Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ 1 ಗಂಟೆ ಸುಮಾರಿಗೆ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಆಟೋ ಮೊಬೈಲ್ ಅಂಗಡಿಯೊಂದು ಹೊತ್ತಿ ಉರಿದಿದೆ. ಬೆಂಗಳೂರಿನ ಜೆಸಿ ರಸ್ತೆಯಲ್ಲಿರುವ ಆಟೋ ಮೊಬೈಲ್ ಅಂಗಡಿ ಹೊತ್ತಿ ಉರಿದಿದೆ. ಅಗ್ನಿ ಶಾಮಕ ಸಿಬ್ಬಂದಿ ಸರಿಯಾದ ಸಮಯಕ್ಕೆ ಆಗಮಿಸಿ ಭಾರೀ ಅನಾಹುತ ತಪ್ಪಿಸಿದ್ದಾರೆ. ಈ ಮೂಲಕ ಸುತ್ತಮುತ್ತಲಿನ ಅಂಗಡಿಗಳು ಬೆಂಕಿಯಿಂದ ಬಚಾವ್ ಆಗಿದ್ದಾವೆ. ಆಟೋ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡದಿಂದ ಬರೋಬ್ಬರಿ 4 ಕೋಟಿ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.
ಬೆಂಗಳೂರು : ಹಿಂದುಳಿದವರು, ದಲಿತರು, ಅಶಿಕ್ಷಿತರು ಇರುವ ಕಡೆ ಬಾಲ್ಯವಿವಾಹ ಮತ್ತು ಬಾಲಗರ್ಭಿಣಿ ಪ್ರಕರಣಗಳು ಇರುತ್ತವೆ. ಇದನ್ನು ಸಮರ್ಪಕವಾಗಿ ತಡೆಯಬೇಕು ಎಂದು ನಿಮಗೆ ಅನ್ನಿಸಲ್ವಾ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಪ್ರಶ್ನಿಸಿದರು. ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲಾ ಡಿಸಿ, ಎಸ್ಪಿ ಮತ್ತು ಸಿಇಒಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು, ರಾಜ್ಯದಲ್ಲಿ ಬಾಲ್ಯ ವಿವಾಹ, ಬಾಲಗರ್ಭಿಣಿ ಪ್ರಕರಣ ತಡಿಬೇಕು, ಸರಿಯಾಗಿ ನಿಗಾ ವಹಿಸಿ, ವರದಿ ನೀಡದ PDO ಗಳು ರೆವಿನ್ಯೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಿ. ಅಗತ್ಯ ಇರುವ ಕಡೆ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸು ಹಾಕಿ ಕಾನೂನು ಕ್ರಮ ಕೈಗೊಳ್ಳಿ ಎಂದು ಸಿಎಂ ಸೂಚಿಸಿದರು. ಯುವನಿಧಿ ಫಲಾನುಭವಿ ನಿರುದ್ಯೋಗಿಗಳಿಗೆ ಉದ್ಯೋಗ, ತರಬೇತಿ ಸಿಗಬೇಕು. ಮಾರುಕಟ್ಟೆಯ ಬೇಡಿಕೆಗೆ ತಕ್ಕಂತೆ ತರಬೇತಿ ನೀಡಿ, ಉದ್ಯೋಗ ಕೈಗೆ ಸಿಗುವಂತಾಗಬೇಕು. ತರಬೇತಿ ಪಡೆದವರೆಲ್ಲರಿಗೂ ಉದ್ಯೋಗ ಸಿಗದೇ ಹೋಗಬಹುದು. ಆದರೆ ತರಬೇತಿ ಮಾತ್ರ ಹೆಚ್ಚೆಚ್ಚು ನಿರುದ್ಯೋಗಿ ಮತ್ತು ಯುವನಿಧಿ ಫಲಾನುಭವಿಗಳಿಗೆ ನೀಡಬೇಕು ಎಂದು ಸಿಎಂ ಸೂಚನೆ…
ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್.1ರಿಂದ ಮೇ.31ರವರೆಗೆ ಸುರಿದಂತ ಪೂರ್ವ ಮುಂಗಾರು ಮಳೆಯಿಂದಾಗಿ 71 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ 15378.32 ಹೆಕ್ಟೇರ್ ಬೆಳೆಹಾನಿಯಾಗಿದೆ. ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ಅವರು ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಪೂರ್ವ ಮುಂಗಾರು ಹಂಗಾಮು 1901 ರಿಂದ ಇಲ್ಲಿಯವರೆಗಿನ ಮಳೆ ಅಂಕಿಅಂಶಗಳನ್ನು ಗಮನಿಸಿದಾಗ 2025ರ ಪೂರ್ವ ಮುಂಗಾರು ಅವಧಿಯಲ್ಲಿ ದಾಖಲೆ ಪ್ರಮಾಣದ ಮಳೆಯಾಗಿದ್ದು, ಕಳೆದ 125 ವರ್ಷಗಳಲ್ಲೇ ಪೂರ್ವ ಮುಂಗಾರು ಮತ್ತು ಮೇ ಮಾಹೆಯಲ್ಲಿ ಕಂಡುಬಂದ ಗರಿಷ್ಟ ಪ್ರಮಾಣದ ಮಳೆಯಾಗಿದೆ ಎಂದಿದ್ದಾರೆ. ಪ್ರಮುಖವಾಗಿ ರಾಜ್ಯದಲ್ಲಿ 2025ರ ಮೇ ಮಾಹೆಗೆ ವಾಡಿಕೆಯಾಗಿ 74 ಮಿ.ಮೀ ಮಳೆಯಾಗಬೇಕಿದ್ದು, ವಾಸ್ತವಿಕ 219 ಮಿ.ಮೀ ಮಳೆಯಾಗಿದ್ದು ಸರಾಸರಿ ವಾಡಿಕೆ ಮಳೆಗೆ ಹೋಲಿಸಿದಾಗ ಶೇ.197ರಷ್ಟು ಅತ್ಯಧಿಕ ಮಳೆಯಾಗಿದೆ. 2025ರ ಪೂರ್ವ ಮುಂಗಾರು (1ನೇ ಮಾರ್ಚ್ ರಿಂದ 31ನೇ ಮೇ) ಅವಧಿಯಲ್ಲಿ ವಾಡಿಕೆಯಾಗಿ 115ಮಿ.ಮೀ ಮಳೆಯಾಗಬೇಕಿದ್ದು, ವಾಸ್ತವಿಕ 286 ಮಿ.ಮೀ ಮಳೆಯಾಗಿದ್ದು, ಸರಾಸರಿ ವಾಡಿಕೆ ಮಳೆಗೆ ಹೋಲಿಸಿದಾಗ ಶೇ.149ರಷ್ಟು ಅತ್ಯಧಿಕ ಮಳೆಯಾಗಿದೆ. ಒಟ್ಟಾರೆ, 2025ರ ಪೂರ್ವ ಮುಂಗಾರು (1ನೇ…
ಬೆಳಗಾವಿ : ರಾಜ್ಯದಲ್ಲೊಂದು ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಮದುವೆ ಆಗದ್ದಕ್ಕೆ ನೊಂದು ವಿಷ ಸೇವಿಸಿ ಸಹೋದರರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಹೌದು, ಮದುವೆ ಆಗದೆ ಜೀವನದಲ್ಲಿ ಜಿಗುಪ್ಪೆಗೊಂಡು ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕೋಣನಕೇರಿ ಗ್ರಾಮದಲ್ಲಿ ನಡೆದಿದೆ. ಸಂತೋಷ ರವೀಂದ್ರ ಗುಂಡೆ (55), ಅಣ್ಣಾಸಾಹೇಬ ರವೀಂದ್ರ ಗುಂಡೆ (50) ಇಬ್ಬರು ಸಹೋದರರಿಗೆ ಮದುವೆ ಆಗಿರಲಿಲ್ಲ. ಇದರಿಂದ ನೊಂದಿದ್ದ ಅವರು ಕುಡಿತದ ಚಟಕ್ಕೆ ಬಿದ್ದಿದ್ದರು. ಬಳಿಕ ಕುಡಿತದ ನಶೆಯಲ್ಲಿ ವಿಷಕಾರಿ ಪದಾರ್ಥ ಸೇವನೆ ಮಾಡಿದ್ದಾರೆ.ಕೂಡಲೇ ಇವರಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ದಿನೇ ದಿನೇ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯಿಂದ ಈ ಸಲಹೆ ಪಾಲಿಸುವಂತೆ ಸೂಚಿಸಿದೆ. ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕೋವಿಡ್-19 ಕಣ್ಗಾವಲು ಮತ್ತು ಸುರಕ್ಷತೆಯ ಸಲಹೆಯನ್ನು ಬಿಡುಗಡೆ ಮಾಡಿದೆ. ಕರ್ನಾಟಕದಲ್ಲಿ ಕೋವಿಡ್-19 ಪ್ರಕರಣಗಳು ಕ್ರಮೇಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರೋಗ ತಡೆಗಟ್ಟಲು, ಪ್ರಕರಣಗಳನ್ನು ಪತ್ತೆಹಚ್ಚಲು ಮತ್ತು ಆರೈಕೆಯನ್ನು ಒದಗಿಸಲು ರಾಜ್ಯವು ನಿರಂತರ ಪುಯತ್ನಗಳ ಮೂಲಕ ಅದರ ಮೇಲ್ವಿಚಾರಣೆ ಮತ್ತು ನಿರ್ವಹಣೆಯನ್ನು ಮುಂದುವರೆಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನಾಗರಿಕರು ಭಯಭೀತರಾಗದಂತೆ ಹಾಗೂ ಜಾಗರೂಕರಾಗಿದ್ದುಕೊಂಡು ತಮ್ಮ ಆರೋಗ್ಯ ಕಾಪಾಡಿಕೊಳ್ಳುವ ಪುಯತ್ನಗಳನ್ನು ಸಕ್ರಿಯವಾಗಿ ಮಾಡುವಂತೆ ಈ ಮೂಲಕ ವಿನಂತಿಸುತ್ತದೆ. ಯಾವುದೇ ಹೊಸ ರೂಪಾಂತರಗಳು ಅಥವಾ ಸಂಭಾವ್ಯ ಉಲ್ಬಣ ಪ್ರಕರಣಗಳನ್ನು ಪತ್ತೆಹಚ್ಚಲು ಮತ್ತು ನಿಯಂತ್ರಿಸಲು ಸಾರ್ವಜನಿಕರ ನಿರಂತರ ಸಹಕಾರವು ಅತ್ಯಗತ್ಯವಾಗಿರುತ್ತದೆ. ನಿಮ್ಮ ಆರೋಗ್ಯ, ನಮ್ಮ ಆದ್ಯತೆ ಎಂದಿದೆ. ಸಾರ್ವಜನಿಕರಿಗೆ ಪ್ರಮುಖ ಸಲಹೆಗಳು: 1. ಜಾಗರೂಕರಾಗಿರಿ, ಆತಂಕಪಡಬೇಡಿ: ಅಧಿಕೃತ ಮೂಲಗಳ ಮೂಲಕ ಮಾಹಿತಿ ಪಡೆಯಿರಿ, ಪರಿಶೀಲಿಸದ ಮಾಹಿತಿಯನ್ನು…
ನವದೆಹಲಿ : ಜೂನ್ ತಿಂಗಳ ಮೊದಲ ದಿನವೇ ಗ್ರಾಹಕರಿಗೆ ಸಿಹಿಸುದ್ದಿ ಸಿಕ್ಕಿದ್ದು, ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಬೆಲೆಯನ್ನು ಕಡಿತಗೊಳಿಸಿವೆ. ಜೂನ್ 1 ರಿಂದ ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ನ ಬೆಲೆಯನ್ನು 24 ರೂ.ಗಳಷ್ಟು ಕಡಿಮೆ ಮಾಡಲಾಗಿದೆ. ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ನ ಚಿಲ್ಲರೆ ಮಾರಾಟದ ಬೆಲೆ ಜೂನ್ 1 ರಿಂದ 1723.50 ರೂ.ಗಳಷ್ಟಿದೆ. ದೇಶೀಯ ಎಲ್ಪಿಜಿ ಗೃಹಬಳಕೆಯ ಸಿಲಿಂಡರ್ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಫೆಬ್ರವರಿಯಲ್ಲಿ ಬೆಲೆಗಳನ್ನು ₹7 ರಷ್ಟು ಕಡಿಮೆ ಮಾಡಲಾಯಿತು, ಆದರೆ ಮಾರ್ಚ್ 2025 ರಲ್ಲಿ ಮತ್ತೆ ₹6 ರಷ್ಟು ಹೆಚ್ಚಿಸಲಾಯಿತು. ಹೊಸ ಬೆಲೆ ಹೊಂದಾಣಿಕೆಯು ವಾಣಿಜ್ಯ ಸಂಸ್ಥೆಗಳು ಮತ್ತು ರೆಸ್ಟೋರೆಂಟ್ಗಳು, ಹೋಟೆಲ್ಗಳು ಮತ್ತು ಇತರ ಸಣ್ಣ ವ್ಯವಹಾರಗಳಿಗೆ ಸಕಾರಾತ್ಮಕ ಸುದ್ದಿಯಾಗಲಿದೆ, ಅವುಗಳು ತಮ್ಮ ಕಾರ್ಯಾಚರಣೆಗಳಿಗೆ ಎಲ್ಪಿಜಿಯನ್ನು ಹೆಚ್ಚು ಅವಲಂಬಿಸಿವೆ. ಭಾರತದಲ್ಲಿ ಎಲ್ಪಿಜಿ ಬಳಕೆಯ ಸುಮಾರು 90 ಪ್ರತಿಶತವು ದೇಶೀಯ ಅಡುಗೆಗಾಗಿ, ಉಳಿದ 10 ಪ್ರತಿಶತವನ್ನು…
ನವದೆಹಲಿ: ಜೂನ್ 1 ರ ಇಂದಿನಿಂದ ಕೆಲವು ಐಫೋನ್ಗಳು ಮತ್ತು ಆಂಡ್ರಾಯ್ಡ್ ಸಾಧನಗಳಲ್ಲಿ ವಾಟ್ಸಾಪ್ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಲಿದೆ. ಈ ಹಿಂದೆ, ಈ ಕ್ರಮವು ಮೇ 2025 ರಲ್ಲಿ ಜಾರಿಗೆ ಬರಲಿದೆ ಎಂದು ಕಂಪನಿ ಹೇಳಿತ್ತು. ಆದಾಗ್ಯೂ, ಸ್ವಲ್ಪ ವಿಳಂಬವು ಬಳಕೆದಾರರು ತಮ್ಮ ಫೋನ್ಗಳನ್ನು ಬದಲಾಯಿಸಲು ಹೆಚ್ಚಿನ ಸಮಯವಾಯಿತು. ಇಂದಿನಿಂದ iOS 15 ಅಥವಾ ಹಿಂದಿನ ಆವೃತ್ತಿಗಳಲ್ಲಿ ಚಾಲನೆಯಲ್ಲಿರುವ ಐಫೋನ್ಗಳು ವಾಟ್ಸಾಪ್ ಅನ್ನು ಬೆಂಬಲಿಸಲು ಸಾಧ್ಯವಾಗುವುದಿಲ್ಲ. ಮೆಸೇಜಿಂಗ್ ಅಪ್ಲಿಕೇಶನ್ ಆಂಡ್ರಾಯ್ಡ್ 5.0 ಅಥವಾ ಅದಕ್ಕಿಂತ ಹಿಂದಿನ ಬೆಂಬಲವನ್ನು ಸಹ ಹಿಂತೆಗೆದುಕೊಳ್ಳುತ್ತಿದೆ. ಯಾವ ಫೋನ್ಗಳನ್ನು ಗುರಿಯಾಗಿಸಲಾಗುತ್ತಿದೆ ಎಂಬುದನ್ನು ಇಲ್ಲಿ ನೋಡೋಣ. ಇನ್ನು ಮುಂದೆ WhatsApp ಅನ್ನು ಬೆಂಬಲಿಸದ iPhones ಮತ್ತು Android ಗಳ ಪಟ್ಟಿ — iPhone 5s — iPhone 6 — iPhone 6 Plus — iPhone 6s — iPhone 6s Plus — iPhone SE (1 ನೇ ಜನ್) — Samsung Galaxy S4 — Samsung…
ಬೆಂಗಳೂರು : ಕೋವಿಡ್-19 ಸೋಂಕು ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ ಕೈಗೊಳ್ಳಬೇಕಾದ ಮುಂಜಾಗೃತ ಕ್ರಮಗಳ ಕುರಿತು ಶಾಲಾ ಶಿಕ್ಷಣ ಇಲಾಖೆಯು ಮಹತ್ವದ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಪ್ರಸ್ತುತ ಸಾಲಿನ ಶೈಕ್ಷಣಿಕ ವರ್ಷವು ದಿನಾಂಕ : 29.05.2025 ರಿಂದ ಪುನರಾರಂಭಗೊಂಡಿದ್ದು, ಶಾಲೆಗಳಲ್ಲಿ ದೈನಂದಿನ ಶಾಲಾ ಚಟುವಟಿಕೆಗಳು ಪ್ರಾರಂಭವಾಗಿರುತ್ತದೆ. ಪ್ರಸ್ತುತ ರಾಜ್ಯದಲ್ಲಿ ಇರುವ ಕೋವಿಡ್-19 ಪರಿಸ್ಥಿತಿ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಲವೊಂದು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿರುತ್ತದೆ. ಉಲ್ಲೇಖಿತ ಪತ್ರದಲ್ಲಿ ಶಾಲೆಗಳಲ್ಲಿ ಕೈಗೊಳ್ಳಬೇಕಾದ ಮುಂಜಾಗೃತ ಕ್ರಮಗಳ ಕುರಿತು ಈಗಾಗಲೇ ಸೂಚನೆಗಳನ್ನು ನೀಡಲಾಗಿರುತ್ತದೆ. ಮುಂದುವರೆದು, ಶಾಲಾ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಈ ಕೆಳಕಂಡ ಸೂಚನೆಗಳನ್ನು ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ತಪ್ಪದೇ ಪಾಲಿಸುವಂತೆ ಸೂಚಿಸಲಾಗಿದೆ 1) ಶಾಲಾ ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ ಹಾಗೂ ಇತರೆ ಲಕ್ಷಣಗಳು ಕಂಡು ಬಂದಲ್ಲಿ, ಮಕ್ಕಳನ್ನು ಶಾಲೆಗೆ ಕಳುಹಿಸದೇ, ವೈದ್ಯರ ಸಲಹೆಯಂತೆ ಸೂಕ್ತ ಚಿಕಿತ್ಸೆ ಹಾಗೂ…
ನವದೆಹಲಿ : ಜೂನ್ 2025 ರಲ್ಲಿ ಹಬ್ಬದ ಸಂದರ್ಭಗಳು ಮತ್ತು ನಿಯಮಿತ ಸಾಪ್ತಾಹಿಕ ರಜೆಗಳ ಸಂಯೋಜನೆಯಿಂದಾಗಿ ಬ್ಯಾಂಕುಗಳು 12 ದಿನಗಳವರೆಗೆ ಮುಚ್ಚಲ್ಪಡುತ್ತವೆ. ಒಟ್ಟಾರೆಯಾಗಿ, ಕೆಲವು ರಾಜ್ಯಗಳು 12 ದಿನಗಳವರೆಗೆ ಬ್ಯಾಂಕ್ ಮುಚ್ಚಿರುತ್ತವೆ, ಆದರೆ ರಜಾದಿನಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕುಗಳು ಎರಡನೇ ಮತ್ತು ನಾಲ್ಕನೇ ಶನಿವಾರಗಳು ಹಾಗೂ ತಿಂಗಳ ಎಲ್ಲಾ ಭಾನುವಾರಗಳಂದು ಮುಚ್ಚುವ ಪ್ರಮಾಣಿತ ವೇಳಾಪಟ್ಟಿಯನ್ನು ಪಾಲಿಸುತ್ತವೆ. ಈ ವರ್ಷದ ಗಮನಾರ್ಹ ಸಮ್ಮತಿ ಎಂದರೆ ಬಕ್ರಿ ಈದ್, ರಾಷ್ಟ್ರೀಯ ರಜಾದಿನ, ಇದು ಜೂನ್ 7 ರ ಶನಿವಾರ, ಎರಡನೇ ಶನಿವಾರ ಬರುತ್ತದೆ. ಇದರ ಪರಿಣಾಮವಾಗಿ ಇಡೀ ತಿಂಗಳು ಜೂನ್ 21 ರಂದು ಒಂದೇ ಒಂದು ಶನಿವಾರ ಕಾರ್ಯನಿರ್ವಹಿಸುತ್ತದೆ. ಜೂನ್ 2025 ರಲ್ಲಿ ದೇಶಾದ್ಯಂತ ಬ್ಯಾಂಕ್ ರಜಾದಿನಗಳು: ಜೂನ್ 1: ಭಾನುವಾರ ಜೂನ್ 7: ಬಕ್ರಿ ಈದ್ (ಎರಡನೇ ಶನಿವಾರ ಆಚರಿಸಲಾಗುತ್ತದೆ) ಜೂನ್ 8: ಭಾನುವಾರ ಜೂನ್ 14: ಎರಡನೇ ಶನಿವಾರ ಜೂನ್ 15: ಭಾನುವಾರ…
ನವದೆಹಲಿ : ನೀವು ಎಟಿಎಂನಿಂದ ಹಣವನ್ನು ಹಿಂಪಡೆಯುತ್ತಿದ್ದರೆ, ಉಳಿತಾಯ ಖಾತೆಯಲ್ಲಿ ಹಣವನ್ನು ಇರಿಸಿದರೆ ಅಥವಾ ಯುಪಿಐ ಮೂಲಕ ವಹಿವಾಟು ನಡೆಸಿದರೆ – ಈ ಮಾಹಿತಿಯು ನಿಮಗೆ ಬಹಳ ಮುಖ್ಯ. ಜೂನ್ 1, 2025 ರಿಂದ, ಭಾರತದಲ್ಲಿ ಬ್ಯಾಂಕಿಂಗ್ ಸಂಬಂಧಿತ ಹಲವು ನಿಯಮಗಳು ಬದಲಾಗಲಿವೆ. ಈ ಬದಲಾವಣೆಗಳು ಸಾಮಾನ್ಯ ಜನರ ಜೇಬು ಮತ್ತು ಬ್ಯಾಂಕಿಂಗ್ ಹವ್ಯಾಸಗಳ ಮೇಲೆ ನೇರ ಪರಿಣಾಮ ಬೀರುತ್ತವೆ. ಈ ಹೊಸ ನಿಯಮಗಳು ಮತ್ತು ಅವುಗಳ ಪರಿಹಾರಗಳನ್ನು ಒಂದೊಂದಾಗಿ ತಿಳಿದುಕೊಳ್ಳೋಣ. ಎಟಿಎಂನಿಂದ ಹಣ ಹಿಂಪಡೆಯುವುದು ದುಬಾರಿಯಾಗಬಹುದು. ಈಗ ನೀವು ಪ್ರತಿ ತಿಂಗಳು ನಿಗದಿತ ಸಂಖ್ಯೆಯ ಉಚಿತ ವಹಿವಾಟುಗಳನ್ನು ಮಾತ್ರ ಮಾಡಲು ಸಾಧ್ಯವಾಗುತ್ತದೆ. ಇದರ ನಂತರ ನೀವು ಪ್ರತಿ ಬಾರಿ ಹಣವನ್ನು ಹಿಂಪಡೆಯುವಾಗ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಉದಾಹರಣೆಗೆ, SBI ನಲ್ಲಿ ನೀವು ಕೇವಲ 5 ಉಚಿತ ವಹಿವಾಟುಗಳನ್ನು ಮಾತ್ರ ಪಡೆಯುತ್ತೀರಿ – ಇದರ ನಂತರ ಪ್ರತಿ ಹಿಂಪಡೆಯುವಿಕೆಗೆ ₹ 21 ಕಡಿತಗೊಳಿಸಲಾಗುತ್ತದೆ. ಐಸಿಐಸಿಐ ಮತ್ತು ಎಚ್ಡಿಎಫ್ಸಿಯಂತಹ ಖಾಸಗಿ ಬ್ಯಾಂಕುಗಳಲ್ಲಿ ಈ ಮಿತಿಯನ್ನು…











