Subscribe to Updates
Get the latest creative news from FooBar about art, design and business.
Author: kannadanewsnow57
ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು, ಪತ್ನಿ ಕೊಂದು ಶವವನ್ನು ಮಂಚದೊಳಗಿಟ್ಟು ಬೆಡ್ ಮುಚ್ಚಿ ಪತಿ ಪರಾರಿ ಆಗಿದ್ದಾನೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಮಲದಿನ್ನಿ ಗ್ರಾಮದಲ್ಲಿ ಪತ್ನಿಯನ್ನು ಕೊಂದು ಪತಿ ಪರಾರಿಯಾಗಿರುವ ಘಟನೆ ನಡೆದಿದೆ. ಸಾಕ್ಷಿ ಕಂಬಾರ(20) ಕೊಲೆಯಾದ ಪತ್ನಿ. ಆಕಾಶ್ ಪರಾರಿಯಾಗಿರುವ ಪತಿ. 4 ತಿಂಗಳ ಹಿಂದೆಯಷ್ಟೇ ಆಕಾಶ್ ಮತ್ತು ಸಾಕ್ಷಿ ಕಂಬಾರ ಮದುವೆ ಆಗಿತ್ತು. ಮೂರು ದಿನದ ಹಿಂದೆ ಸಾಕ್ಷಿ ಕಂಬಾರ ಕೊಂದು ಮಂಚದೊಳಗೆ ಶವ ಬಚ್ಚಿಟ್ಟು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಆಕಾಶ್ ಪರಾರಿ ಆಗಿದ್ದಾನೆ. ಸದ್ಯ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗೋಕಾಕ್ ಡಿವೈಎಸ್ಪಿ ಭೇಟಿ ನೀಡಿ ಪರೀಶಿಲನೆ ಮಾಡಿದ್ದಾರೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕೆಮ್ಮಿನ ಸಿರಪ್ನಿಂದ ಮಕ್ಕಳ ಸಾವುಗಳು ಪ್ರಸ್ತುತ ಸುದ್ದಿಯಲ್ಲಿವೆ. ಏತನ್ಮಧ್ಯೆ, ಮತ್ತೊಂದು ಪ್ರಮುಖ ಆರೋಗ್ಯ ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ರಾಜಸ್ಥಾನದಲ್ಲಿ ಮಾತ್ರ, ಹಲವಾರು ಪ್ರಮುಖ ಕಾಯಿಲೆಗಳಿಗೆ ಔಷಧಿಗಳ ಮಾದರಿಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗಿವೆ. ಆದಾಗ್ಯೂ, ಈ ಸಾವಿರಾರು ಮಾತ್ರೆಗಳು ಈಗಾಗಲೇ ಮಾರಾಟವಾಗಿವೆ. ವಿಫಲವಾದ ಔಷಧಿಗಳಲ್ಲಿ ಪ್ರತಿಜೀವಕಗಳಿಂದ ಹಿಡಿದು ಹೃದಯ ಸ್ತಂಭನದಂತಹ ಗಂಭೀರ ಕಾಯಿಲೆಗಳಿಗೆ ಮಾತ್ರೆಗಳವರೆಗೆ ಇವೆ. ಈ ಔಷಧಿಗಳನ್ನು ವ್ಯಾಪಕವಾಗಿ ಸೇವಿಸಲಾಗುತ್ತದೆ. ಇದಲ್ಲದೆ, ಅನೇಕ ಮಾದರಿಗಳಲ್ಲಿ ಗುಣಮಪಟ್ಟ ಪರೀಕ್ಷೆ ವಿಫಲಗೊಂಡಿದೆ ಎಂದು ಕಂಡುಬಂದಿದೆ. ರಾಜಸ್ಥಾನದಲ್ಲಿ ಈ ಔಷಧಿಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗಿವೆ ಪ್ರತಿಜೀವಕಗಳು: ಆರು ಬ್ಯಾಚ್ಗಳ ಅಮೋಕ್ಸಿಸಿಲಿನ್, ಕ್ಲಾವುಲಾನಿಕ್ ಆಮ್ಲ ಮಾತ್ರೆಗಳು, ಸಿಪ್ರೊಫ್ಲೋಕ್ಸಾಸಿನ್, ಸೆಫ್ಪೊಡಾಕ್ಸಿಮ್ ಮತ್ತು ಸೆಫ್ಟ್ರಿಯಾಕ್ಸೋನ್ ಚುಚ್ಚುಮದ್ದುಗಳು ಪರೀಕ್ಷೆಯಲ್ಲಿ ವಿಫಲವಾಗಿವೆ. ಪರೀಕ್ಷೆಗೆ ಮೊದಲು 100,000 ಕ್ಕೂ ಹೆಚ್ಚು ಮೆಡಿರಿಚ್ ಲಿಮಿಟೆಡ್ ಉತ್ಪನ್ನಗಳು ಮಾರಾಟವಾಗಿದ್ದವು. ಸ್ಟೀರಾಯ್ಡ್ಗಳು: ಮೂರು ಬ್ಯಾಚ್ಗಳ ಬೆಟಾಮೆಥಾಸೊನ್ ಪರೀಕ್ಷೆಯಲ್ಲಿ ವಿಫಲವಾಗಿದೆ. ವರದಿ ಡಿಸೆಂಬರ್ 5 ರಂದು ಬಂದಿತು. ಆ ಹೊತ್ತಿಗೆ, 30,000 ಮೆಡಿವೆಲ್ ಬಯೋಟೆಕ್ ಉತ್ಪನ್ನಗಳು ಮಾರಾಟವಾಗಿದ್ದವು. ಅಲರ್ಜಿ ವಿರೋಧಿಗಳು:…
ಚೆನ್ನೈ : ಮಧ್ಯಪ್ರದೇಶದ ಛಿಂದ್ವಾರಾದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಹಲವಾರು ಮಕ್ಕಳು ಸಾವನ್ನಪ್ಪಿದ ಪ್ರಕರಣದಲ್ಲಿ ಮಧ್ಯಪ್ರದೇಶ ಪೊಲೀಸರು ಪ್ರಮುಖ ಕ್ರಮ ಕೈಗೊಂಡಿದ್ದಾರೆ. ಚೆನ್ನೈನಲ್ಲಿ ಕೆಮ್ಮಿನ ಸಿರಪ್ ಕಂಪನಿಯ ಮಾಲೀಕರನ್ನು ಪೊಲೀಸರು ಬಂಧಿಸಿದ್ದಾರೆ. ಔಷಧ ಮತ್ತು ಸೌಂದರ್ಯವರ್ಧಕಗಳ ಕಾಯ್ದೆ 1940 ರ ಸೆಕ್ಷನ್ 17 ಎ ಉಲ್ಲಂಘನೆಗಾಗಿ ಶಿಕ್ಷೆಗೊಳಗಾದ ನಂತರ, ತಯಾರಕರಿಗೆ ಕಾಯ್ದೆಯ ಸೆಕ್ಷನ್ 27 (ಎ) ಅಡಿಯಲ್ಲಿ ಕನಿಷ್ಠ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುವುದು, ಇದು ಜೀವಾವಧಿ ಶಿಕ್ಷೆ ಮತ್ತು 10 ಲಕ್ಷ ರೂಪಾಯಿಗಿಂತ ಕಡಿಮೆಯಿಲ್ಲದ ದಂಡವನ್ನು ವಿಧಿಸಬಹುದು ಎಂದು ಅಧಿಕಾರಿ ತಿಳಿಸಿದ್ದಾರೆ. ತಂಡವು 39 ನಿರ್ಣಾಯಕ ಅವಲೋಕನಗಳು ಮತ್ತು 325 ಪ್ರಮುಖ ಅವಲೋಕನಗಳನ್ನು ಗಮನಿಸಿದೆ ಎಂದು ತಮಿಳುನಾಡು ಔಷಧ ನಿಯಂತ್ರಣ ವಿಭಾಗದ ಉಪ ನಿರ್ದೇಶಕ ಎಸ್ ಗುರುಭಾರತಿ ಅವರು ಅಕ್ಟೋಬರ್ 1 ಮತ್ತು 2 ರಂದು ಉತ್ಪಾದನಾ ಘಟಕದಲ್ಲಿ ನಡೆಸಿದ ತನಿಖೆಯಲ್ಲಿ ಔಷಧ ನಿಯಮಗಳು, 1945 ರ ಶೆಡ್ಯೂಲ್ ಎಂ ಮತ್ತು ಎಲ್ 1 ರ ಅಡಿಯಲ್ಲಿ ಹಲವಾರು…
ಬೆಂಗಳೂರು : ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರ ಬೆಂಗಾವಲು ವಾಹನ ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಬಾಪೂಜಿನಗರದ ಮನೆಯಲ್ಲಿ ಶರಣಗೌಡ ರಾಮಗೋಳ್ (33) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶರಣಗೌಡ ಅವರಿಗೆ ಈಗಾಗಲೇ ಮದುವೆಯಾಗಿದ್ದು ಇಬ್ಬರು ಮಕ್ಕಳು ಸಹ ಇದ್ದು, ಪತ್ನಿ ಶೈಲಶ್ರೀ ಅವರು ಮಾಗಡಿ ಸಂಚಾರ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿದ್ದಾರೆ. ಇನ್ನು ಶರಣಗೌಡ ಸಹ ಪೊಲೀಸ್ ಬೆಂಗಾವಲು ವಾಹನ ಚಾಲಕರಾಗಿದ್ದು, ಕಳೆದ ಐದು ವರ್ಷಗಳಿಂದ ಅಶೋಕ್ ಅವರ ಬೆಂಗಾವಲು ವಾಹನ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಆರ್ ಅಶೋಕ್ ಸಹ ವಿಕ್ಟೋರಿಯಾ ಆಸ್ಪತ್ರೆಯತ್ತ ದೌಡಾಯಿಸಿದ್ದು, ಪೊಲೀಸ್ ತನಿಖೆಯಲ್ಲಿ ಶರಣಗೌಡ ಆತ್ಮಹತ್ಯೆಗೆ ಕಾರಣ ತಿಳಿದುಬರಬೇಕಿದೆ.
ಬೆಂಗಳೂರು :’ನನ್ನ ಗುರುತು’ ಅಭಿಯಾನದ ಮೂಲಕ ಇದೀಗ ನಿಮ್ಮ ಗುರುತನ್ನು ಸುರಕ್ಷಿತಗೊಳಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಸಜ್ಜಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯಗಳ ಜನತೆಗೆ ಸರ್ಕಾರವು ವಿವಿಧ ಯೋಜನೆಗಳ ಅಡಿಯಲ್ಲಿ ಹತ್ತು ಹಲವಾರು ಸೌಲಭ್ಯಗಳು ಮತ್ತು ಸವಲತ್ತುಗಳನ್ನು ಒದಗಿಸುತ್ತಿದೆ. ಆದರೆ ಕೆಲವೊಮ್ಮೆ ಈ ಸಮುದಾಯದ ಜನತೆಗೆ ಅರಿವಿಲ್ಲದೆ ಅಥವಾ ಸೂಕ್ತ ದಾಖಲೆಗಳ ಲಭ್ಯತೆಯಿಲ್ಲದೆ ಇಂತಹ ಸಾಕಷ್ಟು ಸೌಲಭ್ಯಗಳಿಂದ ವಂಚಿತರಾಗುವ ಸ್ಥಿತಿ ಎದುರಾಗುತ್ತದೆ. ಈ ಸಮಸ್ಯೆಯನ್ನು ಪರಿಹರಿಸಿ, ಪರಿಶಿಷ್ಟ ಜಾತಿ ಮತ್ತು ಪಂಗಡದ ಜನತೆಗೆ ಅವಶ್ಯವಿರುವ 13 ಮೂಲ ದಾಖಲೆಗಳನ್ನು ಪರಿಶೀಲಿಸಿ, ಅಗತ್ಯವಿದ್ದಲ್ಲಿ ತಿದ್ದುಪಡಿ/ನವೀಕರಣಗೊಳಿಸಿ, ದಾಖಲೆ ಇಲ್ಲದವರನ್ನು ಗುರುತಿಸಿ ನೂತನ ದಾಖಲೆಗಳನ್ನು ಒದಗಿಸುವ ಸಲುವಾಗಿ ನಮ್ಮ ಇಲಾಖೆಯು ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ‘ನನ್ನ ಗುರುತು’ ಎಂಬ ಅಭಿಯಾನ ಆರಂಭಿಸಿದೆ. ದಾಖಲೆಗಳು ಕಳೆದು ಹೋಗಿದ್ದಲ್ಲಿ ಅಥವಾ ಹಾನಿಗೊಳಗಾಗಿದ್ದಲ್ಲಿ, ಅಂತಹ ಮೂಲ ದಾಖಲೆಗಳನ್ನು ಹೊಂದಿರದವರನ್ನು ಗುರುತಿಸಿ, ಅವಶ್ಯಕ ದಾಖಲೆಗಳನ್ನು ಒದಗಿಸುವುದು ಹಾಗೂ ಈ ದಾಖಲೆಗಳನ್ನು ಡಿಜಿಲಾಕರ್ ಆಪ್ ನಲ್ಲಿ ಸುರಕ್ಷಿತವಾಗಿರಿಸುವ…
ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ 2025-26ನೇ ಸಾಲಿಗೆ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ಮಂಡಳಿಯ ವತಿಯಿಂದ ನೇರವಾಗಿ ಸಾಲ, ಸಹಾಯಧನ ಮಂಜೂರು ಮಾಡಲಾಗುವುದು. ಹಲವು ವೃತ್ತಿಗಳಾದ ಹಸು ಸಾಕಾಣಿಕೆ, ಗುಡಿಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಇತ್ಯಾದಿ ವ್ಯಾಪಾರ ವಹಿವಾಟುಗಳನ್ನು ಕೈಗೊಳ್ಳಲು ಕನಿಷ್ಠ ರೂ.1 ಲಕ್ಷ ಘಟಕವೆಚ್ಚಕ್ಕೆ ರೂ.20,000/- ಗಳ ಸಹಾಯಧನ ಹಾಗೂ ಗರಿಷ್ಠ ರೂ.2 ಲಕ್ಷಗಳ ಘಟಕವೆಚ್ಚಕ್ಕೆ ರೂ. 40,000/- ಗಳ ಸಹಾಯಧನ ನೀಡಿ ಆರ್ಥಿಕ ನೆರವು ಒದಗಿಸಲಾಗುವುದು. ಉಳಿಕೆ ಸಾಲದ ಮೊತ್ತಕ್ಕೆ ಶೇ.4 ರಂತೆ ವಾರ್ಷಿಕ ಬಡ್ಡಿ ವಿಧಿಸಲಾಗುವುದು. ಅರ್ಜಿ ಸಲ್ಲಿಸುವ ಫಲಾನುಭವಿಗಳು ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದವರಾಗಿದ್ದು, ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ಪ್ರಮಾಣಪತ್ರ (ಇಡಬ್ಲೂಎಸ್ ಪ್ರಮಾಣ ಪತ್ರ) ಹೊಂದಿರಬೇಕು. ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. 18 ರಿಂದ 65 ವರ್ಷದ ಒಳಗಿನವರಾಗಿರಬೇಕು. ಒಂದು…
ದೇವಾಲಯಗಳಲ್ಲಿ, ಮಸೀದಿಗಳಲ್ಲಿ ಹಾಗೂ ಚರ್ಚ್ಗಳಲ್ಲಿ ನಡೆಯುವ ಎಲ್ಲ ವಿವಾಹಗಳಲ್ಲಿ ವಧು-ವರರ ಅರ್ಹ ವಯಸ್ಸಿನ ದೃಢೀಕರಣದ ನಂತರವೇ ಅರ್ಚಕರು, ಮೌಲ್ವಿಗಳು ಹಾಗೂ ಪಾದ್ರಿಗಳು ವಿವಾಹಕ್ಕೆ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ.ಇಟ್ನಾಳ ಅವರು ಸೂಚಿಸಿದ್ದಾರೆ. ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಜಿಲ್ಲಾಡಳಿತವು ಹಲವಾರು ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸುತ್ತಿದ್ದಾಗ್ಯೂ ಜಿಲ್ಲೆಯಲ್ಲಿ ಅಪ್ರಾಪ್ತ ಮಕ್ಕಳಿಗೆ ವಿವಾಹವನ್ನು ಮಾಡಲು ಪ್ರಯತ್ನಿಸುತ್ತಿರುವುದು ಕಂಡುಬರುತ್ತಿದೆ. ಬಾಲ್ಯವಿವಾಹ ನಿಷೇಧ ಕಾಯ್ದೆ-2006 ಕರ್ನಾಟಕ ತಿದ್ದುಪಡಿ-2016 ರಂತೆ 18 ವರ್ಷದೊಳಗಿನ ಹೆಣ್ಣು ಮಗು ಹಾಗೂ 21 ವರ್ಷದೊಳಗಿನ ಗಂಡು ಮಕ್ಕಳ ವಿವಾಹವನ್ನು ನಿಷೇಧಿಸಿದೆ. ಬಾಲ್ಯವಿವಾಹವು ಶಿಕ್ಷಾರ್ಹ ಅಪರಾಧವಾಗಿದ್ದು, ಕಾಯ್ದೆಯ ಕಲಂ 10 ಮತ್ತು 11 ರನ್ವಯ ಬಾಲ್ಯವಿವಾಹದಲ್ಲಿ ಭಾಗವಹಿಸಿದವರು, ಪ್ರೋತ್ಸಾಹಿಸಿದವರು, ಸಹಕರಿಸಿದವರು ಹಾಗೂ ನಡೆಸಿದವರಿಗೆ ಕನಿಷ್ಟ 1 ರಿಂದ 2 ವರ್ಷಗಳ ಜೈಲು ಶಿಕ್ಷೆ ಮತ್ತು ರೂ.1 ಲಕ್ಷದವರೆಗೆ ದಂಡವನ್ನು ವಿಧಿಸಬಹುದಾಗಿದೆ. ಸರ್ವೋಚ್ಛ ನ್ಯಾಯಾಲಯವು ಬಾಲ್ಯವಿವಾಹದಿಂದ ಮಕ್ಕಳ ಬೆಳವಣಿಗೆಯ ಮೇಲೆ ದುಷ್ಪರಿಣಾಮ ಬೀರುವುದಲ್ಲದೆ ಮಕ್ಕಳ ಮೇಲೆ ಲೈಂಗಿಕ ಅಪರಾಧಗಳನ್ನು ಎಸಗಲು…
ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಮತದಾರ ಪಟ್ಟಿ ತಯಾರಿಕೆ ಪ್ರಕ್ರಿಯೆ ಆರಂಭವಾಗಿದೆ. ನಮೂನೆ-18 ರಲ್ಲಿ ಮತಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ನವೆಂಬರ್ 6 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಭಾರತ ಚುನಾವಣಾ ಆಯೋಗದ ಸೂಚನೆಯಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಮತದಾರ ಪಟ್ಟಿ ತಯಾರಿಕೆಗೆ ವೇಳಾಪಟ್ಟಿ ನಿಗಧಿಪಡಿಸಿದ್ದಾರೆ. 1 ನವೆಂಬರ್ 2025 ಕ್ಕೆ ಇದ್ದಂತೆ ಮತದಾರರ ಪಟ್ಟಿ ಸಿದ್ದಪಡಿಸಲಾಗವುದು. ಈ ಸಂಬಂಧ ಜಿಲ್ಲೆಯ ಎಲ್ಲಾ ತಾಲ್ಲೂಕುಗಳು, ನಗರಸಭೆ ವ್ಯಾಪ್ತಿಯಲ್ಲಿ ಸಹಾಯಕ ಮತದಾರರ ನೊಂದಣಾಧಿಕಾರಿ ಹಾಗೂ ನಿರ್ಧಿಷ್ಟಾಧಿಕಾರಿಗಳನ್ನು ನೇಮಿಸಲಾಗಿದೆ. ಮತದಾರ ಪಟ್ಟಿ ತಯಾರಿಕೆಗೆ ಸೆ.30 ರಂದು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 15 ರಂದು ಮೊದಲ ಬಾರಿಗೆ ಹಾಗೂ 25 ರಂದು ಎರಡನೇ ಬಾರಿಗೆ ಅಧಿಸೂಚನೆಯನ್ನು ಪತ್ರಿಕೆಗಳಲ್ಲಿ ಪ್ರಕಟಣೆ ನೀಡಲಾಗುವುದು. ನಮೂನೆ-18 ರಲ್ಲಿ ಅರ್ಜಿ ಸಲ್ಲಿಸಲು ನವೆಂಬರ್ 6 ಕಡೆಯ ದಿನವಾಗಿದೆ. ನವೆಂಬರ್ 20 ವರೆಗೆ ಕರಡು ಮತದಾರರ ಪಟ್ಟಿ ಸಿದ್ದಪಡಿಸಲಾಗುವುದು. ನವೆಂಬರ್…
ಬೆಂಗಳೂರು: ಸಹಕಾರ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಯಶಸ್ವಿನಿ ಯೋಜನೆಯ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಅಪ್ ಡೇಟ್ ನೀಡಲಾಗಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಯಶಸ್ವಿನಿ ಯೋಜನೆಯಡಿಯಲ್ಲಿ ಫಲಾನುಭವಿಗಳಾಗಿರುವ ABArK ಯೋಜನೆಯ ಫಲಾನುಭವಿಗಳಿಗೆ ಯಶಸ್ವಿನಿ ಯೋಜನೆಯಲ್ಲೇ ಪ್ರಯೋಜನವನ್ನು ಪಡೆಯಲು ಸೂಕ್ತ ಹಿಂಬರಹವನ್ನು ನೀಡಬಹುದೆಂದು ಈ ಮೂಲಕ ಆದೇಶಿಸಲಾಗಿದೆ. ಈ ಹಿಂಬರಹವನ್ನು ಖಾಸಗಿ ಆಸ್ಪತ್ರೆಗಳಲ್ಲಿನ ಚಿಕಿತ್ಸೆಯ SAST ರೆಫರಲ್ (referral) ನೀಡುವ ಹಂತದಲ್ಲಿ ನೀಡಬಹುದಾಗಿದೆ ಎಂದು ತಿಳಿಸಿದೆ. ಆದಾಗ್ಯೂ, ಸರ್ಕಾರಿ ಆಸ್ಪತ್ರೆಗಳು ವ್ಯಾಪಕವಾಗಿ ಲಭ್ಯವಿರುವುದರಿಂದ ಇವುಗಳ ಬಳಕೆಯ ಅವಕಾಶದಿಂದ ಯಶಸ್ವಿನಿ ಯೋಜನೆಯ ಫಲಾನುಭವಿಗಳು ವಂಚಿತವಾಗಬಾರದೆಂದು ಮನಗಂಡು, ಯಶಸ್ವಿನಿ ಯೋಜನೆಯ ಫಲಾನುಭವಿಗಳಿಗೆ ABARK ಅಡಿಯಲ್ಲಿ ಯಾವುದೇ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಮುಂದುವರೆಯುತ್ತದೆ. ಆದರೆ, SAST ಅಂತಹ ಎಲ್ಲಾ ಫಲಾನುಭವಿಗಳ ಮಾಹಿತಿಯನ್ನು ಸಹಕಾರ ಇಲಾಖೆಯೊಂದಿಗೆ ಹಂಚಿಕೊಳ್ಳುವುದು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ABArK ದರದಲ್ಲಿ ಚಿಕಿತ್ಸಾ ವೆಚ್ಚವನ್ನು ಮರುಪಾವತಿಸಲು…
ಬೆಂಗಳೂರು : ಬಿಗ್ ಬಾಸ್ ಮನೆಗೆ ಮತ್ತೆ ಅವಕಾಶ ನೀಡಲಾಗಿದ್ದು, ಬಿಗ್ ಬಾಸ್ ಮನೆಗೆ ಎಲ್ಲಾ 17 ಸ್ಪರ್ಧಿಗಳು ಶಿಫ್ಟ್ ಮಾಡಲಾಗಿದೆ. ಹೀಗಾಗಿ ನಟ ಕಿಚ್ಚ ಸುದೀಪ್ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಧನ್ಯವಾದ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ನಟ ಸುದೀಪ್, ಸಮಯೋಚಿತ ಬೆಂಬಲಕ್ಕಾಗಿ ನಾನು ಗೌರವಾನ್ವಿತ ಡಿ.ಕೆ.ಶಿವಕುಮಾರ್ ಸರ್ ಅವರಿಗೆ ಹೃತ್ಪೂರ್ವಕವಾಗಿ ಧನ್ಯವಾದ ಅರ್ಪಿಸುತ್ತೇನೆ. ಇತ್ತೀಚಿನ ಅವ್ಯವಸ್ಥೆ ಅಥವಾ ಗೊಂದಲಗಳಲ್ಲಿ ಬಿಗ್ ಬಾಸ್ ನಲ್ಲಿ ಭಾಗಿಯಾಗಿಲ್ಲ ಅಥವಾ ಭಾಗವಾಗಿರಲಿಲ್ಲ ಎಂದು ಒಪ್ಪಿಕೊಂಡಿದ್ದಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ನನ್ನ ಕರೆಗೆ ತಕ್ಷಣ ಸ್ಪಂದಿಸಿದ್ದಕ್ಕಾಗಿ DCM ಅವರನ್ನು ನಾನು ನಿಜವಾಗಿಯೂ ಕೃತಜ್ಞನಾಗಿದ್ದೇನೆ ಮತ್ತು #Nalpad ಅವರ ಸಮರ್ಪಿತ ಪ್ರಯತ್ನಗಳಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ ಜಾಲಿವುಡ್ ಸ್ಟುಡಿಯೋಸ್ ನ ಗೇಟ್ ಸಿ ಮಾತ್ರ ಓಪನ್ ಗೆ ಅವಕಾಶ ನೀಡಲಾಗಿದ್ದು, ಬಿಗ್ ಬಾಸ್ ಮನೆಗೆ ಸಂಪರ್ಕ ಕಲ್ಪಿಸುವ ಜಾಲಿವುಡ್ ನ ಗೇಟ್ ಸಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಸಮ್ಮುಖದಲ್ಲಿ ಓಪನ್…