Subscribe to Updates
Get the latest creative news from FooBar about art, design and business.
Author: kannadanewsnow57
ಚಿತ್ರದುರ್ಗ : ದಾವಣಗೆರೆ -ಚಿತ್ರದುರ್ಗ- ತುಮಕೂರು ನೇರ ರೈಲ್ವೆ ಯೋಜನೆಯನ್ನು 2027ರ ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳಿಸಿ, ಲೋಕಾರ್ಪಣೆಗೊಳಿಸಲಾಗುವುದು ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ದಾವಣಗೆರೆ-ಚಿತ್ರದುರ್ಗ-ತುಮಕೂರು ನೂತನ ರೈಲ್ವೆ ಮಾರ್ಗದ ಕಾಮಗಾರಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ 20 ರಿಂದ 30 ವರ್ಷಗಳವರೆಗೆ ದೇಶದಲ್ಲಿ ನೆನೆಗುದಿಗೆ ಬಿದ್ದಿರುವ ಎಲ್ಲ 7.25 ಲಕ್ಷ ಯೋಜನೆಗಳಿದ್ದವು, ಈ ಯೋಜನೆಗಳನ್ನು ಕೈಗೆತ್ತಿಕೊಂಡು ಪೂರ್ಣಗೊಳಿಸುತ್ತಿದ್ದೇವೆ. 33 ಸಾವಿರ ಕೋಟಿ ರೂಪಾಯಿಗಳ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು. ದೇಶ ಅಭಿವೃದ್ಧಿಯಾಗಬೇಕಾದರೆ ದೇಶದ ಎಲ್ಲ ರಾಜ್ಯಗಳು ಅಭಿವೃದ್ಧಿಯಾಗಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿಯವರ ಆಶಯವಾಗಿದ್ದು, ಪ್ರತಿಷ್ಟಿತ ಯೋಜನೆಯಾದ ರಾಯದುರ್ಗ-ತುಮಕೂರು ಯೋಜನೆಯು ಕೂಡ ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ಮುಕ್ತಾಯವಾಗಿದ್ದು, ಟೆಂಡರ್ ಕರೆಯಲಾಗಿದ್ದು, ಇನ್ನೂ ಎರಡು ಕಡೆ ಶೀಘ್ರದಲ್ಲಿ ಕೆಲಸ ಪ್ರಾರಂಭವಾಗಲಿದೆ. ಅದೇ ರೀತಿ ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಯೋಜನೆಯ ಸಮಸ್ಯೆಯನ್ನು ಬಗೆಹರಿಸಿ,…
ಬೆಂಗಳೂರು: ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮೇ 20 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ 1 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ. ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಹೊಸಪೇಟೆಯಲ್ಲಿ ಮೇ 20 ರಂದು ವಿವಿಧ ಸವಲತ್ತು ಗಳ ವಿತರಣಾ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಇದು ಸಂಭ್ರಮಾಚರಣೆ ಅಲ್ಲ. ನಾವು ಮಾಡಿರುವ ಕೆಲಸ ಜನರಿಗೆ ಸಮರ್ಪಣೆ ಮಾಡುವ ಕಾರ್ಯಕ್ರಮ ಎಂದರು. ಜನರಿಗೆ ಸಮರ್ಪಣೆ ಹಾಗೂ ಮುಂದಿನ ಕಾರ್ಯಕ್ರಮಗಳ ಬಗ್ಗೆ ಸಂಕಲ್ಪ ಮಾಡಲು ಕಾರ್ಯಕ್ರಮ ಮಾಡುತ್ತಿದ್ದೇವೆ. ಆಸ್ತಿ ಗಳನ್ನು ಹೊಂದಿರುವ ಹಲವರಿಗೆ ದಾಖಲೆಗಳು ಇರಲಿಲ್ಲ. ಹೀಗಾಗಿ 2 ವರ್ಷದಲ್ಲಿ ನೋಂದಣಿ ಮಾಡಿದ 1 ಲಕ್ಷ ಹಕ್ಕು ಪತ್ರಗಳನ್ನು ಫಲಾನುಭವಿಗಳಿಗೆ ವಿತರಿಸಲಾಗುತ್ತಿದೆ. ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಆಗಮಿಸುತ್ತಾರೆ ಎಂದು ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆ ಜನಪರ ಆಡಳಿತಕ್ಕೆ ಸಾಕ್ಷಿಯಾಗಿ ಕಂದಾಯ ಗ್ರಾಮಗಳ 1 ಲಕ್ಷ…
ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ 22 ಜಿಲ್ಲೆಗಳಲ್ಲಿ ಇಂದಿನಿಂದ 5 ದಿನ ಮಳೆ ಹೆಚ್ಚಾಗಲಿದೆ. ಈ ಜಿಲ್ಲೆಗಳಲ್ಲಿ ಮೇ 22ರವರೆಗೆ ಮಿಂಚು ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದ್ದು, ಯೆಲ್ಲೊ ಅಲರ್ಟ್ ಘೋಷಿಸಿದೆ. ತೆಲಂಗಾಣದಿಂದ ಉತ್ತರ ತಮಿಳುನಾಡಿನವರೆಗೆ ವಿಸ್ತರಿಸಿರುವ ವಾಯುಭಾರ ಕುಸಿತದಿಂದಾಗಿ ಈ ಮಳೆ ಕಾಣಿಸಿಕೊಳ್ಳುತ್ತಿದೆ.ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಧ್ಯಮದಿಂದ ಭಾರೀ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು, ಹಾಸನ, ಕೊಡಗು, ಬೆಳಗಾವಿ, ಬೀದರ್, ರಾಯಚೂರು, ಯಾದಗಿರಿ, ದಾವಣಗೆರೆ ಮತ್ತು ಚಿತ್ರದುರ್ಗ ಮುಂತಾದ ಸ್ಥಳಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಗಂಟೆಗೆ 50–60 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ.
ಫಿನ್ ಲ್ಯಾಂಡ್ : ಪಶ್ಚಿಮ ಫಿನ್ಲ್ಯಾಂಡ್ನ ಯುರಾ ಪ್ರದೇಶದಲ್ಲಿ ಎರಡು ಹೆಲಿಕಾಪ್ಟರ್ಗಳು ಆಕಾಶದಲ್ಲಿ ಡಿಕ್ಕಿ ಹೊಡೆದು ಪತನಗೊಂಡ ನಂತರ ಐವರು ಪ್ರಯಾಣೀಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಫಿನ್ನಿಷ್ ಪೊಲೀಸರು ನೀಡಿದ ಹೇಳಿಕೆಯ ಪ್ರಕಾರ, ಪಶ್ಚಿಮ ಫಿನ್ಲ್ಯಾಂಡ್ನ ಯುರಾ ಪ್ರದೇಶದಲ್ಲಿ ಎರಡು ಹೆಲಿಕಾಪ್ಟರ್ಗಳು ಆಕಾಶದಲ್ಲಿ ಡಿಕ್ಕಿ ಹೊಡೆದು ಪತನಗೊಂಡ ನಂತರ ಐವರು ಪ್ರಯಾಣೀಕರು ಸಾವನ್ನಪ್ಪಿದ್ದಾರೆ ವರದಿಗಳ ಪ್ರಕಾರ, ಒಟ್ಟು ಐದು ವ್ಯಕ್ತಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ಗಳು ಡಿಕ್ಕಿಯ ನಂತರ ನೆಲಕ್ಕೆ ಕುಸಿದವು. ಏಪ್ರಿಲ್ ಅಂತ್ಯದಲ್ಲಿ ಫಿನ್ನಿಷ್ ಸೈನ್ಯದ ವಸಂತ ವ್ಯಾಯಾಮದ ಸಮಯದಲ್ಲಿ ಬ್ರಿಟಿಷ್ ಹೆಲಿಕಾಪ್ಟರ್ ಸ್ಕ್ವಾಡ್ರನ್ಗಳನ್ನು ಇತ್ತೀಚೆಗೆ ಆಯೋಜಿಸಿದ್ದ ಪಶ್ಚಿಮ ಪ್ರಾಂತ್ಯವಾದ ಯುರಾ ಮೇಲೆ ವಿಮಾನವು ಪರಸ್ಪರ ಡಿಕ್ಕಿ ಹೊಡೆದಾಗ ಸಾಕ್ಷಿಗಳು ಆಘಾತದಿಂದ ನೋಡುತ್ತಿದ್ದರು ಎಂದು ವರದಿಯಾಗಿದೆ. https://twitter.com/flightradar24/status/1923741961820807549?ref_src=twsrc%5Etfw%7Ctwcamp%5Etweetembed%7Ctwterm%5E1923741961820807549%7Ctwgr%5E962f3d84c9268d7c659ae526bb4ccca7a9f30fb8%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fenglish%2Fabplive-epaper-dh7e8ed9a840a34a2e9316137468a5ca4c%2F2helicopterscollidemidairinfinlandseuraprovinceleavingseveraldead-newsid-n664745536
ಬೆಂಗಳೂರು : 2024-25ನೇ ಸಾಲಿನ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಶಿವಮೊಗ್ಗ ನಗರದಲ್ಲಿ ದಿನಾಂಕ:18-05-2025 ರಿಂದ 20-05-2025 ರವರೆಗೆ (ಮೂರು ದಿನ) ನಡೆಸಲು ತೀರ್ಮಾನಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ನಿಯಮಾವಳಿಗಳು: ಸದರಿ ಕ್ರೀಡಾಕೂಟದಲ್ಲಿ ರಾಜ್ಯ ಸರ್ಕಾರದ ಕೆ.ಜಿ.ಐ.ಡಿ. ಸಂಖ್ಯೆಯನ್ನು ಹೊಂದಿರುವ ಎಲ್ಲಾ ಖಾಯಂ ನೌಕರರು ಭಾಗವಹಿಸಲು ಅರ್ಹರಾಗಿರುತ್ತಾರೆ. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳು ಆನೌನ್ ಮೂಲಕ ನೊಂದಣಿ ಮಾಡಿಕೊಂಡಲ್ಲಿ ಮಾತ್ರ ಸ್ಪರ್ಧೆಗಳಲ್ಲಿ ಭಾಗವಹಿಸಲು ಹಾಗೂ ಸೌಲಭ್ಯ ಪಡೆಯಲು ಮಾತ್ರ ಅರ್ಹರಿರುತ್ತಾರೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿನ ತರಬೇತುದಾರರು, ಹಾಗೂ ಕ್ರೀಡಾಕೋಟಾದಡಿ ನೇಮಕಗೊಂಡ ನೌಕರರು ಭಾಗವಹಿಸಲು ಅರ್ಹರಾಗಿರುವುದಿಲ್ಲ. 2. ಎಲ್ಲಾ ಕ್ರೀಡಾಪಟುಗಳು ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕ್ರೀಡೆಯಲ್ಲಿ ಭಾಗವಹಿಸಲು ನೀಡಿರುವ ಅಧಿಕೃತ ಗುರುತಿನ ಚೀಟಿ ಕಡ್ಡಾಯವಾಗಿ ಸಲ್ಲಿಸತಕ್ಕದ್ದು. ಸಂಗೀತ, ನೃತ್ಯ ಮತ್ತು ಕಲಾ ಶಿಕ್ಷಕರು, ಸಂಗೀತ, ನೃತ್ಯ ಮತ್ತು ಕರಕುಶಲ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರಾಗಿರುವುದಿಲ್ಲ. ದಿನಗೂಲಿ ನೌಕರರು, ಅರೆಕಾಲಿಕ…
ಶ್ರೀಹರಿಕೋಟಾ ಆಂಧ್ರಪ್ರದೇಶ ಶ್ರೀಹರಿಕೋಟಾದಲ್ಲಿ ಇಸ್ರೋ ಬೆಳಿಗ್ಗೆ 5:59 ಕ್ಕೆ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಮೊದಲ ಉಡಾವಣಾ ಪ್ಯಾಡ್ (FLP) ನಿಂದ PSLV-C61 ವಾಹನವನ್ನು ಉಡಾವಣೆ ಮಾಡಿದೆ. ಇದು EOS-09 (ಭೂಮಿ ವೀಕ್ಷಣಾ ಉಪಗ್ರಹ-09) ಅನ್ನು SSPO ಕಕ್ಷೆಗೆ ಒಯ್ಯುತ್ತದೆ. EOS-09 EOS-04 ನ ಪುನರಾವರ್ತಿತ ಉಪಗ್ರಹವಾಗಿದ್ದು, ಕಾರ್ಯಾಚರಣೆಯ ಅನ್ವಯಿಕೆಗಳಲ್ಲಿ ತೊಡಗಿರುವ ಬಳಕೆದಾರ ಸಮುದಾಯಕ್ಕೆ ರಿಮೋಟ್ ಸೆನ್ಸಿಂಗ್ ಡೇಟಾವನ್ನು ಖಚಿತಪಡಿಸಿಕೊಳ್ಳುವ ಮತ್ತು ವೀಕ್ಷಣೆಯ ಆವರ್ತನವನ್ನು ಸುಧಾರಿಸುವ ಉದ್ದೇಶದೊಂದಿಗೆ ವಿನ್ಯಾಸಗೊಳಿಸಲಾಗಿದೆ. https://twitter.com/ANI/status/1923891640885735688?ref_src=twsrc%5Egoogle%7Ctwcamp%5Eserp%7Ctwgr%5Etweet https://twitter.com/ANI/status/1923899630527578304?ref_src=twsrc%5Egoogle%7Ctwcamp%5Eserp%7Ctwgr%5Etweet https://twitter.com/ANI/status/1923881217688207520?ref_src=twsrc%5Egoogle%7Ctwcamp%5Eserp%7Ctwgr%5Etweet
ಬೆಂಗಳೂರು : ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಖಾಯಂ ಸೂಪರ್ ಸ್ಪೆಷಾಲಿಟಿ ವೈದ್ಯರ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 65 ವರ್ಷಕ್ಕೆ ಹೆಚ್ಚಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ(01)ರ ಏಕಕಡತದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಅಧೀನದಲ್ಲಿ 22 ಸ್ವಾಯತ್ತ ವೈದ್ಯಕೀಯ ಕಾಲೇಜುಗಳು ಹಾಗೂ 10 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿದ್ದು, ಸದರಿ ಸಂಸ್ಥೆಗಳಲ್ಲಿ ಒಟ್ಟಾರೆ 508 ಸೂಪರ್ ಸ್ಪೆಷಾಲಿಟಿ ಹುದ್ದೆಗಳು ಮಂಜೂರಾಗಿದ್ದು, ಮಂಜೂರಾದ ಹುದ್ದೆಗಳಿಗೆ ಎದುರಾಗಿ 232 ಖಾಯಂ ಸೂಪರ್ ಸ್ಪೆಷಾಲಿಟಿ ವೈದ್ಯರುಗಳು ಕರ್ತವ್ಯ ನಿರ್ವಹಿಸುತ್ತಿದ್ದು, 276 ಸೂಪರ್ ಸ್ಪೆಷಾಲಿಟಿ ವೈದ್ಯರ ಹುದ್ದೆಗಳು ಖಾಲಿಯಿರುತ್ತವೆ ಎಂದು, ರಾಜ್ಯ ಸರ್ಕಾರದ ನೀತಿಯಂತ ಸೂಪರ್ ಸ್ಪೆಷಾಲಿಟಿ ವೈದ್ಯರುಗಳ ನಿವೃತ್ತಿ ವಯಸ್ಸು 60 ಆಗಿರುತ್ತದೆ. ರಾಜ್ಯದಲ್ಲಿ ಸೂಪರ್ ಸ್ಪೆಷಾಲಿಟಿ ವೈದ್ಯರುಗಳ ಕೊರತೆಯಿಂದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಬೋಧನೆ ಹಾಗೂ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ತೊಂದರೆಯಾಗುತ್ತಿರುವುದರಿಂದ, ಸದರಿ ಸೂಪರ್ ಸ್ಪೆಷಾಲಿಟಿ ವೈದ್ಯರುಗಳ ವಯೋ ನಿವೃತ್ತಿ ವಯಸ್ಸನ್ನು 60ರಿಂದ 65 ವರ್ಷಕ್ಕೆ ಹೆಚ್ಚಿಸುವಂತೆ…
ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಮಾರ್ಚ್ 31 ರವರೆಗೆ ಅವಕಾಶ ನೀಡಲಾಗಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವೆಬ್ ಸೈಟ್ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ವೆಬ್ಟ್ ಗಮನಿಸಬಹುದಾಗಿದೆ. ಸದಸ್ಯರ ಸೇರ್ಪಡೆ * ಪೋಟೋ ಬದಲಾವಣೆ * ಹೆಸರು ಡಿಲೆಟ್ * ಅಂಗಡಿ. ನಂ. ಬದಲಾವಣೆ * ಹೆಸರು ತಿದ್ದುಪಡಿ * ಮುಖ್ಯಸ್ಥರ ಬದಲಾವಣೆ ಅರ್ಜಿ ಸಲ್ಲಿಸಲು ದಾಖಲಾತಿಗಳು 1. ಸದಸ್ಯರ ಆಧಾರ ಕಾರ್ಡ್ ಕಡ್ಡಾಯ 2. ಸದಸ್ಯರ ಜಾತಿ ಮತ್ತು…
ಬೆಂಗಳೂರು : 2024-25ನೇ ಸಾಲಿನ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಶಿವಮೊಗ್ಗ ನಗರದಲ್ಲಿ ದಿನಾಂಕ:18-05-2025 ರಿಂದ 20-05-2025 ರವರೆಗೆ (ಮೂರು ದಿನ) ನಡೆಸಲು ತೀರ್ಮಾನಿಸಲಾಗಿದೆ. ನೋಂದಣಿ ಸಂದರ್ಭದಲ್ಲಿ ಟ್ರಾಕ್ಸ್ ಸೂಟ್, ಕ್ಯಾಪ್, ಹಾಜರಾತಿ ಪ್ರಮಾಣಪತ್ರವನ್ನು ಮಧ್ಯಾಹ್ನ 3:00 ರವರೆಗೆ ಮಾತ್ರ ವಿತರಿಸಲಾಗುವುದು, ನಂತರ ಅವಕಾಶವಿರುವುದಿಲ್ಲ. ನೋಂದಣಿ ಸಮಯದಲ್ಲಿ ಕ್ರೀಡಾಪಟುಗಳು ಇಲಾಖೆಯ ಗುರುತಿನ ಚೀಟಿಯನ್ನು ತೋರಿಸುವುದು ಕಡ್ಡಾಯವಾಗಿರುತ್ತದೆ. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನಗಳಿಸಿದವರು ಮತ್ತು ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿದಂತಹ ಕ್ರೀಡಾಪಟುಗಳು/ ಆಯ್ಕೆಯಾಗಿರುವ ಕ್ರೀಡಾಪಟುಗಳು ಮಾತ್ರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಸಂಜೆ 04.00 ಗಂಟೆಗೆ ಸರಿಯಾಗಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಹಾಗೂ ಕ್ರೀಡೆಗಳಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳು ಕಡ್ಡಾಯವಾಗಿ ಸಂಘವು ನೀಡುವ ಟ್ರಾಕ್ ಸೂಟ್, ಟೀ ಶರ್ಟ್ ಮತ್ತು ಕ್ಯಾಪ್ ಧರಿಸಿ ನೆಹರು ಕ್ರೀಡಾಂಗಣದಲ್ಲಿ ಆಸೀನರಾಗುವುದು. ಉದ್ಘಾಟನಾ ಸಮಾರಂಭದ ತಾವು ಆಸೀನರಾದ ಸ್ಥಳದಲ್ಲಿಯೇ వాజరాతి ಪ್ರಮಾಣಪತ್ರವನ್ನು ವಿತರಿಸಲಾಗುವುದು.…
ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲೇ ಉಚಿತವಾಗಿ ಔಷಧಿ ವಿತರಣೆ ಮಾಡುತ್ತಿರುವಾಗ, ತನ್ನ ಆವರಣದಲ್ಲೇ ದುಡ್ಡಿಗೆ ಔಷಧಿ ಮಾರಾಟ ಮಾಡುತ್ತಿದ್ದಂತ ಜನೌಷಧಿ ಕೇಂದ್ರಗಳನ್ನು ಬಂದ್ ಮಾಡುವಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ ಹಾಗೂ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಸುಮೂರು 200 ಜನೌಷಧಿ ಮಳಿಗೆಗಳನ್ನು ಸ್ಥಾಪಿಸಲು ಸರ್ಕಾರದ ಅನುಮತಿ ನೀಡಿ ಆದೇಶಿಸಲಾಗಿರುತ್ತದೆ ಎಂದು ತಿಳಿಸಿದೆ. ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರುಗಳು ಬ್ರಾಂಡೆಡ್ ಔಷಧಿಗಳನ್ನು ರೋಗಿಗಳಿಗೆ ಸಲಹಾ ಚೀಟಿ (Prescription) ರೂಪದಲ್ಲಿ ನೀಡುವುದನ್ನು ನಿಷೇಧಿಸಲಾಗಿದೆ ಹಾಗೂ ಆರೋಗ್ಯ ಸಂಸ್ಥೆಗಳಲ್ಲಿ ಲಭ್ಯವಿರದ ಔಷಧಿಗಳನ್ನು ಸಂಬಂಧಿಸಿದ ವೈದ್ಯರುಗಳು, ರೋಗಿಗಳಿಗೆ ನೀಡುವ ಸಲಹಾ ಚೀಟಿ (Prescription) ಗಳನ್ನು Generic ಹೆಸರಿನಲ್ಲಿ ಬರೆಯಲು ಕಡ್ಡಾಯವಾಗಿ ಸೂಚಿಸಿದೆ. ಈ ಔಷಧಿಗಳನ್ನು ಆರೋಗ್ಯ ಸಂಸ್ಥೆಯ ಆವರಣದಲ್ಲಿ ಸ್ಥಾಪಿಸಿರುವ ಜನೌಷಧಿ ಮಳಿಗೆಯಲ್ಲಿ ಕಡಿಮೆ ದರದಲ್ಲಿ ಔಷಧಿ…