Author: kannadanewsnow57

ಸಿರಿಯಾದ ಡಮಾಸ್ಕಸ್ನ ದ್ವೇಲಾ ಪ್ರದೇಶದಲ್ಲಿ ಭಾನುವಾರ ಜನರಿಂದ ತುಂಬಿದ್ದ ಚರ್ಚ್ನೊಳಗೆ ಇಸ್ಲಾಮಿಕ್ ಸ್ಟೇಟ್ ಆತ್ಮಹತ್ಯಾ ಬಾಂಬರ್ ಸ್ವತಃ ಸ್ಫೋಟಿಸಿಕೊಂಡ ಪರಿಣಾಮ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ. ಮಾರ್ ಎಲಿಯಾಸ್ ಚರ್ಚ್ ಒಳಗೆ ಜನರು ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ. ಡಮಾಸ್ಕಸ್ನ ದ್ವೇಲಾ ಪ್ರದೇಶದಲ್ಲಿರುವ ಸೇಂಟ್ ಎಲಿಯಾಸ್ ಚರ್ಚ್ ಒಳಗೆ ಆತ್ಮಹತ್ಯಾ ದಾಳಿಕೋರನೊಬ್ಬ ಸ್ಫೋಟಕ ಪಟ್ಟಿಯನ್ನು ಸ್ಫೋಟಿಸಿದ್ದಾನೆ” ಎಂದು ರಾಜ್ಯ ಟಿವಿ ವರದಿ ಮಾಡಿದೆ. ದಾಳಿಯಲ್ಲಿ “ಪ್ರಾಥಮಿಕ ಸಂಖ್ಯೆಯ ಪ್ರಕಾರ 20 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ” ಎಂದು ಸಿರಿಯನ್ ನಾಗರಿಕ ರಕ್ಷಣಾ ಹೇಳಿಕೆಯಲ್ಲಿ ತಿಳಿಸಿದೆ. ಡಮಾಸ್ಕಸ್ ಚರ್ಚ್ನಲ್ಲಿ ತನ್ನನ್ನು ತಾನು ಸ್ಫೋಟಿಸಿಕೊಂಡ ಆತ್ಮಹತ್ಯಾ ಬಾಂಬರ್ ಇಸ್ಲಾಮಿಕ್ ಸ್ಟೇಟ್ ಸದಸ್ಯ ಎಂದು ಸಿರಿಯಾದ ಆಂತರಿಕ ಸಚಿವಾಲಯ ತಿಳಿಸಿದೆ, ಡಾಯೇಶ್ (IS) ಭಯೋತ್ಪಾದಕ ಗುಂಪಿನೊಂದಿಗೆ ಸಂಬಂಧ ಹೊಂದಿರುವ ಆತ್ಮಹತ್ಯಾ ದಾಳಿಕೋರನೊಬ್ಬ ಸೇಂಟ್ ಎಲಿಯಾಸ್ ಚರ್ಚ್ಗೆ ಪ್ರವೇಶಿಸಿದನು… ಗುಂಡು ಹಾರಿಸಿದ ನಂತರ ಸ್ಫೋಟಕ ಪಟ್ಟಿಯಿಂದ ತನ್ನನ್ನು ತಾನು ಸ್ಫೋಟಿಸಿಕೊಂಡನು”…

Read More

ರಾಜ್ಯ ಯುವನೀತಿ-2012ರ ಅನುಷ್ಟಾನದಡಿ “ನಮ್ಮೂರ ಶಾಲೆಗೆ ನಮ್ಮ ಯುವಜನರು” ಯೋಜನೆಯನ್ನು 2017-18ನೇ ಸಾಲಿನಿಂದ ಅನ್ವಯವಾಗುವಂತೆ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲ್ಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರಿದ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ಆಯ್ಕೆಯಾದ ಪ್ರತಿ ಶಾಲೆಗೆ ಸರ್ಕಾರದಿಂದ ಪ್ರೋತ್ಸಾಹವಾಗಿ ತಲಾ 1 ಲಕ್ಷ ರೂ. ಪ್ರೋತ್ಸಾಹಧನ ನೀಡಲಾಗುವುದು. ಪ್ರೋತ್ಸಾಹಧನದಲ್ಲಿ 10 ಸಾವಿರ ರೂ. ಆಯ್ಕೆಯಾದ ಶಾಲೆಯ ದೈಹಿಕ ಶಿಕ್ಷಕರಿಗೆ ಮತ್ತು 90 ಸಾವಿರ ರೂ. ಶಾಲೆಯ ಎಸ್.ಡಿ.ಎಂ.ಸಿ.ಗೆ ಅಗತ್ಯ ಕ್ರೀಡಾ ಸಾಮಾಗ್ರಿಗಳ ಖರೀದಿ ಮಾಡಲು ನೀಡಲಾಗುತ್ತದೆ. ಇದರಡಿ ಪ್ರೋತ್ಸಾಹಧನ ಪಡೆಯ ಬಯಸುವ ಸರ್ಕಾರಿ ಶಾಲೆಗಳು ಆಯಾ ಜಿಲ್ಲೆಯ 2024-25ನೇ ಸಾಲಿನ ಕ್ರೀಡೆಯಲ್ಲಿ ಉತ್ತಮ ಸಾಧನೆ ತೋರಿರುವ ಹೆಚ್ಚಿನ ಸಂಖ್ಯೆಯ ಕ್ರೀಡಾಪಟುಗಳನ್ನು ಹೊಂದಿದ ಜಿಲ್ಲೆಯ ಒಂದು ಸರ್ಕಾರಿ ಶಾಲೆಯನ್ನು ಆಯ್ಕೆ ಮಾಡಲಾಗುವುದು. ಈ ಸಂಬಂಧ ದಾವಣಗೆರೆ ಜಿಲ್ಲೆಯ ಸರ್ಕಾರಿ…

Read More

ನವದೆಹಲಿ : ಪ್ರತಿ ವರ್ಷ ಭಾರತದಲ್ಲಿ ಬ್ಯಾಂಕಿಂಗ್, ರೈಲ್ವೆ ಮತ್ತು ತೆರಿಗೆ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳಾಗುತ್ತವೆ, ಇದು ಸಾಮಾನ್ಯ ಜನರ ದೈನಂದಿನ ಜೀವನದ ಮೇಲೆ ನೇರ ಪರಿಣಾಮ ಬೀರುತ್ತದೆ. 2025 ರ ಜುಲೈ 1 ರಿಂದಲೂ ಅನೇಕ ಹೊಸ ನಿಯಮಗಳನ್ನು ಜಾರಿಗೆ ತರಲಾಗುವುದು, ಇದರಲ್ಲಿ ಎಟಿಎಂ ಹಿಂಪಡೆಯುವಿಕೆ ಶುಲ್ಕಗಳು, ಡೆಬಿಟ್ ಕಾರ್ಡ್ ಶುಲ್ಕಗಳು, ಬ್ಯಾಂಕ್ ಖಾತೆಗೆ ಸಂಬಂಧಿಸಿದ ಕೆವೈಸಿ ನವೀಕರಣಗಳು, ರೈಲ್ವೆ ಟಿಕೆಟ್ ಬುಕಿಂಗ್ ಮತ್ತು ಪ್ರಯಾಣ ನಿಯಮಗಳು ಮತ್ತು ಜಿಎಸ್ಟಿ ರಿಟರ್ನ್ ಫೈಲಿಂಗ್ ವಿಧಾನಗಳು ಸೇರಿವೆ. ನೀವು ಬ್ಯಾಂಕಿಂಗ್ ಸೇವೆಗಳನ್ನು ಬಳಸುತ್ತಿದ್ದರೆ, ರೈಲಿನಲ್ಲಿ ಪ್ರಯಾಣಿಸುತ್ತಿದ್ದರೆ ಅಥವಾ ವ್ಯಾಪಾರ ಮಾಡುತ್ತಿದ್ದರೆ, ಈ ಹೊಸ ನಿಯಮಗಳನ್ನು ತಿಳಿದುಕೊಳ್ಳುವುದು ನಿಮಗೆ ಮುಖ್ಯವಾಗಿದೆ. ಜುಲೈ 1 ರಿಂದ ಬದಲಾಗಲಿವೆ ಈ ಎಲ್ಲಾ ನಿಯಮಗಳು 1. ಭಾರತದಲ್ಲಿ ATM ವಹಿವಾಟು ಹೊಸ ನಿಯಮಗಳು 2025 ಜುಲೈ 1, 2025 ರಿಂದ, ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ATM ನಿಂದ ಹಣವನ್ನು ಹಿಂಪಡೆಯಲು ಮತ್ತು ಡೆಬಿಟ್ ಕಾರ್ಡ್ಗಳನ್ನು ಬಳಸುವ ನಿಯಮಗಳು ಬದಲಾಗುತ್ತಿವೆ.…

Read More

ಹೈದರಾಬಾದ್ : ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ವೈಎಸ್ಆರ್ಸಿಪಿ ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಸತ್ತೇನಪಲ್ಲಿ ಕ್ಷೇತ್ರದ ರೆಂಟಪಲ್ಲಕ್ಕೆ ಭೇಟಿ ನೀಡಿದ್ದ ವೇಳೆ ಘೋರ ಘಟನೆಯೊಂದು ನಡೆದಿದೆ. ಈ ಭೇಟಿಯ ಸಮಯದಲ್ಲಿ, ಎಟುಕುರು ಬೈಪಾಸ್ ಬಳಿ ಜಗನ್ ಅವರ ಬೆಂಗಾವಲು ಪಡೆಯಲ್ಲಿ ವಾಹನ ಡಿಕ್ಕಿ ಹೊಡೆದು ಸಿಂಗಯ್ಯ ಎಂಬ ವ್ಯಕ್ತಿ ಸಾವನ್ನಪ್ಪಿದರು. ಈ ಪ್ರಕರಣದಲ್ಲಿ ಇತ್ತೀಚೆಗೆ ಪ್ರಮುಖ ತಿರುವು ಸಿಕ್ಕಿದೆ. ಜಗನ್ ಪ್ರಯಾಣಿಸುತ್ತಿದ್ದ ವಾಹನ ಸಿಂಗಯ್ಯಗೆ ಡಿಕ್ಕಿ ಹೊಡೆದಿರುವ ಶಂಕೆಗಳಿವೆ. ಇದರೊಂದಿಗೆ, ಸ್ಥಳಕ್ಕೆ ಪ್ರವೇಶಿಸಿದ ಪೊಲೀಸರು ಘಟನೆಯ ಸ್ಥಳದಿಂದ ಸಿಸಿಟಿವಿ ದೃಶ್ಯಾವಳಿಗಳ ಜೊತೆಗೆ ಪ್ರತ್ಯಕ್ಷದರ್ಶಿಗಳಿಂದ ಸಾಕ್ಷ್ಯಗಳನ್ನು ಸಂಗ್ರಹಿಸಲು ಪ್ರಾರಂಭಿಸಿದರು. ಈ ಪ್ರಕ್ರಿಯೆಯಲ್ಲಿ, ಪೊಲೀಸರಿಗೆ ಪ್ರಮುಖ ಪುರಾವೆಗಳು ಸಿಕ್ಕಿವೆ. ಜಗನ್ ಪ್ರಯಾಣಿಸುತ್ತಿದ್ದ ಕಾರಿನ ಚಕ್ರಗಳ ಕೆಳಗೆ ಬಿದ್ದು ನಜ್ಜುಗುಜ್ಜಾಗುತ್ತಿರುವ ವ್ಯಕ್ತಿಯನ್ನು ತೋರಿಸುವ ವೀಡಿಯೊ ಸಾಕ್ಷ್ಯವನ್ನು ಪೊಲೀಸರು ಸೆರೆಹಿಡಿದಿದ್ದಾರೆ. ಈ ವೀಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವೀಡಿಯೊದಲ್ಲಿ, ಜಗನ್ ತನ್ನ ಪಕ್ಷದ ಕಾರ್ಯಕರ್ತರನ್ನು ಕಾರಿನಲ್ಲಿ ಸ್ವಾಗತಿಸುತ್ತಿದ್ದಾಗ, ಒಬ್ಬ…

Read More

ಕೊಪ್ಪಳ : ಇತ್ತೀಚಿಗೆ ಪೊಲೀಸ್ ಇಲಾಖೆಯಲ್ಲಿ ಪಿಎಸ್ಐ ನೇಮಕಾತಿಯಲ್ಲಿ ಬಹುದೊಡ್ಡ ಹಗರಣ ನಡೆದಿತ್ತು. ಹಾಗಾಗಿ ಕಳೆದ ಐದು ವರ್ಷದಿಂದ ಯಾವುದೇ ನೇಮಕಾತಿ ಆಗಿಲ್ಲ. ಇದೀಗ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಂದು ಸಾವಿರ ಪಿಎಸ್ಐ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ತಿಳಿಸಿದರು. ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ 500 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ನಡೆದಿದ್ದು, ಅವರೆಲ್ಲ ತರಬೇತಿ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಎಂಟು ಸಾವಿರ ಕಾನ್​ಸ್ಟೇಬಲ್​ ಹುದ್ದೆಗಳು ಖಾಲಿ ಇವೆ. ಆದ್ಯತೆಯ ಮೇರೆಗೆ ಭರ್ತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ರಾಜ್ಯದಲ್ಲಿ ಹೆಚ್ಚುವರಿ ಟ್ರಾಫಿಕ್​ ಪೊಲೀಸ್ ಸ್ಟೇಷನ್ ಸೇರಿದಂತೆ ಇನ್ನಿತರ ಕಾರ್ಯಚಟುವಟಿಕೆಗಳಿಗೆ ಮುಂದಿನ ಬಜೆಟ್​ನಲ್ಲಿ ಅನುದಾನ ಮೀಸಲಿಡಲಾಗುವುದು‌ ಎಂದರು. ರಾಜ್ಯದಲ್ಲಿ 8000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳು ಖಾಲಿಯಿದ್ದು, ಆಯಾ ಜಿಲ್ಲೆಯಲ್ಲಿ ಎಷ್ಟು ಪೊಲೀಸ್ ಸಿಬ್ಬಂದಿ ಕೊರತೆ ಇದೆ ಎನ್ನುವುದರ ವರದಿ ಪಡೆಯಲಾಗಿದೆ. ಆದ್ಯತೆಯ ಮೇರೆಗೆ ಹಂತ ಹಂತವಾಗಿ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.…

Read More

ಹಾಸನ : ಇತ್ತೀಚಿಗೆ ಯುವಜನತೆಯಲ್ಲಿ ಹೃದಯಾಘಾತ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ನಿನ್ನೆ ಒಂದೇ ದಿನದಲ್ಲಿ ಹಾಸನದಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿದ್ದಾರೆ. ನಗರದ ಸತ್ಯಮಂಗಲ ಬಡಾವಣೆಯಲ್ಲಿ ಹೃದಯಾಘಾತದಿಂದ 35 ವರ್ಷದ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಚೇತನ್ (35) ಎಂದು ಗುರುತಿಸಲಾಗಿದೆ. ಮೂಲತಃ ಮಂಡ್ಯದ ಕಿಕ್ಕೇರಿ ಮೂಲದ ಚೇತನ್, ಹಾಸನ ನಗರದ ಹಳೇ ಬಸ್ ನಿಲ್ದಾಣದ ಬಳಿ ಮೊಬೈಲ್ ಅಂಗಡಿ ನಡೆಸುತ್ತಿದ್ದರು. ಸತ್ಯಮಂಗಲ ಬಡಾವಣೆಯಲ್ಲಿ ಪತ್ನಿ ಮತ್ತು ಮಗುವಿನೊಂದಿಗೆ ವಾಸವಿದ್ದರು. ಶನಿವಾರ ಮಧ್ಯಾಹ್ನದ ವೇಳೆಗೆ ಚೇತನ್ ಊಟಕ್ಕೆ ಕುಳಿತುಕೊಳ್ಳುವಾಗ ದಿಢೀರ್ ಎದೆನೋವು ಕಾಣಿಸಿಕೊಂಡಿದೆ ಎನ್ನಲಾಗಿದೆ. “ಎದೆ ನೋಯುತ್ತಿದೆ” ಎಂದು ಪತ್ನಿಗೆ ತಿಳಿಸಿ ತಕ್ಷಣವೇ ಎದ್ದು ನಿಂತು ಕುಸಿದು ಬಿದ್ದಾರೆ. ಪತ್ನಿ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ, ಅಷ್ಟರಲ್ಲಾಗಲೇ ಚೇತನ್ ಮೃತಪಟ್ಟಿದ್ದರು. ಅದೇ ರೀತಿಯಾಗಿ ಬೇಲೂರು ಪಟ್ಟಣದ ಸಮಾಜ ಸೇವಕ ನಿಶಾದ್ ಅಹಮ್ಮದ್ (35) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇವರು ಜೀವನ ನಿರ್ವಹಣೆಗಾಗಿ ಪಟ್ಟಣದಲ್ಲಿ ಟೀ ಕ್ಯಾಂಟೀನ್ ಒಂದನ್ನು ನಡೆಸುತ್ತಿದ್ದರು. ಜೊತೆಗೆ ಸಮಾಜ ಸೇವಕ ಎಂದು ಗುರುತಿಸಿಕೊಂಡಿದ್ದರು.…

Read More

ಬೆಂಗಳೂರು: ವರ್ಗಾವಣೆಯ ನಿರೀಕ್ಷೆಯಲ್ಲಿರುವ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು, ಮುಖ್ಯ ಶಿಕ್ಷಕರ ವರ್ಗಾವಣೆಗೆ ಶಿಕ್ಷಣ ಇಲಾಖೆಯಿಂದ ಪರೀಕ್ಷಿತ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಘಟಕದೊಳಗೆ ಮತ್ತು ಹೊರಗೆ ಕೋರಿಕೆ ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಜು. 5ರವರೆಗೆ ಅವಕಾಶ ಕಲ್ಪಿಸಲಾಗಿದೆ. ಆಡಳಿತಾತ್ಮಕ ಕಾರಣದಿಂದ ವೇಳಾಪಟ್ಟಿ ಪರಿಷ್ಕರಿಸಿದ್ದು, ಆದ್ಯತೆ ಕೋರುವ ಪ್ರಕರಣಗಳಲ್ಲಿ ಸಮರ್ಪಕ ದಾಖಲೆ ಸಲ್ಲಿಸದ ಶಿಕ್ಷಕರ ಅರ್ಜಿಗಳನ್ನು ತಿರಸ್ಕರಿಸುವಂತೆ ಸೂಚಿಸಲಾಗಿದೆ. ಹೆಚ್ಚುವರಿ ಶಿಕ್ಷಕರು ಸಲ್ಲಿಸಿರುವ ದಾಖಲೆಗಳ ಪರಿಶೀಲನೆಗೆ ಜುಲೈ 7, ಆಕ್ಷೇಪಣೆ ಪರಿಶೀಲಿಸಿ ತಾತ್ಕಾಲಿಕ ಆದ್ಯತಾ ಪಟ್ಟಿ ನೀಡಲು ಜುಲೈ 8, ಕೋರಿಕೆ ಹೆಚ್ಚುವರಿ ಶಿಕ್ಷಕರ ಸಮರ್ಪಕ ಮರು ಹೊಂದಾಣಿಕೆಗೆ ಜುಲೈ 15 ರಂದು ಕೌನ್ಸೆಲಿಂಗ್ ನಡೆಸಲು ತಿಳಿಸಲಾಗಿದೆ. ಶಿಕ್ಷಕರ ಅನುಕೂಲಕ್ಕೆ ಜುಲೈ 19ರಂದು ಖಾಲಿ ಹುದ್ದೆಗಳ ಪ್ರಕಟಣೆ, ಜುಲೈ 21 ರಂದು ವರ್ಗಾವಣೆಗೆ ಅರ್ಹರಾಗಿರುವ ಶಿಕ್ಷಕರ ಅಂತಿಮ ವೇಳಾಪಟ್ಟಿ ಪ್ರಕಟಿಸಲು ತಿಳಿಸಲಾಗಿದೆ. ಜು. 24ರಿಂದ ಕೌನ್ಸೆಲಿಂಗ್ ನಡೆಯಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ನಿರ್ದೇಶಕರು, ಎಲ್ಲಾ ಜಿಲ್ಲಾ ಉಪ…

Read More

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಇಂದಿನಿಂದ ಮುಂಗಾರು ಚುರುಕಾಗಿದ್ದು, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 1 ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು, ಕರಾವಳಿ, ಮಲೆನಾಡು ಸೇರಿ ರಾಜ್ಯದ ಹಲವಡೆ ಜೂ.23ರಿಂದ ಜೂ.29ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. . ಕರಾವಳಿಯಲ್ಲಿ ಜೂ.23ರಿಂದ ಜೂ.29ರವರೆಗೆ ಆರೆಂಜ್ ಅಲರ್ಟ್ ಘೋಷಿಸ ಲಾಗಿದೆ. ಇಂದಿನಿಂದ ಒಂದು ವಾರ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ತುಮಕೂರು, ರಾಮನಗರ, ಮಂಡ್ಯ, ಮೈಸೂರು, ವಿಜಯನಗರ, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕೊಡಗಿನ ಕೆಲವೆಡೆ ಉತ್ತಮ ಮಳೆಯಾಗಿದ್ದು, ಕೃಷಿ ಚಟುವಟಿಕೆ ಚುರುಕುಗೊಂಡಿವೆ. ಉತ್ತಮ ಮಳೆಯಾದ ಕಾರಣ ಯಾದಗಿರಿಯ ಬಸವಸಾಗರ ಜಲಾಶಯದ 14 ಕ್ರಸ್ಟ್ಗೇಟ್ ಗಳ ಮೂಲಕ 42,820 ಸಾವಿರ ಕ್ಯೂಸೆಕ್ ನೀರು ಬಿಡಲಾಗುತ್ತಿದೆ.

Read More

ಬೆಂಗಳೂರು: ನಗರದ ಎಲಿಟ ಪ್ರೋಮೆನೇಡ್ ಮತ್ತು ಅರೆಹಳ್ಳಿ ಉಪಕೇಂದ್ರ ನಿವðಹಣಾ ಕಾಮಗಾರಿ ನಿಮಿತ್ತ ಜೂನ್ 23ರ ಸೋಮವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 4.00 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಎಲಿಟ ಪ್ರೋಮೆನೇಡ್ ಅಪಾಟ್ðಮೆಂಟ್, ಕೆ.ಆರ್. ಲೇಔಟ್, ಶಾರದನಗರ, ಚುಂಚಗಟ್ಟ ಮತ್ತು ಸುತ್ತಮುತ್ತಲ ಪ್ರದೇಶಗಳು, ಅರೇಹಳ್ಳಿ, ಇಟ್ಟಮಡು, ಏಜಿಎಸ್ ಲೇಔಟ್, ಚಿಕ್ಕಲಸಂದ್ರ, ಟಿ.ಜಿ. ಲೇಔಟ್, ಭುವನೇಶ್ವರಿನಗರ ಇಸ್ರೋ ಲೇಔಟ್, ಇಸ್ರೋ ಲೇಔಟ್ ಇಂಡಸ್ರ್ಟಿಯಲ್ ಏರಿಯಾ, ಕುಮಾರಸ್ವಾಮಿ ಬಡಾವಣೆ, ವಿಠ್ಠಲ ನಗರ, ವಿಕ್ರಮ್ ನಗರ, ಯೆಲಚೇನಹಳ್ಳಿ, ಸುತ್ತಮುತ್ತಲ ಪ್ರದೇಶ, ಚಿಕ್ಕಲಸಂದ್ರ ವಿಲೇಜ್, ಕದಿರೇನಹಳ್ಳಿ, ಅಬ್ಬಯ್ಯ ನಾಯ್ಡು ಸ್ಟುಡಿಯೋ ಸುತ್ತಮುತ್ತಲ ಪ್ರದೇಶ, ನಾಯ್ಡು ಲೇಔಟ್, ಎಜಿಎಸ್ ಲೇಔಟ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.

Read More

ಬೆಂಗಳೂರು: ರಾಜ್ಯ ಸರಕಾರಿ ನೌಕರರಿಗೆ ‘ಸಂಧ್ಯಾ ಕಿರಣ’ ಯೋಜನೆಯಡಿ ಪ್ರಾಯೋಗಿಕವಾಗಿ ಜಾರಿ ಮಾಡಿರುವ ನಗದು ರಹಿತ ಚಿಕಿತ್ಸೆ ಸೌಲಭ್ಯವನ್ನು ಎಲ್ಲ ಕಡೆಗಳಿಗೆ ವಿಸ್ತರಣೆ ಮಾಡಲಾಗುವುದು ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹೇಳಿದರು. ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ರಾಜ್ಯ ಪರಿಷತ್ ಮಹಾಸಭೆಯಲ್ಲಿ ಅವರು ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರಿ ನಿವೃತ್ತ ನೌಕರರಿಗಾಗಿ ಸಂಧ್ಯಾ ಕಿರಣ ಯೋಜನೆ ಜಾರಿಗೊಳಿಸಲಾಗಿದೆ. ನಗದು ರಹಿತ ಚಿಕಿತ್ಸೆ ನೀಡುವ ಉದ್ದೇಶದಿಂದ ಪ್ರಾಯೋಗಿಕವಾಗಿ ನಡೆಸುತ್ತಿದ್ದು, ಇದು ಯಶಸ್ವಿಯದಲ್ಲಿ ಎಲ್ಲಾ ಕಡೆಗೆ ವಿಸ್ತರಿಸುವುದಾಗಿ ತಿಳಿಸಿದ್ದಾರೆ ನಿವೃತ್ತ ನೌಕರರ ಆರೋಗ್ಯ ಸುರಕ್ಷತೆಗಾಗಿ ‘ಸಂಧ್ಯಾ ಕಿರಣ’ ಯೋಜನೆ ಜಾರಿಯಲ್ಲಿದೆ. ಚಿಕಿತ್ಸೆ ಪಡೆದು ಬಿಲ್ಗಳು ಸಲ್ಲಿಸಿದ ಬಳಿಕ ಮರುಪಾವತಿ ವ್ಯವಸ್ಥೆ ಇದೆ. ಇದನ್ನು ನಗದು ರಹಿತ ಮಾಡುವ ಉದ್ದೇಶದಿಂದ ಪ್ರಾಯೋಗಿಕ ಜಾರಿಗೆ ಸೂಚನೆ ನೀಡಲಾಗಿದೆ. ಮರುಪಾವತಿಗೂ ಮತ್ತು ನಗದು ರಹಿತ ಸೇವೆ ನೀಡಿದ ಆಸ್ಪತ್ರೆಗಳ ಪಾವತಿ ವ್ಯತ್ಯಾಸವನ್ನು ಗಮನಿಸಿ, ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ಅವರು ಹೇಳಿದರು.

Read More