Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಇಂದೂ ಕೂಟ ಐಟಿ ಕಂಪನಿ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಂ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಮುಂದಿನ 2 ದಿನ ಭಾರಿ ಮಳೆ ಮುನ್ನೆಚ್ಚರಿಕೆ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಉದ್ಯೋಗಿಗಳ ಹಿತದೃಷ್ಟಿಯಿಂದ ಮನೆಯಿಂದಲೇ ಕೆಲಸ ನಿರ್ವಹಿಸಲು ಕೆಲವು ಕಂಪನಿಗಳು ಸೂಚಿಸಿದೆ. ಸಾಧ್ಯವಾದರೆ ಆಫೀಸಿಗೆ ಬರಬಹುದು, ಇಲ್ಲವಾದಲ್ಲಿ ವರ್ಕ್ ಫ್ರಮ್ ಹೋಂ ಮಾಡುವಂತೆ ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮಹಾಮಳೆಗೆ ಮೂವರು ಸಾವು ಬೆಂಗಳೂರಿನಲ್ಲಿ ನಿನ್ನೆ ಸುರಿದ ಮಹಾಮಳೆಗೆ ಮೂವರು ಬಲಿಯಾಗಿದ್ದಾರೆ. ವೈಟ್ ಫೀಲ್ಡ್ ನಲ್ಲಿ ಮನೆಯ ಗೋಡೆ ಕುಸಿದು ಖಾಸಗಿ ಕಂಪನಿಯ ಮಹಿಳಾ ಉದ್ಯೋಗಿ ಶಶಿಕಲಾ ಸಾವನ್ನಪ್ಪಿದ್ದಾರೆ. ಮೋಟಾರ್ ನಿಂದ ಮಳೆ ನೀರು ತೆರವು ಮಾಡಲು ಹೋಗಿ ಕರೆಂಟ್ ಶಾಕ್ ನಿಂದ 12ರ ಬಾಲಕ ಸೇರಿದಂತೆ ಇಬ್ಬರು ಬಲಿಯಾಗಿದ್ದಾರೆ. ಬೆಂಗಳೂರಿನ ಬಿಟಿಎಂ ಲೇಔಟ್ ನಲ್ಲಿ ಮಹಾಮಳೆಗೆ ಇಬ್ಬರು ಬಲಿಯಾಗಿದ್ದಾರೆ. ಅಪಾರ್ಟ್ ಮೆಂಟ್ ನ ಬೇಸ್ಮೆಂಟ್ ನಲ್ಲಿ ಮೋಟಾರ್ ನಿಂದ ಮಳೆಯ ನೀರು ಹೊರ ಹಾಕಲು…
ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟಕ್ಕೆ ಬೆಂಗಳೂರಿನಲ್ಲಿ ಮೂವರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 5 ಮಂದಿ ಬಲಿಯಾಗಿದ್ದಾರೆ. ಬೆಂಗಳೂರು, ಚಿಕ್ಕಬಳ್ಳಾಪುರ, ಕಲಬುರಗಿ ಸೇರಿ ರಾಜ್ಯದ15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಐವರು ಮೃತಪಟ್ಟಿದ್ದಾರೆ. ಭಾನುವಾರ ರಾತ್ರಿಯಿಂದ ಸೋಮವಾರ ಮುಂಜಾನೆವರೆಗೆ ಸುರಿದ ಭಾರೀ ಮಳೆಗೆ ಬೆಂಗಳೂರು ತತ್ತರಿಸಿ ಹೋಗಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಬೆಂಗಳೂರಿನ ಕೆಂಗೇರಿ ಭಾಗದಲ್ಲಿ ದಾಖಲೆಯ 132 ಮಿ.ಮೀ. ಮಳೆ ಸುರಿದಿದ್ದು, ನಗರವ್ಯಾಪ್ತಿಯ 50ಕ್ಕೂ ಹೆಚ್ಚಿನ ಬಡಾವಣೆಗಳು ಜಲಾವೃತಗೊಂಡು ಜನರು ಪರದಾಡುವಂತಾಗಿದೆ. ಬೆಂಗಳೂರಿನಲ್ಲಿ ಮಹಾಮಳೆಗೆ ಮೂವರು ಸಾವು ಬೆಂಗಳೂರಿನಲ್ಲಿ ನಿನ್ನೆ ಸುರಿದ ಮಹಾಮಳೆಗೆ ಮೂವರು ಬಲಿಯಾಗಿದ್ದಾರೆ. ವೈಟ್ ಫೀಲ್ಡ್ ನಲ್ಲಿ ಮನೆಯ ಗೋಡೆ ಕುಸಿದು ಖಾಸಗಿ ಕಂಪನಿಯ ಮಹಿಳಾ ಉದ್ಯೋಗಿ ಶಶಿಕಲಾ ಸಾವನ್ನಪ್ಪಿದ್ದಾರೆ. ಮೋಟಾರ್ ನಿಂದ ಮಳೆ ನೀರು ತೆರವು ಮಾಡಲು ಹೋಗಿ ಕರೆಂಟ್ ಶಾಕ್ ನಿಂದ 12ರ ಬಾಲಕ ಸೇರಿದಂತೆ ಇಬ್ಬರು ಬಲಿಯಾಗಿದ್ದಾರೆ. ಬೆಂಗಳೂರಿನ ಬಿಟಿಎಂ ಲೇಔಟ್ ನಲ್ಲಿ ಮಹಾಮಳೆಗೆ ಇಬ್ಬರು ಬಲಿಯಾಗಿದ್ದಾರೆ. ಅಪಾರ್ಟ್ ಮೆಂಟ್ ನ…
ನವದೆಹಲಿ : ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC) ಬಹುತೇಕ ಎಲ್ಲಾ ರೈಲ್ವೆ ಸೇವೆಗಳನ್ನು ಒಂದೇ ಡಿಜಿಟಲ್ ಛತ್ರಿಯಡಿಯಲ್ಲಿ ಸಂಯೋಜಿಸಲು ವಿನ್ಯಾಸಗೊಳಿಸಲಾದ ಸ್ವಾರೈಲ್ ಎಂಬ ಮೊಬೈಲ್ ಅಪ್ಲಿಕೇಶನ್ ಅನ್ನು ಪ್ರಾರಂಭಿಸಿದೆ. ರೈಲ್ವೆ ಮಾಹಿತಿ ವ್ಯವಸ್ಥೆಗಳ ಕೇಂದ್ರ (CRIS) ಅಭಿವೃದ್ಧಿಪಡಿಸಿದ ಸ್ವಾರೈಲ್, ಗೂಗಲ್ ಪ್ಲೇ ಸ್ಟೋರ್ ಮೂಲಕ ಆಂಡ್ರಾಯ್ಡ್ ಬಳಕೆದಾರರಲ್ಲಿ ಪರೀಕ್ಷೆಗೆ (ಆವೃತ್ತಿ v127) ಲಭ್ಯವಿದೆ. ಇದು ಪ್ರಸ್ತುತ ಆಪಲ್ ಆಪ್ ಸ್ಟೋರ್ನಲ್ಲಿ ಲಭ್ಯವಿಲ್ಲದಿದ್ದರೂ, ಅಪ್ಲಿಕೇಶನ್ನ ಆಗಮನವು ಭಾರತವು ತನ್ನ ರೈಲ್ವೆಗಳೊಂದಿಗೆ ಹೇಗೆ ಮಾತನಾಡುತ್ತದೆ ಎಂಬುದನ್ನು ಸರಳಗೊಳಿಸುವತ್ತ ಒಂದು ಪ್ರಮುಖ ಹೆಜ್ಜೆಯನ್ನು ಪ್ರತಿನಿಧಿಸುತ್ತದೆ. ಸ್ವಾರೈಲ್ ಅನ್ನು “ಸೂಪರ್ ಆಪ್” ಎಂದು ಪ್ರಚಾರ ಮಾಡಲಾಗುತ್ತಿದೆ – ಮತ್ತು ಸಮಯಕ್ಕಿಂತ ಮುಂಚೆಯೇ ಅಲ್ಲ. ಟಿಕೆಟ್ ಕಾಯ್ದಿರಿಸುವಿಕೆ ಮತ್ತು ರೈಲುಗಳ ಬಗ್ಗೆ ಮಾಹಿತಿಯಿಂದ ಹಿಡಿದು ಊಟ, ಪ್ರವಾಸೋದ್ಯಮ ಪ್ಯಾಕೇಜ್ಗಳು ಮತ್ತು ಲೈವ್ ಟ್ರ್ಯಾಕಿಂಗ್ವರೆಗೆ, ಅಪ್ಲಿಕೇಶನ್ ಇಡೀ ಪ್ರಯಾಣಿಕರ ಪರಿಸರ ವ್ಯವಸ್ಥೆಯನ್ನು ಒಂದೇ ಸಂಯೋಜಿತ ಇಂಟರ್ಫೇಸ್ನಲ್ಲಿ ಒಟ್ಟಿಗೆ ತರುತ್ತದೆ. ಇದು ಹಲವಾರು ಅಪ್ಲಿಕೇಶನ್ಗಳು ನೀಡುವ ವಿಘಟಿತ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9 ಮತ್ತು 11-ಎ ವಿತರಿಸಿದ ಒಂದು ವರ್ಷದಲ್ಲಿ ಗರಿಷ್ಠ ನಾಲ್ಕು ಕಂತುಗಳಲ್ಲಿ ಗ್ರಾಮ ಪಂಚಾಯ್ತಿ ಸಂಗ್ರಹಿಸಲು ಅವಕಾಶ ನೀಡಿ ಸರ್ಕಾರ ಆದೇಶಿಸಿದೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964 ರ ಪುಕರಣ 94-(ಸಿ), 94-(ಸಿಸಿ), 94-(ಡಿ) ರಡಿಯಲ್ಲಿ ನಿವೇಶನ ಮತ್ತು ಮನೆ ನೀಡುವ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9 ಮತ್ತು 11-ಎ ನೀಡಲು ಕೈಗೊಳ್ಳಬೇಕಾದ ಪುಕ್ರಿಯೆಗಳ ಬಗ್ಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿರುತ್ತದೆ ಎಂದಿದ್ದಾರೆ. ಕರ್ನಾಟಕ ಭೂ ಕಂದಾಯ ಅಧಿನಿಯಮ, 1964 ರ ಪುಕರಣ 94-(ಡಿ) ರಡಿಯಲ್ಲಿ ಕಂದಾಯ ಇಲಾಖೆಯಿಂದ ವಿತರಣೆ ಮಾಡಲಾದ ಹಕ್ಕುಪತ್ರಗಳಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ಉಂಟಾದ ಗೊಂದಲಗಳಿಗೆ ಸಂಬಂಧಿಸಿದಂತೆ…
ಬಳ್ಳಾರಿ : ರಾಜ್ಯ ಸರ್ಕಾರವು 2 ವ಼ರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಮರ್ಪಣಾ ಸಂಕಲ್ಪ ಸಮಾವೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, 4 ಲಕ್ಷಕ್ಕೂ ಹೆಚ್ಚಿನ ಜನರು ಭಾಗವಹಿಸುವ ನಿರೀಕ್ಷೆಯಿದೆ. ಕಾರ್ಯಕ್ರಮ ಆಯೋಜನೆ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, 2023 ರ ಮೇ 20 ರಂದು ರಾಜ್ಯ ಸರ್ಕಾರವು ಅಸ್ತಿತ್ವಕ್ಕೆ ಬಂದು ಈಗ ಎರಡು ವರ್ಷ ಪೂರೈಸುತ್ತಿದೆ. ಅಂದೇ ಕ್ಯಾಬಿನೆಟ್ ಸಭೆಯಲ್ಲಿ ಪಂಚ ಗ್ಯಾರಂಟಿ ಜಾರಿಗೆ ಕುರಿತಂತೆ ಚರ್ಚಿಸಲಾಗಿತ್ತು. ಪ್ರಥಮವಾಗಿ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷಿಮತ್ತು ಯುವನಿಧಿ ಸೇರಿದಂತೆ ಹಂತ-ಹAತವಾಗಿ ಜಾರಿಗೆ ತಂದು ನುಡಿದಂತೆ ನಡೆದಿದ್ದೇವೆ ಎಂದು ಅವರು ಹೇಳಿದರು. ಕಳೆದ ವಿಧಾನಸಭೆ ಚುನಾವಣೆ ಮತ್ತು ಉಪಚುನಾವಣೆಯಲ್ಲಿ ಬಹುಮತದಿಂದ ಆರಿಸಿ ಗೆಲ್ಲಿಸಿದಂತಹ ಪ್ರಜಾಪ್ರಭುತ್ವದ ಮತದಾರರಿಗೆ ನಮ್ಮ ಸರ್ಕಾರವು ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ, ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ ಎಂದರು. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂದು ಹಲವರು ಟೀಕಿಸುತ್ತಿದ್ದಾರೆ. ಈಗಾಗಲೇ ಗ್ಯಾರಂಟಿ…
ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟ ಜೋರಾಗಿದ್ದು, ಮುಂದಿನ ಮೂರು ದಿನ ರಾಜ್ಯದ ಗಾಳಿ ಸಹಿತ ಭಾರೀ ಮಳೆಯಾಗಲಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದ ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಸನ, ಕೊಡಗು, ಹಾವೇರಿ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬುಧವಾರವೂ ಭಾರೀ ಮಳೆ ಮುಂದುವರಿಯುವ ಸಾಧ್ಯತೆಗಳಿದ್ದು, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಹಾಗೂ ಉಡುಪಿ, ದಕ್ಷಿಣ ಕನ್ನಡ, ಹಾವೇರಿ, ಧಾರವಾಡ, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿಸಲಾಗಿದೆ.
ನವದೆಹಲಿ: ಒಂದೆಡೆ, ಸ್ಮಾರ್ಟ್ಫೋನ್ ಸಾಕಷ್ಟು ಅನುಕೂಲಗಳನ್ನು ಹೊಂದಿದ್ದರೆ, ಅದು ಕೆಲವು ಅನಾನುಕೂಲತೆಗಳನ್ನು ಸಹ ಹೊಂದಿದೆ. ಮೊಬೈಲ್ ನಿಂದ ಹೊರಸೂಸುವ ವಿಕಿರಣವು ಮಾರಣಾಂತಿಕ ಎಂದು ಹೇಳಲಾಗುತ್ತದೆ. ಮೊಬೈಲ್ ಟವರ್ ನ ವಿಕಿರಣವು ಆರೋಗ್ಯಕ್ಕೆ ವಿಷಕ್ಕಿಂತ ಕಡಿಮೆಯಿಲ್ಲ. ಮೊಬೈಲ್ ವಿಕಿರಣವು ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ವಿವರಿಸಿ. ಮೊಬೈಲ್ ವಿಕಿರಣ ಎಷ್ಟು ಇರಬೇಕು ಮತ್ತು ಅದು ನಮ್ಮ ಆರೋಗ್ಯಕ್ಕೆ ಎಷ್ಟು ಎಂದು ತಿಳಿಯಿರಿ. ಅದನ್ನು ಹೇಗೆ ತಪ್ಪಿಸಬಹುದು ಎಂಬುದನ್ನು ಸಹ ತಿಳಿಯಿರಿ. ಮೊಬೈಲ್ ಟವರ್ ವಿಕಿರಣ ಎಂದರೇನು? ಯಾವುದೇ ಸಾಧನಕ್ಕೆ ಪರಸ್ಪರ ಸಂಪರ್ಕಿಸಲು ನೆಟ್ವರ್ಕ್ ಅಗತ್ಯವಿದೆ. ಮೊಬೈಲ್ ಫೋನ್ ಗಳ ವಿಷಯದಲ್ಲೂ ಇದೇ ಆಗಿದೆ. ಮೊಬೈಲ್ ಫೋನ್ ಗಳ ನೆಟ್ ವರ್ಕ್ ಗಾಗಿ, ಟೆಲಿಕಾಂ ಕಂಪನಿಗಳು ಅಗತ್ಯಕ್ಕೆ ಅನುಗುಣವಾಗಿ ವಿವಿಧ ಪ್ರದೇಶಗಳಲ್ಲಿ ಟವರ್ ಗಳನ್ನು ಸ್ಥಾಪಿಸುತ್ತವೆ. ನೆಟ್ವರ್ಕ್ನ ಸಂದರ್ಭದಲ್ಲಿ, ಎರಡು ರೀತಿಯ ವಿಕಿರಣಗಳಿವೆ. ಮೊದಲನೆಯದು ಗೋಪುರದಿಂದ ಹೊರಹೊಮ್ಮುವ ವಿಕಿರಣ ಮತ್ತು ಎರಡನೆಯದು ಮೊಬೈಲ್ ನ ವಿಕಿರಣ. ಗೋಪುರದ…
ಇಂದಿನ ಕಾಲದಲ್ಲಿ ಸ್ಮಾರ್ಟ್ಫೋನ್ ನಮ್ಮ ಅಗತ್ಯವಾಗಿದೆ. ವಿದ್ಯುತ್ ಬಿಲ್ ಪಾವತಿಸುವುದಾಗಲಿ, ಶಾಲಾ ಶುಲ್ಕ ಪಾವತಿಸುವುದಾಗಲಿ ಅಥವಾ ಷೇರುಗಳು ಮತ್ತು ಮ್ಯೂಚುವಲ್ ಫಂಡ್ಗಳಲ್ಲಿ ಹೂಡಿಕೆ ಮಾಡುವುದಾಗಲಿ, ನೀವು ಸ್ಮಾರ್ಟ್ಫೋನ್ ಸಹಾಯದಿಂದ ಹಲವು ಪ್ರಮುಖ ಕೆಲಸಗಳನ್ನು ಮಾಡಬಹುದು. ಇದಲ್ಲದೆ, ನೀವು ಸ್ಮಾರ್ಟ್ಫೋನ್ ಸಹಾಯದಿಂದ ಅನೇಕ ಬ್ಯಾಂಕಿಂಗ್ ಸಂಬಂಧಿತ ಸೇವೆಗಳ ಪ್ರಯೋಜನಗಳನ್ನು ಸಹ ಪಡೆಯಬಹುದು. ಈ ನಡುವೆ ನಿಮ್ಮ ಮೊಬೈಲ್ ಕಳ್ಳತನವಾದ್ರೆ ಅಥವಾ ಕಳೆದುಕೊಂಡರೆ ಪತ್ತೆಹಚ್ಚಲು ಅವನು ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಆದರೆ ಅದರ ನಂತರವೂ ಕದ್ದ ಅಥವಾ ಕಳೆದುಹೋದ ಮೊಬೈಲ್ ಫೋನ್ ಪತ್ತೆಯಾಗುವುದಿಲ್ಲ. ನಿಮ್ಮ ಸ್ಮಾರ್ಟ್ಫೋನ್ ಎಲ್ಲೋ ಕಳೆದುಹೋಗಿದ್ದರೆ ಅಥವಾ ಕಳುವಾಗಿದ್ದರೆ, ಇಂದು ನಾವು ನಿಮಗೆ ಸರ್ಕಾರದ ಒಂದು ವಿಶೇಷ ಪೋರ್ಟಲ್ ಬಗ್ಗೆ ಹೇಳಲಿದ್ದೇವೆ, ಅದರ ಸಹಾಯದಿಂದ ನೀವು ಕದ್ದ ಸ್ಮಾರ್ಟ್ಫೋನ್ ಬಗ್ಗೆ ತಿಳಿದುಕೊಳ್ಳಬಹುದು. ನಿಮ್ಮ ಸ್ಮಾರ್ಟ್ಫೋನ್ ಕದ್ದಿದ್ದರೆ, ಮೊದಲು ನೀವು ಹತ್ತಿರದ ಪೊಲೀಸ್ ಠಾಣೆಗೆ ಭೇಟಿ ನೀಡಬೇಕು. ಅಲ್ಲಿಗೆ ಹೋಗುವ ಮೂಲಕ ನೀವು ಕದ್ದ ಸ್ಮಾರ್ಟ್ಫೋನ್ಗಾಗಿ ಎಫ್ಐಆರ್ ದಾಖಲಿಸಬೇಕು. ಇದಲ್ಲದೆ, ನೀವು ನಿಮ್ಮ…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಬೈಕ್ ನಲ್ಲಿದ್ದ ಸಬ್ ಇನ್ಸ್ ಪೆಕ್ಟರ್ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು-ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರ ಪೊಲೀಸ್ ಠಾಣೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ ಬಸ್ ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದು ರಸ್ತೆ ಬದಿ ಪಲ್ಟಿಯಾಗಿದ್ದು, ಬಸ್ ಡಿಕ್ಕಿಯಾದ ಹಿನ್ನೆಲೆಯಲ್ಲಿ ಬೈಕ್ ನಲ್ಲಿದ್ದ ಸಬ್ ಇನ್ಸ್ ಪೆಕ್ಟರ್ ನಾಗರಾಜು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಗ್ಗಲೀಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನವದೆಹಲಿ : ಪಾಕ್ ಪರ ಬೇಹುಗಾರಿಕೆ ನಡೆಸಿದ್ದ ಜ್ಯೋತಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜ್ಯೋತಿ ಮಲ್ಹೋತ್ರಾ ಇನ್ ಸ್ಟಾಗ್ರಾಂ ಖಾತೆಗೆ ನಿರ್ಬಂಧ ವಿಧಿಸಲಾಗಿದೆ. ಪಾಕಿಸ್ತಾನಕ್ಕೆ ಸೂಕ್ಷ್ಮ ಮಾಹಿತಿಯನ್ನು ರವಾನಿಸಿದ ಆರೋಪದ ಮೇಲೆ ಬಂಧಿಸಲ್ಪಟ್ಟ ನಂತರ ಹರಿಯಾಣ ಮೂಲದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸುದ್ದಿಯಲ್ಲಿದ್ದಾರೆ. ಈ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಆರು ಜನರಲ್ಲಿ ಅವರು ಕೂಡ ಒಬ್ಬರು. ಈ ಪ್ರಕರಣದ ಹೊಸ ಬೆಳವಣಿಗೆಯಲ್ಲಿ, ಜ್ಯೋತಿ ಅವರ ಇನ್ಸ್ಟಾಗ್ರಾಮ್ ಯನ್ನು ನಿರ್ಬಂಧಿಸಲಾಗಿದೆ. ಆಕೆಯ ಮೇಲೆ ಭಾರತೀಯ ನ್ಯಾಯ ಸಂಹಿತಾ (BNS) ನ ಸೆಕ್ಷನ್ 152 ಮತ್ತು 1923 ರ ಅಧಿಕೃತ ರಹಸ್ಯ ಕಾಯ್ದೆಯ ಸೆಕ್ಷನ್ 3, 4 ಮತ್ತು 5 ರ ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ನವದೆಹಲಿಯ ಪಾಕಿಸ್ತಾನ ಹೈಕಮಿಷನ್ನ ಸಿಬ್ಬಂದಿ ಸದಸ್ಯ ಎಹ್ಸಾನ್-ಉರ್-ರಹೀಮ್ ಅಲಿಯಾಸ್ ಡ್ಯಾನಿಶ್ ಜೊತೆ ಆಕೆ ನಿಕಟ ಸಂಬಂಧ ಬೆಳೆಸಿಕೊಂಡಿದ್ದಳು ಎಂದು ವರದಿಯಾಗಿದೆ. ಡ್ಯಾನಿಶ್ ಯೂಟ್ಯೂಬರ್ ಅನ್ನು ಹಲವಾರು ಪಾಕಿಸ್ತಾನಿ ಗುಪ್ತಚರ ಕಾರ್ಯನಿರ್ವಾಹಕರಿಗೆ (PIOs) ಪರಿಚಯಿಸಿದ್ದಾಳೆ ಎಂದು ಆರೋಪಿಸಲಾಗಿದೆ. ಜ್ಞಾನವಿಲ್ಲದವರಿಗೆ,…