Subscribe to Updates
Get the latest creative news from FooBar about art, design and business.
Author: kannadanewsnow57
ಇತ್ತೀಚಿನ ದಿನಗಳಲ್ಲಿ ಅನೇಕ ಚಿಕ್ಕ ಮಕ್ಕಳು ಮೊಬೈಲ್ ಫೋನ್ಗಳಿಗೆ ವ್ಯಸನಿಯಾಗಿದ್ದಾರೆ ಮತ್ತು ಮೊಬೈಲ್ ಇಲ್ಲದೆ ಅವರು ಸರಿಯಾಗಿ ಊಟ ಮಾಡಲು ಸಹ ಸಾಧ್ಯವಿಲ್ಲ.ಅವರಿಗೆ ಪ್ರತಿಯೊಂದು ಕೆಲಸಕ್ಕೂ ಮೊಬೈಲ್ ಬೇಕು. ಆದರೆ ಮಕ್ಕಳು ತಿಳಿಯದೆಯೇ ತಮ್ಮ ಪೋಷಕರಿಂದ ಮೊಬೈಲ್ ಫೋನ್ ಬಳಸುವ ಅಭ್ಯಾಸವನ್ನು ಪಡೆಯುತ್ತಾರೆ ಎಂಬುದೂ ಸತ್ಯ. ಈ ಅಭ್ಯಾಸ ಮಕ್ಕಳ ಜೀವನವನ್ನು ಹಾಳುಮಾಡಬಹುದು. ಅತಿಯಾದ ಮೊಬೈಲ್ ಬಳಕೆಯಿಂದಾಗಿ ಮಕ್ಕಳು ತಮ್ಮ ಸುತ್ತ ಏನು ನಡೆಯುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಇದೇ ಅಭ್ಯಾಸ ಅವರನ್ನು ತಪ್ಪು ದಾರಿಗೆ ಕೊಂಡೊಯ್ಯುತ್ತದೆ. ಈ ಸಮಯದಲ್ಲಿ, ಸಾಮಾಜಿಕ ಮಾಧ್ಯಮದಲ್ಲಿ ಆಘಾತಕಾರಿ ವೀಡಿಯೊವೊಂದು ವೈರಲ್ ಆಗುತ್ತಿದೆ, ಇದರಲ್ಲಿ ಮಗುವೊಂದು ಮೊಬೈಲ್ ನೋಡುವಾಗ ವಿಚಿತ್ರವಾಗಿ ವರ್ತಿಸುತ್ತಿರುವುದು ಕಂಡುಬಂದಿದೆ. ನಿಮ್ಮ ಮಕ್ಕಳನ್ನು ಮೊಬೈಲ್ ನಿಂದ ದೂರವಿಡಿ, ಈ ಮಗು ಮೊಬೈಲ್ ಗೆ ಹೇಗೆ ಅಡಿಟಿಪ್ಪಣಿ ಮಾಡಿಕೊಂಡಿದೆ ನೋಡಿ ಎಂದು ನೆಟ್ಟಿಗರು ಪ್ರತಿಕ್ರಿಯೆ ನೀಡಿದ್ದಾರೆ.
ಶ್ರೀನಗರ : ಪಹಲ್ಗಾಮ್ ದಾಳಿಯ ಬಳಿಕ ಪಾಕಿಸ್ತಾನ ಸೇನೆಯು ಕದನ ವಿರಾಮ ಉಲ್ಲಂಘಿಸುತ್ತಿದ್ದು, ತಡರಾತ್ರಿ ಜಮ್ಮು-ಕಾಶ್ಮೀರದ ಹಲವಡೆ ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಸೇನೆಯ ತಕ್ಕ ಪ್ರತ್ಯುತ್ತರ ನೀಡಿದೆ. ಈ ಕುರಿತು ಭಾರತೀಯ ಸೇನೆ ಮಾಹಿತಿ ಹಂಚಿಕೊಂಡಿದ್ದು, 2025 ರ ಮೇ 03–04 ರ ರಾತ್ರಿ, ಪಾಕಿಸ್ತಾನ ಸೇನಾ ಠಾಣೆಗಳು ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ, ಬಾರಾಮುಲ್ಲಾ, ಪೂಂಚ್, ರಾಜೌರಿ, ಮೆಂಧರ್, ನೌಶೇರಾ, ಸುಂದರ್ಬಾನಿ ಮತ್ತು ಅಖ್ನೂರ್ ಎದುರು ಪ್ರದೇಶಗಳಲ್ಲಿ ಎಲ್ಒಸಿಯಾದ್ಯಂತ ಅಪ್ರಚೋದಿತ ಸಣ್ಣ ಶಸ್ತ್ರಾಸ್ತ್ರಗಳ ಗುಂಡಿನ ದಾಳಿ ನಡೆಸಿದವು. ಭಾರತೀಯ ಸೇನೆಯು ತಕ್ಷಣ ಮತ್ತು ಪ್ರಮಾಣಾನುಗುಣವಾಗಿ ಪ್ರತಿಕ್ರಿಯಿಸಿತು ಎಂದು ತಿಳಿಸಿದೆ. https://twitter.com/ANI/status/1918841878578934090?ref_src=twsrc%5Egoogle%7Ctwcamp%5Eserp%7Ctwgr%5Etweet
ಬೆಂಗಳೂರು: ರಾಜ್ಯದಲ್ಲಿ ಹೊಸ ಪಡಿತರ ಚೀಟಿ ಪಡೆಯಲು ಆಹಾರ ನಾಗರೀಕ ಸರಬರಾಜು ಇಲಾಖೆ ಅರ್ಜಿ ಆಹ್ವಾನಿಸಿದೆ. ಎಪಿಎಲ್ ಮತ್ತು ಬಿಪಿಲ್ ಕಾರ್ಡ್ ಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಮೇ.5 ರ ನಾಳೆ ಮಧ್ಯಾಹ್ನ 1 ರಿಂದ 3 ರ ವರೆಗು, ahara.kar.nic.inನಲ್ಲಿ ಅಥವಾ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ. ವೆಬ್ಸೈಟ್ ahara.kar.nic.in ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಅರ್ಹರು ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್ಗಳಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಬಿಪಿಎಲ್ ಕಾರ್ಡ್ ಅರ್ಜಿಗೆ ಸಮಯ ನಿಗದಿ ಮಾಡಿದ್ದು, ಸಮಯ ಮಧ್ಯಾಹ್ನ 1 ರಿಂದ 3 ರ ವರೆಗೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. APL ಹಾಗೂ BPL ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗಿದ್ದು, 01-05-2025 ರಿಂದ 05-05-2025 ರವರೆಗೆ ಸಮಯ ಮಧ್ಯಾಹ್ನ 1 ರಿಂದ 3 ರ ವರೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಹೊಸ ಬಿಪಿಎಲ್, ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ಅರ್ಹತೆ…
ಬೆಂಗಳೂರು : ಹೈಕೋರ್ಟ್ಗೆ ಮೇ.5 ರ ನಾಳೆಯಿಂದ ಮೇ 31ರವರೆಗೆ ಬೇಸಿಗೆ ರಜೆ ಇರಲಿದ್ದು, ಕೋರ್ಟ್ ಕಲಾಪಗಳು ಜೂ.2ರಿಂದ ಪುನರಾರಂಭವಾಗಲಿವೆ. ರಜೆ ಅವಧಿಯಲ್ಲಿ ತುರ್ತು ಅರ್ಜಿಗಳ ವಿಚಾರಣೆಗೆ ಬೆಂಗಳೂರಿನ ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರಗಿ ಪೀಠಗಳಲ್ಲಿ ಮೇ 6, 8, 13, 15, 20, 22, 27 ಮತ್ತು 29ರಂದು ರಜಾಕಾಲದ ಪೀಠಗಳು ಕಾರ್ಯ ನಿರ್ವಹಿಸಲಿವೆ. ರಜೆ ಅವಧಿಯಲ್ಲಿ ಬೆಂಗಳೂರು ಮತ್ತು ಧಾರವಾಡ ಪೀಠಗಳು ಬೆಳಗ್ಗೆ 10.30ರಿಂದ ಕಲಾಪ ಆರಂಭಿಸಿದರೆ, ಕಲಬುರಗಿ ಪೀಠ ಬೆಳಿಗ್ಗೆ 8ಕ್ಕೆ ಕಾರ್ಯಾರಂಭಗೊಳ್ಳಲಿದೆ. ಈ ಅವಧಿಯಲ್ಲಿ ಕಾರ್ಯ ನಿರ್ವಹಿಸುವ ರಜಾಪೀಠಗಳಿಗೆ ನ್ಯಾಯಮೂರ್ತಿಗಳನ್ನು ನಿಯೋಜಿಸಿ ಸಿಜೆ ಸೂಚನೆ ಮೇರೆಗೆ ರಿಜಿಸ್ಟ್ರಾರ್ ಜನರಲ್ ಆದೇಶ ಹೊರಡಿಸಿದ್ದಾರೆ. ರಜೆ ಅವಧಿ ಯಲ್ಲಿ ಯಾವುದೇ ಮೇಲ್ಮನವಿ ಹಾಗೂ ಹಳೆಯ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಳ್ಳುವುದಿಲ್ಲ. ಕೇವಲ ತುರ್ತು ಅರ್ಜಿಗಳನ್ನು ಮಾತ್ರ ವಿಚಾರಣೆಗೆ ಪರಿಗಣಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರಾಜ್ಯ ಸರಕಾರಿ ನೌಕರರ ಮತ್ತು ಅವಲಂಬಿತ ಕುಟುಂಬ ಸದಸ್ಯರ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ವಿವಿಧ ಬ್ಯಾಂಕುಗಳಲ್ಲಿ ಒದಗಿಸುವ “ಸಂಬಳ ಪ್ಯಾಕೇಜ್”ಗಳ ಅಡಿಯಲ್ಲಿ ಖಾತೆಗಳನ್ನು ತೆರೆಯುವುದು ಮತ್ತು ಆಯ್ಕೆ ಮಾಡಿಕೊಳ್ಳುವುದನ್ನು ಎಲ್ಲಾ ಅಧಿಕಾರಿ, ನೌಕರರಿಗೆ ಕಡ್ಡಾಯಗೊಳಿಸಿ, ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ. ಈ ಕುರಿತು ಸುತ್ತೋಲೆ ಹೊರಡಿಸಿರುವ ಅವರು ಜಿಲ್ಲೆಯಲ್ಲಿನ ಪ್ರತಿ ಸರಕಾರಿ ನೌಕರ ಸಂಬಳ ಪ್ಯಾಕೇಜ್ ಖಾತೆ ಹೊಂದಿ, ಅದರ ಪ್ರಯೋಜನ ಪಡೆಯಬೇಕು. ಆದ್ದರಿಂದ ಜಿಲ್ಲೆಯ ಎಲ್ಲ ಇಲಾಖೆಗಳು ಜಿಲ್ಲಾ ಮುಖ್ಯಸ್ಥರು ತಮ್ಮ ಇಲಾಖೆಯ ಜಿಲ್ಲಾ, ತಾಲೂಕು, ಗ್ರಾಮಮಟ್ಟದಲ್ಲಿರುವ ಡಿ.ಡಿ.ಓ ಗಳ ಮೂಲಕ ಪ್ರತಿ ನೌಕರನ ವೇತನ ಪಾವತಿ ಖಾತೆ ಸಂಬಳ ಪ್ಯಾಕೇಜ್ ಖಾತೆ ಆಗಿರುವದನ್ನು ಖಚಿತಪಡಿಸಿಕೊಳ್ಳಬೇಕು. ಒಂದು ವೇಳೆ ಅವರ ವೇತನ ಖಾತೆಯು ಸಂಬಳ ವೇತನ ಖಾತೆ ಆಗಿರದಿದ್ದಲ್ಲಿ ತಾವೇ ಖುದ್ದು ಮುತುವರ್ಜಿ, ಜವಾಬ್ದಾರಿ ವಹಿಸಿ ಮಾಡಿಸಬೇಕು ಎಂದು ಅವರು ನಿರ್ದೇಶನ ನೀಡಿದ್ದಾರೆ. ಪ್ರತಿ ಸರಕಾರಿ ನೌಕರನಿಗೆ ಸಂಬಳ ಪ್ಯಾಕೇಜ್ ಖಾತೆ ಮತ್ತು ಪಿ.ಎಂ.ಜೆ.ಜೆ.ಬಿ.ವೈ ಹಾಗೂ…
ಚಿಕ್ಕಮಗಳೂರು : ಪಹಲ್ಗಾಮ್ ಉಗ್ರರ ದಾಳಿ, ಸುಹಾಸ್ ಹತ್ಯೆ ಖಂಡಿಸಿ ನಾಳೆ ಚಿಕ್ಕಮಗಳೂರು ಜಿಲ್ಲಾ ಬಂದ್ ಗೆ ಕರೆ ನೀಡಲಾಗಿದೆ. ಪಹಲ್ಗಾಮ್ ಉಗ್ರರ ದಾಳಿ ಹಾಗೂ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ನಾಳೆ ಚಿಕ್ಕಮಗಳೂರು ಜಿಲ್ಲಾ ಬಂದ್ ಗೆ ಬಜರಂಗದಳ, VHP ಕರೆ ನೀಡಿದೆ. ಚಿಕ್ಕಮಗಳೂರು ನಗರ ಸೇರಿದಂತೆ ಎಲ್ಲಾ 9 ತಾಲೂಕುಗಳಲ್ಲಿ ಬಂದ್ ಗೆ ಕರೆ ನೀಡಲಾಗಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ6 ಗಂಟೆಯವರೆಗೆ ಬಂದ್ ಇರಲಿದೆ. ಸ್ವಯಂಪ್ರೇರಿತವಾಗಿ ಅಂಗಡಿಗಳನ್ನು ಮುಚ್ಚುವಂತೆ ಸಂಘಟನೆಗಳು ಮನವಿ ಮಾಡಿವೆ.
ಬೆಂಗಳೂರು: ನಕ್ಸಲ್ ನಿಗ್ರಹ ಪಡೆ ಮಾದರಿಯಲ್ಲೇ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚನೆ ಮಾಡಲಾಗುತ್ತದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೋಮು ಹಿಂಸಾಚಾರ ನಿಯಂತ್ರಿಸಲು ನಕ್ಸಲ್ ನಿಗ್ರಹ ಪಡೆ ಮಾದರಿಯಲ್ಲಿ ʼಕೋಮು ಹಿಂಸೆ ನಿಗ್ರಹ ಕಾರ್ಯಪಡೆʼಯನ್ನು ರಚಿಸಲಿದ್ದೇವೆ. ಇದು ಪೊಲೀಸರ ಸಹಯೋಗದಲ್ಲಿ ಕೆಲಸ ಮಾಡಲಿದೆ. ಯಾರು ಕೋಮು ಚಟುವಟಿಕೆಯನ್ನು ನಡೆಸುತ್ತಾರೆ, ಯಾರು ಅದನ್ನು ಬೆಂಬಲಿಸುತ್ತಾರೆ, ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವ ಅಧಿಕಾರವನ್ನು ಈ ಕಾರ್ಯಪಡೆಗೆ ಒದಗಿಸುತ್ತೇವೆ ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1918655931707257165 ಮಂಗಳೂರು ಶಾಂತಿಗೆ ಬರುತ್ತಿತ್ತು. ಕಳೆದ ನಾಲ್ಕೈದು ದಿನದಿಂದ ಆದ ಘಟನೆ ಮತ್ತು ನಿನ್ನೆ ನಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದೆ. ನಾವು ಇದನ್ನು ಹೀಗೆ ಮುಂದುವರಿಯಲು ಯಾವುದೇ ಕಾರಣಕ್ಕು ಬಿಡುವುದಿಲ್ಲ. ಆರೋಪಿಗಳ ಪತ್ತೆಗಾಗಿ ಈಗಾಗಲೇ ನಾಲ್ಕು ತಂಡಗಳನ್ನು ರಚನೆ ಮಾಡಲಾಗಿದ್ದು, ಶೋಧ ನಡೆಸಿದ್ದಾರೆ. ಇನ್ನು ಮುಂದೆಯೂ ಇಂತಹ ಘಟನೆ…
ಬೆಂಗಳೂರು : ಜೂನ್ ತಿಂಗಳ ಅಂತ್ಯದೊಳಗೆ ರಾಜ್ಯದ ಎಲ್ಲಾ 3514 ಕಂದಾಯ ಗ್ರಾಮಗಳಿಗೂ ಅಂತಿಮ ಅಧಿಸೂಚನೆ ಹೊರಡಿಸಬೇಕು. ಡಿಸೆಂಬರ್ ಅಂತ್ಯದೊಳಗೆ ಎಲ್ಲರಿಗೂ ಹಕ್ಕುಪತ್ರ ನೀಡುವ ಮೂಲಕ ಬಡವರ ಕೆಲಸವನ್ನು ಈ ವರ್ಷದೊಳಗೆ ಮುಗಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲಾ ಜಿಲ್ಲಾಧಿಕಾರಿಗಳಿಗೂ ಇಂದು ಗಡುವು ನಿಗದಿಗೊಳಿಸಿದ್ದಾರೆ. ಶನಿವಾರ ವಿಕಾಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಸಭೆ ನಡೆಸಿ ಸೂಚನೆ ನೀಡಿದ ಅವರು, “ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವ ಕಡು ಬಡವರಿಗೆ ಕಂದಾಯ ಗ್ರಾಮಗಳನ್ನು ರಚಿಸಿ ಶಾಶ್ವತ ಪರಿಹಾರ ನೀಡಬೇಕು ಎಂಬ ಉದ್ದೇಶದಿಂದಲೇ 2017 ರಲ್ಲಿ ಕಾನೂನಿಗೆ ತಿದ್ದುಪಡಿ ತರಲಾಗಿತ್ತು. ಆದರೆ ಅನುಷ್ಠಾನ ಈವರೆಗೆ ಪೂರ್ಣಗೊಳ್ಳದಿರುವುದು ದುರಾದೃಷ್ಟ. ಈ ಹಿಂದೆ ಹಲವರಿಗೆ ಹಕ್ಕುಪತ್ರ ನೀಡಿದ್ದರೂ, ಇನ್ನೂ ಆಗಬೇಕಾದ ಕೆಲಸ ಸಾಕಷ್ಟು ಬಾಕಿ ಇದೆ” ಎಂದು ವಿಷಾದಿಸಿದರು. “ಪ್ರಸ್ತುತ ಅಂಕಿ ಅಂಶಗಳ ಪ್ರಕಾರ ರಾಜ್ಯಾದ್ಯಂತ 3,514 ಕಂದಾಯ ಗ್ರಾಮಗಳಿದ್ದು, ಈವರೆಗೆ 2600 ಕಂದಾಯ ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಕಳೆದ ಸರ್ಕಾರದ…
ಬೆಂಗಳೂರು : ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲು ಕಲ್ಪಿಸುವ ಸಲುವಾಗಿ ದತ್ತಾಂಶ ಸಂಗ್ರಹ ಉದ್ದೇಶದೊಂದಿಗೆ ನಿವೃತ್ತ ನ್ಯಾ| ಎಚ್.ಎನ್ ನಾಗಮೋಹನ್ ದಾಸ್ ನೇತೃತ್ವದ ಆಯೋಗ ಸೋಮವಾರದಿಂದ ಸಮೀಕ್ಷೆ ಆರಂಭಿಸಲಿದೆ. ಗೌರವಾನ್ವಿತ ನ್ಯಾಯಮೂರ್ತಿಗಳಾದ ಶ್ರೀ ಹೆಚ್ ಎನ್ ನಾಗಮೋಹನ ದಾಸ್ ಇವರ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಕುರಿತು ದತ್ತಾಂಶ ಸಂಗ್ರಹಿಸಲು ಸರ್ಕಾರದಿಂದ ನಡೆಸಲು ಉದ್ದೇಶಿಸಿರುವ ಸಮೀಕ್ಷಾ ಕಾರ್ಯವನ್ನು ಸರ್ಕಾರದ ಅಗತ್ಯ ಕಾರ್ಯವೆಂದು ಪರಿಗಣಿಸಿ, ಕರಾರುವಕ್ಕಾದ ಪ್ರಮಾಣೀಕೃತ ಮಾಹಿತಿಯನ್ನು ಪಡೆಯುವ ಸಲುವಾಗಿ ಸಮೀಕ್ಷಾ ಕಾರ್ಯಕ್ಕೆ ಶಿಕ್ಷಕರನ್ನು ಗಣತಿದಾರರನ್ನಾಗಿ (Enumerators) ಗುರುತಿಸಲು ಹಾಗೂ ಅದರೊಂದಿಗೆ ೫.10 ರಷ್ಟು ಶಿಕ್ಷಕರನ್ನು ಹೆಚ್ಚುವರಿಯಾಗಿ ಕಾಯ್ದಿರಿಸಲು ಹಾಗೂ 10 ರಿಂದ 12 ಗಣತಿದಾರರಿಗೆ ಓರ್ವ ಮೇಲ್ವಿಚಾರಕರನ್ನು ಗುರುತಿಸಲು ಆದೇಶಿಸಿದ. ಮುಂದುವರೆದು, ಬೆಂಗಳೂರು ಮತ್ತು ಮೈಸೂರು ವಿಭಾಗಗಳಿಗೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರು ನೋಡಲ್ ಅಧಿಕಾರಿಯಾಗಿದ್ದು, ಈ ಕುರಿತು ಸಂಪೂರ್ಣ ಮೇಲ್ವಿಚಾರಣೆ ಮತ್ತು ಮಾರ್ಗದರ್ಶನ ಮಾಡತಕ್ಕದ್ದು ಮತ್ತು ಸಂಬಂಧಪಟ್ಟ ಜಿಲ್ಲಾಧಿಕಾರಿಗಳು/ಆಯುಕ್ತರು. ಬೃಹತ್…
ಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ರಾಜ್ಯದಲ್ಲಿ 19,000 ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಒಳ ಮೀಸಲಾತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ವರದಿ ನೀಡಿದ ಬಳಿಕ 19 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಹೇಳಿದ್ದಾರೆ. ರಾಜ್ಯದ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಿಗೆ 5000 ಶಿಕ್ಷಕರು, ಉಳಿದ ಭಾಗದಲ್ಲಿ 5000 ಸೇರಿ ಒಟ್ಟು 10 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವುದಾಗಿ ಈಗಾಗಲೇ ಬಜೆಟ್ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಇದರ ಜೊತೆಗೆ ಇನ್ನೂ ಒಂಬತ್ತು ಹುದ್ದೆಗಳು ಸೇರಿ 19 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಉದ್ದೇಶವಿದೆ. ನಾಗಮೋಹನದಾಸ್ ಸಮಿತಿ ವರದಿ ಬಂದ ಬಳಿಕ ಈ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.












