Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯದಲ್ಲಿ ಈ ವರ್ಷ ಒಟ್ಟು 900 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಪಂಡಿತ್ ಜವಾಹರಲಾಲ್ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ “ರಾಜ್ಯ ಮಟ್ಟದ ಮಕ್ಕಳ ದಿನಾಚರಣೆ ಮತ್ತು ಪೋಷಕರ-ಶಿಕ್ಷಕರ ಮಹಾಸಭೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದೇಶದ ಭವಿಷ್ಯ ರೂಪಿತ ಆಗುವುದು ವೈಚಾರಿಕ – ವೈಜ್ಞಾನಿಕ ಮನೋಭಾವದ ಮಕ್ಕಳಿಂದ. ಆದ್ದರಿಂದ ಮಕ್ಕಳು ಪ್ರಾಥಮಿಕ ಶಿಕ್ಷಣದಿಂದಲೇ ಮೌಢ್ಯ, ಕಂದಾಚಾರದಿಂದ ದೂರ ಉಳಿಯಬೇಕು ಎಂದರು. ಮಕ್ಕಳೇ ಭಾರತದ ಭವಿಷ್ಯ ಎನ್ನುವ ದೂರದೃಷ್ಟಿ ನೆಹರೂ ಅವರಿಗೆ ಇತ್ತು. ಹೀಗಾಗಿ ಮಕ್ಕಳಲ್ಲಿ ವೈಜ್ಞಾನಿಕ ಮನೋಧರ್ಮ ರೂಪಿಸುವ ಶಿಕ್ಷಣಕ್ಕೆ ಒತ್ತು ನೀಡಿದ್ದರು. ನಮ್ಮ ಸರ್ಕಾರ ಕೂಡ ಶಿಕ್ಷಣಕ್ಕೆ ಪ್ರಥಮ ಆಧ್ಯತೆ ನೀಡಿದ್ದು, 65,000 ಕೋಟಿ ರೂಪಾಯಿಗಳನ್ನು ಶಿಕ್ಷಣಕ್ಕೆ ನೀಡುತ್ತಿದ್ದೇವೆ. ನೆಹರೂ ತಮ್ಮ ಯೌವ್ವನದ 3,200ಕ್ಕೂ ಹೆಚ್ಚು ದಿನಗಳನ್ನು ಜೈಲಿನಲ್ಲಿ ಕಳೆದ ಹೋರಾಟಗಾರ. ಅತೀ ಶ್ರೀಮಂತ ಕುಟುಂಬದಿಂದ ಬಂದಿದ್ದರೂ…
ಬೆಂಗಳೂರು: ಇಂದು ರಾಜ್ಯಾಧ್ಯಂತ ಸರ್ಕಾರಿ ರಜೆ ಇರುವುದಿಲ್ಲ. ಕೇವಲ ಸರ್ಕಾರಿ ಗೌರವಗಳೊಂದಿಗೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಡಾ.ಸಾಲುಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಗೆ ಆದೇಶಿಸಲಾಗಿದೆ ಎಂಬುದಾಗಿ ರಾಜ್ಯ ಸರ್ಕಾರ ಸ್ಪಷ್ಟ ಪಡಿಸಿದೆ. ನವೆಂಬರ್ 15 ರಂದು ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ಸಾಲು ಮರದ ತಿಮ್ಮಕ್ಕ ಅವರ ನಿಧನದ ಕಾರಣದಿಂದಾಗಿ ಸರ್ಕಾರಿ ರಜೆ ಘೋಷಿಸಲಾಗಿದೆ ಎನ್ನುವಂತ ಆದೇಶ ಪತ್ರವೊಂದು ವೈರಲ್ ಆಗಿತ್ತು. ಆದರೇ ಇದು ಎಸ್ ಎಂ ಕೃಷ್ಣ ಅವರು ಮರಣ ಹೊಂದಿದ ಆದೇಶವನ್ನು ತಿರುಚಿ ಹಾಕಲಾಗಿದೆ. ಆ ಆದೇಶದ ಕೆಳಗೆ ಸಹಿ ಮಾಡಿದ ಅಧಿಕಾರಿಯು ಪ್ರಸ್ತುತ ಆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿಲ್ಲ ಎಂಬುದಾಗಿ ಸರ್ಕಾರ ತಿಳಿಸಿದೆ. ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ? ವೃಕ್ಷಮಾತೆ ನಾಡೋಜ, ಪದ್ಮಶ್ರೀ ಪುರಸ್ಕೃತರು ಹಾಗೂ ಕರ್ನಾಟಕದ ಪರಿಸರ ರಾಯಭಾರಿ ಡಾ.ಸಾಲುಮರದ ತಿಮ್ಮಕ್ಕ ಅವರು ದಿನಾಂಕ 14-11-2025ರಂದು ನಿಧನರಾಗಿರುತ್ತಾರೆ. ಅವರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ ಎಂದಿದ್ದಾರೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ…
ಬೆಂಗಳೂರು: ಸಕಲ ಸರ್ಕಾರಿ ಗೌರವಗಳೊಂದಿಗೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶನಿವಾರ ಬೆಳಗ್ಗೆ 7.30ರಿಂದ 10.30ರವರೆಗೆ ತಿಮ್ಮಕ್ಕ ಪಾರ್ಥಿವ ಶರೀರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ಮಧ್ಯಾಹ್ನ 12ಕ್ಕೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಈ ಕುರಿತಂತೆ ಆಡಳಿತ ಮತ್ತು ಸಿಬ್ಬಂದಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ವೃಕ್ಷಮಾತೆ ನಾಡೋಜ, ಪದ್ಮಶ್ರೀ ಪುರಸ್ಕೃತರು ಹಾಗೂ ಕರ್ನಾಟಕದ ಪರಿಸರ ರಾಯಭಾರಿ ಡಾ.ಸಾಲುಮರದ ತಿಮ್ಮಕ್ಕ ಅವರು ದಿನಾಂಕ 14-11-2025ರಂದು ನಿಧನರಾಗಿರುತ್ತಾರೆ. ಅವರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ ಎಂದಿದ್ದಾರೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರವು ಆದೇಶಿಸಿದೆ.
ಶ್ರೀನಗರ : ಶ್ರೀನಗರದ ನೌಗಮ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 30 ಜನರು ಗಾಯಗೊಂಡಿದ್ದಾರೆ, ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ. ಪ್ರತ್ಯಕ್ಷದರ್ಶಿಗಳು ಮತ್ತು ಪ್ರದೇಶದಿಂದ ಬಂದ ಸಿಸಿಟಿವಿ ತುಣುಕುಗಳು ಸ್ಫೋಟವು ಕಟ್ಟಡವನ್ನು ಹರಿದು ಹೋಗುವುದನ್ನು ತೋರಿಸುತ್ತವೆ, ಬೆಂಕಿ ಮತ್ತು ದಟ್ಟ ಹೊಗೆಯನ್ನು ಗಾಳಿಯಲ್ಲಿ ಕಳುಹಿಸುತ್ತವೆ. ಅಧಿಕಾರಿಗಳ ಪ್ರಕಾರ, ಪೊಲೀಸರು ಮತ್ತು ವಿಧಿವಿಜ್ಞಾನ ತಂಡಗಳು ಫರಿದಾಬಾದ್ನಿಂದ ತಂದ ಸ್ಫೋಟಕ ವಸ್ತುಗಳನ್ನು ನಿರ್ವಹಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಭಯೋತ್ಪಾದನಾ ಮಾಡ್ಯೂಲ್ ಪ್ರಕರಣದಿಂದ ವಶಪಡಿಸಿಕೊಂಡ 360 ಕೆಜಿ ದಾಸ್ತಾನಿನಲ್ಲಿ ಹೆಚ್ಚಿನದನ್ನು ಪೊಲೀಸ್ ಠಾಣೆಯೊಳಗೆ ಸಂಗ್ರಹಿಸಲಾಗಿತ್ತು, ಅಲ್ಲಿ ಪ್ರಾಥಮಿಕ ಎಫ್ಐಆರ್ ದಾಖಲಾಗಿದೆ. ವಶಪಡಿಸಿಕೊಂಡ ಕೆಲವು ರಾಸಾಯನಿಕಗಳನ್ನು ಪೊಲೀಸ್ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು, ಆದರೆ ಹೆಚ್ಚಿನ ಪಾಲು ಠಾಣೆಯಲ್ಲಿಯೇ ಇತ್ತು. ಬಲಿಪಶುಗಳ ಶವಗಳನ್ನು ಶ್ರೀನಗರದ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆದೊಯ್ಯಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಗಾಯಾಳುಗಳಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ, ಮತ್ತು ಸಿಲುಕಿರುವ…
ಬೆಂಗಳೂರು : ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರು ತೀವ್ರ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಸಾಲುಮರದ ತಿಮ್ಮಕ್ಕ ಅವರು ದಾಖಲಾಗಿದ್ದರು. ತೀವ್ರ ಉಸಿರಾಟದ ಸಮಸ್ಯೆಯಿಂದ ತಿಮ್ಮಕ್ಕ ಬಳಲುತ್ತಿದ್ದರು. ಈ ಹಿನ್ನಲೆಯಲ್ಲಿ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ. ತಿಮ್ಮಕ್ಕ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ಸಾವಿರಾರು ಗಿಡಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ಸಲಹಿದ ತಿಮ್ಮಕ್ಕನವರು ತಮ್ಮ ಬಹುಪಾಲು ಜೀವಿತ ಕಾಲವನ್ನು ಪರಿಸರ ಸಂರಕ್ಷಣೆಗಾಗಿ ಮುಡಿಪಾಗಿಟ್ಟವರು. ಇಂದು ತಿಮ್ಮಕ್ಕನವರು ನಮ್ಮನ್ನು ಅಗಲಿದರೂ ಅವರ ಪರಿಸರ ಪ್ರೇಮ ಅವರನ್ನು ಚಿರಸ್ಥಾಯಿಯಾಗಿಸಿದೆ. ಅಗಲಿದ ಮಹಾಚೇತನಕ್ಕೆ ನನ್ನ ನಮನಗಳು.ಸಾಲುಮರದ ತಿಮ್ಮಕ್ಕನವರ ನಿಧನದಿಂದ ನಾಡು ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬವರ್ಗಕ್ಕೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ. https://twitter.com/siddaramaiah/status/1989235723908575408?ref_src=twsrc%5Etfw%7Ctwcamp%5Etweetembed%7Ctwterm%5E1989235723908575408%7Ctwgr%5E61935ca9d5951c24b9be6361deaa7ed69b2073e4%7Ctwcon%5Es1_c10&ref_url=https%3A%2F%2Fkannadadunia.com%2Fthe-country-has-become-poorer-due-to-the-death-of-the-tree-mother-salumarada-thimmakka-cm-siddaramaiah-condoles%2F
ಬೆಂಗಳೂರು : ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ (114)ಅವರು ತೀವ್ರ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾಲುಮರದ ತಿಮ್ಮಕ್ಕ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾಲುಮರದ ತಿಮ್ಮಕ್ಕ ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಸಾಲುಮರದ ತಿಮ್ಮಕ್ಕ ಅವರು ದಾಖಲಾಗಿದ್ದರು. ಕಳೆದ ಕೆಲವು ದಿನಗಳ ಹಿಂದೆ ಮನೆಯಲ್ಲಿ ತಿಮ್ಮಕ್ಕ ಜಾರಿ ಬಿದ್ದಿದ್ದರು. ಅಲ್ಲದೆ ತೀವ್ರ ಉಸಿರಾಟದ ಸಮಸ್ಯೆಯಿಂದ ತಿಮ್ಮಕ್ಕ ಬಳಲುತ್ತಿದ್ದರು. ಈ ಹಿನ್ನಲೆಯಲ್ಲಿ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ. 8,000 ಕ್ಕೂ ಅಧಿಕ ಸಸಿಗಳನ್ನು ನೆಟ್ಟು ಪೋಷಿಸಿ ಬೆಳೆಸಿದ್ದಾರೆ. ಪರಿಸರದ ಉಳಿವಿಗೆ ಅವರ ನೀಡಿರುವ ಮಹತ್ತರ ಕೊಡುಗೆಯನ್ನು ಗೌರವಿಸಿ ಭಾರತ ಸರ್ಕಾರ 2019ರಲ್ಲಿ ಅವರಿಗೆ ಪದ್ಮಶ್ರೀ ಪ್ರಶಸ್ತಿಯಿಂದ ಪುರಸ್ಕರಿಸಿದೆ. ಪತಿ ಚಿಕ್ಕರಂಗಯ್ಯ ಕೂಡ ಸಸಿನೆಡುವಲ್ಲಿ ತಿಮ್ಮಕ್ಕನಿಗೆ ನೆರವಾಗುತ್ತಿದ್ದರು. ದಂಪತಿಗೆ ಸಂತಾನ ಭಾಗ್ಯವಿರಲಿಲ್ಲ. ಆ ಕೊರತೆ, ದುಃಖ ಮತ್ತು ನೋವನ್ನು ಸಸಿ ನೆಟ್ಟು ಪೋಷಿಸುವ ಮೂಲಕ…
ಬೆಂಗಳೂರು: ವೃಕ್ಷಮಾತೆ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿದ್ದ ಸಾಲು ಮರದ ತಿಮ್ಮಕ್ಕ ಅವರ ನಿಧನಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ವ್ಯಕ್ತಪಡಿಸಿದ್ದಾರೆ. ಸಾಲುಮರದ ತಿಮ್ಮಕ್ಕ ಕರ್ನಾಟಕದ ಹೆಮ್ಮೆಯ ಪರಿಸರ ಪ್ರಚಾರಕರಾಗಿದ್ದರು. ಮಕ್ಕಳಿಲ್ಲದ ಈ ಮಹಾತಾಯಿ ಮರಗಳನ್ನೇ ಮಕ್ಕಳಂತೆ ಬೆಳೆಸುವ ಮೂಲಕ ಹಸಿರಿನ ಮಹತ್ವವನ್ನು ಜಗತ್ತಿಗೆ ಸಾರಿದ್ದರು ಎಂದು ತಮ್ಮ ಶೋಖ ಸಂದೇಶದಲ್ಲಿ ತಿಳಿಸಿದ್ದಾರೆ. ಅನಕ್ಷರಸ್ಥರಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿ ಗೌರವ ಡಾಕ್ಟರೇಟ್ ಗೆ ಪಾತ್ರರಾಗಿದ್ದ ಅವರಿಗೆ ಪದ್ಮಶ್ರೀ ಸೇರಿದಂತೆ ಅತ್ಯುನ್ನತ ಪ್ರಶಸ್ತಿಗಳು ಲಭಿಸಿದ್ದವು. ತಿಮ್ಮಕ್ಕನವರು ಎಷ್ಟು ಮುಗ್ಧರಾಗಿದ್ದರೆಂದರೆ, ತಮಗೆ ಪ್ರಶಸ್ತಿ ನೀಡಿದ ರಾಷ್ಟ್ರಪತಿಗಳ ತಲೆಯ ಮೇಲೆ ಕೈಯಿಟ್ಟು ಆಶೀರ್ವಾದ ಮಾಡಿದ್ದರು. ಅಂದಿನ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಕೂಡ ಅಷ್ಟೇ ಮುಗ್ದತೆಯಿಂದ ಅವರ ಆಶೀರ್ವಾದ ಸ್ವೀಕರಿಸಿದ್ದರು ಎಂದು ಸ್ಮರಿಸಿದರು. ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನವರಾಗಿದ್ದ ತಿಮ್ಮಕ್ಕನವರು, ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದ ಬಿಕ್ಕಲ ಚಿಕ್ಕಯ್ಯ ಅವರನ್ನು ವರಿಸಿದ ಬಳಿಕ ಹುಲಿಕಲ್…
ಬೆಂಗಳೂರು : ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ (114)ಅವರು ತೀವ್ರ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾಲುಮರದ ತಿಮ್ಮಕ್ಕ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾಲುಮರದ ತಿಮ್ಮಕ್ಕ ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಸಾಲುಮರದ ತಿಮ್ಮಕ್ಕ ಅವರು ದಾಖಲಾಗಿದ್ದರು. ಕಳೆದ ಕೆಲವು ದಿನಗಳ ಹಿಂದೆ ಮನೆಯಲ್ಲಿ ತಿಮ್ಮಕ್ಕ ಜಾರಿ ಬಿದ್ದಿದ್ದರು. ಅಲ್ಲದೆ ತೀವ್ರ ಉಸಿರಾಟದ ಸಮಸ್ಯೆಯಿಂದ ತಿಮ್ಮಕ್ಕ ಬಳಲುತ್ತಿದ್ದರು. ಈ ಹಿನ್ನಲೆಯಲ್ಲಿ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ. ಸಾಲುಮರದ ತಿಮ್ಮಕ್ಕ ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ…
ಬೆಂಗಳೂರು: ವೃಕ್ಷಮಾತೆ ಎಂದೇ ಹೆಸರಾಗಿರುವಂತ ಸಾಲುಮರದ ತಿಮ್ಮಕ್ಕ ಅವರು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಸಾಲುಮರದ ತಿಮ್ಮಕ್ಕ – ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದ್ದಾಳೆ.[೧] ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ. ಜೀವನ ತಿಮ್ಮಕ್ಕ ಅವರು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಜನಿಸಿದರು. ತಂದೆ ಚಿಕ್ಕರಂಗಯ್ಯ; ತಾಯಿ ವಿಜಯಮ್ಮ. ಇವರಿಗೆ ಯಾವುದೇ ಔಪಚಾರಿಕ ಶಿಕ್ಷಣ ಲಭ್ಯವಾಗದೆ ಹತ್ತಿರದ…
ಹೈದರಾಬಾದ್: ತೆಲಂಗಾಣದ ಸಂಗರೆಡ್ಡಿಯಲ್ಲಿರುವ ಹಾಸ್ಟೆಲ್ ನಲ್ಲಿ ನಿಯೋಜಿತರಾಗಿದ್ದ ಪಾನಮತ್ತ ಕಾವಲುಗಾರನೊಬ್ಬ ವಿದ್ಯಾರ್ಥಿಗಳಿಗೆ ಸಿದ್ಧಪಡಿಸಿದ ಅನ್ನದಲ್ಲಿ ಕಾಲು ಇಟ್ಟುಕೊಂಡು ಮಲಗಿರುವುದು ಕಂಡುಬಂದಿದೆ. ಇಸ್ಮಾಯಿಲ್ ಖಾನ್ಪೇಟೆ ಪ್ರದೇಶದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಊಟಕ್ಕೆ ಮೆಸ್ ಗೆ ಬಂದ ವಿದ್ಯಾರ್ಥಿಗಳು, ಕಾವಲುಗಾರ ಅಕ್ಕಿ ಇರುವ ಪಾತ್ರೆಯೊಳಗೆ ಕಾಲು ಇಟ್ಟುಕೊಂಡು ಮಲಗಿರುವುದನ್ನು ನೋಡಿ ಆಘಾತಕ್ಕೊಳಗಾದರು. ಕಾಲೇಜು ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಕಾವಲುಗಾರನನ್ನು ಎಬ್ಬಿಸಲು ಪ್ರಯತ್ನಿಸಿದರು, ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಘಟನೆಯ ನಂತರ, ಕಾವಲುಗಾರನನ್ನು ವಜಾಗೊಳಿಸಲಾಯಿತು.













