ಯ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ವಿಚಾರವನ್ನು ಪಠ್ಯಪುಸ್ತಕದಲ್ಲಿ ಅಳವಡಿಸಲು ಚಿಂತನೆ ನಡೆದಿದೆ. ತಜ್ಞರ ಸಮಿತಿಯ ಶಿಫಾರಸ್ಸಿನಂತೆ ಕೈಗೊಳ್ಳಲಿರುವ ಎಲ್ಲ ಕ್ರಮಗಳ ಕುರಿತು ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಿ ಮುಂದುವರಿಯಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬೆಂಗಳೂರು : ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಸ್ಕೂಲ್ಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಕೆಪಿಎಸ್ ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡ ಮಕ್ಕಳೇ ಓದುತ್ತಿದ್ದಾರೆ. ಎಲ್ಕೆಜಿಯಿಂದ ಪಿಯುಸಿ ತನಕ ವಿದ್ಯಾಭ್ಯಾಸ ದೊರೆಯುತ್ತಿದೆ. ಅಲ್ಲಿ ಓದುವ ಮಕ್ಕಳಿಗೆ ಅನುಕೂಲ ಕಲ್ಪಿಸಲು ಈ ನಿರ್ಧಾರ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಎಸ್ ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡ ಮಕ್ಕಳು ಓದುತ್ತಿದ್ದಾರೆ. ಎಲ್ಕೆಜಿಯಿಂದ ಪಿಯುಸಿವರೆಗೆ ಶಿಕ್ಷಣ ನೀಡಲಾಗುತ್ತಿದೆ. ಈ ಶಾಲೆಯ ಮಕ್ಕಳಿಗೆ ಅನುಕೂಲ ಕಲ್ಪಿಸಲು ಉಚಿತವಾಗಿ ಬಸ್ ವ್ಯವಸ್ಥೆ ಆರಂಭಿಸಲು ಸರ್ಕಾರ ತೀರ್ಮಾನ ನಿರ್ಧಾರ ಕೈಗೊಂಡಿದೆ. ಯಾವ ಭಾಗದಲ್ಲಿ ಅವಶ್ಯಕತೆ ಇದೆಯೋ ಅಲ್ಲಿ ಉಚಿತ ಬಸ್ ವ್ಯವಸ್ಥೆಗಳನ್ನು ಮೊದಲು ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ಸಾಕಷ್ಟು ಕೆಲಸಗಳು ಆಗುತ್ತಿವೆ. ರಾಜ್ಯ ಸರ್ಕಾರ ಮತ್ತು ಅಜೀಮ್ ಪ್ರೇಮಜಿ ಫೌಂಡೇಶನ್ ಸಹಯೋಗದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ…
ಬೆಂಗಳೂರು : 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-184(3) ರಲ್ಲಿ ಘೋಷಿಸಿರುವಂತೆ 2025-26ನೇ ಸಾಲಿಗೆ “50 ಹೊಸ ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ಪ್ರಾರಂಭಿಸಲು” ಸರ್ಕಾರದ ಮಂಜೂರಾತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರ.ಸಂ.(1) ರ 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ -184(3) ರಲ್ಲಿ ಈ ಕೆಳಕಂಡಂತೆ ಘೋಷಿಸಲಾಗಿರುತ್ತದೆ. 100 ಹೊಸ ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ತೆರೆಯುವುದು ” ಮೇಲೆ ಓದಲಾದ ಕ್ರ.ಸಂ.(2) ರ ಸರ್ಕಾರದ ಆದೇಶದಲ್ಲಿ 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-184 (3)ರ ಘೋಷಣೆಯಂತೆ, ಮೊದಲ ಹಂತದಲ್ಲಿ 2024-25 ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ 60 ಸಂಖ್ಯಾಬಲದ 50 ಹೊಸ ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ಪ್ರಾರಂಭಿಸಲು ಮಂಜೂರಾತಿ ನೀಡಿ, ಪ್ರತಿ ಹೊಸ ಮೌಲಾನಾ ಆಜಾದ್ ಮಾದರಿ ಶಾಲೆಗೆ 07 ಹುದ್ದೆಗಳಂತೆ ಒಟ್ಟು 350 ಬೋಧಕ ಹುದ್ದೆಗಳನ್ನು ಸೃಜಿಸಿ ಭರ್ತಿ ಮಾಡಿಕೊಳ್ಳಲು ಅನುಮೋದನೆ ನೀಡಿ ಆದೇಶಿಸಿದೆ. 2025-26ನೇ ಸಾಲಿನಲ್ಲಿ 50…