Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಪ್ರತಿ ವರ್ಷ, ಜೂನ್ 12 ರಂದು, ಜಾಗತಿಕ ಸಮುದಾಯವು ವಿಶ್ವ ಬಾಲಕಾರ್ಮಿಕ ವಿರೋಧಿ ದಿನವನ್ನು ಆಚರಿಸಲು ಒಗ್ಗೂಡುತ್ತದೆ, ಇದು ಶೋಷಕ ದುಡಿಮೆಯ ಹೊರೆಯಿಂದ ಬಾಲ್ಯವನ್ನು ಕದ್ದ ವಿಶ್ವದಾದ್ಯಂತದ ಲಕ್ಷಾಂತರ ಮಕ್ಕಳ ಗಂಭೀರ ಜ್ಞಾಪಕವಾಗಿದೆ. ಈ ದಿನವು ಬಾಲಕಾರ್ಮಿಕ ಪದ್ಧತಿಯ ಹರಡುವಿಕೆ ಮತ್ತು ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ಮಾತ್ರವಲ್ಲದೆ ಮಕ್ಕಳ ಹಕ್ಕುಗಳ ಈ ಅತಿರೇಕದ ಉಲ್ಲಂಘನೆಯನ್ನು ನಿರ್ಮೂಲನೆ ಮಾಡಲು ತುರ್ತು ಕ್ರಮವನ್ನು ಪ್ರತಿಪಾದಿಸಲು ಸಹ ಸಹಾಯ ಮಾಡುತ್ತದೆ. ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಇತಿಹಾಸ ವಿಶ್ವ ಬಾಲಕಾರ್ಮಿಕ ವಿರೋಧಿ ದಿನವು ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡುವ ವಿಶ್ವವ್ಯಾಪಿ ಮನವಿಯನ್ನು ಪ್ರತಿಪಾದಿಸುವ ಮತ್ತು ದೊಡ್ಡದಾಗಿಸುವ ಸಾಮರ್ಥ್ಯದಲ್ಲಿದೆ. 1987 ರಿಂದ, ಭಾರತ ಕೇಂದ್ರ ಸರ್ಕಾರವು ಬಾಲ ಉದ್ಯೋಗದ ರಾಷ್ಟ್ರೀಯ ನೀತಿಯನ್ನು ಜಾರಿಗೆ ತಂದಿದೆ, ಇದು ದುಡಿಮೆಯಲ್ಲಿ ತೊಡಗಿರುವ ಮಕ್ಕಳು ಮತ್ತು ಹದಿಹರೆಯದವರಿಗೆ ಪುನರ್ವಸತಿ ಕಲ್ಪಿಸುವತ್ತ ಗಮನ ಹರಿಸಿದೆ. ಬಡತನದ ಮೂಲ ಕಾರಣಗಳನ್ನು ಪರಿಹರಿಸುವುದು ಅಷ್ಟೇ ನಿರ್ಣಾಯಕವಾಗಿದೆ, ಏಕೆಂದರೆ ಇದು ಬಲಿಪಶುಗಳ ಕುಟುಂಬಗಳಿಗೆ…
ನವದೆಹಲಿ : ಜನಸಾಮಾನ್ಯರಿಗೆ ಕೇಂದ್ರ ಸರ್ಕಾರವು ನೆಮ್ಮದಿಯ ಸುದ್ದಿಯೊಂದನ್ನು ನೀಡಿದ್ದು, ಕಚ್ಚಾ ಅಡುಗೆ ಎಣ್ಣೆಗಳ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು (BCD) 20% ರಿಂದ 10% ಕ್ಕೆ ಇಳಿಸಿದೆ. ಈ ಕಡಿತವು ಕಚ್ಚಾ ಸೂರ್ಯಕಾಂತಿ, ಸೋಯಾಬೀನ್ ಮತ್ತು ತಾಳೆ ಎಣ್ಣೆಯ ಮೇಲೆ ಅನ್ವಯಿಸುತ್ತದೆ. ಕಳೆದ ಕೆಲವು ತಿಂಗಳುಗಳಿಂದ ಅಡುಗೆ ಎಣ್ಣೆಗಳ ಬೆಲೆಗಳು ಗಗನಕ್ಕೇರುತ್ತಿವೆ. ಸೆಪ್ಟೆಂಬರ್ 2024 ರಲ್ಲಿ, ಸರ್ಕಾರ ಆಮದು ಸುಂಕವನ್ನು ಹೆಚ್ಚಿಸಿತು. ಇದು ದೇಶೀಯ ಉದ್ಯಮವನ್ನು ಉತ್ತೇಜಿಸುವ ಗುರಿಯನ್ನು ಹೊಂದಿತ್ತು. ಆದರೆ ಈ ನಿರ್ಧಾರವು ವಿರುದ್ಧ ಪರಿಣಾಮವನ್ನು ಬೀರಿತು. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು ಸಹ ಹೆಚ್ಚಿವೆ. ಎರಡರ ಸಂಯೋಜಿತ ಪರಿಣಾಮವು ಭಾರತದಲ್ಲಿ ಅಡುಗೆ ಎಣ್ಣೆಗಳ ಬೆಲೆಗಳನ್ನು ಮತ್ತಷ್ಟು ಹೆಚ್ಚಿಸಿದೆ. ಸಾಮಾನ್ಯ ಜನರ ಅಡುಗೆಮನೆಯಲ್ಲಿ ಅವ್ಯವಸ್ಥೆ ಇದೆ. ಜನರು ಎಣ್ಣೆ ಖರೀದಿಸುವ ಮೊದಲು ಎರಡು ಬಾರಿ ಯೋಚಿಸುತ್ತಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಸರ್ಕಾರವು ಈಗ ಕಚ್ಚಾ ಅಡುಗೆ ಎಣ್ಣೆಗಳ ಮೇಲಿನ ಕಸ್ಟಮ್ಸ್ ಸುಂಕವನ್ನು 20% ರಿಂದ 10% ಕ್ಕೆ ಇಳಿಸಲು…
ನವದೆಹಲಿ : ವಿಶ್ವದಲ್ಲಿ ಮುಸ್ಲಿಮರ ಜನಸಂಖ್ಯೆಯು ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಪ್ಯೂ ಸಂಶೋಧನಾ ಕೇಂದ್ರದ ಅಧ್ಯಯನದಲ್ಲಿ ಇದು ಬಹಿರಂಗವಾಗಿದೆ. ಇದರ ಪ್ರಕಾರ, 2010-2020ರ ನಡುವೆ, ವಿಶ್ವದ ಮುಸ್ಲಿಂ ಜನಸಂಖ್ಯೆಯು 34.7 ಕೋಟಿಗಳಷ್ಟು ಏರಿಕೆಯಾಗಿ 194.6 ಕೋಟಿಗಳಿಗೆ ತಲುಪಿದೆ. ಇದರೊಂದಿಗೆ, ಮುಸ್ಲಿಂ ಸಮುದಾಯದ ಜಾಗತಿಕ ಪಾಲು ಶೇಕಡಾ 25.6 ಕ್ಕೆ ಏರಿದೆ. ಹಿಂದೂಗಳ ಜನಸಂಖ್ಯೆಯಲ್ಲಿ ಎಷ್ಟು ಹೆಚ್ಚಳ? ಹಿಂದೂಗಳ ಬಗ್ಗೆ ಹೇಳುವುದಾದರೆ, ಕಳೆದ 10 ವರ್ಷಗಳಲ್ಲಿ ಹಿಂದೂ ಜನಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದೆ. ಆದಾಗ್ಯೂ, ಜಾಗತಿಕವಾಗಿ ಹಿಂದೂಗಳ ಪಾಲು ಶೇಕಡಾ 15 ರಷ್ಟು ದರದಲ್ಲಿ ಸ್ಥಿರವಾಗಿದೆ, ಅದು ಹೆಚ್ಚಿಲ್ಲ ಅಥವಾ ಕಡಿಮೆಯಾಗಿಲ್ಲ. ಈ ದರದ ಪ್ರಕಾರ, 2010-2020ರ ನಡುವೆ ಹಿಂದೂಗಳ ಜನಸಂಖ್ಯೆಯು 12.6 ಕೋಟಿ ಏರಿಕೆ ಕಂಡಿದ್ದು, 115.8 ಕೋಟಿಗಳಿಗೆ ತಲುಪಿದೆ ಎಂದು ಸಂಶೋಧನೆಯು ಕಂಡುಹಿಡಿದಿದೆ. ಪ್ಯೂ ಸಂಶೋಧನಾ ಕೇಂದ್ರದ ಸಂಶೋಧನೆಯ ಪ್ರಕಾರ, ಕ್ರಿಶ್ಚಿಯನ್ ಸಮುದಾಯವು ವಿಶ್ವದ ಅತಿದೊಡ್ಡ ಧಾರ್ಮಿಕ ಗುಂಪಾಗಿದೆ. ಕಳೆದ 10 ವರ್ಷಗಳಲ್ಲಿ, ಅವರ ಜನಸಂಖ್ಯೆಯು 12.2 ಕೋಟಿಯಷ್ಟು ಏರಿಕೆಯಾಗಿದ್ದು, 229…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಇಂದಿನಿಂದ ಮುಂದಿನ ಐದು ದಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಕೊಡಗು, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇಂದಿನಿಂದ ಜೂನ್ 16ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆ ಮುಂದುವರಿಯಲಿದ್ದು, ವಿವಿಧ ಜಿಲ್ಲೆಗಳಿಗೆ ರೆಡ್ ಅಲರ್ಟ್, ಯೆಲ್ಲೋ ಅಲರ್ಟ್, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಸಿಡಿಲಿನಿಂದ ಕೂಡಿದ್ದು ವ್ಯಾಪಕವಾಗಿ ಸಾಧಾರಣ ಮಳೆ ಸಹಿತ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಣೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂನ್ 17 ರವರೆಗೆ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳಿಗೆ ರಜೆ ಘೋಷಿಸಿ ಉತ್ತರ…
ಬೆಂಗಳೂರು : ಬಹುನಿರೀಕ್ಷಿತ ಜಾತಿಗಣತಿ ವರದಿ ಕುರಿತು ತೀರ್ಮಾನಿಸಲು ರಾಜ್ಯ ಸರ್ಕಾರವು ಇಂದು ವಿಶೇಷ ಸಚಿವ ಸಂಪುಟ ಸಭೆ ಕರೆದಿದೆ. ಜಾತಿಗಣತಿ ಹಿಂದಿನ ಸಮೀಕ್ಷಾ ವರದಿಯ ಅಂಕಿ-ಅಂಶಗಳ ಬಗ್ಗೆ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪರಿಷ್ಕೃತ ಸಮೀಕ್ಷೆ ಹೆಸರಿನಲ್ಲಿ ಮತ್ತೊಮ್ಮೆ ಜಾತಿವಾರು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಮರು ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರವು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ನ್ಯಾ. ನಾಗಮೋಹನ್ದಾಸ್ ನೇತೃತ್ವದಲ್ಲಿ ನಡೆಯುತ್ತಿರುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025 ಮಾದರಿಯನ್ನೇ ಅನುಸರಿಸಿ 90 ದಿನಗಳಲ್ಲಿ ಮರು ಸಮೀಕ್ಷೆ ಪೂರ್ಣಗೊಳಿಸಲು ನಿರ್ಧರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಚಿಕ್ಕಬಳ್ಳಾಪುರ: ರಾಜ್ಯದ ಜನರಿಗೆ ಗುಡ್ ನ್ಯೂಸ್ ಎನ್ನುವಂತೆ ಪಿಎಂ ಕುಸುಮ್-ಸಿ ಯೋಜನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಿದ್ದಾರೆ. ಹೀಗಾಗಿ ಇನ್ಮುಂದೆ ಹಗಲಿನಲ್ಲೂ ರೈತರ ಪಂಪ್ ಸೆಟ್ ಗಳಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುತ್ತದೆ. ಕೃಷಿ ಫೀಡರ್ ಗಳ ಸೌರೀಕರಣದ ಮೂಲಕ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ಪೂರೈಸುವ ಕುಸುಮ್- ಸಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಉದ್ಘಾಟಿಸಿದರು. ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿ ಮತ್ತು ಚರಕಮಟ್ಟೇನಹಳ್ಳಿ ಗ್ರಾಮದ ಸುಮಾರು 60 ಎಕರೆ ಪ್ರದೇಶದಲ್ಲಿ 20 ಮೆ.ವ್ಯಾ. ಸಾಮರ್ಥ್ಯದಲ್ಲಿ ಸೋಲಾರ್ ಘಟಕ ಸ್ಥಾಪಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ಕುಸುಮ್- ಸಿ ಯೋಜನೆಯಡಿ ಸ್ಥಾಪಿಸಲಾಗಿರುವ ಅತಿ ದೊಡ್ಡ ಘಟಕವಿದು. ಹೀಗಾಗಿ ಗೌರಿಬಿದನೂರಿನಲ್ಲಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಇಂಧನ ಸಚಿವ ಕೆಜೆ ಜಾರ್ಜ್ ಉದ್ಘಾಟಿಸಿದರು. ಈ ಮೂಲಕ ರಾಜ್ಯ ಮಟ್ಟದ ಬೃಹತ್ ಯೋಜನೆಯೊಂದ್ನು ಉದ್ಘಾಟನೆಯಾದಂತೆ ಆಗಿದೆ. ಏನಿದು ಕುಸುಮ್-ಸಿ ಯೋಜನೆ? “ಕುಸುಮ್ – ಸಿ ಯೋಜನೆ ನಾಲ್ಕೈದು…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಇಂದಿನಿಂದ ಮುಂದಿನ ಐದು ದಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದ.ಕನ್ನಡ, ಉ.ಕನ್ನಡ, ಉಡುಪಿ, ಬೆಳ ಗಾವಿ, ಚಿಕ್ಕಮಗಳುರು, ಶಿವ ಮೊಗ್ಗ, ಕೊಡಗು, ಹಾವೇರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ ಜೂನ್ 16ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆ ಮುಂದುವರಿಯಲಿದ್ದು, ವಿವಿಧ ಜಿಲ್ಲೆಗಳಿಗೆ ರೆಡ್ ಅಲರ್ಟ್, ಯೆಲ್ಲೋ ಅಲರ್ಟ್, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಸಿಡಿಲಿನಿಂದ ಕೂಡಿದ್ದು ವ್ಯಾಪಕವಾಗಿ ಸಾಧಾರಣ ಮಳೆ ಸಹಿತ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಮುನ್ಸೂಚನೆ ನೀಡಿದೆ. ಜೂನ್ 12ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನುಳಿದಂತೆ ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯನಗರ,…
ಬೆಂಗಳೂರು : ದಿನಾಂಕ:12/06/2025 ರಂದು “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ”ದ ಆಯೋಜನೆಯ ಕುರಿತು ನಿರ್ದೇಶನ ಹಾಗೂ ಅನುದಾನ ಬಿಡುಗಡೆ ಮಾಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ILO) ಘೋಷಿಸಿರುವಂತೆ, ವಿಶ್ವ ಸಂಸ್ಥೆಯ ಎಲ್ಲಾ ಮಿತ್ರ ರಾಷ್ಟ್ರಗಳು ಪ್ರತಿ ವರ್ಷ ಜೂನ್-12 ರಂದು “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನಾಗಿ ಆಯೋಜಿಸಲಾಗುತ್ತಿದೆ. ಕರ್ನಾಟಕ ಸರ್ಕಾರ ಪ್ರತಿ ವರ್ಷ ಜೂನ್-12 ರಂದು ಜಿಲ್ಲೆಯಾದ್ಯಂತ “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ”ವನ್ನು ಆಯೋಜಿಸಲಾಗುತ್ತಿತ್ತು. ಜಿಲ್ಲಾ ಮಟ್ಟದಲ್ಲಿ ಆಯಾ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಉಲ್ಲೇಖ ಪತ್ರದಲ್ಲಿ ಜಿಲ್ಲಾಧಿಕಾರಿಗಳಿಗೆ ದಿನಾಂಕ:12.06.2025 ರಂದು “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಆಯೋಜಿಸುವ ಕುರಿತು ಅನುದಾನವನ್ನು ಬಿಡುಗಡೆ ಮಾಡಿ ನಿರ್ದೇಶನವನ್ನು ನೀಡಲಾಗಿರುತ್ತದೆ. ಈ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಉಲ್ಲೇಖ ಪತ್ರದಲ್ಲಿನ ನಿರ್ದೇಶನಗಳನ್ನು ಪಾಲಿಸಿ “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಯಶಸ್ವಿಯಾಗಿ ಆಯೋಜಿಸಲು ಕ್ರಮಗಳನ್ನು…
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (muda) ನಿವೇಶನಗಳ ಅಕ್ರಮ ಹಂಚಿಕೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಮತ್ತೆ 100 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಈ ಬಗ್ಗೆ ಖುದ್ದು ಜಾರಿ ನಿರ್ದೇಶನಾಲಯವೇ ಟ್ವಿಟ್ಟರ್ ಎಕ್ಸ್ನಲ್ಲಿ ಮಾಹಿತಿ ನೀಡಿದೆ. ಮುಡಾ ಪ್ರಕರಣದಲ್ಲಿ ಇಲ್ಲಿಯವರೆಗೆ 400 ಕೋಟಿ ರೂ. ಸಂಚಿತ ಮುಟ್ಟುಗೋಲು ಹಾಕಿಕೊಂಡಿರುವ ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಪಿಎಂಎಲ್ಎ, 2002 ರ ನಿಬಂಧನೆಗಳ ಅಡಿಯಲ್ಲಿ, ಬೆಂಗಳೂರಿನ ಇಡಿ, 9/06/2025 ರಂದು ರೂ. 100 ಕೋಟಿ (ಅಂದಾಜು) ಮಾರುಕಟ್ಟೆ ಮೌಲ್ಯದ 92 ಸ್ಥಿರ ಆಸ್ತಿಗಳನ್ನು (ಮುಡಾ ಸೈಟ್ಗಳು) ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ ಎಂದು ತಿಳಿಸಿದೆ. https://twitter.com/ANI/status/1932346976315551817?ref_src=twsrc%5Egoogle%7Ctwcamp%5Eserp%7Ctwgr%5Etweet
ಬೆಂಗಳೂರು : ಜೈನ್ ಸಮುದಾಯದ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಧಾನ ಮತ್ತು ಸಹಾಯಕ ಅರ್ಚಕರುಗಳಿಗೆ ಹಾಗೂ ಸಿಖ್ ಗುರುದ್ವಾರಗಳಲ್ಲಿರುವ ಮುಖ್ಯ ಮತ್ತು ಸಹಾಯಕ ಗ್ರಂಥಿಗಳಿಗೆ ಮಾಸಿಕ ಗೌರವ ಧನ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ. ಜೈನ್ ಸಮುದಾಯದ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಧಾನ ಮತ್ತು ಸಹಾಯಕ ಅರ್ಚಕರುಗಳಿಗೆ ಹಾಗೂ ಸಿಖ್ ಗುರುದ್ವಾರಗಳಲ್ಲಿರುವ ಮುಖ್ಯ ಮತ್ತು ಸಹಾಯಕ ಗ್ರಂಥಿಗಳಿಗೆ ಮಾಸಿಕ ಗೌರವ ಧನ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ. ಜೈನ್ ಸಮುದಾಯದ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಧಾನ ಮತ್ತು ಸಹಾಯಕ ಅರ್ಚಕರುಗಳಿಗೆ ಹಾಗೂ ಸಿಖ್ ಗುರುದ್ವಾರಗಳಲ್ಲಿರುವ ಮುಖ್ಯ ಮತ್ತು ಸಹಾಯಕ ಗ್ರಂಥಿಗಳಿಗೆ ಮಾಸಿಕ ಗೌರವ ಧನ್ನ ನೀಡಲು ನಿಗಧಿತ ನಮೂನೆಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಫಲಾನುಭವಿಗಳು ದಕ್ಷಿಣ ಕನ್ನಡ ಜಿಲ್ಲೆಯ ಜೈನ್ ಬಸದಿಗಳು ಕರ್ನಾಟಕ ರಾಜ್ಯದಲ್ಲಿನ ಸಂಘಗಳ ನೋಂದಾಣಿ ಕಾಯ್ದೆಯನ್ವಯ ಅಥವಾ ಇತರೆ ಸಂಬಂಧಪಟ್ಟ ಕಾಯ್ದೆಯಡಿಯಲ್ಲಿ ನೋಂದಾಣಿಯಾಗಿರಬೇಕು. ಪ್ರಧಾನ ಗ್ರಂಥಿ/ಅರ್ಚಕರಿಗೆ ರೂ 6000/- ಮತ್ತು ಸಹಾಯಕ ಗ್ರಂಥಿ/ಅರ್ಚಕರಿಗೆ ರೂ 5000/- ಮಾಸಿಕ ಗೌರವಧನ ನೀಡಲಾಗುವುದು. ಸಂಬಂದಪಟ್ಟ…














