Subscribe to Updates
Get the latest creative news from FooBar about art, design and business.
Author: kannadanewsnow57
ಹುಬ್ಬಳ್ಳಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿರುವುದರಲ್ಲಿ ನನ್ನ ಪಾತ್ರವೇನೂ ಇಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟ ದರ್ಶನ್ ಬಳ್ಳಾರಿ ಜೈಲಿಗೆ ವರ್ಗ ಮಾಡಿರುವುದರಲ್ಲಿ ನನ್ನ ಪಾತ್ರವೇನೂ ಇಲ್ಲ. ಅದನ್ನು ಪೊಲೀಸ್ ಇಲಾಖೆ, ಕಾರಾಗೃಹ ಇಲಾಖೆ ಮಾಡಿದೆ. ನಾನು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಅಷ್ಟೇ, ಡಿಜಿ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇನ್ನು ಬಿಜೆಪಿಯವರಿಗೆ ಹಿಂದುಳಿದ ನಾಯಕನಾಗಿರುವಂತ ಸಿಎಂ ಸಿದ್ಧರಾಮಯ್ಯ ಅವರನ್ನು ಸಹಿಸಲು ಆಗ್ತಿಲ್ಲ. ಈ ಕಾರಣಕ್ಕೆ ಮುಡಾ ಹಗರಣ ಹೊರತಂದಿದ್ದಾರೆ. ಸಿಎಂ ಸಿದ್ಧರಾಮಯ್ಯ ಟಗರು ಇದ್ದಂತೆ. ಯಾರಿಗೂ ಯಾವತ್ತಿಗೂ ಭಯ ಬೀಳೋದಿಲ್ಲ ಎಂಬುದಾಗಿ ತಿಳಿಸಿದರು.
ಬೆಂಗಳೂರು : ಸಿ.ಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಆರೋಪ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಿಎಂ ಸಿದ್ಧರಾಮಯ್ಯ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠವು ಸೆಪ್ಟೆಂಬರ್.2ರ ಇಂದು ಮಧ್ಯಾಹ್ನ 2.30ಕ್ಕೆ ವಿಚಾರಣೆಯನ್ನು ನಡೆಸಲಿದೆ. ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಇಂದು ಮಧ್ಯಾಹ್ನ 2.30 ಕ್ಕೆ ಹೈಕೋರ್ಟ್ ನಡೆಸಲಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಹಾಂ ರಾಜ್ಯಪಾಲರಿಗೆ ದೂರು ನೀಡಿದ್ದರು. ಬಳಿಕ ರಾಜ್ಯಪಾಲರು ಬಳಿಕ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಇಂದು ಹೈಕೋರ್ಟ್ ನಡೆಸಲಿದೆ.
ಹಾವೇರಿ : ಹಾವೇರಿಯಲ್ಲಿ ಪ್ರಕಾಶ್ ಎಂಬುವರು ತಮ್ಮ ಆರಾಧ್ಯದೈವ ನಟ ಪುನೀತ್ ರಾಜ್ಕುಮಾರ್ಗಾಗಿ ಸುಮಾರು 8 ಲಕ್ಷ ರೂ.ವೆಚ್ಚದಲ್ಲಿ ದೇವಸ್ಥಾನ ಕಟ್ಟಿಸುತ್ತಿದ್ದಾರೆ. ಹಾವೇರಿ ತಾಲೂಕಿನ ಯಲಗಚ್ಚ ಗ್ರಾಮದ ಪ್ರಕಾಶ್ ಎಂಬುವರು ವೃತ್ತಿಯಲ್ಲಿ ಡ್ಯಾನ್ಸ್ ಮಾಸ್ಟರ್. ಪ್ರಕಾಶ್ಗೆ ನಟ ಡಾ ಪುನೀತ್ ರಾಜ್ಕುಮಾರ್ ಅಂದ್ರೆ ಪಂಚಪ್ರಾಣ. ಡಾ ಪುನೀತ್ ರಾಜ್ಕುಮಾರ್ ಜೊತೆ ನಟಿಸಬೇಕು ಎಂಬುದು ಪ್ರಕಾಶ್ ಅವರ ಅದಮ್ಯ ಆಸೆಯಾಗಿತ್ತು. ಆದರೆ ಅಪ್ಪು ಅವರನ್ನ ಭೇಟಿಯಾಗುವ ಅವಕಾಶ ಪ್ರಕಾಶ್ಗೆ ಸಿಗಲೇ ಇಲ್ಲ. ಕೊನೆಗೆ ಅಪ್ಪು ಅವರನ್ನ ದೂರದಿಂದ ನೋಡಿದ ತೃಪ್ತಿಯಿಂದ ಪ್ರಕಾಶ್ ಮನೆಗೆ ಮರಳಿದ್ದರು. ಪ್ರಕಾಶ್ ಮಾತ್ರವಲ್ಲ ಅವರ ಇಡೀ ಕುಟುಂಬ ಪುನೀತ್ ಅಭಿಮಾನಿಗಳಾಗಿದ್ದು, ತಮ್ಮ ನೆಯ ಆವರಣದಲ್ಲಿ ಸುಮಾರು 8 ಲಕ್ಷ ರೂ. ಖರ್ಚು ಮಾಡಿ ದೆವಸ್ಥಾನ ಕಟ್ಟಿಸುತ್ತಿದ್ದಾರೆ. ದೇವಸ್ಥಾನದಲ್ಲಿ ಪುನೀತ್ ರಾಜ್ ಕುಮಾರ್ ಪುತ್ಥಳಿಯನ್ನೂ ಸಹ ನಿರ್ಮಿಸಲಾಗುತ್ತಿದ್ದು, ಅಂತಿಮ ಹಂತದಲ್ಲಿದ್ದು, ಸೆ. 26 ಕ್ಕೆ ಈ ದೇವಾಲಯವನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ ಉದ್ಧಾಟಿಸಲಿದ್ದಾರೆ.
ಕೊಚ್ಚಿ : ಮಲಯಾಳಂ ಚಿತ್ರರಂಗದಲ್ಲಿ ಅತ್ಯಾಚಾರ ಹಾಗೂ ಸಲಿಂಗಕಾಮದ ಬಳಿಕ ಇದೀಗ ಗ್ಯಾಂಗ್ ರೇಪ್ ಯತ್ನದ ಸ್ಪೋಟಕ ಆರೋಪ ಕೇಳಿಬಂದಿದ್ದು, 1997 ರಲ್ಲಿ ತಮ್ಮ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು ಎಂದು ಬಹುಭಾಷಾ ನಟಿ ಚರ್ಮಿಳಾ ಗಂಭೀರ ಆರೋಪ ಮಾಡಿದ್ದಾರೆ. ನಟರು, ನಿರ್ದೇಶಕರು ಮತ್ತು ನಿರ್ಮಾಪಕರು ಸೇರಿದಂತೆ 28 ಜನರು ತಮ್ಮ ಮೇಲೆ ಲೈಂಗಿಕ ಉದ್ದೇಶದಿಂದ ವರ್ತಿಸಿದ್ದಾರೆ ಎಂದು ನಟಿ ಚಾರ್ಮಿಲಾ ಬಹಿರಂಗಪಡಿಸಿದ್ದರು. ‘ಅರ್ಜುನನ್ ಪಿಳ್ಳಯಮ್ ಆಂಚು ಮಕ್ಕಲ್ಯಮ್’ ಚಿತ್ರದ ನಿರ್ಮಾಪಕ ಸಂಸದ ಮೋಹನನ್ ಮತ್ತು ಅವರ ಸ್ನೇಹಿತರು ತನ್ನ ಮೇಲೆ ಅತ್ಯಾಚಾರ ಮಾಡಲು ಪ್ರಯತ್ನಿಸಿದರು ಎಂದು ನಟಿ ಹೇಳಿದ್ದಾರೆ. “ನನ್ನ ಕುಟುಂಬವು ಮಧ್ಯಪ್ರವೇಶಿಸಿ ಆ ದಿನ ನನ್ನನ್ನು ಉಳಿಸಿತು. ನಿರ್ದೇಶಕ ಹರಿಹರನ್ ನಟ ವಿಷ್ಣುವನ್ನು ನಾನು ಕೊಡಬಹುದೇ ಎಂದು ಕೇಳಿದ್ದರು. ನಾನು ಸಿದ್ಧವಾಗಿಲ್ಲ ಎಂದು ಹೇಳಿದಾಗ, ನನ್ನನ್ನು ‘ಪರಿನಾಯಂ’ ಚಿತ್ರದಿಂದ ತೆಗೆದುಹಾಕಲಾಗಿದೆ” ಎಂದು ನಟಿ ಆರೋಪಿಸಿದರು. 1997 ರ ಚಿತ್ರ ‘ಅರ್ಜುನನ್ ಪಿಳ್ಳಯಮ್ ಆಂಚು ಮಕ್ಕಲ್ಯಮ್’ ಎಂಬ ಚಿತ್ರದ ಸಂದರ್ಭದಲ್ಲಿ…
ದೇಹದ ನೋವಿಗೆ ನೀವು ಆಯ್ಕೆ ಮಾಡುವ ಔಷಧಿಗಳ ಬಗ್ಗೆ ಜಾಗರೂಕರಾಗಿರುವುದು ಅತ್ಯಗತ್ಯ, ಏಕೆಂದರೆ ಎಲ್ಲಾ ಮಾತ್ರೆಗಳು ಎಲ್ಲರಿಗೂ ಸುರಕ್ಷಿತವಲ್ಲ. ದೇಹದ ನೋವು ನಿವಾರಣೆಗಾಗಿ ಎಚ್ಚರಿಕೆಯಿಂದ ಬಳಸಬೇಕಾದ ಅಥವಾ ತಪ್ಪಿಸಬೇಕಾದ ಕೆಲವು ಮಾತ್ರೆಗಳು ಇಲ್ಲಿವೆ. ಓಪಿಯಾಡ್ ನೋವು ನಿವಾರಕಗಳು (ಉದಾ. ಆಕ್ಸಿಕೋಡೋನ್, ಹೈಡ್ರೋಕೋಡೋನ್): ಇವು ತೀವ್ರವಾದ ನೋವಿಗೆ ಹೆಚ್ಚಾಗಿ ಸೂಚಿಸಲಾಗುವ ಬಲವಾದ ನೋವು ನಿವಾರಕಗಳಾಗಿವೆ. ಆದಾಗ್ಯೂ, ಅವು ಹೆಚ್ಚು ವ್ಯಸನಕಾರಿ ಮತ್ತು ದೀರ್ಘಕಾಲದವರೆಗೆ ಬಳಸಿದರೆ ಅವಲಂಬನೆಗೆ ಕಾರಣವಾಗಬಹುದು. ಅವು ಮಂಪರು, ಮಲಬದ್ಧತೆ ಮತ್ತು ತೀವ್ರ ಸಂದರ್ಭಗಳಲ್ಲಿ ಉಸಿರಾಟದ ಖಿನ್ನತೆಯಂತಹ ಅಡ್ಡಪರಿಣಾಮಗಳನ್ನು ಉಂಟುಮಾಡಬಹುದು. ಹೆಚ್ಚಿನ ಪ್ರಮಾಣದಲ್ಲಿ ಸ್ಟೀರಾಯ್ಡ್ ಅಲ್ಲದ ಉರಿಯೂತದ ಔಷಧಿಗಳು (ಎನ್ಎಸ್ಎಐಡಿಗಳು) (ಉದಾಹರಣೆಗೆ, ಇಬುಪ್ರೊಫೇನ್, ಡಿಕ್ಲೋಫೆನಾಕ್): ಉರಿಯೂತ ಮತ್ತು ನೋವನ್ನು ಕಡಿಮೆ ಮಾಡಲು ಎನ್ಎಸ್ಎಐಡಿಗಳು ಪರಿಣಾಮಕಾರಿಯಾಗಿದ್ದರೂ, ದೀರ್ಘಕಾಲೀನ ಅಥವಾ ಹೆಚ್ಚಿನ-ಡೋಸ್ ಬಳಕೆಯು ಹುಣ್ಣುಗಳು, ಮೂತ್ರಪಿಂಡದ ಹಾನಿ ಮತ್ತು ಹೃದಯಾಘಾತ ಅಥವಾ ಪಾರ್ಶ್ವವಾಯುವಿನಂತಹ ಜಠರಗರುಳಿನ ಸಮಸ್ಯೆಗಳಿಗೆ ಕಾರಣವಾಗಬಹುದು. ಅಸ್ತಿತ್ವದಲ್ಲಿರುವ ಹೊಟ್ಟೆ, ಮೂತ್ರಪಿಂಡ ಅಥವಾ ಹೃದಯದ ಪರಿಸ್ಥಿತಿಗಳನ್ನು ಹೊಂದಿರುವ ಜನರು ಇವುಗಳನ್ನು ತಪ್ಪಿಸಬೇಕು ಅಥವಾ ಬಳಸುವ…
ಬೆಂಗಳೂರು: ರಾಜ್ಯಾಧ್ಯಂತ ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್ ಎನ್ನುವಂತೆ ಸೆಪ್ಟೆಂಬರ್2 ರ ಇಂದಿನಿಂದ ಲ್ಯಾಂಡ್ ಬೀಟ್ ಆ್ಯಪ್ ಆಧರಿಸಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಸರ್ಕಾರ ನಡೆಸಲಿದೆ. ಈ ಕುರಿತು ಮಾಹಿತಿ ಹಂಚಿಕೊಂಡಂತ ಕಂದಾಯ ಸಚಿವ ಕೃಷ್ಣಭೈರೇಗೌಡ, ಲ್ಯಾಂಡ್ ಬೀಟ್ ಆ್ಯಪ್ ಆಧರಿಸಿ ಸೆಪ್ಟೆಂಬರ್ ತಿಂಗಳಿನಿಂದ ರಾಜ್ಯಾದ್ಯಂತ ಸರ್ಕಾರ ಭೂ ಒತ್ತುವರಿ ತೆರವು ಕಾರ್ಯಾಚರಣೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು. ಕಂದಾಯ, ಅರಣ್ಯ, ಶಿಕ್ಷಣ ಹಾಗೂ ಪಿಡಬ್ಲ್ಯೂಡಿ ಇಲಾಖೆ ಸೇರಿ ರಾಜ್ಯಾದ್ಯಂತ 1.41 ಕೋಟಿ ಎಕರೆ ಸರ್ಕಾರಿ ಜಮೀನು ಇದೆ ಎಂಬುದು ಲ್ಯಾಂಡ್ ಬೀಟ್ ಆ್ಯಪ್ ಮೂಲಕ ತಿಳಿದುಬಂದಿದೆ. ರಾಜ್ಯದಲ್ಲಿ ಈವರೆಗೆ 13.17 ಲಕ್ಷ ಎಕರೆ ಕಂದಾಯ ಭೂಮಿ ಒತ್ತುವರಿಯಾಗಿರುವುದನ್ನು ಪತ್ತೆಹಚ್ಚಲಾಗಿದ್ದು, ನಾಳೆಯಿಂದ ರಾಜ್ಯಾದ್ಯಂತ ಕಟ್ಟುನಿಟ್ಟಿನ ತೆರವು ಕಾರ್ಯಾಚರಣೆ ಆರಂಭಿಸಲು ಸಜ್ಜಾಗಿದೆ. ರಾಜ್ಯಾದ್ಯಂತ ಒಟ್ಟು 239 ತಹಸೀಲ್ದಾರ್ ಗಳಿದ್ದು, ಪ್ರತಿಯೊಬ್ಬರು ತಮ್ಮ ವ್ಯಾಪ್ತಿಯಲ್ಲಿ ತಿಂಗಳಿಗೆ 10 ರಿಂದ 20 ಒತ್ತುವರಿ ಪ್ರಕರಣಗಳಲ್ಲಿ ತೆರವು ಕಾರ್ಯಾಚರಣೆ ಕೈಗೊಳ್ಳಬೇಕು. ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ವಾರಾಂತ್ಯದಲ್ಲಿ ಪ್ರಗತಿ…
ಚಿತ್ರದುರ್ಗ: ಆನ್ ಲೈನ್ ವಂಚನೆಯನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಹಗಲಿರುಳು ಶ್ರಮಿಸುತ್ತಿದೆ. ಹೀಗಿದ್ದರೂ ವಂಚಕರು ಮಾತ್ರ ದಿನಕ್ಕೊಂದು ದಾರಿ ಹಿಡಿದು, ಸೈಬರ್ ವಂಚನೆ ಎಸಗುತ್ತಿದ್ದಾರೆ. ಇದನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಿಂದ ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಎಚ್ಚರಿಕೆ ನೀಡಿದೆ. ಒಂದು ವೇಳೆ ಆ ನಿಯಮವನ್ನು ಮೀರಿದ್ರೆ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ. ಈ ಕುರಿತು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸೈಬರ್ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಬ್ಯಾಂಕ್ ಖಾತೆಗಳನ್ನು “ಡ್ಯೂಲ್” ಅಕೌಂಟ್ಗಳೆಂದು ಪರಿಗಣಿಸಿ ಖಾತೆದಾರರು ನೇರವಾಗಿ ಕೃತ್ಯದಲ್ಲಿ ಭಾಗಿಯಾಗಿರುವುದಾಗಿ ಭಾವಿಸಿ ಕಠಿಣ ಕ್ರಮ ಜರುಗಿಸಲು ಕೇಂದ್ರ ಸರ್ಕಾರದ “ಪೈನಾನ್ಸಿಯಲ್ ಇಂಟೆಲಿಜೆನ್ಸ್ ಯುನಿಟ್” ರವರು ಆದೇಶಿಸಿರುತ್ತಾರೆ ಎಂದಿದ್ದಾರೆ. ಕೆಲವರು ಅಲ್ಪ ಹಣದ ಆಸೆಯಿಂದ ಅಥವಾ ಅತಿಯಾದ ನಂಬಿಕೆಯಿಂದ ಅಥವಾ ತಿಳುವಳಿಕೆ ಕೊರತೆಯಿಂದ ತಮ್ಮ ಹೆಸರಿನಲ್ಲಿ ಬ್ಯಾಂಕ್ ಖಾತೆಯನ್ನು ತೆರೆದು ತಮ್ಮದಲ್ಲದ ಮೊಬೈಲ್ ನಂಬರ್ಗಳನ್ನು ಲಿಂಕ್ ಮಾಡಿಸಿ,…
ಬೆಂಗಳೂರು : ರಾಜ್ಯ ಸರ್ಕಾರವು ಅನರ್ಹ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್ ನೀಡಲು ಮುಂದಾಗಿದ್ದು, ಅನರ್ಹ ಬಿಪಿಎಲ್ ಕಾರ್ಡ್ ಸಿಕ್ಕಿಬಿದ್ದರೆ ದಂಡದ ಜೊತೆಗೆ ಕಾನೂನು ಕ್ರಮ ಎದುರಿಸಬೇಕು. ಹೌದು, ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹ ಫಲಾನುಭವಿಗಳನ್ನು ಗುರುತಿಸುವ ಕೆಲಸಕ್ಕೆ ಆಹಾರ ಇಲಾಖೆ ಮುಂದಾಗಿದೆ. ಈ ಮೂಲಕ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಡವ ಡವ ಶುರುವಾಗಿದೆ. ಸುಳ್ಳು ದಾಖಲೆ ನೀಡಿ ಬಿಪಿಎಲ್ ಕಾರ್ಡ್ ಪಡೆದಿದ್ದರೆ ಇದುವರೆಗೂ ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡೆದ ಅಕ್ಕಿ ಹಾಗೂ ಇತರೆ ಧಾನ್ಯಗಳ ಮೊತ್ತವನ್ನು ಮರಳಿಸಬೇಕು ಜೊತೆಗೆ ಕ್ರಿಮಿನಲ್ ಕೇಸ್ ಎದುರಸಬೇಕು. ರಾಜ್ಯದಲ್ಲಿ ಅಕ್ರಮ ದಾಖಲೆ ನೀಡಿ ಬಿಪಿಎಲ್ ಪಡಿತರ ಚೀಟಿ ಪಡೆದುಕೊಂಡಿರುವವರ ಪತ್ತೆಗೆ ಆಹಾರ ಇಲಾಖೆ ಮುಂದಾಗಿದ್ದು, ರಾಜ್ಯದಲ್ಲಿ 10,97,621 ಅಕ್ರಮ ಬಿಪಿಎಲ್ ಕಾರ್ಡ್ ಪತ್ತೆಯಾಗಿದ್ದು, ಈ ಪೈಕಿ 98,431 ಮಂದಿ ಆದಾಯ ತೆರಿಗೆ ಪಾವತಿದಾರರು, 10,04,716 ಮಂದಿ 1.20 ಲಕ್ಷ ರೂ.ಗಳ ಅಧಿಕ ಆದಾಯ ಹೊರಂದಿರುವವರು, 4,036 ಮಂದಿ…
ನವದೆಹಲಿ : ಕಂಗನಾ ರಣಾವತ್ ಅವರ ಮೊದಲ ನಿರ್ದೇಶನದ ಎಮರ್ಜೆನ್ಸಿ ಸಿನಿಮಾದಲ್ಲಿ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರವನ್ನು ನಿರ್ವಹಿಸಿದ್ದಾರೆ. ಸೆಪ್ಟೆಂಬರ್ 6 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಬೇಕಿದ್ದ ಚಿತ್ರ ಈಗ ಮುಂದೂಡಲ್ಪಟ್ಟಿದೆ. ಹೆಚ್ಚುತ್ತಿರುವ ವಿವಾದಗಳ ಮಧ್ಯೆ, ನಟಿ-ರಾಜಕಾರಣಿ ಕಂಗನಾ ರಣಾವತ್ ಅವರ ಚೊಚ್ಚಲ ನಿರ್ದೇಶನದ ಮುಂಬರುವ ಜೀವನಚರಿತ್ರೆ ರಾಜಕೀಯ ಸಿನಿಮಾ “ಎಮರ್ಜೆನ್ಸಿ” ಬಿಡುಗಡೆಯನ್ನು ಮುಂದೂಡಲಾಗಿದೆ ಎಂದು ಮೂಲಗಳು ತಿಳಿಸಿವೆ. ವಿಶ್ಲೇಷಕ ತರಣ್ ಆದರ್ಶ್ ಅವರು ಚಿತ್ರದ ಬಿಡುಗಡೆಯನ್ನು ಮುಂದೂಡಲಾಗಿದೆ ಎಂಬ ಸುದ್ದಿಯನ್ನು ಎಕ್ಸ್ (ಹಿಂದೆ ಟ್ವಿಟರ್) ನಲ್ಲಿ ಹಂಚಿಕೊಂಡಿದ್ದಾರೆ. “#BreakingNews…#Emergency ಮುಂದೂಡಲಾಗಿದೆ… ಸೆಪ್ಟೆಂಬರ್ 6, 2024 ರಂದು ಬಿಡುಗಡೆಯಾಗುವುದಿಲ್ಲ. ಚಿತ್ರದ ಬಿಡುಗಡೆಯನ್ನು ಮುಂದೂಡುವ ಬಗ್ಗೆ ಕಂಗನಾ ಇನ್ನೂ ಹೇಳಿಕೆಯನ್ನು ಹಂಚಿಕೊಂಡಿಲ್ಲ, ನಿರ್ಮಾಣ ಸಂಸ್ಥೆ ಜೀ ಸ್ಟುಡಿಯೋಸ್ ಕೂಡ. ಕಂಗನಾ ಅವರ ನಿರ್ಮಾಣ ಸಂಸ್ಥೆ ಮಣಿಕರ್ಣಿಕಾ ಫಿಲ್ಮ್ಸ್ ಕೂಡ ಯಾವುದೇ ಹೇಳಿಕೆ ನೀಡಿಲ್ಲ ಎಂದು ಬರೆದುಕೊಂಡಿದ್ದಾರೆ.
ಪುಣೆ : ಮಹಾರಾಷ್ಟ್ರದ ಎನ್ಸಿಪಿಯ ಮಾಜಿ ಕಾರ್ಪೊರೇಟರ್ ವನರಾಜ್ ಅಂಡೇಕರ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ. ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಜನನಿಬಿಡ ನಾನಾ ಪೇತ್ ಪ್ರದೇಶದಲ್ಲಿ ವನರಾಜ್ ಅಂಡೇಕರ್ ಮೇಲೆ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಪುಣೆ ಮುನ್ಸಿಪಲ್ ಕಾರ್ಪೊರೇಷನ್ (ಪಿಎಂಸಿ) ಎರಡು ದಿನಗಳ ಹಿಂದೆ ಅದೇ ಪ್ರದೇಶದಲ್ಲಿನ ತಮ್ಮ ಅಂಗಡಿಯ ವಿರುದ್ಧ ನಡೆಸಿದ ಅತಿಕ್ರಮಣ ವಿರೋಧಿ ಕ್ರಮದ ಬಗ್ಗೆ ವಿರುದ್ಧ ದ್ವೇಷವನ್ನು ಹೊಂದಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ” ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಪ್ರವೀಣ್ ಪಾಟೀಲ್ ತಿಳಿಸಿದರು. ಪರಾರಿಯಾಗಿರುವ ದಾಳಿಕೋರರನ್ನು ಪೊಲೀಸರು ಇನ್ನೂ ಪತ್ತೆಹಚ್ಚಿ ಬಂಧಿಸಿಲ್ಲ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ವಶಪಡಿಸಿಕೊಂಡಿದ್ದು, ದಾಳಿಕೋರರು ನಾಲ್ಕು ದ್ವಿಚಕ್ರ ವಾಹನಗಳಲ್ಲಿ ಸ್ಥಳಕ್ಕೆ ತಲುಪಿ ದಾಳಿ ನಡೆಸುವುದನ್ನು ಸೆರೆಹಿಡಿದಿದ್ದಾರೆ. ಈ ಘಟನೆಯಿಂದ ಈ ಪ್ರದೇಶದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.