Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಮೇ.29ರಿಂದ 2025-26ನೇ ಸಾಲಿನ ಶೈಕ್ಷಣಿಕ ತರಗತಿಗಳು ಆರಂಭವಾಗಲಿದ್ದು, ಶಿಕ್ಷಣ ಇಲಾಖೆಯು 2025-26ನೇ ಶೈಕ್ಷಣಿಕ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನೂತನ ವೇಳಾಪಟ್ಟಿಯನ್ನು ಪ್ರಕಟಿಸಿದೆ. 2025-26ನೇ ಸಾಲಿನ ಶೈಕ್ಷಣಿಕ ಸಾಲಿನ ಚಟುವಟಿಕೆಗಳನ್ನು ಪ್ರಾರಂಭಿಸಲು ಸದರಿ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ ದಿನಾಂಕ: 29.05.2025 ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿದೆ. ಅದರಂತೆ ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನು ನಿಗಧಿಪಡಿಸಲಾಗಿದೆ ಎಂದಿದೆ. ಪುಯುಕ್ತ ರಾಜ್ಯದ ಎಲ್ಲಾ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಸಹಾಯವಾಗುವಂತೆ ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು, ಕರ್ತವ್ಯದ ದಿನಗಳು ಮತ್ತು ರಜಾ ದಿನಗಳನ್ನಾಧರಿಸಿ ಅದಕ್ಕನುಗುಣವಾಗಿ ವಾರ್ಷಿಕ ಕಾರ್ಯಸೂಚಿಯನ್ನು ಈ ಕೆಳಕಂಡಂತ ನಿಗದಿಪಡಿಸಲಾಗಿದ್ದು, ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಗೊಳಿಸಿ ಮತ್ತು ಅನುಪಾಲನೆ ಮಾಡಲು ತಿಳಿಸಿದೆ. ಮೊದಲನೇ ಅವಧಿ – ದಿನಾಂಕ: 29-05-2025 ರಿಂದ ದಿನಾಂಕ: 19-09-2025 ರವರೆಗೆ…
ಬೆಂಗಳೂರು : ದ್ವಿತೀಯ ಪಿಯುಸಿ 3 ನೇ ಪರೀಕ್ಷೆಯನ್ನು ಜೂ.9 ರಿಂದ 20 ರವರೆಗೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು ಈ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಮೇ.28 ಕೊನೆಯ ದಿನವಾಗಿದೆ. ಸರ್ಕಾರ ದ್ವಿತೀಯ ಪಿಯುಸಿ ಪರೀಕ್ಷೆ-2 ಕ್ಕೆ ಅವಕಾಶ ಕಲ್ಪಿಸಿತ್ತು. ಅದರಿಂದ ರಾಜ್ಯದಲ್ಲಿ 60,692 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈಗ 3 ನೇ ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಫಲಿತಾಂಶ ಪೂರ್ಣಗಳ್ಳದ ಎಲ್ಲಾ ವಿದ್ಯಾರ್ಥಿಗಳು ನೊಂದಾಯಿಸಿಕೊAಡು ಪರೀಕ್ಷೆಗೆ ಹಾಜರಾಗುವಂತೆ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಮಾಹಿತಿಯನ್ನು ನೀಡಲಾಗಿದೆ. ಹಾಗೂ ನೊಂದಾಯಿಸಿಕೊAಡ ವಿದ್ಯಾರ್ಥಿಗಳು ಕಡ್ಡಾಯವಾಗಿ ಪರೀಕ್ಷೆಗೆ ಹಾಜರಾಗುವಂತೆ ಕ್ರಮಕೈಗೊಳ್ಳಲು ಹಾಗೂ ವಿದ್ಯಾರ್ಥಿಗಳಿಗೆ ಪರಿಹಾರ ಬೋಧನಾ ತರಗತಿಯನ್ನು ನಡೆಸುವಂತೆ ಕಾಲೇಜು ಪ್ರಾಂಶುಪಾಲರಿಗೆ ಸೂಚನೆ ನೀಡಲಾಗಿದೆ. ದ್ವಿತೀಯ ಪಿಯುಸಿ 3 ನೇ ಪರೀಕ್ಷೆಯನ್ನು ಜೂ.9 ರಿಂದ 20 ರವರೆಗೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು ಈ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಮೇ.28 ಕೊನೆಯ ದಿನವಾಗಿದೆ. ಸರ್ಕಾರ ದ್ವಿತೀಯ ಪಿಯುಸಿ ಪರೀಕ್ಷೆ-2 ಕ್ಕೆ ಅವಕಾಶ ಕಲ್ಪಿಸಿತ್ತು. ಅದರಿಂದ ರಾಜ್ಯದಲ್ಲಿ 60,692 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈಗ…
ಬೆಂಗಳೂರು : 2025ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ.90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. https://ksgeanews.blogspot.com ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-05-2025 Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YouTube ಚಾನಲ್ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು ವಿದ್ಯಾರ್ಥಿಯು 2025ರ SSLC/PUC ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು. ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು. ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮಕವಾಗಿರುವ ನೌಕರರು ಅರ್ಜಿ ಸಲ್ಲಿಸುವಂತಿಲ್ಲ. Online ಅರ್ಜಿ ಸಲ್ಲಿಸುವಾಗ ಗಮನಿಸಬೇಕಾದ ಅಂಶಗಳು ವಿದ್ಯಾರ್ಥಿಯ ಪಾಸ್ಪೋರ್ಟ್ ಭಾವಚಿತ್ರ ಮತ್ತು ದೃಢೀಕೃತ ಅಂಕಪಟ್ಟಿ ಇಲಾಖೆಯ ಸೇವಾ ದೃಢೀಕರಣ ಪತ್ರ ಸಂಘದ ಜಿಲ್ಲಾ/ತಾಲ್ಲೂಕು/ಯೋಜನಾ ಶಾಖೆ ಅಧ್ಯಕ್ಷರು/ಬೆಂಗಳೂರು…
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಕೋವಿಡ್ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾಹಿತಿ ಪಡೆದು ಪರಿಸ್ಥಿತಿ ನಿರ್ವಹಣೆಯ ಸಂಬಂಧ ಈ ಕೆಳಗಿನ ಸೂಚನೆಗಳನ್ನು ನೀಡಿದ್ದಾರೆ. ಸದ್ಯಕ್ಕೆ ಕೊರೊನಾ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲಾ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು. ಸದ್ಯಕ್ಕೆ ಗಂಭೀರ ಪರಿಸ್ಥಿತಿಗೆ ತಲುಪಿಲ್ಲವಾದರೂ ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ಧಪಡಿಸಿಟ್ಟುಕೊಳ್ಳಬೇಕು. ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು. ಈ ಬಗ್ಗೆ ಅರಿವು ಮೂಡಿಸಬೇಕು. ಪ್ರತೀ ವಾರ ಅಥವಾ ಅಗತ್ಯ ಬಿದ್ದರೆ ಮೂರು ದಿನಕ್ಕೊಮ್ಮೆ ಪರಿಸ್ಥಿತಿಯ ಪರಿಶೀಲನೆ ನಡೆಸುತ್ತಾ ತೀವ್ರ ನಿಗಾ ಇಡಬೇಕು. ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದರೆ ಅವರನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸುವುದನ್ನು ನಿಲ್ಲಿಸಿ, ಎಲ್ಲಾ ಆಸ್ಪತ್ರೆಗಳಲ್ಲೂ ಅಗತ್ಯ ವ್ಯವಸ್ಥೆ…
ಇತ್ತೀಚಿನ ಬೆಳವಣಿಗೆಯಲ್ಲಿ, ವಿಜ್ಞಾನಿಗಳು ಇನ್ಫ್ರಾರೆಡ್ ಕಾಂಟ್ಯಾಕ್ಟ್ ಲೆನ್ಸ್ಗಳನ್ನು ರಚಿಸಿದ್ದಾರೆ, ಅದು ಜನರಿಗೆ ಕತ್ತಲೆಯಲ್ಲಿ ನೋಡಲು ಸಹಾಯ ಮಾಡುತ್ತದೆ. ಅಷ್ಟೇ ಅಲ್ಲ, ಈ ಲೆನ್ಸ್ ಗಳು ಕಣ್ಣುಗಳನ್ನು ಮುಚ್ಚಿ ನೋಡಲು ಸಹ ಸಹಾಯ ಮಾಡುತ್ತವೆ ಈ ಅಧ್ಯಯನವನ್ನು ಸೆಲ್ ಜರ್ನಲ್ ನಲ್ಲಿ ಪ್ರಕಟಿಸಲಾಗಿದೆ ಮತ್ತು ಚೀನಾದ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ಸಂಶೋಧಕರನ್ನು ಒಳಗೊಂಡಿದೆ. ಸಾಂಪ್ರದಾಯಿಕ ಕಾಂಟ್ಯಾಕ್ಟ್ ಲೆನ್ಸ್ ಗಳಲ್ಲಿ ಕಂಡುಬರುವ ಪಾಲಿಮರ್ ಗಳನ್ನು ನ್ಯಾನೊಪರ್ಟಿಕಲ್ ಗಳೊಂದಿಗೆ ಸಂಯೋಜಿಸಿ ಕತ್ತಲೆಯಲ್ಲಿ ನೋಡಲು ಅನುವು ಮಾಡಿಕೊಡುವ ಲೆನ್ಸ್ ಗಳನ್ನು ರಚಿಸಿದ್ದೇವೆ ಎಂದು ಸಂಶೋಧಕರು ತಿಳಿಸಿದ್ದಾರೆ. ಸಾಮಾನ್ಯ ರಾತ್ರಿ-ದೃಷ್ಟಿ ಕನ್ನಡಕಗಳಂತೆ ಈ ಲೆನ್ಸ್ ಗಳಿಗೆ ವಿದ್ಯುತ್ ಮೂಲದ ಅಗತ್ಯವಿಲ್ಲ ಎಂದು ಅಧ್ಯಯನವು ಹೇಳುತ್ತದೆ. ಈ ಲೆನ್ಸ್ ಗಳು ಧರಿಸುವವರಿಗೆ ವಿಭಿನ್ನ ಇನ್ ಫ್ರಾರೆಡ್ ತರಂಗಾಂತರಗಳನ್ನು ಗ್ರಹಿಸಲು ಸಹಾಯ ಮಾಡುತ್ತದೆ. ಅವು ಪಾರದರ್ಶಕವಾಗಿರುವುದರಿಂದ, ಬಳಕೆದಾರರು ಇನ್ಫ್ರಾರೆಡ್ ಮತ್ತು ಗೋಚರ ಬೆಳಕನ್ನು ಏಕಕಾಲದಲ್ಲಿ ನೋಡಬಹುದು. ಆದಾಗ್ಯೂ, ಭಾಗವಹಿಸುವವರು ಕಣ್ಣುಗಳನ್ನು ಮುಚ್ಚಿದಾಗ ಇನ್ಫ್ರಾರೆಡ್ ದೃಷ್ಟಿಯನ್ನು ಹೆಚ್ಚಿಸಲಾಯಿತು. ಚೀನಾದ ವಿಜ್ಞಾನ ಮತ್ತು…
ಬೆಂಗಳೂರು : : ಕೋವಿಡ್-19 ರ ತಪಾಸಣಾ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸುವುದು ಮತ್ತು ಪರೀಕ್ಷಾ ಮಾದರಿಗಳನ್ನು ನಿಗದಿಪಡಿಸಿದ ಪ್ರಯೋಗಶಾಲೆಗಳಿಗೆ ಪರೀಕ್ಷೆಗಾಗಿ ಸಲ್ಲಿಸುವ ಕುರಿತು ಆರೋಗ್ಯ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ, RT-PCR ಕೋವಿಡ್-19 ರ ಪರೀಕ್ಷೆ ನಡೆಸಲು ತಾಂತ್ರಿಕ ಸಲಹಾ ಸಮಿತಿಯ ಅಭಿಪ್ರಾಯದಂತೆ ರಾಜ್ಯದಲ್ಲಿ ದಿನ ನಿತ್ಯ 150 ರಿಂದ 200 ಪರೀಕ್ಷೆಗೆ ನಿಗದಿಪಡಿಸಲಾಗಿದ್ದು, ಎಲ್ಲಾ SARI ಪ್ರಕರಣಗಳಲ್ಲಿ ಕೋವಿಡ್-19 ಸೋಂಕನ್ನು ಧೃಡ ಪಡಿಸಿಕೊಳ್ಳಲು RT-PCR ಪರೀಕ್ಷೆಗಾಗಿ ಮಾದರಿಯನ್ನು ನಿಗದಿ ಪಡಿಸಿರುವ ಪ್ರಯೋಗಾಲಯಗಳಿಗೆ ಸಲ್ಲಿಸುವುದು. ಎಲ್ಲಾ ಪರೀಕ್ಷೆಗಳನ್ನು ಕಡ್ಡಾಯವಾಗಿ ಸರ್ಕಾರಿ ಪ್ರಯೋಗ ಶಾಲೆಗಳಲ್ಲಿಯೇ ನಡೆಸುವುದು ಹಾಗೂ ಲಭ್ಯವಿರುವ ಕೋವಿಡ್-19ರ ಪರೀಕ್ಷಾ ಕಿಟ್ಗಳನ್ನು FIFO (First-In-First-Out) ಮಾದರಿಯಲ್ಲಿ ಉಪಯೋಗಿಸಿ ಕೋವಿಡ್-19 ರ ಕಿಟ್ /ಪರಿಕರಗಳು ಅನುಪಯುಕ್ತವಾಗದಂತೆ ಕೋವಿಡ್-19ರ ಪರೀಕ್ಷೆಯನ್ನು ಈ ಕೆಳಕಂಡಂತೆ ಕ್ರಮವಹಿಸುವುದು. ಎಲ್ಲಾ SARI ಪ್ರಕರಣಗಳಿಗೆ ಕಡ್ಡಾಯವಾಗಿ ಪರೀಕ್ಷೆ ನಡೆಸುವುದು. ವಯೋವೃದ್ಧರಲ್ಲಿ ಮಕ್ಕಳಲ್ಲಿ, ಗರ್ಭಿಣಿ ಸ್ತ್ರೀಯಲ್ಲಿ ರೋಗ ಲಕ್ಷಣಗಳು ಕಂಡು ಬಂದಲ್ಲಿ ಕಡ್ಡಾಯವಾಗಿ ಪರೀಕ್ಷೆ ನಡೆಸುವುದು.…
ಬೆಂಗಳೂರು : 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-109ರ ಘೋಷಣೆಯಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರಿಗೆ ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆಯನ್ನು 1000 ರೂಗಳಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮಾಂಕ-1ರ 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-109ರಲ್ಲಿ ಕೆಳಕಂಡಂತೆ ಘೋಷಿಸಲಾಗಿದೆ.ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ತಲಾ 1,000 ರೂ. ಹೆಚ್ಚಿಸಲಾಗುವುದು.” ಮೇಲೆ ಓದಲಾದ ಕ್ರಮಾಂಕ (2)ರ ಸರ್ಕಾರದ ಆದೇಶದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರು ಹಾಗೂ ಸಹಾಯಕ ಅಡುಗೆಯವರಿಗೆ ನೀಡಲಾಗುವ ಮಾಸಿಕ ಗೌರವ ಸಂಭಾವನೆಯನ್ನು 2022-23ನೇ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವಂತೆ ತಲಾ ರೂ 1000/- (ಒಂದು ಸಾವಿರ ರೂಪಾಯಿಗಳು ಮಾತ್ರ) ಗಳಷ್ಟು ಹೆಚ್ಚಿಸಿ ಆದೇಶಿಸಲಾಗಿದೆ. ಮೇಲೆ ಓದಲಾದ ಕ್ರಮಾಂಕ (3)ರ ಆರ್ಥಿಕ ಇಲಾಖೆ ಅನಧಿಕೃತ ಟಿಪ್ಪಣಿಯಲ್ಲಿ (Budget Advice) 2025-26ನೇ ಸಾಲಿನ ಆಯವ್ಯಯ ಕಂಡಿಕೆ-109ರ ಘೋಷಣೆಯನ್ನು ಮುಂದುವರೆದ…
ಬೆಂಗಳೂರು : 2024-25ನೇ ಸಾಲಿನ ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ (Specified Post) ಲಿಖಿತ ಪರೀಕ್ಷೆ ನಡೆಸುವ ಮೂಲಕ ಭರ್ತಿ ಮಾಡುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿಷಯದನ್ವಯ, 2024-25ನೇ ಸಾಲಿನ ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ (Specified Post) ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಭರ್ತಿ ಮಾಡಲು ಬಗ್ಗೆ ಉಲ್ಲೇಖ-1 ರಲ್ಲಿ ಮಾರ್ಗಸೂಚಿ ಸಹಿತ ವೇಳಾಪಟ್ಟಿಯನ್ನು ಅಧಿಸೂಚಿಸಲಾಗಿತ್ತು. ಆದರೆ ಆಡಳಿತಾತ್ಮಕ ಹಿತದೃಷ್ಟಿಯಿಂದ ನಿರ್ದಿಷ್ಟಪಡಿಸಿದ (Specified Post) ಹುದ್ದೆಗಳಿಗೆ ನಿಗದಿಯಾಗಿದ್ದ ಲಿಖಿತ ಪರೀಕ್ಷೆಯನ್ನು ಮುಂಡೂಡಲು ಉಲ್ಲೇಖಿತ-2 ರಲ್ಲಿ ನಿರ್ದೇಶಕರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು ಇವರು ಮನವಿ ಸಲ್ಲಿಸಿರುತ್ತಾರೆ, ಸದರಿ ಮನವಿಯನ್ನು ಪರಿಶೀಲಿಸಿ ಆಡಳಿತಾತ್ಮಕ ಕಾರಣಗಳ ಹಿನ್ನೆಲೆಯಲ್ಲಿ ಈಗಾಗಲೇ ಹೊರಡಿಸಲಾಗಿದ್ದ ವೇಳಾಪಟ್ಟಿಯನ್ನು ಈ…
ಬೆಂಗಳೂರು : 2025 ನೇ ಸಾಲಿಗೆ ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸಿಲಿಂಗ್ ನಡೆಸುವ ಬಗ್ಗೆ ಕಾಲೇಜು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಬೋಧಕರ (ಪ್ರಾಧ್ಯಾಪಕರು, ಸಹ/ಸಹಾಯಕ ಪ್ರಾಧ್ಯಾಪಕರು, ಗ್ರಂಥಪಾಲಕರು ಮತ್ತು ಕ್ರೀಡಾ & ದೈಹಿಕ ಶಿಕ್ಷಣ ನಿರ್ದೇಶಕರು) ವರ್ಗಾವಣೆಗಳನ್ನು ನಿಯಂತ್ರಿಸುವ ಸಲುವಾಗಿ ಉಲ್ಲೇಖ (1) ರ ಸರ್ಕಾರದ ಅಧಿಸೂಚನೆಯಲ್ಲಿ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಕಾಲೇಜು ಶಿಕ್ಷಣ ಇಲಾಖೆಯ ಬೋಧಕರ ವರ್ಗಾವಣೆ ನಿಯಂತ್ರಣ) ನಿಯಮಗಳು-2021 ನ್ನು ಹಾಗೂ ಉಲ್ಲೇಖ (2 & 3)ರಲ್ಲಿ ಸದರಿ ನಿಯಮಗಳ ಕೆಲವೊಂದು ಅಂಶಗಳಿಗೆ ತಿದ್ದುಪಡಿಯನ್ನು ಮಾಡಿ ಅಧಿಸೂಚಿಸಲಾಗಿದೆ. ಸದರಿ ವರ್ಗಾವಣೆ ನಿಯಮಗಳ ನಿಯಮ 8 ರಲ್ಲಿ ಸಾರ್ವಜನಿಕ ಹಿತದೃಷ್ಟಿಯ ಕಡ್ಡಾಯ ವರ್ಗಾವಣೆ ಹಾಗೂ ವಿಶೇಷ ಪ್ರಕರಣಗಳ ಕೋರಿಕೆ ವರ್ಗಾವಣೆಗಳನ್ನು ಪ್ರತಿ ಕ್ಯಾಲೆಂಡರ್ ವರ್ಷದ ಮೇ ಮತ್ತು ಜುಲೈ ಮಾಹೆಯ ನಡುವೆ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ. ಮೇಲ್ಕಂಡ ನಿಯಮದನ್ವಯ ಮಂಜೂರಾದ ಬೋಧಕರ…
ಕರ್ನಾಟಕ ರಾಜ್ಯ ಮುಖ್ಯಮಂತ್ರಿಯವರ ವೈದ್ಯಕೀಯ ಪರಿಹಾರ ನಿಧಿ ಸೊಸೈಟಿಯ (KCMMR) ಕಾರ್ಪಸ್ ಹಣ 110 ಕೋಟಿಗಳನ್ನು ನಿಶ್ಚಿತ ಠೇವಣಿಯಲ್ಲಿಡುವ ಮುಖಾಂತರ ಬರುವ ಬಡ್ಡಿ ಹಣದಲ್ಲಿ ರಾಜ್ಯದಲ್ಲಿ ಗಂಭೀರ ಹಾಗೂ ಅತೀ ವಿರಳ ರೋಗಗಳಿಂದ ನಿರಂತರವಾಗಿ ಬಳಲುತ್ತಿರುವ ಬಡ ರೋಗಿಗಳ ಚಿಕಿತ್ಸೆಯನ್ನು ಸರ್ಕಾರದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಒದಗಿಸಿ, ಅದರ ವೆಚ್ಚವನ್ನು ಭರಿಸಿ, ರೋಗಿಗಳಿಗೆ ಸರ್ಕಾರದ ವತಿಯಿಂದ ನೆರವು ನೀಡಲಾಗುತ್ತಿದೆ. ಈ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ, ಶ್ರೀ ಜಯದೇವ ಹೃದ್ರೋಗ ಸಂಸ್ಥೆ, ಸಂಜಯ ಗಾಂಧಿ ಟ್ರಾಮಾ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆ, ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ, ಎಸ್.ಡಿ.ಎಸ್.ಟಿ.ಬಿ. ಆಸ್ಪತ್ರೆ, ನೆಫ್ರೋ ಯೂರಾಲಜಿ ಸಂಸ್ಥೆ, ಪಿ.ಎಂ.ಎಸ್.ಎಸ್.ವೈ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಕೇರ್ ಸೆಂಟರ್, ಮಿಂಟೋ ಪ್ರಾದೇಶಿಕ ಕಣ್ಣಿನ ಆಸ್ಪತ್ರೆ, ಗ್ಯಾಸ್ಟ್ರೋ ಎಂಟ್ರಾಲಜಿ ಸೈನ್ಸ್ ಅಂಡ್ ಆರ್ಗನ್ ಟ್ರಾನ್ಸ್ಪ್ಲಾಂಟ್ ಸಂಸ್ಥೆಗಳು ಸದರಿ ಅನುದಾನವನ್ನು ಬಳಕೆ ಮಾಡಿಕೊಂಡಿರುತ್ತವೆ. ಅಲ್ಲದೆ, ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ವಾಣಿ ವಿಲಾಸ ಆಸ್ಪತ್ರೆ…













