Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಪ್ರಸಕ್ತ 2025ನೇ ಸಾಲಿನ ನೀಟ್-ಯುಜಿ ಪರೀಕ್ಷೆಯು ಮೇ 4ರ ಇಂದು ಮಧ್ಯಾಹ್ನ 2ರಿಂದ ಸಂಜೆ 5ರ ವರೆಗೆ ರಾಜ್ಯದ ಒಟ್ಟು 381 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ರಾಜ್ಯದಲ್ಲಿ 1.49 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. 381 ಪರೀಕ್ಷಾ ಕೇಂದ್ರಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆವರೆಗೆ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30ರ ಅವಧಿ ಯಲ್ಲಿ ವಿದ್ಯಾರ್ಥಿಗಳ ಹಾಜರಾತಿಗೆ ಅವಕಾಶ ಇರಲಿದೆ. ವಿದ್ಯಾರ್ಥಿಗಳು ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಲ್ಪಟ್ಟಿ ರುವ ಗುರುತಿನ ಚೀಟಿ, ಆಧಾರ್ ಕಾರ್ಡ್, ಪಾನ್ ಕಾರ್ಡ್, ಡಿಎಲ್, ಮತದಾರರ ಗುರುತಿನ ಚೀಟಿ ಅಥವಾ ಇತರೆ ಯಾವುದಾದರೂ ಅಂಗೀಕೃತ ಗುರುತಿನ ಚೀಟಿ, ಎರಡು ಪಾಸ್ ಪೋರ್ಟ್ ಅಳತೆಯ ಫೋಟೊಗ ಳೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗ ಬೇಕು. ಪೊಲೀಸ್ ಸಿಬ್ಬಂದಿ ವತಿಯಿಂದ ವಿದ್ಯಾರ್ಥಿಗಳ ತಪಾಸಣೆ ನಡೆಯಲಿದೆ. ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋ ಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿದ್ದು, ವಿದ್ಯಾರ್ಥಿಗಳು ಪ್ರವೇಶಾತಿ ಪತ್ರದಲ್ಲಿ…
BREAKING : ಗೋವಾದಲ್ಲಿ ಜಾತ್ರೋತ್ಸವದ ವೇಳೆ ಕಾಲ್ತುಳಿತದಲ್ಲಿ 7 ಮಂದಿ ಸಾವು : ಭಯಾನಕ ವಿಡಿಯೋ ವೈರಲ್ | WATCH VIDEO
ಪಣಜಿ: ಗೋವಾದ ಶಿರ್ಗಾವೊದ ಶ್ರೀ ಲೈರೈ ದೇವಿಯ ದೇವಾಲಯದ ಉತ್ಸವದಲ್ಲಿ ಕಾಲ್ತುಳಿತಕ್ಕೆ ಕನಿಷ್ಠ 7 ಜನರು ಸಾವನ್ನಪ್ಪಿದ್ದಾರೆ. 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಘಟನೆಯನ್ನು ಖಂಡಿಸಿರುವ ಕಾಂಗ್ರೆಸ್, “ಶಿರ್ಗಾವೊದ ಶ್ರೀ ಲೈರೈ ದೇವಿಯ ಜಾತ್ರೋತ್ಸವದಲ್ಲಿ ಕಾಲ್ತುಳಿತದಿಂದ ಗೋವಾ ಕಾಂಗ್ರೆಸ್ ತೀವ್ರ ದುಃಖಿತವಾಗಿದೆ. ನಾವು ಈ ದುರಂತ ಘಟನೆಯನ್ನು ಖಂಡಿಸುತ್ತೇವೆ ಮತ್ತು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸುತ್ತೇವೆ. ಗಾಯಗೊಂಡವರೆಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ” ಎಂದಿದ್ದಾರೆ. ಗಾಯಾಳುಗಳನ್ನು ಗೋವಾ ವೈದ್ಯಕೀಯ ಕಾಲೇಜು ಮತ್ತು ಮಾಪುಸಾದ ಉತ್ತರ ಗೋವಾ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. https://twitter.com/AHindinews/status/1918510417531347257?ref_src=twsrc%5Etfw%7Ctwcamp%5Etweetembed%7Ctwterm%5E1918510417531347257%7Ctwgr%5Ee90dfa1417b269f643e5d08f412896578338dd3a%7Ctwcon%5Es1_c10&ref_url=https%3A%2F%2Fapi-news.dailyhunt.in%2F https://twitter.com/DrPramodPSawant/status/1918500226618249596?ref_src=twsrc%5Etfw%7Ctwcamp%5Etweetembed%7Ctwterm%5E1918500226618249596%7Ctwgr%5E872fbda77578f0963ba17a81002c37d597bc57e4%7Ctwcon%5Es1_c10&ref_url=https%3A%2F%2Fapi-news.dailyhunt.in%2F https://twitter.com/iamRahilM/status/1918493109081497890?ref_src=twsrc%5Etfw%7Ctwcamp%5Etweetembed%7Ctwterm%5E1918493109081497890%7Ctwgr%5E48f8528798431808edd0649683d0894b2057a09e%7Ctwcon%5Es1_c10&ref_url=https%3A%2F%2Fapi-news.dailyhunt.in%2F
ಮಂಗಳೂರು : ರೌಡಿಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಇದೀಗ ಪ್ರತೀಕಾರದ ಪೋಸ್ಟ್ ಹಾಗೂ ಸಂದೇಶಗಳ ಸಂಬಂಧ 12 ಎಫ್ ಐಆರ್ ದಾಖಲಿಸಿದ್ದಾರೆ. ರೌಡಿ ಸುಹಾಸ್ ಹತ್ಯೆ ಪ್ರಕರಣದಲ್ಲಿ ಪ್ರತೀಕಾರದ ಪೋಸ್ಟ್ ಗಳ ವಿರುದ್ದ ಕೊನೆಗೂ ಪೊಲೀಸರು ಎಚ್ಚೆತ್ತುಕೊಂಡಿದ್ದು, ಪ್ರತೀಕಾರದ ಸಂದೇಶ, ಪೋಸ್ಟ್ ಸಂಬಂಧ 12 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಮಂಗಳೂರು ಉತ್ತರ, ಮಂಗಳೂರು ದಕ್ಷಿಣ, ಮುಲ್ಕಿ, ಉರ್ವಾ ಬರ್ಕೆ, ಮೂಡಬಿದಿರೆ, ಕಾವೂರು ಠಾಣೆಗಳಲ್ಲಿ ಎಫ್ ಐಆರ್ ದಾಖಲಾಗಿದೆ.
ಬೆಳಗಾವಿ : ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಮಕ್ಕಳು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದ ಜಮೀನಿನಲ್ಲಿ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ವೇಳೆ ಮೂವರು ಮಕ್ಕಳು ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಪೃಥ್ವಿರಾಜ್ ಕೆರಬಾ (13), ಅಥರ್ವ ಸೌಂದಲಗೆ (15), ಸಮರ್ಥ ಗಡಕರಿ (13) ಎಂದು ಗುರುತಿಸಲಾಗಿದೆ. ಈಜು ಬಾರದೇ ಇದ್ದರೂ ಮಕ್ಕಳು ಸೈಕಲ್ ತೆಗೆದುಕೊಂಡು ಊರ ಹೊರಗಿನ ಕೃಷಿ ಹೊಂಡಕ್ಕೆ ಹೋಗಿದ್ದಾರೆ. ಮೂವರು ಮಕ್ಕಳಿಗೆ ಈಜಲು ಬರುತ್ತಿರಲಿಲ್ಲ, ಆದರೂ ಕೂಡ ನೀರಿಗೆ ಇಳಿದಿದ್ದಾರೆ. ಈ ವೇಳೆ ಈಜು ಬಾರದೇ ಮುಳುಗಿ ಮೂವರು ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ : ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕೆಲವು ದಿನಗಳ ನಂತರ, ಪಾಕಿಸ್ತಾನ ಕ್ರಿಕೆಟಿಗರಾದ ಬಾಬರ್ ಅಜಮ್ ಮತ್ತು ಮೊಹಮ್ಮದ್ ರಿಜ್ವಾನ್ ಅವರ ಇನ್ಸ್ಟಾಗ್ರಾಮ್ ಖಾತೆಗಳನ್ನು ಭಾರತದಲ್ಲಿ ನಿಷೇಧಿಸಲಾಗಿದೆ. ಏಪ್ರಿಲ್ 22 ರಂದು ನಡೆದ ಈ ದುರಂತ ಘಟನೆಯಲ್ಲಿ, ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರು 26 ಪ್ರವಾಸಿಗರನ್ನು ಗುಂಡಿಕ್ಕಿ ಕೊಂದರು ಮತ್ತು ಅದರ ನಂತರ, ಭಾರತ ಸರ್ಕಾರವು ಪಾಕಿಸ್ತಾನದ ವಿರುದ್ಧ ಹಲವಾರು ಕ್ರಮಗಳನ್ನು ಘೋಷಿಸಿತು. ಇದಕ್ಕೂ ಮೊದಲು, ಭಾರತ ಸರ್ಕಾರವು ಹಲವಾರು ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್ಗಳನ್ನು ನಿಷೇಧಿಸಿತ್ತು ಮತ್ತು ಅದರಲ್ಲಿ ಶೋಯೆಬ್ ಅಖ್ತರ್ ಮತ್ತು ಬಸಿತ್ ಅಲಿಯಂತಹ ಜನಪ್ರಿಯ ಕ್ರಿಕೆಟಿಗರ ಖಾತೆಗಳು ಸೇರಿವೆ. https://twitter.com/KKRWeRule/status/1918248255693177283?ref_src=twsrc%5Etfw%7Ctwcamp%5Etweetembed%7Ctwterm%5E1918248255693177283%7Ctwgr%5Edebaa69f621909a8325323a59e55c4ee042b3f9a%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Flatestly-epaper-dh91bfc27fb6cf46a58e6b6df12965bd61%2Fpakistancricketersbabarazamandmohammadrizwansinstagramaccountsbannedinindiadaysafterpahalgamterrorattack-newsid-n662695734 ಇನ್ಸ್ಟಾಗ್ರಾಮ್ನಲ್ಲಿ ನಿಷೇಧದ ನಂತರ ಬಾಬರ್ ಅಜಮ್ ಮತ್ತು ಮೊಹಮ್ಮದ್ ರಿಜ್ವಾನ್ ಅವರ ಖಾತೆಗಳು ಭಾರತದಲ್ಲಿ ಇನ್ನು ಮುಂದೆ ಲಭ್ಯವಿರುವುದಿಲ್ಲ. ಪಾಕಿಸ್ತಾನದ ಒಲಿಂಪಿಕ್ ಚಿನ್ನದ ಪದಕ ವಿಜೇತ ಕ್ರೀಡಾಪಟು ಅರ್ಷದ್ ನದೀಮ್ ಅವರ ಇನ್ಸ್ಟಾಗ್ರಾಮ್ ಖಾತೆಯನ್ನು ಸಹ ಭಾರತದಲ್ಲಿ ನಿಷೇಧಿಸಲಾಗಿದೆ. ಬಾಬರ್ ಅಜಮ್, ಮೊಹಮ್ಮದ್ ರಿಜ್ವಾನ್ ಅವರ ಇನ್ಸ್ಟಾಗ್ರಾಮ್…
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರು ಮೈಸೂರು, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಮೊದಲ 3-4 ದಿನ ಕಲಬುರಗಿ, ವಿಜಯಪುರ, ರಾಯಚೂರು, ಗದಗ, ಯಾದಗಿರಿ, ಕೊಪ್ಪಳ, ಹಾವೇರಿ, ಧಾರವಾಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಂದಿನಿಂದ ಮೇ. 6 ರವರೆಗೆ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, , ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ಯಾದಗಿರಿ, ಬಳ್ಳಾರಿ, , ಚಾಮರಾಜನಗರದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬಿಎಂಟಿಸಿ ಬಸ್ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅನೇಕಲ್ ತಾಲೂಕಿನ ಚಂದಾಪುರದ ಬಿಗ್ ಮಾರ್ಟ್ ಬಳಿ ಘಟನೆ ನಡೆದಿದೆ. ಮೃತರನ್ನು ಕೇರಳ ಮೂಲದ ಅನಿಲ್ ಪಿ ಸುಂದರ್ (27) ಎಂದು ಗುರುತಿಸಲಾಗಿದೆ. ಬಸ್ ಡಿಕ್ಕಿಯಾಗಿ ಗಾಯಗೊಂಡಿದ್ದ ಅನಿಲ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ 12,692 ಪೌರ ಕಾರ್ಮಿಕರನ್ನು ಖಾಯಂ ಮಾಡಲಾಗಿದೆ. ಇವರಿಗೆ ಪ್ರತಿ ತಿಂಗಳು 39,000 ವೇತನ ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಪೌರಕಾರ್ಮಿಕರು ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9000 ಸಂಖ್ಯೆಯಷ್ಟಿರಬಹುದಾದ ವಾಹನಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್ ಗಳನ್ನೂ ಕೂಡ ಖಾಯಂ ಮಾಡಲಾಗುವುದು. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಿಬಿಎಂಪಿ ವತಿಯಿಂದ ಆಯೋಜಿಸಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಹಾಗೂ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಿಸಿನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ, ಪೌರಕಾರ್ಮಿಕರನ್ನು ಗುತ್ತಿಗೆದಾರರು ಶೋಷಣೆ ಮಾಡುತ್ತಿದ್ದು, ನ್ಯಾಯಯುತವಾದ ಸಂಬಳ ಕೊಡದೇ ಇದ್ದುದ್ದನ್ನು ಗಮನಿಸಿದ್ದೆ. ಅದಕ್ಕಾಗಿ ಶೋಷಣೆಗೊಳಗಾದ ಪೌರಕಾರ್ಮಿಕರ ಸಹಾಯಕ್ಕಾಗಿ ಕನಿಷ್ಟ ವೇತನ ಕಾಯ್ದೆ ಪ್ರಕಾರ ದೊರೆಯಬೇಕಾದ ಕನಿಷ್ಟ ಸಂಬಳವನ್ನು ಕಡ್ಡಾಯವಾಗಿ ದೊರೆಯುವ ವ್ಯವಸ್ಥೆಯನ್ನು ಮಾಡಿದೆ. ಮೊದಲು…
ಬೆಂಗಳೂರು : ಸರ್ಕಾರಿ ನೌಕರರು ಕಟ್ಟಡ ನಿರ್ಮಾಣಕ್ಕಾಗಿ ಅಥವಾ ಮನೆ ನಿರ್ಮಾಣಕ್ಕಾಗಿ ಅನುಮತಿ ನೀಡುವ ಆದೇಶ ಹಾಗೂ ಚೆಕ್ ಲಿಸ್ಟ್ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ. 1. ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು, 2021 (ಸಂಕ್ಷಿಪ್ತವಾಗಿ ‘2021ರ ನಿಯಮಗಳು), ದಿನಾಂಕ: 07-01-2021 ರಿಂದ ಜಾರಿಗೆ ಬಂದಿರುತ್ತದೆ. 2. 2021ರ ನಿಯಮಗಳ ನಿಯಮ 24(3) ರ ಅನುಸಾರ ತನ್ನೊಂದಿಗೆ ಅಧಿಕೃತ ವ್ಯವಹಾರವನ್ನು ಹೊಂದಿರುವ ವ್ಯಕ್ತಿಯನ್ನು ಹೊರತುಪಡಿಸಿ. ಬೇರೆ ಮೂಲಗಳಿಂದ ತನ್ನ ಹೆಸರಿನಲ್ಲಾಗಲಿ ಅಥವಾ ತನ್ನ ಕುಟುಂಬದ ಯಾವುದೇ ಸದಸ್ಯನ ಹೆಸರಿನಲ್ಲಾಗಲಿ ಗುತ್ತಿಗೆಯ, ಅಡಮಾನದ, ಖರೀದಿಯ, ಮಾರಾಟದ, ಉಡುಗೊರೆಯ ಮೂಲಕ ಅಥವಾ ಅನ್ಯಥಾ ಸ್ಥಿರ ಸ್ವತ್ತನ್ನು ಅರ್ಜಿಸುವ ಅಥವಾ ವಿಲೇ ಮಾಡುವ ಬಗೆ, ನಿಯಮಿಸಲಾದ ಪ್ರಾಧಿಕಾರಕ್ಕೆ ಮೊದಲೇ ತಿಳಿಸಬೇಕಾಗುತ್ತದೆ. ಒಂದು ವೇಳೆ ಸಮರ್ಥನೀಯ ಕಾರಣಗಳಿಂದಾಗಿ ನಿಯಮಿತ ಪ್ರಾಧಿಕಾರಿಗೆ ಮೊದಲೇ ತಿಳಿಸದೇ ಯಾವುದೇ ಸ್ಥಿರ ಸ್ವತ್ತನ್ನು ಅರ್ಜಿಸಿದಲ್ಲಿ ಅಥವಾ ಎಲೇ ಮಾಡಿದ್ದಲ್ಲಿ ಅಂತಹ ವ್ಯವಹಾರ ಕೈಗೊಂಡ ಎರಡು ತಿಂಗಳೊಳಗಾಗಿ ವಿವರಗಳು ಹಾಗೂ ಪೂರಕ…
ನವದೆಹಲಿ: ದೇಶಾದ್ಯಂತದ ವೈದ್ಯರು ಬ್ರಾಂಡ್ ಹೆಸರುಗಳ ಬದಲು ಜೆನೆರಿಕ್ ಔಷಧಿಗಳನ್ನು ಮಾತ್ರ ಶಿಫಾರಸು ಮಾಡುವುದನ್ನು ಕಡ್ಡಾಯಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಗುರುವಾರ ಅಭಿಪ್ರಾಯಪಟ್ಟಿದೆ. ಫೆಡರೇಶನ್ ಆಫ್ ಮೆಡಿಕಲ್ ಅಂಡ್ ಸೇಲ್ಸ್ ರೆಪ್ರೆಸೆಂಟೇಟಿವ್ಸ್ ಅಸೋಸಿಯೇಷನ್ಸ್ ಆಫ್ ಇಂಡಿಯಾ (ಎಫ್ಎಂಎಸ್ಆರ್ಎಐ) ಮತ್ತು ಇತರರು ಸಲ್ಲಿಸಿದ ಅರ್ಜಿಯನ್ನು ಆಲಿಸಿದ ನಂತರ ಸುಪ್ರೀಂ ಕೋರ್ಟ್ ಈ ಬಲವಾದ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ. ನ್ಯಾಯಾಲಯವು ಈ ವಿಷಯವನ್ನು ಜುಲೈನಲ್ಲಿ ಮುಂದಿನ ವಿಚಾರಣೆಗೆ ನಿಗದಿಪಡಿಸಿದೆ. ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ನ ಮೂವರು ನ್ಯಾಯಾಧೀಶರ ಪೀಠವು, “ವೈದ್ಯರು ಜೆನೆರಿಕ್ ಔಷಧಿಗಳನ್ನು ಮಾತ್ರ ಶಿಫಾರಸು ಮಾಡುವುದನ್ನು ಕಡ್ಡಾಯಗೊಳಿಸಬೇಕು ಎಂದು ನಾವು ನಂಬುತ್ತೇವೆ. ಅದು ನೀವು ಯಾವುದಕ್ಕಾಗಿ ಪ್ರಾರ್ಥಿಸುತ್ತೀರೋ ಅದಕ್ಕೆ ಅನುಗುಣವಾಗಿರುತ್ತದೆ. ರಾಜಸ್ಥಾನದಲ್ಲಿ, ಪ್ರತಿಯೊಬ್ಬ ವೈದ್ಯಕೀಯ ವೃತ್ತಿಪರರು ಜೆನೆರಿಕ್ ಔಷಧಿಯನ್ನು ಮಾತ್ರ ಶಿಫಾರಸು ಮಾಡಬೇಕು ಎಂದು ಈಗ ಕಾರ್ಯನಿರ್ವಾಹಕ ಸೂಚನೆ ಇದೆ. ಎಫ್ಎಂಎಸ್ರಾಯ್ ಸಲ್ಲಿಸಿದ ಅರ್ಜಿಯು ಪ್ರಸ್ತುತ ಸ್ವಯಂಪ್ರೇರಿತ ನಿಯಂತ್ರಕ ಆಡಳಿತದ ಪರಿಣಾಮಕಾರಿತ್ವವನ್ನು…














