Subscribe to Updates
Get the latest creative news from FooBar about art, design and business.
Author: kannadanewsnow57
ಶ್ರೀನಗರ : ಪಹಲ್ಗಾಮ್ ದಾಳಿಯ ಬಳಿಕ ಪಾಕಿಸ್ತಾನ ಸೇನೆಯು ಕದನ ವಿರಾಮ ಉಲ್ಲಂಘಿಸುತ್ತಿದ್ದು, ತಡರಾತ್ರಿ ಜಮ್ಮು-ಕಾಶ್ಮೀರದ ಹಲವಡೆ ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಸೇನೆಯ ತಕ್ಕ ಪ್ರತ್ಯುತ್ತರ ನೀಡಿದೆ. ಈ ಕುರಿತು ಭಾರತೀಯ ಸೆನೆ ಮಾಹಿತಿ ಹಂಚಿಕೊಂಡಿದ್ದು, 2025 ರ ಮೇ 04 -05 ರ ರಾತ್ರಿ, ಪಾಕಿಸ್ತಾನ ಸೇನಾ ಠಾಣೆಗಳು ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ, ಬಾರಾಮುಲ್ಲಾ, ಪೂಂಚ್, ರಾಜೌರಿ, ಮೆಂಧರ್, ನೌಶೇರಾ, ಸುಂದರ್ಬಾನಿ ಮತ್ತು ಅಖ್ನೂರ್ ಎದುರು ಪ್ರದೇಶಗಳಲ್ಲಿ ಎಲ್ಒಸಿಯಾದ್ಯಂತ ಅಪ್ರಚೋದಿತ ಸಣ್ಣ ಶಸ್ತ್ರಾಸ್ತ್ರಗಳ ಗುಂಡಿನ ದಾಳಿ ನಡೆಸಿದವು. ಭಾರತೀಯ ಸೇನೆಯು ತಕ್ಷಣ ಮತ್ತು ಪ್ರಮಾಣಾನುಗುಣವಾಗಿ ಪ್ರತಿಕ್ರಿಯಿಸಿತು ಎಂದು ತಿಳಿಸಿದೆ. https://twitter.com/ANI/status/1919205618491281915?ref_src=twsrc%5Egoogle%7Ctwcamp%5Eserp%7Ctwgr%5Etweet
ಭಾರತದಲ್ಲಿ, ಆಧಾರ್ ಕಾರ್ಡ್ ಕೇವಲ ಗುರುತಿನ ಚೀಟಿಯಲ್ಲ, ಬದಲಾಗಿ ಅನೇಕ ಸರ್ಕಾರಿ ಮತ್ತು ಖಾಸಗಿ ಸೇವೆಗಳಿಗೆ ಅಗತ್ಯವಾದ ದಾಖಲೆಯಾಗಿದೆ. ಬ್ಯಾಂಕ್ ಖಾತೆ ತೆರೆಯುವುದು, ಶಾಲಾ ಮತ್ತು ಕಾಲೇಜು ಪ್ರವೇಶಗಳು ಮತ್ತು ಸರ್ಕಾರಿ ಯೋಜನೆಗಳನ್ನು ಪಡೆಯುವುದು ಮುಂತಾದ ಹಲವು ಸ್ಥಳಗಳಲ್ಲಿ ಆಧಾರ್ ಅಗತ್ಯವಿದೆ. ಅದಕ್ಕಾಗಿಯೇ ಅದರಲ್ಲಿರುವ ಮಾಹಿತಿಯು ನಿಖರವಾಗಿರುವುದು ಬಹಳ ಮುಖ್ಯ. ತಪ್ಪು ಮಾಹಿತಿಯು ವಹಿವಾಟಿಗೆ ಅಡ್ಡಿಯಾಗಬಹುದು. ಇದಕ್ಕಾಗಿ, ಕೆಲವು ಷರತ್ತುಗಳೊಂದಿಗೆ ಮಾಹಿತಿಯನ್ನು ನವೀಕರಿಸುವ ಸೌಲಭ್ಯವನ್ನು ಯುಐಡಿಎಐ ಒದಗಿಸುತ್ತದೆ. ಮೊಬೈಲ್ ಸಂಖ್ಯೆಯನ್ನು ಎಷ್ಟು ಬಾರಿ ಬದಲಾಯಿಸಬಹುದು? ಮೊಬೈಲ್ ಸಂಖ್ಯೆ ನವೀಕರಣಕ್ಕೆ ಯುಐಡಿಎಐ ಯಾವುದೇ ಸಂಖ್ಯಾತ್ಮಕ ಮಿತಿಯನ್ನು ವಿಧಿಸಿಲ್ಲ. ಅಂದರೆ ಮೊಬೈಲ್ ಸಂಖ್ಯೆಯನ್ನು ಎಷ್ಟು ಬಾರಿ ಬೇಕಾದರೂ ಬದಲಾಯಿಸಬಹುದು. ಆದಾಗ್ಯೂ, ಈ ಬದಲಾವಣೆಯನ್ನು ಆನ್ಲೈನ್ನಲ್ಲಿ ಮಾಡಬಾರದು. ಇದಕ್ಕಾಗಿ, ಹತ್ತಿರದ ಆಧಾರ್ ಸೇವಾ ಕೇಂದ್ರಕ್ಕೆ ವೈಯಕ್ತಿಕವಾಗಿ ಭೇಟಿ ನೀಡುವುದು ಅವಶ್ಯಕ. ರೂ. ಶುಲ್ಕ. ಈ ಸಮಯದಲ್ಲಿ 50 ರೂಪಾಯಿ ಶುಲ್ಕ ವಿಧಿಸಲಾಗುತ್ತದೆ. ಹೆಸರನ್ನು ಎಷ್ಟು ಬಾರಿ ಬದಲಾಯಿಸಬಹುದು? ನಿಮ್ಮ ಹೆಸರನ್ನು ಎರಡು ಬಾರಿ ಮಾತ್ರ ಬದಲಾಯಿಸಲು…
ನವದೆಹಲಿ : ಭಾರತೀಯ ರೈಲ್ವೆಯಲ್ಲಿ ಖಾಲಿ ಇರುವ 9,970 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳಿಗೆ ಅರ್ಜಿ ನೋಂದಣಿ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು ಮೇ.9 ಕೊನೆಯ ದಿನವಾಗಿದೆ. ರೈಲ್ವೆ ನೇಮಕಾತಿ ಮಂಡಳಿಯು ಹಲವಾರು ವಲಯ ರೈಲ್ವೆಗಳಲ್ಲಿ ಸಹಾಯಕ ಲೋಕೋ ಪೈಲಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯ ಮೂಲಕ ಒಟ್ಟು 9,970 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಸ್ಪರ್ಧಿಸುವ ಅಭ್ಯರ್ಥಿಗಳು 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಸಂಬಂಧಪಟ್ಟ ವಿಷಯದಲ್ಲಿ ಐಟಿಐ ಪದವಿ ಪಡೆದಿರಬೇಕು. ಸಂಬಂಧಿತ ಕ್ಷೇತ್ರದಲ್ಲಿ ಎಂಜಿನಿಯರಿಂಗ್ ಡಿಪ್ಲೊಮಾ/ಪದವಿ ಹೊಂದಿರಬೇಕು. ಅಭ್ಯರ್ಥಿಗಳು 18 ರಿಂದ 30 ವರ್ಷ ವಯಸ್ಸಿನವರಾಗಿರಬೇಕು. ನಿಯಮಗಳ ಪ್ರಕಾರ, ಮೀಸಲಾತಿ ವರ್ಗಗಳಿಗೆ ಸೇರಿದವರಿಗೆ ಸಡಿಲಿಕೆ ಇರುತ್ತದೆ. ಈ ಹುದ್ದೆಗಳಿಗೆ ಆಯ್ಕೆ ಸಿಬಿಟಿ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಇತ್ಯಾದಿಗಳ ಆಧಾರದ ಮೇಲೆ ಮಾಡಲಾಗುತ್ತದೆ. ಆಯ್ಕೆಯಾದವರಿಗೆ ರೂ. ಪ್ರತಿ ತಿಂಗಳು. ಸಂಬಳ 19,900 ಆಗಿರುತ್ತದೆ. ಸಾಮಾನ್ಯ/ಒಬಿಸಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 500 ಪಾವತಿಸಬೇಕು.…
ಬೆಂಗಳೂರು : ಬೆಂಗಳೂರಿನ ನಮ್ಮ ಮೆಟ್ರೋದ ಆವರಣದಲ್ಲಿ ಉಗುಳಿದ ಪ್ರಯಾಣಿಕನಿಗೆ ದಂಡ ವಿಧಿಸಿ ಬಿಎಂಆರ್ ಸಿಎಲ್ ಆದೇಶ ಹೊರಡಿಸಿದೆ. ಮೆಟ್ರೋ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಯಾಣಿಕರಿಗೆ ದಂಡ ವಿಧಿಸಿದೆ. ಈ ಬಗ್ಗೆ ಬಿಎಂಆರ್ ಸಿಎಲ್ ಮಹತ್ವದ ಪ್ರಕಟಣೆ ಹೊರಡಿಸಿದೆ. BMRCL ಪ್ರಕಟಣೆಯಲ್ಲಿ ಏನಿದೆ? ಕನಕಪುರ ರಸ್ತೆಯ ದೊಡ್ಡಕಲಸಂದ್ರ ಮೆಟ್ರೋ ನಿಲ್ದಾಣದ ಆವರಣದಲ್ಲಿ ಉಗುಳಿದ ಪ್ರಯಾಣಿಕನಿಗೆ ದಂಡ ಬೆಂಗಳೂರು, ಮೇ 3, 2025: ಮೇ 2 2025ರ ಸಂಜೆ ಸುಮಾರು 6:30ಕ್ಕೆ, ಗ್ರೀನ್ ಲೈನ್ನ ಕನಕಪುರ ರಸ್ತೆಯಲ್ಲಿರುವ ದೊಡ್ಡಕಲಸಂದ್ರ ಮೆಟ್ರೋ ನಿಲ್ದಾಣದ ಪ್ಲಾಟ್ಫಾರ್ಮ್ 01 ರ ಲಿಫ್ಟ್ ಬಳಿಯಲ್ಲಿ ಪಾನ್ ಮಸಾಲಾ ಉಗುಳುತ್ತಿದ್ದ ಪ್ರಯಾಣಿಕನನ್ನು ಪತ್ತೆ ಹಚ್ಚಿ ಮೆಟ್ರೋ ಅಧಿಕಾರಿಗಳು ದಂಡ ವಿಧಿಸಿದರು. ಮೆಟ್ರೋ ಆವರಣದಲ್ಲಿ ಉಗುಳುವುದು ಮತ್ತು ಕಸದಂಚುಗಳನ್ನು ಎಸೆಯುವುದು ಪರಿಸರ ಹಾಳಾಗುವುದಲ್ಲದೆ, ಇತರ ಪಯಾಣಿಕರ ಆರೋಗ್ಯಕ್ಕೂ ಅಪಾಯವನ್ನು ಉಂಟುಮಾಡುತ್ತದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಸ್ವಚ್ಛ, ಆರೋಗ್ಯಕರ ಮತ್ತು ಸುರಕ್ಷಿತ ಸಾರ್ವಜನಿಕ ಸಾರಿಗೆಯ ವ್ಯವಸ್ಥೆಗಾಗಿ ಕಟಿಬದ್ಧವಾಗಿದೆ. ಸ್ವಚ್ಛತೆ ನಿಯಮಗಳನ್ನು…
ದಕ್ಷಿಣ ಕನ್ನಡ : ಆಟ ಆಡುವಾಗ ಎದೆನೋವಿನಿಂದ ಕುಸಿದು ಬಿದ್ದ ಎಸ್ಎಸ್ ಎಲ್ ಸಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಜೋಡುಸ್ಥಾನದಲ್ಲಿ ನಡೆದಿದೆ. ಜೋಡುಸ್ಥಾನದ ಪ್ರಥಮ್ (16) ಮೃತ ಬಾಲಕನಾಗಿದ್ದು, ಭಾನುವಾರ ಮಧ್ಯಾಹ್ನ ಮನೆಯ ಸಮೀಪ ಆಟವಾಡುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಬಾಲಕ ಮೃತಪಟ್ಟಿದ್ದಾನೆ.
ರಾಜ್ಯ ಸರಕಾರಿ ನೌಕರರ ಮತ್ತು ಅವಲಂಬಿತ ಕುಟುಂಬ ಸದಸ್ಯರ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ವಿವಿಧ ಬ್ಯಾಂಕುಗಳಲ್ಲಿ ಒದಗಿಸುವ “ಸಂಬಳ ಪ್ಯಾಕೇಜ್”ಗಳ ಅಡಿಯಲ್ಲಿ ಖಾತೆಗಳನ್ನು ತೆರೆಯುವುದು ಮತ್ತು ಆಯ್ಕೆ ಮಾಡಿಕೊಳ್ಳುವುದನ್ನು ಎಲ್ಲಾ ಅಧಿಕಾರಿ, ನೌಕರರಿಗೆ ಕಡ್ಡಾಯಗೊಳಿಸಿ, ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ. ಈ ಕುರಿತು ಸುತ್ತೋಲೆ ಹೊರಡಿಸಿರುವ ಅವರು ಜಿಲ್ಲೆಯಲ್ಲಿನ ಪ್ರತಿ ಸರಕಾರಿ ನೌಕರ ಸಂಬಳ ಪ್ಯಾಕೇಜ್ ಖಾತೆ ಹೊಂದಿ, ಅದರ ಪ್ರಯೋಜನ ಪಡೆಯಬೇಕು. ಆದ್ದರಿಂದ ಜಿಲ್ಲೆಯ ಎಲ್ಲ ಇಲಾಖೆಗಳು ಜಿಲ್ಲಾ ಮುಖ್ಯಸ್ಥರು ತಮ್ಮ ಇಲಾಖೆಯ ಜಿಲ್ಲಾ, ತಾಲೂಕು, ಗ್ರಾಮಮಟ್ಟದಲ್ಲಿರುವ ಡಿ.ಡಿ.ಓ ಗಳ ಮೂಲಕ ಪ್ರತಿ ನೌಕರನ ವೇತನ ಪಾವತಿ ಖಾತೆ ಸಂಬಳ ಪ್ಯಾಕೇಜ್ ಖಾತೆ ಆಗಿರುವದನ್ನು ಖಚಿತಪಡಿಸಿಕೊಳ್ಳಬೇಕು. ಒಂದು ವೇಳೆ ಅವರ ವೇತನ ಖಾತೆಯು ಸಂಬಳ ವೇತನ ಖಾತೆ ಆಗಿರದಿದ್ದಲ್ಲಿ ತಾವೇ ಖುದ್ದು ಮುತುವರ್ಜಿ, ಜವಾಬ್ದಾರಿ ವಹಿಸಿ ಮಾಡಿಸಬೇಕು ಎಂದು ಅವರು ನಿರ್ದೇಶನ ನೀಡಿದ್ದಾರೆ. ಪ್ರತಿ ಸರಕಾರಿ ನೌಕರನಿಗೆ ಸಂಬಳ ಪ್ಯಾಕೇಜ್ ಖಾತೆ ಮತ್ತು ಪಿ.ಎಂ.ಜೆ.ಜೆ.ಬಿ.ವೈ ಹಾಗೂ…
ಬೆಂಗಳೂರು : ಪರಿಶಿಷ್ಟ ಜಾತಿ ಒಳ ಮೀಸಲು ಕಲ್ಪಿಸುವ ಕುರಿತು ಶಿಫಾರಸು ಮಾಡಲು ಸರ್ಕಾರ ರಚಿಸಿರುವ ನ್ಯಾ| ನಾಗಮೋಹನ್ ದಾಸ್ ಆಯೋಗ ಇಂದಿನಿಂದ ಸಮೀಕ್ಷೆಗೆ ಚಾಲನೆ ನೀಡಲಿದ್ದು, ಗಣತಿದಾರರು ಪ್ರತಿ ಮನೆ ಮನೆಗೂ ಆಗಮಿಸಿ ಸಮೀಕ್ಷೆ ನಡೆಸಲಿದ್ದಾರೆ. ಗಣತಿದಾರರು ಕೇವಲ ಪರಿಶಿಷ್ಟ ಜಾತಿಗೆ ಸೇರಿದವರ ಮನೆಗೆ ಮಾತ್ರವಲ್ಲದೆ ಎಲ್ಲ ಮನೆಗಳಿಗೂ ಭೇಟಿ ನೀಡಲಿದ್ದಾರೆ. ಈ ವೇಳೆ ಎಸ್ಸಿ ಅಲ್ಲದ ಕುಟುಂಬಗಳಿಂದ ಮನೆ ಸಂಖ್ಯೆ ಆ್ಯಪ್ ನಲ್ಲಿ ನಮೂದಿಸಿ ಕುಟುಂಬ ಸದಸ್ಯರ ಸಂಖ್ಯೆ ದಾಖಲಿಸಲಿದ್ದಾರೆ. ಮತ್ತಷ್ಟು ಮಾಹಿತಿ: ಸಮೀಕ್ಷೆದಾರರ ಪ್ರಾಮುಖ್ಯತೆ: ಸಮೀಕ್ಷೆದಾರನಾಗಿ ಆಯ್ಕೆಗೊಂಡಿರುವುದು ಶಿಕ್ಷಕರು ಸಮೀಕ್ಷೆದಾರರಾಗಿ ಮಹತ್ವದ ಕರ್ತವ್ಯ ನಿರ್ವಹಿಸಬೇಕಿದೆ. ಸಮೀಕ್ಷೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿವೆ. ಸಮೀಕ್ಷೆದಾರರು ನಿಷ್ಠೆಯಿಂದ ಸಕ್ರಿಯವಾಗಿ ಭಾಗವಹಿಸಿ ಸಮೀಕ್ಷೆ ಪೂರ್ಣಗೊಳಿಸಬೇಕಿದೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುವ ಮೊದಲು ತಮಗೆ ವಹಿಸಿದ ಪ್ರದೇಶದಲ್ಲಿನ ಹಿರಿಯ ಮತ್ತು ಪ್ರಮುಖ ವ್ಯಕ್ತಿಗಳನ್ನು ಭೇಟಿ ಮಾಡಿ ಭೇಟಿಯ ಉದ್ದೇಶವನ್ನು ನಿವಾಸಿಗಳಿಗೆ ವಿವರಿಸುವ ಮೂಲಕ ಅವರೊಂದಿಗೆ ನಿಕಟ ಸೌಹಾರ್ದತೆ ಹೊಂದಬೇಕು. ಸಮೀಕ್ಷೆ ಕಾರ್ಯಕ್ಕೆ ಹೋಗುವ…
ಬೆಂಗಳೂರು: ರಾಜ್ಯದಲ್ಲಿ ಹೊಸ ಪಡಿತರ ಚೀಟಿ ಪಡೆಯಲು ಆಹಾರ ನಾಗರೀಕ ಸರಬರಾಜು ಇಲಾಖೆ ಅರ್ಜಿ ಆಹ್ವಾನಿಸಿದೆ. ಎಪಿಎಲ್ ಮತ್ತು ಬಿಪಿಲ್ ಕಾರ್ಡ್ ಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಮೇ.5 ರ ಇಂದು ಮಧ್ಯಾಹ್ನ 1 ರಿಂದ 3 ರ ವರೆಗು, ahara.kar.nic.inನಲ್ಲಿ ಅಥವಾ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ. ವೆಬ್ಸೈಟ್ ahara.kar.nic.in ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಅರ್ಹರು ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್ಗಳಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಬಿಪಿಎಲ್ ಕಾರ್ಡ್ ಅರ್ಜಿಗೆ ಸಮಯ ನಿಗದಿ ಮಾಡಿದ್ದು, ಸಮಯ ಮಧ್ಯಾಹ್ನ 1 ರಿಂದ 3 ರ ವರೆಗೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. APL ಹಾಗೂ BPL ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗಿದ್ದು, 01-05-2025 ರಿಂದ 05-05-2025 ರವರೆಗೆ ಸಮಯ ಮಧ್ಯಾಹ್ನ 1 ರಿಂದ 3 ರ ವರೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಹೊಸ ಬಿಪಿಎಲ್, ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ಅರ್ಹತೆ…
ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಮೂರು ದಿನ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, , ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ಯಾದಗಿರಿ, ಬಳ್ಳಾರಿ, , ಚಾಮರಾಜನಗರದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಮೈಸೂರು, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಮೊದಲ 3-4 ದಿನ ಕಲಬುರಗಿ, ವಿಜಯಪುರ, ರಾಯಚೂರು, ಗದಗ, ಯಾದಗಿರಿ, ಕೊಪ್ಪಳ, ಹಾವೇರಿ, ಧಾರವಾಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸುವ ಕುರಿತು ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ? ಮೇಲೆ ಓದಲಾದ (1)ರ ಏಕಕಡತದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸುಲ್ತಾನಪುರ ಹುಕ್ಕೇರಿ ತಾಲ್ಲೂಕು, ಶಾಲೆಯ ಉನ್ನತೀಕರಿಸಲು ಪ್ರಸ್ತಾವನೆ ಸಲ್ಲಿಸಿದ್ದು ಸದರಿ ಗ್ರಾಮದಿಂದ 5 ಕಿಮೀ ಒಳಗಾಗಿ ಯಾವುದೇ ಪ್ರೌಢ ಶಾಲೆಗಳು ಇರುವುದಿಲ್ಲ. ಸದರಿ ಗ್ರಾಮದಿಂದ ಸಮೀಪದ ಸರಕಾರಿ ಪ್ರೌಢ ಶಾಲೆಗಳಾದ 1) ಸರಕಾರಿ ಪ್ರೌಢ ಶಾಲೆ ಅವರಗೋಳ ರಸ್ತೆ ಮುಖಾಂತರ ಶಾಲೆಗೆ ತಲುಪಲು 7 ಕಿ ಮೀ ದೂರ ಇರುತ್ತದೆ. 2) ಸರಕಾರಿ ಪ್ರೌಢ ರಾ ಶಿರಗಾಂವ ರಸ್ತೆ ಮುಖಾಂತರ ಶಾಲೆಗೆ ತಲುಪಲು 8 ಕಿ ಮೀ ದೂರ ಇರುತ್ತದೆ. 3) ಸರಕಾರಿ ಪ್ರೌಢ ಶಾಲೆ ಬೇಳೆವಾಡ ರಸ್ತೆ ಮುಖಾಂತರ ಶಾಲೆಗೆ ತಲುಪಲು 6 ಕಿ ಮೀ ದೂರ ಇರುತ್ತದೆ. 4) ಸರಕಾರಿ ಪ್ರೌಢ ಶಾಲೆ ಮಸೂರ ಇದು 8 ಕಿ…












