Author: kannadanewsnow57

ಬೆಂಗಳೂರು : ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಲ್ಲರೂ ಮೊಬೈಲ್ ಬಳಸುತ್ತಿದ್ದಾರೆ. ಮೊಬೈಲ್ ನಲ್ಲಿ ಇಂದು ಹಲವರು ಹಣ , ಡೆಬಿಟ್, ಕ್ರೆಡಿಟ್ ಕಾರ್ಡ್ ಸೇರಿದಂತೆ ಹಲವು ರೀತಿಯ ವಸ್ತುಗಳನ್ನು ಇಡುತ್ತಾರೆ. ಆದರೆ ಈ ವಸ್ತುಗಳ ಕಾರಣದಿಂದ ಮೊಬೈಲ್ ಸ್ಪೋಟವಾಗುವ ಸಾಧ್ಯತೆ ಇದೆ. ಜನರು ತಮ್ಮ ಮೊಬೈಲ್ ಕವರ್ ಗಳ ಹಿಂದೆ ನೋಟುಗಳು, ನಾಣ್ಯಗಳು ಮತ್ತು ಕೀಲಿಗಳು ಸೇರಿದಂತೆ ಅನೇಕ ವಸ್ತುಗಳನ್ನು ಇಡುವುದನ್ನು ಅನೇಕ ಬಾರಿ ನೋಡಲಾಗಿದೆ. ಆದಾಗ್ಯೂ, ಈ ರೀತಿಯ ನಮ್ಮ ಜೀವನಕ್ಕೆ ಅಪಾಯಕಾರಿಯಾಗಬಹುದು. ಫೋನ್ ನ ಕವರ್ ನ ಹಿಂದೆ ನೀವು ನೋಟುಗಳನ್ನು ಸುರಕ್ಷಿತವಾಗಿರಿಸಿದ್ದರೂ, ನಿಮ್ಮ ಈ ಅಭ್ಯಾಸವು ತುಂಬಾ ಅಪಾಯಕಾರಿ ಎಂದು ಸಾಬೀತುಪಡಿಸಬಹುದು. ಮೊಬೈಲ್ ಕವರ್ ನಲ್ಲಿ ವಸ್ತುಗಳನ್ನು ಇಡುವುದು ಹೇಗೆ ಅಪಾಯಕಾರಿ ಎಂದು ಸಾಬೀತುಪಡಿಸುತ್ತದೆ. ಮೊಬೈಲ್ ಗೆ ಬೆಂಕಿ ತಗುಲಬಹುದು ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಗಳಿಗೆ ಬೆಂಕಿ ಬೀಳುವುದು ಅಥವಾ ಸ್ಫೋಟಗೊಳ್ಳುವುದು ಸಾಮಾನ್ಯವಾಗಿದೆ, ಆದರೆ ಇದರ ಹಿಂದಿನ ಕಾರಣ ಎಲ್ಲೋ ನಮ್ಮ ಅಜಾಗರೂಕತೆಯಾಗಿರಬಹುದು. ಆಗಾಗ್ಗೆ ಫೋನ್…

Read More

ಬೆಂಗಳೂರು: 2025-26ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸಲು ಅವಕಾಶ ನೀಡಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಹಕಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2024-25ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಸಹಕಾರ ಇಲಾಖೆಯಿಂದ ಜಾರಿಗೊಳಿಸಲು ಹಾಗೂ ಸದಸ್ಯರನ್ನು ನೋಂದಾಯಿಸಲು ಮಾರ್ಗಸೂಚಿಗಳೊಂದಿಗೆ ಆದೇಶ ಹೊರಡಿಸಲಾಗಿತ್ತು ಎಂದಿದ್ದಾರೆ. ಮುಖ್ಯಕಾರ್ಯನಿರ್ವಹಣಾಧಿಕಾರಿ (ಪ), ಯಶಸ್ವಿನಿ ಟ್ರಸ್ಟ್ ಇವರ ಪತ್ರದಲ್ಲಿ ಯಶಸ್ವಿನಿ ಯೋಜನೆಯು ಸಹಕಾರ ಸಂಘಗಳ ಸದಸ್ಯರ ಅನುಕೂಲಕ್ಕಾಗಿ ಸರ್ಕಾರವು ಜಾರಿಗೊಳಿಸಿರುವ ಒಂದು ಪ್ರತಿಷ್ಠಿತ (Flagship) ವಿಶಿಷ್ಟ್ಯ ಯೋಜನೆಯಾಗಿದ್ದು, ಇದರಲ್ಲಿ ಯಶಸ್ವಿನಿ ಫೋಟೋಕಾಲ್‌ನಂತೆ ನಿಗದಿಪಡಿಸಿರುವ ಚಿಕಿತ್ಸೆಗಳ ಪ್ಯಾಕೇಜಿನ ದರದ ಮಿತಿಗೊಳಪಟ್ಟು, ಫಲಾನುಭವಿ ಮತ್ತು ಅವರ ಕುಟುಂಬಕ್ಕೆ ವಾರ್ಷಿಕ ಗರಿಷ್ಟ ರೂ.5.00 ಲಕ್ಷ ವೈದ್ಯಕೀಯ ಚಿಕಿತ್ಸಾ ವೆಚ್ಚದ ಮಿತಿಯೊಂದಿಗೆ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ಇರುತ್ತದೆ ಎಂದು ಹೇಳಿದ್ದಾರೆ. ಯಶಸ್ವಿನಿ ಯೋಜನೆಯು ವಿಮಾ ಯೋಜನೆಯಾಗಿರುವುದಿಲ್ಲ. ಬದಲಾಗಿ ಇದೊಂದು ಸ್ವಯಂ ನಿಧಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 19 ಡಿವೈಎಸ್ಪಿ ಹಾಗೂ 53 ಪೊಲೀಸ್ ಇನ್ಸ್ ಪೆಕ್ಟರ್ ಸಿವಿಲ್ ಅವರನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ವರ್ಗಾವಣೆ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಆಂತರಿಕ ಭದ್ರತ ವಿಭಾಗದ ಡಿವೈಎಸ್ಪಿಯಾಗಿದ್ದಂತ ಗಣೇಶ್ ಎಂ ಹೆಗಡೆ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರಿನ ಶೇಷಾದ್ರಿಪುರಂ ಉಪ ವಿಭಾಗದ ಡಿವೈಎಸ್ಪಿ ಪ್ರಕಾಶ್.ಆರ್ ಅವರನ್ನು ಚಿಕ್ಕಬಳ್ಳಾಪುರ ಉಪ ವಿಭಾಗಕ್ಕೆ, ಸಿಸಿಪಿಎಸ್ ಡಿವೈಎಸ್ಪಿ ನಾಗರಾಜ.ಜಿ ಅವರನ್ನು ವಿಜಯಪುರ ಉಪ ವಿಭಾಗಕ್ಕೆ, ಮೈಸೂರಿನ ಕೆಪಿಎ ಡಿವೈಎಸ್ಪಿ ಮೊಹಮ್ಮದ ಹಸ್ಮತ್ ಖಾನ್.ಐ ಅವರನ್ನು ಹೊಳೆನರಸೀಪುರ ಉಪ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಹೀಗಿದೆ 19 ಡಿವೈಎಸ್ಪಿ ವರ್ಗಾವಣೆ ಪಟ್ಟಿ ಇನ್ನೂ 53 ಪೊಲೀಸ್ ಇನ್ಸ್ ಪೆಕ್ಟರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಬೆಳಗಾವಿಯ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಸುನೀಲ್ ಬಿ ಪಾಟೀಲ್ ಅವರನ್ನು ಇಂಡಿ ಗ್ರಾಮಾಂತರ ವೃತ್ತಕ್ಕೆ ವರ್ಗಾವಣೆ…

Read More

ಪಡಿತರ ಚೀಟಿಯಲ್ಲಿ ಅರ್ಹರ ಹೆಸರು ಡಿಲೀಟ್ ಆಗಿದ್ದರೆ ತಕ್ಷಣವೇ 45 ದಿನದೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದಲ್ಲಿ ಸದರಿ ಮನವಿಯನ್ನು ಪರಿಶೀಲಿಸಿ ಆದ್ಯತಾ ಪಡಿತರ ಚೀಟಿ ಹೊಂದಲು ನಿಯಮಾನುಸಾರ ಅರ್ಹರಿದ್ದಲ್ಲಿ ಅಂತಹವರ ಆದ್ಯತಾ ಪಡಿತರ ಚೀಟಿಯನ್ನು (PHH) ಮರುಸ್ಥಾಪಿಸಲು ಕ್ರಮವಹಿಸಲಾಗುತ್ತದೆ. ಮಾನದಂಡಗಳ ಆಧಾರದ ಮೇಲೆ ಅನರ್ಹವೆಂದು ಕಂಡುಬAದ ಆದ್ಯತಾ ಪಡಿತರ ಚೀಟಿಗಳನ್ನು ((PHH) ) ಆದ್ಯತೇತರ ಪಡಿತರ ಚೀಟಿಗಳನ್ನಾಗಿ (NPHH) ಪರಿವರ್ತಿಸಲು ಕ್ರಮವಹಿಸಲಾಗುತ್ತಿದೆ. ಈ ರೀತಿ ತಾತ್ಕಾಲಿಕವಾಗಿ ಆದ್ಯತೇತರ ಪಡಿತರ ಚೀಟಿಯನ್ನಾಗಿ (NPHH) ಪರಿವರ್ತಿಸಲಾದ ಪಡಿತರ ಚೀಟಿದಾರರು ಆದ್ಯತಾ ಪಡಿತರ ಚೀಟಿ ಹೊಂದಲು PHH) ಅರ್ಹರಾಗಿದ್ದಲ್ಲಿ 45 ದಿನದೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಸಂಬAಧಪಟ ತಾಲ್ಲೂಕಿನ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದಲ್ಲಿ ಸದರಿ ಮನವಿಯನ್ನು ಪರಿಶೀಲಿಸಿ ಆದ್ಯತಾ ಪಡಿತರ ಚೀಟಿ ಹೊಂದಲು ನಿಯಮಾನುಸಾರ ಅರ್ಹರಿದ್ದಲ್ಲಿ ಅಂತಹವರ ಆದ್ಯತಾ ಪಡಿತರ ಚೀಟಿಯನ್ನು (PHH) ಮರುಸ್ಥಾಪಿಸಲು ಕ್ರಮವಹಿಸಲಾಗುತ್ತದೆ. ಅದರಂತೆ ಒಂದು ವೇಳೆ ಅರ್ಹ ಫಲಾನುಭವಿಯ ಆದ್ಯತಾ ಪಡಿತರ ಚೀಟಿಯನ್ನು ರದ್ದು ಪಡಿಸಿದಲ್ಲಿ, ಸಂಬಂಧಪಟ್ಟ…

Read More

ತುಮಕೂರು : ರಾಜ್ಯದಲ್ಲಿ ಮತ್ತೊಂದು ಘೋರ ಘಟನೆ ನಡೆದಿದ್ದು, ಮನೆಯ ಮುಂದಿರುವ ನೀರಿನ ಸಂಪ್‌ ಗೆ ತಾಯಿಯೊಬ್ಬಳು ತನ್ನ ಅವಳಿ ಮಕ್ಕಳನ್ನು ತಳ್ಳಿ, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ತುಮಕೂರಿನ ಹಿರೇಹಳ್ಳಿ ಸಂಗನಹಳ್ಳಿ ಕಾಲೋನಿಯಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ಮೃತರನ್ನು ವಿಜಯಲಕ್ಷ್ಮಿ (26), 5 ವರ್ಷದ ಅವಳಿ ಮಕ್ಕಳಾದ ಚೇತನ ಮತ್ತು ಚೈತನ್ಯ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಆತ್ಮಹತ್ಯೆಗೆ ಕೌಟುಂಬಿಕ ಕಲಹವೇ ಕಾರಣ ಎನ್ನಲಾಗಿದೆ. ವಿಜಯಲಕ್ಷ್ಮಿ ಗಂಡ ಸಂಪತ್ ಕುಮಾರ್ ನೆಲಮಂಗಲ ಬಳಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು, ಕೆಲ ವರ್ಷಗಳಿಂದ ಸಿಂಗೋನಹಳ್ಳಿಯಲ್ಲಿ ನೆಲೆಸಿದ್ದರು. ಮೂಲತಹ ನೆಲಮಂಗಲ ತಾಲ್ಲೂಕು ದಾಬಸ್‌ಪೇಟೆ ಹೋಬಳಿ ಶಿವಗಂಗೆಯ ಕೊಟ್ಟಿಗೆರೆ ಗ್ರಾಮದವರು.

Read More

ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಿದ್ದು, ರೈತ ಸಿರಿ ಯೋಜನೆಯಡಿ ಸಿರಿಧಾನ್ಯ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ಗೆ 10,000 ರೂ. ಪ್ರೋತ್ಸಾಹಧನ ಸಿಗಲಿದೆ (ಗರಿಷ್ಠ 2 ಹೆಕ್ಟೇರ್ವರೆಗೆ). ಈ ಯೋಜನೆ ಸಿರಿಧಾನ್ಯ ಬೆಳೆಗಳ ವಿಸ್ತರಣೆ ಮತ್ತು ರೈತರ ಆದಾಯ ಹೆಚ್ಚಿಸಲು ರೂಪಿಸಲಾಗಿದ್ದು, ನೇರ ನಗದು ವರ್ಗಾವಣೆ ಮೂಲಕ ಅನುದಾನ ನೀಡಲಾಗುತ್ತದೆ. ರಾಜ್ಯದ ಸಿರಿಧಾನ್ಯ ಪ್ರದೇಶವನ್ನು ವಿಸ್ತರಿಸುವ ನಿಟ್ಟಿನಲ್ಲಿ 2019-20ನೇ ಸಾಲಿನಿಂದ ಸಾಂಪ್ರದಾಯಿಕವಾಗಿ ಬೆಳೆಯುವ ಸಿರಿಧಾನ್ಯಗಳಾದ ನವಣೆ, ಹಾರಕ ಸಾಮೆ, ಕೊರಲೆ, ಬರಗು ಮತ್ತು ಊದಲು ಬೆಳೆಗಳನ್ನು ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್ ಗೆ ರೂ.10000/-ಗಳಂತೆ ಗರಿಷ್ಠ ಎರಡು ಹೆಕ್ಟೇರ್ ಗೆ ಮಾತ್ರ ಸೀಮಿತವಾಗುವಂತೆ ಬೆಳೆ ಸಮೀಕ್ಷೆ ಆಧಾರದ ಮೇರೆಗೆ ನೇರ ನಗದು ವರ್ಗಾವಣೆ (DBT) ಮುಖಾಂತರ ಪ್ರೋತ್ಸಾಹಧನ ನೀಡಲಾಗಿರುತ್ತದೆ. ಸಿರಿಧಾನ್ಯಗಳ ಸಂಸ್ಕರಣೆಗೆ ಉತ್ತೇಜನ ನೀಡುವ ಉದ್ದೇಶದೊಂದಿಗೆ ಸಿರಿಧಾನ್ಯಗಳ ಸಂಸ್ಕರಣೆ, ಮೌಲ್ಯವರ್ಧನೆ, ವರ್ಗೀಕರಣ, ಪ್ಯಾಕಿಂಗ್ ಮತ್ತು ಬ್ರಾಂಡಿಂಗ್ ಯಂತ್ರೋಪಕರಣಗಳಿಗೆ ಒಟ್ಟು ಯಂತ್ರೋಪಕರಣಗಳ ವೆಚ್ಚದ ಮೇಲೆ ಶೇ.50 ರಷ್ಟು ಅಥವಾ ಗರಿಷ್ಠ ರೂ.…

Read More

ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೃಷಿ ಯಂತ್ರೋಪಕರಣಗಳ ಖರೀದಿಗೆ 3 ಲಕ್ಷ ರೂ.ಸಹಾಯಧನ ನೀಡಲಿದೆ. ರೈತರು ಸಕಾಲದಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವುದನ್ನು ಅನುವು ಮಾಡಿಕೊಡಲು ಹಾಗೂ ಕೂಲಿ ಕಾರ್ಮಿಕರ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು, ಸದರಿ ಕೃಷಿ ಯಾಂತ್ರೀಕರಣ ಯೋಜನೆಉಡಿ ಕೃಷಿ ಯಂತ್ರೋಪಕರಣಗಳಿಗೆ ಸಾಮಾನ್ಯ ವರ್ಗದ ರೈತರಿಗೆ ಶೇ. 50 ಹಾಗೂ ಪ.ಜಾ/ಪ.ಪಂ. ರೈತರಿಗೆ ಶೇ.90 ರಂತ ಎಲ್ಲಾ ವರ್ಗದ ರೈತರಿಗೆ ಗರಿಷ್ಠ ರೂ.3.00 ಲಕ್ಷಕ್ಕೆ ಮಿತಿಗೊಳಪಟ್ಟು ಸಹಾಯಧನವನ್ನು ಒದಗಿಸಲಾಗುತ್ತಿದೆ. ಕೃಷಿ ಸಂಸ್ಕರಣಾ ಘಟಕಗಳು ಮತ್ತು ಟಾರ್ಪಾಲಿನ್‌ಗಳನ್ನು ಪ.ಜಾ/ಪ.ಪಂ ರೈತರಿಗೆ 90% ಸಬ್ಸಿಡಿಯಲ್ಲಿ ಮತ್ತು ಸಾಮಾನ್ಯ ರೈತರಿಗೆ 50% ಸಬ್ಸಿಡಿಯಲ್ಲಿ ವಿತರಿಸಲಾಗುತ್ತದೆ. ಉದ್ದೇಶಗಳು ಕೂಲಿ ಕಾರ್ಮಿಕರ ಕೊರತೆಯನ್ನು ಪೂರೈಸಲು ಮತ್ತು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವಲ್ಲಿ ಪರಿಶ್ರಮವನ್ನು ಕಡಿಮೆಗೊಳಿಸುವುದು. ಸಕಾಲದಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಪ್ರೋತ್ಸಾಹ, ಸಮಯವನ್ನು ಉಳಿಸಲು ಹಾಗೂ ಕಡಿಮೆ ಅವಧಿಯಲ್ಲಿ ಹೆಚ್ಚಿನ ಪ್ರದೇಶವನ್ನು ಆವರಿಸುವುದು. ಕೃಷಿ ಚಟುವಟಿಕೆಗಳ ಸಮರ್ಥತೆಯನ್ನು ಹೆಚ್ಚಿಸುವುದರ ಮೂಲಕ ಉತ್ಪಾದನೆ ಮತ್ತು…

Read More

ಭಾರತ ಸರ್ಕಾರವು ಎಲ್‌ಪಿಜಿ ಗ್ಯಾಸ್ ಸಬ್ಸಿಡಿ ಯೋಜನೆಯನ್ನು ಸಾಮಾನ್ಯ ಜನರಿಗೆ, ವಿಶೇಷವಾಗಿ ಆರ್ಥಿಕವಾಗಿ ದುರ್ಬಲ ಕುಟುಂಬಗಳಿಗೆ ಲಭ್ಯವಾಗುವಂತೆ ಮಾಡಲು ಮತ್ತು ಅದನ್ನು ಕೈಗೆಟುಕುವಂತೆ ಮಾಡಲು ಚಾಲನೆ ಮಾಡುತ್ತದೆ. ಇತ್ತೀಚೆಗೆ, ಪ್ರೋಗ್ರಾಂಗೆ ಗಮನಾರ್ಹವಾದ ನವೀಕರಣಗಳನ್ನು ಪರಿಚಯಿಸಲಾಯಿತು, ಅರ್ಹ ಬಳಕೆದಾರರಿಗೆ eKYC ಕಡ್ಡಾಯವಾಗಿದೆ. ನವೀಕರಿಸಿದ ಅರ್ಹತಾ ಮಾನದಂಡಗಳು ಸರ್ಕಾರವು ಸಬ್ಸಿಡಿ ಫಲಾನುಭವಿಗಳಿಗೆ ಅರ್ಹತಾ ಷರತ್ತುಗಳನ್ನು ತಿದ್ದುಪಡಿ ಮಾಡಿದೆ. ಇದರ ಪ್ರಕಾರ ಇನ್ನು ಮುಂದೆ 10 ಲಕ್ಷ ರೂ.ಗಿಂತ ಹೆಚ್ಚಿನ ವಾರ್ಷಿಕ ಆದಾಯ ಹೊಂದಿರುವ ವ್ಯಕ್ತಿಗಳು, ತೆರಿಗೆದಾರರು, ಬಹು ಗ್ಯಾಸ್ ಸಂಪರ್ಕ ಹೊಂದಿರುವವರು, ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಇದರ ವ್ಯಾಪ್ತಿಯಿಂದ ಹೊರಗುಳಿದಿದ್ದಾರೆ. ಅಲ್ಲದೆ, ಸ್ವಯಂಪ್ರೇರಣೆಯಿಂದ ಸಬ್ಸಿಡಿಯಿಂದ ಹೊರಗುಳಿದಿರುವವರು ಅದಕ್ಕೆ ಅರ್ಹರಾಗಿರುವುದಿಲ್ಲ. eKYC ಯ ಅವಶ್ಯಕತೆ ಮತ್ತು ಕಾರ್ಯವಿಧಾನ ಸಬ್ಸಿಡಿಗಳ ದುರುಪಯೋಗವನ್ನು ತಡೆಗಟ್ಟಲು, eKYC ಅನ್ನು ಕಡ್ಡಾಯಗೊಳಿಸಲಾಗಿದೆ. ಈ ಎಲೆಕ್ಟ್ರಾನಿಕ್ ಗುರುತಿನ ಪರಿಶೀಲನೆ ಪ್ರಕ್ರಿಯೆಗೆ ಬಳಕೆದಾರರು ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಮಾಹಿತಿ, ಮೊಬೈಲ್ ಸಂಖ್ಯೆ ಮತ್ತು ಗ್ಯಾಸ್ ಸಂಪರ್ಕ ಸಂಖ್ಯೆಯಂತಹ ವಿವರಗಳನ್ನು ನವೀಕರಿಸುವ ಅಗತ್ಯವಿದೆ.…

Read More

ಬೆಂಗಳೂರು : ರಾಜ್ಯದಲ್ಲಿ ಇ-ಆಸ್ತಿ ತಂತ್ರಾಂಶದಲ್ಲಿ ಹೊಸ ಸೌಲಭ್ಯಗಳನ್ನು (Features) ಕಲ್ಪಿಸಿರುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಆಸ್ತಿ ತಂತ್ರಾಂಶದ ಬಳಕೆಯನ್ನು ಉಲ್ಲೇಖ (01) ಮತ್ತು (02) ಸುತ್ತೋಲೆಗಳಲ್ಲಿ ಕಡ್ಡಾಯಗೊಳಿಸಿ ಆದೇಶಿಸಲಾಗಿರುತ್ತದೆ. ಇ-ಆಸ್ತಿ ತಂತ್ರಾಂಶವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಹಾಗೂ ಸಾರ್ವಜನಿಕರಿಗೆ ತ್ವರಿತವಾಗಿ ಸೇವಯನ್ನು ಒದಗಿಸುವ ಉದ್ದೇಶದಿಂದ ಕಾರ್ಯವಿಧಾನವನ್ನು ಸರಳೀಕರಣಗೊಳಿಸುವ ಅಗತ್ಯತೆ ಇರುವುದರಿಂದ ಇ-ಆಸ್ತಿ ತಂತ್ರಾಂಶದಲ್ಲಿ ಈ ಕೆಳಕಂಡಂತೆ ಹೊಸ ಸೌಲಭ್ಯಗಳನ್ನು ಕಲ್ಪಿಸಲಾಗಿರುತ್ತದೆ. 1. ಕಾರ್ಯಹರಿವಿನ (workflow) ಸರಳೀಕರಣ: ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿಗಳ ದಾಖಲೀಕರಣ/ಹೊಸ ಪಿಐಡಿ ನೀಡುವುದು, ಹಕ್ಕುವರ್ಗಾವಣೆ ಮತ್ತು ಆಸ್ತಿಗಳ ವಿಭಜನೆ ಮತ್ತು ಒಟ್ಟುಗೂಡಿಸುವಿಕೆಗೆ ಸಂಬಂಧಿಸಿದಂತೆ ಪ್ರಸ್ತುತವಿರುವ ಕಾರ್ಯಹರಿವಿನಲ್ಲಿ ಬದಲಾವಣೆ ಮಾಡಲಾಗಿದ್ದು, ಈ ಹಿಂದೆ ಇದ್ದ ಡಾಟ ಎಂಟ್ರಿ ಆಪರೇಟರ್ ಮತ್ತು ವಿಷಯ ನಿರ್ವಹಕರ ಲಾಗಿನ್ ಗಳನ್ನು ಸ್ಥಗಿತಗೊಳಿಸಲಾಗಿರುತ್ತದೆ. ವಿಷಯ ನಿರ್ವಹಕರನ್ನು ನಗರ ಸ್ಥಳೀಯ ಸಂಸ್ಥೆಗಳ ಇತರ ಶಾಖೆಗಳಲ್ಲಿನ ಕಾರ್ಯಗಳಿಗೆ ಮತ್ತು ಡಾಟ ಎಂಟ್ರಿ ಆಪರೇಟರ್ ಗಳನ್ನು…

Read More

ನವದೆಹಲಿ : ರಸ್ತೆ ಅಪಘಾತಗಳು ಅನಿರೀಕ್ಷಿತವಾಗಿ ಸಂಭವಿಸುತ್ತವೆ. ಒಂದು ಕ್ಷಣದಲ್ಲಿ ಕುಟುಂಬಗಳ ಜೀವನವನ್ನು ತಲೆಕೆಳಗಾಗಿಸುವ ಅನೇಕ ಅಪಘಾತಗಳಿವೆ. ಅಂತಹ ಸಂದರ್ಭಗಳಲ್ಲಿ, ಅಪಘಾತಗಳ ಬಲಿಪಶುಗಳು ಮತ್ತು ಅವರ ಕುಟುಂಬಗಳಿಗೆ ಆರ್ಥಿಕ ಭದ್ರತೆಯನ್ನು ಒದಗಿಸಲು ಕೇಂದ್ರ ಸರ್ಕಾರವು ಅಪಘಾತ ಸಂತ್ರಸ್ತ ಪರಿಹಾರ ಯೋಜನೆಯನ್ನು ಜಾರಿಗೆ ತರುತ್ತಿದೆ. ವಿಶೇಷವಾಗಿ ರಸ್ತೆ ಅಪಘಾತಗಳಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ತಕ್ಷಣದ ಸಹಾಯವನ್ನು ಒದಗಿಸಲು ಈ ಯೋಜನೆಯನ್ನು ವಿನ್ಯಾಸಗೊಳಿಸಲಾಗಿದೆ. ಗಂಭೀರ ಗಾಯಗಳ ಸಂದರ್ಭದಲ್ಲಿ ಅವರಿಗೆ ಹಣಕಾಸಿನ ನೆರವು ಈ ಯೋಜನೆಯಡಿಯಲ್ಲಿ ಹಿಟ್ & ರನ್ ಪ್ರಕರಣಗಳಲ್ಲಿ ಬಲಿಪಶುಗಳಿಗೆ ಅಥವಾ ಅವರ ಕುಟುಂಬ ಸದಸ್ಯರಿಗೆ ಸರ್ಕಾರವು ನೇರವಾಗಿ ಪರಿಹಾರವನ್ನು ನೀಡುತ್ತದೆ. ಅಪಘಾತದಲ್ಲಿ ವ್ಯಕ್ತಿಯು ಗಂಭೀರವಾಗಿ ಗಾಯಗೊಂಡರೆ, ಅವರಿಗೆ ಹಣಕಾಸಿನ ನೆರವು ನೀಡಲಾಗುತ್ತದೆ. ಅಪಘಾತಕ್ಕೆ ಕಾರಣವಾದ ವಾಹನ ಮಾಲೀಕರ ವಿವರಗಳು ತಿಳಿದಿಲ್ಲದ ಸಂದರ್ಭಗಳಲ್ಲಿ ಈ ಯೋಜನೆ ವಿಶೇಷವಾಗಿ ಉಪಯುಕ್ತವಾಗಿದೆ. 2025 ರಲ್ಲಿ ಪ್ರಾರಂಭಿಸಲಾದ ಈ ಯೋಜನೆಯು ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ನಗದುರಹಿತ ಚಿಕಿತ್ಸೆಯನ್ನು ಒದಗಿಸುತ್ತದೆ. ಆಸ್ಪತ್ರೆಗಳಲ್ಲಿ ಉಚಿತ ವೈದ್ಯಕೀಯ ಆರೈಕೆಯನ್ನು ಪಡೆಯುವ ಅವಕಾಶ ರಸ್ತೆ…

Read More