Author: kannadanewsnow57

ಬೆಳಗಾವಿ : ರಾಜ್ಯದ ಇತರೆ ಜಿಲ್ಲೆಗಳಿಗಿಂತ ಕರಾವಳಿ ಜಿಲ್ಲೆಗಳು ಭೌಗೋಳಿಕವಾಗಿ ಭಿನ್ನವಾಗಿರುವುದರಿಂದ ಈ ಜಿಲ್ಲೆಗಳಿಗೆ ಅನ್ವಯವಾಗುವಂತೆ ಏಕ/ಬಹು ನಿವೇಶನ ವಿನ್ಯಾಸ ಅನುಮೋದನೆ ನೀಡುವ ಕುರಿತು ವಿಶೇಷ ಸೇವೆಗಳನ್ನು ಕಲ್ಪಿಸಲಾಗಿದೆ ಎಂದು ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ಅವರು ಉತ್ತರಿಸಿದ್ದು,ಕರಾವಳಿ ಜಿಲ್ಲೆಗಳಲ್ಲಿ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಗೆ ಒಳಪಡದೇ ಇರುವ ಗ್ರಾಮ ಪಂಚಾಯತಿಯಲ್ಲಿನ ಒಂದು ಎಕರೆ ಒಳಗಿನ ಜಮೀನುಗಳಿಗೆ ಅನುಮೋದನೆ ನೀಡುವ ಪ್ರಕರಣಗಳಿಗೆ ತಾಂತ್ರಿಕ ಅನುಮೋದನೆ ನೀಡಲು ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಹತ್ತಿರದ ಯೋಜನಾ ಪ್ರಾಧಿಕಾರಗಳ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಅಧಿಕಾರಿಗಳಿಗೆ ಅಧಿಕಾರ ಪ್ರತ್ಯಾಯೋಜಿಸಿ, ತಾಲ್ಲೂಕು ಪಂಚಾಯತಿ ಕಛೇರಿಯಲ್ಲಿಯೇ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಅಧಿಕಾರಿಗಳು ಕಾರ್ಯ ನಿರ್ವಹಿಸಲು ಆದೇಶಿಸಲಾಗಿದೆ. ಕರಾವಳಿ ಜಿಲ್ಲೆ ಒಳಗೊಂಡಂತೆ ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ಏಕ/ಬಹು ನಿವೇಶನ ವಿನ್ಯಾಸ ಅನುಮೋದನೆ…

Read More

ಬೆಳಗಾವಿ ಸುವರ್ಣಸೌಧ: ಬರುವ 2026ರ ಜನವರಿಯಿಂದ ಕಪ್ಪುತಲೆ ಹುಳುವಿನ ಸಮೀಕ್ಷೆಯನ್ನು ಪುನಾರಂಭಿಸಿ ಬೇಗನೇ ಪೂರ್ಣಗೊಳಿಸಿ ಪರಿಹಾರ ಕಲ್ಪಿಸುವುದಾಗಿ ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕಾ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ ಅವರು ಭರವಸೆ ನೀಡಿದರು. ಪರಿಷತ್ತಿನಲ್ಲಿ ಡಿ.09ರಂದು ಸದಸ್ಯರಾದ ಮಧು ಜಿ ಮಾದೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 30 (235)ರ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಸಚಿವರು, ಕಪ್ಪುತಲೆಹುಳು ಬಾಧಿತ ತೆಂಗಿನ ಬೆಳೆಯ ವೈಜ್ಞಾನಿಕ ಸಮೀಕ್ಷೆಯನ್ನು ಜುಲೈ-2025ರ ಮಾಹೆಯ ಅವಧಿಯಲ್ಲಿಯೇ ಪೂರ್ಣಗೊಳಿಸಬೇಕಿತ್ತು. ಆದರೆ, ಮಳೆ ಹಾಗೂ ಇನ್ನಿತರ ಕಾರಣದಿಂದ ಸಮೀಕ್ಷೆ ಅಪೂರ್ಣವಾಗಿದೆ. ಸಮೀಕ್ಷೆ ಕೈಗೊಳ್ಳಲು ಅನುದಾನದ ಅವಶ್ಯಕತೆ ಇರುವುದರಿಂದ ಸಮೀಕ್ಷೆಗೆ ಅಂದಾಜು 1.94 ಕೋಟಿ ರೂ ಬೇಕಿದೆ ಎಂದು ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಯ ಸಹಮತಿಗೆ ಕಳುಹಿಸಿದ್ದೇವೆ. ಜನವರಿಯಿಂದ ಮೇ ವರೆಗೂ ಹೆಚ್ಚಿನ ಉಷ್ಣಾಂಶದಿAದ ಕಪ್ಪುತಲೆ ಹಾಗೂ ಬಿಳಿನೊಣದ ಹಾನಿ ಹೆಚ್ಚಾಗಲಿದ್ದು, ಈ ಅವಧಿಯಲ್ಲಿ ಸಮೀಕ್ಷೆ ಕೈಗೊಂಡಲ್ಲಿ ನಿಖರವಾದ ಮಾಹಿತಿ ಲಭ್ಯವಾಗಲಿದೆ. ಸಮೀಕ್ಷೆಗೆ ಸರ್ವೇಯರ್‌ಗಳನ್ನು ನಿಯೋಜಿಸಲಾಗಿದೆ. ಪ್ರತಿ ತಾಕಿಗೆ ರೂ. 10…

Read More

ಬೆಂಗಳೂರು : ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಇ – ಖಾತಾ ಮತ್ತು ಹೊಸ ಖಾತೆಗಾಗಿ ಸ್ವೀಕರಿಸಲಾದ ಒಟ್ಟು 31,274 ಅರ್ಜಿಗಳನ್ನು ವಿಲೇವಾರಿ ಮಾಡಲು ಕ್ರಮ ವಹಿಸಲಾಗಿದೆ. ಹೊಸ ಮಾದರಿಯಲ್ಲಿ ಇ-ಖಾತಾ ನೀಡುತ್ತಿರುವುದರಿಂದ ಸಾರ್ವಜನಿಕರಿಗೆ ಕೆಲವೊಂದು ಸಮಸ್ಯೆ ಉಂಟಾಗುತ್ತಿದ್ದು, ಹಳೆ ಪದ್ಧತಿಯಲ್ಲೇ ಇ-ಖಾತಾ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಗೋಪಾಲಯ್ಯ ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಉತ್ತರಿಸಿದ್ದು, ಇ-ಖಾತಾ ಮತ್ತು ಹೊಸ ಖಾತಾ ಅರ್ಜಿಗಳನ್ನು ವಿವರಿಸಲು ಹೊಸ ವ್ಯವಸ್ಥೆ ಜಾರಿ ಮಾಡಲಾಗಿತ್ತು. ಹೊಸ ಮಾದರಿಯಲ್ಲಿ ಇ-ಖಾತಾ ನೀಡುತ್ತಿರುವುದು ಸಾರ್ವಜನಿಕರಿಗೆ ಕೆಲವೊಂದು ಸಮಸ್ಯೆಗಳು ಎದುರಾಗುತ್ತಿವೆ ಎಂದು ವಿಧಾನಸಭೆಯ ಇನ್ನಿತರ ಸದಸ್ಯರು ಈ ಬಗ್ಗೆ ಪ್ರಸ್ತಾಪಿಸಿರುತ್ತಾರೆ. ಹೀಗಾಗಿ ಹಳೇ ಪದ್ದತಿಯಲ್ಲೇ ಇ-ಖಾತೆ ನೀಡಲು ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ. https://twitter.com/KarnatakaVarthe/status/1998393451847848284?s=20

Read More

ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರ ರಜೆ ಒದಗಿಸುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ಮೊದಲಿಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್, ಆ ಆದೇಶವನ್ನು ಕೆಲವೇ ಗಂಟೆಗಳಲ್ಲಿ ಹಿಂಪಡೆದಿದೆ. ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ಸೌಲಭ್ಯ ಒದಗಿಸುವ ಸಂಬಂಧ ರಾಜ್ಯ ಸರಕಾರದ ಹೊರಡಿಸಿದ್ದ ಅಧಿಸೂಚನೆಗೆ ನಿನ್ನೆ ಬೆಳಗ್ಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ಹಿಂಪಡೆದಿದೆ. ತಡೆಯಾಜ್ಞೆ ಹಿಂಪಡೆಯುವಂತೆ ರಾಜ್ಯ ಸರಕಾರ ಮಾಡಿದ ಮನವಿಯನ್ನು ಪರಿಗಣಿಸಿ ಸರಕಾರ ಆದೇಶವನ್ನು ಮಾರ್ಪಾಡು ಮಾಡಿದೆ. ತಡೆಯಾಜ್ಞೆ ನೀಡಿದ ಕೆಲವೇ ಗಂಟೆಗಳ ಬಳಿಕ ಹೈಕೋರ್ಟ್ ತನ್ನ ಆದೇಶವನ್ನು ಹಿಂಪಡೆದಿದೆ. ಇಂದು ಬೆಳಿಗ್ಗೆ ಋತುಚಕ್ರ ರಜೆಗೆ ಸಂಬಂಧಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಇದೀಗ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಹೈಕೋರ್ಟ್ ಪೀಠದಿಂದ ತಡೆಯಾಜ್ಜೆ ನೀಡಲಾಗಿತ್ತು. ನವೆಂಬರ್ 20ರಂದು 1 ದಿನದ ಋತು ಚಕ್ರ ರಜೆ ಸಂಬಂಧ…

Read More

ಬೆಂಗಳೂರು : ರಾಜ್ಯದ ಜನತೆಗೆ ತಮ್ಮ ಸಾಮಾಜಿಕ, ಶೈಕ್ಷಣಿಕ, ವಾಣಿಜ್ಯ ಹಾಗೂ ಕೃಷಿ ಚಟುವಟಿಕೆಗಳಗಾಗಿ ವಿವಿಧ ಇಲಾಖೆಗಳಿಂದ ಹಲವಾರು ದಾಖಲೆಗಳು ಬೇಕಾಗುತ್ತವೆ. ಇವುಗಳನ್ನು ತ್ವರಿತವಾಗಿ ಒಂದೇ ಸೂರಿನಡಿ ಪಡೆದುಕೊಳ್ಳಲು ಅನುಕೂಲವಾಗುವಂತೆ ಬಾಪೂಜಿ ಸೇವಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಒಂದೇ ಸೂರಿನಡಿ ಜನತೆಗೆ ಎಲ್ಲ ಇಲಾಖೆಗಳ ಈ ಎಲ್ಲಾ ಸೇವೆ ಸಿಗಲಿವೆ. ಕಟ್ಟಡ ಸಂಬಂಧಿತ 1 ಕಟ್ಟಡ ಅನುಮತಿ ವಿತರಣೆ 2ತೆರಿಗೆ ನಿರ್ಧರಣಾ ಪಟ್ಟಿ ವಿತರಣೆ 3 ಬೇಡಿಕೆ/ಕಂದಾಯ ನಕಲು ಪಟ್ಟಿ 4 ಆಸ್ತಿ ತೆರಿಗೆ ಮನ್ನಾ ಅರ್ಜಿ 5 ಕಟ್ಟಡ ಕಾಮಗಾರಿಯ ಮುಕ್ತಾಯ ಪ್ರಮಾಣ ಪತ್ರ ವಿತರಣೆ 6 ಹೊಸ ನೀರಿನ ಸಂಪರ್ಕಕ್ಕಾಗಿ ಅರ್ಜಿ 7 ಕೊಳವೆ ಬಾವಿ ನಿರ್ಮಾಣದ ವಿವರ ತಿಳಿಸುವುದು 8 ನೀರಿನ ಸಂಪರ್ಕ ಕಡಿತ 9 ಕೊಳವೆ ಬಾವಿ ನಿರ್ಮಾಣ ಮುಕ್ತಾಯ ವ್ಯಾಪಾರ ಪರವಾನಗಿ ಸಂಬಂಧಿತ 10 ವ್ಯಾಪಾರ ಪರವಾನಗಿ ವಿತರಣೆ 11 ಕಾರ್ಖಾನೆ ಪರವಾನಗಿ ವಿತರಣೆ 12 ಜಾಹೀರಾತು ಪರವಾನಗಿ ವಿತರಣೆ…

Read More

ಬೆಂಗಳೂರು : 2026ರ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರ ಪರೀಕ್ಷಾ ಕೇಂದ್ರಗಳ ಪಟ್ಟಿಯನ್ನು ಅಂತಿಮಗೊಳಿಸಿ ಸಲ್ಲಿಸುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2026ರ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರ ಪರೀಕ್ಷಾ ಕೇಂದ್ರಗಳ ಪಟ್ಟಿಯನ್ನು ಹಲವು ಜಿಲ್ಲೆಗಳಿಂದ ಮಂಡಲಿಗೆ ಸಲ್ಲಿಸಲಾಗಿರುತ್ತದೆ. ಕೆಲವು ಜಿಲ್ಲೆಗಳಿಂದ ಇನ್ನೂ ಪರೀಕ್ಷಾ ಕೇಂದ್ರಗಳ ಪಟ್ಟಿಯನ್ನು ಸಲ್ಲಿಸಿರುವುದಿಲ್ಲ. ಹಾಗಾಗಿ ಎಲ್ಲಾ ಜಿಲ್ಲೆಗಳ ಪರೀಕ್ಷಾ ಕೇಂದ್ರಗಳ ಅಂತಿಮ ಪಟ್ಟಿಯ ದೃಢೀಕೃತ ಮತ್ತು ಸಾಪ್ಟ್ ಪ್ರತಿಯನ್ನು ಮಂಡಲಿಯ ಇ-ಮೇಲ್ ವಿಳಾಸ sadpi.csec.kseeb@gmail.com ಕ್ಕೆ ತಪ್ಪದೆ ಕಳುಹಿಸುವುದು. ದಿನಾಂಕ:08-12-2025 ರಂದು ನಡೆದ ವಿಡಿಯೋ ಕಾನ್ಸರೆನ್ಸ್‌ನಲ್ಲಿ ಚರ್ಚಿಸಿ ಸೂಚಿಸಿರುವಂತೆ ಈ ಕೆಳಕಂಡ ಅಂಶಗಳನ್ನು ಪರೀಕ್ಷಾ ಕೆಂದ್ರಗಳ ರಚನೆ ಸಂಬಂಧ ಅಳವಡಿಸಿಕೊಳ್ಳಲು ಸೂಚಿಸಿದೆ. 1. ಕಳೆದ ವರ್ಷಕ್ಕಿಂತ ಈ ಸಾಲಿನಲ್ಲಿ ಪರೀಕ್ಷಾ ಕೇಂದ್ರಗಳು ಹೆಚ್ಚಾಗದಂತೆ ಕ್ರಮ ವಹಿಸುವುದು. 2. ಗುರುತಿಸಲಾಗಿರುವ ಪರೀಕ್ಷಾ ಕೇಂದ್ರಗಳು, ಮುಖ್ಯ ಅಧೀಕ್ಷಕರು, ಕಸ್ಟೋಡಿಯನ್ ಮಾಹಿತಿಗಳನ್ನು ಮತ್ತೊಮ್ಮೆ ಪರಿಶೀಲಿಸಿ ಅಂತಿಮಗೊಳಿಸುವುದು. 3. ಜಿಲ್ಲಾ ಎಸ್.ಎಸ್.ಎಲ್.ಸಿ ನೋಡಲ್ ಅಧಿಕಾರಿಗಳು ಮತ್ತು ಜಿಲ್ಲಾ ಉಪನಿರ್ದೇಶಕರು(ಆಡಳಿತ) ರವರು…

Read More

ಬೆಂಗಳೂರು : ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ನವಂಬರ್- 2025ರ ಮಾಹೆಯ ಗೌರವಧನ ಪಾವತಿಸಲು ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಹತ್ವದ ಆದೇಶ ಹೊರಡಿಸಿದೆ. ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ನವಂಬರ್- 2025 ರ ಮಾಹೆಯ ಗೌರವಧನ ಪಾವತಿಸಲು ಅಗತ್ಯ ಇರುವ ಅನುದಾನಕ್ಕಾಗಿ ಬೇಡಿಕೆ ಸಲ್ಲಿಸಲು ಇಲಾಖಾ ವ್ಯಾಪ್ತಿಯ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳ ಪ್ರಾಂಶುಪಾಲರುಗಳಿಗೆ ಸೂಚಿಸಲಾಗಿತ್ತು. 436 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರುಗಳು ಅನುದಾನಕ್ಕಾಗಿ ಬೇಡಿಕೆ ಸಲ್ಲಿಸಿದ್ದು, ಅದರಂತೆ ಅನುದಾನ ಬಿಡುಗಡೆ ಮಾಡಲು ಈ ಆದೇಶ. ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಗೌರವಧನ ಪಾವತಿಸಲು ಲೆ ಶೀ 2202-03-103-2-01 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಉಪ ಲೆಕ್ಕ ಶೀರ್ಷಿಕೆ ‘324’ ಅತಿಥಿ ಉಪನ್ಯಾಸಕರ ಗೌರವಧನ ರಡಿಯಲ್ಲಿ ನವಂಬರ್- 2025 ರ ಮಾಹೆಯ ಗೌರವಧನ…

Read More

ಬೆಳಗಾವಿ : ರಾಜ್ಯ ಸರ್ಕಾರದ 43 ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿ ಉಳಿದಿರುವುದಾಗಿ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.  ಈ ಕುರಿತಂತೆ ವಿಧಾನಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಕೇಳಿದಂತ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿದ್ದಾರೆ. ಅದರಲ್ಲಿ ಆರ್ಥಿಕ ಇಲಾಖೆಯು ಖಾಲಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು ತಮ್ಮ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳ ಅನ್ವಯ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅನುಮೋದಿಸಿದೆ ಎಂದಿದ್ದಾರೆ. ಇವುಗಳಲ್ಲಿ 16,017 ಹುದ್ದೆಗಳು ಎ ದರ್ಜೆಯ ಹುದ್ದೆಗಳಾಗಿವೆ. 16,734 ಬಿ ದರ್ಜೆಯ ಹುದ್ದೆಗಳು, 1,66,021 ಸಿ ದರ್ಜೆಯ ಹುದ್ದೆಗಳು, 77,614 ಡಿ ದರ್ಜೆಯ ಹುದ್ದೆಗಳು ಖಾಲಿ ಉಳಿದಿವೆ. ಶಿಕ್ಷಣ ಇಲಾಖೆಯಲ್ಲಿ 70727 ಹುದ್ದೆಗಳು ಖಾಲಿ ಇವೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 37,572 ಹುದ್ದೆಗಳು ಖಾಲಿ ಇದ್ದು, ಒಳಾಡಳಿತ ಇಲಾಖೆಯಲ್ಲಿ 28,188, ಕಂದಾಯ ಇಲಾಖೆಯಲ್ಲಿ 10,867 ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 10,504 ಹುದ್ದೆಗಳು ಖಾಲಿ…

Read More

ಬೆಂಗಳೂರು : ರಾಜ್ಯದ ಅಂಗನವಾಡಿಗಳಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ಹಲವು ಸೌಲಭ್ಯಗಳು ಸಿಲಿವೆ. 6 ವರ್ಷದೊಳಗಿನ ಮಕ್ಕಳಿಗೆ ಪೌಷ್ಟಿಕ ಆಹಾರ (ಮೊಟ್ಟೆ/ಬಾಳೆಹಣ್ಣು, ಬಿಸಿ ಹಾಲು), ಆರೋಗ್ಯ ತಪಾಸಣೆ, ಚುಚ್ಚುಮದ್ದು, ಶಿಕ್ಷಣ (ಪೂರ್ವ ಪ್ರಾಥಮಿಕ) ಸಿಗಲಿದೆ. ಅಂಗನವಾಡಿಯಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ಸಿಗುವ ಸೌಲಭ್ಯಗಳ ಕುರಿತು ಇಲ್ಲಿದೆ ಮಾಹಿತಿ 1) ಪೂರಕ ಪೌಷ್ಠಿಕ ಆಹಾರ 6 ವರ್ಷದ ಒಳಗಿನ ಮಕ್ಕಳು, ಗರ್ಭಿಣಿ, ಬಾಣಂತಿ, ಕಿಶೋರಿಯರು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು 2) ಚುಚ್ಚುಮದ್ದು 6 ವರ್ಷದ ಒಳಗಿನ ಮಕ್ಕಳು, ಗರ್ಭಿಣಿಯರು 3) ಆರೋಗ್ಯ ತಪಾಸಣೆ 6 ವರ್ಷದ ಒಳಗಿನ ಮಕ್ಕಳು, ಬಾಣಂತಿಯರು ವೈದ್ಯಾಧಿಕಾರಿಗಳು /ಕಿರಿಯ ಆರೋಗ್ಯ ಸಹಾಯಕಿ / ಅಂಗನವಾಡಿ ಕಾರ್ಯಕರ್ತೆ 4) ಮಾಹಿತಿ ಸೇವೆ 6 ವರ್ಷದ ಒಳಗಿನ ಮಕ್ಕಳು, ಬಾಣಂತಿ, ಕಿಶೋರಿಯರು ವೈದ್ಯಾಧಿಕಾರಿಗಳು /ಕಿರಿಯ ಆರೋಗ್ಯ ಸಹಾಯಕಿ / ಅಂಗನವಾಡಿ ಕಾರ್ಯಕರ್ತೆ 5) ಶಾಲಾಪೂರ್ವ ಶಿಕ್ಷಣ 3-6 ವರ್ಷದ ಮಕ್ಕಳು

Read More

ಬೆಂಗಳೂರು : ರೈತರು ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನುಗಳಲ್ಲಿ ಕಾಲುದಾರಿ, ಬಂಡಿದಾರಿ ಅಥವಾ ಸೌಲಭ್ಯ ಒದಗಿಸುವ ಸಲುವಾಗಿ ಕ್ರಮವಹಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ಕೃಷಿ ಸಲಕರಣೆಗಳನ್ನು ಸಾಗಿಸಲು ಅನ್ಯ ಭೂಮಾಲೀಕರ ಖಾಸಗಿ ಜಮೀನುಗಳಲ್ಲಿ ತಿರುಗಾಡಲು ‘ದಾರಿ’ ಸಮಸ್ಯೆ ಇದ್ದು, ಬಳಕೆದಾರ ರೈತರುಗಳಿಗೆ ತೊಂದರೆಗಳಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ‘ದಾರಿ’ ಸಮಸ್ಯೆ ಬಹುಕಾಲದಿಂದಲೂ ಇದ್ದು, ಅಕ್ಕಪಕ್ಕದ ಜಮೀನುಗಳ ರೈತರು ಕೆಲವು ಖಾಸಗಿ ಜಮೀನುಗಳನ್ನು ದಾಟಿಕೊಂಡು ಕೃಷಿ ಪೂರಕ ಚಟುವಟಿಕೆಗಳನ್ನು ಜರುಗಿಸಲು ಹಾಗೂ ಬೆಳೆದ ಫಸಲನ್ನು ಹೊರತರಲಾಗದೆ ನಷ್ಟ ಹೊಂದುತ್ತಿರುವುದು ಕೆಲವು ಮಾಧ್ಯಮಗಳಿಂದ ತಿಳಿದು ಬಂದಿರುತ್ತದೆ ಹಾಗೂ ಈ ಬಗ್ಗೆ ಸಾರ್ವಜನಿಕರಿಂದ ಮನವಿ/ದೂರುಗಳು ಸ್ವೀಕೃತವಾಗಿರುತ್ತವೆ. ಗ್ರಾಮ ನಕಾಶೆ ಕಂಡ ದಾರಿಗಳಲ್ಲಿ ಬಳಕೆದಾರ ರೈತರು ತಿರುಗಾಡಲು ಅವಕಾಶವಿದ್ಯಾಗ್ಯೂ ಕೆಲವು ಭೂಮಾಲೀಕರು ಬಳಕೆದಾರ ರೈತರುಗಳಿಗೆ ತಿರುಗಾಡಲು ಅಡ್ಡಿಪಡಿಸುತ್ತಿರುವುದು ಅಥವಾ ಅಂತಹ ಜಾಗಗಳನ್ನು ಮುಚ್ಚಿರುವುದು ಹಾಗೂ ರೈತರು ಬಹುಕಾಲದಿಂದಲೂ ಬಳಸುವ ದಾರಿಗಳಲ್ಲಿ ತಿರುಗಾಡಲು ಕೆಲವು…

Read More