Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : `NEET-PG’ 2025 ಅನ್ನು ಒಂದೇ ಪಾಳಿಯಲ್ಲಿ ನಡೆಸುವಂತೆ ಸುಪ್ರೀಂ ಕೋರ್ಟ್ ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ (NBE) ನಿರ್ದೇಶನ ನೀಡಿದೆ. ಪರೀಕ್ಷೆಯನ್ನು ಎರಡು ಪಾಳಿಗಳಲ್ಲಿ ನಡೆಸುವ NBE ನಿರ್ಧಾರವನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ, ಇದು ಅನಿಯಂತ್ರಿತತೆಯನ್ನು ಸೃಷ್ಟಿಸುತ್ತದೆ ಎಂದು ಹೇಳಿದೆ. ಜೂನ್ 15 ರಂದು ಪರೀಕ್ಷೆಯ ನಿಗದಿತ ದಿನಾಂಕದೊಳಗೆ ವ್ಯವಸ್ಥೆಗಳನ್ನು ಮಾಡಲು ಸಾಧ್ಯವಿಲ್ಲ ಎಂದು NBE ಕಂಡುಕೊಂಡರೆ ಸಮಯ ವಿಸ್ತರಣೆಗೆ ಅರ್ಜಿ ಸಲ್ಲಿಸಲು ಮುಕ್ತವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. https://twitter.com/ANI/status/1928357513788858507?ref_src=twsrc%5Egoogle%7Ctwcamp%5Eserp%7Ctwgr%5Etweet
ಚೆನ್ನೈ : ತಮಿಳಿನಿಂದ ಕನ್ನಡ ಹುಟ್ಟಿದೆ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನಟ ಕಮಲ್ ಹಾಸನ್ ಮತ್ತೆ ಉದ್ಧಟತನ ಮೆರೆದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷಮೆಯಾಚಿಸುವ ತಪ್ಪು ನಾನು ಮಾಡಿಲ್ಲ ಎಂದು ಹೇಳುವ ಮೂಲಕ ಮತ್ತೊಮ್ಮೆ ಉದ್ಧಟತನ ಪ್ರದರ್ಶಿಸಿದ್ದಾರೆ. ನನ್ನಿಂದ ತಪ್ಪಾಗಿಲ್ಲ. ನಾನು ಕ್ಷಮೆ ಕೇಳಲ್ಲಿ. ಯಾವುದೇ ಬೆದರಿಕೆ, ಎಚ್ಚರಿಕೆಗೆ ನಾನು ಹೆದರುವುದಿಲ್ಲ. ನಾನು ಕಾನೂನು ಮತ್ತು ನ್ಯಾಯದ ಮೇಲೆ ನಂಬಿಕೆ ಇಟ್ಟಿದ್ದೇನೆ ಎಂದು ಹೇಳಿದ್ದಾರೆ.
ನವದೆಹಲಿ : ಮದ್ಯ ಕುಡಿದ ನಂತರ ವ್ಯಕ್ತಿ ಪ್ರಾಣಿಯಾಗುತ್ತಾನೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು,ತನ್ನ ಏಳು ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಕೋರಿ ಹೃದ್ರೋಗ ತಜ್ಞರೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಕೆಳ ನ್ಯಾಯಾಲಯವು ವೈದ್ಯರನ್ನು ದೋಷಿ ಎಂದು ತೀರ್ಪು ನೀಡಿದ್ದು, ಅವರಿಗೆ ಯಾವುದೇ ಪರಿಹಾರ ನೀಡುವ ಪರವಾಗಿಲ್ಲ ಎಂದು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಮತ್ತು ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರ ಪೀಠ ಹೇಳಿದೆ. ನ್ಯಾಯಪೀಠವು ಮೌಖಿಕವಾಗಿ, “ನೋಡಿ, ಅವರು ಮಗುವಿನೊಂದಿಗೆ ಯಾವ ರೀತಿಯ ಕೃತ್ಯಗಳನ್ನು ಮಾಡಿದ್ದಾರೆ. ನೀವು ಯಾವುದೇ ಪರಿಹಾರಕ್ಕೆ ಅರ್ಹರಲ್ಲ. ಮಗು ನಿಮ್ಮ ಕಕ್ಷಿದಾರರ ವಿರುದ್ಧ ಹೇಳಿಕೆಗಳನ್ನು ನೀಡಿದೆ. ಅವರು ವಿಕೃತ ವ್ಯಕ್ತಿ, ಅವರನ್ನು ಯಾವುದೇ ಅಮಾನತುಗೊಳಿಸಲು ಅರ್ಹರೆಂದು ಪರಿಗಣಿಸಲಾಗುವುದಿಲ್ಲ. ಅವರು ಕುಡಿದಿದ್ದರು.ನಿಮ್ಮ ಮಗಳಿಗೆ ನೀವು ಹೀಗೆ ಮಾಡಲು ಸಾಧ್ಯವಿಲ್ಲ. ಅವಳು ತಂದೆಯ ವಿರುದ್ಧ ಏಕೆ ಸಾಕ್ಷಿ ಹೇಳುತ್ತಾಳೆ. ಅವಳು ಅಡ್ಡ ಪರೀಕ್ಷೆಯನ್ನು ಎದುರಿಸಿದ ಚಿಕ್ಕ…
ಪ್ರಸ್ತುತ ಬದಲಾಗುತ್ತಿರುವ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಯಿಂದಾಗಿ ಹೃದಯಾಘಾತದ ಪ್ರಮಾಣವು ವಿಶ್ವಾದ್ಯಂತ ವೇಗವಾಗಿ ಹೆಚ್ಚುತ್ತಿದೆ. ಆದರೆ ಅನೇಕ ಜನರು ಎದೆ ನೋವನ್ನು ಹೃದಯಾಘಾತದ ಲಕ್ಷಣವೆಂದು ಪರಿಗಣಿಸುತ್ತಾರೆ. ಆದರೆ ಇದು ಸ್ವಲ್ಪವೂ ನಿಜವಲ್ಲ. ಆದರೆ ಈ ಹೃದಯಾಘಾತಕ್ಕೂ ಮುನ್ನ ನಮ್ಮ ದೇಹದ ಅಂಗಗಳು ನಮಗೆ ಹಲವು ರೀತಿಯ ಸಂಕೇತಗಳನ್ನು ಕಳುಹಿಸುತ್ತವೆ. ತಜ್ಞರು ಹೇಳುವ ಪ್ರಕಾರ ಹೃದಯಾಘಾತಕ್ಕೂ ಮುನ್ನ ನಮ್ಮ ದೇಹದ ಇತರ ಭಾಗಗಳಲ್ಲಿ ಈ ಕೆಳಗಿನ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಆದರೆ ಹೃದಯಾಘಾತದ ನೋವು ಎದೆಯಲ್ಲಲ್ಲ ದೇಹದಲ್ಲಿ ಉಂಟಾಗುತ್ತದೆ ಎಂದು ಅಹಮದಾಬಾದ್ ನ ಡಾ.ಆಕಾಶ್ ಶಾ ಹೇಳಿದ್ದಾರೆ. ಆದರೆ ಎದೆಯಲ್ಲಿ ಮಾತ್ರವಲ್ಲ, ಕುತ್ತಿಗೆ ಮತ್ತು ದವಡೆಯಲ್ಲೂ ನೋವು ಬರುತ್ತದೆ. ಭುಜದ ಬ್ಲೇಡ್ಗಳ ನಡುವೆ ಹೆಚ್ಚಾಗಿ ಹೃದಯಾಘಾತ ರೋಗಿಗಳಲ್ಲಿ ಸಂಭವಿಸುತ್ತದೆ. ಇವು ಮಹಿಳೆಯರಲ್ಲಿ ಸಾಮಾನ್ಯ ಎಂದು ಹೇಳಬಹುದು. ಆದರೆ ಈ ರೀತಿಯ ನೋವುಗಳು ಸಾಮಾನ್ಯವಾಗಿ ಸ್ನಾಯು ಸೆಳೆತ ಅಥವಾ ಆಯಾಸದಿಂದ ಉಂಟಾಗುತ್ತವೆ. ಅಲ್ಲದೆ ಪದೇ ಪದೇ ಅಜೀರ್ಣ ಆಗುತ್ತಿದ್ದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ. ಅಲ್ಲದೆ,…
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯ ಅವಾಂತರಕ್ಕೆ ಒಂದೇ ದಿನ ಇಬ್ಬರು ಬಲಿಯಾಗಿದ್ದಾರೆ. ಇದೀಗ ಅವಶೇಷಗಳಡಿ ಸಿಲುಕಿದ್ದ ಮಗು ಆರುಷ್ ರಕ್ಷಣೆ ಮಾಡಲಾಗಿದೆ. ಗುಡ್ಡ ಕುಸಿತದಿಂದ ಮನೆ ಬಿದ್ದು ಅವಶೇಷಗಳಡಿ ತಾಯಿ, ಮಗು ಸಿಲುಕಿದ್ದು, 8 ಗಂಟೆಗಳಿಂದ ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ. ನಿರಂತರ ಮಳೆಯಿಂದ ಉಂಟಾದ ಭೂಕುಸಿತದ ಪರಿಣಾಮವಾಗಿ ಮನೆ ಕುಸಿದಿದ್ದು, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ತಂಡಗಳು ಸ್ಥಳದಲ್ಲಿವೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಉರುಮನೆ ಕೋಡಿ ಎಂಬಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ಗುಡ್ಡ ಕುಸಿದು ಮನೆಯ ಅವಶೇಷಗಳಡಿ ಸಿಲುಕಿದ್ದ ಆರ್ಯನ್ ಸಾವನ್ನಪ್ಪಿದ್ದಾನೆ. ಮಂಗಳೂರು ಸಮೀಪದ ಮೋಂಟೆಪದವು ಬಳಿ ಗುಡ್ಡ ಕುಸಿದು ಸಿಲುಕಿದ್ದವರಲ್ಲಿ ಪ್ರೇಮಾ ಪೂಜಾರಿ (52) ಸಾವನ್ನಪ್ಪಿದ್ದಾರೆ. ಮಂಗಳೂರು ಸುತ್ತಾಮುತ್ತಾ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಹಿನ್ನೆಲೆ ಗುಡ್ಡ ಕುಸಿದಿದ್ದು, ಘಟನಾ ಸ್ಥಳಕ್ಕೆ ಎನ್ ಡಿ ಆರ್ ಎಫ್ ಸಿಬ್ಬಂದಿಗಳು ಧಾವಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಣ್ಣಿನಡಮೂವರು ಸಿಲುಕಿರುವ…
ಬೆಂಗಳೂರು : ಬ್ಯಾಂಕಿನ ದ್ವಾರ ವೇತನ ಪಡೆಯುತ್ತಿರುವ ಹಾಗೂ ಪಡೆಯಲು ಇಚ್ಚಿಸುವ ಸರ್ಕಾರಿ / ಆರೇ ಸರ್ಕಾರಿ / ನೌಕರರಿಗೆ ಬ್ಯಾಂಕಿನಿಂದ ರೂಪಿಸಲಾಗಿರುವ ವೇತನ ಪ್ಯಾಕೇಜ್ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ಈ ಮೇಲ್ಕಂಡ ವಿಷಯ ಹಾಗೂ ಉಲ್ಲೇಖಗಳನ್ವಯ ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಸರ್ಕಾರಿ ನೌಕರರ ಸಮಗ್ರ ವೇತನ ಪ್ಯಾಕೇಜ್ನ್ನು ಉಲ್ಲೇಖ (1)ರ ಆದೇಶದ ಷರತ್ತಿಗೊಳಪಟ್ಟು ಉಲ್ಲೇಖ (2) ಮತ್ತು (3) ರ ಸರ್ಕಾರಿ ನೌಕರರ ಒಕ್ಕೂಟಗಳ ಮನವಿಗನುಸಾರವಾಗಿ ಉಲ್ಲೇಖ (4) ರನ್ವಯ ಬ್ಯಾಂಕಿನ ಮಾನ್ಯ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಮಾನ್ಯ ಉಪಾಧ್ಯಕ್ಷರು ಹಾಗೂ ಸ್ಥಳೀಯ ನಿರ್ದೇಶಕರು ಹಾಗೂ ಬ್ಯಾಂಕಿನ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ನಡೆಸಿದ ಸರ್ಕಾರಿ ನೌಕರರ ಸಭೆಯಲ್ಲಿ ಕೂಲಂಕುಷವಾಗಿ ಚರ್ಚಿಸಿದಂತೆ ಉಲ್ಲೇಖ (5) ರನ್ವಯ ಬ್ಯಾಂಕಿನ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚಿಸಿ ಸದರಿ ಸಮಗ್ರ ವೇತನ ಪ್ಯಾಕೇಜ್ನ್ನು ಜಾರಿಗೊಳಿಸಲು ತೀರ್ಮಾನ ಕೈಗೊಳ್ಳಲಾಗಿರುತ್ತದೆ. ಸರ್ಕಾರಿ ನೌಕರರ ಸಮಗ್ರ ವೇತನ ಪ್ಯಾಕೇಜ್ನಲ್ಲಿನ ಅಂಶಗಳನ್ನು ಈ ಪತ್ರದ ಜೊತೆಗೆ ಲಗತ್ತಿಸಲಾಗಿದೆ. ನೌಕರರ ವೈಯಕ್ತಿಕ ಅಪಘಾತ…
ಬೆಂಗಳೂರು : ಆಧಾರ್ ಕಾರ್ಡ್ 10 ವರ್ಷಗಳಷ್ಟು ಹಳೆಯದಾಗಿದ್ದರೆ ಅಥವಾ ಅದರಲ್ಲಿ ದಾಖಲಾಗಿರುವ ಮಾಹಿತಿಯನ್ನು ಈಗ ನವೀಕರಿಸಬೇಕಾದರೆ, ಈ ಸುದ್ದಿ ನಿಮಗೆ ಬಹಳ ಮುಖ್ಯವಾಗಿದೆ. ಜನರಿಗೆ ಹೆಚ್ಚಿನ ಪರಿಹಾರವನ್ನು ನೀಡುತ್ತಾ, ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಉಚಿತ ಆಧಾರ್ ನವೀಕರಣಕ್ಕಾಗಿ ಗಡುವನ್ನು ಜೂನ್ 14, 2025 ರವರೆಗೆ ವಿಸ್ತರಿಸಿದೆ. ಅಂದರೆ, ಈಗ ನಿಮಗೆ ಇನ್ನೂ ಕೆಲವು ವಾರಗಳಿವೆ, ಆಗ ನೀವು ನಿಮ್ಮ ಆಧಾರ್ ಕಾರ್ಡ್ನಲ್ಲಿ ಅಗತ್ಯ ಮಾಹಿತಿಯನ್ನು ಯಾವುದೇ ಶುಲ್ಕವಿಲ್ಲದೆ ಆನ್ಲೈನ್ನಲ್ಲಿ ನವೀಕರಿಸಬಹುದು. ಸರ್ಕಾರಿ ಮತ್ತು ಖಾಸಗಿ ಸೇವೆಗಳನ್ನು ಬಳಸುವಲ್ಲಿ ನೀವು ಯಾವುದೇ ಸಮಸ್ಯೆಯನ್ನು ಎದುರಿಸದಂತೆ ಆಧಾರ್ನ ನಿಖರತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡಿಕೊಳ್ಳುವುದು ಯುಐಡಿಎಐನ ಈ ನಿರ್ಧಾರದ ಉದ್ದೇಶವಾಗಿದೆ. ಉಚಿತವಾಗಿ ಏನು ನವೀಕರಿಸಬಹುದು? ಈ ಸೌಲಭ್ಯದ ಅಡಿಯಲ್ಲಿ, ನೀವು ನಿಮ್ಮ ಜನಸಂಖ್ಯಾ ವಿವರಗಳನ್ನು ಉಚಿತವಾಗಿ ನವೀಕರಿಸಬಹುದು, ಉದಾಹರಣೆಗೆ: ಹೆಸರು ವಿಳಾಸ ಜನ್ಮ ದಿನಾಂಕ ಲಿಂಗ ಮೊಬೈಲ್ ಸಂಖ್ಯೆ ಇಮೇಲ್ ಐಡಿ ಸೂಚನೆ: ಫಿಂಗರ್ಪ್ರಿಂಟ್, ಫೋಟೋ ಅಥವಾ ಐರಿಸ್ ಸ್ಕ್ಯಾನ್ನಂತಹ ಬಯೋಮೆಟ್ರಿಕ್…
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯ ಅವಾಂತರಕ್ಕೆ ಗುಡ್ಡ ಕುಸಿದು ಒಂದೇ ಕುಟುಂಬದ 6 ಮಂದಿ ಅವಶೇಷಗಳಡಿ ಸಿಲುಕಿದ್ದ ಇದರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಉರುಮನೆ ಕೋಡಿ ಎಂಬಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ಗುಡ್ಡ ಕುಸಿದು ಮನೆಯ ಅವಶೇಷಗಳಡಿ ಸಿಲುಕಿದ್ದ ಆರ್ಯನ್ ಸಾವನ್ನಪ್ಪಿದ್ದಾನೆ. ಗುಡ್ಡ ಕುಸಿದು ಸಿಲುಕಿದ್ದವರಲ್ಲಿ ಪ್ರೇಮಾ ಪೂಜಾರಿ (52) ಸಾವನ್ನಪ್ಪಿದ್ದಾರೆ. ಇನ್ನು ಗುಡ್ಡ ಕುಸಿತದಿಂದ ಮನೆ ಬಿದ್ದು ಅವಶೇಷಗಳಡಿ ತಾಯಿ, ಮಗು ಸಿಲುಕಿದ್ದು, 8 ಗಂಟೆಗಳಿಂದ ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ. ನಿರಂತರ ಮಳೆಯಿಂದ ಉಂಟಾದ ಭೂಕುಸಿತದ ಪರಿಣಾಮವಾಗಿ ಮನೆ ಕುಸಿದಿದ್ದು, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ತಂಡಗಳು ಸ್ಥಳದಲ್ಲಿವೆ. https://twitter.com/ANI/status/1928331272264327493
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯ ಅವಾಂತರಕ್ಕೆ ಒಂದೇ ದಿನ ಇಬ್ಬರು ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಉರುಮನೆ ಕೋಡಿ ಎಂಬಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ಗುಡ್ಡ ಕುಸಿದು ಮನೆಯ ಅವಶೇಷಗಳಡಿ ಸಿಲುಕಿದ್ದ ಆರ್ಯನ್ ಸಾವನ್ನಪ್ಪಿದ್ದಾನೆ. ಇನ್ನು ಗುಡ್ಡ ಕುಸಿತದಿಂದ ಮನೆ ಬಿದ್ದು ಅವಶೇಷಗಳಡಿ ತಾಯಿ, ಮಗು ಸಿಲುಕಿದ್ದು, 8 ಗಂಟೆಗಳಿಂದ ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ. ನಿರಂತರ ಮಳೆಯಿಂದ ಉಂಟಾದ ಭೂಕುಸಿತದ ಪರಿಣಾಮವಾಗಿ ಮನೆ ಕುಸಿದಿದ್ದು, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ತಂಡಗಳು ಸ್ಥಳದಲ್ಲಿವೆ. ಮಂಗಳೂರು ಸಮೀಪದ ಮೋಂಟೆಪದವು ಬಳಿ ಗುಡ್ಡ ಕುಸಿದು ಸಿಲುಕಿದ್ದವರಲ್ಲಿ ಪ್ರೇಮಾ ಪೂಜಾರಿ (52) ಸಾವನ್ನಪ್ಪಿದ್ದಾರೆ. ಮಂಗಳೂರು ಸುತ್ತಾಮುತ್ತಾ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಹಿನ್ನೆಲೆ ಗುಡ್ಡ ಕುಸಿದಿದ್ದು, ಘಟನಾ ಸ್ಥಳಕ್ಕೆ ಎನ್ ಡಿ ಆರ್ ಎಫ್ ಸಿಬ್ಬಂದಿಗಳು ಧಾವಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಣ್ಣಿನಡಮೂವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಇಬ್ಬರನ್ನು ರಕ್ಷಣೆ ಮಾಡಲಾಗಿದೆ.…
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯ ಅವಾಂತರಕ್ಕೆ ಒಂದೇ ದಿನ ಇಬ್ಬರು ಬಲಿಯಾಗಿದ್ದಾರೆ. ನಿರಂತರ ಮಳೆಯಿಂದ ಉಂಟಾದ ಭೂಕುಸಿತದ ಪರಿಣಾಮವಾಗಿ ಮನೆ ಕುಸಿದಿದ್ದು, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ತಂಡಗಳು ಸ್ಥಳದಲ್ಲಿವೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಉರುಮನೆ ಕೋಡಿ ಎಂಬಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ಗುಡ್ಡ ಕುಸಿದು ಮನೆಯ ಅವಶೇಷಗಳಡಿ ಸಿಲುಕಿದ್ದ ಆರ್ಯನ್ ಸಾವನ್ನಪ್ಪಿದ್ದಾನೆ. ಮಂಗಳೂರು ಸಮೀಪದ ಮೋಂಟೆಪದವು ಬಳಿ ಗುಡ್ಡ ಕುಸಿದು ಸಿಲುಕಿದ್ದವರಲ್ಲಿ ಪ್ರೇಮಾ ಪೂಜಾರಿ (52) ಸಾವನ್ನಪ್ಪಿದ್ದಾರೆ. ಮಂಗಳೂರು ಸುತ್ತಾಮುತ್ತಾ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಹಿನ್ನೆಲೆ ಗುಡ್ಡ ಕುಸಿದಿದ್ದು, ಘಟನಾ ಸ್ಥಳಕ್ಕೆ ಎನ್ ಡಿ ಆರ್ ಎಫ್ ಸಿಬ್ಬಂದಿಗಳು ಧಾವಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಣ್ಣಿನಡಮೂವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಇಬ್ಬರನ್ನು ರಕ್ಷಣೆ ಮಾಡಲಾಗಿದೆ. ಮೊಂಟೆಪದವು ಬಳಿ ಗುಡ್ಡ ಕುಸಿದು ಐವರು ಸಿಲುಕಿದವರಲ್ಲಿ ಪ್ರೇಮಾ ಪೂಜಾರಿ ಎಂಬವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೂವರು…










