Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯದ ನಿವೃತ್ತ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ನಿವೃತ್ತಿ ವೇತನ, ಇತರೆ ಭತ್ಯೆಗಳನ್ನು ಪರಿಷ್ಕರಿಸಿ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ನೀತಿ ನಿರ್ಣಯದಂತೆ, ಮೇಲೆ (2)ರಲ್ಲಿ ಓದಲಾದ ದಿನಾಂಕ: 22.07.2024ರ ಆದೇಶದಲ್ಲಿ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿಗಳು ಮತ್ತು ಪಿಂಚಣಿಯನ್ನು ಪರಿಷ್ಕರಿಸಿ ಅನುಷ್ಠಾನಗೊಳಿಸಲು ಆದೇಶಗಳನ್ನು ಹೊರಡಿಸಲಾಗಿರುತ್ತದೆ. ಮುಂದುವರೆದು, ಕರ್ನಾಟಕ ನಾಗರೀಕ ಸೇವಾ (ಪರಿಷ್ಕೃತ ವೇತನ) ನಿಯಮಗಳು, 2024ರ ಅವಕಾಶಗಳಂತೆ ಪರಿಷ್ಕೃತ ವೇತನ ಶ್ರೇಣಿಗಳು ಮತ್ತು ಪರಿಷ್ಕೃತ ಪಿಂಚಣಿಯನ್ನು ಅನುಷ್ಠಾನಗೊಳಿಸಲು ಮೇಲೆ (4)ರಲ್ಲಿ ಓದಲಾದ ದಿನಾಂಕ: 23.08.2024ರಲ್ಲಿ ವಿಸ್ತ್ರತವಾದ ಆದೇಶಗಳನ್ನು ಹೊರಡಿಸಲಾಗಿರುತ್ತದೆ. ರಾಜ್ಯ ಸರ್ಕಾರವು ರಚಿಸಿದ 7ನೇ ರಾಜ್ಯ ವೇತನ ಆಯೋಗವು ಶಿಫಾರಸ್ಸು ಮಾಡಿರುವಂತೆ ರಾಜ್ಯ ಸರ್ಕಾರಿ ನೌಕರರಿಗೆ ಲಭ್ಯವಿರುವ ಕನಿಷ್ಠ ಮತ್ತು ಗರಿಷ್ಠ ಪಿಂಚಣಿಯನ್ನು ಈ ಕೆಳಕಂಡಂತೆ ಪರಿಷ್ಕರಿಸಲು ಸರ್ಕಾರವು ಹರ್ಷಿಸುತ್ತದೆ. 1. ಕನಿಷ್ಠ ನಿವೃತ್ತಿ ವೇತನ: ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳು ಮತ್ತು ಕರ್ನಾಟಕ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಪ್ರಕರಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಎಂಟ್ರಿಕೊಟ್ಟಿದ್ದು, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಹೌದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕಾರ್ಯದರ್ಶಿ ರಾಜೇಶ್ ವರ್ಮಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿ್ದದು, ಪ್ರಾಸಿಕ್ಯೂಷನ್ ಗೆ ಸಂಬಂಧ ಪಟ್ಟಂತೆ ಗಮನ ಹರಿಸಿ ಎಂದು ಹೇಳಿದ್ದಾರೆ. ಈ ಮೂಲಕ ಪ್ರಾಸಿಕ್ಯೂಷನ್ ಪ್ರಕರಣದಲ್ಲಿ ರಾಷ್ಟ್ರಪತಿಗಳ ಎಂಟ್ರಿ ಆಗಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಮುಖಂಡ ರಮೇಶ್ ಬಾಬು ಪತ್ರ ಬರೆದಿದ್ದರು. ಇದೀಗ ಪತ್ರಕ್ಕೆ ರಾಷ್ಟ್ರಪತಿಗಳು ಉತ್ತರಿಸಿದ್ದಾರೆ.
ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಅರಿವು ವಿದೇಶಿ ಸಾಲ ಯೋಜನೆಯಡಿಯಲ್ಲಿ ವಿದ್ಯಾಭ್ಯಾಸಕ್ಕಾಗಿ ನೀಡಲಾಗುವ ಸಾಲ ಸೌಲಭ್ಯಕ್ಕೆ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 24 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ವಿದೇಶಿ (OVERSEAS EDUCATION) ಸಾಲ ಯೋಜನೆಯಡಿ ವಿದೇಶದಲ್ಲಿ ವ್ಯಾಸಂಗ ಮಾಡಲು ಬಯಸುವ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಹಾಗೂ ಪಾರ್ಸಿ ಜನಾಂಗದ ವಿದ್ಯಾರ್ಥಿಗಳು, ಮಾನ್ಯತೆ ಪಡೆದಿರುವ ಯಾವುದೇ ವಿದೇಶ ವಿಶ್ವವಿದ್ಯಾಲಯದಿಂದ, ಭಾರತದ ಪ್ರತಿಷ್ಠಿತ ಐಐಟಿಎಸ್, ಐಐಎಂಎಸ್, ಐಎಸ್ಸಿ ಸಂಸ್ಥೆಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಮಾಡಬಯಸುವವರು, ಈ ಯೋಜನೆಯಡಿಯಲ್ಲಿ ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ನಿಗಮದ ವೆಬ್ಸೈಟ್ www.kmdconline.karnataka.gov.in ನ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಇಚ್ಚಿಸುವ ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, ಕನಿಷ್ಟ 38 ವರ್ಷಕ್ಕಿಂತ ಕಡಿಮೆ ವಯಸ್ಸು…
ಬೆಂಗಳೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಇಂದು ಬೆಳಗ್ಗೆ 10.30 ಕ್ಕೆ ಹೈಕೋರ್ಟ್ ನಡೆಸಲಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಹಾಂ ರಾಜ್ಯಪಾಲರಿಗೆ ದೂರು ನೀಡಿದ್ದರು. ಬಳಿಕ ರಾಜ್ಯಪಾಲರು ಬಳಿಕ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಇಂದು ಹೈಕೋರ್ಟ್ ನಡೆಸಲಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 19 ರಂದು ಹೈಕೋರ್ಟಿಗೆ 712 ಪುಟಗಳ ರಿಟ್ ಅರ್ಜಿ ಸಲ್ಲಿಸಿದ್ದರು. ಆಗಸ್ಟ್ 29 ರಂದು ಹೈಕೋರ್ಟ್ ನಲ್ಲಿ ಈ ಒಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ವಿಚಾರಣೆಯನ್ನು ಆ.31 ರ…
ನವದೆಹಲಿ : ಈ ಬಾರಿ ಮುಂಗಾರು ಸಮಯಕ್ಕೆ ಸರಿಯಾಗಿ ಬಂದಿದೆ. ಉತ್ತಮ ಮಳೆಯೂ ಸುರಿದಿದೆ. ಆದರೆ ಈಗ ಮಳೆ ಕಡಿಮೆ ಆಗುತ್ತಿಲ್ಲ. ಹವಾಮಾನ ಇಲಾಖೆಯ ವಿಜ್ಞಾನಿಗಳ ಪ್ರಕಾರ, ಕಡಿಮೆ ಒತ್ತಡದ ವ್ಯವಸ್ಥೆ ರಚನೆಯಿಂದಾಗಿ, ಈ ಬಾರಿ ಮುಂಗಾರು ನಿರ್ಗಮನ ವಿಳಂಬವಾಗಲಿದೆ ಎಂದು ತಿಳಿಸಿದ್ದಾರೆ. ಇದು ಸೆಪ್ಟೆಂಬರ್ ಅಂತ್ಯದವರೆಗೆ ಅಥವಾ ಅದಕ್ಕೂ ಮೀರಿ ಹೋಗಬಹುದು. ಅಂತಹ ಪರಿಸ್ಥಿತಿಯಲ್ಲಿ, ಬೇಸಿಗೆಯಲ್ಲಿ ನೆಟ್ಟ ಬೆಳೆಗಳು ಹಾನಿಗೊಳಗಾಗಬಹುದು. ಅಕ್ಕಿ, ಹತ್ತಿ, ಸೋಯಾಬೀನ್, ಜೋಳ ಮತ್ತು ದ್ವಿದಳ ಧಾನ್ಯಗಳನ್ನು ಸೆಪ್ಟೆಂಬರ್ ಮಧ್ಯದಲ್ಲಿ ಕೊಯ್ಲು ಮಾಡಲಾಗುತ್ತದೆ. ಮಳೆ ಮುಂದುವರಿದರೆ ಕಟಾವು ಕಷ್ಟವಾಗುತ್ತದೆ. ಆದರೆ ಚಳಿಗಾಲದಲ್ಲಿ ಬಿತ್ತಿದ ಮುಂದಿನ ಬೆಳೆ ಪ್ರಯೋಜನವನ್ನು ಪಡೆಯುತ್ತದೆ ಏಕೆಂದರೆ ಮಣ್ಣು ತೇವವಾಗಿರುತ್ತದೆ. ಗೋಧಿ, ರೇಪ್ಸೀಡ್, ಗ್ರಾಂ ಇತ್ಯಾದಿ. ಹವಾಮಾನ ಇಲಾಖೆಯ ಹಿರಿಯ ವಿಜ್ಞಾನಿ ಈ ಮಾಹಿತಿ ನೀಡಿದ್ದಾರೆ. ಸೆಪ್ಟೆಂಬರ್ ಮೂರನೇ ವಾರದಲ್ಲಿ ಕಡಿಮೆ ಒತ್ತಡದ ವ್ಯವಸ್ಥೆ ರೂಪುಗೊಳ್ಳುವುದು ಕಂಡುಬರುತ್ತದೆ. ಇದರಿಂದಾಗಿ ಮುಂಗಾರು ಹೊರಡುವುದು ತಡವಾಗಲಿದೆ. ಭಾರತವು ಗೋಧಿ, ಸಕ್ಕರೆ ಮತ್ತು ಅಕ್ಕಿಯಲ್ಲಿ ವಿಶ್ವದ ಎರಡನೇ ಅತಿದೊಡ್ಡ…
ಬೆಂಗಳೂರು : 2024-25ನೇ ಸಾಲಿನಲ್ಲಿ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆ ಈ ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್ಲೈನ್ ಮೂಲಕ ಅಜರ್ಿ ಆಹ್ವಾನಿಸಲಾಗಿದೆ. ಈ ಎಲ್ಲಾ ಯೋಜನೆಗಳು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ. ಈ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ಅಜರ್ಿ ಸಲ್ಲಿಸಬಹುದು. ಅಜರ್ಿ ಸಲ್ಲಿಸುವಾಗ ಅಜರ್ಿದಾರರು…
ಬೆಂಗಳೂರು : ನೀರಾವರಿ ಇಲಾಖೆ ಹುದ್ದೆ ಹಗರಣಕ್ಕೆ ಸಂಬಂಧಿಸಿದಂತೆ 3 ಸರ್ಕಾರಿ ನೌಕರರು ಸೇರಿ 48 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಕಲಿ ದಾಖಲೆ ನೀಡಿ ಉದ್ಯೋಗ ಗಿಟ್ಟಿಸಲು ಮುಂದಾದ 37 ಮಂದಿ ಸೇರು ಮೂವರು ಸರ್ಕಾರಿ ನೌಕರರು, 11 ಮಂದಿ ಬ್ರೋಕರ್ ಗಳು ಸೇರಿ 48 ಮಂದಿಯನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದೆ. ಜಲಸಂಪನ್ಮೂಲ ಇಲಾಖೆಯ 182 ಎಸ್ ಡಿ ಎ ಬ್ಯಾಗ್ ಲಾಗ್ ಹುದ್ದೆ ಭರ್ತಿಗೆ 2022 ರಲ್ಲಿ ಅರ್ಜಿ ಆಹ್ವಾನಿಸಿತ್ತು, ನೇರ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಸ್ವೀಕಾರ ಮಾಡಿದ್ದು, ಗರಿಷ್ಟ ಅಂಕ ಪಡೆದವರ ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ನಡೆದಿತ್ತು . ಅರ್ಜಿ ಪರಿಶೀಲನೆ ವೇಳೆ 62 ಅಭ್ಯರ್ಥಿಗಳ ಅಂಕಪಟ್ಟಿ ನಕಲಿಯಾಗಿರುವುದು ಪತ್ತೆಯಾಗಿದೆ. ಕಲಬುರ್ಗಿ ಜಿಲ್ಲೆ ಮುರಾರ್ಜಿ ದೇಸಾಯಿ ಶಾಲೆ ಪ್ರಾಂಶುಪಾಲ ಆನಂದ್, ಜೋಗ ಫಾಲ್ಸ್ ಕೆಪಿಟಿಸಿಎಲ್ ಕಚೇರಿ ಪ್ರಥಮ ದರ್ಜೆ ಸಹಾಯಕ ಕೃಷ್ಣ, ಹಾಸನ ಜಲಸಂಪನ್ಮೂಲ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಪ್ರದೀಪ್ ಬಂಧಿತ…
ಇತ್ತೀಚಿನ ದಿನಗಳಲ್ಲಿ, ಕೆಲವೊಮ್ಮೆ ಫ್ಯಾಷನ್ನಿಂದಾಗಿ ಅಥವಾ ಮಾರ್ಕೆಟಿಂಗ್ನ ಬಲೆಗೆ ಬೀಳುವುದರಿಂದ, ನಾವು ನಮ್ಮ ಮನೆಗಳಲ್ಲಿ ಸಾಕಷ್ಟು ಅಲಂಕಾರಿಕ ವಸ್ತುಗಳನ್ನು ಇಡುತ್ತೇವೆ. ಇಷ್ಟು ಮಾತ್ರವಲ್ಲದೆ, ಇನ್ಸ್ಟಾಗ್ರಾಮ್ ಅಥವಾ ಸಾಮಾಜಿಕ ಮಾಧ್ಯಮದಲ್ಲಿ ಕೆಲವು ವಿಷಯಗಳು ತುಂಬಾ ಸುಂದರವಾಗಿ ಕಾಣುತ್ತವೆ ಎಂದರೆ ಅವುಗಳ ‘ಮುದ್ದಾದ’ ಕಾರಣಕ್ಕಾಗಿ ನಾವು ಅವುಗಳನ್ನು ಆರ್ಡರ್ ಮಾಡುತ್ತೇವೆ. ಆದರೆ ವಿಷಕ್ಕೆ ಕಮ್ಮಿಯಿಲ್ಲದ ವರ್ಷಗಟ್ಟಲೆ ಮನೆಯಲ್ಲಿ ಸ್ಥಾನ ಪಡೆದಿರುವ ಅಂತಹ 3 ವಸ್ತುಗಳ ಬಗ್ಗೆ ಇಂದು ನಾವು ನಿಮಗೆ ಹೇಳಲಿದ್ದೇವೆ. ಜಾಹೀರಾತುಗಳ ಮೂಲಕ, ಈ ವಿಷಯಗಳು ನಿಮಗೆ ಬಹಳ ಮುಖ್ಯವೆಂದು ನಾವು ಅರ್ಥಮಾಡಿಕೊಳ್ಳುತ್ತೇವೆ, ಆದರೆ ವಾಸ್ತವದಲ್ಲಿ, ಅವುಗಳನ್ನು ದೀರ್ಘಕಾಲದವರೆಗೆ ಬಳಸುವುದರಿಂದ, ನಾವು ನಮಗೆ ಹಾನಿ ಮಾಡಿಕೊಳ್ಳುತ್ತೇವೆ. ಇವು ಆ ಮೂರು ವಿಷಯಗಳು… 1. ಪರಿಮಳಯುಕ್ತ ಮೇಣದಬತ್ತಿಗಳು: ಇತ್ತೀಚಿನ ದಿನಗಳಲ್ಲಿ, ಪರಿಮಳಯುಕ್ತ ಕ್ಯಾಂಡಲ್ಗಳು ಐಷಾರಾಮಿ ಮತ್ತು ಫ್ಯಾಷನ್ನ ಹೊಸ ಹೇಳಿಕೆಯಾಗಿದೆ. ಸ್ಪಾ ಕೇಂದ್ರಗಳು ಅಥವಾ ದೊಡ್ಡ ಹೋಟೆಲ್ಗಳಲ್ಲಿ ಆಹ್ಲಾದಕರ ವಾತಾವರಣವನ್ನು ಸೃಷ್ಟಿಸಲು ಪರಿಮಳಯುಕ್ತ ಮೇಣದಬತ್ತಿಗಳನ್ನು ಬಳಸಲಾಗುತ್ತದೆ. ಹೋಟೆಲಿನಂತೆ ನಮ್ಮ ಮನೆಯಲ್ಲೂ ಸುವಾಸನೆಯುಳ್ಳ ಮೇಣದಬತ್ತಿಗಳನ್ನು ನಮ್ಮ…
ಬೆಂಗಳೂರು : ಗಣೇಶ ಪರಿಸರ ಮತ್ತು ಪ್ರಕೃತಿಯಿಂದಲೇ ಹುಟ್ಟಿದ ದೇವರಾಗಿದ್ದು, ಗಣಪತಿಯ ಪೂಜಿಸುವ ನಾವು ಪ್ರಕೃತಿ, ಪರಿಸರವನ್ನೂ ಉಳಿಸಬೇಕು, ಈ ಬಾರಿ ಬಣ್ಣ ರಹಿತ ಮಣ್ಣಿನ ವಿನಾಯಕ ಮೂರ್ತಿಯನ್ನು ಮಾತ್ರ ಪೂಜಿಸಿ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ನಾಡಿನ ಜನತೆಗೆ ಮನವಿ ಮಾಡಿದ್ದಾರೆ. ಸಂದೇಶದಲ್ಲಿ ಅವರು, ಈ ವರ್ಷ ದೇಶಾದ್ಯಂತ ಸುರಿದ ಧಾರಾಕಾರ ಮಳೆಯಿಂದ ಹಲವು ಕಡೆ ಭೂ ಕುಸಿತ ಉಂಟಾಗಿ ಅನಾಹುತಗಳು ಸಂಭವಿಸಿವೆ. ಹೀಗಾಗಿ ಪ್ರಕೃತಿ ಪರಿಸರ ಸಂರಕ್ಷಣೆಯ ಹೊಣೆ ಹಿಂದೆಂದಿಗಿಂತಲೂ ಈಗ ಹೆಚ್ಚಾಗಿದೆ. ಈ ಬಾರಿಯ ಗಣೇಶೋತ್ಸವವನ್ನು ಪರಿಸರ ಸ್ನೇಹಿ ಮಾಡೋಣ. “ಪ್ರಕೃತಿ ವಿಕೋಪ ನಿವಾರಕ – ನಮ್ಮ ಪರಿಸರ ವಿನಾಯಕ’’ನನ್ನು – ಬಣ್ಣ ರಹಿತ ಮಣ್ಣಿನ ಮೂರ್ತಿಗಳ ರೂಪದಲ್ಲಿ ಪೂಜಿಸೋಣ ಎಂದು ಕರೆ ನೀಡಿದ್ದಾರೆ. ಸಂಕಲ್ಪ: ಜಲಚರಗಳ ಸಾವಿಗೆ ಕಾರಣವಾಗುವ, ಜಲ ಮೂಲಗಳನ್ನು ಕಲುಷಿತಗೊಳಿಸುವ ರಾಸಾಯನಿಕ ಬಣ್ಣ ಲೇಪಿತ ಪಿಓಪಿ ಗಣೇಶ ಮೂರ್ತಿ ಪೂಜೆ ಮಾಡುವುದಿಲ್ಲ; ಬದಲಾಗಿ ಸಣ್ಣ ಮಣ್ಣಿನ…
ಲೈಂಗಿಕ ಸಂಭೋಗದ ಸಮಯದಲ್ಲಿ ನೀವು ನೋವನ್ನು ಅನುಭವಿಸಿದರೆ, ಅದನ್ನು ನಿರ್ಲಕ್ಷಿಸಬಾರದು. ಈ ಸ್ಥಿತಿಯನ್ನು ವೈದ್ಯಕೀಯ ಭಾಷೆಯಲ್ಲಿ ಡಿಸ್ಪಾರುನಿಯಾ ಎಂದು ಕರೆಯಲಾಗುತ್ತದೆ. ಈ ಸಮಸ್ಯೆಯು ಸಾಮಾನ್ಯವಾಗಿ ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುತ್ತದೆ, ಆದರೆ ಅದರ ಚಿಕಿತ್ಸೆಯು ಸಾಧ್ಯ. ನೀವು ಸಹ ಅಂತಹ ನೋವನ್ನು ಅನುಭವಿಸುತ್ತಿದ್ದರೆ, ನೀವು ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ಡಿಸ್ಪಾರುನಿಯಾದ ಲಕ್ಷಣಗಳು ಸಂಭೋಗದ ಸಮಯದಲ್ಲಿ ನೋವು : ಈ ರೋಗದ ಮುಖ್ಯ ಲಕ್ಷಣವೆಂದರೆ ಸಂಭೋಗದ ಸಮಯದಲ್ಲಿ ತೀವ್ರವಾದ ನೋವು. ಸೊಂಟದಲ್ಲಿ ಮರುಕಳಿಸುವ ನೋವು ಇರಬಹುದು, ಅದು ತೀಕ್ಷ್ಣವಾಗಿರಬಹುದು. ಉರಿತ ಮತ್ತು ನೋವು ಒಟ್ಟಿಗೆ ಸಂಭವಿಸಬಹುದು. ಲೈಂಗಿಕ ಸಂಭೋಗದ ಸಮಯದಲ್ಲಿ ಆಗಾಗ್ಗೆ ನೋವು ಇದ್ದರೆ, ಅದು ಆರೋಗ್ಯ ಸಮಸ್ಯೆಯ ಸಂಕೇತವಾಗಿರಬಹುದು. ಅಂತಹ ಸಂದರ್ಭದಲ್ಲಿ, ವೈದ್ಯರನ್ನು ಸಂಪರ್ಕಿಸುವುದು ಮುಖ್ಯ. ಡಿಸ್ಪಾರುನಿಯಾದ ಕಾರಣಗಳು ಶಾರೀರಿಕ ಕಾರಣಗಳು : ನೋವು ಒಳಹೊಕ್ಕು ಅಥವಾ ಆಳವಾದ ಒತ್ತಡದ ಸಮಯದಲ್ಲಿ ಉಂಟಾಗಬಹುದು. ಸರಿಯಾದ ಫೋರ್ಪ್ಲೇ ಇಲ್ಲದಿರುವುದು ಕೂಡ ನೋವನ್ನು ಉಂಟುಮಾಡಬಹುದು. ಋತುಬಂಧ, ಹೆರಿಗೆ ಅಥವಾ ಹಾಲುಣಿಸುವ ಸಮಯದಲ್ಲಿ ಕಡಿಮೆಯಾದ ಈಸ್ಟ್ರೊಜೆನ್ ಮಟ್ಟಗಳು…