Subscribe to Updates
Get the latest creative news from FooBar about art, design and business.
Author: kannadanewsnow57
ಬೆಳಗಾವಿ: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿಗೆ ಮತ್ತೊಂದು ಬಲಿಯಾಗಿದ್ದು, ಜಿಲ್ಲೆ ಬೆಳಗಾವಿಯಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ ಎನ್ನಲಾಗಿದೆ. ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ ಎನ್ನಲಾಗಿದೆ. ಬೆಳಗಾವಿ ತಾಲೂಕಿನ ಬೆನಕನಹಳ್ಳಿ ನಿವಾಸಿ 70 ವರ್ಷದ ವೃದ್ಧರೊಬ್ಬರಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಪ್ರತ್ಯೇಕ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ತಡರಾತ್ರಿ ಸೋಂಕಿತ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಮಡಿಕೇರಿ: ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ರಾಯಚೂರು ಮೂಲದ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. 6 ಸಬ್ಜೆಕ್ಟ್ ಬ್ಯಾಕ್ಲಾಗ್ ಇರುವ ಕಾರಣ ರಾಯಚೂರು ಮೂಲದ ವಿದ್ಯಾರ್ಥಿನಿ ಕಾಲೇಜು ಹಾಸ್ಟೆಲ್ನಲ್ಲಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹಳ್ಳಿಗಟ್ಟು ಕಾಲೇಜುವೊಂದರಲ್ಲಿ ಪ್ರಥಮ ವರ್ಷದ ಎಐಎಂಎಲ್ ವ್ಯಾಸಂಗ ಮಾಡುತ್ತಿದ್ದ ತೇಜಸ್ವಿನಿ (19) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ರಾಯಚೂರಿನ ಮಹಾಂತಪ್ಪ ಎಂಬವರ ಏಕೈಕ ಪುತ್ರಿಯಾಗಿದ್ದು, ಮೂರು ದಿನಗಳ ಹಿಂದೆ ತನ್ನ ಹುಟ್ಟುಹಬ್ಬ ಆಚರಿಸಿಕೊಂಡಿದ್ದಳು. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಪತ್ತೆಯಾಗಿದೆ. ಆರು ವಿಷಯ ಬ್ಯಾಕ್ಲಾಗ್ ಇರುವ ಕಾರಣ ತನಗೆ ಮುಂದೆ ಓದಲು ಇಷ್ಟವಿಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್ ಬರೆದಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ಪೋನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.
ಬೆಳಗಾವಿ: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿಗೆ ಮತ್ತೊಂದು ಬಲಿಯಾಗಿದ್ದು, ಜಿಲ್ಲೆ ಬೆಳಗಾವಿಯಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಬೆಳಗಾವಿ ತಾಲೂಕಿನ ಬೆನಕನಹಳ್ಳಿ ನಿವಾಸಿ 70 ವರ್ಷದ ವೃದ್ಧರೊಬ್ಬರಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಪ್ರತ್ಯೇಕ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ತಡರಾತ್ರಿ ಸೋಂಕಿತ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಡ್ಯಾನ್ಸ್ ಮಾಸ್ಟರ್ ನನ್ನು ಪೋಕ್ಸ್ ಕೇಸ್ ದಾಖಲಿಸಿ ಪೊಲೀಸರು ಬಂಧಿಸಿದ್ದಾರೆ. ಮೇ 24 ರಂದು ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು. ನಡೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ಮಾತನಾಡಿಸಿ ತಾನು ಡ್ಯಾನ್ಸ್ ಮಾಸ್ಟರ್ ಎಂದು ಹೇಳಿ ಪರಿಚಯ ಮಾಡಿಕೊಂಡು ಡ್ಯಾನ್ಸ್ ಹೇಳಿಕೊಡುವುದಾಗಿ ಕಾರು ಹತ್ತಿಸಿಕೊಂಡಿದ್ದನು. ಡ್ಯಾನ್ಸ್ ಹೇಳಿಕೊಡುವ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದ ಎನ್ನಲಾಗಿದ್ದು, ಈ ವಿಚಾರವನ್ನು ಬಾಲಕಿ ಪೋಷಕರಿಗೆ ತಿಳಿಸಿದ್ದಳು. ಪೋಷಕರು ಕಾಡುಗೋಡಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಪೋಷಕರ ದೂರಿನ ಮೇರೆಗೆ ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿ ಭಾರತಿ ಕಣ್ಣನ್ ನನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
ಮಡಿಕೇರಿ: ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗುವಂತ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯಲ್ಲಿ ಇಂದು, ನಾಳೆ 2 ದಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಮಡಿಕೇರಿ ಜಿಲ್ಲಾಧಿಕಾರಿ ವೆಂಕಟರಾಜಾ ಅವರು ಆದೇಶಿಸಿದ್ದು, ಗುರುವಾರ, ಶುಕ್ರವಾರದಂದು ಜಿಲ್ಲೆಯಲ್ಲಿ ಭಾರೀ ಮಳೆಯಾಗುವಂತ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದಿದ್ದಾರೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ಇಂದು, ನಾಳೆ ರಜೆ ಘೋಷಿಸಲಾಗಿದೆ ಅಂತ ಡಿಸಿ ಆದೇಶದಲ್ಲಿ ತಿಳಿಸಿದ್ದಾರೆ.
ಶೋಪಿಯಾನ್ : ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಭಯೋತ್ಪಾದಕರನ್ನು ಬಂಧಿಸಿದೆ. ಇಬ್ಬರು ಭಯೋತ್ಪಾದಕರನ್ನು ಬಂಧಿಸಿರುವ ಭಾರತೀಯ ಸೇನೆಯು ಶಸ್ತ್ರಾಸ್ತ್ರಗಳು ಮತ್ತು ಕೈ ಗ್ರೆನೇಡ್ಗಳು ವಶಪಡಿಸಿಕೊಳ್ಳಲಾಗಿದೆ.
ಬೆಂಗಳೂರು : ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ಬಗ್ಗೆ ನಟ ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಟ ಕಮಲ್ ಹಾಸನ್ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿವರಾಜ್ ಕುಮಾರ್ ಅವರು, ಕಮಲ್ ಹಾಸನ್ ಕೂಡ ಕನ್ನಡಕ್ಕೆ ಗೌರವ ಕೊಡುತ್ತಾರೆ. ನಿನ್ನೆ ಬಂದಾಗಲೂ ಅಷ್ಟೇ ಚೆನ್ನಾಗಿ ಮಾತನಾಡಿದ್ದಾರೆ. ನಾನು ಅವರ ಬಹಳ ದೊಡ್ಡ ಅಭಿಮಾನಿ. ನಮ್ಮನ್ನು ಗೌರವದಿಂದ ಸಮಾರಂಭಕ್ಕೆ ಕರೆದಿದ್ದರು. ಅದೇ ಗೌರವದಿಂದ ನಾನೂ ಸಹ ಹೋಗಿದ್ದೆ . ವೇದಿಕೆ ಮೇಲೆ ಏನು ತಪ್ಪಾಯಿತು ಎಂಬುದು ನನಗೆ ಗೊತ್ತಾಗಲಿಲ್ಲ. ಇಲ್ಲಿ ಬಂದು ನೋಡಿದಾಗ ವಿವಾದ ಆಗಿತ್ತು ಎಂದರು. ನಾವು ಅವರನ್ನು ನೋಡಿ ಬೆಳೆದವರು, ಕಮಲ್ ಅವ್ರಿಗೆ ನಾನು ಕೊಡುವ ಸ್ಥಾನ ಬೇರೆ. ನಾನು ಅವರಿಂದ ಇನ್ಸ್ಪೈರ್ ಆಗಿದ್ದೀನಿ. ಕಂಡಿತ ಅದಕ್ಕೆ ಏನು ಪ್ರತಿಕ್ರಿಯೆ ಕೊಡಬೇಕೋ ಅವರು ಕೊಡ್ತಾರೆ ಎಂದು ತಿಳಿಸಿದ್ದಾರೆ. ನಟ ಕಮಲ್ ಹಾಸನ್ ವಿರುದ್ಧ ದೂರು ದಾಖಲು ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು…
ಹಾಸನ : ಯುವಜನರಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನ ಕೆ.ವಿ (21) ಮೃತ ವಿದ್ಯಾರ್ಥಿನಿ. ಮನೆಗೆ ನೀರು ತಂದ ಕವನಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಈ ವೇಳೆ ಕವನ ತಾಯಿ ಬಳಿ ಕುಡಿಯಲು ನೀರು ಕೇಳಿದ್ದಾಳೆ. ತಾಯಿ ನೀರು ತಂದು ಕೊಡುವಷ್ಟರಲ್ಲಿ ಕವನ ಮನೆಯಲ್ಲಿಯೇ ಕುಸಿದು ಬಿದ್ದಿದ್ದಳು. ಕೂಡಲೇ ಪೋಷಕರು ಆಕೆಯನ್ನು ಹಾಸನದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದಾರೆ. ಅಷ್ಟರಲ್ಲಾಗಲೇ ಕವನ ಮೃತಪಟ್ಟಿದ್ದರು. ಕವನ ಹಾಸನ ನಗರದ ಎಂ.ಜಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದಳು.
ನವದೆಹಲಿ : ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (AB PM-JAY) ಅಡಿಯಲ್ಲಿ ಅಕ್ಟೋಬರ್ 2024 ರಲ್ಲಿ ಪ್ರಾರಂಭಿಸಲಾದ ಆಯುಷ್ಮಾನ್ ಕಾರ್ಡ್ 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ಭಾರತೀಯ ನಾಗರಿಕರಿಗೆ 5 ಲಕ್ಷ ರೂಪಾಯಿಗಳ ಉಚಿತ ಆರೋಗ್ಯ ವಿಮೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ಪ್ರಧಾನಿ ನರೇಂದ್ರ ಮೋದಿ ಪರಿಚಯಿಸಿದ ಈ ಆರೋಗ್ಯ ಉಪಕ್ರಮವು, ಯಾವುದೇ ಕಾಯುವ ಅವಧಿಯಿಲ್ಲದೆ, ಮೊದಲೇ ಅಸ್ತಿತ್ವದಲ್ಲಿರುವ ಪರಿಸ್ಥಿತಿಗಳು ಸೇರಿದಂತೆ ಸುಮಾರು 2,000 ವೈದ್ಯಕೀಯ ವಿಧಾನಗಳಿಗೆ ಸಮಗ್ರ ವ್ಯಾಪ್ತಿಯನ್ನು ನೀಡುತ್ತದೆ. ಕಾರ್ಡ್ ಅನ್ನು ಯಾರು ಪಡೆಯಬಹುದು? 70 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ಯಾವುದೇ ಭಾರತೀಯ ನಾಗರಿಕರು ಅರ್ಜಿ ಸಲ್ಲಿಸಬಹುದು. ಈಗಾಗಲೇ ಆಯುಷ್ಮಾನ್ ಭಾರತ್ PM-JAY ಅಡಿಯಲ್ಲಿ ಒಳಗೊಳ್ಳಲ್ಪಟ್ಟವರು ಇದನ್ನು ಹೆಚ್ಚುವರಿ ಟಾಪ್-ಅಪ್ ಆಗಿ ಸ್ವೀಕರಿಸುತ್ತಾರೆ, ಪರಿಣಾಮಕಾರಿಯಾಗಿ ಅವರ ವ್ಯಾಪ್ತಿಯನ್ನು ದ್ವಿಗುಣಗೊಳಿಸುತ್ತಾರೆ. ಖಾಸಗಿ ವಿಮೆ ಅಥವಾ ಇತರ ಸರ್ಕಾರಿ ಆರೋಗ್ಯ ಯೋಜನೆಗಳಿಂದ ಒಳಗೊಳ್ಳಲ್ಪಟ್ಟ ವ್ಯಕ್ತಿಗಳು ಸಹ ಅರ್ಹರಾಗಿರುತ್ತಾರೆ, ಆದರೂ ಅವರು…
ನವದೆಹಲಿ : ಭಾರತದಲ್ಲಿ ಭೂಮಿ ಖರೀದಿ ಮತ್ತು ಮಾರಾಟಕ್ಕೆ ಸಂಬಂಧಿಸಿದ ನಿಯಮಗಳಲ್ಲಿ ದೊಡ್ಡ ಬದಲಾವಣೆಯಾಗಲಿದೆ. 1908 ರಲ್ಲಿ ಮಾಡಲಾದ 117 ವರ್ಷಗಳಷ್ಟು ಹಳೆಯದಾದ ನೋಂದಣಿ ಕಾಯ್ದೆಯನ್ನು ರದ್ದುಗೊಳಿಸುವ ಹೊಸ ಕಾನೂನನ್ನು ತರಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಈ ಹೊಸ ಕಾನೂನಿನಡಿಯಲ್ಲಿ, ದೇಶಾದ್ಯಂತ ಆನ್ಲೈನ್ ಆಸ್ತಿ ನೋಂದಣಿಯನ್ನು ಕಡ್ಡಾಯಗೊಳಿಸಲಾಗುವುದು. ಭೂ ಸಂಪನ್ಮೂಲ ಇಲಾಖೆಯು ಈ ಹೊಸ ಮಸೂದೆಯ ಕರಡನ್ನು ಸಾರ್ವಜನಿಕ ಅಭಿಪ್ರಾಯಕ್ಕಾಗಿ ಬಿಡುಗಡೆ ಮಾಡಿದೆ. ಪ್ರತಿಯೊಂದು ದಾಖಲೆಯನ್ನು ಡಿಜಿಟಲ್ ವಿಧಾನಗಳ ಮೂಲಕ ಸುರಕ್ಷಿತವಾಗಿರಿಸುವುದು ಮತ್ತು ನೋಂದಣಿಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಸುಲಭಗೊಳಿಸುವುದು ಇದರ ಉದ್ದೇಶವಾಗಿದೆ. ಅನೇಕ ರಾಜ್ಯಗಳು ಈಗಾಗಲೇ ಆನ್ಲೈನ್ ನೋಂದಣಿಯನ್ನು ಪ್ರಾರಂಭಿಸಿವೆ, ಆದರೆ ಈಗ ಇಡೀ ದೇಶಕ್ಕೆ ಮತ್ತೊಂದು ಆಧುನಿಕ ಕಾನೂನನ್ನು ತರಲಾಗುತ್ತಿದೆ. ಇಂದಿನಿಂದ, ಮಾರಾಟ ಒಪ್ಪಂದ, ಪವರ್ ಆಫ್ ಅಟಾರ್ನಿ, ಮಾರಾಟ ಪ್ರಮಾಣಪತ್ರ ಮತ್ತು ಸಮಾನ ಅಡಮಾನದಂತಹ ದಾಖಲೆಗಳ ನೋಂದಣಿ ಕಡ್ಡಾಯವಾಗಿರುತ್ತದೆ. ಇದರ ಹೊರತಾಗಿ, ಈಗ ಪ್ರತಿಯೊಬ್ಬ ಖರೀದಿದಾರ ಮತ್ತು ಮಾರಾಟಗಾರ ಆಧಾರ್ ಆಧಾರಿತ ಗುರುತಿನ ಪರಿಶೀಲನೆಗೆ ಒಳಗಾಗಬೇಕಾಗುತ್ತದೆ -…













