Author: kannadanewsnow57

ಅಹಮದಾಬಾದ್ : ಇಂಧನ ಸ್ವಿಚ್ ಆಫ್ ನಿಂದ `ಏರ್ ಇಂಡಿಯಾ ಬೋಯಿಂಗ್ 787 ವಿಮಾನ ಪತಗೊಂಡಿಲ್ಲ ಎಂದು ಏರ್ ಇಂಡಿಯಾ ಅಧಿಕೃತ ಮಾಹಿತಿ ನೀಡಿದೆ. ಬೋಯಿಂಗ್ 787 ವಿಮಾನಗಳ ಫ್ಲೀಟ್‌ನಲ್ಲಿ ಇಂಧನ ನಿಯಂತ್ರಣ ಸ್ವಿಚ್‌ಗಳ (FCS) ಲಾಕಿಂಗ್ ಕಾರ್ಯವಿಧಾನದ ಮುನ್ನೆಚ್ಚರಿಕೆ ಪರಿಶೀಲನೆಗಳನ್ನು ಏರ್ ಇಂಡಿಯಾ ಪೂರ್ಣಗೊಳಿಸಿದೆ ಮತ್ತು ಯಾವುದೇ ಸಮಸ್ಯೆಗಳಿಲ್ಲ ಎಂದು ಬುಧವಾರ ವಿಮಾನಯಾನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೋಯಿಂಗ್ 787 ಮತ್ತು 737 ವಿಮಾನಗಳನ್ನು ನಿರ್ವಹಿಸುವ ಎಲ್ಲಾ ವಿಮಾನಯಾನ ಸಂಸ್ಥೆಗಳು ಇಂಧನ ಸ್ವಿಚ್ ಲಾಕಿಂಗ್ ವ್ಯವಸ್ಥೆಗಳನ್ನು ಪರೀಕ್ಷಿಸುವಂತೆ ವಾಯುಯಾನ ನಿಯಂತ್ರಕ DGCA ಈ ವಾರದ ಆರಂಭದಲ್ಲಿ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಈ ತಪಾಸಣೆ ನಡೆದಿದೆ. ಅಧಿಕಾರಿಯ ಪ್ರಕಾರ, ವಿಮಾನಯಾನದ ಎಂಜಿನಿಯರಿಂಗ್ ತಂಡವು ವಾರಾಂತ್ಯದಲ್ಲಿ ತಪಾಸಣೆಗಳನ್ನು ನಡೆಸಿ ಆಂತರಿಕ ಸಂದೇಶದ ಮೂಲಕ ಪೈಲಟ್‌ಗಳಿಗೆ ಫಲಿತಾಂಶವನ್ನು ತಿಳಿಸಿತು. “ತಪಾಸಣೆಗಳು ಪೂರ್ಣಗೊಂಡಿವೆ, ಮತ್ತು ಯಾವುದೇ ಸಮಸ್ಯೆಗಳು ಕಂಡುಬಂದಿಲ್ಲ” ಎಂದು ಅಧಿಕಾರಿ ಹೇಳಿದರು, ಎಲ್ಲಾ ಬೋಯಿಂಗ್ 787-8 ವಿಮಾನಗಳು ಈಗಾಗಲೇ ಬೋಯಿಂಗ್‌ನ ನಿರ್ವಹಣಾ ವೇಳಾಪಟ್ಟಿಯ ಪ್ರಕಾರ ಥ್ರೊಟಲ್…

Read More

ಕಲತಾ : ಕಲಾತ್ ಮತ್ತು ಕ್ವೆಟ್ಟಾದಲ್ಲಿ ನಡೆದ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 29 ಪಾಕಿಸ್ತಾನಿ ಭದ್ರತಾ ಪಡೆಗಳನ್ನು ಕೊಂದಿರುವುದಾಗಿ ಬಲೂಚ್ ಲಿಬರೇಶನ್ ಆರ್ಮಿ (BLA) ಹೇಳಿಕೊಂಡಿದೆ. ಪಾಕಿಸ್ತಾನಿ ಸೇನೆಯ ವಿರುದ್ಧ ಈ ಯುದ್ಧವನ್ನು ಮುಂದುವರಿಸುವುದಾಗಿ BLA ಹೇಳಿದೆ. ಕ್ವೆಟ್ಟಾದಲ್ಲಿ, BLA ಯ ವಿಶೇಷ ಘಟಕ ಫತಾಹ್ ಸ್ಕ್ವಾಡ್ ಪಾಕಿಸ್ತಾನಿ ಮಿಲಿಟರಿ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ ಅನ್ನು ಗುರಿಯಾಗಿಸಿಕೊಂಡು IED ದಾಳಿ ನಡೆಸಿದೆ ಎಂದು ಬಲೂಚ್ ಲಿಬರೇಶನ್ ಆರ್ಮಿ ಹೇಳಿಕೆ ನೀಡಿದೆ. ತನ್ನ ಗುಪ್ತಚರ ಘಟಕ ZIRAB ನಿಂದ ಗುಪ್ತಚರ ಮಾಹಿತಿಯ ನಂತರ ಬಲೂಚ್ ಲಿಬರೇಶನ್ ಆರ್ಮಿ ಈ ದಾಳಿಯನ್ನು ನಡೆಸಿತು. ಪಾಕಿಸ್ತಾನಿ ಮಿಲಿಟರಿ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ ಅನ್ನು ZIRAB ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿತ್ತು. ಈ ಬಸ್ ಕರಾಚಿಯಿಂದ ಕ್ವೆಟ್ಟಾಗೆ ಪಾಕಿಸ್ತಾನಿ ಮಿಲಿಟರಿ ಸಿಬ್ಬಂದಿಯನ್ನು ಕರೆದೊಯ್ಯುತ್ತಿತ್ತು. ಈ ದಾಳಿಯಲ್ಲಿ, 27 ಪಾಕಿಸ್ತಾನಿ ಮಿಲಿಟರಿ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದರು ಮತ್ತು ಅನೇಕರು ಗಂಭೀರವಾಗಿ ಗಾಯಗೊಂಡರು. ಈ ಬಸ್‌ನಲ್ಲಿ ಕವ್ವಾಲಿ ಗಾಯಕರೂ ಇದ್ದರು. ಈ…

Read More

ಹಾವೇರಿ : ರಾಜ್ಯದಲ್ಲಿ ಹೃದಯಾಘಾತದ ಸಾವಿನ ಸರಣಿ ಮುಂದುವರೆದಿದ್ದು, ಶಾಲಾ ಬಸ್ ಚಾಲನೆ ವೇಳೆ ಹೃದಯಾಘಾತದಿಂದ ಚಾಲಕ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಳಲಗೊಂಡ ಗ್ರಾಮದ ಬಳಿ ನಡೆದಿದೆ. ಮೃತರನ್ನು ಪಕ್ಕಿರೇಶ ಮಲ್ಲೇಶಣ್ಣನವರ್ (25) ಎಂದು ಗುರುತಿಸಲಾಗಿದೆ. ಶಾಲೆಯ ಬಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದ ಪಕ್ಕಿರೇಶ ಸಂಜೆ ಶಾಲೆಯಿಂದ ಮಕ್ಕಳನ್ನ ಮನೆಗೆ ಬಿಡುವ ವೇಳೆ ಧಿಡೀರ್ ಆಗಿ ಹೃದಯಾಘಾತ ಕಾಣಿಸಿಕೊಂಡಿದೆ. ನಂತರ ಮಕ್ಕಳ ಚೀರಾಟ ಕೇಳಿ ಸ್ಥಳೀಯರು ಬಂದು ಚಾಲಕನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅಷ್ಟರಲ್ಲೇ ಚಾಲಕ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಹೃದಯಾಘಾತದಿಂದ ನಿನ್ನೆ ಒಂದೇ ದಿನ 5 ಜನರು ಬಲಿಯಾಗಿದ್ದಾರೆ. ಕೊಪ್ಪಳದಲ್ಲಿ 26ರ ಯುವತಿ, ಸವಣೂರಲ್ಲಿ 25ರ ಯುವಕ ಸೇರಿ ನಿನ್ನೆ 5 ಜನ ಹೃದಯಾ ಘಾತಕ್ಕೆ ಬಲಿಯಾಗಿದ್ದಾರೆ. ಕೊಪ್ಪಳದ 26 ವರ್ಷದ ಮಹಿಳೆ ಮಂಜುಳಾ ಹೂಗಾರ(26) ಹೃದಯಾಘಾತದಿಂದಬುಧವಾರಮೃತಪಟ್ಟಿದ್ದಾರೆ. ವಿಜಯನಗರ ಜಿಲ್ಲೆ ಕೊಟ್ಟೂರಿನ ಎಚ್.ಕೆ.ರೇಖಾ (37), ಮಂಡ್ಯದ ಪಾಂಡವಪುರ ತಾಲೂಕಿನ ಗುಮ್ಮನಹಳ್ಳಿಯಲ್ಲಿ ಮಂಜುನಾಥ್ (44), ಬಾಗಲಕೋಟೆಯ ಜಮಖಂಡಿಯಲ್ಲಿ ಸಿದ್ದು…

Read More

ಕಾರ್ಕಳ : ಬಿಜೆಪಿ ಶಾಸಕ ಸುನಿಲ್ ಕುಮಾರ್‌ಗೆ ಪಿತೃ ವಿಯೋಗವಾಗಿದೆ. ಅವರ ತಂದೆ ಕೆ.ಎಂ. ವಾಸುದೇವ (87) ಅವರು ಮುಂಜಾನೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇತ್ತೀಚೆಗಷ್ಟೇ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ತೀವ್ರ ನಿಗಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.  ವೃತ್ತಿಯಲ್ಲಿ ಶಿಕ್ಷಕರಾಗಿದ್ದ ಅವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದರು. ಇಂದು ಸಂಜೆ ಕಲಂಬಾಡಿ ಪದವಿನಲ್ಲಿರುವ ಶಾಸಕರ ಸ್ವಗೃಹದಲ್ಲಿ ಅಂತಿಮ ವಿಧಿವಿಧಾನ ನಡೆಯಲಿದೆ ಎಂದು ಕುಟುಂಬದ ಮೂಲಗಳ ತಿಳಿಸಿದೆ.

Read More

ದಕ್ಷಿಣ ಕನ್ನಡ ಜಿಲ್ಲೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತವಾಗಿದ್ದು, ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಚಾರ ಬಂದ್ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮಣ್ಣಗುಂಡಿ ಬಳಿ ಗುಡ್ಡ ಕುಸಿತವಾಗಿದ್ದು, ಬೆಂಗಳೂರು-ಮಂಗಳೂರು ಸಂಪರ್ಕಿಸುವ ರಸ್ತೆ ಸಂಪೂರ್ಣ ಬಂದ್ ಆಗಿದೆ. ಇನ್ನೂ ಕೊಪ್ಪಳ ಜಿಲ್ಲೆಯಲ್ಲಿ ಸತತ ಮಳೆಗೆ ಮನೆ ಕುಸಿದು ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಒಂದೂವರೆ ವರ್ಷದ ಪ್ರಶಾಂತಿ ಸಾವನ್ನಪ್ಪಿದ್ದು, 6 ಜನರು ಗಾಯಗೊಂಡಿದ್ದಾರೆ.

Read More

ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದ್ದು, ದರ್ಶನ್ ಅವರ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಕೊಲೆ ಪ್ರಕರಣದಲ್ಲಿ 7 ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿದೆ. ಡಿಸೆಂಬರ್ 2024ರಲ್ಲಿ ಹೈಕೋರ್ಟ್ ಜಾಮೀನು ನೀಡಿದ್ದು, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು, ಇಂದು ಸುಪ್ರೀಂ ಕೋರ್ಟ್ ಅರ್ಜಿಯ ವಿಚಾರಣೆ ನಡೆಸಲಿದೆ.

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಕುರಿತು ಸಚಿವ ಸಂಪುಟದ ಸರ್ಕಾರದ ಅಪರ ಕಾರ್ಯದರ್ಶಿ ಮಾಹಿತಿ ನೀಡಿದ್ದು, ದಿನಾಂಕ 17-07-2025ರಂದು ಗುರುವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 15ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದು ತಿಳಿಸಿದ್ದಾರೆ. ಜುಲೈ.17ರಂದು ನಿಗದಿಯಾಗಿರುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಸೇರಿದಂತೆ ಮಹತ್ವದ ನಿರ್ಣಯಗಳಿಗೆ ಅನುಮೋದನೆಯನ್ನು ನೀಡುವ ಸಾಧ್ಯತೆ ಇದೆ.

Read More

ನವದೆಹಲಿ : ಛಂಗೂರ್ ಬಾಬಾ ಮತಾಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ದೇಶದ ಹಲವಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಬಲರಾಂಪುರದಲ್ಲಿ 12 ಮತ್ತು ಮುಂಬೈನಲ್ಲಿ ಎರಡು ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.

Read More

ಮುಂಬೈ : ಬಾಂಬೆ ಹೈಕೋರ್ಟ್‌ನ ಔರಂಗಾಬಾದ್ ಪೀಠವು ತನ್ನ ಅಜ್ಜಿಯರೊಂದಿಗೆ ವಾಸಿಸುತ್ತಿರುವ ಐದು ವರ್ಷದ ಬಾಲಕಿಯ ಪಾಲನೆಯನ್ನು ಆಕೆಯ ತಾಯಿಗೆ ಹಸ್ತಾಂತರಿಸಿದೆ. ತಂದೆಯ ನಂತರ, ಅಪ್ರಾಪ್ತ ಮಗುವಿನ ನೈಸರ್ಗಿಕ ರಕ್ಷಕ ತಾಯಿ ಎಂದು ಪೀಠ ಹೇಳಿದೆ. ಹಿಂದೂ ಅಲ್ಪಸಂಖ್ಯಾತ ಮತ್ತು ಪಾಲನೆ ಕಾಯ್ದೆಯ ಪ್ರಕಾರ, ಅಪ್ರಾಪ್ತ ಮಗುವಿನ ನೈಸರ್ಗಿಕ ರಕ್ಷಕ ಮೊದಲು ತಂದೆ ಮತ್ತು ನಂತರ ತಾಯಿ ಎಂದು ನ್ಯಾಯಮೂರ್ತಿ ಎಸ್‌ಜಿ ಚಾಪಲ್‌ಗಾಂವ್ಕರ್ ಅವರ ಪೀಠ ಹೇಳಿದೆ. ಮಗುವಿನ ಹಿತಾಸಕ್ತಿಯನ್ನು ಖಚಿತಪಡಿಸಿಕೊಳ್ಳಲು ಆಕೆಗೆ ಯಾವುದೇ ಪ್ರತಿಕೂಲ ಹಿತಾಸಕ್ತಿ ಅಥವಾ ಅಸಮರ್ಥತೆ ಇದೆ ಎಂದು ಸಾಬೀತಾಗದ ಹೊರತು ಕಾನೂನುಬದ್ಧವಾಗಿ ಅಪ್ರಾಪ್ತ ಬಾಲಕಿಯನ್ನು ತಾಯಿಯ ವಶಕ್ಕೆ ನೀಡಬೇಕು ಎಂದು ಹೈಕೋರ್ಟ್ ಹೇಳಿದೆ. ನ್ಯಾಯಾಲಯವು ಯಾವ ಪ್ರಕರಣದಲ್ಲಿ ಈ ಆದೇಶವನ್ನು ನೀಡಿತು? 25 ವರ್ಷದ ಮಹಿಳೆ ಸಲ್ಲಿಸಿದ ಅರ್ಜಿಯ ಮೇರೆಗೆ ಈ ಆದೇಶವನ್ನು ಅಂಗೀಕರಿಸಲಾಗಿದೆ. ಇದರಲ್ಲಿ, ಏಪ್ರಿಲ್ 2025 ರಲ್ಲಿ ಜಿಲ್ಲಾ ನ್ಯಾಯಾಲಯವು ನೀಡಿದ ಆದೇಶವನ್ನು ಪ್ರಶ್ನಿಸಲಾಯಿತು, ಇದರಲ್ಲಿ ಆಕೆಯ ಐದು ವರ್ಷದ ಮಗಳ ಪಾಲನೆಯನ್ನು…

Read More

01,🦑ಮೇಷ ರಾಶಿ🦑 📖,ಹೊಸ ವ್ಯವಹಾರಗಳನ್ನು ಪ್ರಾರಂಭಿಸಿ ಲಾಭವನ್ನು ಪಡೆಯುತ್ತೀರಿ. ಸಮಾಜದಲ್ಲಿ ಪ್ರತಿಷ್ಠೆ ಹೆಚ್ಚಿದಂತೆ ಎಲ್ಲಾ ಕಡೆಯಿಂದಲೂ ಆದಾಯದ ಮಾರ್ಗಗಳಿರುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಶುಭ ಸುದ್ದಿ ದೊರೆಯುತ್ತದೆ. ಸಂಗಾತಿಯೊಂದಿಗೆ ಮನೆಯಲ್ಲಿ ಸಂತೋಷದಿಂದ ಕಳೆಯುತ್ತೀರಿ 9980060275 02,🦑ವೃಷಭ ರಾಶಿ🦑 📖,ಉದ್ಯೋಗಿಗಳಲ್ಲಿ ಅನುಕೂಲಕರ ಬದಲಾವಣೆಗಳಾಗುತ್ತವೆ. ಪ್ರಮುಖ ವ್ಯವಹಾರಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಕುಟುಂಬ ವ್ಯವಹಾರಗಳಲ್ಲಿ ಸಣ್ಣಪುಟ್ಟ ಸಮಸ್ಯೆಗಳನ್ನು ನಿವಾರಿಸುತ್ತೀರಿ. ಹೊಸ ಸಾಲ ಪ್ರಯತ್ನಗಳು ಫಲ ನೀಡುತ್ತವೆ. ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ ಹೊಂದುತ್ತವೆ,9980060275 03,🦑ಮಿಥುನ ರಾಶಿ🦑 📖,ಹೊಸ ವ್ಯವಹಾರಗಳಿಗೆ ಹೂಡಿಕೆಗಳು ದೊರೆಯುತ್ತವೆ. ಮಕ್ಕಳ ವಿವಾಹ ಉದ್ಯೋಗ ಪ್ರಯತ್ನಗಳು ಅನುಕೂಲಕರವಾಗಿರುತ್ತವೆ. ಬಹಳ ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳು ದೂರವಾಗುತ್ತವೆ. ಹಠಾತ್ ಆರ್ಥಿಕ ಲಾಭ ದೊರೆಯುತ್ತದೆ. ಉದ್ಯೋಗಿಗಳ ಜವಾಬ್ದಾರಿಯಲ್ಲಿನ ಅಡೆತಡೆಗಳನ್ನು ನಿವಾರಿಸಿ ಮುಂದೆ ಸಾಗುತ್ತೀರಿ. ಸೇವಾ ಕಾರ್ಯಕ್ರಮಗಳನ್ನು ನಿರ್ವಹಿಸುತ್ತೀರಿ,9980060275 04,🦑ಕರ್ಕ ರಾಶಿ🦑 📖,ಹಳೆ ಸಾಲ ವಸೂಲಿಯಾಗುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ಕಾರ್ಯಗತಗೊಳಿಸಲಾಗುತ್ತದೆ. ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಪರಿಹಾರ ಪಡೆಯುತ್ತೀರಿ. ಉದ್ಯೋಗಿಗಳಿಗೆ ಉನ್ನತ ಹುದ್ದೆ ದೊರೆಯುತ್ತದೆ. ಮನೆಯಲ್ಲಿ ಹೊಸ ಕಾರ್ಯಕ್ರಮಗಳನ್ನು ಪ್ರಾರಂಭಿಸುತ್ತೀರಿ,9980060275 05,🦑ಸಿಂಹ…

Read More