Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿರುವ ಆದೇಶದ ಕುರಿತ ರಿಟ್ ಅರ್ಜಿ ವಿಚಾರಣೆಯನ್ನು ಮಧ್ಯಾಹ್ನ 2.30 ಕ್ಕೆ ಮುಂದೂಡಿಕೆಯಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಸೈಟು ಹಂಚಿಕೆ ಹಗರಣದಲ್ಲಿ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಸಿದ್ದರಾಮಯ್ಯ ಅವರು ಅರ್ಜಿ ಸಲ್ಲಿದ್ದರು. ಸಿಎಂ ಅವರ ಪರ ಹಿರಿಯ ವಕೀಲ ಸಿಘ್ವಿ ಅವರು ವಾದ ಮಂಡನೆ ಮಾಡಿದ್ದರು. ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠದಲ್ಲಿ ವಾದ ಪ್ರತಿವಾ ನಡೆಯಿತು. ವಾದ-ವಿವಾದ ಆಲಿಸಿದ ಹೈಕೋರ್ಟ್ ವಿಚಾರಣೆಯನ್ನು ಮಧ್ಯಾಹ್ನ 2.30 ಕ್ಕೆ ಮುಂದೂಡಿಕೆ ಮಾಡಲಾಗಿದೆ.
ಈ ವಸ್ತುಗಳನ್ನು ಬಾಗಿಲಲ್ಲಿ ಮತ್ತು ಪೂಜಾ ಕೊಠಡಿಯಲ್ಲಿ ಇಡುವುದರಿಂದ ನಮ್ಮನ್ನು ಆವರಿಸಿರುವ ದಾರಿದ್ರ್ಯವು ಸಂಪೂರ್ಣ ದೂರವಾಗಿ ಮಹಾಲಕ್ಷ್ಮಿಯ ಕೃಪೆಯಿಂದ ಸಂಪತ್ತು ವೃದ್ಧಿಯಾಗುತ್ತದೆ. ಜೀವನದಲ್ಲಿ ಸಂಪತ್ತು ಹೆಚ್ಚಾಗಬೇಕಾದರೆ ಮಹಾಲಕ್ಷ್ಮಿಯ ಕೃಪೆ ಬೇಕು. ಮಹಾಲಕ್ಷ್ಮಿಯ ಕೃಪೆ ತಕ್ಷಣಕ್ಕೆ ಸಿಗುವುದಿಲ್ಲ. ನಮಗಿರುವ ದಾರಿದ್ರ್ಯ ತೊಲಗಿದರೆ ಮಾತ್ರ ಮಹಾಲಕ್ಷ್ಮಿಯ ಕೃಪೆ ಸಿಗುತ್ತದೆ. ಬಡತನವಿದ್ದರೆ ಸಾಲದ ಬಾಧೆ ಜಾಸ್ತಿಯಾಗುತ್ತದೆ, ನಾನಾ ರೀತಿಯ ದೈಹಿಕ, ಮಾನಸಿಕ ಸಂಕಷ್ಟಗಳನ್ನು ಅನುಭವಿಸಬೇಕಾಗುತ್ತದೆ, ಇನ್ನು ಕೆಲವರು ತಿನ್ನಲು ಕೂಡ ಅನ್ನವಿಲ್ಲದೆ ನರಳುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಮಹಾಲಕ್ಷ್ಮಿಯ ಅನುಗ್ರಹವನ್ನು ಪರಿಪೂರ್ಣವಾಗಿ ಪಡೆಯಲು ಮಾಡಬಹುದಾದ ಕೆಲವು ಪರಿಹಾರಗಳನ್ನು ನಾವು ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ ನೋಡಲಿದ್ದೇವೆ . ಬಡತನ ಹೋಗಲಾಡಿಸಲು ಮತ್ತು ಸಂಪತ್ತು ಹೆಚ್ಚಿಸಲು ಪರಿಹಾರ ನಮ್ಮ ಜೀವನದಲ್ಲಿನ ಕಷ್ಟಗಳೆಲ್ಲ ತೊಲಗಿ ಐಶ್ವರ್ಯ, ಸಮೃದ್ಧಿಯಿಂದ ಬಾಳಬೇಕಾದರೆ ಮನೆಯನ್ನು ಲಕ್ಷ್ಮೀ ಕಾರವಾಗಿ ಬದಲಾಯಿಸಿಕೊಳ್ಳಬೇಕು. ಇದಲ್ಲದೇ ನಮ್ಮ ಋಣಭಾರವನ್ನು ಪರಿಹರಿಸಲು ಮತ್ತು ಅನ್ನಪೂರಣಿಯ ಅನುಗ್ರಹವನ್ನು ಪರಿಪೂರ್ಣವಾಗಿ ಪಡೆಯಲು ಹಲವಾರು ಪರಿಹಾರಗಳಿವೆ. ಆ ಪರಿಹಾರಗಳಲ್ಲಿ, ನಾವು ಸರಳವಾದ ಆದರೆ ಪರಿಣಾಮಕಾರಿ ಪರಿಹಾರವನ್ನು ನೋಡಲಿದ್ದೇವೆ.…
ರಾಣೆಬೆನ್ನೂರು : ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮವನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗುವುದು. ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲಾಗುವುದು. ದೇವರಗುಡ್ಡ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಇರುವ ತಡೆಯಾಜ್ಞೆ ತೆರವುಗೊಳಿಸಲು ಕಾನೂನು ಹೋರಾಟ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ರಾಣೆಬೆನ್ನೂರು ತಾಲ್ಲೂಕು ದೇವರಗುಡ್ಡದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಕಂಚಿನ ಪುತ್ಥಳಿ ಲೋಕಾರ್ಪಣೆಗೊಳಿಸಿ, ಬಳಿಕ ಕನಕಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾಲತೇಶ ದೇವರ ಸನ್ನಿಧಿ ದೇವರಗುಡ್ಡವನ್ನು ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಮತ್ತು ದೇವರಗುಡ್ಡ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಇರುವ ತಡೆಯಾಜ್ಞೆಯನ್ನು ತೆರವುಗೊಳಿಸಲು ಕಾನೂನು ಹೋರಾಟ ನಡೆಸಲಾಗುವುದು. ದೇವರಗುಡ್ಡಕ್ಕೆ ಎಲ್ಲಾ ಮೂಲಭೂತ ಸೌಕರ್ಯಗಳನ್ನೂ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ನವದೆಹಲಿ : COVID-19 ಸಾಂಕ್ರಾಮಿಕ ರೋಗಕ್ಕೆ ಕಾರಣವಾದ SARS-CoV-2 ವೈರಸ್ ಮೆದುಳಿಗೆ ಸೋಂಕು ತಗುಲಿಸಲು ಅನಿರೀಕ್ಷಿತ ವಿಧಾನವನ್ನು ಬಳಸುತ್ತಿರಬಹುದು ಎಂದು ಇತ್ತೀಚಿನ ಅಧ್ಯಯನವು ಬಹಿರಂಗಪಡಿಸಿದೆ. ವೈರಸ್ನ ಸ್ಪೈಕ್ ಪ್ರೋಟೀನ್ನಲ್ಲಿನ ರೂಪಾಂತರಗಳು “ಹಿಂಬಾಗಿಲು” ಮೂಲಕ ಮೆದುಳಿನ ಕೋಶಗಳನ್ನು ಪ್ರವೇಶಿಸಲು ಅನುವು ಮಾಡಿಕೊಡುತ್ತದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ, ಈ ಪ್ರಕ್ರಿಯೆಯು ಕೆಲವು COVID-19 ರೋಗಿಗಳಲ್ಲಿ ಕಂಡುಬರುವ ನರವೈಜ್ಞಾನಿಕ ಲಕ್ಷಣಗಳನ್ನು ವಿವರಿಸಬಹುದು. ಈ ಸಂಶೋಧನೆಗಳು ತಳೀಯವಾಗಿ ವಿನ್ಯಾಸಗೊಳಿಸಲಾದ ಇಲಿಗಳ ಮೇಲಿನ ಸಂಶೋಧನೆಯಿಂದ ಪಡೆಯಲಾಗಿದೆ ಮತ್ತು ವೈರಸ್ ಮೆದುಳಿನ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದರ ಕುರಿತು ಒಳನೋಟಗಳನ್ನು ನೀಡಬಹುದು. ಸ್ಪೈಕ್ ಪ್ರೋಟೀನ್ ರೂಪಾಂತರಗಳ ಪಾತ್ರ ನೇಚರ್ ಮೈಕ್ರೋಬಯಾಲಜಿ ಜರ್ನಲ್ನಲ್ಲಿ ಪ್ರಕಟವಾದ ಅಧ್ಯಯನವು ಫ್ಯೂರಿನ್ ಕ್ಲೀವೇಜ್ ಸೈಟ್ ಎಂಬ ಸ್ಪೈಕ್ ಪ್ರೋಟೀನ್ನ ನಿರ್ದಿಷ್ಟ ಭಾಗವನ್ನು ಕೇಂದ್ರೀಕರಿಸಿದೆ. ಈ ಸೈಟ್ ಸಾಮಾನ್ಯವಾಗಿ ಜೀವಕೋಶದ ಮೇಲ್ಮೈಯಲ್ಲಿ ACE2 ಗ್ರಾಹಕಗಳಿಗೆ ಬಂಧಿಸುವ ಮೂಲಕ “ಮುಂಭಾಗದ ಬಾಗಿಲು” ಮೂಲಕ ಜೀವಕೋಶಗಳನ್ನು ಪ್ರವೇಶಿಸಲು ವೈರಸ್ ಸಹಾಯ ಮಾಡುತ್ತದೆ. ಆದಾಗ್ಯೂ, ಈ ಸೈಟ್ ರೂಪಾಂತರಗೊಂಡಾಗ ಅಥವಾ…
ಬಲ್ಗೇರಿಯನ್ ಜ್ಯೋತಿಷಿ ಬಾಬಾ ವಂಗಾ ತನ್ನ ಭವಿಷ್ಯವಾಣಿಗಳಿಗೆ ವಿಶ್ವಪ್ರಸಿದ್ಧ. ಅನೇಕ ಭವಿಷ್ಯವಾಣಿಗಳು ಈಗಾಗಲೇ ನಿಜವಾಗಿವೆ. ಬಾಬಾ ವಂಗಾ ಈ ವರ್ಷ ಪಶ್ಚಿಮ ಏಷ್ಯಾದಲ್ಲಿ ಸಂಘರ್ಷವನ್ನು ನಿಖರವಾಗಿ ಊಹಿಸಿದ್ದಾರೆ. ಈ ಅನುಕ್ರಮದಲ್ಲಿ ಇಸ್ರೇಲ್-ಹೆಜ್ಬುಲ್ಲಾ ಸಂಘರ್ಷ ನಡೆಯಿತು. ಬಾಬಾ ವಂಗಾ ಯುರೋಪ್ನಲ್ಲಿ ದೊಡ್ಡ ಘರ್ಷಣೆಗಳನ್ನು ಭವಿಷ್ಯ ನುಡಿದಿದ್ದರು. ಉಕ್ರೇನ್ ಮತ್ತು ರಷ್ಯಾ ನಡುವಿನ ಸಂಘರ್ಷವು ತಕ್ಷಣವೇ ಪ್ರಾರಂಭವಾಯಿತು. ಬಾಬಾ ವಂಗಾ ಅವರ ಭವಿಷ್ಯವಾಣಿಗಳು ಸಾಮಾನ್ಯವಾಗಿ ಜನರನ್ನು ಭಯಭೀತಗೊಳಿಸುತ್ತವೆ. ಬಲ್ಗೇರಿಯನ್ ಜ್ಯೋತಿಷಿ ಅನೇಕ ಇತರ ವಿಷಯಗಳನ್ನು ಭವಿಷ್ಯ ನುಡಿದರು, ಆದರೆ ಹೆಚ್ಚು ಗಮನ ಸೆಳೆದದ್ದು ಪ್ರಪಂಚದ ಅಂತ್ಯ. ಮಾನವಕುಲದ ಅಂತ್ಯವು ಪ್ರಾರಂಭವಾಗುತ್ತದೆ 2025 ರಲ್ಲಿ ಜಗತ್ತು ಕೊನೆಗೊಳ್ಳುತ್ತದೆ ಎಂದು ಬಾಬಾ ವಂಗಾ ಅವರ ಆಘಾತಕಾರಿ ಭವಿಷ್ಯ. ಇದು ಮಾನವ ಅಸ್ತಿತ್ವದ ಅವನತಿಗೆ ಕಾರಣವಾಗುತ್ತದೆ ಎಂದು ಬಾಬಾ ವಂಗಾ ಹೇಳಿದರು. ಪ್ರಾಕೃತಿಕ ವಿಕೋಪಗಳಿಂದ ದೃಷ್ಟಿ ಕಳೆದುಕೊಂಡ ಬಾಬಾ ವಂಗಾ ಅವರು ಎಲ್ಲವನ್ನೂ ಊಹಿಸಬಲ್ಲರು ಎಂದು ಭವಿಷ್ಯ ನುಡಿದಿದ್ದಾರೆ. ಬಾಬಾ ವಂಗಾ 1996 ರಲ್ಲಿ ಇಹಲೋಕ ತ್ಯಜಿಸಿದರು. ಅವರ…
ಬೆಂಗಳೂರು : ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು. ಸೆಪ್ಟೆಂಬರ್ 1ರಿಂದ ಕಟ್ಟುನಿಟ್ಟಾಗಿ ಈ ನಿಯಮವನ್ನು ಪಾಲಿಸಲು ನಿರ್ಧರಿಸಿರುವ ಬೆಸ್ಕಾಂ- ಗೃಹ ಮತ್ತು ವಾಣಿಜ್ಯ ಬಳಕೆದಾರರು, ಅಪಾರ್ಟ್ಮೆಂಟ್ಗಳು ಹಾಗೂ ತಾತ್ಕಲಿಕ ವಿದ್ಯುತ್ ಸಂಪರ್ಕ ಪಡೆದ ಗ್ರಾಹಕರು ನಿಗದಿತ 30 ದಿನದೊಳಗೆ ಬಿಲ್ ಪಾವತಿಸದಿದ್ದಲ್ಲಿ ಮೀಟರ್ ರೀಡಿಂಗ್ಗೆ ಬರುವ ದಿನ ಅಂದರೆ ಪ್ರತಿ ತಿಂಗಳ ಮೊದಲ 15 ದಿನದಲ್ಲೇ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು. ಹಾಗಾಗಿ, ಗ್ರಾಹಕರು ಸಕಾಲದಲ್ಲಿ ಶುಲ್ಕ ಪಾವತಿಸುವಂತೆ ಎಂದು ಬೆಸ್ಕಾಂ ಪ್ರಕಟಣೆ ಕೋರಿದೆ. ಈವರೆಗೆ, ಪ್ರತಿ ತಿಂಗಳ ಮೊದಲ 15 ದಿನದಲ್ಲಿ ಮೀಟರ್ ಮಾಪನ ಮಾಡಿದ ಬಳಿಕ, ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಲು ಲೈನ್ಮೆನ್ಗಳ ಜತೆ ಮಾಪಕ ಓದುಗರು ಮತ್ತೆ ಅದೇ ಸ್ಥಳಕ್ಕೆ ತೆರಳುತ್ತಿದ್ದರು. ಇನ್ನು ಮುಂದೆ ಮಾಪಕ ಓದುಗರೊಂದಿಗೆ ಇರುವ ಲೈನ್ಮೆನ್ಗಳು ವಿದ್ಯುತ್…
ಬೆಂಗಳೂರು : ಇಲಾಖಾ ವಿಚಾರಣೆಯಲ್ಲಿ ವಿಚಾರಣಾಧಿಕಾರಿಗಳನ್ನಾಗಿ `ನ್ಯಾಯಾಧೀಶರನ್ನು ನೇಮಕ ಮಾಡಿ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ರಾಜ್ಯ (ಶಿಸ್ತು ನಡವಳಿಗಳು) 1965/89 ಮತ್ತು ತಿದ್ದುಪಡಿ ನಿಯಮ 2022 ರ ನಿಯಮ-6 ಮತ್ತು 6 & 8 ರಡಿಯಲ್ಲಿ ರಾಜ್ಯ ವಿವಿಧ ಘಟಕಕಗಳಲ್ಲಿ ಆದೇಶಿಸಲಾದ ಇಲಾಖಾ ವಿಚಾರಣೆಗಳಲ್ಲಿ ಪ್ರಾರಂಭಿಕ ಹಂತದಿಂದ ಅಂತಿಮ ವರದಿ ತಲುಪಿರುವುದು ಪ್ರಕರಣಗಳಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಉಲ್ಲೇಖಿತ-2 ರ ಸುತ್ತೋಲೆ ದಿನಾಂಕ: 16.05.2024 ಹಾಗೂ 23.05.2024 ರಲ್ಲಿ ಮಾರ್ಗಸೂಚಿಗಳನ್ನು ನೀಡಲಾಗಿರುತ್ತದೆ. ಸರ್ಕಾರವು ಇಲಾಖಾ ವಿಚಾರಣೆಗಳಲ್ಲಿ ಕರ್ತವ್ಯ ನಿರತ ಅಧಿಕಾರಿಗಳನ್ನು ವಿಚಾರಣಾಧಿಕಾರಿಯಾಗಿ ನೇಮಕ ಮಾಡುವುದರಿಂದ ಅವರುಗಳ ದಿನ ನಿತ್ಯದ ಕರ್ತವ್ಯದ ಜೊತೆಗೆ ಅಪರಾಧ, ಕಾನೂನು & ಸುವ್ಯವಸ್ಥೆ, ತನಿಖೆ, ಮೇಲ್ವಿಚಾರಣೆ ಮತ್ತು ಇತರೆ ಕರ್ತವ್ಯಗಳಿಗೆ ಅಡಚಣೆ ಉಂಟಾಗುತ್ತದೆ. ಇದರಿಂದಾಗಿ ಆದೇಶಿಸಲಾದ ಇಲಾಖಾ ವಿಚಾರಣೆಗಳು ಸಹ ತ್ವರಿತವಾಗಿ ಪೂರ್ಣಗೊಳ್ಳುತ್ತಿಲ್ಲ. ಈ ಅಂಶಗಳ ಹಿನ್ನಲೆಯಲ್ಲಿ ಸರ್ಕಾರವು ನಿವೃತ್ತ ನ್ಯಾಯಾಧೀಶರು, ವಿಚಾರಣಾಧಿಕಾರಿಯಾಗಿ ನೇಮಕ ಮಾಡಿಕೊಳ್ಳಲು ಅವಕಾಶವನ್ನು ಕಲ್ಪಿಸಿಕೊಟ್ಟಿದ್ದು…
ಕೃಷಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಹನಿ ನೀರಾವರಿ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆ ಬೆಳೆಯುವ ಹಾಗೂ ಬೆಳೆಯಲು ಇಚ್ಚಿಸಿರುವ ರೈತ ಫಲಾನುಭವಿಗಳಿಗೆ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ಶೇ.90 ರಂತೆ ಗರಿಷ್ಠ 2 ಹೆಕ್ಟೇರ್ವರೆಗೆ ಹನಿ ನೀರಾವರಿ ಅಳವಡಿಕೆಗೆ ಸಹಾಯಧನ ನೀಡಲಾಗುತ್ತದೆ. ಅಲ್ಪಸಂಖ್ಯಾತ ವರ್ಗದವರಿಗೆ ಶೇ.15, ವಿಕಲಾಂಗಚೇತನರಿಗೆ ಶೇ.5 ಮತ್ತು ರೈತ ಮಹಿಳೆಯರಿಗೆ ಶೇ.33 ರಷ್ಟು ಅನುದಾನ ಮೀಸಲಿರಿಸಲಾಗಿದೆ. ಆಸಕ್ತ ರೈತರು ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಕಚೇರಿಗೆ ಸಂಪರ್ಕಿಸಿ, ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಸಿಹಿಸುದ್ದಿ ನೀಡಿದ್ದು, ಆಗಸ್ಟ್ 31ಕ್ಕೆ ಕೊನೆಯ ದಿನಾಂಕವಾಗಿದ ವಿವಿಧ ಅಭಿವೃದ್ಧಿ ನಿಗಮದ ಸಾಲ ಸೌಲಭ್ಯಗಳ ಅರ್ಜಿಗಳನ್ನು ಸೆಪ್ಟೆಂಬರ್ 15ರವರೆಗೆ ಮುಂದೂಡಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಿ ಸರ್ಕಾರದ ಸೌಲಭ್ಯಗಳನ್ನು ಪಡೆಯಬಹುದು. ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆ ಈ ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್ಲೈನ್ ಮೂಲಕ ಅಜರ್ಿ ಆಹ್ವಾನಿಸಲಾಗಿದೆ. ಈ ಎಲ್ಲಾ ಯೋಜನೆಗಳು ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳು…
ಬೆಂಗಳೂರು : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ರಾಜ್ಯದ ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ ಅವರ ವಿರುದ್ಧ ತನಿಖೆಗೆ ಅನುಮತಿ ನೀಡುವಂತೆ ಕಾಂಗ್ರೆಸ್ ಇಂದು ದೂರು ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯ ಸಚಿವ ಸಂಪುಟದ ಇತರ ಸಚಿವರು ಮತ್ತು ಕಾಂಗ್ರೆಸ್ ಶಾಸಕರು ‘ರಾಜಭವನ ಚಲೋ’ ನಡೆಸಿ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೂಟ್ ಅವರನ್ನು ಭೇಟಿಯಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ರಾಜ್ಯದ ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ ವಿರುದ್ದಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ದೂರು ನೀಡಿದ್ದಾರೆ. https://twitter.com/i/status/1829769289521340704 ರಾಜ್ಯಪಾಲರು ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ ಹಾಗೂ ಶಶಿಕಲಾ ಜೊಲ್ಲೆ ಸೇರಿದಂತೆ ತಮ್ಮ ಮುಂದೆ ವಿಚಾರಣೆಗೆ ಅನುಮತಿ ಕೋರಿ ಬಾಕಿ ಇರುವ ಪ್ರಕರಣಗಳಲ್ಲೂ ಅನುಮತಿ ನೀಡಬೇಕು ಎಂದು ಮನವಿ ಮಾಡಲು ಕಾಂಗ್ರೆಸ್ ಪಕ್ಷದ ವತಿಯಿಂದ ಇಂದು ರಾಜಭವನ ಚಲೋ…