Author: kannadanewsnow57

ಬೆಂಗಳೂರು : ನಗರದ ಈಸ್ಟ್‌ ಪಾಯಿಂಟ್‌ ಗ್ರೂಪ್‌ ಆಫ್‌ ಇನ್ಸ್ಟಿಟ್ಯೂಷನ್ಸ್‌ನಲ್ಲಿ ಪ್ರದರ್ಶನ ನೀಡುತ್ತಿದ್ದ ಸೋನು ನಿಗಮ್‌ ಕನ್ನಡ ಹಾಡು ಎಂದ ಕನ್ನಡಿಗನಿಗೆ ಪಹಲ್ಗಾಮ್‌ ಉಗ್ರರ ದಾಳಿಯನ್ನು ಹೋಲಿಕೆ ಮಾಡಿದ್ದು, ಗಾಯಕನ ವಿರುದ್ಧ ಕನ್ನಡಿಗರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೌದು, ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಆಯೋಜಿಸಿದ್ದ ಸಂಗೀತ ಕಾರ್ಯಕ್ರಮದಲ್ಲಿ ಕನ್ನಡಾಭಿಮಾನವನ್ನು ಭಯೋತ್ಪಾದಕತೆಗೆ ಹೋಲಿಸಿದ್ದಾರೆಂದು ಆರೋಪಿಸಿ ಖ್ಯಾತ ಗಾಯಕ ಸೋನು ನಿಗಮ್‌ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಕನ್ನಡಿಗರನ್ನು ಅವಮಾನಿಸಿರುವ ಸೋನು ನಿಗಮ್‌ರನ್ನು ಕನ್ನಡ ಚಿತ್ರರಂಗದಿಂದಲೇ ನಿರ್ಬಂಧಿಸಬೇಕು ಎಂದು ಒತ್ತಾಯ ಕೇಳಿಬರುತ್ತಿದೆ. ಬೆಂಗಳೂರಿನ ಕಾಲೇಜೊಂದರಲ್ಲಿ ಆಯೋಜಿಸಿದ್ದ ಸಂಗೀತ ಕಾರ್ಯಕ್ರಮದಲ್ಲಿ ಸೋನು ನಿಗಮ್ ಹಿಂದಿ ಹಾಡು ಹಾಡುತ್ತಿದ್ದರು. ಆಗ ವಿದ್ಯಾರ್ಥಿಯೊಬ್ಬ ಕನ್ನಡ ಕನ್ನಡ ಎಂದು ಪಟ್ಟುಹಿಡಿಯುವಂತೆ ಬೇಡಿಕೆ ಇಟ್ಟ. ಯುವಕನ ವರ್ತನೆಯಿಂದ ಬೇಸತ್ತ ಸೋನು ನಿಗಮ್‌ ಅವರು ತಾಳ್ಮೆಕಳೆದುಕೊಂಡು ಈ ಸಮಯದಲ್ಲಿ ಹಾಡನ್ನು ಅರ್ಧಕ್ಕೆ ನಿಲ್ಲಿಸಿದ ಸೋನು ನಿಗಮ್‌ ʼಪಹಲ್ಗಾಮ್‌ನಲ್ಲಿ ನಡೆದ ಘಟನೆಯ ಕಾರಣ ಇದೇ. ನಿಮ್ಮ ಮುಂದೆ ಯಾರು ನಿಂತಿದ್ದಾರೆ ಎಂದು…

Read More

ಯಾವಗ ಸಾಲ ತೀರುತ್ತದೆ ಎಂಬ ಚಿಂತೆ ನಿಮ್ಮನ್ನು ಕಾಡುತ್ತಿದೇಯೆ., ಸಾಲ ಲಕ್ಷ ಇರಲಿ ಕೋಟಿ ಇರಲಿ ಎಲೆ ಲವಂಗ ಏಲಕ್ಕಿ ಪ್ರಯೋಗ ಮಾಡಿ । ಸಾಲ ತೀರೋದು ಗ್ಯಾರಂಟಿ  1)ಸಾಲ ಲಕ್ಷ ಕೋಟಿ ಇರಲಿ ಎಲೆ ಲವಂಗ ಏಲಕ್ಕಿಯ ಪ್ರಯೋಗ ಮಾಡಿದರೆ ಸಾಲತಿರುವುದು 2)ಪಕ್ಕಾ ಸಾಲ ಅಂತ ಇದ್ರೆ ಅದು ನಮ್ಮನ್ನು ನಿದ್ರೆ ಮಾಡಲು ಬಿಡುವುದಿಲ್ಲ ಯಾವಗ ಸಾಲ ತೀರುತ್ತದೆ ಎಂಬ ಚಿಂತೆ ನಮ್ಮನ್ನು ಕಾಡುತ್ತದೆ ಸಾಲ ಇಲ್ಲದ ಜೀವನ ಅತಿ ಸುಂದರ ಜೀವನ ಎನ್ನಬಹುದು ಸಾಲ ತೆಗೆದುಕೊಳ್ಳುವುದು ತುಂಬಾ ಸುಲಭ ಆದರೆ ಅದನ್ನು ತೀರಿಸುವುದು ತುಂಬಾ ಕಷ್ಟಕರವಾದ ಕೆಲಸ ಎಂದು ಎಲ್ಲರಿಗೂ ಗೊತ್ತು ಕೆಲವೊಮ್ಮೆ ಪರಿಸ್ಥಿತಿಗಳು ಹೇಗೆ ಬರುತ್ತಿದೆ ಎಂದರೆ ತಗೊಂಡ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ…

Read More

ಮಂಗಳೂರು :  ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಇಂದಿನಿಂದ ಮೇ.6 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಮಾರಕಾಸ್ತ್ರಗಳಿಂದ ಕೊಚ್ಚಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಹತ್ಯೆ ಖಂಡಿಸಿ ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ವಿಶ್ವ ಹಿಂದೂ ಪರಿಷತ್ ಕರೆ ನೀಡಿದೆ. ಇಂದು ಮಂಗಳೂರಿನಲ್ಲಿ ಕಿಡಿಗೇಡಿಗಳು ಮೂರು ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮಂಗಳೂರಿನ ನಾರಾಯಣ ಗುರು ವೃತ್ತದ ಬಳಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ಗೆ ಕರೆ ನೀಡಲಾಗಿದೆ. ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಬಂದ್ ಗೆ ಕರೆ ನೀಡಲಾಗಿದೆ ಎಂದು VHP ಮುಖಂಡ ಶರಣ್ ಪಂಪ್ ವೆಲ್ ತಿಳಿಸಿದ್ದಾರೆ.

Read More

ಬೆಂಗಳೂರು : ಪ್ರಸಕ್ತ 2025ನೇ ಸಾಲಿನ ನೀಟ್-ಯುಜಿ ಪರೀಕ್ಷೆಯು ಮೇ 4ರ ಮಧ್ಯಾಹ್ನ 2ರಿಂದ ಸಂಜೆ 5ರ ವರೆಗೆ ರಾಜ್ಯದ ಒಟ್ಟು 381 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, , ರಾಜ್ಯದಲ್ಲಿ 1.49 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. 381 ಪರೀಕ್ಷಾ ಕೇಂದ್ರಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆವರೆಗೆ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30ರ ಅವಧಿ ಯಲ್ಲಿ ವಿದ್ಯಾರ್ಥಿಗಳ ಹಾಜರಾತಿಗೆ ಅವಕಾಶ ಇರಲಿದೆ. ವಿದ್ಯಾರ್ಥಿಗಳು ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಲ್ಪಟ್ಟಿ ರುವ ಗುರುತಿನ ಚೀಟಿ, ಆಧಾರ್ ಕಾರ್ಡ್, ಪಾನ್ ಕಾರ್ಡ್, ಡಿಎಲ್, ಮತದಾರರ ಗುರುತಿನ ಚೀಟಿ ಅಥವಾ ಇತರೆ ಯಾವುದಾದರೂ ಅಂಗೀಕೃತ ಗುರುತಿನ ಚೀಟಿ, ಎರಡು ಪಾಸ್ ಪೋರ್ಟ್ ಅಳತೆಯ ಫೋಟೊಗ ಳೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗ ಬೇಕು. ಪೊಲೀಸ್ ಸಿಬ್ಬಂದಿ ವತಿಯಿಂದ ವಿದ್ಯಾರ್ಥಿಗಳ ತಪಾಸಣೆ ನಡೆಯಲಿದೆ. ಪರೀಕ್ಷಾರ್ಥಿಗಳಿಗೆ ಮಾರ್ಗಸೂಚಿ ಪ್ರಕಟ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್‌ ಹಾಜರಾತಿ ಕಡ್ಡಾಯವಾಗಿದ್ದು, ವಿದ್ಯಾರ್ಥಿಗಳು ಪ್ರವೇಶ ಪತ್ರದಲ್ಲಿ ನೀಡಲಾಗಿರುವ ಸೂಚನೆಗಳನ್ವಯ…

Read More

ನವದೆಹಲಿ : ಮತದಾರರ ಪಟ್ಟಿಗಳ ನವೀಕರಣಕ್ಕಾಗಿ ಮರಣ ನೋಂದಣಿಯ ಎಲೆಕ್ಟ್ರಾನಿಕ್ ಪಡೆಯುವ ಡೇಟಾ BLO ಗಳು ಪ್ರಮಾಣಿತ ಫೋಟೋ ID ಮತದಾರರ ಮಾಹಿತಿ ಸ್ಲಿಪ್‌ಗಳನ್ನು ಹೆಚ್ಚು ಮತದಾರರ ಸ್ನೇಹಿಯನ್ನಾಗಿ ಮಾಡಲು ಭಾರತದ ಚುನಾವಣಾ ಆಯೋಗ ನಿರ್ಧರಿಸಿದೆ. ಮತದಾರ ಪಟ್ಟಿಯನ್ನು ದೋಷರಹಿತವಾಗಿ ರೂಪಿಸುವ ಜತೆಗೆ ವೇಗ ಹಾಗೂ ವಿಖರವಾಗಿ ಪಟ್ಟಿ ಪರಿಷ್ಕರಿಸಲು ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾದಿಂದ ಮರಣ ನೋಂದಣಿ ಮಾಹಿತಿಯನ್ನು ಡಿಜಿಟಲ್ ರೂಪದಲ್ಲಿ ಪಡೆಯಲು ಚುನಾವಣಾ ಆಯೋಗ ನಿರ್ಧರಿಸಿದೆ. ಭಾರತೀಯ ಚುನಾವಣಾ ಆಯೋಗವು ಮತದಾರರ ಪಟ್ಟಿಗಳ ನಿಖರತೆಯನ್ನು ಸುಧಾರಿಸುವ ಉದ್ದೇಶದಿಂದ ಹೊಸ ಉಪಕ್ರಮಗಳನ್ನು ಪರಿಚಯಿಸಿದೆ, ಮತದಾನ ಪ್ರಕ್ರಿಯೆಯನ್ನು ನಾಗರಿಕರಿಗೆ ಹೆಚ್ಚು ಅನುಕೂಲಕರವಾಗಿಸುತ್ತದೆ. ಈ ಕ್ರಮಗಳು ಈ ವರ್ಷದ ಮಾರ್ಚ್‌ನಲ್ಲಿ ಚುನಾವಣಾ ಆಯುಕ್ತರಾದ ಡಾ. ಸುಖಬೀರ್ ಸಿಂಗ್ ಸಂಧು ಮತ್ತು ಡಾ. ವಿವೇಕ್ ಜೋಶಿ ಅವರ ಸಮ್ಮುಖದಲ್ಲಿ ಮುಖ್ಯ ಚುನಾವಣಾ ಅಧಿಕಾರಿಗಳ (ಸಿಇಒ) ಸಮ್ಮೇಳನದಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಶ್ರೀ ಜ್ಞಾನೇಶ್ ಕುಮಾರ್ ಅವರು ರೂಪಿಸಿದ ಉಪಕ್ರಮಗಳಿಗೆ ಅನುಗುಣವಾಗಿರುತ್ತವೆ. ಮತದಾರರ…

Read More

ಕೇದರಾನಾಥ : ಶುಕ್ರವಾರ ಬೆಳಿಗ್ಗೆ 7 ಗಂಟೆಗೆ ಉತ್ತರಾಖಂಡದ ಪವಿತ್ರ ಕೇದಾರನಾಥ ದೇವಾಲಯದ ಬಾಗಿಲು ತೆರೆಯುವುದರೊಂದಿಗೆ ಭಕ್ತರಿಗೆ ತೆರೆಯಲಾಯಿತು. ವಿಸ್ತಾರವಾದ ಭದ್ರತಾ ವ್ಯವಸ್ಥೆಯಡಿಯಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಭಾಗವಹಿಸಿದ್ದರು. ಈ ಉದ್ಘಾಟನೆಯು ಉತ್ತರಾಖಂಡದಲ್ಲಿ ಚಾರ್ ಧಾಮ್ ಯಾತ್ರೆಯ ಆರಂಭವನ್ನು ಸೂಚಿಸುತ್ತದೆ, ಇದರಲ್ಲಿ ಕೇದಾರನಾಥ, ಬದರಿನಾಥ, ಯಮುನೋತ್ರಿ ಮತ್ತು ಗಂಗೋತ್ರಿ ದೇವಾಲಯಗಳಿಗೆ ತೀರ್ಥಯಾತ್ರೆಗಳು ಸೇರಿವೆ. ಉದ್ಘಾಟನೆಗೆ ಮುನ್ನ, ಕೇದಾರನಾಥನ ಪಂಚಮುಖಿ (ಐದು ಮುಖದ) ವಿಗ್ರಹವನ್ನು ಉಖಿಮಠದ ಓಂಕಾರೇಶ್ವರ ದೇವಸ್ಥಾನದಿಂದ ವಿಧ್ಯುಕ್ತವಾಗಿ ತರಲಾಯಿತು. ಸಾಂಪ್ರದಾಯಿಕ ಪಂಚ-ಸ್ನಾನ ಅಥವಾ ಐದು ಪಟ್ಟು ವಿಧ್ಯುಕ್ತ ಸ್ನಾನದ ನಂತರ, ವಿಗ್ರಹವನ್ನು ಪ್ರಯಾಣಕ್ಕಾಗಿ ಸುಂದರವಾಗಿ ಅಲಂಕರಿಸಿದ ಪಲ್ಲಕ್ಕಿಯ ಮೇಲೆ ಇರಿಸಲಾಯಿತು. ಮೆರವಣಿಗೆ ಹಾದುಹೋಗುವಾಗ ಸ್ಥಳೀಯರು ಮತ್ತು ಶಾಲಾ ಮಕ್ಕಳು ಮಾರ್ಗದುದ್ದಕ್ಕೂ ಸಾಲುಗಟ್ಟಿ ನಿಂತು ಪ್ರಾರ್ಥನೆ ಸಲ್ಲಿಸುತ್ತಾ ಮತ್ತು ಭಕ್ತಿಯನ್ನು ತೋರಿಸುತ್ತಾ ಇದ್ದರು. ದೇವಾಲಯದ ಮೈದಾನವು ವರ್ಣರಂಜಿತ ಹೂವಿನ ಅಲಂಕಾರಗಳು ಮತ್ತು ಸಾಂಪ್ರದಾಯಿಕ ಲಕ್ಷಣಗಳಿಂದ ಅಲಂಕರಿಸಲ್ಪಟ್ಟಿದ್ದು, ದೇವರು ಮತ್ತು ಆರಾಧಕರನ್ನು ಸ್ವಾಗತಿಸಲಾಯಿತು. ಎಲ್ಲಾ ಸಂದರ್ಶಕರಿಗೆ…

Read More

ನವದೆಹಲಿ : ಜಾಗತಿಕ ಅನಿಶ್ಚಿತತೆಯ ನಡುವೆ, ಏಪ್ರಿಲ್‌ನಲ್ಲಿ ಜಿಎಸ್‌ಟಿ ಸಂಗ್ರಹವು ವರ್ಷದಿಂದ ವರ್ಷಕ್ಕೆ ಶೇ. 12.6 ರಷ್ಟು ಹೆಚ್ಚಾಗಿ 2.37 ಲಕ್ಷ ಕೋಟಿ ರೂ.ಗಳಿಗೆ ತಲುಪಿದ್ದು, ಆರ್ಥಿಕ ರಂಗದಲ್ಲಿ ಭಾರತಕ್ಕೆ ಒಳ್ಳೆಯ ಸುದ್ದಿಯಾಗಿದೆ. ಒಂದು ವರ್ಷದ ಹಿಂದೆ ಏಪ್ರಿಲ್‌ನಲ್ಲಿ ಜಿಎಸ್‌ಟಿ ಸಂಗ್ರಹ 2.10 ಲಕ್ಷ ಕೋಟಿ ರೂ.ಗಳಾಗಿತ್ತು. ಇದು ಮಾರ್ಚ್ ಅಂತ್ಯದಲ್ಲಿ ಬಲವಾದ ಆರ್ಥಿಕ ಚಟುವಟಿಕೆ ಮತ್ತು ಕಂಪನಿಗಳ ಖಾತೆಗಳ ಸಮನ್ವಯವನ್ನು ಪ್ರತಿಬಿಂಬಿಸುತ್ತದೆ. ಜುಲೈ 1, 2017 ರಿಂದ ಹೊಸ ಪರೋಕ್ಷ ತೆರಿಗೆ ವ್ಯವಸ್ಥೆ ಜಾರಿಗೆ ಬಂದ ನಂತರ ಇದು ದೇಶದಲ್ಲಿ ಎರಡನೇ ಅತಿ ಹೆಚ್ಚು ಜಿಎಸ್‌ಟಿ ಸಂಗ್ರಹವಾಗಿದೆ. ಇದಕ್ಕೂ ಮೊದಲು, ಮಾರ್ಚ್ 2025 ರಲ್ಲಿ, ಜಿಎಸ್‌ಟಿ ಸಂಗ್ರಹವು 1.96 ಲಕ್ಷ ಕೋಟಿ ರೂ.ಗಳಷ್ಟಿತ್ತು. ಗುರುವಾರ ಸರ್ಕಾರ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಏಪ್ರಿಲ್ 2025 ರಲ್ಲಿ ದೇಶೀಯ ವಹಿವಾಟುಗಳಿಂದ ಜಿಎಸ್‌ಟಿ ಆದಾಯವು ಶೇ. 10.7 ರಷ್ಟು ಹೆಚ್ಚಾಗಿ ಸುಮಾರು ರೂ. 1.9 ಲಕ್ಷ ಕೋಟಿಗೆ ತಲುಪಿದೆ. ಆದರೆ ಆಮದು ಮಾಡಿಕೊಂಡ ಸರಕುಗಳಿಂದ…

Read More

ಬೆಂಗಳೂರು: ವಿದ್ಯಾರ್ಥಿಗಳು ಕಾತುರಲಿಂದ ಕಾಯುತ್ತಿರುವಂತ ಎಸ್ ಎಸ್ ಎಲ್ ಸಿ ಪರೀಕ್ಷೆ( Karnataka SSLC Exam ) ಫಲಿತಾಂಶದ ಬಗ್ಗೆ ಅಥಿಕೃತ ಮಾಹಿತಿ ಹೊರ ಬಿದ್ದಿದೆ. ಇಂದು ಬೆಳಗ್ಗೆ 12.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಘೋಷಣೆಯಾಗಲಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದಂತ ಹೆಚ್.ಬಸವರಾಜೇಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ದಿನಾಂಕ: 21-03-2025 ರಿಂದ 04-04-2025ರವರೆವಿಗೆ ನಡೆಸಲಾಯಿತು ಎಂದಿದ್ದಾರೆ. ಇನ್ನೂ ಎಸ್ ಎಸ್ ಎಲ್ ಸಿ ಪರಿಕ್ಷೆ ಫಲಿತಾಂಶ ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಸಚಿವ ಮಧು ಬಂಗಾರಪ್ಪ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದು, ಆತ್ಮೀಯ ವಿದ್ಯಾರ್ಥಿ ಮಿತ್ರರೇ, ಎಸ್. ಎಸ್. ಎಲ್. ಸಿ. ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಪರೀಕ್ಷೆ ಬರೆದಿರುವ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ನನ್ನ ಶುಭ ಹಾರೈಕೆಗಳು. ಫಲಿತಾಂಶ ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ… ಶುಭವಾಗಲಿ… ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ-02-05-2025ರ ಮಧ್ಯಾಹ್ನ…

Read More

ಮಂಗಳೂರು : ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಹತ್ಯೆ ಖಂಡಿಸಿ ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ವಿಶ್ವ ಹಿಂದೂ ಪರಿಷತ್ ಕರೆ ನೀಡಿದೆ. ಇಂದು ಮಂಗಳೂರಿನಲ್ಲಿ ಕಿಡಿಗೇಡಿಗಳು ಮೂರು ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮಂಗಳೂರಿನ ನಾರಾಯಣ ಗುರು ವೃತ್ತದ ಬಳಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ಗೆ ಕರೆ ನೀಡಲಾಗಿದೆ. ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಬಂದ್ ಗೆ ಕರೆ ನೀಡಲಾಗಿದೆ ಎಂದು VHP ಮುಖಂಡ ಶರಣ್ ಪಂಪ್ ವೆಲ್ ತಿಳಿಸಿದ್ದಾರೆ.

Read More

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ, ಭಾರತದಲ್ಲಿ ಸರಣಿ ಸಭೆಗಳು ನಡೆಯುತ್ತಿವೆ. ಸರ್ಕಾರ ಭಯೋತ್ಪಾದನೆ ವಿರುದ್ಧ ಬಲವಾದ ಕ್ರಮ ಕೈಗೊಳ್ಳುವುದಾಗಿ ಹೇಳುತ್ತಿದೆ. ಮತ್ತೊಂದೆಡೆ, ಭಾರತದ ಮೇಲೆ ಸೈಬರ್ ಸುರಕ್ಷತೆಯ ಬೆದರಿಕೆಯೂ ಎದುರಾಗಿದೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೇಶಾದ್ಯಂತ 10 ಲಕ್ಷಕ್ಕೂ ಹೆಚ್ಚು ಸೈಬರ್ ದಾಳಿಗಳು ನಡೆದಿವೆ ಎಂದು ಮಹಾರಾಷ್ಟ್ರ ಸೈಬರ್ ಪೊಲೀಸರು ತಿಳಿಸಿದ್ದಾರೆ. ಈ ಸೈಬರ್ ದಾಳಿಗಳು ಪಾಕಿಸ್ತಾನ ಸೇರಿದಂತೆ ಇತರ ಹಲವು ದೇಶಗಳಿಂದ ನಡೆದಿವೆ. ಅದೇ ಸಮಯದಲ್ಲಿ, ಈ ಬಗ್ಗೆ ಸೈಬರ್ ಯುದ್ಧದ ಸಾಧ್ಯತೆಯೂ ಹೆಚ್ಚುತ್ತಿದೆ. ಇಸ್ಲಾಮಿಕ್ ಗುಂಪುಗಳು ಸೈಬರ್ ದಾಳಿ ನಡೆಸಿದವು. ಈ ಸೈಬರ್ ದಾಳಿಗಳ ಬಗ್ಗೆ ಮಾಹಿತಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಏಪ್ರಿಲ್ 22 ರ ನಂತರ ಸೈಬರ್ ದಾಳಿಯ ಘಟನೆಗಳು ಗಣನೀಯವಾಗಿ ಹೆಚ್ಚಾಗಿದೆ ಎಂದು ಸೈಬರ್ ಕೋಶ ಕಂಡುಹಿಡಿದಿದೆ ಎಂದು ಹೇಳಿದರು. ಈ ಬಗ್ಗೆ ಮಹಾರಾಷ್ಟ್ರ ಸೈಬರ್ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಯಶಸ್ವಿ…

Read More