Subscribe to Updates
Get the latest creative news from FooBar about art, design and business.
Author: kannadanewsnow57
ಈ ಯಂತ್ರವನ್ನು ಗುರುವಾರ ಅಥವಾ ರವಿವಾರ, ಹುಣ್ಣಿಮೆ ಅಥವಾ ಅಮಾವಾಸ್ಯ ದಿನ ರಾತ್ರಿ 9 ರಿಂದ 10 ಸಮಯದಲ್ಲಿ ಸ್ನಾನ ಪೂಜಾದಿಗಳನ್ನು ಮಾಡಿಕೊಂಡು ಸಿದ್ಧಾಸನದ ಮೇಲೆ ಕುಳಿತು, ಗಣಪತಿ ಶಾಂತಿ ಮಂತ್ರ ಪಟನೆ ಮಾಡಿ ಯಂತ್ರ ಮಂತ್ರ ಸಾಧನೆಯನ್ನು 9 ತ್ರಾಮದ ತಗಡಿನ ಮೇಲೆ ವಿಧಾನೋಕ್ತವಾಗಿ ಬರೆದು ”ಓಂ ಆಲಯ ಮಹಾ ಆಲಯ ಓಂ ಸರ್ವ ಗ್ರಹ ದೋಷ ನಿವರಣಾಯ ಸಮಸ್ತ ಶಾಪ ವಿಮೋಚನಾಯ, ಸರ್ವಭೂತ-ಪ್ರೇತ ಪಿಶಾಚ ಉಚ್ಚಾಟನಾಯ, ಸರ್ವ ಇಷ್ಟ ಸಿದ್ದಿಕರಾಯ, ಓಂ ನಮಃ ಶಿವಾಯ ಸ್ವಾಹಾಃ’ ಈ ಮಂತ್ರದಿಂದ 9 ಯಂತ್ರಗಳಿಗೂ ೧೦೮ ಸಲ ಅಭಿಮಂತ್ರಿಸಿ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ…
ಚಿಕ್ಕಬಳ್ಳಾಪುರ: ಜಾತಿ ಸಮೀಕ್ಷೆಯಲ್ಲಿ ತೊಂದರೆಗಳಾಗಿದ್ದರೆ ಆನ್ ಲೈನ್ ಮೂಲಕ ದಾಖಲು ಮಾಡಲು ತೊಂದರೆಯಿಲ್ಲ. ಯಾವುದಾದರೂ ಒಂದು ದಾರಿಯಲ್ಲಿ ಜಾತಿ ಹೇಳಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನೆ ಮನೆ ಜಾತಿ ಸಮೀಕ್ಷೆಯಲ್ಲಿ ತೊಂದರೆಗಳಾಗಿದ್ದರೆ ಆನ್ ಲೈನ್ ನಲ್ಲಿ ದಾಖಲು ಮಾಡಲು ತೊಂದರೆಯಿಲ್ಲ. ಯಾವುದಾದರೂ ಒಂದು ದಾರಿಯಲ್ಲಿ ಜಾತಿ ಹೇಳಿಕೊಳ್ಳಬೇಕು. ಸಮೀಕ್ಷೆ ಮಾಡುವವರು ಮನೆಗೆ ಬಂದಾಗ ಅಥವಾ ಶಿಬಿರದಲ್ಲಿ ಅಥವಾ ಆನ್ಲೈನ್ ಹೀಗೆ ಯಾವುದಾದರೂ ಒಂದು ವಿಧಾನದಲ್ಲಿ ಪರಿಶಿಷ್ಟ ಜಾತಿಯವರು ತಮ್ಮ ಜಾತಿಯ ಬಗ್ಗೆ ಮಾಹಿತಿ ನೀಡಬೇಕು. ಸಮೀಕ್ಷೆ ಮಾಡುವವರು ಮನೆ ಮನೆಗೆ ತೆರಳುತ್ತಿದ್ದಾರೆ. ಬೆಂಗಳೂರು ನಗರದಲ್ಲಿ ಕೆಲವರು ಜಾತಿ ಬಗ್ಗೆ ಬಹಿರಂಗವಾಗಿ ಹೇಳಿಕೊಳ್ಳಲು ಕೀಳರಿಮೆ ಇದ್ದರೆ ಅಂಥವರು ಆನ್ ಲೈನ್ ನಲ್ಲಿ ಜಾತಿಯ ಹೆಸರನ್ನು ದಾಖಲಿಸಬಹುದು ಎಂದು ತಿಳಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಸಚಿವರಾಗುವ ಅಧಿಕಾರವಿದೆ. ಸಚಿವ ಸ್ಥಾನದ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. 142 ಜನ ನಮ್ಮ ಪಕ್ಷದವರಿದ್ದಾರೆ. 34 ಜನರನ್ನು ಮಾತ್ರ ಸಚಿವರನ್ನಾಗಿಸಬಹುದು.…
ಬೆಂಗಳೂರು: ವಾಹನ ಸವಾರರಿಗೆ ಬಿಗ್ ಶಾಕ್, ಹೊಸೂರು ರಸ್ತೆಯ ಎಲಿವೇಟೆಡ್ ರಸ್ತೆ ಹಾಗೂ ನೈಸ್ ರೋಡ್ನಲ್ಲಿ ಟೋಲ್ ದರ ಹೆಚ್ಚಳದ ಬೆನ್ನಲ್ಲೇ ಬೆಂಗಳೂರು-ನೆಲಮಂಗಲ ಮಾರ್ಗದಲ್ಲೂ ಹೊಸ ಟೋಲ್ ಶುಲ್ಕ ವಸೂಲಿಗೆ ಎನ್ ಎಚ್ ಎಐ ಅನುಮತಿ ನೀಡಿದೆ. ಈ ಹೊಸ ದರ ಮಂಗಳವಾರ ಜಾರಿಗೆ ಬಂದಿದ್ದು, ತುಮಕೂರು ಮಾರ್ಗದಲ್ಲಿನ 19.5 ಕಿ.ಮೀ. ಉದ್ದ ಹೆದ್ದಾರಿಗೆ ಟೋಲ್ ದರ ಹೆಚ್ಚಳ ಅನ್ವಯವಾಗಲಿದೆ. ಶುಲ್ಕ ಹೆಚ್ಚಳದ ಜತೆಗೆ ಸಾರ್ವಜನಿಕರು ಬಳಸುತ್ತಿರುವ ವಿವಿಧ ರಿಯಾಯಿತಿ ದರದ ಪಾಸ್ಗಳ ದರದಲ್ಲಿ ಸ್ವಲ್ಪಮಟ್ಟಿಗೆ ರಿಯಾಯಿತಿ ಘೋಷಿಸಲಾಗಿದೆ. ಕಾರು/ಜೀಪ್ ಏಕ ಪ್ರಯಾಣ 30 ರೂ. ದ್ವಿಮುಖ ಪ್ರಯಾಣಕ್ಕೆ 45 ರೂ. ಮಾಸಿಕ ಪಾಸ್ 865 ರೂ. ಮಿನಿ ಬಸ್ ಗಳಿಗೆ 50 ರೂ ಲಘು ವಾಣಿಜ್ಯ ವಾಹನಗಳಿಗೆ, 75 ರೂ. ಹಾಗೂ 1,440 ರೂ.ಹೆಚ್ಚಳ ಬಸ್/ಲಾರಿಗೆ ಕ್ರಮವಾಗಿ 100 ರೂ., 150 ರೂ. ಹಾಗೂ 2,955 ರೂ. ಜೆಸಿಬಿಗಳು ಮತ್ತು ಭಾರಿ ನಿರ್ಮಾಣ ಯಂತ್ರಗಳಿಗೆ ಕ್ರಮವಾಗಿ 160 ರೂ., 240…
ಭಾರತೀಯ ಯುವಕರಲ್ಲಿ ಆರೋಗ್ಯಕರ ದಿನಚರಿ ಕಣ್ಮರೆಯಾಗಿದೆ. ಪ್ರಸ್ತುತ, ಅನಾರೋಗ್ಯಕರ ದಿನಚರಿ ಮುಂದುವರೆದಿದೆ. ಬೆಳಿಗ್ಗೆ ಎದ್ದ ತಕ್ಷಣ ಫೋನ್ ಹಿಡಿಯುವುದು, ಸಾಮಾಜಿಕ ಮಾಧ್ಯಮದಲ್ಲಿ ಮುಳುಗಿರುವುದು, ಟ್ವಿಟರ್ ಪೋಸ್ಟ್ಗಳು, ಇನ್ಸ್ಟಾಗ್ರಾಮ್ ಪೋಸ್ಟ್ಗಳು, ರೀಲ್ಗಳನ್ನು ನೋಡುವುದು ಮತ್ತು ಸಾಮಾಜಿಕ ಮಾಧ್ಯಮ ಪ್ರಭಾವಿಗಳನ್ನು ಅನುಸರಿಸುವುದು ಮುಂತಾದ ಅನಾರೋಗ್ಯಕರ ಅಭ್ಯಾಸಗಳು ಇಂದಿನ ಯುವಕರ ಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ. ಬೆಳಿಗ್ಗೆ ಸಾಮಾಜಿಕ ಮಾಧ್ಯಮ.. ಯುವಕರು ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ ಇದರ ಪರಿಣಾಮವಾಗಿ, ಯುವಕರು ಪ್ರತಿದಿನ ಬೆಳಿಗ್ಗೆ ಮಾಡಬೇಕಾದ ಯಾವುದೇ ಕೆಲಸಗಳನ್ನು ಮಾಡುತ್ತಿಲ್ಲ. ಅವರು ಯಾವುದೇ ದೈಹಿಕ ವ್ಯಾಯಾಮ ಅಥವಾ ಸಮಯಕ್ಕೆ ಉಪಾಹಾರ ಸೇವಿಸುತ್ತಿಲ್ಲ. ಅವರು ಎಷ್ಟು ಗಂಟೆಗೆ ಮಲಗುತ್ತಾರೆ? ಅವರು ಎಷ್ಟು ಗಂಟೆಗೆ ಎಚ್ಚರಗೊಳ್ಳುತ್ತಾರೆ? ಅವರಿಗೆ ತಿಳಿದಿರುವುದಿಲ್ಲ. ಅವರ ಅಸ್ತವ್ಯಸ್ತವಾಗಿರುವ ಜೀವನಶೈಲಿಯಿಂದಾಗಿ, ಯುವಕರು ಚಿಕ್ಕ ವಯಸ್ಸಿನಲ್ಲಿಯೇ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ಯುವಕರಲ್ಲಿ ಅನಾರೋಗ್ಯಕ್ಕೆ ಪ್ರಮುಖ ಕಾರಣ ಪ್ರಸ್ತುತ ಹೆಚ್ಚುತ್ತಿರುವ ಸಾಮಾಜಿಕ ಮಾಧ್ಯಮ ಹುಚ್ಚು ಎಂದು ಸಹ ಹೇಳಬಹುದು. ಆದಾಗ್ಯೂ, ಸಾಮಾಜಿಕ ಮಾಧ್ಯಮವನ್ನು ಹೆಚ್ಚಾಗಿ ಬಳಸುವ ಯುವಕರು ಕ್ರಮೇಣ ಆ ಅಭ್ಯಾಸದಿಂದ…
ಬೆಂಗಳೂರು: ಕರ್ನಾಟಕ ರಾಜ್ಯದ ಗ್ರಾಮೀಣ ಭಾಗದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಕಾಣಿಸಿಕೊಂಡಿರುವ ಆಘಾತಕಾರಿ ಸಂಗತಿ ಅಧ್ಯಯನದಿಂದ ಹೊರ ಬಿದ್ದಿದೆ. ಅಧ್ಯಯನಕ್ಕೆ ಒಳಪಟ್ಟ 8 ಮತ್ತು 9 ನೇ ತರಗತಿಯ 30 ವಿದ್ಯಾರ್ಥಿಗಳಲ್ಲಿ ಒಬ್ಬ ವಿದ್ಯಾರ್ಥಿ ಮಧುಮೇಹದಿಂದ ಬಳಲುತ್ತಿದ್ದರೆ, ನಾಲ್ಕು ವಿದ್ಯಾರ್ಥಿಗಳು ಹೈಪರ್ ಟೆನ್ಷನ್ ನಿಂದ ನರಳುತ್ತಿದ್ದು ಚಿಕಿತ್ಸೆಗೆ ಒಳಗಾಗಿದ್ದಾರೆ! 11 ವಿದ್ಯಾರ್ಥಿಗಳಲ್ಲಿ ಟೈಗ್ರಿಸೈರೆಡ್ ( ಕೊಬ್ಬು) ಕೊಬ್ಬಿನಾಂಶ ಹೆಚ್ಚಾಗಿದ್ದು, ಒಬ್ಬ ವಿದ್ಯಾರ್ಥಿಯಲ್ಲಿ ಅಪಾಯಕಾರಿ ಹಂತ ತಲುಪಿದೆ! ಹುಬ್ಬಳ್ಳಿಯ ಕರ್ನಾಟಕ ಮೆಡಿಕಲ್ ಕಾಲೇಜು ಮತ್ತು ರಿಸರ್ಚ್ ಸೆಂಟರ್ ನ ಮಲ್ಟಿ ಡಿಸಿಪ್ಲೆನರಿ ರಿಸರ್ಚ್ ಘಟಕ ಇತ್ತೀಚಿನ ದಿನಗಳಲ್ಲಿ ಕಿಶೋರರಲ್ಲಿ ಹೃದಯ ಸಂಬಂಧಿ ಕಾಯಿಲೆ ಕಾಣಿಸಿಕೊಳ್ಳುತ್ತಿರುವ ಬಗ್ಗೆ ಅಧ್ಯಯನ ನಡೆಸಿತು. ಧಾರವಾಡ ಜಿಲ್ಲೆಯಲ್ಲಿ 8 ರಿಂದ 9 ನೇ ತರಗತಿಯಲ್ಲಿ ವ್ಯಾಸಂಗ ಮಾಆಡುತ್ತಿರುವ ಆರು ಶಾಲೆಗಳ 30 ಅಧಿಕ ತೂಕದ ಮಕ್ಕಳನ್ನು ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಬಾಲ್ಯಾವ್ಯಸ್ಥೆಯಲ್ಲಿ ಕಾಣಿಸಿಕೊಳ್ಳುತ್ತಿರುವ ರೋಗಗಳ ಬಗ್ಗೆ ವೈದ್ಯರ ತಂಡ ಅಧ್ಯಯನ ನಡೆಸಿದಾಗ ಆಘಾತಕಾರಿ ಸಂಗತಿಗಳು ಹೊರ…
ಮುಂಬೈ : ಮುಂಬೈನಿಂದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಪ್ರತಿಷ್ಠಿತ ಶಾಲೆಯ ಇಂಗ್ಲಿಷ್ ಶಿಕ್ಷಕಿಯೊಬ್ಬರು ಅಪ್ರಾಪ್ತ ವಿದ್ಯಾರ್ಥಿಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದ ಆರೋಪದ ಮೇಲೆ ಬಂಧಿಸಲ್ಪಟ್ಟಿದ್ದಾರೆ. ಪ್ರಸ್ತುತ, ಪ್ರಕರಣದ ತನಿಖೆ ನಡೆಯುತ್ತಿದೆ. ಶಿಕ್ಷಕಿ ವಿದ್ಯಾರ್ಥಿಯ ಮೇಲೆ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ವರದಿಯಾಗಿದೆ. ಇದಲ್ಲದೆ, ಅವರು ಅವನಿಗೆ ಮದ್ಯ ಕುಡಿಸಿ ಫೈವ್ ಸ್ಟಾರ್ ಹೋಟೆಲ್ಗಳಿಗೆ ಕರೆದೊಯ್ಯುತ್ತಿದ್ದರು. ಈ ಲೈಂಗಿಕ ದೌರ್ಜನ್ಯದ ಸರಣಿಯು ಒಂದು ವರ್ಷಕ್ಕೂ ಹೆಚ್ಚು ಕಾಲ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾರ್ಥಿಯ ನಡವಳಿಕೆಯಲ್ಲಿ ಬದಲಾವಣೆಯನ್ನು ಕುಟುಂಬವು ನೋಡಿದಾಗ, ಅವನು ಲೈಂಗಿಕ ದೌರ್ಜನ್ಯದ ಬಗ್ಗೆ ಬಹಿರಂಗವಾಗಿ ಹೇಳಿದ್ದಾನೆ ಎನ್ನಲಾಗಿದೆ. ಈ ವರ್ಷ ವಿದ್ಯಾರ್ಥಿ ಬೋರ್ಡ್ ಪರೀಕ್ಷೆಯಲ್ಲಿ ಉತ್ತೀರ್ಣನಾದನು, ಆದರೆ ಅವನು ಖಿನ್ನತೆಗೆ ಒಳಗಾಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ಶಿಕ್ಷಕಿ ಮನೆಕೆಲಸದ ಸೇವಕನ ಮೂಲಕ ಮಗುವನ್ನು ಮತ್ತೆ ಸಂಪರ್ಕಿಸಲು ಪ್ರಯತ್ನಿಸಿದಾಗ ವಿಷಯ ಮತ್ತೆ ಬೆಳಕಿಗೆ ಬಂದಿದೆ.. ಅವಳು ಭೇಟಿಯಾಗಬೇಕೆಂದು ಸಂದೇಶ ಕಳುಹಿಸಿದಳು. ‘ನಂತರ ಮನೆಯವರು ನಮ್ಮ ಬಳಿಗೆ ಬಂದು…
ತುಮಕೂರು : ಅಪ್ರಾಪ್ತ ಮಕ್ಕಳಿಗೆ ವಾಹನ ಚಾಲನೆಗೆ ಕೊಡುವ ಪೋಷಕರೇ ಎಚ್ಚರ,ಅಪ್ರಾಪ್ತ ಮಗನಿಗೆ ವಾಹನವನ್ನು ಚಲಾಯಿಸಲು ನೀಡಿದ್ದಕ್ಕೆ ತಂದೆಗೆ ತುಮಕೂರು ಜಿಲ್ಲೆಯ ಗುಬ್ಬಿ ಜೆಎಂಎಫ್ಸಿ ನ್ಯಾಯಾಲಯ 30000 ರೂ. ದಂಡ ಹಾಗೂ ಒಂದು ದಿನ ಜೈಲು ಶಿಕ್ಷೆ ವಿಧಿಸಿದೆ. ಹೌದು, ಕಳೆದ ವರ್ಷ ಅಕ್ಟೋಬರ್ 31 ರಂದು ಅಪ್ರಾಪ್ತ ಮಗನಿಗೆ ತಂದೆ ಬೈಕ್ ನೀಡಿದ್ದರು. ಆತ ತುಮಕೂರಿನಿಂದ ಚಾಲನೆ ಮಾಡಿಕೊಂಡು ಬರುವಾಗ ರಾತ್ರಿ ಗುಬ್ಬಿಬೈಪಾಸ್ನ ಸಿಐಟಿ ಕಾಲೇಜು ಹಿಂಭಾಗ ರಸ್ತೆ ಪಕ್ಕದಲ್ಲಿದ್ದ ಮಣ್ಣಿನ ಗುಡ್ಡೆಗೆ ಡಿಕ್ಕಿ ಹೊಡೆದಿದ್ದ. ಈ ಸಂಬಂಧ ಗುಬ್ಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಈ ಸಂಬಂಧ ನ್ಯಾಯಾಲಯ ಅಪ್ರಾಪ್ತ ಮಗನಿಗೆ ಬೈಕ್ ಕೊಟ್ಟ ತಂದೆಗೆ 1 ದಿನ ಜೈಲು ಶಿಕ್ಷೆ ಮತ್ತು 30000 ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ರಾಜ್ಯವಲಯದ ಆಸ್ಪತ್ರೆಗಳಲ್ಲಿ ಖಾಲಿ ಇರುವ 6,770 ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆಯಡಿ ಭರ್ತಿ ಮಾಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮಾಂಕ(1)ರ ಆದೇಶದಲ್ಲಿ 2019-20ನೇ ಸಾಲಿಗೆ ಆಸ್ಪತ್ರೆಗಳಲ್ಲಿ ಖಾಲಿ ಇರುವ ಗ್ರೂಪ್-ಡಿ ಹುದ್ದೆಗಳಲ್ಲಿ ಶೇ.30 ರಷ್ಟು ನಾನ್-ಕ್ಲಿನಿಕಲ್ ಹಾಗೂ ಶೇ.45 ರಷ್ಟು ಗ್ರೂಪ್-ಡಿ ಹುದ್ದೆಗಳನ್ನು ಒಟ್ಟಾರೆಯಾಗಿ ಶೇ.75 ಮೀರದಂತೆ ಈ ಹಿಂದಿನ ಟೆಂಡರು ನಿಯಮಗಳನ್ನು ಪಾಲಿಸಿಕೊಂಡು ಹಾಗೂ ಹೊರಗುತ್ತಿಗೆ ಸಂಪನ್ಮೂಲದಡಿ ಟೆಂಡರ್ ಕರೆಯಲು ಕ್ರಮ ತೆಗೆದುಕೊಳ್ಳುವಂತೆ ಆದೇಶಿಸಲಾಗಿದೆ. ಮೇಲೆ ಓದಲಾದ ಕ್ರಮಾಂಕ(2)ರ ಏಕ ಕಡತದಲ್ಲಿ ದಿನಾಂಕ:09.01.2025 ರಂದು ಸನ್ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜ್ಯವಲಯದ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ರೋಗಿಗಳ ಹಿತದೃಷ್ಠಿಯಿಂದ ಆಸ್ಪತ್ರೆಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಲು ಮತ್ತು ಸಾರ್ವಜನಿಕರಿಗೆ ಹೆಚ್ಚಿನ/ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸಲು ಪ್ರಸ್ತುತ ಚಾಲ್ತಿಯಲ್ಲಿರುವ ಗ್ರೂಪ್-ಡಿ ಖಾಲಿ ಹುದ್ದೆಗಳಿಗೆ ಎದುರಾಗಿ ಪಡೆದುಕೊಳ್ಳುತ್ತಿರುವ ಶೇ 75…
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಜುಲೈ 5ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-3 ನಡೆಯಲಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಸಮಯದಲ್ಲಿ ಪ್ರಮುಖ ನಿಯಮ ಪಾಲಿಸುವಂತೆ ಸೂಚನೆ ನೀಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸಿಸಿ ಟಿವಿ ಅಳವಡಿಸುವುದು ಕಡ್ಡಾಯವಾಗಿರುತ್ತದೆ. ಸಿಸಿಟಿವಿ ಗಳು ಪರೀಕ್ಷಾ ಅವಧಿಯಲ್ಲಿ ಕಾರ್ಯ ನಿರ್ವಹಿಸುತ್ತಿರಬೇಕು. ಹಾಗೂ ಜಿಲ್ಲಾ ಪಂಚಾಯ್ತಿಯ ಸಿಇಓ ಕಚೇರಿಯಲ್ಲಿ ಸಿಸಿಟಿವಿ ವ್ಯವಸ್ಥೆಯನ್ನು ಮಾನಿಟರ್ ಮಾಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ ವಿದ್ಯಾರ್ಥಿಗಳು, ಸರಳ ಕ್ಯಾಲ್ಕುಲೇಟರ್ಗಳನ್ನು ಮಾತ್ರ ಬಳಸಲು ಅವಕಾಶ ಸ್ಟ್ರಾಟಿಸ್ಟಿಕ್ಸ್ ವಿಷಯದಲ್ಲಿ ಮಾತ್ರ ಸೈಂಟಿಫಿಕ್ ಕ್ಯಾಲ್ಕುಲೇಟರ್ ಬಳಸಲು ಅನುಮತಿ ಪರೀಕ್ಷೆಯ ಅಂತಿಮ ಬೆಲ್ ಹೊಡೆಯುವ ಮುನ್ನ ಪರೀಕ್ಷಾ ಕೊಠಡಿಯಿಂದ ಹೊರಡುವ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಗಳನ್ನು ಕಡ್ಡಾಯವಾಗಿ ಪಡೆಯಲಾಗುತ್ತದೆ. ಗುರುತಿನ ಚೀಟಿ ಹಾಗೂ ಹಾಲ್ ಟಿಕೆಟ್ ಕಡ್ಡಾಯ ಮೊಬೈಲ್ ಫೋನ್ , ಎಲೆಕ್ಟ್ರಿಕಲ್ ಉಪಕರಣಗಳ ಬಳಕೆ ನಿಷೇಧ ಪರೀಕ್ಷಾ ಅವಧಿಗಿಂತ ಮುಂಚೆ ಹೊರಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಪ್ರಶ್ನೆ…
ಬೆಂಗಳೂರು : 2025-26 ನೇ ಸಾಲಿನ ಪ್ರತಿಭಾಕಾರಂಜಿ/ಕಲೋತ್ಸವ ಕಾರ್ಯಕ್ರಮ ಅನುಷ್ಠಾನಗೊಳಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಪ್ರತಿಭಾ ಕಾರಂಜಿ ಸ್ಪರ್ಧೆಯನ್ನು 2002ನೇ ಸಾಲಿನಿಂದ ಹಮ್ಮಿಕೊಳ್ಳಲಾಗುತ್ತಿದ್ದು, ಈ ಕಾರ್ಯಕ್ರಮವು ಶಿಕ್ಷಣ ಕ್ಷೇತ್ರದಲ್ಲಿ ಕಲೆಗಳನ್ನು ಉತ್ತೇಜಿಸುವ ಮೂಲಕ ಶಾಲಾ ವಿದ್ಯಾರ್ಥಿಗಳ ಕಲಾತ್ಮಕ ಪ್ರತಿಭೆಯನ್ನು, ಸೃಜನಾತ್ಮಕ ಕೌಶಲ್ಯಗಳನ್ನು ಹೊರತರಲು ಉತ್ತಮ ವೇದಿಕೆಯಾಗಿದೆ. ಉಲ್ಲೇಖಿತ ಆದೇಶ/ಪತ್ರಗಳಂತೆ 2025-26ನೇ ಸಾಲಿನಲ್ಲಿ ರಾಜ್ಯವಲಯದ ಮುಂದುವರೆದ ಯೋಜನಾ ಕಾರ್ಯಕ್ರಮದಡಿಯಲ್ಲಿ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲಾಮಕ್ಕಳಿಗೆ (1 ರಿಂದ 10ನೇ ತರಗತಿ) ಏಕ ರೀತಿಯ ಸಾಂಸ್ಕೃತಿಕ, ಶೈಕ್ಷಣಿಕ ಸ್ಪರ್ಧೆಗಳನ್ನು ಮತ್ತು 09 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ, ಕಲೋತ್ಸವ ಸ್ಪರ್ಧೆಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ. ಸ್ಪರ್ಧೆಗಳನ್ನು ನಡೆಸುವ ವಿಧಾನ ಕುರಿತಂತೆ ಲಗತ್ತಿಸಿರುವ ಅನುಬಂಧ-1,2,3 ಹಾಗೂ 4 ರಲ್ಲಿ ವಿವರಿಸಲಾಗಿದ್ದು ಅದರಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಮತ್ತು (ಅಭಿವೃದ್ಧಿ), ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಎಲ್ಲಾ ಹಂತದ ಅಧಿಕಾರಿಗಳು ಸಮುದಾಯದ ಸಹಕಾರದೊಂದಿಗೆ ಸ್ಥಳೀಯ ಹಬ್ಬದ ರೀತಿಯಲ್ಲಿ…














