Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕುಸುಮ್-ಸಿ ಸೋಲಾರ್ ಯೋಜನೆ ಉದ್ಘಾಟಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಸಬ್ಸಿಡಿ ಸೌರಶಕ್ತಿ ಚಾಲಿತ ನೀರಾವರಿ ಪಂಪ್ಗಳೊಂದಿಗೆ ರೈತರಿಗೆ ಬೆಂಬಲ ನೀಡಲು ಸರ್ಕಾರ ಮುಂದಾಗಿದೆ. ಜೂನ್ 11 ರಂದು ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ ಕುಸುಮ್-ಸಿ ಯೋಜನೆಯ ಅನುಷ್ಠಾನವನ್ನು ಉದ್ಘಾಟನೆಯನ್ನು ಮಾಡಲಾಗುತ್ತದೆ. ಇದು ಪ್ರಧಾನ ಮಂತ್ರಿ ಕಿಸಾನ್ ಉರ್ಜಾ ಸುರಕ್ಷಾ ಏವಂ ಉತ್ಥಾನ ಮಹಾಭಿಯಾನ (PM-Kusum)ಯೋಜನೆಯ ಒಂದು ಭಾಗವಾಗಿದೆ. ಸರ್ಕಾರಿ ಭೂಮಿ ಲಭ್ಯವಿರುವಲ್ಲೆಲ್ಲಾ ಫಲಕಗಳನ್ನು ಅಳವಡಿಸಲಾಗುತ್ತಿದೆ. ಎಲ್ಲಾ ಜಿಲ್ಲಾಧಿಕಾರಿಗಳಿಗೆ ಭೂಮಿಯನ್ನು ಹುಡುಕಿ ಕೆಲಸ ಪ್ರಾರಂಭಿಸಲು ನಿರ್ದೇಶವನನ್ನು ಸಹ ಇಂಧನ ಸಚಿವರು ಮಾಡಿದ್ಧಾರೆ. ಪಂಚಾಯತ್ಗಳು ಲಭ್ಯವಿರುವ ಭೂಮಿಯನ್ನು ಉಪಯುಕ್ತತಾ ಕಾರ್ಯಗಳಿಗೆ ಬಳಸಲು ಸಾಧ್ಯವಾಗುತ್ತದೆ ಎಂದು ವಿವರಿಸಿದ್ದಾರೆ. ಕುಸುಮ್ –ಬಿ ಯೋಜನೆಯಡಿ ರೈತರು ಸ್ವಂತ ಜಾಗ ಹೊಂದಿದ್ದರೆ ಪಂಪ್ಸೆಟ್ ಗೆ ಸೋಲಾರ್ ಪ್ಯಾನಲ್ ಅಳವಡಿಸಿಕೊಳ್ಳಲು ಸರ್ಕಾರವೇ ಸಬ್ಸಿಡಿ ನೀಡುವುದರಿಂದ ಅನೇಕ ರೈತರು ಅಳವಡಿಸಿಕೊಂಡಿದ್ದಾರೆ.
ಬೆಂಗಳೂರು : ರಾಜ್ಯಾದ್ಯಂತ ಶಾಲೆಗಳು ಪುನಾರಂಭವಾಗಿದ್ದು, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿಗೆ ಸಂಬಂಧಿಸಿದ ಪೋಸ್ಟರ್ ಗಳನ್ನು ಪ್ರದರ್ಶಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಶಾಲೆಗಳಲ್ಲಿ ದಾಖಲಾತಿಗೆ ಸಂಬಂಧಿಸಿದ ಪೋಸ್ಟರ್ ಅನ್ನು, ಶಾಲಾ ಮುಂಭಾಗ, ಗ್ರಾಮ ಪಂಚಾಯಿತಿ ಬಸ್ ಸ್ಟ್ಯಾಂಡ್ ಇತ್ಯಾದಿ ಸಾರ್ವಜನಿಕ ಸ್ಥಳಗಳಲ್ಲಿ ಪಾಲಕರಿಗೆ, ಊರ ಜನರಿಗೆ, ನಾಗರಿಕರಿಗೆ ಕಾಣುವಂತೆ ಪ್ರದರ್ಶಿಸಲು ಕ್ರಮ ಕೈಗೊಳ್ಳುವುದು. ಸರ್ಕಾರಿ ಶಾಲೆಗಳಲ್ಲಿ ಉಚಿತ ದಾಖಲಾತಿ, ಪಠ್ಯಪುಸ್ತಕ, ಸಮವಸ್ತ್ರ, ಶೂ ಮತ್ತು ಸಾಕ್ಸ್ ಉಚಿತವಾಗಿ ನೀಡಲಾಗುವುದು. ಪ್ರತಿದಿನ ಮಧ್ಯಾಹ್ನ ಬಿಸಿಯೂಟ, ವಾರದಲ್ಲಿ ಆರು ದಿನ ಮೊಟ್ಟೆ, ಬಾಳೆಹಣ್ಣು, ಕ್ಷೀರ ಭಾಗ್ಯದ ಜೊತೆಗೆ ರಾಗಿ ಮಾಲ್ಟ್ ವಿತರಣೆ ಸೇರಿ ಸರ್ಕಾರಿ ಶಾಲೆಗಳಲ್ಲಿನ ಇತರೆ ಸೌಲಭ್ಯ, ಶಿಕ್ಷಣದ ಗುಣಮಟ್ಟ ಹೆಚ್ಚಳಕ್ಕೆ ಇರುವ ಕಲಿಕಾ ಚಿಲುಮೆ, ಗಣಿತ ಗಣಕ, ಓದು ಕರ್ನಾಟಕ, ಕಲಿಕಾ ದೀಪ, ಜ್ಞಾನ ಸೇತು, ವಿದ್ಯಾ ವಿಜೇತ ಮೊದಲಾದ ಕಾರ್ಯಕ್ರಮಗಳ ಮಾಹಿತಿ ಒಳಗೊಂಡಂತೆ ಪೋಸ್ಟರ್ ಸಿದ್ಧಪಡಿಸಲಾಗಿದೆ. 2024 -25 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ…
ಚಿಕ್ಕಮಗಳೂರು : ಟ್ರಕ್ಕಿಂಗ್ ಗೆ ತೆರಳಿ ಕಾಡಿನಲ್ಲಿ ಚಿತ್ರದುರ್ಗ ಮೂಲದ 10 ಚಾರಣಿಗರು ದಾರಿ ತಪ್ಪಿದ್ದು, ಸ್ಥಳೀಯರು ಅವರನ್ನು ರಕ್ಷಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರಿನ ಬಲ್ಲಾಳ ರಾಯನ ದುರ್ಗ ಕಾಡಿಗೆ ಚಾರಣೆಗೆ ಹೋಗಿದ್ದ ಚಿತ್ರದುರ್ಗ ಮೆಡಿಕಲ್ ಕಾಲೇಜಿನ 10 ವಿದ್ಯಾರ್ಥಿಗಳು ಕಾಡಿನಲ್ಲಿ ಬೆಳಗ್ಗೆಯಿಂದ ದಾರಿ ತಪ್ಪಿದ್ದರು. ಸ್ಥಳೀಯರು ಅವರನ್ನು ಸುರಕ್ಷಿತವಾಗಿ ಕರೆತಂದಿದ್ದಾರೆ. ಚಿತ್ರದುರ್ಗದ ಮೆಡಿಕಲ್ ಕಾಲೇಜಿನ 10 ವಿದ್ಯಾರ್ಥಿಗಳು ಬೆಳ್ತಂಗಡಿ ಮಾರ್ಗವಾಗಿ ಟ್ರಕ್ಕಿಂಗ್ ಆರಂಭಿಸಿದ್ದರು. ಮಾರ್ಗ ತಿಳಿಯದೇ ಬೆಳಗ್ಗೆಯಿಂದ ಕಾಡಿನಲ್ಲೇ ಸುತ್ತಾಡುತ್ತಿದ್ದರು. ಸ್ಥಳೀಯರು ಅವರನ್ನು ರಕ್ಷಿಸಿ ಸುರಕ್ಷಿತವಾಗಿ ಕರೆತಂದಿದ್ದಾರೆ.
ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದ ಬೆನ್ನಲ್ಲೇ ರಾಜ್ಯದಲ್ಲಿ ಸಾರ್ವಜನಿಕ ಸಭೆಗಳ ನಿರ್ವಹಣೆಗೆ ಸೂಕ್ತ ಕಾನೂನು ತರುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕಾಲ್ತುಳಿತ ಘಟನೆಯಿಂದ ರಾಜ್ಯ ಪಾಠ ಕಲಿತಿದ್ದು, ಭವಿಷ್ಯದಲ್ಲಿ ಸಾರ್ವ ಜನಿಕ ಸಭೆಯ ನಿರ್ವಹಣೆಗಾಗಿ ಸೂಕ್ತ ಕಾಯ್ದೆ ತರುತ್ತೇವೆ. ಭವಿಷ್ಯದಲ್ಲಿ ಜನ ಸಮೂಹ ನಿಯಂತ್ರಕ್ಕೆ ಒಂದು ಯೋಜನೆ ತರುತ್ತೇವೆ ಎಂದರು. ಆರ್ ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿ 11 ಅಭಿಮಾನಿಗಳು ಸಾವನ್ನಪ್ಪಿದ್ದರು.
ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಹಗಲಲ್ಲೂ ಕರೆಂಟ್ ಒದಗಿಸುವ ಯೋಜನೆಗೆ ನಾಳೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ರಾಜ್ಯದಲ್ಲಿ ಕುಸುಮ್-ಸಿ ಯೋಜನೆ ಮೂಲಕ ಡಿಸೆಂಬರ್ ವೇಳೆಗೆ 2,400 ಮೆ. ವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ ಹೊಂದಿದ್ದು, ರೈತರಿಗೆ ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸುವ ಈ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು ನಾಳೆ ಗೌರಿಬಿದನೂರಿನಲ್ಲಿ ಅಧಿಕೃತ ಚಾಲನೆ ನೀಡಲಿದ್ದಾರೆ ಎಂದು ಇಂಧನ ಸಚಿವ ಕೆ. ಜೆ.ಜಾರ್ಜ್ ತಿಳಿಸಿದ್ದಾರೆ. ಪ್ರತಿ ಮೆ.ವ್ಯಾಟ್ ವಿದ್ಯುತ್ ಉತ್ಪಾದ ನೆಗೆ 3-4 ಕೋಟಿ ವೆಚ್ಚ ತಗುಲುತ್ತದೆ. ಈ ಪೈಕಿ 1 ಕೋಟಿ ರೂ. ಕೇಂದ್ರ ಸರ್ಕಾರ ಸಬ್ಸಿಡಿ ನೀಡುತ್ತದೆ. ಸದ್ಯ ಟೆಂಡರ್ ಕರೆದು 2,400 ಮೆ.ವ್ಯಾಟ್ ವಿದ್ಯುತ್ ಉತ್ಪಾದನೆ ಸಾಮ ರ್ಥದ ಘಟಕಗಳ ಅಳವಡಿಕೆಗೆ ನಿರ್ಧರಿ ಸಿದ್ದು,9,500 ಕೋಟಿಯಿಂದ 10,000 ಕೋಟಿ ಬಂಡವಾಳ ಹೂಡಿಕೆ ನಿರೀಕ್ಷೆಯಿದೆ ಎಂದು ಹೇಳಿದರು. ಸಬ್ಸಿಡಿ ಸೌರಶಕ್ತಿ ಚಾಲಿತ ನೀರಾವರಿ ಪಂಪ್ಗಳೊಂದಿಗೆ ರೈತರಿಗೆ ಬೆಂಬಲ ನೀಡಲು ಸರ್ಕಾರ…
ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ,(ಬ್ಯಾಂಕುಗಳ ಸಹಯೋಗದೊಂದಿಗೆ) ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಸ್ವಾತಂತ್ರ್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಯೋಜನೆಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-3ರಲ್ಲಿ ಬರುವ ಒಕ್ಕಲಿಗ ಸಮುದಾಯಗಳಿಗೆ ಸೇರಿದ ಕ್ರಮ ಸಂಖ್ಯೆ 1(ಎ) ಯಿಂದ (ಟಿ) ವರೆಗೆ ನಮೂದಾಗಿರುವ ಸಮುದಾಯಕ್ಕೆ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಲಿಂಗಾಯಿತ, ಕಾಡುಗೊಲ್ಲ, ಮರಾಠ, ಮತ್ತು ಇದರ ಉಪಜಾತಿಗಳನ್ನು ಹೊರತುಪಡಿಸಿ)ಸೇರಿದ ಆಸಕ್ತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ನಿಗಮವು ಅನುಷ್ಠಾನಗೊಳಿಸಿರುವ ಮೇಲ್ಕಂಡ ಯೋಜನೆಗಳನ್ನು ಶಾಸಕರು ಅಥವಾ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳು, ಜಿಲ್ಲಾ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ರಚಿಸಿದ ಆಯ್ಕೆ ಸಮಿತಿಯ ಮೂಲಕ ಆಯ್ಕೆಯನ್ನು ಮಾಡಲಾಗುವುದು. 2023-24…
ಬೆಂಗಳೂರು : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-I, IIA, IIB, IIIA, IIIB, ಪ.ಜಾ ಮತ್ತು ಪ.ಪಂ.ಕ್ಕೆ ಸೇರಿದ ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮೋ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು https://shp.karnataka.gov.in/bcwd ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 26.06.2025 ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ, ಪ್ರವೇಶಾತಿಗೆ ಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರಗಳನ್ನು https://bcwd.karnataka.gov.in/ ನಲ್ಲಿ ನೋಡಬಹುದು. ಹೆಚ್ಚಿನ ಮಾಹಿತಿಗಾಗಿ : ಇ-ಮೇಲ್ bcwdhelpline@gmail.com ಮೂಲಕ ಅಥವಾ ಜಿಲ್ಲಾ / ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸುವುದು. ಸಹಾಯವಾಣಿ ಸಂಖ್ಯೆ : 8050770004\8050770005
ಬೆಂಗಳೂರು : ಪ್ರಸಕ್ತ ಸಾಲಿನ ಪಠ್ಯದಲ್ಲಿ ಸಂಚಾರ, ವೈಯಕ್ತಿಕ ಸುರಕ್ಷತೆ, ರಸ್ತೆ ಸುರಕ್ಷತೆ, ಟ್ರಾಫಿಕ್ ಲೈಟ್ ವಿಚಾರ ಕುರಿತ ಪಠ್ಯ ಅಳವಡಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ತಿಳಿಸಿದೆ. ಬೆಂಗಳೂರು ಸಂಚಾರ ಪೊಲೀಸರು ಸಲ್ಲಿಸಿದ್ದ ಪ್ರಸ್ತಾವನೆಗೆ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಗ್ರೀನ್ ಸಿಗ್ನಲ್ ನೀಡಿದ್ದು, ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ 2 ರಿಂದ 7ನೇ ತರಗತಿಗಳು ಹಾಗೂ 9ನೇ ತರಗತಿಗೆ ಪ್ರಸಕ್ತ ಸಾಲಿನ ಪಠ್ಯದಲ್ಲಿ ಸಂಚಾರ ನಿಯಮಗಳ ಕುರಿತು ಅಳವಡಿಸಲು ಸಮ್ಮತಿಸಿದೆ. ಸಂಚಾರ, ಸೂಚನಾ ಫಲಕಗಳು, ನಿಯಮಗಳು, ವೈಯಕ್ತಿಕ ಸುರಕ್ಷತೆ, ರಸ್ತೆ ಸುರಕ್ಷತೆ, ರಸ್ತೆ ಸುರಕ್ಷತೆ ಎಲ್ಲರ ಸುರಕ್ಷತೆ ಹೆಸರಿನ ಅಧ್ಯಾಯಗಳನ್ನು ಬೆಂಗಳೂರು ಸಂಚಾರ ಪೊಲೀಸ್ ಇಲಾಖೆಯೇ ಸಿದ್ಧಪಡಿಸಿದ್ದು, ಪಠ್ಯಪುಸ್ತಕ ರಚನೆ ಅಥವಾ ಪರಿಷ್ಕರಣೆ ಸಮಯದಲ್ಲಿ ಸಮಿತಿ ಅಧ್ಯಕ್ಷರ ಗಮನಕ್ಕೆ ತಂದು ಮುಂದಿನ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಪಠ್ಯ ಪುಸ್ತಕ ಸಂಘ ತಿಳಿಸಿದೆ. ಇಲಾಖೆಯ ನಿರ್ದೇಶಕರು ಈ ಕುರಿತಾಗಿ ಆದೇಶ ಹೊರಡಿಸಿದ್ದು, ರಾಜ್ಯ ಪಠ್ಯಕ್ರಮ…
ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿ ಹಂತದಲ್ಲಿ ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ಉಚಿತವಾಗಿ ಮಾಡಲು ಜೂನ್ 30ರವರೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಪಡಿತರ ಚೀಟಿದಾರರು ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ಬೆರಳಚ್ಚು ಮೂಲಕ ತಮ್ಮ ಗುರುತು, ನೋಂದಣಿ ಅಥವಾ ಮರು ನೋಂದಣಿ ಮಾಡಿಸದೆ ಇರುವ ಎಲ್ಲಾ ಸದಸ್ಯರು ಜೂನ್ 30ರೊಳಗೆ ಬಯೋಮೆಟ್ರಿಕ್ ಸಂಗ್ರಹಣೆ (ಇ-ಕೆವೈಸಿ) ಮಾಡಿಸಿಕೊಳ್ಳಲು ಅಂತಿಮ ಅವಕಾಶವನ್ನು ನೀಡಲಾಗಿದ್ದು, ಇದಕ್ಕೆ ಯಾವುದೇ ಹಣ ನೀಡುವಂತಿಲ್ಲ. ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿದಾರರಿಗೆ ಮುಂದಿನ ತಿಂಗಳು ಆಹಾರ ಧಾನ್ಯ ವಿತರಣೆಯನ್ನು ಸ್ಥಗಿತಗೊಳಿಸಲಾಗುವುದು ಮತ್ತು ಆಧಾರ್ ದೃಢೀಕರಣ (ಇ-ಕೆವೈಸಿ)ಯನ್ನು ಮಾಡದೇ ಇರುವ ಫಲಾನುಭವಿಗಳಿಗೆ ಜುಲೈ ಮಾಹೆಯಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ. ಇ-ಕೆವೈಸಿ ಮಾಡುವುದು ನಿಮ್ಮ ಸ್ಥಳೀಯ ಪಡಿತರ ಅಥವಾ ಪಿಡಿಎಸ್ ಡೀಲರ್ಗೆ ಭೇಟಿ ನೀಡಿ ಕುಟುಂಬದ ಮುಖ್ಯಸ್ಥರ ಆಧಾರ್ ಸಂಖ್ಯೆಯನ್ನು…
ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ದಿ ನಿಗಮದ ಯೋಜನೆಗಳಡಿ 2025-26 ನೇ ಸಾಲಿಗೆ ಸಹಾಯಧನ ಹಾಗೂ ಸಾಲ ಸೌಲಭ್ಯವನ್ನು ಪಡೆಯಲು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ(ಹೊಸದು), ಗಂಗಾ ಕಲ್ಯಾಣ ಯೋಜನೆ(ಈ ಯೋಜನೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು ಇತರೆ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಹೊಂದಿರಬೇಕು), ಸ್ವಯಂ ಉದ್ಯೋಗ ನೇರಸಾಲ( ಬ್ಯಾಂಕ್ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆ( ವಾರ್ಷಿಕ ವರಮಾನ ರೂ.15 ಲಕ್ಷ ಮಿತಿಯಲ್ಲಿರಬೇಕು) ಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು, ನಿಗಮದ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಸರ್ಕಾರದ ಆದೇಶದನ್ವಯ ಕಾಡುಗೊಲ್ಲ ಜಾತಿಗೆ ಸೇರಿರಬೇಕು, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರಬೇಕು, ವಯೋಮಿತಿ 18 ವರ್ಷಗಳಿಂದ 55…














