Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನ ದಿನಾಂಕ: 18-4-2023ರ ಅಧಿಕೃತ ಜ್ಞಾಪನ ಪತ್ರದಲ್ಲಿ ಸರ್ಕಾರಿ ಆಸ್ಪತ್ರೆ/ ಆರೋಗ್ಯ ಸಂಸ್ಥೆಗಳ ಜೊತೆಗೆ ಖಾಸಗಿ ಆಸ್ಪತ್ರೆ / ಆರೋಗ್ಯ ಸಂಸ್ಥೆಗಳನ್ನು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅಡಿಯಲ್ಲಿ ನೋಂದಾವಣಿ ಮಾಡಿಕೊಳ್ಳಲು ಅವಕಾಶ ನೀಡಿ ಮಾರ್ಗಸೂಚಿ (SOP) ಯನ್ನು ಬಿಡುಗಡೆಗೊಳಿಸಿ ಜಿಲ್ಲಾವಾರು ಸಂಯೋಜಕರನ್ನು ನೇಮಕಗೊಳಿಸಲಾಗಿದೆ. ಆದ್ದರಿಂದ ತಾವು ತಮ್ಮ ಜಿಲ್ಲಾ / ತಾಲ್ಲೂಕು ವ್ಯಾಪ್ತಿಯಲ್ಲಿ ಈಗಾಗಲೇ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಗುರುತಿಸಿರುವ ಖಾಸಗಿ ಆಸ್ಪತ್ರೆ /ಆರೋಗ್ಯ ಸಂಸ್ಥೆಗಳೂ ಸೇರಿದಂತೆ (ಆಸ್ಪತ್ರೆಗಳ ಪಟ್ಟಿ ಲಗತ್ತಿಸಿದೆ) ಇನ್ನಾವುದೇ ಆಸ್ಪತ್ರೆ/ ಆರೋಗ್ಯ ಸಂಸ್ಥೆಗಳಿದ್ದಲ್ಲಿ ಅಂತಹ ಆಸ್ಪತ್ರೆಗಳನ್ನು ಈ ಯೋಜನೆಯಡಿಯಲ್ಲಿ ನೋಂದಾಯಿಸಿಕೊಳ್ಳುವ ಸಂಬಂಧ ತಮ್ಮ ಜಿಲ್ಲಾ ಸಂಯೋಜಕರು (District Coordinators of SATS) ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳನ್ನು ಸಂಪರ್ಕಿಸಿ ದಿನಾಂಕ: 28-04-2028ರೊಳಗಾಗಿ ನೋಂದಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಸಂಬಂಧ ತುರ್ತು ಕ್ರಮವಹಿಸಲು ಸೂಚಿಸಿದೆ.
ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-02 ರ ವಿದ್ಯಾರ್ಥಿಗಳಿಗೆ ಪರೀಕ್ಷ-2ಗೆ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ಬಿಎಂಟಿಸಿಯ ಸಾಮಾನ್ಯ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಲಾಗಿದೆ. ಈ ಮೂಲಕ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಾಸಸ್ಥಳದಿಂದ ಶಾಲಾ/ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದೆ ಎಂದಿದೆ. ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪರೀಕ್ಷೆ -02 ಬೇರೆ ಬೇರೆ ಶಾಲಾ/ಕಾಲೇಜುಗಳಲ್ಲಿ ಇರುವುದರಿಂದ ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಕೆಳಕಂಡ ಸೌಲಭ್ಯಗಳನ್ನು ಕಲ್ಪಿಸಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-02 ರ ವಿದ್ಯಾರ್ಥಿಗಳಿಗೆ ದಿನಾಂಕ 26.05.2025 ರಿಂದ 02.06.2025 ರವರೆಗೆ ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗಲು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ…
ಬೆಂಗಳೂರು : ವಿದ್ಯಾವಿಕಾಸ ಯೋಜನೆಯಡಿ 2025-56ನೇ ಸಾಲಿಗೆ ಎಲ್ಲಾ ವಿಭಾಗದ ಜಿಲ್ಲೆಗಳ ಸರ್ಕಾರಿ ಶಾಲಾ ಮಕ್ಕಳಿಗೆ ಎರಡು ಜೊತೆ ಉಚಿತ ಸಮವಸ್ತ್ರ, ಬಟ್ಟೆ ಸರಬರಾಜು ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 2025-26ನೇ ಸಾಲಿಗೆ ವಿದ್ಯಾವಿಕಾಸ ಯೋಜನೆಯಡಿ ರಾಜ್ಯದಲ್ಲಿನ ಎಲ್ಲಾ ಜಿಲ್ಲೆಗಳ 1 ರಿಂದ 10ನೇ ತರಗತಿಯ ಸರ್ಕಾರಿ ಶಾಲಾ ಮಕ್ಕಳಿಗೆ ಉಲ್ಲೇಖ (1)ರಲ್ಲಿ ಸರ್ಕಾರದ ಆಡಳಿತಾತ್ಮಕ ಅನುಮೋದನೆ ಪಡೆದು, ಕೆಳಕಂಡ ಸಂಸ್ಥೆಗಳ ಮೂಲಕ ಎರಡು ಜೊತೆ ಉಚಿತ ಸಮವಸ್ತ್ರ, ಬಟ್ಟೆಗಳ ಸರಬರಾಜು ಕಾರ್ಯಕ್ರಮವನ್ನು ಕೈಗೊಳ್ಳಲಾಗಿರುತ್ತದೆ. ಸಂಸ್ಥೆ ಸರಬರಾಜು ಮಾಡುವ ಜಿಲ್ಲೆಗಳು ಬೆಂಗಳೂರು ವಿಭಾಗದ ಎಲ್ಲಾ 11 ಮತ್ತು ಮೈಸೂರು ವಿಭಾಗದ ಎಲ್ಲಾ 8 ಜಿಲ್ಲೆಗಳ 1 ರಿಂದ 7ನೇ ತರಗತಿಯ ಗಂಡು ಹಾಗೂ 1 ರಿಂದ 5ನೇ ತರಗತಿಯ ಹೆಣ್ಣು ಮಕ್ಕಳಿಗೆ ಒಂದು ಜೊತೆ ಕಲಬುರಗಿ ವಿಭಾಗದ ಎರಡು ಜಿಲ್ಲೆಗಳಾದ ಬಳ್ಳಾರಿ ಮತ್ತು ಯಾದಗಿರಿ ಜಿಲ್ಲೆಗಳ 1 ರಿಂದ 10ನೇ ತರಗತಿಯ ಎಲ್ಲಾ ಮಕ್ಕಳಿಗೆ ಎರಡು ಜೊತೆ.…
ಬೆಂಗಳೂರು: ರಾಜ್ಯದ ಶಾಲಾ ಮಕ್ಕಳಿಗೆ ಮಹತ್ವದ ಮಾಹಿತಿ ಎನ್ನುವಂತೆ 2025-26ನೇ ಸಾಲಿನ ಆರ್ ಟಿ ಇ ಅಡಿಯಲ್ಲಿ ದಾಖಲಾತಿಗೆ ಪರಿಷ್ಕೃತ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, 2025-26ನೇ ಸಾಲಿನ ಶಿಕ್ಷಣ ಹಕ್ಕು ಕಾಯಿದೆಯ ಸೆಕ್ಷನ್ 12(1)(ಬಿ) ಮತ್ತು 12(1)(ಸಿ) ಅಡಿ ಪ್ರವೇಶ ಪ್ರಕ್ರಿಯೆ ಸಂಬಂಧ ಉಲ್ಲೇಖ(10) ರನ್ವಯ ಮಾರ್ಗಸೂಚಿಗಳನ್ನೊಳಗೊಂಡಂತೆ ವೇಳಾಪಟ್ಟಿ ಸಹಿತ ಸುತ್ತೋಲೆ ಹೊರಡಿಸಲಾಗಿರುತ್ತದೆ ಎಂದಿದ್ದಾರೆ. ಸದರಿ ಸುತ್ತೋಲೆಯಲ್ಲಿ ಸರ್ಕಾರದ ಆದೇಶ ಸಂಖ್ಯೆ: ಇಪಿ 100 ಪಿಜಿಸಿ 2024 ದಿನಾಂಕ:26.06.2024 ರನ್ವಯ ಎಲ್.ಕೆ.ಜಿ ತರಗತಿಗೆ ಕನಿಷ್ಟ ವಯೋಮಿತಿ 04 ವರ್ಷ ಮತ್ತು ಗರಿಷ್ಟ ವಯೋಮಿತಿ 06 ವರ್ಷಗಳಾಗಿದ್ದು ಮತ್ತು 01ನೇ ತರಗತಿಗೆ ಕನಿಷ್ಟ 06 ವರ್ಷ ಮತ್ತು ಗರಿಷ್ಮ 08 ವರ್ಷವೆಂದು ಆದೇಶವಾಗಿರುವಂತೆ ಮಕ್ಕಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಲಾಗಿರುತ್ತದೆ. ಪುಸ್ತುತ ಉಲ್ಲೇಖ(11)ರ ಸರ್ಕಾರದ ಆದೇಶದಲ್ಲಿ ಶೈಕ್ಷಣಿಕ ವರ್ಷದ ಜೂನ್ 01ನೇ ತಾರೀಖಿಗೆ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು…
ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳನ್ನು ಡಿಜಿಟಲ್ ವ್ಯವಸ್ಥೆಯ ಮೂಲಕವೇ ಡಿಜಿಟಲ್ ಭೂ ದಾಖಲೆಗಳ ವಿತರಣೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದ್ದಾರೆ. ಕಂದಾಯ ದಾಖಲೆಗಳನ್ನು ಡಿಜಿಟಲ್ ವ್ಯವಸ್ಥೆಯ ಮೂಲಕವೇ ಜಾರಿಗೆ ತರುವ ಉದ್ದೇಶದಿಂದ ಪ್ರಾರಂಭಿಕ ಹಂತದಲ್ಲಿ ಪ್ರತಿ ದಿನ ಕನಿಷ್ಠ 10 ಅರ್ಜಿಗಳನ್ನು ಆನ್ಲೈನ್ ಮೂಲಕವೇ ಪಡೆದು, ಡಿಜಿಟಲ್ ಪ್ರತಿಗಳನ್ನು ತಂತ್ರಾಂಶದಲ್ಲಿಯೇ 2 ದಿನಗಳೊಳಗಾಗಿ ನೀಡಲು, ದಾಖಲೆಯು ಸ್ಕ್ಯಾನಿಂಗ್ ಆಗದೇ ಇದ್ದಲ್ಲಿ 7 ದಿನಗಳೊಳಗಾಗಿ ಸ್ಕ್ಯಾನಿಂಗ್ ಮಾಡಿ ಡಿಜಿಟಲ್ ಪ್ರತಿಯನ್ನೇ ಸಾರ್ವಜನಿಕರಿಗೆ ವಿತರಿಸಬೇಕು. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಈ ವ್ಯವಸ್ಥೆಯನ್ನು ಜಾರಿಗೆ ತರಲು ತಿಳಿಸಲಾಗಿದ್ದು ಜೂನ್ 2025 ರ ನಂತರ ಕಡ್ಡಾಯವಾಗಿ ಕಂದಾಯ ದಾಖಲೆಗಳನ್ನು ಡಿಜಿಟಲ್ ಭೂ ದಾಖಲೆಗಳ ವಿತರಣೆ ಮೂಲಕ ಸಾರ್ವಜನಿಕರಿಗೆ ಒದಗಿಸಲಾಗುವುದು. ಈ ಜಿಲ್ಲೆಯ ಎಲ್ಲಾ ಕಂದಾಯ ಕಚೇರಿಗಳ ಅಭಿಲೇಖಾಲಯಗಳಲ್ಲಿ ನೀಡುವ ದೃಢೀಕೃತ ನಕಲು ಪ್ರತಿಗಳನ್ನು ಕಡ್ಡಾಯವಾಗಿ ಕಂದಾಯ ದಾಖಲೆಗಳ ಗಣಕೀಕರಣ ತಂತ್ರಾಂಶದ ಮೂಲಕ ವಿತರಣೆ ಮಾಡಲಾಗುವುದು.
ನವದೆಹಲಿ : ಮಾಜಿ ಐಎಎಸ್ ಪ್ರೊಬೆಷನರ್ ಪೂಜಾ ಖೇಡ್ಕರ್ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ನೀಡಿದೆ. ಒಬಿಸಿ ಮತ್ತು ಅಂಗವಿಕಲ ಮೀಸಲಾತಿ ಸವಲತ್ತುಗಳನ್ನು ಬಳಸಿಕೊಂಡು ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಂಚನೆ ಮಾಡಿದ ಆರೋಪ ಎದುರಿಸುತ್ತಿರುವ ಮಾಜಿ ಐಎಎಸ್ ಪ್ರೊಬೆಷನರ್ ಪೂಜಾ ಖೇಡ್ಕರ್ ಅವರಿಗೆ ಸುಪ್ರೀಂ ಕೋರ್ಟ್ ಇಂದು ನಿರೀಕ್ಷಣಾ ಜಾಮೀನು ನೀಡಿದೆ.
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹುತಾತ್ಮ ದಿನದ ಅಂಗವಾಗಿ ಭಯೋತ್ಪಾದನಾ ವಿರೋಧಿ ದಿನದ ಪ್ರತಿಜ್ಞಾ ವಚನ ಬೋಧಿಸಿದ್ದಾರೆ. ಸಚಿವರಾದ ಕೆ.ಜೆ.ಜಾರ್ಜ್, ಬೈರತಿ ಸುರೇಶ್, ಈಶ್ವರ ಖಂಡ್ರೆ, ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ಡಾ|| ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರರಾದ ಎಸ್.ಪೊನ್ನಣ್ಣ, ಶಾಸಕರಾದ ಶಿವಲಿಂಗೇಗೌಡರು ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಸಚಿವಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ನವದೆಹಲಿ : ಭಾರತದ ಮೊದಲ ಬುಲೆಟ್ ರೈಲು ಯೋಜನೆಯ ಬಗ್ಗೆ ಒಂದು ದೊಡ್ಡ ನವೀಕರಣ ಬಂದಿದೆ. ಇದರ ಅಡಿಯಲ್ಲಿ, ಇಲ್ಲಿಯವರೆಗೆ 300 ಕಿಲೋಮೀಟರ್ ವಯಾಡಕ್ಟ್ (ಸೇತುವೆಯಂತಹ ಎತ್ತರದ ರಚನೆ) ನಿರ್ಮಾಣ ಪೂರ್ಣಗೊಂಡಿದೆ. 300 ಕಿ.ಮೀ ವಯಾಡಕ್ಟ್ನಲ್ಲಿ, 257.4 ಕಿ.ಮೀ.ಗಳನ್ನು ಫುಲ್ ಸ್ಪ್ಯಾನ್ ಲಾಂಚಿಂಗ್ ಮೆಥಡ್ (FSLM) ಬಳಸಿ ನಿರ್ಮಿಸಲಾಗಿದೆ ಮತ್ತು 37.8 ಕಿ.ಮೀ.ಗಳನ್ನು ಸ್ಪ್ಯಾನ್-ಬೈ-ಸ್ಪ್ಯಾನ್ (SBS) ವಿಧಾನವನ್ನು ಬಳಸಿ ನಿರ್ಮಿಸಲಾಗಿದೆ. ಇದಲ್ಲದೆ, ಈ ಮಾರ್ಗದಲ್ಲಿ 14 ನದಿ ಸೇತುವೆಗಳು, 7 ಉಕ್ಕಿನ ಸೇತುವೆಗಳು, 5 ಪಿಎಸ್ಸಿ ಸೇತುವೆಗಳು ಮತ್ತು 2.7 ಕಿ.ಮೀ ನಿಲ್ದಾಣ ಕಟ್ಟಡಗಳನ್ನು ಸಹ ನಿರ್ಮಿಸಲಾಗಿದೆ. ಯೋಜನೆಗೆ ಸಂಬಂಧಿಸಿದ ಮಾಹಿತಿ ಈ ಕೆಲಸಕ್ಕಾಗಿ ಒಟ್ಟು 6455 ಪೂರ್ಣ ಸ್ಪ್ಯಾನ್ಗಳು ಮತ್ತು 925 SBS ಸ್ಪ್ಯಾನ್ಗಳನ್ನು ಬಳಸಲಾಗಿದೆ. ಪ್ರತಿಯೊಂದು ಪೂರ್ಣ ಸ್ಪ್ಯಾನ್ ಬಾಕ್ಸ್ ಗರ್ಡರ್ ಸುಮಾರು 970 ಟನ್ ತೂಗುತ್ತದೆ. ಪೂರ್ಣ ಸ್ಪ್ಯಾನ್ ವಿಧಾನವನ್ನು ಬಳಸುವ ಕೆಲಸದ ವೇಗವು ಸಾಂಪ್ರದಾಯಿಕ ವಿಧಾನಗಳಿಗಿಂತ 10 ಪಟ್ಟು ಹೆಚ್ಚಾಗಿದೆ. ಈ ಯೋಜನೆಯಲ್ಲಿರುವ ಹೆಚ್ಚಿನ ಉಪಕರಣಗಳಾದ…
ಗದಗ : ರಾಜ್ಯದಲ್ಲಿ ಮತ್ತೊಬ್ಬಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗದಲ್ಲಿ ನಡೆದಿದೆ. ಗದಗ ನಗರದ ಅನ್ನದಾನೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿ ರಾಕೇಶ್ ನಾಗೇಶಪ್ಪ ಮಣ್ಣೋಡ್ಡರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಎಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಕೇಶ್ ನಾಗೇಶಪ್ಪ ಮಣ್ಣೋಡ್ಡರ ಕನ್ನಡದಲ್ಲಿ 60, ಇಂಗ್ಲೀಷ್ ನಲ್ಲಿ 48 ಅಂಕ ಪಡೆದುಕೊಂಡಿದ್ದು, ಉಳಿದ ಎಲ್ಲಾ ವಿಷಯದಲ್ಲಿ ಫೇಲ್ ಆಗಿದ್ದನು. ಹೀಗಾಗಿ ಬಾಲಕ ನರೇಗಲ್ ಬಸ್ ನಿಲ್ದಾಣದ ಆವರಣದಲ್ಲಿನ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು : ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನ ದಿನಾಂಕ: 18-4-2023ರ ಅಧಿಕೃತ ಜ್ಞಾಪನ ಪತ್ರದಲ್ಲಿ ಸರ್ಕಾರಿ ಆಸ್ಪತ್ರೆ/ ಆರೋಗ್ಯ ಸಂಸ್ಥೆಗಳ ಜೊತೆಗೆ ಖಾಸಗಿ ಆಸ್ಪತ್ರೆ / ಆರೋಗ್ಯ ಸಂಸ್ಥೆಗಳನ್ನು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅಡಿಯಲ್ಲಿ ನೋಂದಾವಣಿ ಮಾಡಿಕೊಳ್ಳಲು ಅವಕಾಶ ನೀಡಿ ಮಾರ್ಗಸೂಚಿ (SOP) ಯನ್ನು ಬಿಡುಗಡೆಗೊಳಿಸಿ ಜಿಲ್ಲಾವಾರು ಸಂಯೋಜಕರನ್ನು ನೇಮಕಗೊಳಿಸಲಾಗಿದೆ. ಆದ್ದರಿಂದ ತಾವು ತಮ್ಮ ಜಿಲ್ಲಾ / ತಾಲ್ಲೂಕು ವ್ಯಾಪ್ತಿಯಲ್ಲಿ ಈಗಾಗಲೇ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಗುರುತಿಸಿರುವ ಖಾಸಗಿ ಆಸ್ಪತ್ರೆ /ಆರೋಗ್ಯ ಸಂಸ್ಥೆಗಳೂ ಸೇರಿದಂತೆ (ಆಸ್ಪತ್ರೆಗಳ ಪಟ್ಟಿ ಲಗತ್ತಿಸಿದೆ) ಇನ್ನಾವುದೇ ಆಸ್ಪತ್ರೆ/ ಆರೋಗ್ಯ ಸಂಸ್ಥೆಗಳಿದ್ದಲ್ಲಿ ಅಂತಹ ಆಸ್ಪತ್ರೆಗಳನ್ನು ಈ ಯೋಜನೆಯಡಿಯಲ್ಲಿ ನೋಂದಾಯಿಸಿಕೊಳ್ಳುವ ಸಂಬಂಧ ತಮ್ಮ ಜಿಲ್ಲಾ ಸಂಯೋಜಕರು (District Coordinators of SATS) ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳನ್ನು ಸಂಪರ್ಕಿಸಿ ದಿನಾಂಕ: 28-04-2028ರೊಳಗಾಗಿ ನೋಂದಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಸಂಬಂಧ ತುರ್ತು ಕ್ರಮವಹಿಸಲು ಸೂಚಿಸಿದೆ.