Author: kannadanewsnow57

ಬೆಳಗಾವಿ ಸುವರ್ಣವಿಧಾನಸೌಧ : ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಲ್ಲಿ ಮಂಜೂರಾದ ಹುದ್ದೆಗಳಲ್ಲಿ ಶೇ.80ರವರೆಗೆ ಹುದ್ದೆಗಳ ನೇಮಕಾತಿಯನ್ನು ಆಡಳಿತ ಇಲಾಖೆಗಳ ಹಂತದಲ್ಲಿಯೇ ನಿಯಮಾನುಸಾರ ಭರ್ತಿ ಮಾಡಿಕೊಳ್ಳಲು ಇಲಾಖಾ ಕಾರ್ಯದರ್ಶಿಗಳಿಗೆ ತಿಳಿಸಲಾಗಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹೇಳಿದರು. ಮೇಲ್ಮನೆಯಲ್ಲಿ ಡಿ.11ರಂದು ಪ್ರಶ್ನೋತ್ತರ ವೇಳೆ ಸದಸ್ಯರಾದ ಡಾ.ಧನಂಜಯ ಸರ್ಜಿ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರದ (ಕಾರ್ಯಕಲಾಪಗಳ ನಿರ್ವಹಣೆ) ನಿಯಮಗಳು 1977ರ ನಿಯಮ 42ರಲ್ಲಿ ರಾಜ್ಯದ ಹಣಕಾಸಿನ ಮೇಲೆ ಪರಿಣಾಮ ಉಂಟು ಮಾಡುವಂತಹ ವಿಶೇಷವಾಗಿ ಯಾವುದೇ ಹುದ್ದೆಯನ್ನು ಸಾರ್ವಜನಿಕ ಹುದ್ದೆಗೆ ಸೇರಿಸುವ ಅಥವಾ ಸಾರ್ವಜನಿಕ ಸೇವೆಯಿಂದ ರದ್ದುಪಡಿಸುವ ಅಥವಾ ಯಾವುದೇ ಹುದ್ದೆಯ ಅವಧಿಯನ್ನು ಅಥವಾ ಉಪಲಬ್ದಗಳನ್ನು ವ್ಯತ್ಯಾಸ ಮಾಡುವ ಪ್ರಸ್ತಾವನೆಗಳಿಗೆ ಆರ್ಥಿಕ ಇಲಾಖೆಯ ಅನುಮತಿ ಪಡೆಯಲು ತಿಳಿಸಲಾಗಿರುತ್ತದೆ. ಆದ್ದರಿಂದ ಹುದ್ದೆಗಳ ಸೃಜನ ಅಥವಾ ಹುದ್ದೆಗಳ ಸಂಖ್ಯೆಯನ್ನು ಒಳಗೊಂಡ ಪ್ರಸ್ತಾವನೆ, ಯೋಜನೆಗಳ ಕುರಿತು ಆದೇಶಗಳನ್ನು ಹೊರಡಿಸುವ ಪೂರ್ವದಲ್ಲಿ ಆರ್ಥಿಕ ಇಲಾಖೆಯ ಸಹಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಆರ್ಥಿಕ ಇಲಾಖೆಯ ಪೂರ್ವಾನುಮತಿಯನ್ನು ಪಡೆಯದೇ ಆಡಳಿತ ಇಲಾಖೆಗಳು ಹುದ್ದೆಗಳನ್ನು…

Read More

ರಾಜ್ಯ ಸರಕಾರಿ ನೌಕರರಿಗೆ ನಗದು ರಹಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಗಾಗಿ ರಾಜ್ಯ ಸರಕಾರ ಜಾರಿಗೊಳಿಸಿರುವ ಆರೋಗ್ಯ ಸಂಜೀವಿನಿ ಯೋಜನೆಗೆ ಧಾರವಾಡ ಜಿಲ್ಲೆಯಲ್ಲಿ 16 ಆಸ್ಪತ್ರೆಗಳು ಸೇರ್ಪಡೆಯಾಗಿದ್ದು, ಹುಬ್ಬಳ್ಳಿ ಹಾಗೂ ಧಾರವಾಡದ ತಲಾ ಒಂದು ಆಸ್ಪತ್ರೆಗಳು ಯೋಜನೆಗೆ ಒಳಪಡಲು ಒಪ್ಪಿಗೆ ಸೂಚಿಸಿದ್ದು, ಸರ್ಕಾರದೊಂದಿಗೆ ಎಂಓಯು ಹಂತದಲ್ಲಿದೆ. ಹುಬ್ಬಳ್ಳಿ ಧಾರವಾಡ ಅವಳಿ ನಗರದ ಪ್ರಮುಖ ನರ್ಸಿಂಗ್ ಆಸ್ಪತ್ರೆಗಳು ಈ ಯೋಜನೆಗೆ ಸ್ವಯಂ ಪ್ರೇರಣೆಯಿಂದ ಒಳಪಡಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮನವಿ ಮಾಡಿದರು. ಅವರು (ಡಿ.10) ದಿನ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಕೆಪಿಎಂಇ ಕಾನೂನುನಡಿ ನೋಂದಾಯಿತರಾಗಿರುವ ಹುಬ್ಬಳ್ಳಿ ಧಾರವಾಡ ಅವಳಿ ನಗರದ ಪ್ರಮುಖ ಆಸ್ಪತ್ರೆಗಳ ವೈದ್ಯರ ಹಾಗೂ ಮುಖ್ಯಸ್ಥರ, ಪ್ರತಿನಿಧಿಗಳ ಸಭೆ ಜರುಗಿಸಿ, ಮಾತನಾಡಿದರು. ಜಿಲ್ಲೆಯಲ್ಲಿರುವ ಸುಮಾರು 23 ಲಕ್ಷ ಜನರಿಗೆ ಸರ್ಕಾರದ ವಿವಿಧ ಯೋಜನೆ, ಕಾಮಗಾರಿ, ಕಾರ್ಯಕ್ರಮಗಳ ಸೇವೆ ನೀಡಲು ವಿವಿಧ ಹಂತದಲ್ಲಿ ಅಂದಾಜು 22 ರಿಂದ 23 ಸಾವಿರ ಸರ್ಕಾರಿ ನೌಕರರಿದ್ದಾರೆ. ಅವರ ಮಾನಸಿಕ, ದೈಹಿಕ ಆರೋಗ್ಯವು ಉತ್ತಮ…

Read More

ಧಾರವಾಡ : ಕಳೆದ ಕೆಲವು ತಿಂಗಳುಗಳ ಹಿಂದೆ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಜನೌಷಧಿ ಕೇಂದ್ರವನ್ನು ಬಂದ್‌ ಮಾಡುವ ನಿರ್ಧಾರ ಕೈಗೊಂಡಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹಿನ್ನಡೆಯಾಗಿದೆ. ರಾಜ್ಯ ಸರ್ಕಾರ ಆದೇಶವನ್ನು ಧಾರವಾಡ ಹೈಕೋರ್ಟ್ ಪೀಠ ರದ್ದುಗೊಳಿಸಿ ಮಹತ್ವದ ಆದೇಶ ಪ್ರಕಟಿಸಿದೆ.ಈ ಪ್ರಕರಣ ನ್ಯಾಯಾಲಯಕ್ಕೆ ಬಾರಬಾರದಿತ್ತು. ಜನೌಷಧಿ ಅಂಗಡಿ ಇಡಲು ಅವಕಾಶ ಕೊಡದೇ ಇದ್ದರೆ ಜನರ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ಕಾಣುತ್ತದೆ ಎಂದು ಅಭಿಪ್ರಾಯಪಟ್ಟು ಸರ್ಕಾರದ ಆದೇಶವನ್ನು ರದ್ದು ಮಾಡಿದೆ. ಜನೌಷಧಿ ಅಂಗಡಿಯವರ ಲೀಸ್ ತಿಂಗಳು ಮುಗಿದ ಹಿನ್ನೆಲೆ ಅವರಿಗೆ ಸರ್ಕಾರಿ ಆಸ್ಪತ್ರೆ ಆವರಣದಿಂದ ಹೊರಗೆ ಔಷಧಿ ಅಂಗಡಿ ಇಡಲು ಸೂಚಿಸಲಾಗಿದೆ ಎಂದು ಸರ್ಕಾರಿ ವಕೀಲರು ವಾದಿಸಿದ್ದರು. ಜನೌಷಧಿ ಅಂಗಡಿಯಲ್ಲಿ ಕಡಿಮೆ ಬೆಲೆಗೆ ಹಣ ಪಾವತಿಸಿ ಔಷಧಿ ತೆಗೆದುಕೊಳ್ಳುತ್ತಾರೆ. ಹೀಗಾಗಿ ಈ ಆದೇಶವನ್ನು ರದ್ದುಗೊಳಿಸಬೇಕು ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದರು. ಎರಡು ಕಡೆಯ ವಾದ ಆಲಿಸಿದ ನ್ಯಾಯಾಲಯ, 120 ಚದರ ಅಡಿ ಜಾಗದಲ್ಲಿ ಜನೌಷಧಿ ಇಟ್ಟು ಬಡವರಿಗೆ…

Read More

ಬೆಂಗಳೂರು : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಆಂಟಿ ರೇಬೀಸ್ ವ್ಯಾಕ್ಸಿನ್ (ARV) ಮತ್ತು ರೇಬೀಸ್ ಇಮ್ಯುನೊಗ್ಲಾಬ್ಯುಲಿನ್ (RIG) ಉಚಿತವಾಗಿ ಒದಗಿಸುವುದಕ್ಕಾಗಿ ಪರಿಷ್ಕೃತ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ. ಪ್ರಾಣಿ ಕಡಿತದ ಪ್ರಕರಣಗಳಿಗೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಅಂಟಿ ರೇಬೀಸ್ ಲಸಿಕೆ (ARV) ಮತ್ತು Equine ರೇಬೀಸ್ ಇಮ್ಯುನೊಗ್ಲಾಬ್ಯುಲಿನ್ (ERIG) ಒದಗಿಸುವ ಬಗ್ಗೆ ಹಿಂದಿನ ಸುತ್ತೋಲೆಯನ್ನು ಉಲ್ಲೇಖಿಸಿ, ಈ ಅಗತ್ಯ ಚಿಕಿತ್ಸೆಗಳ ಲಭ್ಯತೆಯನ್ನು ಸುಗಮಗೊಳಿಸಲು ಈ ಕೆಳಗಿನ ಪರಿಷ್ಕೃತ ಮಾರ್ಗಸೂಚಿಗಳನ್ನು ನೀಡಲಾಗಿದೆ. ಪ್ರಾಣಿ ಕಡಿತದ ಪ್ರಕರಣಗಳಿಗೆ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಉಚಿತ ರೇಬೀಸ್ ವಿರೋಧಿ ಲಸಿಕೆ (ARV) ಮತ್ತು Equine ರೇಬೀಸ್ ಇಮ್ಯುನೊಗ್ಲಾಬ್ಯುಲಿನ್ (ERIG) ಒದಗಿಸುವ ಕುರಿತು 30.11.2024 ರಂದು ಹೊರಡಿಸಲಾದ ಅದೇ ಸಮ ಸಂಖ್ಯೆಯ ಹಿಂದಿನ ಸುತ್ತೋಲೆಯನ್ನು ಉಲ್ಲೇಖಿಸಿ, 2025 ರ 07.11.2025 ರ ರಿಟ್ ಅರ್ಜಿ (ಸಿವಿಲ್) ಸಂಖ್ಯೆ (ಗಳು) 5 ರಲ್ಲಿ ಭಾರತದ ಗೌರವಾನ್ವಿತ ಸುಪ್ರೀಂ ಕೋರ್ಟ್‌ ಆದೇಶಗಳು ಮತ್ತು ಕರ್ನಾಟಕ ಸರ್ಕಾರದ ಸಚಿವಾಲಯದಿಂದ ಹೊರಡಿಸಲಾದ ಸುತ್ತೋಲೆಯನ್ನು ಗಮನದಲ್ಲಿಟ್ಟುಕೊಂಡು…

Read More

ಬೆಂಗಳೂರು : ರಾಜ್ಯದ ಕ್ರೀಡಾಪಟುಗಳಿಗೆ ಇದೀಗ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಎಲ್ಲಾ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ 2% ಉದ್ಯೋಗ ಮೀಸಲಾತಿ ನೀಡಲಾಗುತ್ತದೆ ಅಂತ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಐವಾನ್ ಡಿಸೋಜ ಪ್ರಶ್ನೆ ಕೇಳಿದ್ರು. ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗಗಳು ಕೊಡಬೇಕು. ಈವರೆಗೂ 13 ಜನಕ್ಕೆ ಮಾತ್ರ ಹುದ್ದೆ ನೀಡಲಾಗಿದೆ. ನೇರ ನೇಮಕಾತಿಯಲ್ಲಿ 3% ಹುದ್ದೆ ಕ್ರೀಡಾಪಟುಗಳಿಗೆ ಮೀಸಲು ಇಡಬೇಕು. ವಿದ್ಯಾರ್ಥಿಗಳಿಗೆ ಕ್ರೀಡೆಯಲ್ಲಿ ಪ್ರೋತ್ಸಾಹ ಕೊಡಲು ಒಂದು ಪಾಲಿಸಿ ತರಬೇಕು. ಕಬಡ್ಡಿಗೂ ಪ್ರೋತ್ಸಾಹ ಕೊಡಬೇಕು ಮನವಿ ಮಾಡಿದರು. ಇದಕ್ಕೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡಿ, ಈವರೆಗೂ 13 ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ಕೊಡಲಾಗಿದೆ. ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಏಷ್ಯನ್ ಗೇಮ್ಸ್ ಗೆದ್ದವರಿಗೆ ಹುದ್ದೆ ಕೊಡ್ತೀವಿ. ಪೊಲೀಸ್ ಇಲಾಖೆಯಲ್ಲಿ, ಅರಣ್ಯ ಇಲಾಖೆಯಲ್ಲಿ 3% ಮೀಸಲಾತಿ ಮಾಡಿದ್ದೇವೆ. ಉಳಿದ ಇಲಾಖೆಯಲ್ಲಿ 2% ಮೀಸಲಾತಿ ನೀಡಲು ನಿರ್ಧಾರ ಮಾಡಿದ್ದೇವೆ. ಆದಷ್ಟೂ ಬೇಗ ಆದೇಶ ಮಾಡ್ತಿವಿ.ಕಬಡ್ಡಿಗೂ ಪ್ರೋತ್ಸಾಹ ಕೊಡಲು ಪರಿಶೀಲನೆ…

Read More

ಬೆಂಗಳೂರು : ಕರ್ನಾಟಕ ರಾಜ್ಯದ ಸಾರಿಗೆ ಇಲಾಖೆಯಲ್ಲಿ 1991-92 ರಿಂದ 2019-20ರ ಅವಧಿಯಲ್ಲಿ ಮೋಟಾರು ವಾಹನ ಕಾಯಿದೆ / ನಿಯಮಗಳ ಉಲ್ಲಂಘನೆ ಸಂಬಂಧ ದಾಖಲಾಗಿ ಬಾಕಿ ಇರುವ ಡಿ.ಎಸ್.ಎ (ಇಲಾಖಾ ಶಾಸನ) ಪ್ರಕರಣಗಳ ದಂಡದ ಮೊತ್ತದಲ್ಲಿ 50% (ಶೇ.ಐವತ್ತರಷ್ಟು ಮಾತ್ರ) ರಷ್ಟು ರಿಯಾಯಿತಿ ನೀಡಿ ನವೆಂಬರ್ 21,2025 ರಿಂದ ಡಿಸೆಂಬರ್ 12, 2025ರ ವರೆಗೆ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಕಲಾವಕಾಶ ನೀಡಲಾಗಿದೆ. ವಾಹನದ ಮಾಲೀಕರು ಈ ಅವಧಿಯಲ್ಲಿ ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿದ ದಾಖಲೆಗಳೊಂದಿಗೆ ದಂಡದ ಶೇ. 50ರಷ್ಟು ಮೊತ್ತವನ್ನು ಹತ್ತಿರದ ಹಿರಿಯ ಪ್ರಾದೇಶಿಕ ಸಾರಿಗೆ / ಪ್ರಾದೇಶಿಕ ಸಾರಿಗೆ / ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಪಾವತಿಸಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಿಯಾಯಿತಿಯೊಂದಿಗೆ ಪಾವತಿ ಮಾಡುವ ವಿಧಾನ: 1.ಈ ಕೆಳಗಿನ ಮೊಬೈಲ್ ಆಪ್ಗಳನ್ನು ಬಳಸಿ (ಪ್ಲೇ ಸ್ಟೋರ್ ಮತ್ತು ಅಪಲ್ ಸ್ಟೋರ್ನಲ್ಲಿ ಲಭ್ಯ): ಕರ್ನಾಟಕ ರಾಜ್ಯ ಪೊಲೀಸ್ ಆಪ್…

Read More

ಬೆಳಗಾವಿ : ರಾಜ್ಯ ಸಾರಿಗೆ ಇಲಾಖೆಯಲ್ಲಿ ನಕಲಿ ದಾಖಲೆ ನೀಡಿ ಬಡ್ತಿ ಪಡೆದಿರುವವರಿಗೆ ಸರ್ಕಾರ ಬಿಗ್ ಶಾಕ್ ನೀಡಿದ್ದು, ನಕಲಿ ದಾಖಲೆ ನೀಡಿ ಬಡ್ತಿ ಪಡೆದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಶರವಣ ಅವರ ಪ್ರಶ್ನೆಗೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಉತ್ತರಿಸಿದ್ದಾರೆ. ಸಾರಿಗೆ ಇಲಾಖೆಯಲ್ಲಿ ಲಿಪಿಕ ಸಿಬ್ಬಂದಿಗಳು ಕಾನೂನು ಬಾಹಿರವಾಗಿ ನಕಲಿ ಸೇವಾನುಭವ ಪ್ರಮಾಣ ಪತ್ರ ಪಡೆದಿರುವುದು ರುಜುವಾತಾದಲ್ಲಿ, ಅವರ ವಿರುದ್ಧ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು. https://twitter.com/KarnatakaVarthe/status/1999017229992734972?s=20

Read More

ಬೆಳಗಾವಿ : ಹೊಸ ವಾಹನ ಖರೀದಿ ಮಾಡುವವರಿಗೆ ಇದೀಗ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಸರ್ಕಾರದಿಂದ ರಾಜ್ಯ ರಸ್ತೆ ಸುರಕ್ಷತಾ ತಿದ್ದುಪಡಿ ವಿಧೇಯಕ ಮಂಡನೆ ಮಾಡಲಾಯಿತು. ನೂತನವಾಗಿ ಖರೀದಿಸುವ ವಾಹನದ ಮೌಲ್ಯ ಆಧರಿಸಿ ಹೊಸ ಸೆಸ್ ಜಾರಿಗೊಳಿಸಲಾಗಿದೆ. ಹಾಗಾಗಿ ಹೊಸ ವಾಹನ ಖರೀದಿದಾರರಿಗೆ ಸೆಸ್ ಬಿಸಿ ತಟ್ಟಿದೆ. ನೂತನವಾಗಿ ಖರೀದಿಸುವ ವಾಹನದ ಮೌಲ್ಯ ಆಧರಿಸಿ ಜಾರಿಗೊಳಿಸಲಾಗಿದೆ.ಹಾಲಿ ಎಲ್ಲಾ ಮಾದರಿಯ ವಾಹನಗಳಿಗೆ ಕೇವಲ ರೂ.1000 ವಿಧಿಸಲಾಗಿದ್ದು ತಿದ್ದುಪಡಿ ಅನ್ವಯ ಕಾರಿನ ಬೆಲೆ ಆಧರಿಸಿ ಶೇಕಡಾವಾರು ಸೆಸ್ ಜಾರಿಗೊಳಿಸಲಾಗುತ್ತಿದೆ. ಯಾವ ಮಾದರಿ ಕಾರುಗಳಿಗೆ ಎಷ್ಟು ವಿಧಿಸುವ ಬಗ್ಗೆ ತೀರ್ಮಾನಿಸಲಾಗುತ್ತೆ. ಎಷ್ಟು ಚೆಸ್ ವಿಧಿಸುವ ಬಗ್ಗೆ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ.

Read More

ಮೊಟ್ಟೆ ಪ್ರಿಯರಿಗೆ ಶಾಕಿಂಗ್ ನ್ಯೂಸ್, ಮೊಟ್ಟೆ ತಿನ್ನುವುದರಿಂದ ಕ್ಯಾನ್ಸರ್ ಕೂಡ ಬರಬಹುದು! ಹೌದು, ನೀವು ನಂಬದೇ ಇರಬಹುದು, ಆದರೆ ಇತ್ತೀಚೆಗೆ ಜನಪ್ರಿಯ ಮೊಟ್ಟೆ ಬ್ರ್ಯಾಂಡ್ ಎಗ್ಗೋಜ್‌ ನ ಮೊಟ್ಟೆಗಳಲ್ಲಿ ಕ್ಯಾನ್ಸರ್ ಉಂಟುಮಾಡುವ ಅಂಶಗಳು ಕಂಡುಬಂದಿವೆ. ವಾಸ್ತವವಾಗಿ, ಭಾರತದ ಮೊದಲ 100% ಕುರುಡು ಪರೀಕ್ಷಾ ಪ್ರಮಾಣೀಕರಣ ಕಾರ್ಯಕ್ರಮವಾದ ಟ್ರಸ್ಟೆಡ್ (ಯೂಟ್ಯೂಬ್ ಚಾನೆಲ್ ಟ್ರಸ್ಟೆಡ್) ನಡೆಸಿದ ಆಘಾತಕಾರಿ ಕುರುಡು ಪ್ರಯೋಗಾಲಯ ಪರೀಕ್ಷೆಯಲ್ಲಿ ಎಗ್ಗೋಜ್ ಮೊಟ್ಟೆಗಳಲ್ಲಿ ಕ್ಯಾನ್ಸರ್ ಉಂಟುಮಾಡುವ ಅಂಶಗಳು ಕಂಡುಬಂದಿವೆ. ಇದು ದೇಶಾದ್ಯಂತ ಗ್ರಾಹಕರಲ್ಲಿ ಕಳವಳವನ್ನುಂಟುಮಾಡಿದೆ. ಈ ವೈರಲ್ ವೀಡಿಯೊ ಪರೀಕ್ಷಾ ಫಲಿತಾಂಶಗಳನ್ನು ತೋರಿಸುತ್ತದೆ, ಇದು ಚಾನಲ್‌ನ ನಿರೂಪಕರನ್ನು ಸಹ ದಿಗ್ಭ್ರಮೆಗೊಳಿಸಿತು, ಕೋಳಿ ಸುರಕ್ಷತಾ ಮಾನದಂಡಗಳು, ನಿಯಂತ್ರಕ ಮೇಲ್ವಿಚಾರಣೆ ಮತ್ತು ದಾರಿತಪ್ಪಿಸುವ ಬ್ರ್ಯಾಂಡ್ ಹಕ್ಕುಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿತು. ಇದಲ್ಲದೆ, ಡಾ. ಮನನ್ ವೋರಾ ಇನ್‌ಸ್ಟಾಗ್ರಾಮ್‌ನಲ್ಲಿ ಇದರ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಈ ಪದಾರ್ಥಗಳ ಬಗ್ಗೆ ನಾವು ನೋಯ್ಡಾದ ಫೋರ್ಟಿಸ್ ಆಸ್ಪತ್ರೆಯ ವಿಕಿರಣ ಆಂಕೊಲಾಜಿಯ ಅಸೋಸಿಯೇಟ್ ಕನ್ಸಲ್ಟೆಂಟ್ ಡಾ. ನೀತು ಪಾಂಡೆ ಅವರೊಂದಿಗೆ…

Read More

ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಸಿಹಾಲಿ ಜಾಗೀರ್ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದು ತಿಂಗಳು ಕೂಡ ತುಂಬದ ಮಗು ಮಲಗಿದ್ದ ತಂದೆ-ತಾಯಿ ನಡುವೆ ಸಿಲುಕಿ ಸಾವನ್ನಪ್ಪಿದೆ. ಯುಪಿಯ ಸಿಹಾಲಿ ಜಾಗೀರ್ ಗ್ರಾಮದಲ್ಲಿ ಸಸ್ಯ ನರ್ಸರಿ ನಡೆಸುತ್ತಿರುವ ಸದ್ದಾಂ ಮತ್ತು ಅಸ್ಮಾ ಒಂದು ವರ್ಷದ ಹಿಂದೆ ವಿವಾಹವಾದರು. ಕಳೆದ ತಿಂಗಳು ಅಸ್ಮಾ ಆರೋಗ್ಯವಂತ ಗಂಡು ಮಗುವಿಗೆ ಜನ್ಮ ನೀಡಿದರು. ಆದಾಗ್ಯೂ, ಜನನದ ನಂತರ ಮಗುವಿಗೆ ಉಸಿರಾಟದ ತೊಂದರೆ ಉಂಟಾಯಿತು, ಆದ್ದರಿಂದ ವೈದ್ಯರು ಕೆಲವು ದಿನಗಳವರೆಗೆ ಮಗುವನ್ನು ವೀಕ್ಷಣೆಯಲ್ಲಿ ಇರಿಸಿದರು. ಸ್ಥಿತಿ ಸುಧಾರಿಸಿದ ನಂತರ, ದಂಪತಿಗಳು ಮಗುವನ್ನು ಮನೆಗೆ ಕರೆತಂದರು. ಏತನ್ಮಧ್ಯೆ, ಕಳೆದ ಶನಿವಾರ ರಾತ್ರಿ, ಸದ್ದಾಂ ಮತ್ತು ಅಸ್ಮಾ ತಮ್ಮ ಮಗುವನ್ನು ತಮ್ಮ ನಡುವೆ ಮಲಗಿಸಿದರು. ಆದರೆ ಮಗು ತಮ್ಮ ನಡುವೆ ಇದೆ ಎಂಬುದನ್ನು ಮರೆತು ಹತ್ತಿರಕ್ಕೆ ಚಲಿಸಲು ಪ್ರಾರಂಭಿಸಿದರು. ಅವರ ಚಲನೆಗಳಿಂದಾಗಿ, ಮಗು ತನ್ನ ತಾಯಿ ಮತ್ತು ತಂದೆಯ ನಡುವೆ ಸಿಲುಕಿಕೊಂಡಿತು. ಉಸಿರಾಡಲು ಗಾಳಿ ಇಲ್ಲದ ಕಾರಣ, ಮಗು ನಿದ್ರೆಯಲ್ಲಿ…

Read More