Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಬೆಂಗಳೂರಿನಲ್ಲಿ ಬಿಕ್ಲು ಶಿವು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್, ಜಗದೀಶ್, ವಿಮಲ್, ಕಿರಣ್, ಅನಿಲ್ ವಿರುದ್ಧ ಬೆಂಗಳೂರಿನ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಬಿಕ್ಲು ಶಿವು ತಾಯಿ ವಿಜಯಲಕ್ಷ್ಮೀ ನೀಡಿದ ದೂರು ಆಧರಿಸಿ ಬಿಜೆಪಿ ಶಾಸಕ ಭೈರತಿ ಬಸವರಾಜ್, ಜಗದೀಶ್, ವಿಮಲ್, ಕಿರಣ್, ಅನಿಲ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಘಟನೆ ಹಿನ್ನೆಲೆ ನಿನ್ನೆ ಬೆಂಗಳೂರು ನಗರದಲ್ಲಿ ರೌಡಿ ಶೀಟರ್ ಶಿವಕುಮಾರ್ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ಹಲಸೂರು ಕೆರೆ ಬಳಿಯ ಮನೆಯ ಮುಂದೆ ರೌಡಿ ಶೀಟರ್ ಶಿವಕುಮಾರ್ ಆಲಿಯಾಸ್ ಬಿಕ್ಲು ಶಿವ ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಗೈದಿದ್ದಾರೆ. ಮನೆ ಮುಂದೆ ನಿಂತಿದ್ದಾಗಲೇ ನಾಲ್ಕೈದು…
ಹೈದರಾಬಾದ್ : ಟಾಲಿವುಡ್ ನಟ ರವಿತೇಜ ಅವರ ತಂದೆ ಭೂಪತಿರಾಜು ರಾಜಗೋಪಾಲ್ ರಾಜು ಅವರು ನಿನ್ನೆ ರಾತ್ರಿ 90 ವರ್ಷ ವಯಸ್ಸಿನಲ್ಲಿ ವಯೋಸಹಜ ಆರೋಗ್ಯ ಸಮಸ್ಯೆಗಳಿಂದಾಗಿ ಹೈದರಾಬಾದ್ನಲ್ಲಿರುವ ನಟನ ನಿವಾಸದಲ್ಲಿ ನಿಧನರಾದರು. ಹೈದರಾಬಾದ್ನಲ್ಲಿರುವ ರವಿತೇಜ ಅವರ ನಿವಾಸದಲ್ಲಿ ಈ ಘಟನೆ ನಡೆದಿದೆ. ಅವರ ನಿಧನವು ಕುಟುಂಬವನ್ನು ತೀವ್ರ ದುಃಖದಲ್ಲಿ ಮುಳುಗಿಸಿದೆ. ಇದು ರವಿತೇಜ ಅವರಿಗೆ ವೈಯಕ್ತಿಕ ಮತ್ತು ಭಾವನಾತ್ಮಕ ನಷ್ಟವಾಗಿದೆ. ಈ ಕಠಿಣ ಸಮಯದಲ್ಲಿ ಹಲವಾರು ಸೆಲೆಬ್ರಿಟಿಗಳು ಮತ್ತು ಹಿತೈಷಿಗಳು ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ರಾಜಗೋಪಾಲ್ ರಾಜು ಔಷಧಿಕಾರರಾಗಿ ಕೆಲಸ ಮಾಡುತ್ತಿದ್ದರು ಮತ್ತು ಅವರ ವಿನಮ್ರ ಮತ್ತು ಶಾಂತ ಜೀವನಕ್ಕೆ ಹೆಸರುವಾಸಿಯಾಗಿದ್ದರು. ಅವರ ಪತ್ನಿ ರಾಜ್ಯ ಲಕ್ಷ್ಮಿ ಮತ್ತು ಇಬ್ಬರು ಪುತ್ರರು – ರವಿತೇಜ ಮತ್ತು ರಘು ರಾಜು ಅವರನ್ನು ಅಗಲಿದ್ದಾರೆ. ಅವರ ಇನ್ನೊಬ್ಬ ಮಗ ಭರತ್ ರಾಜು ಕೆಲವು ವರ್ಷಗಳ ಹಿಂದೆ ನಿಧನರಾದರು.
ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತದ ಸಾವಿನ ಸರಣಿ ಮುಂದುವರಿದಿದೆ. ನಿನ್ನೆ ಒಂದೇ ದಿನ ರಾಜ್ಯದ ವಿವಿಧೆಡೆ ಐವರು ಸಾವನ್ನಪ್ಪಿದ್ದಾರೆ. ಮಂಡ್ಯದಲ್ಲಿ ಹೃದಯಾಘಾತದಿಂದ ತೆಂಗಿನಕಾಯಿ ವ್ಯಾಪಾರಿ ಸಾವು ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಂಗಬೋರನದೊಡ್ಡಿ ಗ್ರಾಮದ ತೆಂಗಿನ ಕಾಯಿ ವ್ಯಾಪಾರಿಯಾದ ರಾಜಣ್ಣ (ಲಿಂಗರಾಜು) ಅವರು ಸೋಮವಾರದಂದು ವೇಳೆಯಲ್ಲಿ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಅವರನ್ನು ಸ್ಥಳೀಯ ಶ್ರೀ ಚಾಮುಂಡೇಶ್ವರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. KSRTC ನೌಕರ ಆರ್ಟ್ ಅಟ್ಯಾಕ್ ನಿಂದ ಸಾವು ಕೋಲಾರ ಜಿಲ್ಲೆಯಲ್ಲಿ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಕೆ ಎಸ್ ಆರ್ ಟಿ ಸಿ ನೌಕರರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಅನಾರೋಗ್ಯದಿಂದ ಬಳಲುತ್ತಿದ್ದಂತ ಮುತ್ತಕಪಲ್ಲಿ ಗ್ರಾಮದ ನಿವಾಸಿ ಬಾಬಾಜಾನ್(53) ಎಂಬ ಕೆ ಎಸ್ ಆರ್ ಟಿ ಸಿ ನೌಕರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೆ ಎಸ್ ಆರ್ ಟಿ ಸಿ ಡಿಪೋದಲ್ಲಿ ಬಾಬಾಜಾನ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು. ಚಾಲಕರಾಗಿ ಕೆಲಸಕ್ಕೆ ಸೇರಿದ್ದಂತ ಬಾಬಾಜಾನ್ ಅವರು…
ಹೊಸೂರು : ಮಕ್ಕಳ ಕೈಗೆ ಬೈಕ್ ಕೊಡುವ ಪೋಷಕರೇ ಎಚ್ಚರ, ತಮಿಳುನಾಡಿನ ಹೊಸೂರಿನಲ್ಲಿ ಬೈಕ್ ಸವಾರಿ ಮಾಡುತ್ತಿದ್ದ ಸರ್ಕಾರಿ ಮತ್ತು ಖಾಸಗಿ ಶಾಲೆಯ ಮೂವರು ವಿದ್ಯಾರ್ಥಿಗಳು ಲಾರಿಗೆ ಬೈಕ್ ಡಿಕ್ಕಿ ಹೊಡೆದು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಪೊಲೀಸರು ಲಾರಿ ಚಾಲಕನನ್ನು ಬಂಧಿಸಿದ್ದಾರೆ. ಹೊಸೂರಿನಲ್ಲಿ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮದನ್ (14 ವರ್ಷ), ಆರ್ಯನ್ ಸಿಂಗ್ (13), ಹರೀಶ್ (14) ಮೃತಪಟ್ಟಿದ್ದಾರೆ. ಮದನ್ ನಿನ್ನೆ ಶಾಲೆಗೆ ಹೋಗಲಿಲ್ಲ ಎಂದು ಹೇಳಲಾಗುತ್ತದೆ. ಆರ್ಯನ್ ಸಿಂಗ್ ಮತ್ತು ಹರೀಶ್ ಶಾಲೆಗೆ ಹೋಗಿದ್ದರು. ನಿನ್ನೆ ಸಂಜೆ ಮದನ್ ತನ್ನ ತಂದೆಯ ಮೋಟಾರ್ ಸೈಕಲ್ ತೆಗೆದುಕೊಂಡು ಶಾಲೆಯ ಬಳಿ ಬಂದ. ಅಲ್ಲಿ ಆರ್ಯನ್ ಸಿಂಗ್ ಅವರನ್ನು ಕರೆದುಕೊಂಡು ಅಂತಿವಾಡಿಗೆ ಹೋದ. ಅಲ್ಲಿ, ಮೂವರು ಹರೀಶ್ ಜೊತೆ ಒಂದೇ ಮೋಟಾರ್ ಸೈಕಲ್ ನಲ್ಲಿ ಬರುತ್ತಿದ್ದರು. ಅವರು ಮಾಧಗಿರಿ ಜಂಟಿ ರಸ್ತೆಯ ಕಡೆಗೆ ಬಂದಾಗ, ಆ ಪ್ರದೇಶದಲ್ಲಿ ನಿಂತಿದ್ದ ಲಾರಿಯ ಹಿಂಭಾಗಕ್ಕೆ ಮೋಟಾರ್ ಸೈಕಲ್ ಡಿಕ್ಕಿ ಹೊಡೆದಿದೆ. ಇದರಲ್ಲಿ ಮೋಟಾರ್…
01,🪐ಮೇಷ ರಾಶಿ🪐 📖,ಸಮಾಜದ ಹಿರಿಯರ ಕೃಪಾಕಟಾಕ್ಷದಿಂದ ಮಹತ್ವದ ಕಾರ್ಯಗಳು ಪೂರ್ಣಗೊಳ್ಳುತ್ತವೆ. ಹೊಸ ವ್ಯವಹಾರವನ್ನು ಪ್ರಾರಂಭಿಸುತ್ತೀರಿ. ಬಂಧು ಮಿತ್ರರಿಂದ ಶುಭ ಆಹ್ವಾನಗಳು ಬರುತ್ತವೆ. ಹಠಾತ್ ಧನಲಾಭ ದೊರೆಯುತ್ತದೆ. ವ್ಯಾಪಾರಗಳು ಹೆಚ್ಚು ಅಭಿವೃದ್ಧಿ ಹೊಂದುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಲಾಗುತ್ತದೆ, 9980060275 ಅನಿರುದ್ಧ ಜೋಶಿ 02,🪐ವೃಷಭ ರಾಶಿ🪐 📖,ಪ್ರಯಾಣದ ವಿಷಯದಲ್ಲಿ ಜಾಗರೂಕರಾಗಿರಬೇಕು, ವೃತ್ತಿ ಮತ್ತು ವ್ಯಾಪಾರದಲ್ಲಿ ಶ್ರಮ ಶೀಲತೆ ಹೆಚ್ಚಾಗುತ್ತದೆ. ಕುಟುಂಬದ ಸದಸ್ಯರ ಅನಾರೋಗ್ಯ ಸಮಸ್ಯೆಗಳು ಭಾವನಾತ್ಮಕವಾಗಿ ನೋವುಂಟು ಮಾಡುತ್ತದೆ. ನಿರುದ್ಯೋಗ ಪ್ರಯತ್ನಗಳು ನಿಧಾನವಾಗಿ ಸಾಗುತ್ತದೆ. ಹೊಸ ಸಾಲದ ಪ್ರಯತ್ನಗಳು ಕೂಡಿ ಬರುವುದಿಲ್ಲ. ಪ್ರಮುಖ ವಿಷಯಗಳ ಬಗ್ಗೆ ಯೋಚಿಸಿ ಮುಂದೆ ಸಾಗಬೇಕು,9980060275 ಅನಿರುದ್ಧ ಜೋಶಿ 03,🪐ಮಿಥುನ ರಾಶಿ🪐 📖,ಮಾತೃಪಕ್ಷದ ಬಂಧು ಮಿತ್ರರೊಂದಿಗೆ ಸ್ಥಿರಾಸ್ತಿ ವಿವಾದ ಉಂಟಾಗುತ್ತದೆ. ವೃತ್ತಿಪರ ವ್ಯವಹಾರದಲ್ಲಿ ನಷ್ಟದ ಸೂಚನೆಗಳಿವೆ. ಹೆಚ್ಚಿನ ಪ್ರಯತ್ನದಿಂದ ಕಡಿಮೆ ಫಲಿತಾಂಶವನ್ನು ಪಡೆಯುತ್ತೀರಿ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ವಿವಾದ ಉಂಟಾಗುತ್ತದೆ. ಕೈಗೊಂಡ ಕೆಲಸಗಳಲ್ಲಿ ರಸ್ತೆ ತಡೆ ಉಂಟಾಗುತ್ತದೆ. ಕುಟುಂಬ ಸದಸ್ಯರೊಂದಿಗೆ ದೇಗುಲಗಳಿಗೆ ಭೇಟಿ ನೀಡುತ್ತೀರಿ, 9980060275 ಅನಿರುದ್ಧ ಜೋಶಿ…
ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಆನೆ-ಮಾನವ ಸಂಘರ್ಷ ನಿಯಂತ್ರಿಸಲು ಮತ್ತು ಕಾಡಿನಂಚಿನ ರೈತರ ಬೆಳೆ ರಕ್ಷಿಸುವ ನಿಟ್ಟಿನಲ್ಲಿ ಆನೆ ಪಥ (ಕಾರಿಡಾರ್), ಆವಾಸಸ್ಥಾನ ರಕ್ಷಣೆಗೆ ಆಧುನಿಕ ತಂತ್ರಜ್ಞಾನ ಬಳಸಲು ತೀರ್ಮಾನಿಸಲಾಗಿದ್ದು, ಐಐಎಸ್.ಸಿ.ಯೊಂದಿಗೆ ಒಡಂಬಡಿಕೆಗೆ ಸಹಿ ಹಾಕಲಾಗಿದೆ ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಐ.ಐ.ಎಸ್.ಸಿ.ಯ ಪ್ರೊ. ರಮನ್ ಸುಕುಮಾರ್ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕ ಪಿ.ಸಿ. ರೇ ಸಹಿ ಹಾಕಿ ಒಡಂಬಡಿಕೆ ವಿನಿಮಯ ಮಾಡಿಕೊಂಡ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿ ಮಾತನಾಡಿದ ಅವರು, ಹಾಸನ, ಕೊಡಗು ಭಾಗದಲ್ಲಿ ಹೆಚ್ಚಾಗಿ ಆನೆ-ಮಾನವ ಸಂಘರ್ಷವಿದ್ದು, ಜೀವಹಾನಿ, ಬೆಳೆ ಹಾನಿ ಸಂಭವಿಸುತ್ತಿದೆ ಇದರ ನಿಯಂತ್ರಣಕ್ಕೆ ಎಲ್ಲ ಸಾಧ್ಯ ಕ್ರಮಗಳನ್ನು ಇಲಾಖೆ ಕೈಗೊಳ್ಳುತ್ತಿದೆ ಎಂದರು. ಪ್ರಸ್ತುತ ಮಾನವ-ಆನೆ ಸಂಘರ್ಷ ಇತರ ಪ್ರದೇಶಕ್ಕೂ ವಿಸ್ತರಿಸುತ್ತಿದ್ದು, ಪರಿಸರ ಸಂಶೋಧನೆ ಮತ್ತು ಕ್ಷೇತ್ರ ಅನುಷ್ಠಾನವನ್ನು ಸಮನ್ವಯಗೊಳಿಸುವ ಮೂಲಕ, ಆನೆಪಥ, ಆವಾಸಸ್ಥಾನಗಳ ಸಂರಕ್ಷಣೆಗೆ ಈ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಏಷ್ಯನ್ ಆನೆಗಳ ಭೂಪ್ರದೇಶ ನಿರ್ವಹಣೆ”ಗಾಗಿ ಐದು…
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಸಾರಿಗೆ ಇಲಾಖೆಯ ನೌಕರರು ಸರ್ಕಾರದ ವಿರುದ್ಧ ಸಿಡಿದೆದ್ದಿದ್ದು. ಆಗಸ್ಟ್ 5 ರಿಂದ ಮುಷ್ಕರಕ್ಕೆ ಕರೆ ಕೊಟ್ಟಿದ್ದು, ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿ ಪಾವತಿ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಗಸ್ಟ್ 5 ರಿಂದ ಸಾರಿಗೆ ನೌಕರರ ಮುಷ್ಕರಕ್ಕೆ ಕರೆ ನೀಡಲಾಗಿದೆ. ಬೇಡಿಕೆಗಳ ಈಡೇರಿಕೆ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಸಮಿತಿ ಪದಾಧಿಕಾರಿಗಳೊಂದಿಗೆ ಜುಲೈ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ್ದು, ನೌಕರರ ವೇತನ ಪರಿಷ್ಕರಣಿಯ 38 ತಿಂಗಳ ಹಿಂಬಾಕಿ ಪಾವತಿ ಸೇರಿ ಬೇಡಿಕೆಗಳ ಬಗ್ಗೆ ಮುಂದಿನ ಒಂದು ವಾರದೊಳಗೆ ಸಭೆ ನಡೆಸುವುದಾಗಿ ಭರವಸೆ ನೀಡಿದ್ದರು. ಇದಾಗಿ 12 ದಿನ ಕಳೆದರೂ ಸಭೆ ಕರೆದಿಲ್ಲ. ಹೀಗಾಗಿ ಮುಷ್ಕರಕ್ಕೆ…
ಬೆಂಗಳೂರು : ಬೆಂಗಳೂರಿನಲ್ಲಿ ರಾಕ್ಷಸಿ ಕೃತ್ಯವೊಂದು ನಡೆದಿದ್ದು, ರಸ್ತೆಯಲ್ಲಿ ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿ ಚಾಲಕ ವಿಕೃತಿ ಮೆರೆದಿದ್ದಾನೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಜುಲೈ 13 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಸ್ತೆ ಪಕ್ಕದಲ್ಲಿ ತನ್ನ ಪಾಡಿಗೆ ಮಲಗಿದ್ದ ನಾಯಿ ಮೇಲೆ ಕಾರು ಚಾಲಕ ಏಕಾಏಕಿ ಕಾರು ಹತ್ತಿಸಿ ಹೋಗಿದ್ದಾನೆ. ಗಂಭೀರವಾಗಿ ಗಾಯಗೊಂಡ ನಾಯಿ ನರಳಾಡಿದೆ. ಚಾಲಕನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. https://twitter.com/P00jaaaa/status/1944691632038883714?ref_src=twsrc%5Etfw%7Ctwcamp%5Etweetembed%7Ctwterm%5E1944691632038883714%7Ctwgr%5E0310dbca1aaac4fac062a0f3bcb32e2d3f5efc60%7Ctwcon%5Es1_c10&ref_url=https%3A%2F%2Fkannadadunia.com%2Fshocking-a-car-was-run-over-a-sleeping-dog-in-bengaluru%2F
ಶಿಕ್ಷಕಿ ಮತ್ತು ವಿದ್ಯಾರ್ಥಿನಿಯ ನಡುವಿನ ಪ್ರೀತಿ ಮತ್ತು ವಿವಾಹದ ಬಗ್ಗೆ ನಾವು ಬಹಳಷ್ಟು ಸುದ್ದಿಗಳನ್ನು ಕೇಳಿದ್ದೇವೆ. ಆದರೆ ಶಿಕ್ಷಕ ಹಾಗೂ ವಿದ್ಯಾರ್ಥಿನಿ ಸ್ಟಾಫ್ ರೂಮಿನಲ್ಲಿ ರೋಮ್ಯಾನ್ಸ್ ನಡೆಸಿರುವ ವಿಡಿಯೋವೊಂದು ವೈರಲ್ ಆಗಿದೆ. ಪ್ರಸ್ತುತ ವೈರಲ್ ಆಗುತ್ತಿರುವ ವೀಡಿಯೊದಲ್ಲಿ.. ಶಿಕ್ಷಕ ಮೊದಲು ಸ್ಟಾಫ್ ರೂಮಿಗೆ ಬಂದರು. ನಂತರ ವಿದ್ಯಾರ್ಥಿನಿ ಹಿಂಬಾಲಿಸಿದರು. ಮುತ್ತು ಮತ್ತು ಅಪ್ಪುಗೆಯನ್ನು ಕೇಳಿದಾಗ.. ಶಿಕ್ಷಕ ತಕ್ಷಣ ತಬ್ಬಿಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿದ ಕ್ಲಿಪಿಂಗ್ ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯಾಗುತ್ತಿದೆ. ತಪ್ಪಿತಸ್ಥರು ಶಿಕ್ಷಕರೇ? ವಿದ್ಯಾರ್ಥಿಯೇ? ಅಂದರೆ. ಅಪ್ರಾಪ್ತ ಬಾಲಕಿಗೆ ಇದನ್ನೆಲ್ಲಾ ಕಲಿಸುತ್ತಿರುವ ಶಿಕ್ಷಕರೇ ತಪ್ಪು ಎಂದು ನೆಟ್ಟಿಗರು ಕಿಡಿಕಾರಿದ್ದಾರೆ. https://twitter.com/ShoneeKapoor/status/1944643377938448502?ref_src=twsrc%5Etfw%7Ctwcamp%5Etweetembed%7Ctwterm%5E1944643377938448502%7Ctwgr%5E36ffc280bba5d3080ba7a5373e2ff08f54dbbedf%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fhindi%2Fkhabarindiatv-epaper-dh0578a8eab9504bc89b94918499d3e35c%2Fodishakolejmekhudkoaaglaganevalichatrakiaiimsmehuimautcmnekarravaikadiyabharosa-newsid-n672580883
ಇಂದಿನ ಕಾಲದಲ್ಲಿ ಹೆಚ್ಚುತ್ತಿರುವ ವಿದ್ಯುತ್ ಬಿಲ್ಗಳು ಪ್ರತಿ ಮನೆಯ ಬಜೆಟ್ ಅನ್ನು ಹಾಳು ಮಾಡುತ್ತಿವೆ. ನೀವು ಪ್ರತಿ ತಿಂಗಳು ಭಾರಿ ಬಿಲ್ ಪಾವತಿಸಲು ಆಯಾಸಗೊಂಡಿದ್ದರೆ, ಜಿಯೋದ 3 ಕಿಲೋವ್ಯಾಟ್ ಸೌರಶಕ್ತಿ ವ್ಯವಸ್ಥೆಯು ನಿಮಗೆ ಉತ್ತಮ ಆಯ್ಕೆಯಾಗಿದೆ. ವಿಶೇಷವೆಂದರೆ ಇದು 100% ಸಬ್ಸಿಡಿಯ ಪ್ರಯೋಜನವನ್ನು ಪಡೆಯುತ್ತಿದೆ, ಇದರಿಂದ ನೀವು ನಾಮಮಾತ್ರ ವೆಚ್ಚದಲ್ಲಿ ವಿದ್ಯುತ್ ಉತ್ಪಾದನೆಯನ್ನು ಪ್ರಾರಂಭಿಸಬಹುದು. ಪ್ರತಿ ತಿಂಗಳು ಎಷ್ಟು ಯೂನಿಟ್ ವಿದ್ಯುತ್ ಉತ್ಪಾದಿಸಲಾಗುತ್ತದೆ? 3 ಕಿಲೋವ್ಯಾಟ್ ಜಿಯೋ ಸೌರಶಕ್ತಿ ವ್ಯವಸ್ಥೆಯೊಂದಿಗೆ, ನೀವು ಪ್ರತಿ ತಿಂಗಳು ಸುಮಾರು 300 ರಿಂದ 450 ಯೂನಿಟ್ ವಿದ್ಯುತ್ ಉತ್ಪಾದಿಸಬಹುದು. ಅಂದರೆ, ನಿಮ್ಮ ಮನೆಯ ಫ್ಯಾನ್ಗಳು, ದೀಪಗಳು, ಟಿವಿ, ಫ್ರಿಡ್ಜ್ ಮತ್ತು 1.5 ಟನ್ ಎಸಿ ಸಹ ಆರಾಮವಾಗಿ ಕಾರ್ಯನಿರ್ವಹಿಸಬಹುದು. ಯಾವ ಉಪಕರಣಗಳು ಕಾರ್ಯನಿರ್ವಹಿಸುತ್ತವೆ? ಈ ಸೌರಶಕ್ತಿ ವ್ಯವಸ್ಥೆಯೊಂದಿಗೆ, ನೀವು ಸಬ್ಮರ್ಸಿಬಲ್ ಪಂಪ್ಗಳು, ಫ್ಯಾನ್ಗಳು, ಎಲ್ಇಡಿ ದೀಪಗಳು, ಟಿವಿ ಮತ್ತು ಇತರ ಸಣ್ಣ ಉಪಕರಣಗಳಂತಹ ನಿಮ್ಮ ಅಗತ್ಯ ಗೃಹೋಪಯೋಗಿ ಉಪಕರಣಗಳನ್ನು ಯಾವುದೇ ಸಮಸ್ಯೆಯಿಲ್ಲದೆ ಚಲಾಯಿಸಬಹುದು. ಈ ವ್ಯವಸ್ಥೆಯು…












