Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಹಗಲಲ್ಲೂ ಕರೆಂಟ್ ಒದಗಿಸುವ ಯೋಜನೆಗೆ ನಾಳೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ರಾಜ್ಯದಲ್ಲಿ ಕುಸುಮ್-ಸಿ ಯೋಜನೆ ಮೂಲಕ ಡಿಸೆಂಬರ್ ವೇಳೆಗೆ 2,400 ಮೆ. ವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ ಹೊಂದಿದ್ದು, ರೈತರಿಗೆ ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸುವ ಈ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು ನಾಳೆ ಗೌರಿಬಿದನೂರಿನಲ್ಲಿ ಅಧಿಕೃತ ಚಾಲನೆ ನೀಡಲಿದ್ದಾರೆ ಎಂದು ಇಂಧನ ಸಚಿವ ಕೆ. ಜೆ.ಜಾರ್ಜ್ ತಿಳಿಸಿದ್ದಾರೆ. ಪ್ರತಿ ಮೆ.ವ್ಯಾಟ್ ವಿದ್ಯುತ್ ಉತ್ಪಾದ ನೆಗೆ 3-4 ಕೋಟಿ ವೆಚ್ಚ ತಗುಲುತ್ತದೆ. ಈ ಪೈಕಿ 1 ಕೋಟಿ ರೂ. ಕೇಂದ್ರ ಸರ್ಕಾರ ಸಬ್ಸಿಡಿ ನೀಡುತ್ತದೆ. ಸದ್ಯ ಟೆಂಡರ್ ಕರೆದು 2,400 ಮೆ.ವ್ಯಾಟ್ ವಿದ್ಯುತ್ ಉತ್ಪಾದನೆ ಸಾಮ ರ್ಥದ ಘಟಕಗಳ ಅಳವಡಿಕೆಗೆ ನಿರ್ಧರಿ ಸಿದ್ದು,9,500 ಕೋಟಿಯಿಂದ 10,000 ಕೋಟಿ ಬಂಡವಾಳ ಹೂಡಿಕೆ ನಿರೀಕ್ಷೆಯಿದೆ ಎಂದು ಹೇಳಿದರು. ಸಬ್ಸಿಡಿ ಸೌರಶಕ್ತಿ ಚಾಲಿತ ನೀರಾವರಿ ಪಂಪ್ಗಳೊಂದಿಗೆ ರೈತರಿಗೆ ಬೆಂಬಲ ನೀಡಲು ಸರ್ಕಾರ…
ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ,(ಬ್ಯಾಂಕುಗಳ ಸಹಯೋಗದೊಂದಿಗೆ) ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಸ್ವಾತಂತ್ರ್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಯೋಜನೆಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-3ರಲ್ಲಿ ಬರುವ ಒಕ್ಕಲಿಗ ಸಮುದಾಯಗಳಿಗೆ ಸೇರಿದ ಕ್ರಮ ಸಂಖ್ಯೆ 1(ಎ) ಯಿಂದ (ಟಿ) ವರೆಗೆ ನಮೂದಾಗಿರುವ ಸಮುದಾಯಕ್ಕೆ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಲಿಂಗಾಯಿತ, ಕಾಡುಗೊಲ್ಲ, ಮರಾಠ, ಮತ್ತು ಇದರ ಉಪಜಾತಿಗಳನ್ನು ಹೊರತುಪಡಿಸಿ)ಸೇರಿದ ಆಸಕ್ತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ನಿಗಮವು ಅನುಷ್ಠಾನಗೊಳಿಸಿರುವ ಮೇಲ್ಕಂಡ ಯೋಜನೆಗಳನ್ನು ಶಾಸಕರು ಅಥವಾ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳು, ಜಿಲ್ಲಾ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ರಚಿಸಿದ ಆಯ್ಕೆ ಸಮಿತಿಯ ಮೂಲಕ ಆಯ್ಕೆಯನ್ನು ಮಾಡಲಾಗುವುದು. 2023-24…
ಬೆಂಗಳೂರು : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-I, IIA, IIB, IIIA, IIIB, ಪ.ಜಾ ಮತ್ತು ಪ.ಪಂ.ಕ್ಕೆ ಸೇರಿದ ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮೋ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು https://shp.karnataka.gov.in/bcwd ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 26.06.2025 ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ, ಪ್ರವೇಶಾತಿಗೆ ಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರಗಳನ್ನು https://bcwd.karnataka.gov.in/ ನಲ್ಲಿ ನೋಡಬಹುದು. ಹೆಚ್ಚಿನ ಮಾಹಿತಿಗಾಗಿ : ಇ-ಮೇಲ್ bcwdhelpline@gmail.com ಮೂಲಕ ಅಥವಾ ಜಿಲ್ಲಾ / ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸುವುದು. ಸಹಾಯವಾಣಿ ಸಂಖ್ಯೆ : 8050770004\8050770005
ಬೆಂಗಳೂರು : ಪ್ರಸಕ್ತ ಸಾಲಿನ ಪಠ್ಯದಲ್ಲಿ ಸಂಚಾರ, ವೈಯಕ್ತಿಕ ಸುರಕ್ಷತೆ, ರಸ್ತೆ ಸುರಕ್ಷತೆ, ಟ್ರಾಫಿಕ್ ಲೈಟ್ ವಿಚಾರ ಕುರಿತ ಪಠ್ಯ ಅಳವಡಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ತಿಳಿಸಿದೆ. ಬೆಂಗಳೂರು ಸಂಚಾರ ಪೊಲೀಸರು ಸಲ್ಲಿಸಿದ್ದ ಪ್ರಸ್ತಾವನೆಗೆ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಗ್ರೀನ್ ಸಿಗ್ನಲ್ ನೀಡಿದ್ದು, ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ 2 ರಿಂದ 7ನೇ ತರಗತಿಗಳು ಹಾಗೂ 9ನೇ ತರಗತಿಗೆ ಪ್ರಸಕ್ತ ಸಾಲಿನ ಪಠ್ಯದಲ್ಲಿ ಸಂಚಾರ ನಿಯಮಗಳ ಕುರಿತು ಅಳವಡಿಸಲು ಸಮ್ಮತಿಸಿದೆ. ಸಂಚಾರ, ಸೂಚನಾ ಫಲಕಗಳು, ನಿಯಮಗಳು, ವೈಯಕ್ತಿಕ ಸುರಕ್ಷತೆ, ರಸ್ತೆ ಸುರಕ್ಷತೆ, ರಸ್ತೆ ಸುರಕ್ಷತೆ ಎಲ್ಲರ ಸುರಕ್ಷತೆ ಹೆಸರಿನ ಅಧ್ಯಾಯಗಳನ್ನು ಬೆಂಗಳೂರು ಸಂಚಾರ ಪೊಲೀಸ್ ಇಲಾಖೆಯೇ ಸಿದ್ಧಪಡಿಸಿದ್ದು, ಪಠ್ಯಪುಸ್ತಕ ರಚನೆ ಅಥವಾ ಪರಿಷ್ಕರಣೆ ಸಮಯದಲ್ಲಿ ಸಮಿತಿ ಅಧ್ಯಕ್ಷರ ಗಮನಕ್ಕೆ ತಂದು ಮುಂದಿನ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಪಠ್ಯ ಪುಸ್ತಕ ಸಂಘ ತಿಳಿಸಿದೆ. ಇಲಾಖೆಯ ನಿರ್ದೇಶಕರು ಈ ಕುರಿತಾಗಿ ಆದೇಶ ಹೊರಡಿಸಿದ್ದು, ರಾಜ್ಯ ಪಠ್ಯಕ್ರಮ…
ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿ ಹಂತದಲ್ಲಿ ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ಉಚಿತವಾಗಿ ಮಾಡಲು ಜೂನ್ 30ರವರೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಪಡಿತರ ಚೀಟಿದಾರರು ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ಬೆರಳಚ್ಚು ಮೂಲಕ ತಮ್ಮ ಗುರುತು, ನೋಂದಣಿ ಅಥವಾ ಮರು ನೋಂದಣಿ ಮಾಡಿಸದೆ ಇರುವ ಎಲ್ಲಾ ಸದಸ್ಯರು ಜೂನ್ 30ರೊಳಗೆ ಬಯೋಮೆಟ್ರಿಕ್ ಸಂಗ್ರಹಣೆ (ಇ-ಕೆವೈಸಿ) ಮಾಡಿಸಿಕೊಳ್ಳಲು ಅಂತಿಮ ಅವಕಾಶವನ್ನು ನೀಡಲಾಗಿದ್ದು, ಇದಕ್ಕೆ ಯಾವುದೇ ಹಣ ನೀಡುವಂತಿಲ್ಲ. ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿದಾರರಿಗೆ ಮುಂದಿನ ತಿಂಗಳು ಆಹಾರ ಧಾನ್ಯ ವಿತರಣೆಯನ್ನು ಸ್ಥಗಿತಗೊಳಿಸಲಾಗುವುದು ಮತ್ತು ಆಧಾರ್ ದೃಢೀಕರಣ (ಇ-ಕೆವೈಸಿ)ಯನ್ನು ಮಾಡದೇ ಇರುವ ಫಲಾನುಭವಿಗಳಿಗೆ ಜುಲೈ ಮಾಹೆಯಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ. ಇ-ಕೆವೈಸಿ ಮಾಡುವುದು ನಿಮ್ಮ ಸ್ಥಳೀಯ ಪಡಿತರ ಅಥವಾ ಪಿಡಿಎಸ್ ಡೀಲರ್ಗೆ ಭೇಟಿ ನೀಡಿ ಕುಟುಂಬದ ಮುಖ್ಯಸ್ಥರ ಆಧಾರ್ ಸಂಖ್ಯೆಯನ್ನು…
ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ದಿ ನಿಗಮದ ಯೋಜನೆಗಳಡಿ 2025-26 ನೇ ಸಾಲಿಗೆ ಸಹಾಯಧನ ಹಾಗೂ ಸಾಲ ಸೌಲಭ್ಯವನ್ನು ಪಡೆಯಲು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ(ಹೊಸದು), ಗಂಗಾ ಕಲ್ಯಾಣ ಯೋಜನೆ(ಈ ಯೋಜನೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು ಇತರೆ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಹೊಂದಿರಬೇಕು), ಸ್ವಯಂ ಉದ್ಯೋಗ ನೇರಸಾಲ( ಬ್ಯಾಂಕ್ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆ( ವಾರ್ಷಿಕ ವರಮಾನ ರೂ.15 ಲಕ್ಷ ಮಿತಿಯಲ್ಲಿರಬೇಕು) ಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು, ನಿಗಮದ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಸರ್ಕಾರದ ಆದೇಶದನ್ವಯ ಕಾಡುಗೊಲ್ಲ ಜಾತಿಗೆ ಸೇರಿರಬೇಕು, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರಬೇಕು, ವಯೋಮಿತಿ 18 ವರ್ಷಗಳಿಂದ 55…
ನವದೆಹಲಿ :ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿ ಹುದ್ದೆಯನ್ನು ತೊರೆದು ಪ್ರಧಾನಿಯಾಗಿ ಕೇಂದ್ರ ಸರ್ಕಾರದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ನೇತೃತ್ವ ವಹಿಸಿಕೊಂಡು 11 ವರ್ಷಗಳಾಗಿವೆ. ವಿಶ್ವ ಆರ್ಥಿಕತೆಯಲ್ಲಿ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿರುವುದರ ಜೊತೆಗೆ, ನರೇಂದ್ರ ಮೋದಿ ಅವರ ಪ್ರಧಾನಿ ಅವಧಿಯಲ್ಲಿ ಭಾರತ ಸಾಧಿಸಿದ ಅನೇಕ ಸಾಧನೆಗಳಿವೆ. ಪ್ರಧಾನಿ ನರೇಂದ್ರ ಮೋದಿ ತಮ್ಮ ಸರ್ಕಾರದ 11 ವರ್ಷಗಳ ಅವಧಿಯಲ್ಲಿ, ಭಾರತವು ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಮಾರ್ಪಟ್ಟಿದೆ, ಜೊತೆಗೆ ಹವಾಮಾನ ಕ್ರಮ ಮತ್ತು ಡಿಜಿಟಲ್ ನಾವೀನ್ಯತೆ ಮುಂತಾದ ಪ್ರಮುಖ ವಿಷಯಗಳ ಕುರಿತು ಪ್ರಮುಖ ಜಾಗತಿಕ ಧ್ವನಿಯಾಗಿದೆ ಎಂದು ಹೇಳಿದರು. ಸೋಮವಾರ ತಮ್ಮ ಸರ್ಕಾರದ ಮೂರನೇ ಅವಧಿಯ ಮೊದಲ ವರ್ಷ ಪೂರ್ಣಗೊಂಡ ಸಂದರ್ಭದಲ್ಲಿ, ಕಳೆದ 11 ವರ್ಷಗಳಲ್ಲಿ ಉತ್ತಮ ಆಡಳಿತ ಮತ್ತು ಬದಲಾವಣೆಗೆ ವಿಶೇಷ ಗಮನ ನೀಡಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಮಾಡಿದ ಪೋಸ್ಟ್ನಲ್ಲಿ ಅವರು ಹಂಚಿಕೊಂಡ ಲಿಂಕ್ನಲ್ಲಿ ಪ್ರಸ್ತುತ ಕೇಂದ್ರ ಸಚಿವರಲ್ಲಿ ಶೇಕಡಾ 60 ರಷ್ಟು ಜನರು ಪರಿಶಿಷ್ಟ…
ಒಡಿಶಾ: ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು 11 ವರ್ಷಗಳ ಮೋದಿ ಸರ್ಕಾರ, ಅಭಿವೃದ್ಧಿ ಹೊಂದಿದ ಭಾರತದತ್ತ ಒಂದು ಪಯಣ ಕುರಿತು ಮರಳು ಕಲೆಗಳನ್ನು ರಚಿಸಿದ್ದಾರೆ. ನರೇಂದ್ರ ಮೋದಿ ಅವರು ಇಂದು ಭಾರತದ ಪ್ರಧಾನಿಯಾಗಿ 11 ನೇ ವರ್ಷವನ್ನು ಪೂರೈಸುತ್ತಿದ್ದಾರೆ. ಈ ಸಂದರ್ಭದಲ್ಲಿ, ಈ 11 ವರ್ಷಗಳಲ್ಲಿ ಅವರ ಸರ್ಕಾರ ತೆಗೆದುಕೊಂಡ ದೊಡ್ಡ ನಿರ್ಧಾರಗಳ ಕುರಿತು ಇಲ್ಲಿದೆ ಸಂಕ್ಷಿಪ್ತ ಮಾಹಿತಿ 2004 ರಲ್ಲಿ 65,500 ಕಿ.ಮೀ ಇದ್ದ ಹೆದ್ದಾರಿಗಳು 2014 ರಲ್ಲಿ 91,287 ಕಿ.ಮೀ ಆದವು ಮತ್ತು ಈಗ 2024 ರ ಹೊತ್ತಿಗೆ ಅವುಗಳನ್ನು 1,46,145 ಕಿ.ಮೀ.ಗೆ ವಿಸ್ತರಿಸಲಾಗಿದೆ. 2014 ರಲ್ಲಿ 74 ವಿಮಾನ ನಿಲ್ದಾಣಗಳಿದ್ದವು, 2024 ರ ಹೊತ್ತಿಗೆ 157 ವಿಮಾನ ನಿಲ್ದಾಣಗಳಿವೆ. 2014 ರ ಹೊತ್ತಿಗೆ, ಪ್ರಧಾನ ಮಂತ್ರಿ ಗ್ರಾಮೀಣ ಸಡಕ್ ಯೋಜನೆಯಡಿಯಲ್ಲಿ 4,19,358 ಕಿ.ಮೀ ರಸ್ತೆಗಳನ್ನು ನಿರ್ಮಿಸಲಾಯಿತು, ಆದರೆ 2024-25 ರ ಹೊತ್ತಿಗೆ, 7,71,950 ಕಿ.ಮೀ ರಸ್ತೆಗಳನ್ನು ನಿರ್ಮಿಸಲಾಗಿದೆ. 2014 ರಲ್ಲಿ ಮೋದಿ ಪ್ರಧಾನಿಯಾದಾಗ, ದೇಶದಲ್ಲಿ ಏಳು…
ಮೈಸೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ 11 ವರ್ಷ ಪೂರೈಸಿರಿವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಮೋದಿ ಸರ್ಕಾರಕ್ಕೆ 10 ಕ್ಕೆ ಸೊನ್ನೆ ಅಂಕ ನೀಡುವುದಾಗಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮ ಪ್ರಚಾರದಿಂದಾಗಿ ಮೋದಿ 11 ವರ್ಷಗಳನ್ನು ಪೂರೈಸಿದ್ದಾರೆ. ಶೂನ್ಯ ಅಂಕಗಳು.ಗುಜರಾತ್ ಸಿಎಂ ಆಗಿದ್ದಾಗ, ಕೇಂದ್ರ ತೆರಿಗೆ ವಿಕೇಂದ್ರೀಕರಣದಲ್ಲಿ ರಾಜ್ಯಗಳಿಗೆ 50% ಪಾಲು ಇರಬೇಕು ಎಂದು ಹೇಳಿದ್ದರು, ಆದರೆ ಅವರು ಪ್ರಧಾನಿಯಾದಾಗ ಏನು ಮಾಡಿದರು?… ಕರ್ನಾಟಕಕ್ಕೆ ಅನ್ಯಾಯ ಮಾಡಲಾಗಿದೆ. ಆದರೆ ನಾವು ಬಿಜೆಪಿಯನ್ನು ಕೇಳಿದಾಗ, ನಾವು ಅಪಪ್ರಚಾರದಲ್ಲಿ ತೊಡಗಿದ್ದೇವೆ ಎಂದು ಅವರು ಹೇಳುತ್ತಾರೆ ಎಂದು ಕಿಡಿಕಾರಿದ್ದಾರೆ. ಅಮಾನ್ಯೀಕರಣದಿಂದ ಯಾರಿಗೆ ಅನುಕೂಲವಾಗಿದೆ? ಅಚ್ಚೆ ದಿನ್ ಆಯೇಗಾ, ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಕೊಡುತ್ತೇನೆ ಎಂದರು. ರೈತರ ಸಮಸ್ಯೆ ಬಗೆಹರಿಸುತ್ತೇನೆ ಎಂದರು. 11 ವರ್ಷ ತುಂಬಿಸಿದ್ದಾರೆ ಅಷ್ಟೇ. ಪ್ರಮುಖವಾಗಿ ಏನು ಹೇಳಿದ್ದರೋ ಅದನ್ನು ಮಾಡಿಲ್ಲ ಎಂದರು. ನಿರ್ಮಲಾ ಸೀತಾರಾಮನ್ 5300 ಕೋಟಿಗಳನ್ನು ಕೊಡುವುದಾಗಿ ಘೋಷಿಸಿ ಕೊಡಲಿಲ್ಲ.…
BIG UPDATE : ಮಹಾರಾಷ್ಟ್ರದ ಥಾಣೆಯಲ್ಲಿ ಘೋರ ದುರಂತ : ಚಲಿಸುತ್ತಿದ್ದ ರೈಲಿನಿಂದ ಬಿದ್ದು 6 ಮಂದಿ ಪ್ರಯಾಣಿಕರು ಸಾವು.!
ಥಾಣೆ : ಮಹಾರಾಷ್ಟ್ರದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಚಲಿಸುತ್ತಿದ್ದ ರೈಲಿಗೆ ಬಿದ್ದು 6 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಥಾಣೆಯ ಮುಂಬ್ರಾ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಚಲಿಸುತ್ತಿದ್ದ ಲೋಕಲ್ ರೈಲಿನಲ್ಲಿ ಜನಸಂದಣಿಯಿಂದಾಗಿ 6 ಪ್ರಯಾಣಿಕರು ಬಿದ್ದು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಥಾಣೆಯ ಮುಂಬ್ರಾ ರೈಲು ನಿಲ್ದಾಣದಲ್ಲಿ ಸಿಎಸ್ಎಂಟಿ ಕಡೆಗೆ ಪ್ರಯಾಣಿಸುತ್ತಿದ್ದ 6 ಪ್ರಯಾಣಿಕರು ರೈಲಿನಿಂದ ಬಿದ್ದು ಸಾವನ್ನಪ್ಪಿದ್ದಾರೆ. ರೈಲಿನಲ್ಲಿ ಅತಿಯಾದ ಜನಸಂದಣಿಯೇ ಅಪಘಾತಕ್ಕೆ ಕಾರಣ ಎಂದು ನಂಬಲಾಗಿದೆ. ರೈಲ್ವೆ ಆಡಳಿತ ಮತ್ತು ಪೊಲೀಸರು ಸ್ಥಳಕ್ಕೆ ತಲುಪಿದ್ದಾರೆ. ಗಾಯಾಳುಗಳನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ. ಅಪಘಾತದ ತನಿಖೆ ಆರಂಭವಾಗಿದೆ. ಘಟನೆಯಿಂದ ಸ್ಥಳೀಯ ಸೇವೆಗಳ ಮೇಲೂ ಪರಿಣಾಮ ಬೀರಿದೆ. https://twitter.com/ANI/status/1931937189572562954?ref_src=twsrc%5Egoogle%7Ctwcamp%5Eserp%7Ctwgr%5Etweet