Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ‘ಆಪರೇಷನ್ ಸಿಂಧೂರ್’ ಯಶಸ್ಸಿಗೆ ಗೌರವ ಸಲ್ಲಿಸಲು ಭಾರತೀಯ ರೈಲ್ವೆ, ರೈಲು ಟಿಕೆಟ್ಗಳ ಮೇಲೆ ಪ್ರಧಾನಿ ನರೇಂದ್ರ ಮೋದಿ ಸೆಲ್ಯೂಟ್ ಮಾಡುತ್ತಿರುವ ಚಿತ್ರವನ್ನು ಮುದ್ರಿಸಿದೆ. ಈ ಚಿತ್ರವು ವೀರ ಸೈನಿಕರ ಶೌರ್ಯ ಮತ್ತು ತ್ಯಾಗಕ್ಕೆ ಗೌರವ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ. ರೈಲ್ವೆ ಮಂಡಳಿಯ ಮಾಹಿತಿ ಮತ್ತು ಪ್ರಚಾರ ನಿರ್ದೇಶಕ ದಿಲೀಪ್ ಕುಮಾರ್, ‘ಗೌರವಾನ್ವಿತ ಪ್ರಧಾನ ಮಂತ್ರಿಗಳು ಆಪರೇಷನ್ ಸಿಂಧೂರ್ನ ವೀರರಿಗೆ ನಮನ ಸಲ್ಲಿಸಿದ್ದಾರೆ ಮತ್ತು ಅವರ ಶೌರ್ಯವನ್ನು ಗೌರವಿಸಿದ್ದಾರೆ. ಈ ಉದ್ದೇಶಕ್ಕಾಗಿ, ಅವರ ಚಿತ್ರ ಮತ್ತು ಸಂದೇಶವನ್ನು ರೈಲು ಟಿಕೆಟ್ಗಳ ಮೇಲೆ ಮುದ್ರಿಸಲಾಗಿದೆ. ರೈಲ್ವೆಯ ವಿವಿಧ ವಲಯಗಳು ಮತ್ತು ವಿಭಾಗಗಳು ಸಹ ಈ ಅಭಿಯಾನವನ್ನು ವ್ಯಾಪಕವಾಗಿ ಆಚರಿಸಿದವು. ಅನೇಕ ಪ್ರಮುಖ ರೈಲು ನಿಲ್ದಾಣಗಳನ್ನು ತ್ರಿವರ್ಣ ಧ್ವಜದಿಂದ ಅಲಂಕರಿಸಲಾಗಿತ್ತು ಮತ್ತು ಶಾಲಾ ಮಕ್ಕಳಿಗೆ ‘ಆಪರೇಷನ್ ಸಿಂಧೂರ್’ ಎಂಬ ವಿಷಯದ ಮೇಲೆ ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಜಮ್ಮು, ಪಠಾಣ್ಕೋಟ್, ನವದೆಹಲಿ ಮತ್ತು ಶ್ರೀನಗರದಂತಹ ನಿಲ್ದಾಣಗಳಲ್ಲಿನ ಬೆಂಚುಗಳು ಮತ್ತು ಇತರ ಸೌಲಭ್ಯಗಳನ್ನು ಸೇನಾ…
ವಿಜಯಪುರ : ರಾಜ್ಯಾದ್ಯಂತ ಮೇ.29 ರಿಂದ ಶಾಲೆಗಳು ಪುನಾರರಂಭವಾಗಲಿದ್ದು, ಪ್ರಾರಂಭೋತ್ಸವ ದಿನದಿಂದಲೇ ಪುಸ್ತಕ, ಸಮವಸ್ತ್ರ ಕೊಡಲು ಸಿದ್ಧತೆ ಕೈಗೊಳ್ಳಲಾಗಿದೆ. ಶೂ, ಸಾಕ್ಸ್ ಮೂರು ತಿಂಗಳ ನಂತರ ವಿತರಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮೇ 29ರಿಂದ ಶಾಲಾ ಪ್ರಾರಂಭೋತ್ಸವ ಅದ್ದೂರಿಯಾಗಿ ನಡೆಯಲಿದೆ. ವಿದ್ಯಾರ್ಥಿಗಳನ್ನು ಗೌರವದಿಂದ ಶಾಲೆಗೆ ಬರಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಶಾಲಾ ಆರಂಭೋತ್ಸವದ ದಿನದಂದೇ ಎಲ್ಲ ಮಕ್ಕಳಿಗೆ ಸಮ ವಸ್ತ್ರ, ಪಠ್ಯಪುಸ್ತಕ ವಿತರಿಸಲಾಗುತ್ತದೆ. ಶೂ, ಸಾಕ್ಸ್ ಹಂತಹಂತವಾಗಿ ಶಾಲೆಯಲ್ಲಿ ವಿತರಿಸಲಾಗುತ್ತಿದೆ. ಅದಕ್ಕೂ ಒಂದು ಕಠಿಣ ಕಾನೂನು ರೂಪಿಸಿ ಶಾಲಾ ಆರಂಭದಲ್ಲೇ ಮಕ್ಕಳಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು. ಈ ವರ್ಷ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ, ಪ್ರೌಢ, ಪಿಯುಸಿ ಹಂತದಲ್ಲಿ ಮಕ್ಕಳಿಗೆ ಮಾನವೀಯ ಮೌಲ್ಯವುಳ್ಳ ಶಿಕ್ಷಣ ನೀಡುವ ಉದ್ದೇಶದಿಂದ ನೀತಿ ವಿಜ್ಞಾನ ಬೋಧಿಸಲಾಗುವುದು. ರಾಜ್ಯದಲ್ಲಿ 46 ಸಾವಿರ ಶಾಲೆಗಳಿದ್ದು, ಕೆಲವೊಂದು ಶಾಲೆಗಳಿಗೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೂನ್ಯ ಫಲಿತಾಂಶ ಬಂದಿವೆ. ಅವುಗಳು ಮುಂದೆ ಬರದಂತೆ…
ನವದೆಹಲಿ : ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC) ಬಹುತೇಕ ಎಲ್ಲಾ ರೈಲ್ವೆ ಸೇವೆಗಳನ್ನು ಒಂದೇ ಡಿಜಿಟಲ್ ಛತ್ರಿಯಡಿಯಲ್ಲಿ ಸಂಯೋಜಿಸಲು ವಿನ್ಯಾಸಗೊಳಿಸಲಾದ ಸ್ವಾರೈಲ್ ಎಂಬ ಮೊಬೈಲ್ ಅಪ್ಲಿಕೇಶನ್ ಅನ್ನು ಪ್ರಾರಂಭಿಸಿದೆ. ರೈಲ್ವೆ ಮಾಹಿತಿ ವ್ಯವಸ್ಥೆಗಳ ಕೇಂದ್ರ (CRIS) ಅಭಿವೃದ್ಧಿಪಡಿಸಿದ ಸ್ವಾರೈಲ್, ಗೂಗಲ್ ಪ್ಲೇ ಸ್ಟೋರ್ ಮೂಲಕ ಆಂಡ್ರಾಯ್ಡ್ ಬಳಕೆದಾರರಲ್ಲಿ ಪರೀಕ್ಷೆಗೆ (ಆವೃತ್ತಿ v127) ಲಭ್ಯವಿದೆ. ಇದು ಪ್ರಸ್ತುತ ಆಪಲ್ ಆಪ್ ಸ್ಟೋರ್ನಲ್ಲಿ ಲಭ್ಯವಿಲ್ಲದಿದ್ದರೂ, ಅಪ್ಲಿಕೇಶನ್ನ ಆಗಮನವು ಭಾರತವು ತನ್ನ ರೈಲ್ವೆಗಳೊಂದಿಗೆ ಹೇಗೆ ಮಾತನಾಡುತ್ತದೆ ಎಂಬುದನ್ನು ಸರಳಗೊಳಿಸುವತ್ತ ಒಂದು ಪ್ರಮುಖ ಹೆಜ್ಜೆಯನ್ನು ಪ್ರತಿನಿಧಿಸುತ್ತದೆ. ಸ್ವಾರೈಲ್ ಅನ್ನು “ಸೂಪರ್ ಆಪ್” ಎಂದು ಪ್ರಚಾರ ಮಾಡಲಾಗುತ್ತಿದೆ – ಮತ್ತು ಸಮಯಕ್ಕಿಂತ ಮುಂಚೆಯೇ ಅಲ್ಲ. ಟಿಕೆಟ್ ಕಾಯ್ದಿರಿಸುವಿಕೆ ಮತ್ತು ರೈಲುಗಳ ಬಗ್ಗೆ ಮಾಹಿತಿಯಿಂದ ಹಿಡಿದು ಊಟ, ಪ್ರವಾಸೋದ್ಯಮ ಪ್ಯಾಕೇಜ್ಗಳು ಮತ್ತು ಲೈವ್ ಟ್ರ್ಯಾಕಿಂಗ್ವರೆಗೆ, ಅಪ್ಲಿಕೇಶನ್ ಇಡೀ ಪ್ರಯಾಣಿಕರ ಪರಿಸರ ವ್ಯವಸ್ಥೆಯನ್ನು ಒಂದೇ ಸಂಯೋಜಿತ ಇಂಟರ್ಫೇಸ್ನಲ್ಲಿ ಒಟ್ಟಿಗೆ ತರುತ್ತದೆ. ಇದು ಹಲವಾರು ಅಪ್ಲಿಕೇಶನ್ಗಳು ನೀಡುವ ವಿಘಟಿತ…
ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯಾದ್ಯಂತ ಮುಂದಿನ ಮೂರು ದಿನ ರಾಜ್ಯದ ಗಾಳಿ ಸಹಿತ ಭಾರೀ ಮಳೆಯಾಗಲಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದ ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಸನ, ಕೊಡಗು, ಹಾವೇರಿ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬುಧವಾರವೂ ಭಾರೀ ಮಳೆ ಮುಂದುವರಿಯುವ ಸಾಧ್ಯತೆಗಳಿದ್ದು, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಹಾಗೂ ಉಡುಪಿ, ದಕ್ಷಿಣ ಕನ್ನಡ, ಹಾವೇರಿ, ಧಾರವಾಡ, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿಸಲಾಗಿದೆ.
ಬೆಂಗಳೂರು: ರಾಜ್ಯ ಶಿಕ್ಷಣ ನೀತಿ (ಎಸ್ಇಪಿ) ವರದಿ ಸಿದ್ಧವಾಗಿದ್ದು 2025-26ನೇ ಶೈಕ್ಷಣಿಕ ಸಾಲಿನಿಂದ ಉನ್ನತ ಶಿಕ್ಷಣದಲ್ಲಿ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಶೀಘ್ರವೇ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ. ಎಸ್ಇಪಿ ಕರಡು ರಚನಾ ಸಮಿತಿ ನೀಡಿರುವ ಮಧ್ಯಂತರ ವರದಿ ಹಿನ್ನೆಲೆಯಲ್ಲಿ 2024-25ನೇ ಸಾಲಿನಿಂದಲೇ ಎನ್ಇಪಿ ಅಡಿ 4 ವರ್ಷಗಳಿಗೆ ಹೆಚ್ಚಿಸಲಾಗಿದ್ದ ಪದವಿ ವ್ಯಾಸಂಗದ ಅವಧಿಯನ್ನು ಮರಳಿ 3 ವರ್ಷಗಳಿಗೆ ಇಳಿಸಲಾಗಿದೆ. ಇದೀಗ ಇಂಗ್ಲೀಷ್ನಲ್ಲಿರುವ ಅಂತಿಮ ವರದಿಯನ್ನು ಕನ್ನಡಕ್ಕೆ ಭಾಷಾಂತರಿಸುವ ಪ್ರಕ್ರಿಯೆ ಬಹುತೇಕ ಅಂತಿಮ ಹಂತದಲ್ಲಿದ್ದು ಈ ತಿಂಗಳ ಕೊನೆಯ ವಾರದಲ್ಲಿ ರಾಜ್ಯ ಶಿಕ್ಷಣ ನೀತಿ ಆಯೋಗ ತನ್ನ ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವ ನಿರೀಕ್ಷೆಯಿದೆ. ಈ ಬಗ್ಗೆ ಮಾಹಿತಿ ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಅವರು, ರಾಜ್ಯ ಶಿಕ್ಷಣ ನೀತಿ ಸಿದ್ದವಾಗಿದ್ದು 2025-26ರನೇ ಸಾಲಿನಿಂದ ಜಾರಿಗೆ ಚಿಂತನೆ ನಡೆದಿ ದೆ. ಮೇ 25ರಂದು ನಡೆಯುವ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಬೆಂಗಳೂರು: ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶ ಈ ವಾರಾಂತ್ಯದೊಳಗೆ ಪ್ರಕಟವಾಗುವ ಸಾಧ್ಯತೆ ಇದೆ. ಏಪ್ರಿಲ್ 16ರಂದು ಭೌತವಿಜ್ಞಾನ, ರಸಾಯನ ವಿಜ್ಞಾನ, ಏಪ್ರಿಲ್ 17ರಂದು ಗಣಿತ ಮತ್ತು ಜೀವವಿಜ್ಞಾನ ವಿಷಯಗಳ ಪರೀಕ್ಷೆಗಳನ್ನು 775 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಗಡಿನಾಡು ಮತ್ತು ಹೊರನಾಡು ಕನ್ನಡಿಗ ಅಭ್ಯರ್ಥಿಗಳಿಗೆ 15 ರಂದು ಕನ್ನಡ ಭಾಷಾ ಪರೀಕ್ಷೆ ನಡೆಸಲಾಗಿತ್ತು. ಕೇರಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ಬರೆದಿದ್ದರು. ಕೇರಳ ಪದವಿ ಪೂರ್ವ ಶಿಕ್ಷಣ ಇಲಾಖೆ ಮೇ 21ರಂದು ಪಿಯು ಫಲಿತಾಂಶ ಪ್ರಕಟಿಸಲಿದ್ದು, ಫಲಿತಾಂಶ ಪ್ರಕಟವಾದ ಒಂದು ಅಥವಾ ಎರಡು ದಿನದಲ್ಲಿ ಸಿಇಟಿ ರ್ಯಾಂಕಿಂಗ್ ಬಿಡುಗಡೆ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕ್ರಮ ಕೈಗೊಂಡಿದೆ. ಸಿಬಿಎಸ್ಇ, ಐಸಿಎಸ್ಇ 12ನೇ ತರಗತಿ ಫಲಿತಾಂಶ ಮತ್ತು ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟವಾದ ಬಳಿಕ ಸಿಇಟಿ ಫಲಿತಾಂಶ ಪ್ರಕಟಿಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ಹೇಳಿದ್ದರು. ಅದರಂತೆ ಈಗಾಗಲೇ…
2024-25ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಹಾಗೂ ಮೆಟ್ರಿಕ್ ನಂತರದ ಕೋರ್ಸ್ಗಳಾದ ದ್ವಿತೀಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ತಾಂತ್ರಿಕ ಪದವಿ, ಕೃಷಿ, ಪಶು ಸಂಗೋಪನೆ ಹಾಗೂ ವೈದ್ಯಕೀಯ ವಿಭಾಗದ ಪರೀಕ್ಷೆಯಲ್ಲಿ ಪ್ರಥಮ ಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 2025-26ನೇ ಸಾಲಿನಲ್ಲಿ ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಪ್ರೋತ್ಸಾಹ ಧನ ಪಡೆಯಲು ಇಲಾಖೆಯ ವೆಬ್ಸೈಟ್ ವಿಳಾಸ https://swdservices.karnataka.gov.in/PrizeMoneyClientApp/ ರಲ್ಲಿ ಅರ್ಜಿ ಸಲ್ಲಿಸಿ ಆನ್ಲೈನ್ ಸ್ವೀಕೃತಿ ಪ್ರತಿ, ವಿದ್ಯಾರ್ಥಿಯ ಆಧಾರ್ ಕಾರ್ಡ್, ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಅಂಕಪಟ್ಟಿ, ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕ (ಕಡ್ಡಾಯವಾಗಿ ಆಧಾರ್ ಸೀಡಿಂಗ್ ಮತ್ತು ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡಿಸಿರತಕ್ಕದ್ದು) ಈ ದಾಖಲೆಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ, ವಿರಾಜಪೇಟೆ ತಾಲ್ಲೂಕು ಇಲ್ಲಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ https://swdservices.karnataka.gov.in/PrizeMoneyClientApp/ವೆಬ್ಸೈಟ್ ಹಾಗೂ ಸಹಾಯಕ ನಿರ್ದೇಶಕರು, (ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಪೆÇನ್ನಂಪೇಟೆ ದೂ.ಸಂ 9480843157 ಅಥವಾ ಕಚೇರಿಗೆ ನೇರ…
ಬೆಂಗಳೂರು: ರಾಜ್ಯದ ಅಂಗವೈಕಲ್ಯವುಳ್ಳ ಸರ್ಕಾರಿ ನೌಕರರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅಂಗವೈಕಲ್ಯ ಉಳ್ಳಂತ ಸರ್ಕಾರಿ ನೌಕರರಿಗೆ ಗ್ರೂಪ್-ಬಿ ಮತ್ತು ಗ್ರೂಪ್-ಎ (ಕಿರಿಯ ಶ್ರೇಣಿ) ವೃಂದಗಳಿಗೆ ಮುಂಬಡ್ತಿ ನೀಡುವಲ್ಲಿ ಶೇ.4ರಷ್ಟು ಮೀಸಲಾತಿ ನಿಗದಿ ಪಡಿಸಿ ಆದೇಶಿಸಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಿದ್ದು, ದಿನಾಂಕ:28.03.2023ರ ಸರ್ಕಾರಿ ಆದೇಶದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಮತ್ತು ಗ್ರೂಪ್-ಸಿ ವೃಂದಗಳಿಗೆ ಸೇರಿದ ಹುದ್ದೆಗಳಿಗೆ ನೀಡುವ ಮುಂಬಡ್ತಿಯಲ್ಲಿ ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಶೇಕಡ 4 ರಷ್ಟು ಮೀಸಲಾತಿ ಆಸ್ಪದವನ್ನು ಕಲ್ಪಿಸಲಾಗಿರುತ್ತದೆ. ದಿನಾಂಕ:28.11.2023ರ ಸರ್ಕಾರಿ ಆದೇಶದ ಅನುಬಂಧ-2ರಲ್ಲಿ ಎದ್ದು ಕಾಣುವ ಅಂಗವೈಕಲ್ಯವನ್ನುಳ್ಳ ನೌಕರರಿಗೆ ಗ್ರೂಪ್ ಡಿ ಯಿಂದ ಗ್ರೂಪ್-ಸಿ ಮತ್ತು ಗ್ರೂಪ್ ಸಿ ಯಿಂದ ಗ್ರೂಪ್-ಸಿ ಹುದ್ದೆಗಳಿಗೆ ಮುಂಬಡ್ತಿ ನೀಡುವ ಸಂದರ್ಭದಲ್ಲಿ ನಿಗದಿಪಡಿಸಿರುವ 100 ಬಿಂದುಗಳ ರೋಸ್ಮರಿನಲ್ಲಿ 5, 30, 55, 82ನೇ ಬಿಂದುಗಳನ್ನು ಗುರುತಿಸಲಾಗಿದೆ. ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಯಿಂದ ಗ್ರೂಪ್-ಸಿ ಮತ್ತು ಗ್ರೂಪ್-ಸಿ ಯಿಂದ ಗ್ರೂಪ್-ಸಿ ವೃಂದಗಳಿಗೆ ಸೇರಿದ ಹುದ್ದೆಗಳಿಗೆ…
ಬೆಂಗಳೂರು : ರಾಜ್ಯದ ಶಾಲೆಗಳಲ್ಲಿ ಭಾರತೀಯ ಭಾಷಾ ಬೇಸಿಗೆ ಶಿಬಿರ ಏರ್ಪಡಿಸುವ ಕುರಿತು ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲಿನ ವಿಷಯ ಮತ್ತು ಉಲ್ಲೇಖದನ್ವಯ ರಾಜ್ಯದ ಶಾಲೆಗಳಲ್ಲಿ ಭಾರತೀಯ ಭಾಷಾ ಬೇಸಿಗೆ ಶಿಬಿರವನ್ನು ಏರ್ವಡಿಸಬೇಕಿದ್ದು, ಈ ಸಂಬಂಧ ನಿಯಮಾನುಸಾರ ಅಗತ್ಯ ಕ್ರಿಯಾಯೋಜನೆಯನ್ನು ರೂಪಿಸಿಕೊಂಡು ಸದರಿ ಕಾರ್ಯಕ್ರಮವನ್ನು ಏರ್ಪಡಿಸುವ ಸಲುವಾಗಿ ಪ್ರತಿ ಟಯಟ್ ನಿಂದ ಒಬ್ಬರು ಜಿಲ್ಲಾ ನೋಡಲ್ ಅಧಿಕಾರಿಗಳನ್ನು ನೇಮಿಸುವುದು, ಪತ್ರಿ ಶಾಲೆಗಳಲ್ಲಿ ಒಬ್ಬರು ನೋಡಲ್ ಶಿಕ್ಷಕರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ನಡೆಸಲು ಅಗತ್ಯ ಕಮವಹಿಸುವುದು. ದಿನಾಂಕ 19-05-2025 ರಂದು ಸದರಿ ಕಾರ್ಯಕ್ರಮದ ಉದ್ಘಾಟನೆಯನ್ನು ರಾಷ್ಟ್ರಮಟ್ಟದಲ್ಲಿ Virtual Mode ನಲ್ಲಿ ನಡೆಸಲಿದ್ದು, ಸೂಕ್ತ ಸಿದ್ಧತೆಯನ್ನು ಮಾಡಿಕೊಂಡು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳು ಮತ್ತು ಡಯಟ್ ನೋಡಲ್ ಅಧಿಕಾರಿಗಳು online Regisrtation ಮಾಡಿಕೊಳ್ಳುವ ಮೂಲಕ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಹಾಗೂ ರಾಜ್ಯದಲ್ಲಿ ಸದರಿ ಕಾರ್ಯಕ್ರಮವನ್ನು ಯಶಸ್ಸಿಗೊಳಿಸಲು ಅಗತ್ಯ ಕ್ರಮವಹಿಸಲು ತಿಳಿಸಿದೆ. ಉಲ್ಲೇಖ-1ರ ಪತ್ರದಲ್ಲಿ ಸೂಚಿಸಿರುವಂತೆ 07…
ನವದೆಹಲಿ : ಭಾರತೀಯ ಸಂವಿಧಾನವು ಎಲ್ಲಾ ನಾಗರಿಕರಿಗೆ ತಮ್ಮ ಧರ್ಮವನ್ನು ಮುಕ್ತವಾಗಿ ಆಚರಿಸಲು ಮತ್ತು ಪ್ರಚಾರ ಮಾಡಲು ಸಂಪೂರ್ಣ ಹಕ್ಕನ್ನು ನೀಡುತ್ತದೆ, ಆದರೆ ಅದು ಬಲವಂತದ ಧಾರ್ಮಿಕ ಮತಾಂತರವನ್ನು ವಿರೋಧಿಸುತ್ತದೆ. ಈ ಹೇಳಿಕೆಯನ್ನು ಅಲಹಾಬಾದ್ ಹೈಕೋರ್ಟ್ನ ನ್ಯಾಯಮೂರ್ತಿ ವಿನೋದ್ ದಿವಾಕರ್ ನೀಡಿದ್ದಾರೆ. ಹಣ ಮತ್ತು ಉಚಿತ ಚಿಕಿತ್ಸೆಯ ಭರವಸೆ ನೀಡಿ ಜನರನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸಲು ಒತ್ತಾಯಿಸಿದ ಆರೋಪ ಹೊತ್ತಿರುವವರ ವಿರುದ್ಧದ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಅವರು ತಿರಸ್ಕರಿಸಿದರು. ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಲಯ, ವಿಷಯವು ಗಂಭೀರವಾಗಿದೆ ಮತ್ತು ಪೊಲೀಸರು ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದೆ. ವಾಸ್ತವವಾಗಿ, ಉತ್ತರ ಪ್ರದೇಶ ಅಕ್ರಮ ಧಾರ್ಮಿಕ ಮತಾಂತರ ನಿಷೇಧ ಕಾಯ್ದೆ 2021 ರ ಅಡಿಯಲ್ಲಿ 4 ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ‘ಬಲವಂತದ ಧಾರ್ಮಿಕ ಮತಾಂತರ ಸಂವಿಧಾನಕ್ಕೆ ವಿರುದ್ಧ’ ಪ್ರಕರಣದ ವಿಚಾರಣೆ ನಡೆಸುವಾಗ, ಭಾರತದ ಸಾಂವಿಧಾನಿಕ ರಚನೆಯು ವಿಧಿ 25 ರ ಅಡಿಯಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಖಾತರಿಪಡಿಸುತ್ತದೆ…