Author: kannadanewsnow57

ಬೆಂಗಳೂರು: ಉನ್ನತ ಪೊಲೀಸ್ ಅಧಿಕಾರಿ ಬಿ. ದಯಾನಂದ ಮತ್ತು ಇತರ ಅಧಿಕಾರಿಗಳನ್ನು ಅಮಾನತುಗೊಳಿಸಿದ ನಂತರ ಕರ್ನಾಟಕ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ಬೆಂಗಳೂರು ನೂತನ ಪೊಲೀಸ್ ಆಯುಕ್ತರನ್ನಾಗಿ ನೇಮಿಸಲಾಗಿದೆ. ಈ ಕುರಿತು ರಾಜ್ಯ ಸರ್ಕಾರವು ಆದೇಶ ಹೊರಡಿಸಿದ್ದು, ಬೆಂಗಳೂರು ಮಹಾನಗರ ಕಾರ್ಯಪಡೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಶ್ರೀ. ಸೀಮಂತ್ ಕುಮಾರ್ ಸಿಂಗ್, ಐಪಿಎಸ್ (ಕೆಎನ್: 1996), ಬೆಂಗಳೂರಿನವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಮುಂದಿನ ಆದೇಶದವರೆಗೆ ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಆಯುಕ್ತರಾಗಿ ನೇಮಿಸಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ 11 ಜನರ ಸಾವಿಗೆ ಕಾರಣವಾದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ ಮತ್ತು ಇತರ ಹಲವಾರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ.

Read More

ನವದೆಹಲಿ : ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC), ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗಾಗಿ 5,293 ಕಾನ್ಸ್‌ಟೇಬಲ್ (ಕಾರ್ಯನಿರ್ವಾಹಕ) ಹುದ್ದೆಗಳ ನೇಮಕಾತಿಗಾಗಿ 2025 ರ ದೆಹಲಿ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆಯನ್ನು ನಡೆಸಲಿದೆ. ಅಧಿಕೃತ ಅಧಿಸೂಚನೆಯನ್ನು ಜುಲೈ ಮತ್ತು ಸೆಪ್ಟೆಂಬರ್ 2025 ರ ನಡುವೆ ಬಿಡುಗಡೆ ಮಾಡುವ ನಿರೀಕ್ಷೆಯಿದೆ, ನಂತರ ಅರ್ಹ ಅಭ್ಯರ್ಥಿಗಳು SSC ಯ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ದೆಹಲಿ ಪೊಲೀಸ್ ಕಾನ್ಸ್‌ಟೇಬಲ್ ಅಧಿಸೂಚನೆ 2025 ಕ್ಕೆ ಅರ್ಜಿ ಸಲ್ಲಿಸುವ ಮೊದಲು, ಅಭ್ಯರ್ಥಿಗಳು ಅರ್ಹತಾ ಮಾನದಂಡಗಳೊಂದಿಗೆ ಪರಿಚಿತರಾಗಿರಬೇಕು, ಅದರ ಪ್ರಕಾರ 18 ರಿಂದ 25 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ದೆಹಲಿ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ 2025 ಅಧಿಸೂಚನೆ PDF ಅನ್ನು ಡೌನ್‌ಲೋಡ್ ಮಾಡುವ ಲಿಂಕ್ ಅನ್ನು ಜುಲೈ ಮತ್ತು ಸೆಪ್ಟೆಂಬರ್ 2025 ರ ನಡುವೆ ಇಲ್ಲಿ ಒದಗಿಸಲಾಗುತ್ತದೆ. ಅಧಿಸೂಚನೆ PDF ಅರ್ಜಿ ಪ್ರಕ್ರಿಯೆ, ಅರ್ಹತಾ ಮಾನದಂಡಗಳು, ಅರ್ಜಿ ಶುಲ್ಕ, ಪರೀಕ್ಷಾ ಮಾದರಿ ಮತ್ತು ಪಠ್ಯಕ್ರಮದಂತಹ ಎಲ್ಲಾ ವಿವರಗಳನ್ನು ಒಳಗೊಂಡಿದೆ.…

Read More

ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಸಮರ್ಪಕ ವಿದ್ಯುತ್ ಪೂರೈಕೆಗೆ ರಾಜ್ಯದಲ್ಲಿ 100 ವಿದ್ಯುತ್‌ ಉಪಕೇಂದ್ರ (ಸಬ್‌ ಸ್ಟೇಷನ್‌) ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್‌ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ವಿದ್ಯುತ್‌ ಪ್ರಸರಣ ವ್ಯವಸ್ಥೆಯನ್ನು ಸುಗಮಗೊಳಿಸುವ ಉದ್ದೇಶದಿಂದ ರಾಜ್ಯದಲ್ಲಿ 100 ವಿದ್ಯುತ್‌ ಉಪಕೇಂದ್ರ (ಸಬ್‌ ಸ್ಟೇಷನ್‌) ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದ್ದು, ಕಾಲಮಿತಿಯೊಳಗೆ ಪೂರ್ಣಗೊಳಿಸಲಾಗುವುದು, ಕೃಷಿ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿ 4 ಲಕ್ಷ ಅಕ್ರಮ ಪಂಪ್ಸೆಟ್ ಗಳ ಪೈಕಿ 2.5 ಲಕ್ಷ ಪಂಪ್ಸೆಟ್ ಗಳನ್ನು ಸಕ್ರಮಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಫೀಡರ್ ಗಳಿಂದ 500 ಮೀಟರ್ ಒಳಗಿನ ಪಂಪ್ಸೆಟ್ ಗಳಿಗೆ ಟ್ರಾನ್ಸ್ಫಾರ್ಮರ್ ಒದಗಿಸಲಾಗುವುದು. 500 ಮೀಟರ್ ನಿಂದ ಹೊರಗಿನ ಪಂಪ್ಸೆಟ್ ಗಳಿಗೆ ಕುಸುಮ್ -ಬಿ ಯೋಜನೆಯಡಿ ಸೋಲಾರ್ ಪಂಪ್ಸೆಟ್ ಗಳನ್ನು ಒದಗಿಸಲಾಗುವುದು. ರೈತರಿಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ಪೂರೈಕೆಗಾಗಿ ಕುಸುಮ್ -ಸಿ…

Read More

ಕರ್ನಾಟಕ ಸವಿತಾ ಸಮಾಜದ ಅಭಿವೃದ್ಧಿ ನಿಗಮದಿಂದ ಸಾಲಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳಿಗೆ ಸೇರಿದ ಸವಿತಾ ಸಮಾಜ ಮತ್ತು ಅದರ ಉಪಜಾತಿಗಳಿಗೆ ಸೇರಿದ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಸಮುದಾಯಗಳ ಆಸಕ್ತರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಈ ಮೇಲಿನ ಎಲ್ಲಾ ಯೋಜನೆಗಳ ಸೌಲಭ್ಯವನ್ನು ಪಡೆಯಲು ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು ಮತ್ತು ಇತರೆ ದಾಖಾಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ…

Read More

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ-ಸೌಲಭ್ಯಕ್ಕಾಗಿ ಆನ್ಲೈನ್ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ: ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯ. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು. ನಿಗಮದ/ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು. ಅರಿವು ಯೋಜನೆಯಡಿ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು ವಾರ್ಷಿಕ ವರಮಾನ ರೂ.3.50 ಲಕ್ಷ ಒಳಗಿರಬೇಕು. ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷದ ಮಿತಿಯಲ್ಲಿರಬೇಕು. ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿಸಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 98 ಸಾವಿರ…

Read More

ಬೆಳಗಾವಿ/ಮೈಸೂರು ಕಂದಾಯ ವಿಭಾಗಗಳಲ್ಲಿ ಅಲ್ಪಸಂಖ್ಯಾತರ ಸಮುದಾಯದ ಯುವ ಜನರಿಗೆ ವಸತಿಯುತ Police Sub Inspector (PSI) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅಭ್ಯರ್ಥಿಗಳಿಂದ ಆನ್ ಲೈನ್ ಅರ್ಜಿ ಆಹ್ವಾನಿಸುವ ಕುರಿತು. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2024-25ನೇ ಸಾಲಿಗೆ ಮಂಜೂರಾದ ರಾಜ್ಯದ ಬೆಳಗಾವಿ/ಮೈಸೂರು ಕಂದಾಯ ವಿಭಾಗಗಳಲ್ಲಿ ಅಲ್ಪಸಂಖ್ಯಾತರ ಸಮುದಾಯದ ಯುವ ಜನರಿಗೆ 90 ದಿನಗಳ ವಸತಿಯುತ Police Sub Inspector (PSI) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಯನ್ನು ಪುರುಷ & ಮಹಿಳಾ ಅಭ್ಯರ್ಥಿಗಳಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ ತರಬೇತಿ ನೀಡಲು ಅರ್ಜಿಯನ್ನು ಸಲ್ಲಿಸಲು ಸೇವಾಸಿಂಧು ಪೋರ್ಟಲ್‌ ನಲ್ಲಿ ಸೇವೆಯನ್ನು ಸಕ್ರಿಯಗೊಳಿಸಿ ದಿನಾಂಕ: 10.05.2025 ರಿಂದ ಪ್ರಾರಂಭಿಸಿ ದಿನಾಂಕ:05.06.2025 ರವರೆಗೆ ಮುಕ್ತಾಯಗೊಳಿಸಲು ಕೋರಲಾಗಿತ್ತು. ಮುಂದುವರೆದು ಅಭ್ಯರ್ಥಿಗಳ ಕೋರಿಕೆ ಮತ್ತು ಸಹಾಯವಾಣಿಗೆ ಕರೆಗಳು ಬರುತ್ತಿರುವ ಕಾರಣ ದಿನಾಂಕ: 15.06.2025 ರವರೆಗೆ ಸೇವಾಸಿಂಧು ತಂತ್ರಾಂಶದಲ್ಲಿ ಸೇವೆಯನ್ನು ಮುಂದುವರೆಸಲು ಕೋರಿದೆ.

Read More

ಬೆಂಗಳೂರು : ರಾಜ್ಯ ಸರ್ಕಾರವು ಆಸ್ತಿ ಮಾಲೀಕರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ನಿವೇಶನ ಅಥವಾ ಕಟ್ಟಡಗಳಿಗೆ ಬಿ ಖಾತಾ ನೀಡುವ ಸಂಬಂಧ ಶೀಘ್ರದಲ್ಲೇ ಹೊಸ ಆದೇಶವೊಂದನ್ನು ಹೊರಡಿಸಲಾಗುವುದು ಎಂದು ರಹೀಂ ಖಾನ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಆಸ್ತಿ ನೋಂದಣಿ ಮಾಡಿಕೊಳ್ಳದೇ, ಕರಾರು ಹಾಗೂ ಜನರಲ್ ಪವರ್ ಆಫ್ ಅಟಾರ್ನಿ (ಜಿಪಿಎ) ಹೊಂದಿದವರು ಕೂಡ ಬಿ ಖಾತಾ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಸಚಿವ ಸಂಪುಟದಲ್ಲಿ ಚರ್ಚೆಯಾಗಿದೆ. ಕಾನೂನು ತಜ್ಞರ ಅಭಿಪ್ರಾಯ ಬಂದ ನಂತರ ಹೊಸ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ. ಇನ್ನು, ರಾಜ್ಯದ ಇಂದಿರಾ ಕ್ಯಾಂಟೀನ್ ಗಳಲ್ಲಿ ಮಾಂಸಾಹಾರ ನೀಡಬೇಕು ಎನ್ನುವ ವಿಚಾರ ಇದೆ. ಆದರೆ ಅದು ಆಗಿಲ್ಲ. ಇದೀಗ ಬಡವರಿಗೆ ಪ್ರೋಟಿನ್ ಯುಕ್ತ ಆಹಾರ ಸಿಗಬೇಕು ಎನ್ನುವ ದೃಷ್ಟಿಯಿಂದ ಮೊಟ್ಟೆ ನೀಡುವ ಚಿಂತನೆ ಇದೆ. ರಾಜ್ಯದಲ್ಲಿ ಈ ವರ್ಷ 186 ಹೊಸ ಇಂದಿರಾ ಕ್ಯಾಂಟೀನ್ ತೆರೆಯಲಾಗುತ್ತಿದ್ದು, ಈಗಾಗಲೇ 100 ಕ್ಕೂ ಹೆಚ್ಚು…

Read More

ಬೆಂಗಳೂರು : ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ-ಸೌಲಭ್ಯಕ್ಕಾಗಿ ಅರ್ಹರಿಂದ ಆನ್ಲೈನ್ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಗಳು: ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಡಿ ಸಹಾಯಧನ ಮತ್ತು ಸಾಲ-ಸೌಲಭ್ಯ ನೀಡಲಾಗುವುದು. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು…

Read More

ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್ ಗಳಲ್ಲಿ ಮೊಟ್ಟೆ ನೀಡುವ ಪ್ರಸ್ತಾವನೆ ಇದೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಇಂದಿರಾ ಕ್ಯಾಂಟೀನ್ ಗಳಲ್ಲಿ ಮಾಂಸಾಹಾರ ನೀಡಬೇಕು ಎನ್ನುವ ವಿಚಾರ ಇದೆ. ಆದರೆ ಅದು ಆಗಿಲ್ಲ. ಇದೀಗ ಬಡವರಿಗೆ ಪ್ರೋಟಿನ್ ಯುಕ್ತ ಆಹಾರ ಸಿಗಬೇಕು ಎನ್ನುವ ದೃಷ್ಟಿಯಿಂದ ಮೊಟ್ಟೆ ನೀಡುವ ಚಿಂತನೆ ಇದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಈ ವರ್ಷ 186 ಹೊಸ ಇಂದಿರಾ ಕ್ಯಾಂಟೀನ್ ತೆರೆಯಲಾಗುತ್ತಿದ್ದು, ಈಗಾಗಲೇ 100 ಕ್ಕೂ ಹೆಚ್ಚು ಕ್ಯಾಂಟೀನ್ ಆರಂಭವಾಗಿವೆ. ಒಂದರೆಡು ತಿಂಗಳಲ್ಲಿ ಬಾಕಿ ಇರುವ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

Read More

ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು ಹಾಗೂ ಅಧೀನ ಸಂಸ್ಥೆಗಳ ಸೇವೆ ಮತ್ತು ಯೋಜನೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸ್ವೀಕೃತವಾಗುವ ದೂರು / ಮನವಿಗಳನ್ನು ತ್ವರಿತ/ಗುಣಾತ್ಮಕ ವಿಲೇವಾರಿಗೆ ಕಾಲಮಿತಿಯನ್ನು ನಿಗಧಿಪಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ? ಮೇಲೆ ಓದಲಾದ ಕ್ರಮಾಂಕ (1)ರಲ್ಲಿನ ಸರ್ಕಾರದ ಆದೇಶದಲ್ಲಿ, ಸಾರ್ವಜನಿಕ ಕುಂದುಕೊರತೆಗಳ ನಿರ್ವಹಣೆಗೆ ಸಂಬಂಧಿಸಿದಂತೆ, ಏಕೀಕೃತ ಸಾರ್ವಜನಿಕ ದೂರು ನಿವಾರಣಾ ತಂತ್ರಾಂಶ (Integrated Public Grievances Redressal System) ಅನುಷ್ಠಾನಗೊಳಿಸಲಾಗಿದ್ದು, ಸದರಿ ಆದೇಶದಲ್ಲಿ ಸಾರ್ವಜನಿಕ ಕುಂದುಕೊರತೆಗಳಿಗೆ ಸಂಬಂಧಿಸಿದಂತ ಸ್ವೀಕೃತವಾಗುವ ಮನವಿಗಳನ್ನು ವಿಲೇವಾರಿಗೊಳಿಸಲು ಮೂರು ಹಂತದಲ್ಲಿ ಅನುಷ್ಠಾನಾಧಿಕಾರಿಗಳನ್ನು ಈ. ಕೆಳಕಂಡಂತೆ ನೇಮಿಸಲಾಗಿದೆ. ಸದರಿ ಅನುಷ್ಠಾನಾಧಿಕಾರಿಗಳು ಸರ್ಕಾರವು ನಿಗಧಿಪಡಿಸಿರುವ ಅವಧಿಯೊಳಗೆ ದೂರು/ಮನವಿಗಳನ್ನು ವಿಲೇವಾರಿಗೊಳಿಸಲು ಆದೇಶಿಸಲಾಗಿದೆ. 1. Last Mile Functionaries- LMF (Caseworker) 07 ದಿನಗಳು 2. Level-2 Officer – L2 (Gazetted Officer) 07 ದಿನಗಳು 3. Level-1 Officer- L3 (Group-A Officer) 07…

Read More