Author: kannadanewsnow57

ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ರಾಯಚೂರು, ಬಳ್ಳಾರಿ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ನಾಳೆ ಭಾರೀಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಕಲಬುರಗಿ ಕಲಬುರಗಿಯಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು ಜಿಲ್ಲೆಯ ಎಲ್ಲ ಶಾಲೆ ಕಾಲೇಜುಗಳಿಗೆ ಜಿಲ್ಲಾಡಳಿತ ಸೆಪ್ಟೆಂಬರ್ 2 ರ ಇಂದು ರಜೆ ಘೋಷಿಸಿದೆ. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಗೂ ಮಕ್ಕಳಿಗೆ ಶಾಲೆಗೆ ಹಾಜರಾಗಲು ಅನನುಕೂಲ…

Read More

ಮಂಗಳೂರು : ರಾಜ್ಯದಲ್ಲಿ ಇನ್ಮುಂದೆ ವೈದ್ಯರು ಕನ್ನಡದೇ ಔಷಧಿ ಚೀಟಿಯನ್ನು ಬರೆಯಲು ಆದೇಶ ನೀಡಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆ ವೈದ್ಯರು ಔಷಧ ಚೀಟಿಯನ್ನು ಕನ್ನಡದಲ್ಲೇ ಬರೆಯಲು ರಾಜ್ಯಾದ್ಯಂತ ಆದೇಶ ಹೊರಡಿಸಲಾಗುವುದು. ವೈದ್ಯರಿಗೆ ಕನ್ನಡದಲ್ಲಿ ಔಷಧ ಚೀಟಿ ಬರೆಯಲು ಬರದಿದ್ದರೆ, ಪ್ರಾಧಿಕಾರಿಂದ ಕಲಿಕಾ ಕೇಂದ್ರ ಆರಂಭಿಸುತ್ತೇವೆ ಎಂದು ಹೇಳಿದ್ದಾರೆ. ಈಗಾಗಲೇ ರಾಯಚೂರಿನಲ್ಲಿ ಸರ್ಕಾರಿ ಆಸ್ಪತ್ರೆ ವೈದ್ಯರು ಔಷಧ ಚೀಟಿಯನ್ನು ಕನ್ನಡದಲ್ಲೇ ಬರೆಯಲು ಆದೇಶ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಒಂದು ಕಡೆ ಶುರುವಾದರೆ ತನ್ನಷ್ಟಕ್ಕೆ ವಿಸ್ತರಣೆಯಾಗುತ್ತದೆ ಎಂದು ತಿಳಿಸಿದ್ದಾರೆ.

Read More

ಚಿಕ್ಕಮಗಳೂರು : ಎನ್ ಆರ್ ಐ ವೈದ್ಯೆ ಮೇಲೆ ಅತ್ಯಾಚಾರ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಯೋಗ ಗುರು ಪ್ರದೀಪ್ ನನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮಲ್ಲೇನಹಳ್ಳಿಯಲ್ಲಿರುವ ಕೇವಲ ಆಶ್ರಮದಲ್ಲಿ ತಮ್ಮ ಮೇಲೆ ಅತ್ಯಾಚಾರ ನಡೆದಿದೆ ಎಂದು ಆರೋಪಿಸಿ ಎನ್ ಆರ್ ವೈದ್ಯೆಯೊಬ್ಬರು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದು, ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಯೋಗಗುರು ಪ್ರದೀಪ್ ನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. 3 ತಿಂಗಳ ಹಿಂದೆ ಆಶ್ರಮಕ್ಕೆ ಯೋಗ, ಧ್ಯಾನ ಕಲಿಯಲು ಬಂದಿದ್ದ ಅಮೆರಿಕ ಪೌರತ್ವ ಪಡೆದಿರುವ ಪಂಜಾಬ್ ಮೂಲದ ಮಹಿಳಾ ವೈದ್ಯೆ ಮೇಲೆ ಪ್ರದೀಪ್ ಅತ್ಯಾಚಾರ ನಡೆಸಲಾಗಿದ್ದು, ಅತ್ಯಾಚಾರ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Read More

ಮಂಗಳೂರು : ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದ್ದು, ಮಹಿಳೆಯೊಬ್ಬರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 47 ವರ್ಷದ ಮಹಿಳೆ ತಮ್ಮ ಮೇಲೆ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದು, ದೂರಿನಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್​ನಲ್ಲಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. 2023 ಜೂನ್​ನಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್​ನಲ್ಲಿ ಲೈಂಗಿಕ ದೌರ್ಜನ್ಯವೆಸಗಿ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿರುವ ದಕ್ಷಿಣ ಕನ್ನಡ ಮಹಿಳಾ ಠಾಣೆಯಲ್ಲಿ ಐಪಿಸಿ 417, 354A, 506 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Read More

ಬೆಂಗಳೂರು : 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳ ಫಲಿತಾಂಶ ವೃದ್ಧಿಗಾಗಿ ಅನುಸರಿಸಬೇಕಾದ ಕ್ರಮಗಳ ಕುರಿತು ರಾಜ್ಯ ಸರ್ಕಾರ ಮಹತ್ವದ ಸುತ್ತೋಲೆ ಹೊರಡಿಸಿದೆ. 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳ ಶೈಕ್ಷಣಿಕ ಫಲಿತಾಂಶ ವೃದ್ಧಿಗಾಗಿ ಉಲ್ಲೇಖಿತ ಸಭೆಗಳಲ್ಲಿ ಈಗಾಗಲೇ ಮಾಹಿತಿ | ಸೂಚನೆಗಳನ್ನು ನೀಡಲಾಗಿದ್ದು, ಜಿಲ್ಲೆಯಲ್ಲಿನ ವಿವಿಧ ಹಂತದ ಅಧಿಕಾರಿಗಳು ಈ ಮುಂದಿನಂತೆ ಕಾರ್ಯನಿರ್ವಹಿಸುವುದು. 1. ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ವಾರ್ಷಿಕ ಪರೀಕ್ಷೆಯ ಪಠ್ಯವಸ್ತುವನ್ನು ಶೈಕ್ಷಣಿಕ ಮಾರ್ಗದರ್ಶಿಯಂತೆ ಡಿಸೆಂಬರ್ 2024 ರ ಅಂತ್ಯದೊಳಗೆ ಪೂರ್ಣಗೊಳಿಸಲು ಕ್ರಮವಹಿಸುವುದು. 2. ಪ್ರತಿದಿನ ಶಾಲೆ / ಕಾಲೇಜು ಅವಧಿಯ ಮೊದಲು ಅಥವಾ ನಂತರ ಒಂದು ವಿಷಯಕ್ಕೆ ವಿಶೇಷ ತರಗತಿಯನ್ನು ಆಯೋಜಿಸುವುದು. 3. ಘಟಕ ಪರೀಕ್ಷೆಗಳನ್ನು ನಡೆಸಿ ಮೌಲ್ಯಮಾಪನ ಮಾಡಿ ವಿದ್ಯಾರ್ಥಿಗಳ ಪ್ರಗತಿಯನ್ನು ವಿಶ್ಲೇಷಿಸುವುದು ಹಾಗೂ ವೆಬ್ ಕಾಸ್ಟಿಂಗ್ ವ್ಯವಸ್ಥೆ ಲಭ್ಯವಿರುವ ಶಾಲೆ/ಕಾಲೇಜುಗಳಲ್ಲಿ ಎಲ್ಲಾ ಘಟಕ ಪರೀಕ್ಷೆಗಳನ್ನು ವೆಬ್ ಕಾಸ್ಟಿಂಗ್ ವೀಕ್ಷಣೆಯಲ್ಲಿ ನಡೆಸುವುದು. 4. ನಿಧಾನಗತಿ ಕಲಿಕಾ ಲಕ್ಷಣಗಳಿರುವ ವಿದ್ಯಾರ್ಥಿಗಳ…

Read More

ಬೆಂಗಳೂರು : ಆಸ್ತಿ ಖರೀದಿ, ಮಾರಾಟಗಾರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಎನಿವೇರ್ ಆಸ್ತಿ ನೋಂದಣಿ ಯೋಜನೆಯನ್ನು ಸೆಪ್ಟೆಂಬರ್ 02 ರ ಇಂದಿನಿಂದ ಜಾರಿಗೆ ತರಲಾಗಿದ್ದು, ಈ ಮೂಲಕ ಎನಿವೇರ್ ನೋಂದಣಿ ವ್ಯವಸ್ಥೆಯ ಅಡಿ ಯಾವುದೇ ವ್ಯಕ್ತಿಯು ನೋಂದಣಿ ದಸ್ತಾವೇಜನ್ನು ಜಿಲ್ಲೆಯ ವ್ಯಾಪ್ತಿಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ರಾಜ್ಯ ವಿಧಾನಸಭೆಯ ಅಂದಾಜು ಸಮಿತಿಯು ನೋಂದಣಿ ಇಲಾಖೆ ನೀಡುವ ‘ಎನಿವೇರ್ ನೋಂದಣಿ’ ಸೇವೆಯನ್ನು ರಾಜ್ಯ ಮಟ್ಟದ ಕಾರ್ಯವಿಧಾನವಾಗಿ ವಿಸ್ತರಿಸುವುದಕ್ಕೆ ಮುಂದಾಗಿದೆ. ಸಾರ್ವಜನಿಕರು ಸ್ಥಿರಾಸ್ತಿ ನೋಂದಣಿಗಾಗಿ ನಿರ್ದಿಷ್ಟ ಉಪ ನೋಂದಣಿ ಕಚೇರಿಗೆ ಭೇಟಿ ನೀಡದೇ, ಮತ್ತಾವುದೇ ಸಬ್‌ ರಿಜಿಸ್ಟ್ರಾರ್‌ ಕಚೇರಿಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಬಹುದಾದ ‘ಎನಿವೇರ್‌ ನೋಂದಣಿ’ ವ್ಯವಸ್ಥೆ ಸೆಪ್ಟೆಂಬರ್‌ 2 ರಿಂದ ರಾಜಾದ್ಯಂತ ಜಾರಿಯಾಗಲಿದೆ. ಎನಿವೇರ್ ನೋಂದಣಿ ವ್ಯವಸ್ಥೆಯ ಅಡಿ ಯಾವುದೇ ವ್ಯಕ್ತಿಯು ನೋಂದಣಿ ದಸ್ತಾವೇಜನ್ನು ಜಿಲ್ಲೆಯ ವ್ಯಾಪ್ತಿಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ‘ ಎನಿವೇರ್‌ ನೋಂದಣಿ ‘ ವ್ಯವಸ್ಥೆಯಿಂದ ಸಾರ್ವಜನಿಕರಿಗೆ ಬಹು ಕಚೇರಿ ಆಯ್ಕೆ ಸಿಗಲಿದ್ದು, ಒಂದೇ ಕಚೇರಿಯನ್ನು…

Read More

ಬೆಂಗಳೂರು : ಅಕ್ರಮ-ಸಕ್ರಮದಡಿ ಜಮೀನು ಹೊಂದಿರುವ ರಾಜ್ಯದ ರೈತರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಇಂದಿನಿಂದ 1-5 ನಮೂನೆ ಪೋಡಿ ದುರಸ್ಥಿ ಕಾರ್ಯವನ್ನು ಅಭಿಯಾನ ಮಾದರಿಯಲ್ಲಿ ರಾಜ್ಯಾದ್ಯಂತ ಜಾರಿಗೊಳಿಸಲಿದೆ. ಈ ಕುರಿತು ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ರಾಜ್ಯದಲ್ಲಿ ಸುಮಾರು 10 ಲಕ್ಷ ರೈತರಿಗೆ ಹತ್ತಾರು ವರ್ಷಗಳ ಹಿಂದೆ ಸರ್ಕಾರಿ ಜಮೀನು ಅಕ್ರಮ ಸಕ್ರಮದಡಿ ಮಂಜೂರಾಗಿದ್ದರೂ ಸಹ, ಪೋಡಿ ದುರಸ್ಥಿ ಆಗದೆ ಬಾಕಿ ಉಳಿದಿದೆ. ಲಕ್ಷಾಂತರ ರೈತರು ಅನೇಕ ವರ್ಷಗಳಿಂದ ಪ್ರಯತ್ನ ಮಾಡುತ್ತಿದ್ದರೂ ಸಹ, ಕೆಲವೇ ಕೆಲವರಿಗೆ ಮಾತ್ರ ಪೋಡಿ ದುರಸ್ಥಿಯಾಗಿದ್ದು ಬಹುತೇಕರಿಗೆ ಆಗಿರುವುದಿಲ್ಲ. ಇದರಿಂದಾಗಿ ಹಲವು ರೈತರು ತೀವ್ರ ತೊಂದರೆಗೆ ಸಿಲುಕಿದ್ದು, ಅಧಿಕಾರಿಗಳು ಸೆಪ್ಟೆಂಬರ್‌ 2 ರಿಂದ ಅಭಿಯಾನ ಮಾದರಿಯಲ್ಲಿ 1-5 ನಮೂನೆ ಪೋಡಿ ದುರಸ್ಥಿ ಕೆಲಸಕ್ಕೆ ಮುಂದಾಗಬೇಕು, ರೈತರ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು” ಎಂದು ಹೇಳಿದ್ದಾರೆ. ಮುಂದುವರೆದು, “ಜಮೀನು ಮಂಜೂರಾಗಿದ್ದರೂ ಪೋಡಿಯಾಗಿ ಆರ್.ಟಿ.ಸಿ ಆಗದೆ ಇರುವುದರಿಂದ,…

Read More

ಬೆಂಗಳೂರು : ಪಡಿತರ ಚೀಟಿಯಲ್ಲಿ ತಿದ್ದುಪಡಿಗೆ ಅರ್ಜಿ ಸಲ್ಲಿಸಿದವರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದ್ದವರ ಪಟ್ಟಿ ಬಿಡುಗಡೆಯಾಗಿದ್ದು, ಅರ್ಜಿ ಸಲ್ಲಿಸಿದವರು ಅಧಿಕೃತ ವೆಬ್‌ ಸೈಟ್‌ ಭೇಟಿ ನೀಡುವ ಮೂಲಕ ನಿಮ್ಮ ಹೆಸರನ್ನು ಪರಿಶೀಲನೆ ಮಾಡಿಕೊಳ್ಳಬಹುದು. ಕರ್ನಾಟಕ ಪಡಿತರ ಚೀಟಿಯ ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸಲು ನೀವು ಈ ಕೆಳಗಿನ ಸರಳ ಹಂತಗಳನ್ನು ಅನುಸರಿಸಬೇಕು:- ಮೊದಲಿಗೆ, ಇಲ್ಲಿ ನೀಡಲಾದ ಅಧಿಕೃತ ವೆಬ್ಸೈಟ್  https://ahara.kar.nic.in/Home/EServices  ಗೆ ಭೇಟಿ ನೀಡಿ ಮೆನು ಪಟ್ಟಿಯಿಂದ, “e-Services” ಟ್ಯಾಬ್ ಮೇಲೆ ಕ್ಲಿಕ್ ಮಾಡಿ. “e-Ration card” ಲಿಂಕ್ ಮೇಲೆ ಕ್ಲಿಕ್ ಮಾಡಿ. “Village list” ಟ್ಯಾಬ್ ಮೇಲೆ ಕ್ಲಿಕ್ ಮಾಡಿ. ಈ ಕೆಳಗಿನ ಮಾಹಿತಿಯನ್ನು ಆಯ್ಕೆಮಾಡಿ- ಜಿಲ್ಲೆ ತಾಲ್ಲೂಕು ಗ್ರಾಮ ಪಂಚಾಯತ್ ಗ್ರಾಮ “ಗೋ” ಬಟನ್ ಕ್ಲಿಕ್ ಮಾಡಿ. ಪಡಿತರ ಚೀಟಿದಾರರ ಪಟ್ಟಿಯನ್ನು ನಿಮ್ಮ ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.

Read More

ನಾಗ್ಪುರ : ಮಹಾರಾಷ್ಟ್ರದ ನಾಗ್ಪುರದಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಈ ವಿಮಾನದಲ್ಲಿ ಬಾಂಬ್ ಇದೆ ಎಂಬ ಸುದ್ದಿ ಇಡೀ ವಿಮಾನ ನಿಲ್ದಾಣದಲ್ಲಿ ತಲ್ಲಣ ಮೂಡಿಸಿತ್ತು. ವಿಮಾನದ ಶೌಚಾಲಯದಲ್ಲಿ ಬಾಂಬ್ ಎಚ್ಚರಿಕೆ ಬರೆದಿರುವುದನ್ನು ಕಂಡು ಪ್ರಯಾಣಿಕರು ಬೆಚ್ಚಿಬಿದ್ದರು. ಪೈಲಟ್ ಹೇಗೋ ನಾಗ್ಪುರ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಇಳಿಸಿದರು. ವಿಮಾನ ಲ್ಯಾಂಡ್ ಆದ ಕೂಡಲೇ ಪ್ರಯಾಣಿಕರನ್ನು ಕೆಳಗಿಳಿಸಲಾಯಿತು. ಬಾಂಬ್‌ನ ಬಗ್ಗೆ ಮಾಹಿತಿ ಬಂದ ತಕ್ಷಣ ಬಾಂಬ್ ಸ್ಕ್ವಾಡ್, ಶ್ವಾನ ದಳ, ಆಂಬುಲೆನ್ಸ್, ಅಗ್ನಿಶಾಮಕ ದಳ ಸೇರಿದಂತೆ ಎಲ್ಲಾ ಭದ್ರತಾ ಸಂಸ್ಥೆಗಳು ನಾಗ್ಪುರ ವಿಮಾನ ನಿಲ್ದಾಣವನ್ನು ತಲುಪಿದವು. ವಿಮಾನದ ಬಗ್ಗೆ ತನಿಖೆ ನಡೆಸಲಾಗುತ್ತಿದೆ, ಆದರೆ ವಿಮಾನದಲ್ಲಿ ಬಾಂಬ್ ಇದೆ ಎಂಬ ಸುದ್ದಿ ಇನ್ನೂ ದೃಢಪಟ್ಟಿಲ್ಲ. ಇಂದು ಬೆಳಿಗ್ಗೆ ಜಬಲ್‌ಪುರದಿಂದ ಹೈದರಾಬಾದ್‌ಗೆ ವಿಮಾನವು ಹೊರಟಿತ್ತು. ವಿಮಾನದಲ್ಲಿ 69 ಪ್ರಯಾಣಿಕರು ಮತ್ತು 4 ಕ್ಯಾಬಿನ್ ಸಿಬ್ಬಂದಿ ಇದ್ದರು. ಇಂಡಿಗೋ ಏರ್‌ಲೈನ್ಸ್ ಫ್ಲೈಟ್ 6E-7308 ಇಂದು ಬೆಳಿಗ್ಗೆ 8 ಗಂಟೆಗೆ ಮಧ್ಯಪ್ರದೇಶದ ಜಬಲ್‌ಪುರ ವಿಮಾನ ನಿಲ್ದಾಣದಿಂದ ಹೊರಟಿದೆ.…

Read More

ನವದೆಹಲಿ : ವಿಶ್ವಸಂಸ್ಥೆಯ ಮಕ್ಕಳ ನಿಧಿ (ಯುನಿಸೆಫ್) ವಿವಿಧ ದೇಶಗಳಲ್ಲಿ ಮಂಗನ ಕಾಯಿಲೆಯಿಂದ ಹದಗೆಡುತ್ತಿರುವ ಪರಿಸ್ಥಿತಿಯ ಬಗ್ಗೆ ಎಚ್ಚರಿಕೆ ವಹಿಸಿದೆ. ಮಂಗನ ಕಾಯಿಲೆಯಿಂದ ರಕ್ಷಣೆಗಾಗಿ ಯುನಿಸೆಫ್ ತುರ್ತು ಟೆಂಡರ್ ನೀಡಿದೆ. ಯುನಿಸೆಫ್, ಗವಿ ಲಸಿಕೆ ಒಕ್ಕೂಟ, ಆಫ್ರಿಕಾ ಸಿಡಿಸಿ ಮತ್ತು ವಿಶ್ವ ಆರೋಗ್ಯ ಸಂಸ್ಥೆಯ ಸಹಯೋಗದೊಂದಿಗೆ, ಬಿಕ್ಕಟ್ಟಿನ ಪೀಡಿತ ದೇಶಗಳಿಗೆ mPox ಲಸಿಕೆಗಳನ್ನು ಸುರಕ್ಷಿತಗೊಳಿಸಲು ಈ ತುರ್ತು ಟೆಂಡರ್ ಅನ್ನು ನೀಡಿದೆ. ತಯಾರಕರ ಉತ್ಪಾದನಾ ಸಾಮರ್ಥ್ಯವನ್ನು ಅವಲಂಬಿಸಿ, 2025 ರ ವೇಳೆಗೆ 12 ಮಿಲಿಯನ್ ಲಸಿಕೆಗಳನ್ನು ಉತ್ಪಾದಿಸಲು ಒಪ್ಪಂದಗಳನ್ನು ತಲುಪಬಹುದು ಎಂದು ಸಂಸ್ಥೆಗಳು ಜಂಟಿ ಹೇಳಿಕೆಯಲ್ಲಿ ತಿಳಿಸಿವೆ. UNICEF ಟೆಂಡರ್ ಅಡಿಯಲ್ಲಿ ಲಸಿಕೆ ತಯಾರಕರೊಂದಿಗೆ ಷರತ್ತುಬದ್ಧ ಪೂರೈಕೆ ಒಪ್ಪಂದಗಳನ್ನು ಸ್ಥಾಪಿಸುತ್ತದೆ. ಹಣಕಾಸು, ಬೇಡಿಕೆ, ಸನ್ನದ್ಧತೆ ಮತ್ತು ನಿಯಂತ್ರಕ ಅವಶ್ಯಕತೆಗಳನ್ನು ದೃಢಪಡಿಸಿದ ನಂತರ ವಿಳಂಬವಿಲ್ಲದೆ ಲಸಿಕೆಗಳನ್ನು ಖರೀದಿಸಲು ಮತ್ತು ಸಾಗಿಸಲು ಇದು UNICEF ಗೆ ಅನುವು ಮಾಡಿಕೊಡುತ್ತದೆ. ಇದು ವ್ಯಾಕ್ಸಿನ್ ಅಲೈಯನ್ಸ್ ಮತ್ತು ಪ್ಯಾನ್ ಅಮೇರಿಕನ್ ಹೆಲ್ತ್ ಆರ್ಗನೈಸೇಶನ್ ಜೊತೆಗೆ ಗವಿ, ಆಫ್ರಿಕಾ…

Read More