Author: kannadanewsnow57

ಅನೇಕ ಧೂಮಪಾನಿಗಳು ಕೆಲಸದ ಒತ್ತಡ ಅಥವಾ ಮಾನಸಿಕ ತಳಮಳ ಉಂಟಾದಾಗ ‘ಒಂದು ದಮ್ಮು ಎಳೆದರೆ ರಿಲ್ಯಾಕ್ಸ್ ಆಗುತ್ತದೆ’ ಎಂದು ನಂಬುತ್ತಾರೆ. ಆದರೆ, ವೈಜ್ಞಾನಿಕವಾಗಿ ಈ ನಂಬಿಕೆ ಸಂಪೂರ್ಣ ಸುಳ್ಳು ಎಂಬುದು ನಿಮಗೆ ಗೊತ್ತೇ? ಈ ಕುರಿತು ಆಘಾತಕಾರಿ ಸತ್ಯಗಳು ಇಲ್ಲಿವೆ. ಧೂಮಪಾನ ಮತ್ತು ಮೆದುಳಿನ ಮೇಲೆ ಅದರ ಪ್ರಭಾವ ನಮ್ಮ ಮೆದುಳಿನಲ್ಲಿ ‘ಡೋಪಮೈನ್’ ಎಂಬ ರಾಸಾಯನಿಕ ಬಿಡುಗಡೆಯಾದಾಗ ನಮಗೆ ಸಂತೋಷ ಅಥವಾ ಹಾಯಾದ ಅನುಭವವಾಗುತ್ತದೆ. ಸಿಗರೇಟ್‌ನಲ್ಲಿರುವ ನಿಕೋಟಿನ್ ಶ್ವಾಸಕೋಶದ ಮೂಲಕ ಮೆದುಳನ್ನು ತಲುಪಿದಾಗ, ಅದು ತಾತ್ಕಾಲಿಕವಾಗಿ ಡೋಪಮೈನ್ ಅನ್ನು ಬಿಡುಗಡೆ ಮಾಡುತ್ತದೆ. ತಾತ್ಕಾಲಿಕ ಭ್ರಮೆ: ಸಿಗರೇಟ್ ಸೇದಿದ ತಕ್ಷಣ ಸಿಗುವ ಆರಾಮ ಕೇವಲ 5 ರಿಂದ 10 ನಿಮಿಷ ಮಾತ್ರ ಇರುತ್ತದೆ. ಹೆಚ್ಚುವ ಆತಂಕ: ನಿಕೋಟಿನ್ ಅಂಶ ದೇಹದಲ್ಲಿ ಕಡಿಮೆಯಾದಂತೆ, ವ್ಯಕ್ತಿಯಲ್ಲಿ ಕಿರಿಕಿರಿ ಮತ್ತು ಆತಂಕ (Anxiety) ಮತ್ತಷ್ಟು ಹೆಚ್ಚಾಗುತ್ತದೆ. ಇದನ್ನು ಸರಿಪಡಿಸಲು ವ್ಯಕ್ತಿ ಮತ್ತೆ ಸಿಗರೇಟ್ ಮೊರೆ ಹೋಗುತ್ತಾನೆ. ಇದು ಒಂದು ವಿಷವರ್ತುಲವಾಗಿ ಬದಲಾಗುತ್ತದೆ. ಆರೋಗ್ಯದ ಮೇಲೆ ಉಂಟಾಗುವ ಪರಿಣಾಮಗಳು…

Read More

ಮುಂಬೈ: ಸಂಗಾತಿಗೆ ತನ್ನ ವಾದ ಮಂಡಿಸಲು ಅಥವಾ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡದೆ, ಕೇವಲ ವಾಟ್ಸಾಪ್ ಚಾಟ್‌ಗಳಲ್ಲಿನ ಸಂಭಾಷಣೆಯನ್ನು ಆಧರಿಸಿ ಕ್ರೌರ್ಯದ ಆರೋಪ ಹೊರಿಸಿ ವಿಚ್ಛೇದನ ನೀಡಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಹಿನ್ನೆಲೆ: ನಾಸಿಕ್ ಜಿಲ್ಲಾ ಕೌಟುಂಬಿಕ ನ್ಯಾಯಾಲಯವು ಈ ಹಿಂದೆ ನೀಡಿದ್ದ ವಿಚ್ಛೇದನ ಆದೇಶವನ್ನು ರದ್ದುಗೊಳಿಸಿದ ಹೈಕೋರ್ಟ್‌ನ ನ್ಯಾಯಮೂರ್ತಿಗಳಾದ ಭಾರತಿ ಡಾಂಗ್ರೆ ಮತ್ತು ಮಂಜೂಷಾ ದೇಶಪಾಂಡೆ ಅವರ ಪೀಠವು ಈ ನಿರ್ಧಾರ ಪ್ರಕಟಿಸಿದೆ. ಏನಿದು ಘಟನೆ? ವ್ಯಕ್ತಿಯೊಬ್ಬರು ತನ್ನ ಪತ್ನಿಯ ವಿರುದ್ಧ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. “ನನ್ನ ಪತ್ನಿ ನಾಸಿಕ್‌ನಿಂದ ಪುಣೆಗೆ ಸ್ಥಳಾಂತರಗೊಂಡು ಪ್ರತ್ಯೇಕವಾಗಿ ವಾಸಿಸಬೇಕು ಎಂದು ಒತ್ತಾಯಿಸುತ್ತಿದ್ದಾಳೆ. ಅಲ್ಲದೆ ವಾಟ್ಸಾಪ್ ಚಾಟ್‌ ಗಳಲ್ಲಿ ನನ್ನ ತಾಯಿ ಮತ್ತು ತಂಗಿಯ ವಿರುದ್ಧ ಅವಹೇಳನಕಾರಿ ಕಾಮೆಂಟ್ ಮಾಡಿದ್ದಾಳೆ. ಬೆದರಿಕೆ ತಂತ್ರಗಳು, ಭಾವನಾತ್ಮಕ ಬ್ಲ್ಯಾಕ್‌ಮೇಲ್ ಮತ್ತು ಅಸಭ್ಯ ಭಾಷೆಯನ್ನು ಬಳಸಿದ್ದಾಳೆ” ಎಂದು ಆರೋಪಿಸಿದ್ದರು. ಈ ಆರೋಪಗಳನ್ನು ಪುರಸ್ಕರಿಸಿದ್ದ ಕೌಟುಂಬಿಕ ನ್ಯಾಯಾಲಯವು ವಿಚ್ಛೇದನ ಮಂಜೂರು ಮಾಡಿತ್ತು.…

Read More

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ವೃಂದದ ಒಟ್ಟು 8,157 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರ ಹಸಿರು ನಿಶಾನೆ ತೋರಿಸಿದೆ. ಈ ಕುರಿತು ಡೈರೆಕ್ಟರ್ ಜನರಲ್ ಮತ್ತು ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (DG & IGP) ಕಚೇರಿಯಿಂದ ಅಧಿಕೃತ ಸೂಚನೆ ಹೊರಡಿಸಲಾಗಿದೆ. ಹುದ್ದೆಗಳ ವಿವರ: ಒಟ್ಟು ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕೇತರ ವಿಭಾಗಗಳಾಗಿ ಈ ಕೆಳಗಿನಂತೆ ಹಂಚಿಕೆ ಮಾಡಲಾಗಿದೆ: ಹುದ್ದೆಯ ಹೆಸರು ಕಲ್ಯಾಣ ಕರ್ನಾಟಕ ಕಲ್ಯಾಣ ಕರ್ನಾಟಕೇತರ ಒಟ್ಟು ಹುದ್ದೆಗಳು ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ (Civil) 610 3500 4110 ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ (KSRP) 532 1500 2032 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (APC) 275 1375 1650 ಪೊಲೀಸ್ ಕಾನ್ಸ್‌ಟೇಬಲ್ (KSISF) 364 – 364 ಡಿಟೆಕ್ಟಿವ್ ಸಬ್ ಇನ್ಸ್‌ಪೆಕ್ಟರ್ (DSI) 05 15 20 ಮೀಸಲಾತಿ ಮತ್ತು ಹೈಕೋರ್ಟ್ ಆದೇಶ: ಪರಿಶಿಷ್ಟ ಜಾತಿ (SC) ಮತ್ತು…

Read More

ಬೆಂಗಳೂರು: ಭಾರತೀಯ ಶಿಕ್ಷಣ ಪದ್ಧತಿಯಲ್ಲಿ ಮಗುವಿನ ಶೈಕ್ಷಣಿಕ ಜೀವನದ ಅಡಿಪಾಯವು ಪೂರ್ವ ಪ್ರಾಥಮಿಕ (Pre-Primary) ಹಂತದಿಂದ ಆರಂಭವಾಗುತ್ತದೆ. ಒಂದನೇ ತರಗತಿಯನ್ನು ಪ್ರವೇಶಿಸುವ ಮೊದಲು ಮಕ್ಕಳು ಎಲ್‌ಕೆಜಿ ಮತ್ತು ಯುಕೆಜಿ ಎಂಬ ಎರಡು ಪ್ರಮುಖ ಹಂತಗಳನ್ನು ದಾಟಬೇಕಾಗುತ್ತದೆ. ಇವುಗಳ ಕುರಿತಾದ ಸಂಕ್ಷಿಪ್ತ ಮಾಹಿತಿ ಇಲ್ಲಿದೆ: LKG ಸಾಮಾನ್ಯವಾಗಿ 4 ವರ್ಷದ ಮಕ್ಕಳಿಗೆ ಈ ಹಂತದ ಶಿಕ್ಷಣ ನೀಡಲಾಗುತ್ತದೆ. ಇಲ್ಲಿ ಮಕ್ಕಳಿಗೆ ಪ್ರಾಥಮಿಕ ಹಂತದ ಅರಿವು ಹಾಗೂ ದೈಹಿಕ ಚಟುವಟಿಕೆಗಳ (Motor skills) ಬಗ್ಗೆ ತರಬೇತಿ ನೀಡಲಾಗುತ್ತದೆ. ಆಟವಾಡುತ್ತಾ ಕಲಿಯುವ ಮೂಲಕ ಮಕ್ಕಳಲ್ಲಿ ಜ್ಞಾನಗ್ರಹಣ ಶಕ್ತಿಯನ್ನು ಹೆಚ್ಚಿಸುವುದು ಈ ಹಂತದ ಮುಖ್ಯ ಉದ್ದೇಶ. UKG 5 ವರ್ಷದ ಮಕ್ಕಳಿಗೆ ಮೀಸಲಾದ ಈ ಹಂತವು, ಪ್ಲೇ-ಗ್ರೂಪ್ ಮತ್ತು ಔಪಚಾರಿಕ ಪ್ರಾಥಮಿಕ ಶಾಲಾ ಶಿಕ್ಷಣದ (ಒಂದನೇ ತರಗತಿ) ನಡುವಿನ ಕೊಂಡಿಯಂತೆ ಕೆಲಸ ಮಾಡುತ್ತದೆ. ಇಲ್ಲಿ ಮಕ್ಕಳಿಗೆ ಬರವಣಿಗೆ, ಓದುವುದು ಮತ್ತು ಶಿಸ್ತಿನ ಬಗ್ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಎಲ್‌ ಕೆಜಿ ಮತ್ತು ಯುಕೆಜಿಯ ಪೂರ್ಣ ರೂಪ ಏನು?…

Read More

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ವೃಂದದ ಒಟ್ಟು 8,157 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರ ಹಸಿರು ನಿಶಾನೆ ತೋರಿಸಿದೆ. ಈ ಕುರಿತು ಡೈರೆಕ್ಟರ್ ಜನರಲ್ ಮತ್ತು ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (DG & IGP) ಕಚೇರಿಯಿಂದ ಅಧಿಕೃತ ಸೂಚನೆ ಹೊರಡಿಸಲಾಗಿದೆ. ಹುದ್ದೆಗಳ ವಿವರ: ಒಟ್ಟು ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕೇತರ ವಿಭಾಗಗಳಾಗಿ ಈ ಕೆಳಗಿನಂತೆ ಹಂಚಿಕೆ ಮಾಡಲಾಗಿದೆ: ಹುದ್ದೆಯ ಹೆಸರು ಕಲ್ಯಾಣ ಕರ್ನಾಟಕ ಕಲ್ಯಾಣ ಕರ್ನಾಟಕೇತರ ಒಟ್ಟು ಹುದ್ದೆಗಳು ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ (Civil) 610 3500 4110 ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ (KSRP) 532 1500 2032 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (APC) 275 1375 1650 ಪೊಲೀಸ್ ಕಾನ್ಸ್‌ಟೇಬಲ್ (KSISF) 364 – 364 ಡಿಟೆಕ್ಟಿವ್ ಸಬ್ ಇನ್ಸ್‌ಪೆಕ್ಟರ್ (DSI) 05 15 20 ಮೀಸಲಾತಿ ಮತ್ತು ಹೈಕೋರ್ಟ್ ಆದೇಶ: ಪರಿಶಿಷ್ಟ ಜಾತಿ (SC) ಮತ್ತು…

Read More

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ, ಅಂದರೆ ಮಾರ್ಚ್ 6, 2026 ರಂದು ರಾಜ್ಯದ ಆಯವ್ಯಯವನ್ನು (Budget) ಮಂಡಿಸಲಿದ್ದಾರೆ. ಇದು ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ ದಾಖಲೆಯ 17ನೇ ಬಜೆಟ್ ಆಗಿದ್ದು, ಇಡೀ ರಾಜ್ಯದ ಕಣ್ಣು ಈ ಬಜೆಟ್ ಮೇಲಿದೆ. ಬಜೆಟ್‌ ನ ಪ್ರಮುಖ ಅಂಶಗಳು ದಾಖಲೆಯ 17ನೇ ಬಜೆಟ್: ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಅವರು ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ದಾಖಲೆಯನ್ನು ಮತ್ತಷ್ಟು ವಿಸ್ತರಿಸಲಿದ್ದಾರೆ. ಬಜೆಟ್ ಗಾತ್ರ: ಈ ಬಾರಿಯ ಬಜೆಟ್ ಸುಮಾರು 4.30 ಲಕ್ಷ ಕೋಟಿಯಿಂದ 4.5 ಲಕ್ಷ ಕೋಟಿ ರೂಪಾಯಿಗಳ ಬೃಹತ್ ಮೊತ್ತವನ್ನು ತಲುಪುವ ನಿರೀಕ್ಷೆಯಿದೆ. ಕಳೆದ ವರ್ಷ ಇದು 4.09 ಲಕ್ಷ ಕೋಟಿ ರೂಪಾಯಿ ಆಗಿತ್ತು. ಪಂಚ ಗ್ಯಾರಂಟಿಗಳಿಗೆ ಆದ್ಯತೆ: ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳ ಮುಂದುವರಿಕೆಗೆ ಹೆಚ್ಚಿನ ಅನುದಾನ ಮೀಸಲಿಡುವ ಸಾಧ್ಯತೆಯಿದೆ. ಅಭಿವೃದ್ಧಿ ಸವಾಲು: ಒಂದು ಕಡೆ ಗ್ಯಾರಂಟಿ ಯೋಜನೆಗಳು ಮತ್ತು ಇನ್ನೊಂದು ಕಡೆ ಮೂಲಸೌಕರ್ಯ ಅಭಿವೃದ್ಧಿಗೆ ಹಣ ಹೊಂದಿಸುವುದು ಸಿಎಂ ಅವರಿಗೆ…

Read More

ರಾಣೇಬೆನ್ನೂರು: ಹೋಳಿ ಹಬ್ಬದ ಅಂಗವಾಗಿ ನಗರದಲ್ಲಿ ಪ್ರತಿ ವರ್ಷದಂತೆ ಆಯೋಜಿಸಲಾಗಿದ್ದ ‘ಜೀವಂತ ರತಿ-ಮನ್ಮಥರನ್ನು ನಗಿಸುವ ಸ್ಪರ್ಧೆ’ ಈ ಬಾರಿಯೂ ತೀವ್ರ ಕುತೂಹಲ ಕೆರಳಿಸಿತ್ತು. ಆದರೆ, ರತಿ-ಮನ್ಮಥ ವೇಷಧಾರಿಗಳು ನಗದೆ ತಮ್ಮ 66 ವರ್ಷಗಳ ಸುದೀರ್ಘ ಪರಂಪರೆಯನ್ನು ಯಶಸ್ವಿಯಾಗಿ ಮುಂದುವರಿಸಿದ್ದಾರೆ. ಇದರಿಂದಾಗಿ ನಗಿಸಿದವರಿಗೆ ನೀಡಲು ಘೋಷಿಸಲಾಗಿದ್ದ ₹13 ಲಕ್ಷ ನಗದು ಬಹುಮಾನ ಸಮಿತಿಯ ಬಳಿಯೇ ಉಳಿದುಕೊಂಡಿದೆ. ಒಕುಳಿ ಹಬ್ಬದ ಮುನ್ನಾದಿನವಾದ ಮಂಗಳವಾರ ನಗರದ ದೊಡ್ಡಪೇಟೆಯ ರಾಮಲಿಂಗೇಶ್ವರ ದೇಗುಲದ ಬಳಿ ವಿವಿಧ ಸಮಿತಿಗಳಿಂದ ಜೀವಂತ ರತಿ-ಮನ್ಮಥರನ್ನು ಕೂರಿಸಲಾಗಿತ್ತು. ಸಾರ್ವಜನಿಕರು ಇವರನ್ನು ನಗಿಸಲು ನಾನಾ ತರಹದ ಕಸರತ್ತುಗಳನ್ನು ನಡೆಸಿದರು. ಆದರೆ ವೇಷಧಾರಿಗಳು ಕಿಂಚಿತ್ತೂ ನಗದೆ ಗಂಭೀರವಾಗಿಯೇ ಉಳಿದರು. ಬದಲಿಗೆ ನಗಿಸಲು ಹೋದವರೇ ಹಾಸ್ಯಕ್ಕೀಡಾದ ಪ್ರಸಂಗಗಳು ಕಂಡುಬಂದವು. ನನ್ನ ಮದುವೆಗೆ ಬಂಗಾರ ಖರೀದಿಸಬೇಕಿದೆ, ನೀವು ನಕ್ಕರೆ ನಮಗೆ ಆರ್ಥಿಕ ಸಹಾಯವಾಗುತ್ತದೆ, ದಯವಿಟ್ಟು ನಕ್ಕುಬಿಡಿ” ಎಂದು ಯುವತಿಯೊಬ್ಬಳು ಪರಿಪರಿಯಾಗಿ ಬೇಡಿಕೊಂಡರೂ ರತಿ-ಮನ್ಮಥರು ಮಾತ್ರ ಮೌನ ಮುರಿಯಲಿಲ್ಲ.ಹೀಗಾಗಿ ಈ ಬಾರಿಯ ‘ಹೋಳಿ ಬಂಪರ್’ ಮೊತ್ತವಾದ ₹13 ಲಕ್ಷ ಯಾರ ಪಾಲೂ…

Read More

ಕೊಲಂಬೊ: ಹಿಂದೂ ಮಹಾಸಾಗರದಲ್ಲಿ ತೀವ್ರ ಉದ್ವಿಗ್ನತೆ ಸೃಷ್ಟಿಸುವ ಘಟನೆಯೊಂದರಲ್ಲಿ, ಅಮೆರಿಕಾದ ಜಲಾಂತರ್ಗಾಮಿ ದಾಳಿಗೆ ಇರಾನ್‌ ನ ಯುದ್ಧನೌಕೆಯೊಂದು ಸಮುದ್ರದಲ್ಲಿ ಮುಳುಗಿದೆ. ಈ ಭೀಕರ ಘಟನೆಯಲ್ಲಿ 87 ಮಂದಿ ಸಾವನ್ನಪ್ಪಿದ್ದು, ಶ್ರೀಲಂಕಾ ನೌಕಾಪಡೆಯು 32 ನಾವಿಕರನ್ನು ಯಶಸ್ವಿಯಾಗಿ ರಕ್ಷಿಸಿದೆ. ಅಮೆರಿಕಾದ ಜಲಾಂತರ್ಗಾಮಿ ನೌಕೆಯು ಇರಾನ್ ಯುದ್ಧನೌಕೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ ಎಂದು ವರದಿಯಾಗಿದೆ. ದಾಳಿಯ ತೀವ್ರತೆಗೆ ನೌಕೆಯಲ್ಲಿದ್ದ 87 ನಾವಿಕರು ಮೃತಪಟ್ಟಿದ್ದು, ಅವರ ಮೃತದೇಹಗಳನ್ನು ಪತ್ತೆಹಚ್ಚಲಾಗಿದೆ. ರಕ್ಷಣಾ ಕಾರ್ಯ: ಘಟನಾ ಸ್ಥಳಕ್ಕೆ ಧಾವಿಸಿದ ಶ್ರೀಲಂಕಾ ನೌಕಾಪಡೆಯು ಸಮುದ್ರದಲ್ಲಿ ಮುಳುಗುತ್ತಿದ್ದ 32 ನಾವಿಕರನ್ನು ಜೀವಂತವಾಗಿ ರಕ್ಷಿಸಿದೆ. ರಕ್ಷಿಸಲ್ಪಟ್ಟವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ. ಈ ದಾಳಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ಈ ಪ್ರದೇಶದಲ್ಲಿ ಇರಾನ್ ಮತ್ತು ಅಮೆರಿಕ ನಡುವಿನ ಹೆಚ್ಚುತ್ತಿರುವ ಸೇನಾ ಪೈಪೋಟಿ ಇದಕ್ಕೆ ಕಾರಣ ಎನ್ನಲಾಗುತ್ತಿದೆ. https://twitter.com/WhiteHouse/status/2029204495297626207?ref_src=twsrc%5Etfw%7Ctwcamp%5Etweetembed%7Ctwterm%5E2029204495297626207%7Ctwgr%5Ed63a4772a2ce87a7874f09fbd323c97a49c6cdfe%7Ctwcon%5Es1_c10&ref_url=https%3A%2F%2Fkannadadunia.com%2Fus-releases-video-of-iranian-warship-sinking-off-sri-lanka-coast-after-submarine-attack%2F

Read More

ಬೆಂಗಳೂರು: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಕಾರ್ಮೋಡಗಳು ಕೇವಲ ಮಧ್ಯಪ್ರಾಚ್ಯವನ್ನಷ್ಟೇ ಅಲ್ಲ, ಕರ್ನಾಟಕದ ವಾಹನ ಸವಾರರನ್ನೂ ಬೆಚ್ಚಿಬೀಳಿಸಿವೆ. ಹೌದು, ಯುದ್ಧದ ಕಾರಣದಿಂದಾಗಿ ಭಾರತದಲ್ಲಿ ತೈಲ ಪೂರೈಕೆ ಸಂಪೂರ್ಣ ಸ್ಥಗಿತಗೊಳ್ಳಲಿದೆ ಮತ್ತು ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರಲಿದೆ ಎಂಬ ಬಲವಾದ ವದಂತಿಯೊಂದು ರಾಜ್ಯಾದ್ಯಂತ ಕಾಳ್ಗಿಚ್ಚಿನಂತೆ ಹಬ್ಬಿದೆ. ಇದರ ಪರಿಣಾಮವಾಗಿ, ಬೆಲೆ ಏರಿಕೆ ಅಥವಾ ಪೂರೈಕೆ ಸ್ಥಗಿತದ ಭೀತಿಯಿಂದ ರಾಜ್ಯದ ನಾನಾ ಭಾಗಗಳಲ್ಲಿ ಜನತೆ ಪೆಟ್ರೋಲ್ ಬಂಕ್‌ಗಳತ್ತ ದೌಡಾಯಿಸಿದ್ದು, ಭಾರೀ ನೂಕುನುಗ್ಗಲು ಉಂಟಾಗಿದೆ. ಬಂಕ್‌ಗಳ ಮುಂದೆ ವಾಹನಗಳ ಉದ್ದನೆಯ ಸಾಲು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಒಂದೇ ಒಂದು ಸುಳ್ಳು ಸಂದೇಶ ಎಷ್ಟರ ಮಟ್ಟಿಗೆ ಪ್ರಭಾವ ಬೀರಿದೆ ಎಂದರೆ, ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳು ಮತ್ತು ಗ್ರಾಮೀಣ ಭಾಗಗಳ ಪೆಟ್ರೋಲ್ ಪಂಪ್‌ಗಳಲ್ಲಿ ವಾಹನ ಸವಾರರು ಕಿಲೋಮೀಟರ್‌ಗಟ್ಟಲೆ ಸಾಲುಗಟ್ಟಿ ನಿಂತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ತಮ್ಮ ದ್ವಿಚಕ್ರ, ನಾಲ್ಕು ಚಕ್ರದ ವಾಹನಗಳ ಟ್ಯಾಂಕ್ ಫುಲ್ ಮಾಡಿಸುತ್ತಿರುವುದು ಮಾತ್ರವಲ್ಲದೆ, ಮನೆಗಳಿಂದ ದೊಡ್ಡ ದೊಡ್ಡ ಪ್ಲಾಸ್ಟಿಕ್ ಕ್ಯಾನ್‌ಗಳು, ಬಾಟಲಿಗಳನ್ನು…

Read More

ಬೆಂಗಳೂರು: ರಾಜ್ಯದ ವಿದ್ಯುತ್ ಗ್ರಾಹಕರಿಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (KERC) ದರ ಏರಿಕೆಯ ಬಿಸಿ ಮುಟ್ಟಿಸಿದೆ. 2025-26ನೇ ಹಣಕಾಸು ವರ್ಷಕ್ಕೆ ಅನ್ವಯವಾಗುವಂತೆ ವಾಣಿಜ್ಯ ಮತ್ತು ಕೈಗಾರಿಕಾ ಬಳಕೆದಾರರ ವಿದ್ಯುತ್ ದರವನ್ನು ಹೆಚ್ಚಿಸಿ KERC ಆದೇಶ ಹೊರಡಿಸಿದೆ. ಎಸ್ಕಾಂಗಳು (ESCOMs) ಅನುಭವಿಸುತ್ತಿರುವ ಭಾರಿ ಆರ್ಥಿಕ ಕೊರತೆಯನ್ನು ನೀಗಿಸುವ ಸಲುವಾಗಿ ಈ ಕ್ರಮ ಅನಿವಾರ್ಯವಾಗಿದೆ ಎಂದು ಆಯೋಗ ಸಮರ್ಥಿಸಿಕೊಂಡಿದೆ. ವಾಣಿಜ್ಯ ಮತ್ತು ಕೈಗಾರಿಕೆಗಳಿಗೆ ದರ ಏರಿಕೆ: ರಾಜ್ಯದ ಆಯ್ದ ವಾಣಿಜ್ಯ ಮತ್ತು ಕೈಗಾರಿಕಾ ಗ್ರಾಹಕರಿಗೆ ವಿದ್ಯುತ್ ದರವನ್ನು ಹೆಚ್ಚಿಸಲಾಗಿದೆ. ಸುಮಾರು 1,254.88 ಕೋಟಿ ರೂ.ಗಳ ಬೃಹತ್ ಆದಾಯ ಕೊರತೆಯನ್ನು ಭರ್ತಿ ಮಾಡಲು ಆಯೋಗವು ಈ ನಿರ್ಧಾರ ಕೈಗೊಂಡಿದೆ. ಪರಿಷ್ಕೃತ ದರಗಳ ವಿವರ ಈ ಕೆಳಗಿನಂತಿದೆ: ವಾಣಿಜ್ಯ ಬಳಕೆ (LT-3A): ಸ್ಥಿರ ಶುಲ್ಕವನ್ನು ಪ್ರತಿ ಕಿಲೋವ್ಯಾಟ್‌ಗೆ 235 ರೂ.ಗೆ ಮತ್ತು ಇಂಧನ ಶುಲ್ಕವನ್ನು ಪ್ರತಿ ಯೂನಿಟ್‌ಗೆ 7.10 ರೂ.ಗೆ ನಿಗದಿಪಡಿಸಲಾಗಿದೆ. ಕೈಗಾರಿಕೆಗಳು (LT-5): ಪ್ರತಿ ಯೂನಿಟ್ ಇಂಧನ ಶುಲ್ಕ 5.20 ರೂ.ಗೆ ನಿಗದಿಪಡಿಸಲಾಗಿದೆ. ಹೈ…

Read More